karnataka-election: Congress Manifesto is cur and paste of govt programmes, say MP Tejaswisurya Karnataka Election : ಕಾಂಗ್ರೆಸ್‌ ಪ್ರಣಾಳಿಕೆ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಕಟ್‌ ಆ್ಯಂಡ್ ಪೇಸ್ಟ್‌ ಎಂದ ತೇಜಸ್ವಿಸೂರ್ಯ - Vistara News

ಕರ್ನಾಟಕ

Karnataka Election : ಕಾಂಗ್ರೆಸ್‌ ಪ್ರಣಾಳಿಕೆ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಕಟ್‌ ಆ್ಯಂಡ್ ಪೇಸ್ಟ್‌ ಎಂದ ತೇಜಸ್ವಿಸೂರ್ಯ

Tejaswi surya : ಕಾಂಗ್ರೆಸ್‌ ತನ್ನ ಣಾಳಿಕೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಇದು ಕೇವಲ ಸರ್ಕಾರದ ಕಾರ್ಯಕ್ರಮಗಳ ಕಾಪಿ ಎಂಡ್‌ ಪೇಸ್ಟ್‌ ಎಂದಿದ್ದಾರೆ ತೇಜಸ್ವಿ ಸೂರ್ಯ.

VISTARANEWS.COM


on

karnataka-election: Congress Manifesto is cur and paste of govt programmes, say MP Tejaswisurya
ತೇಜಸ್ವಿ ಸೂರ್ಯ ಮತ್ತು ಗೌರವ್‌ ಭಾಟಿಯಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ರೂಪಿಸಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ (Congress Manifesto) ಸುಳ್ಳು ಮತ್ತು ವಿಪರ್ಯಾಸಗಳಿಂದ ತುಂಬಿದೆ ಹಾಗೂ ಇದು ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಕಟ್‌ ಆ್ಯಂಡ್ ಪೇಸ್ಟ್‌ ಎಂದು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʻʻಕಾಂಗ್ರೆಸ್ ಪ್ರಣಾಳಿಕೆ ಕಟ್ ಆ್ಯಂಡ್ ಪೇಸ್ಟ್ ನಂತಿದೆ. ಬಿಜೆಪಿ ಜಾರಿಗೊಳಿಸಿದ್ದ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಮತ್ತೆ ಪ್ರಣಾಳಿಕೆಯಲ್ಲಿ ಸೇರಿಸಿದೆ. ಬಿಜೆಪಿ ಸರ್ಕಾರ ವಿದ್ಯಾವಾಹಿನಿಯಡಿ ಉಚಿತ ಬಸ್ ಪಾಸ್, ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಿದೆ. ಇದೇ ಯೋಜನೆಗಳನ್ನು ಕಾಂಗ್ರೆಸ್ ಮತ್ತೆ ನೀಡಿದೆ. ಪರಿಶಿಷ್ಟ ಜಾತಿ-ಪಂಗಡಗಳಿಗೆ ಮೀಸಲಾತಿ, ಕಸ್ತೂರ್ ಬಾ ಜನೌಷಧಿ ಕೇಂದ್ರಗಳ ಸ್ಥಾಪನೆ, ಮನೆಗಳಿಗೆ ನೀರು ಪೂರೈಕೆ, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ. ಆದರೆ, ಇವೆಲ್ಲವನ್ನೂ ಬಿಜೆಪಿ ಸರ್ಕಾರ ಜಾರಿಗೊಳಿಸಿದೆʼʼ ಎಂದು ತೇಜಸ್ವಿ ಸೂರ್ಯ ಹೇಳಿದರು.

ʻʻಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನೇ ಗಂಭೀರವಾಗಿ ಪರಿಗಣಿಸಿಲ್ಲ. ನಾಲ್ಕೈದು ಹುಡುಗರನ್ನು ಕೂರಿಸಿ ಪ್ರಣಾಳಿಕೆಯನ್ನು ಆತುರವಾಗಿ ಸಿದ್ಧಪಡಿಸಿದಂತಿದೆ. ಜನರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲʼʼ ಎಂದು ತೇಜಸ್ವಿ ಸೂರ್ಯ ಹೇಳಿದರು.

ಲೋಕಾಯುಕ್ತಕ್ಕೆ ಶಕ್ತಿ ತುಂಬೋದು ಹಾಸ್ಯಾಸ್ಪದ!

ಲೋಕಾಯುಕ್ತಕ್ಕೆ ಶಕ್ತಿ ತುಂಬಲಾಗುವುದು ಎಂದು ಕಾಂಗ್ರೆಸ್ ಹೇಳಿರುವುದು ಹಾಸ್ಯಾಸ್ಪದ. ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಆರಂಭಿಸಿದ್ದರು. ಇದಕ್ಕೆ ಮುಖ್ಯಮಂತ್ರಿಯವರೇ ಅಧ್ಯಕ್ಷರಾಗಿರುತ್ತಾರೆ. ಆದರೆ, ಬಿಜೆಪಿ ಸರ್ಕಾರದಲ್ಲಿ ಎಸಿಬಿ ಬದಲಿಗೆ ಮತ್ತೆ ಲೋಕಾಯುಕ್ತಕ್ಕೆ ಶಕ್ತಿ ತುಂಬಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಮಹದಾಯಿ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಆದರೆ, ಸೋನಿಯಾ ಗಾಂಧಿ ಕರ್ನಾಟಕಕ್ಕೆ ಒಂದೇ ಹನಿ ನೀರು ಕೊಡುವುದಿಲ್ಲ ಎಂದು ಹೇಳಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸಿ 1 ಸಾವಿರ ಕೋಟಿ ಒದಗಿಸಿದೆ ಎಂದು ಮಾಹಿತಿ ನೀಡಿದರು.

ರೈತರಿಗೆ ಜಾರಿಗೊಳಿಸಲಾಗಿದ್ದ ಯಶಸ್ವಿನಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿತ್ತು. ಈಗ ಮತ್ತೆ ಜಾರಿಗೆ ತರುವುದಾಗಿ ಹೇಳುತ್ತಿದೆ. ಬ್ರಹ್ಮಾವರ ವಾಣಿ ವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ, ಮಂಡ್ಯದ ಮೈಷುಗರ್ ಕಾರ್ಖಾನೆಯನ್ನು ಬಂದ್ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ, ರಾಮನಗರ, ಚನ್ನಪಟ್ಟಣ ಸೇರಿದಂತೆ ಇತರೆಡೆ ಡಿ.ಕೆ.ಶಿವಕುಮಾರ್ ಸೇರಿ 199 ಮಂದಿ ವಿರುದ್ಧ ಅಕ್ರಮ ಗಣಿಕಾರಿಕೆ ಪ್ರಕರಣಗಳಿವೆ ಎಂದು ಆರೋಪಿಸಿದರು.
ಕಾಶ್ಮೀರ ಪಂಡಿತರಿಗೆ ಸಾಂಸ್ಕøತಿಕ ಕೇಂದ್ರ ಸ್ಥಾಪಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ, ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕಾಶ್ಮೀರ ಪಂಡಿತರ ಪರಿಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಐತಿಹಾಸಿಕ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಆದರೆ, ತಾನು ಅಧಿಕಾರದಲ್ಲಿದ್ದಾಗ ಇಂತಹ ಪ್ರಯತ್ನವನ್ನು ಕಾಂಗ್ರೆಸ್ ಮಾಡಿರಲಿಲ್ಲ. ಬಿಜೆಪಿ ಸರ್ಕಾರ ಅಂಜನಾದ್ರಿ ಬೆಟ್ಟ ಸೇರಿದಂತೆ ಅನೇಕ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸುತ್ತಿದೆ ಎಂದರು ತೇಜಸ್ವಿಸೂರ್ಯ.

ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ನೀಡುವ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಕನ್ನಡ ವಿರೋಧಿಯಾಗಿದೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎನ್ನುವುದರ ಮೂಲಕ ಕಾಂಗ್ರೆಸ್, ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ ಎಂದು ತೇಜಸ್ವಿ ಸೂರ್ಯ ಟೀಕಿಸಿದರು.

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಹಿಂದೂ ಯುವಕರ ಹತ್ಯೆಯಾಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಗೂಂಡಾರಾಜ್, ಇಸ್ಲಾಮೀಕರಣ, ಭಯೋತ್ಪಾದನೆ, ಭ್ರಷ್ಟಾಚಾರ ಹೆಚ್ಚಾಗುವುದು ಪ್ರಣಾಳಿಕೆಯಿಂದಲೇ ಗೊತ್ತಾಗುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ಒಂದು ಕಡೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ವೇಗ ನೀಡಿ, ಸಮರ್ಥ ನಾಯಕತ್ವದಲ್ಲಿ 25 ವರ್ಷಗಳ ದೂರದೃಷ್ಟಿಯೊಂದಿಗೆ ಸಾಗುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್‍ನ ಕೋಮುವಾದಿ ಗುಣ ಬಯಲಾಗುತ್ತಿದೆ. ಓಲೈಕೆಗಾಗಿ ಶ್ರೀರಾಮ ಕಾಲ್ಪನಿಕವೆಂದಿದ್ದ ಕಾಂಗ್ರೆಸ್ ಈಗ ಹನುಮನನ್ನೂ ಬಿಟ್ಟಿಲ್ಲ. ಬಜರಂಗದಳವನ್ನು ಪಿಎಫ್‍ಐನೊಂದಿಗೆ ಹೋಲಿಸಿ ಕಾಂಗ್ರೆಸ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆಕ್ಷೇಪಿಸಿದರು.

ಪಿಎಫ್‍ಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಜಾತ್ಯತೀತವೆಂದು ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಪಿಎಫ್‍ಐ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಇದೀಗ ನಿಷೇಧಿತ ಪಿಎಫ್‍ಐಯನ್ನು ಬಜರಂಗದಳಕ್ಕೆ ಹೋಲಿಸುತ್ತಿದೆ. ದೇಶದ ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಿದ ಕಾಂಗ್ರೆಸ್ ಸರ್ಕಾರ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿತ್ತು. ಇದೇ ಕಾಂಗ್ರೆಸ್ ಇದೀಗ ಎಸ್‍ಡಿಪಿಐನೊಂದಿಗೆ ಸಖ್ಯ ಹೊಂದಿದೆ. ಸುಳ್ಳು, ದಾರಿತಪ್ಪಿಸುವ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಆದರೆ ನರೇಂದ್ರಮೋದಿಯವರ ಸರ್ಕಾರ ಅಭಿವೃದ್ಧಿ, ಎಲ್ಲರೂ ಒಳಗೊಳ್ಳುವಿಕೆ, ಸಾಂಸ್ಕøತಿಕ ಇತಿಹಾಸ ಸಂರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಗೌರವ ಭಾಟಿಯಾ ಹೇಳಿದರು.

ಸುಳ್ಳು ಭರವಸೆಗಳಿಗೆ ಹೆಸರಾಗಿರುವ ಕಾಂಗ್ರೆಸ್ ಇದೀಗ ಗ್ಯಾರಂಟಿಗಳನ್ನು ನೀಡುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳು ಇದುವರೆಗೆ ಈಡೇರಿಲ್ಲ. ರಾಜ್ಯದ ಜನತೆ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಉಪಸ್ಥಿತರಿದ್ದರು.

ಇದನ್ನೂ ಓದಿ : Karnataka Election: ಕಾಂಗ್ರೆಸ್‌ ಸರ್ಕಾರ ಇದ್ದಾಗ ಯಾಕೆ ಪಿಎಫ್ಐ, ಬಜರಂಗದಳ ಬ್ಯಾನ್‌ ಮಾಡಲಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

Self harming: ಮನೆಯಿಂದ ಬಂದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮತ್ತೊಂದು ಕಡೆ ಅಪರಿಚಿತ ವೃದ್ಧನ ಮೃತದೇಹವು ರಸ್ತೆ ಬದಿ ಪತ್ತೆಯಾಗಿದೆ.

VISTARANEWS.COM


on

By

Student Death in Bengaluru
Koo

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

Lok Sabha Election 2024: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ. ಅಲ್ಲದೆ, ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

VISTARANEWS.COM


on

Koo

ಚಿಕ್ಕಬಳ್ಳಾಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ (Chikkaballapur Lok Sabha constituency) ಅಭೂತಪೂರ್ವವಾಗಿ ರಕ್ಷಾ ರಾಮಯ್ಯ (Raksha Ramayya) ಗೆಲ್ಲುತ್ತಾರೆ. ಅಲ್ಲದೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಭವಿಷ್ಯ ನುಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್‌ ಶೋ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.

ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜನತಾ ನ್ಯಾಯಾಲಯದಲ್ಲಿ ಶಿಕ್ಷೆ ಕೊಡಿ

ಎನ್‌ಡಿಎ ಅಭ್ಯರ್ಥಿ ಸುಧಾಕರ್ ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ

ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತಿ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಲಕ್ಷ ನಿರುದ್ಯೋಗ ಭತ್ಯೆ ಸಿಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು. ಪ್ರಧಾನಿ ಮೋದಿಯವರ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರ್ಥಿಕತೆಯನ್ನು ಪುನರ್ ಸ್ಥಾಪಿಸಲಾಗುವುದು.‌ ನೂರಕ್ಕೆ ನೂರು ಈ ಬಾರಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಇವರಿಗೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದು ಕೋರಿದರು.

Continue Reading

ಬಾಗಲಕೋಟೆ

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Road Accident : ಚಾಲಕನ ನಿರ್ಲಕ್ಷ್ಯಕ್ಕೆ ಕ್ರೂಸರ್ ವಾಹನ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆಗೆ ಹೋದವರು ಮಸಣ ಸೇರಿದ್ದಾರೆ.

VISTARANEWS.COM


on

By

Road Accident
Koo

ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿ ತಾಲೂಕಿನ ರೆಹಮದ್ಪುರ್ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಬಸ್‌ ಹಿಂಭಾಗಕ್ಕೆ ಕ್ರೂಸರ್ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಐವರು ಗಂಭೀರ ಗಾಯಗೊಂಡಿದ್ದಾರೆ.

ಜಮಖಂಡಿ ತಾಲೂಕಿನ ರೆಹಮದ್ಪುರ್ ಗ್ರಾಮದಿಂದ ಮಹಾರಾಷ್ಟ್ರದ ತಾಜಗಾಂವಗೆ ಮದುವೆಗಾಗಿ ಕ್ರೂಸರ್‌ ವಾಹನದಲ್ಲಿ ಹೊರಟ್ಟಿದ್ದರು. ಕ್ರೂಸರ್‌ನಲ್ಲಿ ಸುಮಾರು 13 ಜನರಿದ್ದರು. ಮದುವೆ ಖುಷಿಯಲ್ಲಿದ್ದವರು ಮಸಣ ಸೇರಿದ್ದಾರೆ. ಮಹಾರಾಷ್ಟ್ರದ ಜತ್ತ ಸಮೀಪ ನಿನ್ನೆ ಬುಧವಾರ ದುರ್ಘಟನೆ ನಡೆದಿದ್ದು‌ ತಡವಾಗಿ ಬೆಳಕಿಗೆ ಬಂದಿದೆ.

ರೆಹಮದ್ಪುರ್ ಗ್ರಾಮದ ನಿವಾಸಿ ಭಾಗ್ಯಶ್ರೀ ಅಕ್ಕನ ಮದುವೆ ಎಂದು ಖುಷಿಯಲ್ಲಿದ್ದಳು. ಆದರೆ ಡಿಕ್ಕಿ ರಭಸಕ್ಕೆ ಭಾಗ್ಯಶ್ರೀ (18) ನರಳಾಡಿ ಪ್ರಾಣಬಿಟ್ಟಿದ್ದಾಳೆ. ಅನುಸೂಯ (55), ಉಜ್ವಲ (23)ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಿವೇದಿತಾ (22) ಸೇರಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ಮಿರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕ್ರೂಸರ್ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ರೆಹಮದ್ಪುರ, ಅಡಿಹುಡಿ, ಲೋಕಾಪುರ ಮತ್ತಿ ಹಲಗಲಿ ಗ್ರಾಮದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ (Road Accident) ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ.

ಕಾಟೀಹಳ್ಳಿ ಕಡೆಯಿಂದ ಬಂದ ಕಾರು ತಿರುವಿನಲ್ಲಿ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಕ್ರಾಸ್ ಬಳಿ ಘಟನೆ ನಡೆದಿದೆ. ಕುಮಟಾದಿಂದ ಅಂಕೋಲಾದತ್ತ ಉಸುಕು ತುಂಬಿಕೊಂಡು ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ರಸ್ತೆಯ ತಡೆಗೋಡೆ ಕಿತ್ತುಹೋಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಕ್ಕೆ ಬಿದ್ದ ಗಾಡಿಯನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Jai Shree Ram slogan: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Jai Shree Ram slogan Rahul Gandhi instigated anti Hindu activities says Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್‌ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ (Rahul Gandhi) ಕಾರಣ. ಬೆಂಗಳೂರಲ್ಲಿ ಜೈಶ್ರೀರಾಮ್‌ ಘೋಷಣೆ (Jai Shree Ram slogan) ಕೂಗಿದ್ದಕ್ಕೆ ಹಲ್ಲೆ ಮಾಡಲಾದ ಪ್ರಕರಣವೂ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಆಗಿರುವುದು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲ ಆಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ರಾಹುಲ್ ಮುಸ್ಲಿಂ ಲೀಗ್ ಧ್ವಜ ಹಿಡಿದಿದ್ದೇ ಕಾರಣ

ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್‌ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗೃತರಾಗಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬುಧವಾರವೇ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದಾರೆ. ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೇವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಾಲ್ವರ ಬಂಧನ

ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

Continue Reading
Advertisement
Lok sabha election 2024
ದೇಶ26 mins ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Student Death in Bengaluru
ಬೆಂಗಳೂರು30 mins ago

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

LSG vs CSK
ಕ್ರೀಡೆ55 mins ago

LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

Nestle Company
ಲೈಫ್‌ಸ್ಟೈಲ್2 hours ago

Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Lok Sabha Election 20242 hours ago

Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

Supreme Court
ದೇಶ2 hours ago

ಚುನಾವಣೆ ಪವಿತ್ರವಾದುದು, ಧಕ್ಕೆ ಆಗಬಾರದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚಿಸಿದ್ದೇಕೆ?

Aaradhya Bachchan is wiser more intelligent than I
ಬಾಲಿವುಡ್2 hours ago

Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

Road Accident
ಬಾಗಲಕೋಟೆ2 hours ago

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Raj Kundra Shilpa Shetty
ಕ್ರೈಂ2 hours ago

Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Jai Shree Ram slogan Rahul Gandhi instigated anti Hindu activities says Pralhad Joshi
ರಾಜಕೀಯ2 hours ago

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌