karnataka-election: Eshwarappa Asks DK Shivkumar to change his name as KD Shivkumar Karnataka Election : ಡಿಕೆ ಶಿವಕುಮಾರ್‌ ಅನ್ನೋ ಹೆಸರೇಕೆ, ಕೇಡಿ ಶಿವಕುಮಾರ್ ಅಂತಿಟ್ಕೊಳ್ಳಿ; ಈಶ್ವರಪ್ಪ ಫುಲ್‌ ಗರಂ - Vistara News

ಕರ್ನಾಟಕ

Karnataka Election : ಡಿಕೆ ಶಿವಕುಮಾರ್‌ ಅನ್ನೋ ಹೆಸರೇಕೆ, ಕೇಡಿ ಶಿವಕುಮಾರ್ ಅಂತಿಟ್ಕೊಳ್ಳಿ; ಈಶ್ವರಪ್ಪ ಫುಲ್‌ ಗರಂ

KS Eshwarappa: ಡಿ.ಕೆ. ಶಿವಕುಮಾರ್‌ ಅವರು ತಮ್ಮ ಹೆಸರನ್ನು ಕೇಡಿ ಶಿವಕುಮಾರ್‌ ಎಂದು ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ ಕೆ.ಎಸ್‌. ಈಶ್ವರಪ್ಪ. ಇದಕ್ಕೆ ಅವರು ಕೊಟ್ಟ ಕಾರಣವೇನು?

VISTARANEWS.COM


on

Eshwarappa Asks DK Shivkumar to change his name as KD Shivkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಕರ್ನಾಟಕದಲ್ಲಿ (Karnataka Election 2023) ಜಾತಿ ರಾಜಕಾರಣಕ್ಕೆ ಬೆಂಕಿ ಹಚ್ಚಿದವರೇ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌. ಇಂಥವರು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸುತ್ತಿರುವುದು ನಾಚಿಕೆಗೇಡು ಎಂದಿದ್ದಾರೆ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ (DK Shivakumar) ಸೇರಿದಂತೆ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ʻʻಕರ್ನಾಟಕ ರಾಜ್ಯದ ಜನರ ಆಕ್ರೋಶ ತೋರಿಸಲು ಕಾಂಗ್ರೆಸ್ ಪ್ರಣಾಳಿಕೆ ಸುಟ್ಟಿದ್ದೇನೆ. ರಾಷ್ಟ್ರಾಭಿಮಾನಿ, ದೇಶ ರಕ್ಷಕ ಸಂಘಟನೆ ಬಜರಂಗ ದಳವನ್ನು ಮುಸ್ಲಿಂ ಮತಕ್ಕಾಗಿ ನಿಷೇಧಿಸುವ ಮಾತನ್ನು ಆಡುತ್ತಿದೆ ಕಾಂಗ್ರೆಸ್‌ʼʼ ಎಂದು ದೂರಿದರು.

ಡಿ.ಕೆ. ಶಿವಕುಮಾರ್‌ ಅವರು ಅವರು ಜಾತಿವಾದಿ. ನಿಮ್ಮ ಜಾತಿಯವನನ್ನು ಸಿಎಂ ಮಾಡಲು ನನ್ನನ್ನು ಬೆಂಬಲಿಸಿ ಎಂದು ಕೇಳುವ ಅವರ ಜಾತಿವಾದಿಯಲ್ಲವೇ ಎಂದು ಕೇಳಿದರು ಈಶ್ವರಪ್ಪ. ಬಜರಂಗ ದಳಕ್ಕೂ ಆಂಜನೇಯನಿಗೂ ಏನು ಸಂಬಂಧ ಎನ್ನುವ ಅಸಂಬದ್ಧ ಪ್ರಶ್ನೆಯನ್ನು ಕೇಳಿದ್ದಾರೆ ಡಿ.ಕೆ. ಶಿವಕುಮಾರ್‌. ಬಜರಂಗ ಬಲಿಯಂತೆ ಕೆಚ್ಚು ತೋರಿಸುವುದು, ಅವನನ್ನು ಆರಾಧಿಸುತ್ತೇವೆ ಎನ್ನುವ ಕಾರಣಕ್ಕಾಗಿ ಸಂಘಟನೆಗೆ ಆ ಹೆಸರು ಇಟ್ಟಿದ್ದೇವೆ. ಡಿ.ಕೆ. ಶಿವಕುಮಾರ್‌ಗೆ ಶಿವಕುಮಾರ್‌ ಅನ್ನೋ ಹೆಸರು ಯಾಕಿಟ್ಟರು? ಶಿವಕುಮಾರ್‌ ಥರ ಇರಲಿ ಅಂತ ತಾನೇ? ಅವರಿಗೆ ಡಿ.ಕೆ. ಶಿವಕುಮಾರ್‌ ಅಂತ ಹೆಸರು ಯಾಕೆ ಬೇಕು? ಕೇಡಿ ಶಿವಕುಮಾರ್‌ ಅಂತ ಹೆಸರು ಇಟ್ಕೊಳ್ಳಿ ಎಂದು ಈಶ್ವರಪ್ಪ ಹೇಳಿದರು.

ಜಾತಿ ಬೆಂಕಿ ಹಚ್ಚಿದ, ಬಜರಂಗ ದಳ ನಿಷೇಧದ ಮಾತು ಆಡಿರುವ ಕಾಂಗ್ರೆಸ್‌ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಳ್ಳುತ್ತದೆ ಎಂದ ಈಶ್ವರಪ್ಪ ಅವರು, ಕಾಂಗ್ರೆಸ್ ಧರ್ಮ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಕೆಂಡ ಕಾರಿದರು. ಕಾಂಗ್ರೆಸ್‌ನವರು ಕೂಡಲೆ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಮೋದಿ ಆನೆ, ಪ್ರಿಯಾಂಕ ಖರ್ಗೆ ತಿಗಣೆಗೆ ಸಮಾನ!

ʻʻರಾಜ್ಯದಲ್ಲಿ ರಾಷ್ಟ್ರೀಯವಾದ ಬೇಕೋ, ರಾಷ್ಟ್ರ ವಿರೋಧಿಗಳು ಬೇಕೋ ಅನ್ನೋ ಚರ್ಚೆ ನಡೆಯುತ್ತಿದೆ. ನರೇಂದ್ರ ಮೋದಿಯಂತಹ ವಿಶ್ವ ನಾಯಕನಿಗೆ, ಬಿಜೆಪಿಗೆ ಜನ ಬೆಂಬಲ ಕೊಡುತ್ತಿದ್ದಾರೆ. ಸಾಯೋ ಸಮಯದಲ್ಲೂ ಕಾಂಗ್ರೆಸ್‌ಗೆ ಬುದ್ಧಿ ಬಂದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷಸರ್ಪ ಅಂತಾರೆ. ಮೋದಿ ಒಂದು ಆನೆ ತರಹ. ಅವರ ಮುಂದೆ ಮಲ್ಲಿಕಾರ್ಜುನ ಖರ್ಗೆ ಮಗ ತಿಗಣೆಗೆ ಸಮಾನ. ಅವನು ಮೋದಿಯವರನ್ನು ನಾಲಾಯಕ್‌ ಅಂತಾನೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೆಟ್ಟರ್‌ ಸಿದ್ಧಾಂತ ಬಿಟ್ಟು ಹೋಗಿಲ್ಲ, ಮನೆಯಲ್ಲಿನ್ನೂ ಮೋದಿ ಫೋಟೊ ಇದೆ!

ʻʻಜಗದೀಶ್ ಶೆಟ್ಟರ್ ಪರಿಸ್ಥಿತಿ ನೋಡಿ ಅಯ್ಯೋ ಪಾಪ ಅನಿಸುತ್ತಿದೆ. ಆರ್‌ಎಸ್‌ಎಸ್‌, ಹಿಂದುತ್ವ ವಿಧಾಸನಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಸ್ವಾಭಿಮಾನವನ್ನು ನಾನು ನಿರೀಕ್ಷಿಸುತ್ತಿದ್ದೆ. ಟಿಕೆಟ್‌ಗಾಗಿ ಶೆಟ್ಟರ್ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆ. ಶೆಟ್ಟರ್ ಬಹಿರಂಗವಾಗಿ ಕಾಂಗ್ರೆಸ್ ನಿಲುವನ್ನು ಖಂಡಿಸಲಿʼʼ ಎಂದು ಹೇಳಿದ ಈಶ್ವರಪ್ಪ ಅವರು, ಒಂದುವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಜರಂಗ ದಳ ನಿಷೇಧ ಮಾಡಿದರೆ ಏನು ಮಾಡುತ್ತೀರಾ ಶೆಟ್ಟರೆ ಎಂದು ಪ್ರಶ್ನಿಸಿದರು.

ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಬಿಟ್ಟು ಹೋಗಿದ್ದಕ್ಕೆ ಬೇಸರವಿದೆ. ಹಾಗಂತ ಅವರು ಎಂದೂ ಸಿದ್ಧಾಂತವನ್ನು ಬಿಟ್ಟು ಹೋಗಿಲ್ಲ. ಶೆಟ್ಟರ್ ಅವರು ತಮ್ಮ ಮನೆಯಲ್ಲಿ ಇನ್ನೂ ಪ್ರಧಾನಿ ಮೋದಿ ಫೋಟೊ ಇಟ್ಟುಕೊಂಡಿದ್ದಾರೆ. ಯಾರೋ ಒಬ್ಬ ವ್ಯಕ್ತಿಯ ಕಾರಣಕ್ಕಾಗಿ ಪಕ್ಷ ತೊರೆದಿದ್ದಾಗಿ ಅವರೇ ಹೇಳುತ್ತಿದ್ದಾರೆ ಎಂದು ಈಶ್ವರಪ್ಪ ನೆನಪಿಸಿದರು. ಶೆಟ್ಟರ್‌ ಅವರು ಬಜರಂಗ ದಳ ನಿಷೇಧಿಸುವ ಕಾಂಗ್ರೆಸ್‌ ಪ್ರಸ್ತಾಪವನ್ನೂ ಸಮರ್ಥಿಸಿಲ್ಲ ಎಂದು ಅವರು ಹೇಳಿದರು.

ʻʻಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸವಾಗಿದೆ. ಬಜರಂಗ ದಳವನ್ನು ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲವಿದೆ. ಭಾರತದ ಸಂಸ್ಕೃತಿಯ ರಕ್ಷಣೆಗಿರುವ ಸಂಘಟನೆ ಬಜರಂಗ ದಳ. ಇಂಥ ಸಂಘಟನೆಯನ್ನು ಪಿಎಫ್‌ಐಗೆ ಹೋಲಿಸಿದ್ದು ದೊಡ್ಡ ದುರಂತ. ಹಿಂದುಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದಾಗಲೇ ಖರ್ಗೆ ಜೀವನದ ಸಾಧನೆ ಮಣ್ಣುಪಾಲಾಯಿತು. ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡುತ್ತಿದ್ದಾರೆʼʼ ಎಂದು ಈಶ್ವರಪ್ಪ ಲೇವಡಿ ಮಾಡಿದರು.

ಇದನ್ನೂ ಓದಿ : Modi in Karnataka : ಮೋದಿ ರೋಡ್‌ ಶೋ ನಡುವೆ ಕಾಂಗ್ರೆಸ್‌ನವರು ಆಂಬ್ಯುಲೆನ್ಸ್‌ ಬಿಟ್ಟು ಸೀನ್‌ ಕ್ರಿಯೇಟ್‌ ಮಾಡ್ತಾರಂತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ

Namma Metro: ಆ.17ರಂದು ರೀಚ್-3ರ ಎತ್ತರಿಸಿದ ಮಾರ್ಗದಲ್ಲಿನ -ನಾಗಸಂದ್ರದಿಂದ ಮಾದಾವರೆಗಿನ 3.14 ಕಿ.ಮೀ ನಡುವೆ (ರೋಲ್ಲಿಂಗ್ ಸ್ಟಾಕ್) ಮೆಟ್ರೋ ರೈಲು ಮೂಲಕ ಮೊದಲ ಪರೀಕ್ಷಾರ್ಥ ಸಂಚಾರ ನಡೆದಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

VISTARANEWS.COM


on

Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ನಡೆಸಲಾಗಿದ್ದು, ಈ ಬಗ್ಗೆ ಬಿಎಂಆರ್‌ಸಿಎಲ್‌ ಮಾಹಿತಿ ಹಂಚಿಕೊಂಡಿದ್ದು, ಈ ಮಾರ್ಗವು ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಮುಕ್ತವಾಗುವ ಸಾಧ್ಯತೆ ಇದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಮ್ಮ ಮೆಟ್ರೋ, ಆ.17ರಂದು ರೀಚ್-3ರ ಎತ್ತರಿಸಿದ ಮಾರ್ಗದಲ್ಲಿನ -ನಾಗಸಂದ್ರದಿಂದ ಮಾದಾವರೆಗಿನ 3.14 ಕಿ.ಮೀ ನಡುವೆ (ರೋಲ್ಲಿಂಗ್ ಸ್ಟಾಕ್) ಮೆಟ್ರೋ ರೈಲು ಮೂಲಕ ಮೊದಲ ಪರೀಕ್ಷಾರ್ಥ ಸಂಚಾರ ನಡೆದಿದೆ. ಕನಿಷ್ಠ 5 ಕಿ.ಮೀ ಮತ್ತು ಗರಿಷ್ಠ 35 ಕಿ.ಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಯಿತು.

ನಾಗಸಂದ್ರ-ಮಾದಾವರ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

ಪ್ರಾಯೋಗಿಕ ಸಂಚಾರ ಇನ್ನು ಕೆಲ ದಿನಗಳು ನಡೆಯಲಿದ್ದು, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಸಂಚಾರ ಆರಂಭವಾಗುವ ಸಾಧ್ಯತೆಗಳಿವೆ. ಅಥವಾ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡುವ ಸಾಧ್ಯತೆ ಇದೆ. ಈ ಮಾರ್ಗದಲ್ಲಿ ನಾಗಸಂದ್ರ, ಮಂಜುನಾಥ ನಗರ, ಜಿಂದಾಲ್‌, ಮಾದಾವರ ಮೆಟ್ರೋ ನಿಲ್ದಾಣ ಬರಲಿದೆ.

ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋ (Namma Metro)ದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ (Assistant Security Officer) ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (Bangalore Metro Rail Corporation Limited) ಅರ್ಜಿ ಆಹ್ವಾನಿಸಿದೆ (BMRCL Recruitment 2024). ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9 (Job Alert).

ಹುದ್ದೆಗಳ ವಿವರ ಮತ್ತು ಅರ್ಹತೆ

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ / ಸುಬೇದಾರ್ / ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌ / ಸಬ್ ಇನ್ಸ್‌ಪೆಕ್ಟರ್‌ / ಎಎಸ್ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಗರಿಷ್ಠ ವಯೋಮಿತಿ 62 ವರ್ಷ. ಗಮನಿಸಿ, ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದಿರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂ. ಮತ್ತು 60 ವರ್ಷ ದಾಟಿದವರಿಗೆ 30,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

BMRCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Physical Abuse: ಎಚ್ಎಸ್ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿ ಯುವತಿಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ಎಚ್ಎಸ್ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Physical Abuse) ಸಂಬಂಧ ಯುವತಿ ಸ್ನೇಹಿತ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಶನಿವಾರ ತಡರಾತ್ರಿ 1 ಗಂಟೆಗೆ ಅತ್ಯಾಚಾರ ಯತ್ನ ನಡೆದ ಬಳಿಕ ಸಂತ್ರಸ್ತೆ ಯುವತಿಯ ಸ್ನೇಹಿತೆ ದೂರುದಾರನಿಗೆ ಕರೆ ಮಾಡಿದ್ದಳು. ಸ್ಥಳಕ್ಕೆ ಹೋಗಿ ನೋಡಿದಾಗ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಆಕೆಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತೆ ಯುವತಿಯಿಂದ ಎಮರ್ಜೆನ್ಸಿ ಕರೆ ಮತ್ತು ಲೊಕೇಶನ್ ಬಂದಿದೆ. ಆದರೆ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಸ್ನೇಹಿತೆ ದೂರುದಾರನಿಗೆ ಹೇಳಿದ್ದ. ಲೊಕೇಶನ್ ಆಧರಿಸಿ ಹೊಸೂರು ಸರ್ವಿಸ್ ರಸ್ತೆ ಬಳಿ ಸ್ನೇಹಿತ ಹೋಗಿದ್ದ. ಗಿರಿಯಾಸ್ ಶೋರೂಮ್ ಹಿಂಭಾಗದ ಲಾರಿ ನಿಲ್ಲಿಸುವ ಜಾಗಕ್ಕೆ ಬಂದು ನೋಡಿದ್ದ. ಯುವತಿ ಬೆತ್ತಲೆಯಾಗಿ ಲಾರಿಯ ಹಿಂಭಾಗದಲ್ಲಿ ಬಿದ್ದಿದ್ದಳು. ಆಕೆಯ ಮೇಲೆ ಒಂದು ರೆಡ್ ಜಾಕೆಟ್ ಮಾತ್ರ ಇತ್ತು. ಈ ವೇಳೆ ದೂರುದಾರ ಸ್ನೇಹಿತ ತನ್ನ ಬಟ್ಟೆಯಿಂದ ಆಕೆಯ ದೇಹ ಮುಚ್ಚಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಮತ್ತೊಬ್ಬ ಸ್ನೇಹಿತ ಕೂಡ ಮೊಬೈಲ್‌ನಿಂದ ಹೋಗಿದ್ದ ಮೆಸೇಜ್ ಆಧಾರದ ಮೇಲೆ ಸ್ಥಳಕ್ಕೆ ಬಂದಿದ್ದ. ಇಬ್ಬರು ಸೇರಿಕೊಂಡು ಕಾರ್‌ನ ಶೀಟ್ ಕವರ್‌ನಿಂದ ಆಕೆಯ ದೇಹವನ್ನು ಮುಚ್ಚಿಕೊಂಡು ಕಾರಿನಲ್ಲಿ ಮಲಗಿಸಿದ್ದಾರೆ. ಅಷ್ಟರಲ್ಲಿ, ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಕೇವಲ ಪ್ಯಾಂಟ್‌ನಲ್ಲಿ ನಿಂತಿದ್ದ. ಗಾಬರಿಯಲಿದ್ದ ಆತನ ಮುಖಕ್ಕೆ ಪರಚಿರುವಂತಹ ಗಾಯಗಳಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ಆರೋಪಿಯನ್ನು ಹಿಡಿದುಕೊಳ್ಳಲು ಹೋದಾಗ ಆತ ಸ್ಥಳದಿಂದ ಓಡಿ ಹೋಗಿದ್ದಾನೆ. ನಂತರ ಆಸ್ವಸ್ಥಗೊಂಡಿದ್ದ ಯುವತಿಯನ್ನು ಸ್ನೇಹಿತನ ಕಾರಿನಲ್ಲಿ ಬೊಮ್ಮಸಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ದೂರುದಾರ ಮಾಡಿದ್ದ. ಕಾರಿನಲ್ಲಿ ಯುವತಿ ಬಳಿ ಘಟನೆ ಬಗ್ಗೆ ಸ್ನೇಹಿತರು ಕೇಳಿದ್ದರು. ಆಗ ಅಪರಿಚಿತ ವ್ಯಕ್ತಿ, ಅತ್ಯಾಚಾರ ಮಾಡಲು ಯತ್ನಿಸಿರೋದಾಗಿ‌ ಯುವತಿ ಹೇಳಿಕೆ ನೀಡಿದ್ದಾಳೆ. ಘಟನೆ ಬಗ್ಗೆ ದೂರುದಾರ ಆಕೆಯ ತಂದೆ-ತಾಯಿಗೆ ವಿಷಯ ತಿಳಿಸಿದ್ದಾರೆ.

ಯುವತಿ ಪ್ರಾಣ ಉಳಿಸಿದ SOS ಬಟನ್

ಎಚ್ಎಸ್‌ಆರ್ ಲೇಔಟ್ ಯುವತಿ ಅತ್ಯಾಚಾರ ಪ್ರಕರಣದಲ್ಲಿ SOS ಬಟನ್ ಯುವತಿ ಪ್ರಾಣ ಉಳಿಸಿದೆ ಎಂಬ ವಿಷಯ ತಿಳಿದುಬಂದಿದೆ. ಮೊಬೈಲ್‌ನಲ್ಲಿ ಸ್ವಿಚ್ ಆಫ್ ಬಟನ್ ಪ್ರೆಸ್ ಮಾಡಿದಾಗ SOS ಆಪ್ಷನ್ ಕಾಣಲಿದೆ. ಅದಕ್ಕೆ ಎಮೆರ್ಜೆನ್ಸಿ ನಂಬರ್ ಆ್ಯಡ್ ಮಾಡಬಹುದು. ಅದನ್ನು ಪ್ರೆಸ್ ಮಾಡಿದಾಗ ಆ್ಯಡ್ ಮಾಡಿದ ನಂಬರ್‌ಗೆ ನಿರಂತರ ಕರೆ ಹಾಗೂ ಲೊಕೆಶನ್ ಶೇರ್ ಆಗುತ್ತೆ.

ಹೀಗಾಗಿ SOS ನಲ್ಲಿ ತಂದೆ ಹಾಗೂ ಸ್ನೇಹಿತೆ ನಂಬರ್ ಅನ್ನು ಆ್ಯಡ್ ಸಂತ್ರಸ್ತ ಯುವತಿ ಮಾಡಿದ್ದಳು. ಹೀಗಾಗಿ ತಕ್ಷಣ ಸ್ನೇಹಿತರಿಗೆ ಕರೆ ಹೋಗಿದೆ. ಲೊಕೇಶನ್ ಆಧರಿಸಿ ಬಂದು ಸ್ನೇಹಿತರು ಯುವತಿಯ ರಕ್ಷಣೆ ಮಾಡಿದ್ದಾರೆ. ಅರೆನಗ್ನ ಸ್ಥಿತಿಯಲ್ಲೇ ಯುವತಿಯನ್ನು ಆರೋಪಿ ಬಿಟ್ಟು ತೆರಳಿದ್ದ. ದೌರ್ಜನ್ಯ ಎಸಗಿದಾಗ ಯುವತಿ ಕೂಡ ಪ್ರತಿರೋಧ ಒಡ್ಡಿದ್ದಳು. ಇದರಿಂದ‌ ಆರೋಪಿ ಹೆದರಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ. ಸದ್ಯ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಏನಿದು ಪ್ರಕರಣ?

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.17ರ ರಾತ್ರಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ನಾಗಾಲ್ಯಾಂಡ್‌ ಮೂಲದ ಯುವತಿಯ ಸ್ಥಿತಿ ತೀರ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಶನಿವಾರ ಮಧ್ಯರಾತ್ರಿ ಘಟನೆ ನಡೆದಿತ್ತು. ಆಟೋದಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು ಎನ್ನಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಕೋರಮಂಗಲದ ಪಬ್‌ಗೆ ಹೋಗಿ ವಾಪಸ್‌ ಮನೆಗೆ ಆಟೋದಲ್ಲಿ ಬರುವಾಗ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ಭಾನುವಾರ ಘಟನೆ ಸಂಬಂಧ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ

ಘಟನೆ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯರಾತ್ರಿ 1:30ರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ. ಅಪರಿಚಿತನ ಜತೆಗೆ ಯುವತಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದು ಗೆಟ್ ಟು ಗೆದರ್‌ ಪಾರ್ಟಿ ಮುಗಿಸಿ ಅಲ್ಲಿಂದ ವಾಪಾಸ್ ಬರುವಾಗ ಘಟನೆ ನಡೆದಿದೆ. ಇದು ಗ್ಯಾಂಗ್ ರೇಪ್ ಅಲ್ಲ, ಡ್ರಾಪ್‌ ತೆಗೆದುಕೊಂಡವನಿಂದ ಈ ಕೃತ್ಯ ನಡೆದಿದೆ. ನಾವು ಕೂಡ ಘಟನಾ ಸ್ಥಳಕ್ಕೆ ಹೋಗಿದ್ದೇವೆ, ಈಗಾಗಲೆ ಐದು ಜನರ ತಂಡವನ್ನು ರಚನೆ ಮಾಡಲಾಗಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಯುವತಿ ರ‍್ಯಾಪಿಡೋ ಅಥವಾ ರ‍್ಯಾಂಡಮ್ ಬೈಕ್‌ನಲ್ಲಿ ಡ್ರಾಪ್‌ ಪಡೆದಿದ್ದಳಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಸಂತ್ರಸ್ತೆ ಹೊರ ರಾಜ್ಯದವಳಾಗಿದ್ದು, ಆಕೆಯ ಮೊಬೈಲ್ ಮಿಸ್ ಆಗಿದೆ. ಆಸ್ಪತ್ರೆಯಲ್ಲಿರುವ ಆಕೆ ಚೇತರಿಸಿಕೊಂಡಿದ್ದಾಳೆ. ಬಿಎನ್ ಎಸ್ ಸೆಕ್ಷನ್ 64 ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

CM Siddaramaiah: ಸಿದ್ದರಾಮಯ್ಯ ಅವರು 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಲಿದ್ದಾರೆ. ಇದೇ ವೇಳೆ ಅವರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.20 ಕ್ಕೆ ಜಿಂದಾಲ್ ಏರ್ಪೋರ್ಟ್ ಅವರು ಆಗಮಿಸಲಿದ್ದು ಅಲ್ಲಿಂದ ಅವರು ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಬಂದು ಇಳಿಯಲಿದ್ದಾರೆ.

VISTARANEWS.COM


on

CM Siddaramaiah
Koo

ರಾಯಚೂರು : ಮುಡಾ ಸೈಟ್ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲು ರಾಜ್ಯಪಾಲರಾದ ತಾವರ್​​ಚಂದ್ ಗೆಹ್ಲೋಟ್​ ಅನುಮತಿ ನೀಡುವುದರೊಂದಿಗೆ ವಿಷಯ ಇನ್ನಷ್ಟು ಗಂಭೀರವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮದೇನೂ ತಪ್ಪಿಲ್ಲ ಎಂದು ಹೇಳುವ ಜತೆಗೆ ಪ್ರತಿಪಕ್ಷಗಳ ಪಟ್ಟು ಜೋರಾಗಿದೆ. ಈ ಎಲ್ಲದರ ನಡುವೆ ಸಿದ್ದರಾಮಯ್ಯ ಅವರು ಸೋಮವಾರ (ಆಗಸ್ಟ್​​19ರಂದು) ಮಂತ್ರಾಲಯಕ್ಕೆ (mantralayam) ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಅವರು 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಲಿದ್ದಾರೆ. ಇದೇ ವೇಳೆ ಅವರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.20 ಕ್ಕೆ ಜಿಂದಾಲ್ ಏರ್ಪೋರ್ಟ್ ಅವರು ಆಗಮಿಸಲಿದ್ದು ಅಲ್ಲಿಂದ ಅವರು ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಬಂದು ಇಳಿಯಲಿದ್ದಾರೆ. 12. 05 ಮಂತ್ರಾಲಯದ ಹೆಲಿಪ್ಯಾಡ್ ಬಂದು ಇಳಿಯಲಿದ್ದಾರೆ. ಬಳಿಕ ರಾಯರ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಅವರು ವಿವಿಧ ಕಾಮಗಾರಿ ಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕೆರಳಿದ ಕಾಂಗ್ರೆಸ್ ಪಡೆ, ನಾಳೆ(ಆ.19) ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಗೆ (Congress Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಸಚಿವರು ಸ್ಥಳೀಯ ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

ನಾಳೆ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇಲ್ಲಸಲ್ಲದ ಆರೋಪ ಮಾಡಲು ಹೊರಟಿದ್ದಾರೆ. ಹಾಗಾಗಿ ಮುಖಂಡರಿಗೆ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಶಾಂತಿಯುತ ಪ್ರತಿಭಟನೆ ಅಗಿದ್ದು, ಕೆಲ ಕಿಡಿಗೇಡಿಗಳು ಕಲ್ಲೊಡೆಯುವ ಕೆಲಸ ಮಾಡುತ್ತಾರೆ. ಹಾಗಾಗಿ ಸ್ವಲ್ಪ ಹುಷಾರಾಗಿ ಪ್ರತಿಭಟನೆ ಮಾಡಿ ಅಂತ ಹೇಳಿದ್ದೇನೆ. ನಮ್ಮದು ಗಾಂಧಿ ತತ್ವ, ಈ ದೇಶಕ್ಕೆ ಒಂದು ಸಂದೇಶ ಕೊಡಬೇಕು. ಎಐಸಿಸಿಗೆ ಪ್ರತಿಭಟನೆ ಬಗ್ಗೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಕೊಡಬೇಕು, ಹಾಗಾಗಿ ಭೇಟಿ ಮಾಡಿದ್ದೆ ಎಂದರು.

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಬಗ್ಗೆ ಪ್ರತಿಕ್ರಿಯಿಸಿ, ಗೇಟ್ ಚೆನ್ನಾಗಿ ಅಳವಡಿಕೆ ಮಾಡಿದ್ದಾರೆ. ಬಿಜೆಪಿಯವರಿಗೆ ಇದು ಉತ್ತರವಾಗಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಕಾರಜೋಳ, ಅಶೋಕ್, ಕುಮಾರಸ್ವಾಮಿ ಏನು ಮಾತಾಡಿದರೋ ಗೊತ್ತಿದೆ ಎಂದರು.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂತಿದೆ. ಸಿದ್ದರಾಮಯ್ಯಗೆ ಕರೆ ಮಾಡಿ, ನಾವು ನಿಮ್ಮ ಜೊತೆಗಿದ್ದೇವೆ. ಕಾನೂನಿನ ಹೋರಾಟ ಮುಂದುವರಿಸಿ ಎಂದು ಹೈಕಮಾಂಡ್ ಧೈರ್ಯ ತುಂಬಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆ ಮೇರೆಗೆ ಕರೆ ಕೇಂದ್ರದ ನಾಯಕರು ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮವಿಶ್ವಾಸದಿಂದ ಕಾನೂನು ಹೋರಾಟಕ್ಕೆ ಸಿಎಂ ಸಜ್ಜಾಗಿದ್ದಾರೆ.

Continue Reading

ಬೆಳಗಾವಿ

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಯೋಧರೊಬ್ಬರಿಗೆ ಅವರ ಹೃದಯವೇ (Heart Attack) ಯಮಪಾಶವಾಗಿತ್ತು. ಬೆಳಗಾವಿಯಲ್ಲಿ ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸಾವಿನ ಕೊನೆ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

By

Heart attack
Koo

ಬೆಳಗಾವಿ: ಯಾವುದೇ ಸೂಚನೆಯನ್ನು ನೀಡದೆ ಬರುವ ಜವರಾಯನ ಅಟ್ಟಹಾಸಕ್ಕೆ ಮಧ್ಯಮ ವಯಸ್ಸಿನವರ ಪ್ರಾಣಪಕ್ಷಿ ಹಾರಿಹೋಗುತ್ತಿದೆ. ಬದುಕು ಹೇಗೆಲ್ಲ ಅಂತ್ಯವಾಗುತ್ತೆ ಎಂಬುದನ್ನು ಅಂದಾಜಿಸಲೂ ಸಾಧ್ಯವಿಲ್ಲ. ಹೃದಯವು ಯಾವ ಕ್ಷಣದಲ್ಲಿ ಕೈಕೊಡುತ್ತೆ ಎಂಬುದು ಊಹಿಸಲು ಆಗುತ್ತಿಲ್ಲ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ನಿರ್ನಾಮ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ (Heart Attack) ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದೀಗ ಬೆಳಗಾವಿಯಲ್ಲಿ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಯೋಧ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್‌ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ ರಸ್ತೆ ಬದಿಗೆ ಕುಸಿದು ಬಿದ್ದಿದ್ದರು. ಸಾವಿನ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್‌ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದಿಢೀರ್‌ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Heart attack
Heart attack

ಇದನ್ನೂ ಓದಿ: Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೈಕ್‌ ಚಲಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನು ಸವರಿಸಿಕೊಳ್ಳುತ್ತಲೇ ಬ್ರೇಕ್‌ ಹಿಡಿದು ಬೈಕ್‌ ನಿಧಾನ ಮಾಡಿದ್ದಾರೆ. ಆದರೆ ನಡುರಸ್ತೆಯಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸುನೀಲ್‌ ಅವರು ಬೈಕ್‌ನಿಂದ ರಸ್ತೆ ಬದಿಗೆ ಬೀಳುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಸುನೀಲ್‌ ಮೃತದೇಹವನ್ನು ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಗೆ ರವಾನಿಸಿದ್ದು, ಸಕಲ ಸರ್ಕಾರಿ ಗೌರವಗೊಂದಿಗೆ ಯೋಧನ ಅಂತ್ಯಕ್ರಿಯೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kangana Ranaut Says She REJECTED Films with Ranbir Kapoor
ಬಾಲಿವುಡ್13 mins ago

Kangana Ranaut: ಖಾನ್‌ಗಳ ಸಿನಿಮಾ ಆಫರ್‌ ಎಂದಿಗೂ ಒಪ್ಪಲ್ಲ ಎಂದ ಕಂಗನಾ

Actor Mohanlal hospitalised due to breathing issues
ಮಾಲಿವುಡ್23 mins ago

Actor Mohanlal: ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು 

Lightning Strike
ದೇಶ28 mins ago

Lightning Strike: ಮಿಂಚು ಹೊಡೆದು 9 ಸಾವು; 12 ಮಂದಿಗೆ ಗಾಯ

ಕರ್ನಾಟಕ31 mins ago

Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ

Vinesh Phogat
ಕ್ರೀಡೆ39 mins ago

Vinesh Phogat: ಸನ್ಮಾನ ಸಮಾರಂಭದಲ್ಲಿ ದಿಢೀರ್​ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

ಪ್ರಮುಖ ಸುದ್ದಿ2 hours ago

Doctor Assaulted : ಸುರಕ್ಷತೆಗಾಗಿ ವೈದ್ಯರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ವೈದ್ಯೆಯ ಮೇಲೆ ಹಲ್ಲೆ!

Physical Abuse
ಕರ್ನಾಟಕ2 hours ago

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Road Accident
ದೇಶ2 hours ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ2 hours ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Physical Abuse
ಪ್ರಮುಖ ಸುದ್ದಿ2 hours ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌