Site icon Vistara News

Karnataka Election: ಹೊಳಲ್ಕೆರೆ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ ಮಾಜಿ ಸಚಿವ ಎಚ್. ಆಂಜನೇಯ

ಎಚ್‌.ವೆಂಕಟೇಶ್‌ ಅವರಿಗೆ ಗ್ರಾಮಸ್ಥರಿಂದ ಸ್ವಾಗತ

ಹೊಳಲ್ಕೆರೆ: ಬಿಡುವಿಲ್ಲದೆ ಚುನಾವಣಾ (Karnataka Election) ಪ್ರಚಾರ ಮಾಡುತ್ತಿರುವ ಮಾಜಿ ಸಚಿವ ಎಚ್. ಆಂಜನೇಯ ಅವರು ಗುರುವಾರ ಎಚ್.ಡಿ. ಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ತೇಕಲವಟ್ಟಿ, ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಗ್ರಾಮಸ್ಥರು, ಕಾರ್ಯಕರ್ತರು ಜೆಸಿಬಿ ಮೂಲಕ ಬೃಹತ್ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ, ಶಾಲು ಹೊದಿಸಿ, ಪೇಟ ತೊಡಿಸಿ ಹೂಮಳೆ ಸುರಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು.

ನಂತರ ಮಾಜಿ ಸಚಿವ ಆಂಜನೇಯ ಅವರು ಕಾಂಗ್ರೆಸ್ ನೀಡಿರುವ ಆಶ್ವಾಸನೆ ಬಗ್ಗೆ ಜನರಿಗೆ ಮಾಹಿತಿ ನೀಡಿ, ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮತಯಾಚನೆ ಮಾಡಿದರು.

ಇದನ್ನೂ ಓದಿ: Karnataka Election: ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿರುವ ಬಿಜೆಪಿಯನ್ನು ಸೋಲಿಸಿ: ಸಮಾನ ಮನಸ್ಕರ ಒಕ್ಕೂಟ

ಈ ವೇಳೆ ಮಾಜಿ ಶಾಸಕ ಎ.ವಿ. ಉಮಾಪತಿ ಮಾಜಿ ಜಿ.ಪಂ. ಅಧ್ಯಕ್ಷ ಪಿ.ಆರ್. ಶಿವಕುಮಾರ್ ಶಿವಪುರ, ಮಾಜಿ ಜಿ.ಪಂ. ಸದಸ್ಯ ಡಿ.ಕೆ. ಶಿವಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.

Exit mobile version