dk shivakumar prays at hanuman temple to go to chamundi temple Karnataka Election : ಕೈ ನಾಯಕರಿಂದಲೂ ಟೆಂಪಲ್‌ ರನ್‌, ಬಜರಂಗಬಲಿಗೆ ಡಿಕೆಶಿ ಮೊರೆ; ಸಿದ್ದು ಜತೆ ಚಾಮುಂಡಿ ಬೆಟ್ಟಕ್ಕೆ Vistara News
Connect with us

ಕರ್ನಾಟಕ

Karnataka Election : ಕೈ ನಾಯಕರಿಂದಲೂ ಟೆಂಪಲ್‌ ರನ್‌, ಬಜರಂಗಬಲಿಗೆ ಡಿಕೆಶಿ ಮೊರೆ; ಸಿದ್ದು ಜತೆ ಚಾಮುಂಡಿ ಬೆಟ್ಟಕ್ಕೆ

Congress temple run: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆಂಜನೇಯನ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುವ ಮೂಲಕ ಬಿಜೆಪಿಯ ಆಂದೋಲನಕ್ಕೆ ಸಡ್ಡು ಹೊಡೆದರು.

VISTARANEWS.COM


on

dk shivakumar prays at hanuman temple to go to chamundi temple
ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿರುವ ಆಂಜನೇಯನ ಗುಡಿಯಲ್ಲಿ ಡಿ.ಕೆ. ಶಿವಕುಮಾರ್‌ ಪ್ರಾರ್ಥನೆ
Koo

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರು ಚುನಾವಣೆಯನ್ನು (Karnataka Election 2023) ದೃಷ್ಟಿಯಲ್ಲಿಟ್ಟುಕೊಂಡು ಹನುಮಾನ್‌ ಚಾಲೀಸ್‌ (Hanuman chalisa) ಪಠಣ ಮಾಡುತ್ತಿರುವ ನಡುವೆಯೇ ಕಾಂಗ್ರೆಸ್‌ ನಾಯಕರು ಕೂಟಾ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಬೆಳಗ್ಗೆಯೇ ಆಂಜನೇಯ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುವ ಮೂಲಕ ಬಿಜೆಪಿಯ ಹನುಮಾನ್‌ ಚಾಲೀಸ್‌ ಪಠಣಕ್ಕೆ ಸಡ್ಡು ಹೊಡೆದರು. ಅದರ ಜತೆಗೇ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜತೆ ಚಾಮುಂಡಿ ಬೆಟ್ಟಕ್ಕೆ ಹೋಗಿ ಪೂಜೆ ಸಲ್ಲಿಸಿದರು.

ಅತ್ತ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ (Shobha Karandlaje) ಅವರು ಮಹಾಲಕ್ಷ್ಮಿ ಲೇಔಟ್‌ನ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮಾಡುತ್ತಿದ್ದರೆ, ಇತ್ತ ಡಿ.ಕೆ. ಶಿವಕುಮಾರ್‌ ಅವರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಅಂಜನೇಯ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಆ ಮೂಲಕ ತಾವೂ ಗೆಲುವಿಗಾಗಿ ಬಜರಂಗ ಬಲಿಯ ಮೊರೆ ಹೋದರು.

ಆಂಜನೇಯ ಅತಿ ದೊಡ್ಡ ಸಮಾಜ ಸೇವಕ ಎಂದ ಡಿಕೆಶಿ

ʻʻರಾಮನ ತಂದೆ ದಶರಥ ಮಹಾರಾಜನ ದೇವಸ್ಥಾನ ಇಲ್ಲ. ರಾಮನ ಬಂಟ ಆಂಜನೇಯ ದೇವಸ್ಥಾನಗಳಿವೆ. ಆಂಜನೇಯ ಸಮಾಜದ ಸೇವಕ. ಆಂಜನೇಯನ ಅನುಗ್ರಹ ನಮ್ಮ ಮೇಲೆ ಯಾವಾಗ್ಲೂ ಕೂಡ ಇರುತ್ತದೆʼʼ ಎಂದು ಹೇಳಿದ ಡಿ.ಕೆ. ಶಿವಕುಮಾರ್‌ ಅವರು, ʻʻಇಲ್ಲಿಂದ ಮೈಸೂರಿನವರೆಗೆ ಸುಮಾರು 25 ಆಂಜನೇಯ ದೇವಸ್ಥಾನಗಳಿವೆ. ಆಂಜನೇಯ ಹೇಗೆ ಸೇವೆ ಮಾಡಿದ್ದಾನೋ ಆ ರೀತಿ ಸಮಾಜ ಸೇವೆ ಮಾಡುವ ಶಕ್ತಿ ಆಂಜನೇಯ ನೀಡಲಿ ಅಂತ ಕೇಳಿಕೊಂಡಿದ್ದೇನೆʼʼ ಎಂದು ಹೇಳಿದರು.

ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿರುವ ಆಂಜನೇಯನ ಗುಡಿಯಲ್ಲಿ ಡಿಕೆ ಶಿವಕುಮಾರ್‌ಗೆ ಆಶೀರ್ವಾದ

ಸಿದ್ದರಾಮಯ್ಯ ಜತೆಯಾಗಿ ನಾಡ ದೇವತೆಗೆ ಪೂಜೆ

ಈ ನಡುವೆ ಸಿದ್ದರಾಮಯ್ಯ ಮತ್ತು ತಾವು ಜತೆಯಾಗಿ ಹೋಗಿ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದರು. ʻʻನಮ್ಮ ನಾಡಿನ ದೇವತೆ ನಾಡಿನ ಜನತೆಯನ್ನು ಸುಭಿಕ್ಷವಾಗಿ ಇಡಲಿ ಅಂತ ಹೋಗ್ತಿದ್ದೇವೆ. ನಾಡಿನ ದೇವತೆ ಚಾಮುಂಡೇಶ್ವರಿ ಪ್ರಾರ್ಥನೆ ಮಾಡಬೇಕಾದದ್ದು ನಮ್ಮ ಕರ್ತವ್ಯ. ಇದು ನಮ್ಮ ಸಂಸ್ಕೃತಿ ಆಚಾರ ವಿಚಾರ ಅದನ್ನೇ ಹೇಳಿಕೊಟ್ಟಿದೆ. ನಾವು ಯಾವುದೇ ಕೆಲಸ ಮಾಡಲು ಹೋಗುವ ಮುಂಚೆ ಚಾಮುಂಡಿಗೆ ಪ್ರಾರ್ಥನೆ ಮಾಡಿ ಹೋಗುತ್ತೇವೆ. ನಾನು ಸಿದ್ದರಾಮಯ್ಯ ಇಬ್ಬರು ಹೋಗಿ ತಾಯಿ ಚಾಮುಂಡಿಗೆ ಆಶೀರ್ವಾದ ಪಡೆಯಲಿದ್ದೇವೆʼʼ ಎಂದು ನುಡಿದರು.

ಸಿದ್ದರಾಮಯ್ಯ ಅವರ ಹೆಸರಿನ ಪತ್ರ ನಕಲಿ

ಈ ನಡುವೆ ತಮ್ಮ ವಿರುದ್ಧ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತ ಪಡಿಸಿ ಬರೆದಿದ್ದಾರೆ ಎಂದು ಜಾಲತಾಣದಲ್ಲಿ ಓಡಾಡುತ್ತಿರುವ ಪತ್ರ ನಕಲಿ ಎಂದು ಕೆಪಿಸಿಸಿ ಅಧ್ಯಕ್ಷ ‌ಡಿಕೆ ಶಿವಕುಮಾರ್ ಹೇಳಿದರು.

ʻʻಪಾಪ ಸಿದ್ದರಾಮಯ್ಯನವರು ಯಾಕೆ ಹಾಗೆ ಮಾಡುತ್ತಾರೆ. ಬೆಳಗ್ಗೆ ಸಂಜೆ ಇಡೀ ಕ್ಷೇತ್ರ ಓಡಾಡೋಕೆ ಸುತ್ತಿಕೊಂಡು ಇದ್ದಾರೆ. ನಾವಿಬ್ಬರೂ ಕೂಡ ಮೊನ್ನೆಯಷ್ಟೇ ಇಬ್ಬರೂ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ. ಅವರಿಗೆ ಅಸಮಾಧಾನ ಎಲ್ಲಿದೆ? ಇದೆಲ್ಲ ಮಾತನಾಡೋಕೆ ಪತ್ರ ಬರೆಯೋಕೆ ಅವರಿಗೆ ಎಲ್ಲಿ ಸಮಯವಿದೆ? ಬಿಜೆಪಿಯವರಿಗೆ ಇನ್ನೇನು ಕೆಲಸ ಇಲ್ಲ ಈ ರೀತಿ ಫೇಕ್ ಲೆಟರ್‌ಗಳನ್ನ ತಯಾರು ಮಾಡುತ್ತಾರೆ. ನನ್ನ ಮೇಲೆ ಯಾರಾದರೂ ಲೆಟರ್ ಬರೆದು ಅಸಮಾಧಾನ ವ್ಯಕ್ತಪಡಿಸುತ್ತಾರಾ..? ಬಿಜೆಪಿ ಗರ್ಭಗುಡಿಯಲ್ಲೇ ಇರುವ ಅಸಮಧಾನವನ್ನು ಮುಚ್ಚಿಹಾಕಲು ಈ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆʼʼ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಮೋದಿ ಅವರದ್ದು ಒನ್‌ ಮ್ಯಾನ್‌ ಶೋ

ʻʻಮೋದಿ ಸಾಹೇಬರು ಬಂದು ಇಲ್ಲೇ ರೋಡಲ್ಲಿ ಮಲಗಿದ್ದಾಯ್ತು. ಮೋದಿ ಅವರು ರಾಷ್ಟ್ರೀಯ ನಾಯಕರು. ಅವರಿಗೆ ಒಬ್ಬನೇ ಒಬ್ಬ ರಾಜ್ಯದ ನಾಯಕನ ಜೊತೆಲಿಟ್ಟುಕೊಂಡು ಒಂದು ಪಾದಯಾತ್ರೆ, ರೋಡ್ ಶೋ ಮಾಡೋಕೆ ಆಗಿಲ್ಲ. ಕೊನೆಯ ಪಕ್ಷ ಕ್ಷೇತ್ರದ ಅಭ್ಯರ್ಥಿಗಳ ಜೊತೆಗೆ ರೋಡ್ ಶೋ ಮಾಡೋಕೆ ಆಗಿಲ್ಲ. ಒಬ್ಬರೇ ಸಂಸತ್ ಭವನದ ಪೂಜೆ ಮಾಡುತ್ತಾರೆ. ರಾಮಮಂದಿರಕ್ಕೂ ಒಬ್ಬರೇ ಪೂಜೆಗೆ ಕುಳಿತುಕೊಳ್ಳುತ್ತಾರೆ. ಇಲ್ಲಿ ಮತದಾನ ಕೇಳೋಕೆ ಬಂದಾಗ ಸಂದರ್ಭದಲ್ಲಿ ಒಬ್ಬರೇ ರೋಡ್ ಶೋ ಮಾಡ್ತಾರೆ. ನಾಯಕನಾದವರು ನಾಯಕರನ್ನು ಬೆಳೆಸಬೇಕುʼʼ ಎಂದು ಹೇಳಿದ ಅವರು, ʻʻಯಾವ ಸಂಸತ್ ಸದಸ್ಯನಿಗೂ ಸಮಾಧಾನ ಇಲ್ಲ. ಎಲ್ಲರೂ ಅವರ ಹೆಸರು ಹೇಳಿಕೊಂಡು ವೋಟ್ ಕೇಳ್ತಾ ಇದ್ದಾರೆ ಅಷ್ಟೇʼʼ ಎಂದು ನುಡಿದರು.

ಇದನ್ನೂ ಓದಿ : Karnataka Election 2023: ಹನುಮಾನ್‌ ಚಾಲೀಸಾ ಪಠಣೆಗೆ ತಡೆ; ಚುನಾವಣಾಧಿಕಾರಿಗಳ ಜತೆ ಬಜರಂಗದಳ ವಾಗ್ವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

Bandipur Safari: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಈಗ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಪ್ರತಿ ದಿನಕ್ಕೆ ಎರಡರಿಂದ ಮೂರು ಸಾವಿರ ಮಂದಿ ಭೇಟಿ ನೀಡುತ್ತಿದ್ದು, ಏಳರಿಂದ ಎಂಟು ಲಕ್ಷ ರೂಪಾಯಿ ವರೆಗೂ ಆದಾಯ ಬರುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಹೋದ ಮೇಲೆ ಇಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಆಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Edited by

Bandipur National Park PM Narendra modi visit
ಬಂಡೀಪುರ ರಾಷ್ಟ್ರೀಯ ಉದ್ಯಾನವನ
Koo

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ (Bandipur National Park) ಈಗ ಮತ್ತಷ್ಟು ಕಳೆಗಟ್ಟಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿ ಬಳಿಕ ಇಲ್ಲಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ವಾರಾಂತ್ಯವಾದರೆ ಸಾಕು ಬಂಡಿಪುರ ಸಫಾರಿಗೆ ಪ್ರವಾಸಿಗರು ಹರಿದು ಬರುತ್ತಿದ್ದಾರೆ.

2023ರ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರದಲ್ಲಿ ಸಫಾರಿ ನಡೆಸಿದ್ದರು. ಪ್ರಾಜೆಕ್ಟ್‌ ಟೈಗರ್‌ನ (Project Tiger) 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮ ಮತ್ತು ಹುಲಿಗಣತಿ ಬಿಡುಗಡೆ ಸೇರಿದಂತೆ ಹಲವು ಕಾರಣಗಳಿಗಾಗಿ ಅವರು ಆಗಮಿಸಿದ್ದರು. ಈ ವೇಳೆ ಮೋದಿ ಸುಮಾರು 2 ಗಂಟೆ ಕಾಲ ಬಂಡೀಪುರ ಉದ್ಯಾನವನವನ್ನು ಸುತ್ತಿದ್ದರು.

PM Narendra modi visits Bandipur National Park
ಬಂಡೀಪುರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸಂಗ್ರಹ ಚಿತ್ರ

ಬಂಡೀಪುರ ಅಭಯಾರಣ್ಯದ ಸೊಬಗಿನ ಜತೆಗೆ ಕಾಲ ಕಳೆದಿದ್ದ ನರೇಂದ್ರ ಮೋದಿ ಅವರು ವನ್ಯಜೀವಿ, ನೈಸರ್ಗಿಕ ಸೌಂದರ್ಯವನ್ನು ವೀಕ್ಷಿಸಿ ಖುಷಿಪಟ್ಟಿದ್ದರು. ಸುದೀರ್ಘ 2 ಗಂಟೆ 15 ನಿಮಿಷ ಟೈಗರ್ ಸಫಾರಿ ನಡೆಸಿ, ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಅವುಗಳ ಫೋಟೊ ತೆಗೆದು ಖುಷಿಪಟ್ಟಿದ್ದರು. ಇದಾದ ಬಳಿಕ ಪರಿಸರ ಪ್ರೇಮಿಗಳು, ಪ್ರವಾಸಿ ಪ್ರೇಮಿಗಳಿಗೆ ಇದು ಫೇವರಿಟ್‌ ತಾಣವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದಲ್ಲದೆ, ಕೇರಳ-ತಮಿಳುನಾಡು ಸೇರಿದಂತೆ ಇನ್ನಿತರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

PM Narendra modi visits Bandipur National Park
ಪ್ರಧಾನಿ ನರೇಂದ್ರ ಮೋದಿ ಅವರು ಟೈಗರ್‌ ಸಫಾರಿ ನಡೆಸಿದ್ದ ಕ್ಷಣ ಸಂಗ್ರಹ ಚಿತ್ರ

ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸೆಂಗೋಲ್​ ಪ್ರತಿಷ್ಠಾಪನೆ; ಕೈಮುಗಿದುಕೊಂಡು ರಾಜದಂಡ ಹಿಡಿದು ಬಂದ ಪ್ರಧಾನಿ ಮೋದಿ

PM Narendra modi visits Bandipur National Park
ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಸಫಾರಿ ವೇಳೆ ತೆಗೆಯಲಾದ ಆನೆಗಳ ಫೋಟೊ ಸಂಗ್ರಹ ಚಿತ್ರ

ನಿತ್ಯ 2 ಸಾವಿರ ಜನ ಭೇಟಿ

ಪ್ರತಿ ನಿತ್ಯ ಒಂದೂವರೆಯಿಂದ ಎರಡು ಸಾವಿರ ಜನರ ಭೇಟಿ ನೀಡುತ್ತಿದ್ದು, ಸಫಾರಿಯಿಂದಲೇ ಪ್ರತಿ ದಿನ 7 ರಿಂದ 8 ಲಕ್ಷ ರೂಪಾಯಿ ಆದಾಯ ಸಂಗ್ರಹವಾಗುತ್ತಿದೆ. ಪ್ರವಾಸಿಗರ ಹೆಚ್ಚಳದಿಂದ ಅರಣ್ಯ ಇಲಾಖೆಯ ಆದಾಯದಲ್ಲಿಯೂ ಹೆಚ್ಚಳವಾಗುತ್ತಿದೆ.

PM Narendra modi visits Bandipur National Park
ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಸಫಾರಿ ವೇಳೆ ತೆಗೆಯಲಾದ ಕಾಡುಕೋಣಗಳ ಫೋಟೊ ಸಂಗ್ರಹ ಚಿತ್ರ

ಹೊಸ ವಾಹನಗಳ ಖರೀದಿ

ಸಾರ್ವಜನಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು 4 ಹೊಸ ವಾಹನಗಳನ್ನು ಖರೀದಿಸಿದೆ. ಸಫಾರಿಗಾಗಿ ಮತ್ತೆ 2 ಬಸ್, 2 ಜೀಪ್‌ಗಳನ್ನು ಖರೀದಿ ಮಾಡಲಾಗಿದೆ.

Tourists visits Bandipur National Park
ಬಂಡೀಪುರಕ್ಕೆ ಭೇಟಿ ನೀಡಿರುವ ಪ್ರವಾಸಿಗರು

ಟಿಕೆಟ್‌ಗಾಗಿ ಪರದಾಟ

ಆನ್‌ಲೈನ್ ಟಿಕೆಟ್ ವ್ಯವಸ್ಥೆ ಮಾಡಿರುವುದರಿಂದ ಮೊದಲೇ ಬುಕ್ಕಿಂಗ್‌ ನಡೆಯುತ್ತಿದ್ದು, ಸೋಲ್ಟ್‌ಔಟ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಆಫ್‌ಲೈನ್ ಟಿಕೆಟ್ ಕಡಿಮೆ ಪ್ರಮಾಣದಲ್ಲಿಟ್ಟಿದ್ದರಿಂದ ಅವುಗಳು ಎಲ್ಲರಿಗೂ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ಟಿಕೆಟ್‌ ಸಿಗದೇ ಪ್ರವಾಸಿಗರು ನಿರಾಸೆಯಿಂದ ವಾಪಸ್‌ ಆಗುತ್ತಿರುವ ಸನ್ನಿವೇಶವೂ ಇದೆ.

Tourists visits Bandipur National Park
ಬಂಡೀಪುರದ ಟಿಕೆಟ್‌ ಕೌಂಟರ್‌ನಲ್ಲಿ ಪ್ರವಾಸಿಗರು

912.04 ಚದರ ಕಿ.ಮೀ ವಿಸ್ತೀರ್ಣ

ಬಂಡೀಪುರ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಮೀಸಲು ಪ್ರದೇಶವು ಭಾರತದ 2ನೇ ಅತಿ ದೊಡ್ಡ ಹುಲಿ ಸಂರಕ್ಷಣಾ ತಾಣವಾಗಿದ್ದು, 912.04 ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಈ ಬಂಡೀಪುರ ರಾಷ್ಟ್ರೀಯ ಉದ್ಯಾನವು ವಯನಾಡ್ (ವನ್ಯಜೀವಿ ಅಭಯಾರಣ್ಯ), ಮುದುಮಲೈ ಮತ್ತು ನಾಗರಹೊಳೆಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.

Tourists visits Bandipur National Park
ಸಫಾರಿಗೆ ಹೊರಟು ನಿಂತಿರುವ ಪ್ರವಾಸಿಗರು

ಇನ್ನು ಈ ಬಂಡೀಪುರವು ದಕ್ಷಿಣ ಭಾರತದ ಅತಿದೊಡ್ಡ ಸಂರಕ್ಷಿತ ಪ್ರದೇಶಗಳಲ್ಲಿ ಒಂದು ಎಂಬ ಖ್ಯಾತಿಯನ್ನು ಹೊಂದಿದೆ. ದಕ್ಷಿಣ ಏಷ್ಯಾದ ಕಾಡಾನೆಗಳ ಅತಿ ದೊಡ್ಡ ಆವಾಸ ಸ್ಥಾನವೂ ಇದಾಗಿದೆ. ಇದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ.

Tourists visits Bandipur National Park
ಬಸ್‌ನಲ್ಲಿ ಸಫಾರಿಯಲ್ಲಿರುವ ಪ್ರವಾಸಿಗರು

ಇದನ್ನೂ ಓದಿ: Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

ಇಲ್ಲಿರುವ ವನ್ಯಜೀವಿಗಳು

ಹುಲಿಗಳು, ಚಿರತೆ, ಜಿಂಕೆ, ಕಡವೆಗಳು, ಕಾಡು ನಾಯಿಗಳು, ಕಾಡುಹಂದಿ, ಕರಡಿಗಳು, ದೈತ್ಯ ಮಲಬಾರ್ ಅಳಿಲುಗಳು, ಕಾಡೆಮ್ಮೆ ಇತ್ಯಾದಿಗಳು ವನ್ಯಜೀವಿಗಳನ್ನು ಬಂಡಿಪುರದಲ್ಲಿ ಕಾಣಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಕುತೂಹಲದಿಂದ ವೀಕ್ಷಣೆ ಮಾಡುತ್ತಿದ್ದ ಕ್ಷಣ ಸಂಗ್ರಹ ಚಿತ್ರ

ದಿನಕ್ಕೆರಡು ಬಾರಿ ಅರಣ್ಯ ಸಫಾರಿ

ಬಂಡೀಪುರದಲ್ಲಿ ಪ್ರತಿದಿನ ಎರಡು ಬಾರಿ ಸಫಾರಿ ನಡೆಸಲಾಗುತ್ತದೆ. ಇಲ್ಲಿ ಎರಡು ರೀತಿಯ ಸಫಾರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಬಸ್‌ ಹಾಗೂ ಜೀಪ್‌ ವ್ಯವಸ್ಥೆ ಇದೆ. ಬಸ್‌ನಲ್ಲಿ ಹೆಚ್ಚಿನ ಜನರು ಒಮ್ಮೆಲೆಗೆ ಹೋಗಬಹುದಾಗಿದ್ದು, ಇದು 45 ನಿಮಿಷಗಳಿಂದ 1 ಗಂಟೆಯ ಅವಧಿಯನ್ನು ಹೊಂದಿರುತ್ತದೆ. ಇನ್ನು ಜೀಪ್ ಸಫಾರಿಯಲ್ಲಿ ಸರಿಸುಮಾರು 2 ಗಂಟೆಗಳ ಅವಧಿ ಇರುತ್ತದೆ. ಈ ಎರಡೂ ಸಫಾರಿಗಳು ಬೆಳಗ್ಗೆ 6 ರಿಂದ 9 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆ ನಡುವೆ ಕಾರ್ಯನಿರ್ವಹಿಸುತ್ತವೆ. ಇನ್ನು ನೀವು ಕ್ಯಾಮೆರಾಗಳನ್ನು ಕೊಂಡೊಯ್ಯುವುದಾದರೆ ಅದಕ್ಕೆ ಹೆಚ್ಚುವರಿ ಶುಲ್ಕವಿರುತ್ತದೆ.

ಎಷ್ಟು ದೂರ?

ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಮೀಸಲು ಬೆಂಗಳೂರಿನಿಂದ 220 ಕಿ.ಮೀ ದೂರದಲ್ಲಿದೆ. ಮೈಸೂರು ನಗರವು ಹತ್ತಿರದ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣವಾಗಿದೆ (ಬಂಡೀಪುರದಿಂದ 73 ಕಿ.ಮೀ). ಮೈಸೂರಿನಿಂದ ಬಂಡೀಪುರ ತಲುಪಲು ಬಸ್‌ಗಳು ಅಥವಾ ಟ್ಯಾಕ್ಸಿಗಳು ಸಿಗುತ್ತವೆ.

ವಸತಿ ವ್ಯವಸ್ಥೆಯೂ ಇದೆ

ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ ರಾಷ್ಟ್ರೀಯ ಉದ್ಯಾನವನದ ಹೊರಗಡೆ ಬಂಡೀಪುರ ಸಫಾರಿ ಲಾಡ್ಜ್ ಅನ್ನು ನಡೆಸುತ್ತಿದೆ. ಕೆಲವು ಖಾಸಗಿ ರೆಸಾರ್ಟ್‌ಗಳು ಲಭ್ಯವಿವೆ. ಮೈಸೂರು ನಗರದಲ್ಲಿ ಹೆಚ್ಚಿನ ವಾಸ್ತವ್ಯದ ಆಯ್ಕೆಗಳೂ ಇದ್ದು, ಪ್ರವಾಸಿಗರು ಅನುಕೂಲಕ್ಕೆ ತಕ್ಕಂತೆ ವ್ಯವಸ್ಥೆ ಮಾಡಿಕೊಳ್ಳಬಹುದು.

ಯಾವ ಸಮಯ ಹೆಚ್ಚು ಸೂಕ್ತ

ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ವರ್ಷದ ಯಾವ ಸಮಯದಲ್ಲಿ ಭೇಟಿ ನೀಡಬಹುದಾದರೂ ಮುಂಗಾರು ನಂತರದ ಅಂದರೆ, ಅಕ್ಟೋಬರ್‌ನಿಂದ ಫೆಬ್ರವರಿವರೆಗೆ ಭೇಟಿ ನೀಡುವುದು ಉತ್ತಮ ಸಮಯ ಎಂದು ಹೇಳಲಾಗುತ್ತದೆ.‌

ಇದನ್ನೂ ಓದಿ: ವಿಸ್ತಾರ Explainer: ಹೊಸ ಸಂಸತ್​ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?

ರಾತ್ರಿ ಸಂಚಾರ ನಿಷೇಧ

ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ಬಂಡೀಪುರ ಕಾಡಿನ ಮೂಲಕ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಕಾರಣ ರಾತ್ರಿ ವಾಹನಗಳ ಸಂಚಾರದಿಂದ ಅಪಘಾತಗಳು ಸಂಭವಿಸಿ ಕಾಡು ಪ್ರಾಣಿಗಳು ಮೃತಪಡುತ್ತವೆ. ಹೀಗಾಗಿ ರಾತ್ರಿ ಸಂಚಾರವನ್ನು ನಿಷೇಧ ಮಾಡಲಾಗಿದೆ.

Continue Reading

ಕರ್ನಾಟಕ

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

VISTARANEWS.COM


on

Edited by

CM Siddaramaiah and B Nagendra and DK Shivakumar
Koo

ಬೆಂಗಳೂರು, ಕರ್ನಾಟಕ: ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರದಲ್ಲಿ ಎಲ್ಲ ಮಂತ್ರಿ ಸ್ಥಾನಗಳ್ನು (Karnataka Cabinet) ಭರ್ತಿ ಮಾಡಲಾಗಿದೆ. ಕಳೆದ ವಾರ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ನಿನ್ನೆ ಮತ್ತೆ 24 ಶಾಸಕರು ಸಚಿವರಾಗಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಂತಾಗಿದೆ. ಈ ಮಧ್ಯೆ, ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರ ಪೈಕಿ ಅಂದರೆ, 34 ಸಚಿವರ ಪೈಕಿ 16 ಜನರು ಕ್ರಿಮಿನಲ್ ಪ್ರಕರಣಗಳನ್ನು (Criminal Cases) ಎದುರಿಸುತ್ತಿದ್ದಾರೆ. ಎಡಿಆರ್ (ADR) ಈ ಮಾಹಿತಿಯನ್ನು ಹೊರ ಹಾಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಸಚಿವ ಬಿ ನಾಗೇಂದ್ರ ಅವರ 42 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರೇ ಅಗ್ರಸ್ಥಾನಿಯಾಗಿದ್ದಾರೆ. ನಾಗೇಂದ್ರ ನಂತರದ ಸ್ಥಾನದಲ್ಲಿ ಉಪ ಮುಖ್ಯಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರಿದ್ದು, 19 ಕ್ರಿಮಿನಲ್ ಪ್ರಕ್ರಣಗಳ ವಿಚಾರಣೆ ನಡೆಯುತ್ತಿದೆ. ನಾಗೇಂದ್ರ ಅವರ ವಿರುದ್ಧ ಪ್ರಕರಣಗಳಲ್ಲಿ 21 ಪ್ರಕರಣಗಳು ಲೋಕಾಯುಕ್ತ ಮುಂದಿವೆ. ಉಳಿದ ಪ್ರಕರಣಗಳು ಸಿಬಿಐ, ಸಿಐಡಿಗಳ ಮುಂದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ 13 ಪ್ರಕರಣಗಳಿವೆ. ಕಾನೂನು ಬಾಹಿರ ಸಭೆ, ಚುನಾವಣೆ ಮೇಲೆ ಪ್ರಭಾವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಜಮೀರ್ ಖಾನ್ ಅವರು ವಿರುದ್ಧ 6 ಗಂಭೀರ ಪ್ರಕರಣಗಳಿವೆ. ಇನ್ನುಳಿದಂತೆ ಪ್ರಿಯಾಂಕ್ ಖರ್ಗೆ(9), ಈಶ್ವರ್ ಖಂಡ್ರೆ(7), ಎಂ ಬಿ ಪಾಟೀಲ್(5), ರಾಮಲಿಂಗಾ ರೆಡ್ಡಿ(4), ಡಾ. ಜಿ ಪರಮೇಶ್ವರ್(3), ಎಚ್ ಕೆ ಪಾಟೀಲ್ (2), ಡಿ ಸುಧಾಕರ್ (2), ಸತೀಶ್ ಜಾರಕಿಹೊಳಿ (2), ಕೃಷ್ಣ ಭೈರೇಗೌಡ (1), ಎನ್ ಚಲುವರಾಯಸ್ವಾಮಿ (1), ಕೆ ಎಚ್ ಮುನಿಯಪ್ಪ (1) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ

ಅಸೋಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(Association for Demorcatic Reforms- ADR) ಈ ಮಾಹಿತಿಯನ್ನು ಹೊರ ಹಾಕಿದೆ. ಚುನಾವಣಾ ವೇಳೆ ಆಯೋಗಕ್ಕೆ ಸಲ್ಲಿಸಲಾದ ಅಫಿಡವಿಟ್‌ಗಳ ಮೂಲಕ ಈ ಪಟ್ಟಿಯನ್ನು ರಚಿಸಲಾಗಿದೆ.

ಕರ್ನಾಟಕ ರಾಜಕೀಯದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಉಡುಪಿ

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

Weather report: ಉತ್ತರ ಒಳನಾಡಿನಲ್ಲಿ ಬ್ರೇಕ್‌ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.

VISTARANEWS.COM


on

Edited by

Rain alert
ಸಂಗ್ರಹ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ

Continue Reading

ಕರ್ನಾಟಕ

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

ಹರೀಶ್ ಹಳ್ಳಿ ಆರ್​ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ.

VISTARANEWS.COM


on

Edited by

RTI Activist Harish Halli Died
Koo

ದಾವಣಗೆರೆ: ಕೋಟ್ಯಂತರ ರೂಪಾಯಿ ಭೂ ಅಕ್ರಮದ ಆರೋಪಿಯಾಗಿದ್ದ ಹರೀಶ್​ ಹಳ್ಳಿ (Harish Halli) ಎಂಬಾತ ಪೊಲೀಸ್ ಕಾರಿ (Police Vehicle)ನಿಂದ ಜಿಗಿದು ಮೃತಪಟ್ಟಿದ್ದಾನೆ. ತನ್ನ ಪತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಈ ಘಟನೆ ನಡೆದಿದ್ದು ದಾವಣಗೆರೆಯಲ್ಲಿ (Davanagere News).

ಈ ಹರೀಶ್ ಹಳ್ಳಿ ಆರ್​ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ. ಈ ಭೂ ಅಕ್ರಮ ಕೇಸ್​​ನಡಿ ಹರೀಶ್ ಹಳ್ಳಿ, ಸಬ್​ ರಿಜಿಸ್ಟ್ರಾರ್ ಆರ್.ಎಲ್.ವೀಣಾ ಸೇರಿ ಒಟ್ಟು ಐವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈತ ಸೈಟ್​ನ್ನು ತನ್ನದಾಗಿಸಿಕೊಳ್ಳಲು ನಕಲಿ ಮಾಲೀಕರನ್ನೇ ಸೃಷ್ಟಿಸಿದ್ದ. ನಕಲಿ ಆಧಾರ್​ ಕಾರ್ಡ್​ ಮಾಡಿಸಿಕೊಂಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.

ಭೂ ಅಕ್ರಮದ ಕೇಸ್​​ನಲ್ಲಿ ಎ 1 ಆರೋಪಿಯಾದ ಹರೀಶ್​ನನ್ನು ಮೇ 27ರ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆದುಕೊಂಡು ಬರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಫ್ಲೈಓವರ್​ ಮೇಲೆ ಪೋಲೀಸ್ ವಾಹನ ಹೋಗುತ್ತಿದ್ದಾಗ ಈತ ಜಿಗಿದಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಆತನ ಪತ್ನಿ ಕಿಡಿಕಾರಿದ್ದಾರೆ. ನನ್ನ ಪತಿಯನ್ನು ಪೊಲೀಸರು ಮಧ್ಯರಾತ್ರಿ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಹರಿಶ್​ ಹಳ್ಳಿಯನ್ನು ಕರೆದುಕೊಂಡು ಹೋದ ಗಾಂಧಿನಗರ ಪೊಲೀಸ್​ ಠಾಣೆ ಪಿಎಸ್​ಐ ಮತ್ತು ಚಾಲಕನ ವಿರುದ್ಧ ದೂರು ನೀಡಿದ್ದಾರೆ.

ಅಪ್ಪ ಹೇಳೋದೇನು?
ಪೊಲೀಸರೇ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ಮುಂಜಾನೆ ನಮಗೆ ಫೋನ್​ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರೇ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿದ್ದಾರೆ. ಈಗ ಜಂಪ್​ ಮಾಡಿದ, ಅದೂ ಇದು ಎಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತ ಹರೀಶ್ ಹಳ್ಳಿ ತಂದೆ ಆರೋಪಿಸಿದ್ದಾರೆ. ವಾಹನದಲ್ಲಿ ಅವನ ಅಕ್ಕ-ಪಕ್ಕ ಪೊಲೀಸರೇ ಕುಳಿತಿದ್ದರು. ಅಂದಮೇಲೆ ಅವನು ಹೇಗೆ ಕಾರಿನಿಂದ ಜಂಪ್​ ಮಾಡಿದ ಎಂದೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:Illegal Mining | ಕೊಪ್ಪಳದಲ್ಲಿ ನೀರಾವರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಸಚಿವರಿಂದ ಕ್ರಮ ಕೈಗೊಳ್ಳುವ ಭರವಸೆ

Continue Reading
Advertisement
Prime minister Modi in 101th Mann ki Baat
ದೇಶ24 mins ago

Mann Ki Baat : 101ನೇ ಮನ್‌ ಕಿ ಬಾತ್‌ನಲ್ಲಿ ವೀರ ಸಾವರ್ಕರ್‌ ವಿಚಾರಗಳ ಬಗ್ಗೆ ಮೋದಿ ಹೇಳಿದ್ದೇನು?

Vinayak damodar savarkar
ಅಂಕಣ25 mins ago

Savarkar Jayanti: ಭಾರತೀಯರನ್ನು ಸ್ವಸ್ವರೂಪದ ಅರಿವಿನೆಡೆಗೆ ನಡೆಸಿದ ವೀರ ಸಾವರ್ಕರ್‌

kapil dev 1983 world cup captain
ಕ್ರಿಕೆಟ್40 mins ago

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

daredevil mustafa Running successful
South Cinema41 mins ago

Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

somana kunitha
ಕಲೆ/ಸಾಹಿತ್ಯ42 mins ago

ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

Ram Charan presents The India House Film
South Cinema42 mins ago

Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್‌; ವಿಡಿಯೊ ಹಂಚಿಕೊಂಡ ರಾಮ್‌ಚರಣ್‌!

PM Modi Tweet After inaugurates new Parliament building
ದೇಶ46 mins ago

ಹೊಸ ಸಂಸತ್​ ಭವನ ಉದ್ಘಾಟನೆ; ಈ ಕಟ್ಟಡ ಸಬಲೀಕರಣಕ್ಕೆ ತೊಟ್ಟಿಲಾಗಲಿ ಎಂದ ಪ್ರಧಾನಿ ಮೋದಿ

Bandipur National Park PM Narendra modi visit
ಕರ್ನಾಟಕ47 mins ago

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

CM Siddaramaiah and B Nagendra and DK Shivakumar
ಕರ್ನಾಟಕ52 mins ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ1 hour ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ8 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!