Karnataka Elections : ಅಪಾಯದಲ್ಲಿರುವುದು ಸಂವಿಧಾನವಲ್ಲ, ಕಾಂಗ್ರೆಸ್‌ ಎಂದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ - Vistara News

ಕರ್ನಾಟಕ

Karnataka Elections : ಅಪಾಯದಲ್ಲಿರುವುದು ಸಂವಿಧಾನವಲ್ಲ, ಕಾಂಗ್ರೆಸ್‌ ಎಂದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ

ಅಪಾಯ ಎದುರಾಗಿರುವುದು ದೇಶದ ಸಂವಿಧಾನಕ್ಕಲ್ಲ. ದೇಶದಲ್ಲಿ ಕಾಂಗ್ರೆಸ್‌ ಮೂಲೋತ್ಪಾಟನೆಯ ಅಪಾಯ ಎದುರಿಸುತ್ತಿದೆ ಎಂದಿದ್ದಾರೆ ಕೇಂದ್ರ ಸಚಿವೆ ಸಾಧ್ವಿ ನಿರಂಜನ್‌ ಜ್ಯೋತಿ (Sadhvi Niranjan Jyothi).

VISTARANEWS.COM


on

Sadhvi Niranjan jyothi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಾಯಿ ಭಾರತಿಯನ್ನು ವಿದೇಶದಲ್ಲಿ ಅಪಮಾನ ಮಾಡಿದ್ದಾರೆ. ತಾಯಿಗೆ ಅಪಮಾನ ಮಾಡಿದ ವ್ಯಕ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ (Karnataka Elections) ಕಾಂಗ್ರೆಸ್‌ ಮುಕ್ತಗೊಳಿಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಗ್ರಾಮೀಣಾಭಿವೃದ್ಧಿ ಖಾತೆಯ ರಾಜ್ಯ ಸಚಿವರಾದ ಸಾಧ್ವಿ ನಿರಂಜನ‌ ಜ್ಯೋತಿ (Sadhvi Niranjan Jyothi) ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಸಾಯಿ ವಿಹಾರದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶ ಉದ್ಘಾಟಿಸಿ ಮತ್ತು ಅದಕ್ಕೆ ಪೂರ್ವದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ʻʻಭಾರತದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ವಿದೇಶ ನೆಲದಲ್ಲಿ ನಿಂತು ರಾಹುಲ್ ಗಾಂಧಿ ಹೇಳಿರುವುದು ಭಾರತ ಮಾತೆಗೆ ಅಪಮಾನ ಮಾಡಿದಂತೆ. ವಾಸ್ತವವಾಗಿ ಭಾರತೀಯ ಸಂವಿಧಾನ ಅಪಾಯದಲ್ಲಿ ಇದ್ದದ್ದು ಕಾಂಗ್ರೆಸ್ ಅವಧಿಯಲ್ಲಿ. ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದಾಗ ಸಂವಿಧಾನ ಅಪಾಯದಲ್ಲಿತ್ತು. ಈಗ ದೇಶದ ಸಂವಿಧಾನ ಸುರಕ್ಷಿತವಾಗಿದೆ. ಅಪಾಯದಲ್ಲಿರುವುದು ಸಂವಿಧಾನವಲ್ಲ, ಅಪಾಯದಲ್ಲಿ ಇರುವುದು ಕಾಂಗ್ರೆಸ್‌ ಪಕ್ಷʼʼ ಎಂದು ಸಾಧ್ವಿ ಹೇಳಿದರು.

ʻʻಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿತ್ತು. ಅಲ್ಲಿ ಮುಕ್ತವಾಗಿ ಚರ್ಚೆ ನಡೆಸಬೇಕಾಗಿತ್ತು. ಅದು ಬಿಟ್ಟು ಈ ರೀತಿ ಮನೆಯ ಗುಟ್ಟನ್ನು ಜಗತ್ತಿಗೆ ಗೊತ್ತಾಗುವಂತೆ ಮಾಡಿರುವದು ಸರಿಯಲ್ಲ. ರಾಹುಲ್ ಗಾಂಧಿ ಕೂಡಲೇ ದೇಶದ ಜನರ ಕ್ಷಮೆ ಯಾಚಿಸಬೇಕುʼʼ ಎಂದು ನುಡಿದರು.

ಬೇರೆ ರಾಜ್ಯದಲ್ಲಿ ಯಾಕೆ ಜಾರಿಗೆ ತಂದಿಲ್ಲ?

ʻʻರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎರಡು ಸಾವಿರ ರೂ. ನೀಡುವುದಾಗಿ ಹೇಳಿದ್ದೀರಿ. ನಿಮ್ಮದೇ ಸರ್ಕಾರ ಅಧಿಕಾರದಲ್ಲಿರುವ ಬೇರೆ ರಾಜ್ಯದಲ್ಲಿ ಯಾಕೆ ಜಾರಿಗೆ ತಂದಿಲ್ಲʼʼ ಎಂದು ಪ್ರಶ್ನಿಸಿದರು. ʻʻಕಾಂಗ್ರೆಸ್ ಅವಧಿಯಲ್ಲಿ ಆಗದ ಕೆಲಸಗಳನ್ನು ಮೋದಿ ಎಂಟು ವರ್ಷದಲ್ಲಿ ಮಾಡಿದ್ದಾರೆ. ಮೋದಿ ಅವರ ಆಡಳಿತ ನೋಡಿ ಕಾಂಗ್ರೆಸ್ ನಾಯಕರು ಕಲಿಯಬೇಕಿದೆʼʼ ಎಂದರು.

ʻʻರಾಹುಲ್ ಗಾಂಧಿಯವರೇ ಉತ್ತರ ಪ್ರದೇಶದಲ್ಲಿ ನಿಮ್ಮ ತಾಯಿ ಮಾತ್ರ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಉತ್ತರ ಪ್ರದೇಶ ಮಾಡಲಾಗುವುದುʼʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : Karnataka Election: ಬಿಜೆಪಿಗೆ ಗುಡ್‌ಬೈ ಹೇಳಿದ ಬಿಎಸ್‌ವೈ ಆಪ್ತ: ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರ್ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಕರ್ತವ್ಯನಿರತ ಪೊಲೀಸರು ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಈ ವೇಳೆ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದ್ದು, ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಈ ಮನೆಯ ಮೇಲೆ ದಾಳಿ ನಡೆಸಿದ್ದರು. ಆದರೆ, ಅಲ್ಲಿ ಮದ್ಯದ ಬಾಟಲಿ ಸಿಗುವ ಬದಲು ಕಂತೆ ಕಂತೆ ಹಣ ಸಿಕ್ಕಿದೆ. ಹೀಗಾಗಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

VISTARANEWS.COM


on

Lok Sabha Election 2024 Rs 18 crore seized from raids for liquor
Koo

ಧಾರವಾಡ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಇಲ್ಲಿನ ದಾಸನಕೊಪ್ಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಣೆ (Illegal liquor collection) ಮಾಡಲಾಗಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳಿಗೆ ಶಾಕ್‌ ಕಾದಿತ್ತು. ಅಲ್ಲಿದ್ದಿದ್ದು ಅಕ್ರಮ ಬಾಟಲಿಗಳಲ್ಲ. ಬದಲಾಗಿ ಕಂತೆ ಕಂತೆ ಹಣ ಎಂಬುದು ಬೆಳಕಿಗೆ ಬಂದಿದೆ. ಕೂಡಲೇ ಐಟಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 18 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಧಾರವಾಡದಲ್ಲಿ ಐಟಿ ಅಧಿಕಾರಿಗಳು ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿ ಈ ದಾಳಿ ನಡೆದಿದೆ. ಈ ಸಂಬಂಧ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸಿಪಿ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Lok Sabha Election 2024 Rs 18 crore seized from raids for liquor

ಹಣದ ಮೂಲದ ಬಗ್ಗೆ ತನಿಖೆ?

ಸದ್ಯ ಐಟಿ ಹಾಗೂ ಚುನಾವಣಾಧಿಕಾರಿಗಳು ಮನೆಯನ್ನು ಶೋಧಿಸುತ್ತಿದ್ದು, ಈಗಾಗಲೇ 18 ಕೋಟಿ ರೂಪಾಯಿಗೂ ಹೆಚ್ಚು ಹಣ ಸಿಕ್ಕಿದೆ ಎನ್ನಲಾಗಿದೆ. ಇನ್ನೂ ಶೋಧವನ್ನು ಮುಂದುವರಿಸಲಾಗಿದೆ. ಈ ನಡುವೆ ಹಣದ ಮೂಲದ ಬಗ್ಗೆ ಪತ್ತೆ ಹಚ್ಚಲೂ ಮುಂದಾಗಲಾಗಿದೆ. ಒಂದು ಬಾರಿ ಶೋಧ ಪೂರ್ಣಗೊಂಡ ಬಳಿಕ ಪ್ರಕರಣ ದಾಖಲು ಮಾಡಿಕೊಂಡು ಬಸವರಾಜ್ ದುತ್ತಣ್ಣವರ ಅವರಿಗೆ ನೋಟಿಸ್‌ ನೀಡಲು ನಿರ್ಧಾರ ಮಾಡಲಾಗಿದೆ.

ನಡೆದಿದ್ದು ಲಿಕ್ಕರ್‌ಗಾಗಿ ದಾಳಿ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಕರ್ತವ್ಯನಿರತ ಪೊಲೀಸರು ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಈ ವೇಳೆ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದ್ದು, ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಈ ಮನೆಯ ಮೇಲೆ ದಾಳಿ ನಡೆಸಿದ್ದರು. ಆದರೆ, ಅಲ್ಲಿ ಮದ್ಯದ ಬಾಟಲಿ ಸಿಗುವ ಬದಲು ಕಂತೆ ಕಂತೆ ಹಣ ಸಿಕ್ಕಿದೆ. ಹೀಗಾಗಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಹಾವೇರಿ, ಬಾಗಲಕೋಟೆ ಸೇರಿ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 87 ಲಕ್ಷ ರೂ. ಜಪ್ತಿ

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿವಿಧೆಡೆ ಮತದಾರರಿಗೆ ಹಂಚಲು ಹಣ, ಮದ್ಯ, ಉಡುಗೊರೆಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬರುತ್ತಿದೆ. ಈ ನಡುವೆ ಹಾವೇರಿ, ಬಾಗಲಕೋಟೆ ಹಾಗೂ ಅನೇಕಲ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 87.67 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋಟೆಬೆನ್ನೂರಿನಲ್ಲಿ 75 ಲಕ್ಷ ರೂ. ವಾಹನ ಜಪ್ತಿ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 75 ಲಕ್ಷ ರೂ. ಹಾಗೂ ವಾಹನವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಜಪ್ತಿ ಮಾಡಿದೆ. ಕಾರಿನಲ್ಲಿ ಸಮರ್ಪಕ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.

ಬಾದಾಮಿ ತಾಲೂಕಿನಲ್ಲಿ 6.87 ಲಕ್ಷ ರೂ. ವಶ

ಬಾಗಲಕೋಟೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ದಾಖಲೆ‌‌ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 6.87 ಲಕ್ಷ ರೂ.ಗಳನ್ನು ಬಾದಾಮಿ ತಾಲೂಕಿನ ಕುಳಗೇರಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ. ಆರ್.ಎಲ್.ನದಾಫ್ ನೇತೃತ್ವದ ಎಸ್.ಎಸ್.ಟಿ ತಂಡ ವಾಹನಗಳ ಪರಿಶೀಲನಾ ವೇಳೆ ಹಣ ವಶಕ್ಕೆ ಪಡೆದಿದೆ.

ನವಲಗುಂದದಿಂದ ಕೆರೂರಗೆ ಹೊರಟ ಕಾರಿನಲ್ಲಿ 2.83 ಲಕ್ಷ, ಗೂಡ್ಸ್ ವಾಹನದಲ್ಲಿ 1 ಲಕ್ಷ, ಹುಬ್ಬಳ್ಳಿಯಿಂದ ಕೆರೂರಿಗೆ ಹೊರಟ ವಾಹನದಲ್ಲಿ 2.40 ಲಕ್ಷ, ಶಿಗ್ಗಾಂವಿ ತಾಲೂಕಿನ ಪಾನಿಗಟ್ಟಿಯಿಂದ ಕೆರೂರಗೆ ಹೊರಟ ಬೊಲೆರೊದಲ್ಲಿ 1 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

ಆನೇಕಲ್‌ನಲ್ಲಿ ಬೈಕ್‌ನಲ್ಲಿ ಕೊಂಡೊಯ್ಯುತ್ತಿದ್ದ 5.28 ಲಕ್ಷ ವಶಕ್ಕೆ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್‌ನಲ್ಲಿ ದಾಖಲೆ ಇಲ್ಲದೆ ಬೈಕ್‌ನಲ್ಲಿ ಕೊಂಡೊಯ್ಯುತ್ತಿದ್ದ 5.28 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಂಪಲಘಟ್ಟ ರಮೇಶ್ ಎಂಬುವವರು, ಹೊಂಪಲಘಟ್ಟ ಕಡೆಯಿಂದ ಆನೇಕಲ್ ಮಾರ್ಗವಾಗಿ ಹಣ ತೆಗೆದುಕೊಂಡು ಬರುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

Lok Sabha Election 2024

ಬೆಂಗಳೂರು: ಚುನಾವಣಾ ಸಮಯದಲ್ಲಿ (Lok Sabha Election 2024) ಹಣದ ಹೊಳೆಯೇ (Lok Sabha Election 2024) ಹರಿಯುತ್ತದೆ. ಸದ್ಯ ಜಯನಗರ ಚೆಕ್‌ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಸಿಕ್ಕಿದ ಕೋಟ್ಯಂತರ ರೂ. ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಎನ್‌ ಮಂಜುನಾಥ್‌ ಕೊಟ್ಟ ದೂರನ್ನು ಆಧರಿಸಿ ಏ.15ರಂದು ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಕೋಟ್ಯಂತರ ರೂ. ಹಣವನ್ನು ನಗರ ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ. ಕಾರಿನಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಿದಾಗ 1,34,99,000 ರೂ. ಹಣ ಪತ್ತೆಯಾಗಿದ್ದು, ಜತೆಗೆ ಬಿಬಿಎಂಪಿಗೆ ಸಂಬಂಧಿಸಿದ ಕೆಲ ದಾಖಲೆಗಳು ಸಿಕ್ಕಿವೆ. ಇವೆಲ್ಲವನ್ನೂ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣದ ವರದಿಯನ್ನು ಕೊಟ್ಟಿದ್ದಾರೆ.

ಇನ್ನೂ ಕ್ಲಾಸ್ ಒನ್ ಗುತ್ತಿಗೆದಾರನಿಗೆ ಸೇರಿದ ಹಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವು ಯಾವುದಾದರು ಪಕ್ಷಕ್ಕೆ ಸೇರಿದ್ದಾ? ವೈಯಕ್ತಿಕ ವ್ಯವಹಾರದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸೀಜ್‌ ಮಾಡಿರುವ ಸ್ಕೂಟರ್‌ ಹಾಗೂ ಕಾರಿನ ಮಾಲೀಕರಾದ ಸೋಮಶೇಖರ್ ಮತ್ತು ಧನಂಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಆ ದಿನ ನಡೆದಿದ್ದು ಏನು? ದೂರಿನಲ್ಲಿ ಏನಿದೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರು ಪ್ಲೈಯಿಂಗ್‌ ಸ್ಕ್ವಾಡ್‌ ತಂಡ 3ರ ಟೀಮ್‌ ಲೀಡರ್‌ ಆಗಿ ನೇಮಕಗೊಂಡಿರುವ ಮಂಜುನಾಥ್‌ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆ ದೂರಿನನ್ವಯ ಏ.13ರ ಬೆಳಗ್ಗೆ 11:50ರ ಸುಮಾರಿಗೆ ಜಯನಗರ 4ನೇ ಬ್ಲಾಕ್‌ ಸಮೀಪ ಅಪರಿಚಿತ ವ್ಯಕ್ತಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹೆಚ್ಚಿನ ಪ್ರಮಾಣದ ನಗದನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ನೋಡಲ್‌ ಅಧಿಕಾರಿ ನಿಖಿತ ಚಿನ್ನಸ್ವಾಮಿ ಅವರು ತೆರಳಿದ್ದರು.

ಈ ವೇಳೆ ನೀಲಿ ಬಣ್ಣದ ಆಕ್ಸಸ್‌ ಗಾಡಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟುಕೊಂಡಿದ್ದ. ನೋಡಲ್‌ ಅಧಿಕಾರಿ ನಿಖಿತ ಅವರು ಆತನ ಬಳಿ ಹೋಗಿ ವಿಚಾರಿಸಲು ಮುಂದಾಗುತ್ತಿದ್ದಂತೆ, ಸ್ಕೂಟರ್‌ ಹಾಗೂ ಹಣದ ಬ್ಯಾಗ್‌ ಬಿಟ್ಟು ಪರಾರಿ ಆಗಿದ್ದ. ಅದೇ ರಸ್ತೆಯಲ್ಲಿದ್ದ ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್‌ ಕಾರು ಮತ್ತು ರಿಜಿಸ್ಟೇಷನ್‌ ನಂಬರ್‌ ಇಲ್ಲದ ಬಿಳಿ ಬಣ್ಣದ ಬೆಂಜ್‌ ಕಾರಿನಲ್ಲೂ ಗರಿ ಗರಿ ನೋಟು ಪತ್ತೆಯಾಗಿತ್ತು.

ಮೊದಮೊದಲು ಬ್ಯಾಗ್‌ನಲ್ಲಿ ಏನಿದೆ ತೋರಿಸಿ ಎಂದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದಿದ್ದರು. ಯಾವಾಗ ನೋಡೆಲ್‌ ಅಧಿಕಾರಿ ನಿಖಿತ ಅವರು ಕಾರು ಪರಿಶೀಲನೆ ಮಾಡಲು ಹೋದಾಗ ಕಾರಲ್ಲಿದ್ದ ಐವರು ಕಾಲ್ಕಿತ್ತಿದ್ದರು. ಒಟ್ಟು 1,34,99,000 ಹಣ ಪತ್ತೆಯಾಗಿದೆ. ಜತೆಗೆ ವೋಕ್ಸ್‌ ವ್ಯಾಗನ್‌ ಕಾರಲ್ಲಿ ಬಿಬಿಎಂಪಿ ದಾಖಲಾತಿಗಳು ಹಾಗೂ ರಿಜಿಸ್ಟೇಷನ್‌ ನಂಬರ್‌ ಇಲ್ಲದ ಕಾರಲ್ಲಿ ಒಂದು ಮೊಬೈಲ್‌, ಒಂದು ಕಾರ್ಡ್‌ ಪೌಚ್‌ ದೊರೆತಿದೆ. ಇದೆಲ್ಲವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Uttara Kannada News: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Drinking water problem Provide water immediately by tanker says DC
Koo

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರು (Drinking Water) ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದ್ದಾರೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರತಿದಿನ ವರದಿಯಾಗುತ್ತಿದ್ದು, ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳು ಆ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸೌಲಭ್ಯ ಒದಗಿಸಬೇಕು, ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಟೆಂಡರ್ ಕರೆಯಲು ಎಲ್ಲಾ ತಹಸೀಲ್ದಾರ್‌ಗಳಿಗೆ ಈಗಾಗಲೇ ಅನುಮತಿಯನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದು, ಒಂದು ವೇಳೆ ಅಗತ್ಯ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದಲ್ಲಿ, ಸದರಿ ಟೆಂಡರ್‌ಗೆ ಸಾರ್ವಜನಿಕ ಹಿತದೃಷ್ಠಿಯಿಂದ ಘಟನೋತ್ತರ ಮಂಜೂರಾತಿ ನೀಡಲು ಅನುಮತಿ ನೀಡಲಾಗುವುದು. ಆದರೆ ಯಾವುದೇ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರಿಗೆ ನೀರು ಒದಗಿಸಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಾತ್ರವಲ್ಲದೇ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲೆಯಲ್ಲಿರುವ ಎಲ್ಲಾ ಗೋಕಟ್ಟೆಗಳಿಗೂ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಮತ್ತು ಜಿಲ್ಲೆಯ ಅರಣ್ಯ ಭಾಗದ ಗ್ರಾಮಗಳಲ್ಲಿ ಕೂಡಾ ಜಾನುವಾರುಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ತಮ್ಮ ಸಮಸ್ಯೆಯಿದ್ದಲ್ಲಿ 24*7 ಕಾರ್ಯ ನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಗೋಕರ್ಣ, ನಾಡುಮಾಸ್ಕೇರಿ, ಹೆಗಡೆ, ಕುಜಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

Continue Reading

ಕರ್ನಾಟಕ

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

UPSC Results 2023: ಯುಪಿಎಸ್‌ಸಿ ಪರೀಕ್ಷೆಯಲ್ಲಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕನಸು ಕಾಣುವುದು ಮನುಷ್ಯನ ಸಹಜವಾದ ಗುಣ, ಆದರೆ ಆ ಕನಸನ್ನು ನನಸಾಗಿಸಿಕೊಳ್ಳೋದು ಬೆರಳೆಣಿಕೆಯಷ್ಟು ಮಂದಿ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶ (UPSC Results 2023) ಮಂಗಳವಾರ ಪ್ರಕಟವಾಗಿದೆ. ಒಟ್ಟು 1016 ಅಭ್ಯರ್ಥಿಗಳು ತೇರ್ಗಡೆಗೊಂಡಿದ್ದು, ರಾಜ್ಯದ 20ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿ ಸಾಧನೆಗೈದಿದ್ದಾರೆ. ಈ ಪೈಕಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯಪುರ ಮೂಲದ ವಿಜೇತಾ ಭೀಮಸೇನ ಹೊಸಮನಿ ಅವರ ಕುಟುಂಬ ಸದ್ಯ ಹುಬ್ಬಳ್ಳಿಯಲ್ಲಿ ನೆಲೆಸಿದೆ. ವಿಜೇತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಎಲ್‌ಕೆಜಿಯಿಂದ 5ನೇ ಕ್ಲಾಸ್‌ವರೆಗೆ ವಿಜಯಪುರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ವಿಜೇತಾ ವಿದ್ಯಾಭ್ಯಾಸ ಮಾಡಿದ್ದು, 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದಿದರು.

ಪ್ರಥಮ ಪಿಯುಸಿ ವಿಜಯಪುರ ನಗರದ ತುಂಗಳ ಕಾಲೇಜು, ದ್ವಿತೀಯ ಪಿಯುಸಿ ದರಬಾರ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಕ್ಲಾಟ್ ಪರೀಕ್ಷೆ ಉತ್ತೀರ್ಣವಾಗಿ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ
ಬಿಎ, ಎಲ್‌ಎಲ್‌ಬಿ ಪದವಿ ಪಡೆದಿದ್ದು, ಕ್ರಿಮಿನಲ್ ಲಾ ದಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ.

2020 ರಿಂದ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದು, ಆನ್ ಲೈನ್ ತರಬೇತಿ ಹಾಗೂ ಮನೆಯಲ್ಲೇ ಹೆಚ್ಚಿನ ಅಭ್ಯಾಸ ಮಾಡಿ ಇವರು ಸಾಧನೆ ಮಾಡಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವೀಸ್‌ನಲ್ಲಿ ಸ್ಥಾನ ಸಿಗೋ ಸಾಧ್ಯತೆ ಇದೆ. ಹುಬ್ಬಳ್ಳಿಯ ಸಿಲ್ವರ್ ಟೌನ್‌ನ ನಿವಾಸದಲ್ಲಿ ವಿಜೇತಾಗೆ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ದಾವಣಗೆರೆಯ ಸೌಭಾಗ್ಯ ರಾಜ್ಯಕ್ಕೆ 2ನೇ ಸ್ಥಾನ

ದಾವಣಗೆರೆ: ಯುಪಿಎಸ್‌ಸಿ ಫಲಿತಾಂಶದಲ್ಲಿ ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ್ ಅವರು 101ನೇ ರ‍್ಯಾಂಕ್‌ ಪಡೆಯುವ ಮೂಲಕ ಕರ್ನಾಟಕದಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ದಾವಣಗೆರೆ ಆಂಜನೇಯ ಬಡಾವಣೆಯ ನಿವಾಸಿ ಸೌಭಾಗ್ಯ (22) ಧಾರವಾಡದಲ್ಲಿ ಕೋಚಿಂಗ್ ಪಡೆದಿದ್ದರು.

ಶರಣಮ್ಮ ಹಾಗೂ ಶರಣಯ್ಯ ಸ್ವಾಮಿ ದಂಪತಿಯ ಪುತ್ರಿ ಸೌಭಾಗ್ಯ ಎಸ್. ಬೀಳಗಿಮಠ್, ಸದ್ಯ ಧಾರವಾಡದಲ್ಲಿ ನೆಲೆಸಿದ್ದಾರ. ಇವರ ತಂದೆ ರೈತರಾಗಿದ್ದು, ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನವರು. ಬಿಎಸ್ಸಿ ಅಗ್ರಿಕಲ್ಚರ್ ಪದವಿ ಪಡೆದಿದ್ದಾರೆ.

ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌

ಕೋಲಾರ: ಯುಪಿಎಸ್ಸಿ ಫಲಿತಾಂಶದಲ್ಲಿ ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌ ಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೋಪಾಲಪುರ ಗ್ರಾಮದ ಶಿಕ್ಷಕ ದಂಪತಿ ಪುತ್ರ ಗೌತಮ್ 939ನೇ ರ‍್ಯಾಂಕ್‌ ಪಡೆದಿದ್ದಾರೆ. ಈ ರ‍್ಯಾಂಕ್‌ನಲ್ಲಿ ಐಎಎಸ್‌ ಹುದ್ದೆ ಸಿಗುವುದು ಕಷ್ಟ, ಮತ್ತೊಂದು ಬಾರಿ ಪರೀಕ್ಷೆ ಬರೆಯುವುದಾಗಿ ಗೌತಮ್‌ ತಿಳಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡು ಯುಪಿಎಸ್ಸಿಗೆ ಯುವಕ ತಯಾರಿ ನಡೆಸಿದ್ದು, ಪೋಷಕರಿಗೆ ಧನ್ಯವಾದ ತಿಳಿಸಿದ್ದಾರೆ. ತಾಲೂಕಿನ ಶಿಕ್ಷಕರು ಯುವಕನನ್ನು ಸನ್ಮಾನಿಸಿ, ಸಿಹಿ ತಿನಿಸಿದ್ದಾರೆ.

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರ ಯುವಕನ ಸಾಧನೆ

ವಿಜಯಪುರ: ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ ನಡೆಸಿದ್ದು, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆ, 8 ರಿಂದ 10ನೇ ತರಗತಿ ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದರು. ಪಿಯುಸಿ ಹೈದರಾಬಾದಿನ ವಿಚೇತನಾ ಕಾಲೇಜು, ಬೆಂಗಳೂರಿನ ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದಾರೆ. 2019 ನಿಂದ ಯುಪಿಎಸ್ಸಿ ಪ್ರಯತ್ನ ನಡೆಸುತ್ತಿದ್ದು, 2023ರಲ್ಲಿ ಉತ್ತೀರ್ಣರಾಗಿದ್ದಾರೆ. ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್‌ನಲ್ಲಿ ಸಂತೋಷ್ ತರಬೇತಿ ಪಡೆದಿದ್ದರು. ಸಂತೋಷ್‌ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆ

ಈ ಬಾರಿ ಒಟ್ಟು 1,016 ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದು, ಲಖನೌನ ಆದಿತ್ಯ ಶ್ರೀವಾಸ್ತವ ದೇಶಕ್ಕೆ ಅಗ್ರಸ್ಥಾನ ಪಡೆದಿದ್ದು, ಒಡಿಶಾದ ಅನಿಮೇಶ್ ಪ್ರಧಾನ್ ಎರಡನೇ ಸ್ಥಾನ ಪಡೆದಿದ್ದು, ತೆಲಂಗಾಣದ ಅನನ್ಯಾ ರೆಡ್ಡಿ ಮೂರನೇ ಸ್ಥಾನ ಪಡೆದಿದ್ದಾರೆ.

UPSC Results 2023
ಶಾಂತಪ್ಪ ಕುರುಬರ್

ಅದೇ ರೀತಿ ಯುಪಿಎಸ್ಸಿಯಲ್ಲಿ ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆಯಾಗುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇದರಲ್ಲಿ ಆಚಾರ್ಯ ಐ.ಎ.ಎಸ್. ಅಕಾಡೆಮಿಯಿಂದ 3 ವಿದ್ಯಾರ್ಥಿಗಳು ರ್‍ಯಾಂಕ್ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಸತತ ಎರಡು ವರ್ಷಗಳಿಂದ ಐಎಎಸ್ ತರಬೇತಿಯಲ್ಲಿ ವಿಶೇಷ ಸ್ಥಾನ ಪಡೆದು, ಅನೇಕ ಬಡ ವಿದ್ಯಾರ್ಥಿಗಳ ಐಎಎಸ್ ಸಾಧನೆಗೆ ಸಹಕಾರಿಯಾಗಿದೆ.

ಇದನ್ನೂ ಓದಿ | UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಇನ್ನು ಈ ಸಾಧನೆಗೆ ಸತತ ಪ್ರಯತ್ನ, ಶ್ರದ್ಧೆ ಹಾಗೂ ಆತ್ಮ ವಿಶ್ವಾಸವೆ ಕಾರಣ ಎನ್ನುತ್ತಿದ್ದಾರೆ ವಿಜೇತರು. ಜೊತೆಗೆ ಬಳ್ಳಾರಿಯ ಶಾಂತಪ್ಪ ಕುರುಬರ್ 644 ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿ ವಿಜೇತರಾಗಿದ್ದಾರೆ. ಸತತವಾಗಿ ಕಷ್ಟವನ್ನೇ ನೋಡಿಕೊಂಡು ಬಂದ ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್ ಅಗಿದ್ದರು. ತಾಯಿ ಕೂಲಿ ಕೆಲಸ ಮಾಡಿ ಇವರನ್ನು ಸಾಕಿದ್ದಾರೆ. ಇವರು PSI ಹುದ್ದೆಯಲ್ಲಿದ್ದು, ಕೆಲ್ಸದ ಜೊತೆಗೆ ಕನ್ನಡದಲ್ಲೇ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಜೊತೆಗೆ ಕನ್ನಡದಲ್ಲೇ ಪರೀಕ್ಷೆ ಬರೆದು ಪಾಸಾಗಿದ್ದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಇನ್ನು ಇದೆ ಅಕಾಡೆಮಿಯಲ್ಲಿ ಓದಿದ್ದ ಬಾನು ಪ್ರಕಾಶ್ 600 ರ್ಯಾಂಕ್ ಪಡೆದಿದ್ದರೆ. ಮೂಲತಃ ಮೈಸೂರಿನವರಾದ ಇವರು ಕೊನೆ ಬಾರಿ ಕೂಡ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಅಗಿದ್ದರು.

Continue Reading

Lok Sabha Election 2024

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ )Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading
Advertisement
UPSC Result 2024
ಶಿಕ್ಷಣ4 mins ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Lok Sabha Election 2024 Rs 18 crore seized from raids for liquor
Lok Sabha Election 20245 mins ago

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Akshya Kumar
ಸಿನಿಮಾ16 mins ago

Akshya Kumar: ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್!

Drinking water problem Provide water immediately by tanker says DC
ಉತ್ತರ ಕನ್ನಡ18 mins ago

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

MS Dhoni
ಪ್ರಮುಖ ಸುದ್ದಿ20 mins ago

MS Dhoni : ಮೊಣಕಾಲು ನೋವಿನಿಂದ ರೈನಾ ಕೈಹಿಡಿದು ಮೆಟ್ಟಿಲು ಇಳಿದ ಧೋನಿ…

UPSC Results 2023
ಕರ್ನಾಟಕ26 mins ago

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

Modi in Karnataka on April 20 Massive rallies in Chikkaballapura and Bengaluru
Lok Sabha Election 202433 mins ago

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024
ಪ್ರಮುಖ ಸುದ್ದಿ59 mins ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Money Guide
ಮನಿ-ಗೈಡ್59 mins ago

Money Guide: ನಿಮ್ಮ ಷೇರಿನಿಂದಲೂ ಸಾಲ ಪಡೆದುಕೊಳ್ಳಬಹುದು; ಹೇಗೆ ಎನ್ನುವ ವಿವರ ಇಲ್ಲಿದೆ

Lok Sabha Election 2024 Sanganna Karadi resigns from primary membership of BJP
Lok Sabha Election 20241 hour ago

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ16 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌