karnataka-election: Helicopter in which HD Devegowda travelling takes emergency landing Karnataka Election : ಡಿಕೆ ಶಿವಕುಮಾರ್‌ ಬಳಿಕ ದೇವೇಗೌಡರಿಗೆ ಹೆಲಿಕಾಪ್ಟರ್‌ ಕಿರಿಕಿರಿ, ತುರ್ತು ಭೂಸ್ಪರ್ಶ Vistara News
Connect with us

ಕರ್ನಾಟಕ

Karnataka Election : ಡಿಕೆ ಶಿವಕುಮಾರ್‌ ಬಳಿಕ ದೇವೇಗೌಡರಿಗೆ ಹೆಲಿಕಾಪ್ಟರ್‌ ಕಿರಿಕಿರಿ, ತುರ್ತು ಭೂಸ್ಪರ್ಶ

HD Devegowda helicopter: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡಿದೆ. ಕಾರಣವೇನಿತ್ತು?

VISTARANEWS.COM


on

former prime minister HD Devegowda to participate in new parliament inauguration
Koo

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ವಿಧಾನಸಭಾ ಚುನಾವಣಾ (Karnataka Election 2023) ಪ್ರಚಾರಕ್ಕಾಗಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ ಹೊನ್ನಾವರದ ರಾಮತೀರ್ಥ ಗುಡ್ಡದ ಹೆಲಿಪ್ಯಾಡ್‌ನಲ್ಲಿ ಇಳಿಯುತ್ತಿದ್ದಾಗಲೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಿಗೇ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು (HD Devegowda) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅದು ತುರ್ತು ಭೂಸ್ಪರ್ಶ ಮಾಡಿದೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಾಜಿ ಪ್ರಧಾನಿ ದೇವೇಗೌಡರು ಗುರುವಾರ ಹಾಸನ ಜಿಲ್ಲೆಯಲ್ಲಿ ಬಿರುಸಿನ ಸಂಚಾರ ನಡೆಸಿದರು. ಒಂದು ದಿನದಲ್ಲೇ ಎಲ್ಲ ಕ್ಷೇತ್ರಗಳನ್ನು ಸುತ್ತುವ ತರಾತುರಿಯಲ್ಲಿ ಅವರು ಹೆಲಿಕಾಪ್ಟರ್‌ನಲ್ಲಿ ಓಡಾಡಿದರು.

ಈ ನಡುವೆ, ಸಕಲೇಶಪುರದಿಂದ ಅರಕಲಗೂಡಿಗೆ ಹೋಗುತ್ತಿದ್ದಾಗ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅದನ್ನು ಕೂಡಲೇ ಇಳಿಸಲಾಯಿತು.

ಸಕಲೇಶಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿದ ಬಳಿಕ ಎಚ್.ಡಿ.ದೇವೇಗೌಡರು ಹಾಗೂ ಸಿ.ಎಂ.ಇಬ್ರಾಹಿಂ ಹೆಲಿಕಾಪ್ಟರ್‌ನಲ್ಲಿ ಅರಕಲಗೂಡಿಗೆ ಹೊರಟಿದ್ದರು. ಹೆಲಿಪ್ಯಾಡ್‌ನಿಂದ ಮೇಲೇರುತ್ತಿದ್ದಂತೆಯೇ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಕೂಡಲೇ ಪೈಲಟ್‌ ಹೆಲಿಕಾಪ್ಟರನ್ನು ಕೆಳಗೆ ಇಳಿಸಿದರು.

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣ ತಾಲೂಕು ಕ್ರೀಡಾಂಗಣದಿಂದ ಹೊರಟಿದ್ದ ಹೆಲಿಕಾಪ್ಟರನ್ನು ಮತ್ತೆ ಅದೇ ಹೆಲಿಪ್ಯಾಡ್‌ ಕಡೆಗೆ ತಂದು ಸ್ವಲ್ಪ ದೂರದಲ್ಲಿ ನಿಲ್ಲಿಸಲಾಯಿತು. ಬಳಿಕ ತಾಂತ್ರಿಕ ಸಮಸ್ಯೆಯನ್ನು ಪರಿಶೀಲಿಸಿ ಸರಿಪಡಿಸಿದ ಬಳಿಕ ಮರಳಿ ಹೊರಡಿಸಲಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಸಿ.ಎಂ.ಇಬ್ರಾಹಿಂ ಅವರನ್ನು ಹೊತ್ತು ಹೆಲಿಕಾಪ್ಟರ್ ಮತ್ತೆ ಅರಕಲಗೂಡಿಗೆ ತೆರಳಿತು.

ಹೊನ್ನಾವರದ ರಾಮತೀರ್ಥ ಗುಡ್ಡದಲ್ಲಿ ಏನಾಯಿತು?‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಮಧ್ಯಾಹ್ನ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕನ್ನಡಕ್ಕೆ ಆಗಮಿಸಿದ್ದರು. ಕುಮಟಾ-ಅಂಕೋಲ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿರುವ ನಿವೇದಿತ್‌ ಆಳ್ವ ಅವರ ಪರವಾಗಿ ಅವರು ಪ್ರಚಾರ ನಡೆಸುವವರಿದ್ದರು. ಈ ನಡುವೆ, ಅವರ ಹೆಲಿಕಾಪ್ಟರ್‌ ಇಳಿದ ಹೊನ್ನಾವರ ರಾಮತೀರ್ಥ ಗುಡ್ಡದಲ್ಲಿ ಬೆಂಕಿ ಅನಾಹುತ ನಡೆಯಿತು

ಹೆಲಿಕಾಪ್ಟರ್ ಸಿಗ್ನಲ್‌ಗಾಗಿ ಹಾಕಿದ್ದ ಸ್ಮೋಕ್ ಕ್ಯಾಂಡಲ್‌ನಿಂದ ಕಿಡಿ ಹಾರಿ ಒಣಗಿದ್ದ ಹುಲ್ಲಿಗೆ ಬೆಂಕಿ ಹಿಡಿಯಿತು. ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಸ್ವಲ್ಪ ದೂರದಲ್ಲೇ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಸ್ಥಳದಲ್ಲೇ ಇದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯತ್ರಿಸಿದರು.

ಡಿಕೆ ಶಿವಕುಮಾರ್‌ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಮಾಡುತ್ತಿದ್ದಾಗ ಕಾಣಿಸಿದ ಬೆಂಕಿಯನ್ನು ನಂದಿಸುತ್ತಿರುವುದು

ಹೊನ್ನಾವರದ ಸೇಂಟ್ ಥಾಮಸ್ ಶಾಲಾ ಆವರಣದಲ್ಲಿ ನಡೆಯಲಿರುವ ಪ್ರಚಾರ ಸಭೆಗಾಗಿ ಶಿವಕುಮಾರ್‌ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.

ಎರಡು ದಿನಗಳ ಹಿಂದೆ ರಣಹದ್ದು ಬಡಿದಿತ್ತು

ಎರಡು ದಿನಗಳ ಹಿಂದೆ ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುತ್ತಿದ್ದ ಹೆಲಿಕಾಪ್ಟರ್‌ಗೆ ಮಾರ್ಗ ಮಧ್ಯೆ ರಣಹದ್ದೊಂದು ಬಡಿದು ವಿಂಡ್‌ ಶೀಲ್ಡ್‌ ಒಡೆದೇ ಹೋಗಿತ್ತು. ಪೈಲಟ್‌ ತಕ್ಷಣವೇ ಸಮಯಪ್ರಜ್ಞೆಯಿಂದ ಕೆಲಸ ನಿರ್ವಹಿಸಿ ಹೆಲಿಕಾಪ್ಟರನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದರು. ಇದರಿಂದ ಸಂಭಾವ್ಯ ದೊಡ್ಡ ಅವಘಡವೊಂದು ತಪ್ಪಿತ್ತು. ಅದಾದ ಬಳಿಕ ಅವರು ತುಮಕೂರಿನ ನೊಣವಿನಕೆರೆಯ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿದ್ದರು

ಇದನ್ನೂ ಓದಿ : Karnataka Election: ಅರಸೀಕೆರೆಯಲ್ಲಿ ಆ ವ್ಯಕ್ತಿಯ ಅಂತ್ಯ ಆಗಲೇಬೇಕು: ಶಿವಲಿಂಗೇಗೌಡ ವಿರುದ್ಧ ದೇವೇಗೌಡ ಕಿಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರ ಟೇಕಾಫ್‌ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.

VISTARANEWS.COM


on

Edited by

Siddaramaiah
Koo

ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್‌ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.

ಹೌದು, ಎಂ.ಸಿ.ಸುಧಾಕರ್‌ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್‌ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್‌.ಕೆ.ಪಾಟೀಲ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ

Karnataka Ministers List

ಮೂಲ-ವಲಸಿಗ ಜಗಳ

ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Edited by

Government employees with CM Siddaramaiah
Koo

ಬೆಂಗಳೂರು: ಶೇ.4 ತುಟ್ಟಿಭತ್ಯೆ (DA Hike) ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿ ಆರ್ಥಿಕ ಇಲಾಖೆಗೆ ರವಾನಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ವಿವಿಧ ಪದಾಧಿಕಾರಿಗಳು, ನಗರದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | 7th Pay Commission : ವೇತನ ಆಯೋಗದ ಮಹತ್ವದ ಸಭೆ; ನೌಕರರ ಬೇಡಿಕೆ ಮಂಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ

ಇದೇ ವೇಳೆ ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಆರ್ಥಿಕ ಇಲಾಖೆಯಿಂದ ಸೋಮವಾರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗೆಯೇ ರಾಜ್ಯದ ಶಿಕ್ಷಕರ ಜ್ವಲಂತ ಸಮಸ್ಯೆಗಳಾದ ವರ್ಗಾವಣೆ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡ ಪದಾಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.

Continue Reading

ಕರ್ನಾಟಕ

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

VISTARANEWS.COM


on

Edited by

MLA N Ravikumar
Koo

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ನವದೆಹಲಿಯಲ್ಲಿ ನೂತನ ಸಂಸತ್ ಭವನವನ್ನು ಕೇಂದ್ರ ಸರ್ಕಾರವು ಉದ್ಘಾಟನೆ (New Parliament Building) ಮಾಡುತ್ತಿದೆ. ಆದರೆ, ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ ಅವರ ಜನ್ಮದಿನದಂದು ನೂತನ ಸಂಸತ್ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಹಲವು ನಾಯಕರು ಸಂಸತ್ತಿನಲ್ಲಿ ಕುಳಿತು ದೇಶವನ್ನು ಮುನ್ನಡೆಸಬೇಕಿತ್ತು, ವಿಪರ್ಯಾಸವೆಂದರೆ ನೆಹರು ಕುಟುಂಬಸ್ಥರು ಇಡೀ ದೇಶವನ್ನೇ ತಮ್ಮ ಕುಟುಂಬದ ಸುಪರ್ದಿಗೆ ನೀಡುವ ಮೂಲಕ ಸಂಸತ್ತನ್ನು ತಮ್ಮ ಕುಟುಂಬಕ್ಕೆ ಸೀಮಿತ ಮಾಡಿಬಿಟ್ಟರು ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯ ಬಗ್ಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಕಾಂಗ್ರೆಸ್, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಈ ಹಿಂದೆ 1987ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸತ್ತಿನ ನೂತನ ಗ್ರಂಥಾಲಯ ಉದ್ಘಾಟನೆಯನ್ನು ಅವರೇ ಮಾಡಿದ್ದರು, ಅಂದಿನ ರಾಷ್ಟ್ರಪತಿಗಳಿಗೆ ಕೂಡ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್‌ ಭವನ

ಇನ್ನು 2010ರಲ್ಲಿ ಸೋನಿಯಾ ಗಾಂಧಿ ಅವರು ‘ಅಟಲ್ ಟನೆಲ್’ಗೆ ಭೂಮಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರದ ಯೋಜನೆಯೊಂದಕ್ಕೆ ಭೂಮಿ ಪೂಜೆ ಮಾಡಲು ಸೋನಿಯಾ ಗಾಂಧಿ ಯಾಕೆ ಬರಬೇಕಿತ್ತು? 2009ರಲ್ಲಿ ಮುಂಬೈ ನಗರದ ‘ಬಾಂದ್ರಾ ಮತ್ತು ವರ್ಲಿ’ ಸೀ ಲಿಂಕ್ ಉದ್ಘಾಟನೆಯನ್ನು ಸೋನಿಯಾ ಗಾಂಧಿ ಅವರು ಮಾಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಅಷ್ಟೂ ಯೋಜನೆಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರನ್ನೇ ಬಳಸಿಕೊಂಡಿರುವ ನೆಹರು ಕುಟುಂಬದ ಕುಡಿಗಳು ಈಗ ಸೆಂಟ್ರಲ್ ವಿಸ್ಟಾ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ ಪಕ್ಕದ ರಾಜ್ಯವಾದ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಲ್ಲಿ ನೂತನ ಸಚಿವಾಲಯ ಉದ್ಘಾಟನೆಗೆ ತೆಲಂಗಾಣದ ‘ರಾಜ್ಯಪಾಲ’ರನ್ನೂ ಆಹ್ವಾನಿಸಿರಲಿಲ್ಲ, ಆದರೆ ಈಗ ಸೆಂಟ್ರಲ್ ವಿಸ್ಟಾ ಉದ್ಘಾಟನೆಗೆ ರಾಷ್ಟ್ರಪತಿಗಳು ಬರದಿರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸಿದ ಸಂದರ್ಭದಲ್ಲಿ ಮೊದಲ ಪ್ರಧಾನಮಂತ್ರಿಯಾಗಿದ್ದ ನೆಹರು ಅವರಿಗೆ ನೀಡಿದ್ದ ತಮಿಳುನಾಡಿನ ‘ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಸ್ಪೀಕರ್ ಕುರ್ಚಿ ಬಳಿ ಇಡುತ್ತಿರುವುದು ಮತ್ತೊಂದು ವಿಶೇಷ. ಬ್ರಿಟಿಷರಿಂದ ಅಧಿಕಾರ ಹಸ್ತಾಂತರವಾಗಿದ್ದರೂ ಅವರು ಕಟ್ಟಿಸಿದ್ದ ಸಂಸತ್ತಿನಿಂದ ನಾವು ಹೊರಬಂದಿರಲಿಲ್ಲ. ಬ್ರಿಟಿಷರ ಮನಸ್ಥಿತಿಯನ್ನೇ ತೋರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯರೇ ನಿರ್ಮಾಣ ಮಾಡಿರುವ ನೂತನ ಸಂಸತ್ ಕಟ್ಟಡ ಇಷ್ಟವಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ | New Parliament Building: ಸೆಂಗೋಲ್‌ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ

ನೂತನ ಸಂಸತ್ ಭವನದ ಉದ್ಘಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಇಲ್ಲಸಲ್ಲದ ನೆಪವೊಡ್ಡಿ ಸೆಂಟ್ರಲ್ ವಿಸ್ಟಾ ಉದ್ಘಾಟನೆಯ ಕಾರ್ಯಕ್ರಮವನ್ನು ಕೆಲ ವಿರೋಧ ಪಕ್ಷಗಳು ಬಹಿಷ್ಕರಿಸುವುದಾಗಿ ಹೇಳಿರುವುದು ಸರಿಯಲ್ಲ. ಸಂಸತ್ ಭವನ ಕೇವಲ ಕಟ್ಟಡವಲ್ಲಿ ಅದು ದೇಶದ ಪ್ರಜಾಪ್ರಭುತ್ವ ಎಂಬುದನ್ನು ವಿರೋಧಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.‌

Continue Reading

ಕರ್ನಾಟಕ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

ಮುದ್ರಣ ಹಾಗೂ ಡಿಜಿಟಲ್‌- ಟಿವಿ ಇವೆರಡರ ಹಿತವಾದ ಸಮ್ಮಿಶ್ರಣ ಮಾಡಿ ಓದುಗ- ನೋಡುಗರಿಗೆ ನೀಡಬೇಕು ಎಂಬ ಆಶಯದಿಂದ ನಾವು ಕಥಾಸ್ಪರ್ಧೆಯನ್ನು ನಡೆಸಿದ್ದೇವೆ ಎಂದು ಹರಿಪ್ರಕಾಶ್‌ ಕೋಣೆಮನೆ ಹೇಳಿದ್ದಾರೆ.

VISTARANEWS.COM


on

Edited by

vistara kathaspardhe prize distribution1
Koo

ಬೆಂಗಳೂರು: ಕನ್ನಡ ಸಾರಸ್ವತ ಲೋಕವನ್ನು ಒಳಗೊಳ್ಳುವ ಯತ್ನ, ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ ವಿಸ್ತಾರ ನ್ಯೂಸ್ ಟಿವಿ ಮಾಧ್ಯಮದಿಂದ ಆಗುತ್ತಿರುವುದು ಸ್ತುತ್ಯರ್ಹ ಎಂದು ಖ್ಯಾತ ಕತೆಗಾರ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಹೇಳಿದರು.

ದಾಖಲೆ ಮೊತ್ತದ ʼವಿಸ್ತಾರ ನ್ಯೂಸ್‌ ಯುಗಾದಿ ಕಥಾಸ್ಪರ್ಧೆ-2023’ರ ಬಹುಮಾನ ವಿಜೇತರನ್ನು ಘೋಷಿಸಿದ ಬಳಿಕ ಅವರು ಮಾತನಾಡಿದರು. ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಹೋಟೆಲ್‌ ಮ್ಯಾಸ್ಟಿಫ್‌ನಲ್ಲಿ ಸಮಾರಂಭ ನೆರವೇರಿತು. ಮೊದಲ ಬಹುಮಾನವನ್ನು ಚಂದ್ರಶೇಖರ ಡಿ.ಆರ್.‌, ಎರಡನೇ ಬಹುಮಾನವನ್ನು ದಾದಾಪೀರ್‌ ಜೈಮನ್‌, ಮೂರನೇ ಬಹುಮಾನವನ್ನು ಪೂರ್ಣಿಮಾ ಮಾಳಗಿಮನಿ ತಮ್ಮದಾಗಿಸಿಕೊಂಡರು.

ಕಥೆಗಳಿಗೆ ದೃಶ್ಯ ಮಾಧ್ಯಮ ಸದಾ ಉಪಕೃತವಾಗಿರುತ್ತದೆ. ಕಥೆಗಳೇ ಮನರಂಜನೆಯ ಜೀವಾಳ. ಕಥೆ ಹಾಗೂ ಟಿವಿ ಮಾಧ್ಯಮ ಎರಡರ ವ್ಯಾಕರಣವೂ ಭಿನ್ನ. ದೃಶ್ಯ ಮಾಧ್ಯಮ ಅಬ್ಬರದಿಂದ ಹೇಳುವುದನ್ನು ಕಥೆ ಸೌಮ್ಯವಾಗಿ, ಪಿಸುಮಾತಿನಲ್ಲಿ, ದೃಶ್ಯ ಮಾಧ್ಯಮದ ತೋರಿಕೆಯ ನಡುವೆ ಕಥೆ ಸಂಕೋಚ ಹಾಗೂ ಧ್ಯಾನದಲ್ಲಿ ಹೇಳುತ್ತದೆ. ದೃಶ್ಯ ಮಾಧ್ಯಮ ಪ್ರಕಟಿಸಿದರೆ ಸಾಹಿತ್ಯ ಏಕಾಂತದಲ್ಲಿ ಅರಳುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಪ್ರೇಕ್ಷಕನನ್ನು ಓದುಗನನ್ನಾಗಿಸಿ, ಓದುಗನನ್ನು ಪ್ರೇಕ್ಷಕನನ್ನಾಗಿಸುವ ಕಠಿಣ ಕಾಯಕದ ಸುವರ್ಣ ಸೇತುವೆಯಾಗಿ ವಿಸ್ತಾರ ನ್ಯೂಸ್‌ ಕೆಲಸ ಮಾಡುತ್ತಿದೆ. ಸಾರಸ್ವತ ಲೋಕವನ್ನು ಟಿವಿ ಮಾಧ್ಯಮದಲ್ಲಿ ಒಳಗೊಳ್ಳುವ ಈ ಯತ್ನ ಸಫಲವಾಗಲಿ ಎಂದು ನಾಗತಿಹಳ್ಳಿ ಹಾರೈಸಿದರು.

vistara kathaspardhe prize distribution
ವಿಸ್ತಾರ ಕಥಾಸ್ಪರ್ಧೆಯ ಟಾಪ್‌ 25 ಕಥೆಗಾರರು ಮತ್ತು ಅತಿಥಿಗಳು

ವಿಸ್ತಾರ ನ್ಯೂಸ್‌ ಟಿವಿ ವಾಹಿನಿಯ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಕಥಾಸ್ಪರ್ಧೆಯ ಆಶಯವನ್ನು ವಿವರಿಸಿದರು. ಸಾಹಿತ್ಯ, ಸಂಸ್ಕೃತಿ ಇವುಗಳಿಗೆ ಆಧುನಿಕ ಮಾಧ್ಯಮದಲ್ಲಿ ಮನ್ನಣೆ ದೊರೆಯುತ್ತಿಲ್ಲ ಎಂದು ಕೂಗು ಕೇಳಿಬರುತ್ತಿರುವುದರ ನಡುವೆಯೇ ನಾವು ಅವುಗಳಿಗೆ ಪ್ರಾಧಾನ್ಯ ನೀಡುವ, ಹಲವು ಅಭಿಪ್ರಾಯಗಳಿಗೆ ಧ್ವನಿಯಾಗುವ ಕಾಯಕವನ್ನು ಮಾಡುತ್ತಿದ್ದೇವೆ. ಮುದ್ರಣ ಹಾಗೂ ಡಿಜಿಟಲ್‌- ಟಿವಿ ಇವೆರಡರ ಹಿತವಾದ ಸಮ್ಮಿಶ್ರಣ ಮಾಡಿ ಓದುಗ- ನೋಡುಗರಿಗೆ ನೀಡಬೇಕು ಎಂಬ ಆಶಯದಿಂದ ನಾವು ಕಥಾಸ್ಪರ್ಧೆಯನ್ನು ನಡೆಸಿದ್ದೇವೆ. ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾದ ಕಥಾಸ್ಪರ್ಧೆಯ ಫಲಿತಾಂಶವು ಹಲವು ತಿಂಗಳ ಪರಿಶ್ರಮದ ಫಲವಾಗಿದೆ ಎಂದು ಅವರು ವಿವರಿಸಿದರು.

ಕಥೆ ಬರೆಯುವುದಕ್ಕಿಂತಲೂ ದೊಡ್ಡ ಸಮುದಾಯಕ್ಕೆ ಕತೆ ಹೇಳುವುದನ್ನು ಹೆಚ್ಚು ಇಷ್ಟಪಡುತ್ತೇನೆ. ಕಥೆಗಾರನಾಗುವುದರ ಜತೆಗೆ ಉತ್ತಮ ಮನುಷ್ಯನಾಗಿರಲೂ ಪ್ರಯತ್ನಿಸುತ್ತಿದ್ದೇನೆ ಎಂದು ಪ್ರಥಮ ಬಹುಮಾನಿತ ಕಥೆಗಾರ ಚಂದ್ರಶೇಖರ ಡಿ.ಆರ್‌ ನುಡಿದರು. ಕಥೆಗಳನ್ನು ಹಂಚಿಕೊಳ್ಳುವ ಮೂಲಕ ನಾವು ಇನ್ನಷ್ಟು ಕ್ರಿಯಾಶೀಲವಾಗುತ್ತೇವೆ. ಈ ಕ್ರಿಯಾಶೀಲತೆಗೆ ವಿಸ್ತಾರ ಸ್ಪರ್ಧೆ ಮತ್ತಷ್ಟು ಹುರುಪು ತುಂಬಿದೆ ಎಂದು ದ್ವಿತೀಯ ಬಹುಮಾನಿತ ದಾದಾಪೀರ್‌ ಜೈಮನ್‌ ನುಡಿದರು. ವಿಸ್ತಾರ ಸ್ಪರ್ಧೆಗೆ ಬಂದ ಸಾವಿರ ಕಥೆಗಳು ಸಾವಿರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅಷ್ಟು ವೈವಿಧ್ಯಮಯವಾದ ಕಥಾಲೋಕ ಕನ್ನಡದಲ್ಲಿದೆ ಎಂದು ತೃತೀಯ ಬಹುಮಾನಿತ ಕಥೆಗಾರ್ತಿ ಪೂರ್ಣಿಮಾ ಮಾಳಗಿಮನಿ ನುಡಿದರು.

ಹೊಸ ಕತೆಗಾರರನ್ನು ಗುರುತಿಸುವಲ್ಲಿ ಕನ್ನಡ ಸಾಹಿತ್ಯಲೋಕ ಹಿಂದೆ ಬಿದ್ದಿಲ್ಲ. ಉತ್ತಮ ಸಾಹಿತ್ಯ ಪ್ರಕಟಿಸುವಾಗ ನಾವು ಹಣ ಖರ್ಚಾಗುತ್ತದೆಂದು ಹಿಂದುಳಿದಿಲ್ಲ. ಯುವ ಸಾಹಿತಿಗಳು ಬೆಳೆಯಬೇಕು ಎಂಬುದು ನಮ್ಮ ಆಶಯ ಎಂದು ಬಹುಮಾನ ಆಯೋಜಕರಲ್ಲಿ ಒಬ್ಬರಾದ ಶ್ರೀ ಸಿದ್ದಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನದ ಮಾಲಿಕ ಬಸವರಾಜ ಕೊನೇಕ ಹೇಳಿದರು. ಬಹುಮಾನ ಪ್ರಾಯೋಜಕರುಗಳಾದ ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಡಾ. ಎಂ. ಆರ್‌ ವೆಂಕಟೇಶ್‌, ವಿ2 ಹೋಲ್ಡಿಂಗ್ಸ್‌ ಹೌಸಿಂಗ್‌ ಡೆವಲಪ್‌ಮೆಂಟ್‌ ಪ್ರೈ. ಲಿ. ಎಂ.ಡಿ ಡಾ.ಪಿ.ಎಲ್‌ ವೆಂಕಟರಾಮ ರೆಡ್ಡಿ ಸ್ಪರ್ಧೆಯ ಯಶಸ್ಸಿಗೆ ಶುಭ ಹಾರೈಸಿದರು.

vistara kathaspardhe prize distribution
ದಾದಾಪೀರ್‌ ಜೈಮನ್‌ ಚಂದ್ರಶೇಖರ ಡಿಆರ್‌ ಪೂರ್ಣಿಮಾ ಮಾಳಗಿಮನಿ

ಮೊದಲ ಬಹುಮಾನದ ಮೊತ್ತ ರೂ. 55,000, ಎರಡನೇ ಬಹುಮಾನ ರೂ. 25,000 ರೂ., ಮೂರನೇ ಬಹುಮಾನ 10,000 ರೂ. ಹಾಗೂ ತಲಾ 2,000 ರೂ. ಮೊತ್ತದ ಮೆಚ್ಚುಗೆ ಬಹುಮಾನಗಳನ್ನು 5 ಮಂದಿಗೆ ವಿತರಿಸಲಾಯಿತು. ಕವಿ, ವಿಮರ್ಶಕಿ ಲಲಿತಾ ಸಿದ್ದಬಸವಯ್ಯ, ಕಾದಂಬರಿಕಾರ ಹಾಗೂ ವಿಮರ್ಶಕ ಬಿ. ಜನಾರ್ದನ ಭಟ್‌ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ್ದರು. ಟಾಪ್‌ 25 ಪಟ್ಟಿಗೆ ಆಯ್ಕೆಯಾದ ಕತೆಗಾರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಆಡಳಿತ ನಿರ್ದೇಶಕ ಹಾಗೂ ಚೇರ್‌ಮನ್‌ ಎಚ್‌.ವಿ. ಧರ್ಮೇಶ್‌, ವಿಸ್ತಾರ ಟಿವಿಯ ಎಕ್ಸಿಕ್ಯೂಟಿವ್‌ ಎಡಿಟರ್‌ ಶರತ್‌ ಎಂ.ಎಸ್‌, ವಿಸ್ತಾರ ನ್ಯೂಸ್‌ನ ನಿರ್ದೇಶಕ (ಬ್ಯುಸಿನೆಸ್‌) ವಿನಯ್‌ ಶೇಷಗಿರಿ, ಸಿಒಒ ಪರಶುರಾಮ್‌, ವಿಸ್ತಾರ ನ್ಯೂಸ್‌ ಡಿಜಿಟಲ್‌ ವಿಭಾಗದ ಸಂಪಾದಕ ರಮೇಶ್‌ ಕುಮಾರ್‌ ನಾಯಕ್‌, ಸ್ಪೆಷಲ್‌ ಆಪರೇಷನ್ ಎಡಿಟರ್‌ ಕಿರಣ್‌ ಕುಮಾರ್‌ ಡಿ.ಕೆ, ವಿಸ್ತಾರ ಮನರಂಜನಾ ವಾಹಿನಿ ಕಂಟೆಂಟ್‌ ಹೆಡ್‌ ಕುಸುಮಾ ಆಯರಹಳ್ಳಿ ಉಪಸ್ಥಿತರಿದ್ದರು.‌ ಎ.ಕೃಷ್ಣ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಕಥಾಸ್ಪರ್ಧೆ ಬಹುಮಾನಿತರು:

ಪ್ರಥಮ: ಸೋಮನ ಕುಣಿತ- ಚಂದ್ರಶೇಖರ ಡಿ.ಆರ್
ದ್ವಿತೀಯ: ಅಂತಃಕಾರಣದ ಟಿಪ್ಪಣಿಗಳು- ದಾದಾಪೀರ್‌ ಜೈಮನ್‌
ತೃತೀಯ: ಅದು ಅವರ ಪ್ರಾಬ್ಲಮ್- ಪೂರ್ಣಿಮಾ ಮಾಳಗಿಮನಿ

ಮೆಚ್ಚುಗೆ: ಹುಣಿಸೆ ಹೂವು- ದೀಪದ ಮಲ್ಲಿ
ಮೆಚ್ಚುಗೆ: ಪಿಂಕ್‌ ಟ್ರಂಪೆಟ್- ಚೈತ್ರಿಕಾ ಹೆಗಡೆ
ಮೆಚ್ಚುಗೆ: ಪರವೇಶ್ಮಸ್ಥನ ಫಿಕ್ಹ್‌ ಪ್ರಸಂಗ- ಬಿ.ಎಂ ಹನೀಫ್‌
ಮೆಚ್ಚುಗೆ: ಕಿತ್ತಳೆ ಚಿಟ್ಟೆ- ಮಂಜುನಾಯಕ್‌ ಚೆಳ್ಳೂರು
ಮೆಚ್ಚುಗೆ: ನೆಲೆ- ದೀಪಾ ಹಿರೇಗುತ್ತಿ

Continue Reading
Advertisement
Siddaramaiah
ಕರ್ನಾಟಕ11 mins ago

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Government employees with CM Siddaramaiah
ಕರ್ನಾಟಕ16 mins ago

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

MLA N Ravikumar
ಕರ್ನಾಟಕ17 mins ago

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

Nissan Magnite Geza Special Edition
ಆಟೋಮೊಬೈಲ್22 mins ago

Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ

vistara kathaspardhe prize distribution1
ಕರ್ನಾಟಕ34 mins ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

BCCI MEETING
ಕ್ರಿಕೆಟ್39 mins ago

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

Narendra Modi Speech At NITI Aayog Meeting
ದೇಶ51 mins ago

NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ

New parliament Building
ಪ್ರಮುಖ ಸುದ್ದಿ59 mins ago

ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ

person injured in bee attack
ಕರ್ನಾಟಕ1 hour ago

Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

UPSC aspirants in Adichunchanagiri mutt
ಕರ್ನಾಟಕ1 hour ago

Adichunchanagiri Mutt: ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಯುಪಿಎಸ್‌ಸಿ ಸಾಧಕರು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Laxmi Hebbalkar oath taking as a minister
ಕರ್ನಾಟಕ7 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ1 day ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ4 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!