Karnataka Election: ಅಡಕೆ ಬೆಳೆಯಬೇಡಿ ಎನ್ನುವ ನಿಮ್ಮ ಸಂಸ್ಕೃತಿ ಯಾವುದು?: ಆರಗ ಜ್ಞಾನೇಂದ್ರಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ Vistara News

ಕರ್ನಾಟಕ

Karnataka Election: ಅಡಕೆ ಬೆಳೆಯಬೇಡಿ ಎನ್ನುವ ನಿಮ್ಮ ಸಂಸ್ಕೃತಿ ಯಾವುದು?: ಆರಗ ಜ್ಞಾನೇಂದ್ರಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ

Karnataka Election:ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ .

VISTARANEWS.COM


on

D K Shivakumar Theerthahalli prajadhvani samavesha
ತೀರ್ಥಹಳ್ಳಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶವನ್ನು ಉದ್ಘಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ .
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತೀರ್ಥಹಳ್ಳಿ: ʼಆರಗ ಜ್ಞಾನೇಂದ್ರ ಅಡಕೆ ಬೆಳೆಯಬೇಡಿ ಎಂದು ಹೇಳುತ್ತೀರಾ? ನಮ್ಮಲ್ಲಿ ವೀಳ್ಯದೆಲೆ ಅಡಕೆ ಇಟ್ಟು ದೇವರಂತೆ ಕಾಣುತ್ತೇವೆ. ಇದು ನಮ್ಮ ಸಂಸ್ಕೃತಿ. ಇಂತಹ ಸಂಸ್ಕೃತಿಯ ಭಾಗವಾದ ಅಡಕೆಯನ್ನು ಬೇಡ ಎಂದು ಹೇಳುವ ನಿಮ್ಮ ಸಂಸ್ಕೃತಿ ಯಾವುದು?ʼ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಅವರು ತೀರ್ಥಹಳ್ಳಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿ, ʼಬೆಳಗಾವಿಯಲ್ಲಿ ಆರಂಭವಾದ ಪ್ರಜಾಧ್ವನಿ ಯಾತ್ರೆಯು ಜಿಲ್ಲಾ ಕೇಂದ್ರ ಪ್ರವಾಸ ಮುಗಿಸಿ ತಾಲೂಕು ಕೇಂದ್ರಗಳಿಗೆ ಬಂದಿದೆʼ ಎಂದರು.

‘ನಾನು ತೀರ್ಥಹಳ್ಳಿ ಜನರ ಮೇಲೆ ನಂಬಿಕೆ ಇಟ್ಟು ಇಲ್ಲಿಗೆ ಬಂದಿದ್ದೇನೆ. ಇದುವರೆಗೂ ಮಾಡಿರುವ ಸಭೆಗಳಲ್ಲಿ ಸೌಮ್ಯ, ತಾಳ್ಮೆ ಹಾಗೂ ಶಾಂತಿಯುತ ಸಭೆ ನೋಡಿರಲಿಲ್ಲ. ನಿಮ್ಮಲ್ಲಿ ಪ್ರಜ್ಞಾವಂತಿಕೆ ಎದ್ದು ಕಾಣುತ್ತಿದೆ’ ಎಂದು (Karnataka Election) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ʼನಾವು ಉತ್ತಮ ಆಡಳಿತ ನೀಡಿದ್ದರೂ ಜನ ನಮ್ಮನ್ನು ಬೆಂಬಲಿಸಲಿಲ್ಲ. ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡಲು ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿದೆವು. ನಾನು 40 ವರ್ಷ ಅವರ ಕುಟುಂಬದ ವಿರುದ್ಧ ರಾಜಕೀಯ ಹೋರಾಟ ಮಾಡಿಕೊಂಡು ಬಂದಿದ್ದರೂ, ಈ ರಾಜ್ಯಕ್ಕಾಗಿ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿ ಕೆಲಸ ಮಾಡಿದೆ. ಕುಮಾರಸ್ವಾಮಿ ಅವರು ಸರ್ಕಾರ ಉಳಿಸಿಕೊಳ್ಳಲಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿತು. ಅಧಿಕಾರಕ್ಕೆ ಬಂದ ನಂತರ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಚುನಾವಣೆಗೂ ಮುನ್ನ 600 ಭರವಸೆ ನೀಡಿದ್ದರು. 550 ಭರವಸೆಯನ್ನೂ ಈಡೇರಿಸಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ 165 ಭರವಸೆ ನೀಡಿ 159 ಅನ್ನು ಈಡೇರಿಸಿದೆʼ ಎಂದು ಹೇಳಿದರು.

ʼಮೋದಿ ಅವರು ಅಚ್ಛೇ ದಿನ್ ನೀಡುತ್ತೇವೆ ಎಂದರು. ಆದರೆ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದ್ರಾ? ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದರು, ಕಪ್ಪು ಹಣವನ್ನು ತಂದು ನಿಮ್ಮ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದರು. ಅವರು ಕೊಟ್ಟ ಮಾತಿನಂತೆ ಯಾವುದಾದರೂ ಕೆಲಸ ಮಾಡಿದ್ದಾರಾ?ʼ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: B.S. Yediyurappa: ರಾಜ್ಯದ ಧೀಮಂತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಕೊನೆಯ ಅಧಿವೇಶನ ಇದು: ಗೌರವದ ವಿದಾಯ ನೀಡುವುದೇ ವಿಧಾನ ಮಂಡಲ?

ʼಆರಗ ಜ್ಞಾನೇಂದ್ರ ಅವರು ಕಾರ್ಯಕರ್ತರ ಮೇಲೆ ಕೇಸು ಹಾಕಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿ ಒಎಂಆರ್ ಶೀಟ್ ತಿದ್ದಿ ಅಕ್ರಮ ಮಾಡಲಾಗಿದೆ. ಸದನದಲ್ಲಿ ಅಕ್ರಮವೇ ನಡೆದಿಲ್ಲ ಎಂದು ಸುಳ್ಳು ಹೇಳಿದರು. ತಪ್ಪು ನಡೆದಿಲ್ಲವಾದರೆ ಐಪಿಎಸ್ ಸೇರಿದಂತೆ ನೂರಕ್ಕೂ ಹೆಚ್ಚು ಜನ ಜೈಲು ಸೇರಿದ್ದು ಯಾಕೆ? ಯುವಕರ ಭವಿಷ್ಯದ ಜತೆ ಈ ಸರ್ಕಾರ ಚೆಲ್ಲಾಟವಾಡುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಹಾಕುವುದರ ಜತೆಗೆ ಇದಕ್ಕೆ ಕಾರಣರಾದ ಮಂತ್ರಿಗಳನ್ನು ಒಳಗೆ ಹಾಕಬೇಕು. ಈ ಸರ್ಕಾರದ ಅವಧಿ ಇನ್ನು 60 ದಿನ ಮಾತ್ರ. ಬಿಜೆಪಿಯವರು ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಜನ ಇವರನ್ನು ಮನೆಗೆ ಕಳಿಸುವ ಸಂಕಲ್ಪ ಮಾಡಿದ್ದಾರೆʼ ಎಂದು ಹೇಳಿದರು.

ʼಆರಗ ಜ್ಞಾನೇಂದ್ರ ಅಡಕೆ ಬೆಳೆಯಬೇಡಿ ಎಂದು ಹೇಳುತ್ತೀರಾ? ನಮ್ಮಲ್ಲಿ ವೀಳ್ಯದೆಲೆ ಅಡಕೆ ಇಟ್ಟು ದೇವರಂತೆ ಕಾಣುತ್ತೇವೆ. ಇದು ನಮ್ಮ ಸಂಸ್ಕೃತಿ. ಇಂತಹ ಸಂಸ್ಕೃತಿಯ ಭಾಗವಾದ ಅಡಕೆಯನ್ನು ಬೇಡ ಎಂದು ಹೇಳುವ ನಿಮ್ಮ ಸಂಸ್ಕೃತಿ ಯಾವುದು?ʼ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Pakistan Financial Crisis : ಪಾಕಿಸ್ತಾನದಲ್ಲಿ ಪೆಟ್ರೋಲ್ ಖಾಲಿ! ಪ್ರಮುಖ ನಗರಗಳ ಪೆಟ್ರೋಲ್‌ ಬಂಕ್‌ಗಳೂ ಬಂದ್‌!

ʼಶಿವಮೊಗ್ಗ ಅಭಿವೃದ್ಧಿ ಆಗಿದೆ ಎಂದು ಹೇಳುತ್ತಾರೆ. ಅಭಿವೃದ್ಧಿ ಆಗಿದ್ದರೆ, ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ ಕೋಟಿ ರೂ. ಬಂದಿದೆ ಎಂದರು. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಬಂಡವಾಳವೇ ಬಂದಿಲ್ಲ. ಈ ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಆದರೆ ಈ ಸರ್ಕಾರ ಮಲೆನಾಡು ಕರಾವಳಿ ಭಾಗದಲ್ಲಿ ಜಾತಿ, ಧರ್ಮಗಳ ನಡುವೆ ಜಗಳ ಸೃಷ್ಟಿಸಿ ರಾಜಕಾರಣ ಮಾಡುತ್ತಿದೆʼ ಎಂದು ಟೀಕಿಸಿದರು.

ʼನಮ್ಮ ಪಕ್ಷ ಕರಾವಳಿ, ಮಲೆನಾಡು ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ನೀಡಲು ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಈಗಾಗಲೇ ವಿಶೇಷ ಯೋಜನೆ ಘೋಷಣೆ ಮಾಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಕಾರ್ಯಕ್ರಮ ಘೋಷಿಸಿದ್ದೇವೆʼ ಎಂದರು.

ಇದನ್ನೂ ಓದಿ: Sara Ali Khan: ಉದಯಪುರದಲ್ಲಿ ಸಾರಾ ಅಲಿ ಖಾನ್-ಕಾರ್ತಿಕ್ ಆರ್ಯನ್; ʻಸಾರ್ತಿಕ್ʼ ಒಂದಾಗಲಿದ್ದಾರೆ ಎಂದ ನೆಟ್ಟಿಗರು

ʼಈ ಸರ್ಕಾರದಲ್ಲಿ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಶೇ.40 ಕಮಿಷನ್ ಇಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಹೇಳುತ್ತಾರೆ. ಯತ್ನಾಳ್ ಅವರು ಸಿಎಂ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಹುದ್ದೆಗೆ 100 ಕೋಟಿ ರೂ. ನೀಡಬೇಕು ಎಂದಿದ್ದಾರೆ. ಬಿಜೆಪಿ ಶಾಸಕರೇ ಆದ ಗೂಳಿಹಟ್ಟಿ ಶೇಖರ್ ಅವರು ನೀರಾವರಿ ಇಲಾಖೆಯಲ್ಲಿ 22 ಸಾವಿರ ಕೋಟಿ ರೂ. ಅಕ್ರಮದ ಬಗ್ಗೆ ಸಿಎಂಗೆ ದೂರು ನೀಡಿದ್ದಾರೆ. ಈ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರಲು ಯಾವುದಾದರೂ ಒಂದು ಕಾರ್ಯಕ್ರಮ ಮಾಡಿದ್ದರೆ ಅದನ್ನು ಘೋಷಿಸಲಿ. ಅವರು ಕೇವಲ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ನಾವು ಬದುಕಿನ ಮೇಲೆ ರಾಜಕೀಯ ಮಾಡುತ್ತಿದ್ದೇವೆʼ ಎಂದು ಹೇಳಿದರು.

ʼಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ. ಈ ಕ್ಷೇತ್ರದಲ್ಲಿ ಇಬ್ಬರು ಟಿಕೆಟ್ ಗೆ ಅರ್ಜಿ ಹಾಕಿದ್ದಾರೆ. ಈ ಇಬ್ಬರನ್ನು ನಾವು ವಿಧಾನ ಸೌಧದಲ್ಲಿ ಕೂರುವಂತೆ ಮಾಡುತ್ತೇವೆ. ನೀವು ಒಗ್ಗಟ್ಟಾಗಿ ಕೆಲಸ ಮಾಡಿ. ನಾವು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೆ ನೀವು ಅವರ ಪರವಾಗಿ ಕೆಲಸ ಮಾಡಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ: WhatsApp New Feature: ವಾಟ್ಸಾಪ್‌‌ನ ಚಾಟ್‌ನೊಳಗೇ 100 ಮೀಡಿಯಾ ಫೈಲ್ ಷೇರ್ ಮಾಡಬಹುದು!

D K Shivakumar 2

ʼಇನ್ನು ಮುಂದೆ 200 ಯೂನಿಟ್ ವಿದ್ಯುತ್ ಉಚಿತ. ಹೀಗಾಗಿ ನೀವು 200 ಯೂನಿಟ್ ಒಳಗೆ ವಿದ್ಯುತ್ ಬಳಸಿದರೆ ಯಾರೂ ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲ. ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಕೊಡುತ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರ ರೂ.ವಿನಂತೆ 5 ವರ್ಷಕ್ಕೆ 2 ಲಕ್ಷ ರೂ. ಕೊಡುತ್ತೇವೆ. ನಾನು ಸಿದ್ದರಾಮಯ್ಯ ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ ನಿಮ್ಮ ಮನೆಗೆ ಬರುತ್ತದೆ. ಪ್ರತಿ ಮನೆಗೆ ನೀಡಲಾಗುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಕೆ ಮಾಡುತ್ತೇವೆ. ಈ ಯೋಜನೆ ಹೇಗೆ ಮಾಡುತ್ತೀರಿ ಎಂದು ಬಿಜೆಪಿಯವರು ಕೇಳುತ್ತಿದ್ದಾರೆ. ಇಂಧನ ಸಚಿವನಾಗಿದ್ದಾಗ 10 ಸಾವಿರ ಮೆ.ವ್ಯಾ ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಅನ್ನು ನಾನು ಅಧಿಕಾರದಿಂದ ಕೆಳಗೆ ಇಳಿಯುವಾಗ 20 ಸಾವಿರ ಮೆ.ವ್ಯಾ ಗೆ ಏರಿಸಿದ್ದೇನೆʼ ಎಂದರು.

ಇದನ್ನೂ ಓದಿ: CA Kuttappa: ಭಾರತ ಬಾಕ್ಸಿಂಗ್‌ ತಂಡದ ಕೋಚ್‌ ಸ್ಥಾನಕ್ಕೆ ಕುಟ್ಟಪ್ಪ ಮರು ನೇಮಕ

ʼಬಿಜೆಪಿಯವರು ಮಾತೆತ್ತಿದರೆ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಈ ದೇಶದಲ್ಲಿ ಅಣೆಕಟ್ಟು, ಕೆರೆಗಳನ್ನು ಕಟ್ಟಿದ್ದು ಯಾರು? ಮೆಡಿಕಲ್ ಕಾಲೇಜು, ಎಂಜಿನಿಯರ್ ಕಾಲೇಜು, ಐಐಟಿ, ಸಾರ್ವಜನಿಕ ಉದ್ದಿಮೆ ಆರಂಭಿಸಿದ್ದು ಕಾಂಗ್ರೆಸ್ ಪಕ್ಷʼ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ಮಾಜಿ ಸಚಿವರಾದ ಮೋಟಮ್ಮ, ಎಚ್ ಎಂ ರೇವಣ್ಣ, ಕಿಮ್ಮನೆ ರತ್ನಾಕರ, ಮಾಜಿ ಸಂಸದರಾದ ಸಿ ನಾರಾಯಣಸ್ವಾಮಿ, ವಿ ಎಸ್ ಉಗ್ರಪ್ಪ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ, ಮಾಜಿ ಶಾಸಕ ಮಧು ಬಂಗಾರಪ್ಪ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಮಂಜುನಾಥ್ ಗೌಡ, ಡಿಸಿಸಿ ಅಧ್ಯಕ್ಷ ಸುಂದರೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿಕೇತ್ ರಾಜ್ ಮೌರ್ಯ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: Dhanush: ಧನುಷ್‌ ನಟನೆಯ ದ್ವಿಭಾಷಾ ಚಿತ್ರ ವಾತಿ ಟ್ರೈಲರ್‌ ಔಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Raichur News: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೆಟ್ರಿಕ್ ಪೂರ್ವ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

girl students fall ill
Koo

ರಾಯಚೂರು: ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ (Raichur News) ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 14 ವಿದ್ಯಾರ್ಥಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದ ಒಬ್ಬಳು ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್‌ಗೆ ರವಾನಿಸಲಾಗಿದೆ.

ಘಟನೆ ನಡೆದ ಬಳಿಕ ಹಾಸ್ಟೆಲ್‌ಗೆ ಬಾರದ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

4 ಸಾವಿರ ಅಡಿ ಪ್ರಪಾತದಿಂದ ಯುವಕನ ಮೃತದೇಹ ಹೊರತಂದ ರಕ್ಷಣಾ ತಂಡ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹವನ್ನು 4 ಸಾವಿರ ಅಡಿ ಪ್ರಪಾತದಿಂದ ರಕ್ಷಣಾ ತಂಡ ಹೊರತಂದಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರಪಾತದ ಬಳಿ ಅರಣ್ಯ, ಪೊಲೀಸ್, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಕಾರ್ಯಚರಣೆ ನಡೆಸಿ, ಯುವಕನ ಮೃತದೇಹವನ್ನು ಹೊರತಂದಿದೆ.

ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಭರತ್ ಮೃತದೇಹ ಸಿಕ್ಕಿದ್ದು, ಹಗ್ಗಗಳನ್ನ ಬಳಸಿ ಗುಡ್ಡಗಾಡಿನಿಂದ ಮೃತದೇಹವನ್ನು ಸಿಬ್ಬಂದಿ ಹೊರತಂದಿದ್ದಾರೆ. ದುರ್ಗದಹಳ್ಳಿ ರಾಣಿಝರಿ ಬಳಿ ಬೈಕ್, ಐಡಿ, ಮೊಬೈಲ್ ಬಿಟ್ಟು ಯುವಕ ಹೋಗಿದ್ದ. ಕಾಫಿನಾಡಿಗೆ ಬಂದು ನಾಪತ್ತೆಯಾಗಿದ್ದ ಭರತ್‌ ಪತ್ತೆಗಾಗಿ ಸುಮಾರು 25ಕ್ಕೂ ಹೆಚ್ಚು ಮಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

ಮೂವರು ಅಂತಾರಾಜ್ಯ ಕಳ್ಳಿಯರ ಬಂಧನ

ಚಿತ್ರದುರ್ಗ: ಮೂವರು ಅಂತಾರಾಜ್ಯ ಸುಲಿಗೆಕೋರ ಮಹಿಳೆಯರನ್ನು ಬಂಧಿಸಿ, 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಒಡವೆ, 50 ಸಾವಿರ ರೂ. ನಗದನ್ನು ಚಿತ್ರದುರ್ಗ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್ವರಿ (26), ಸಂಜನಾ (25), ಅಕಿಲಾ (35) ಬಂಧಿತರು. ಬಂಧಿತ ಮಹಿಳೆಯರು ಬೆಳಗಾವಿ ಮೂಲದವರಾಗಿದ್ದು, ಬಸ್ ನಿಲ್ದಾಣ, ಮೆರವಣಿಗೆ, ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದರು. ಬಡಾವಣೆ ಠಾಣೆ CPI ನಹಿಂ ಅಹಮದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಫ್‌ಐಆರ್‌ ದಾಖಲಾಗಿದೆ.

ನರೇಗಾದಲ್ಲಿ 150 ಕೋಟಿ ರೂ. ಭ್ರಷ್ಟಾಚಾರ; ನಾಲ್ವರು ಪಿಡಿಒಗಳ ಅಮಾನತು

pdo new

ರಾಯಚೂರು: ನರೇಗಾದಲ್ಲಿ ವ್ಯಾಪಕ ಭ್ರಷ್ಟಾಚಾರ ಕಂಡುಬಂದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ. 33 ಗ್ರಾಮ‌ ಪಂಚಾಯತಿಗಳಲ್ಲಿ 150 ಕೋಟಿ ರೂ. ಮೊತ್ತದ ಭ್ರಷ್ಟಾಚಾರ ಸಂಬಂಧ ರಾಜ್ಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ದೂರು ನೀಡಿದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ಜಾಲಹಳ್ಳಿ ಪಿಡಿಒ ಪತ್ತೆಪ್ಪ ರಾಠೋಡ, ಶಾವಂತಗೇರ ಪಿಡಿಒ ಗುರುಸ್ವಾಮಿ, ಕ್ಯಾದಿಗೇರ ಪಿಡಿಒ ಸಿ.ಬಿ.ಪಾಟೀಲ್, ಗಾಣದಾಳ ಪಿಡಿಒ ಮಲ್ಲಪ್ಪ ಅಮಾನತುಗೊಂಡವರು. ಇಲಾಖೆ ವಿಚಾರಣೆ ಕಾಯ್ದಿರಿಸಿ ನಾಲ್ವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಅಮಾನತು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Shakti Scheme: ಹುಬ್ಬಳ್ಳಿಯಲ್ಲಿ ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಒಂದೇ ಆಧಾರ್ ಕಾರ್ಡ್‌ ತೋರಿಸಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ನಿರ್ವಾಹಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Shakti Scheme
Koo

ಹುಬ್ಬಳ್ಳಿ: ಶಕ್ತಿ ಯೋಜನೆಯಲ್ಲಿ (Shakti Scheme) ಉಚಿತ ಪ್ರಯಾಣ ಸೌಲಭ್ಯವಿದ್ದರೂ ಮೋಸ ಮಾಡಲು ಹೋಗಿ ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಒಂದೇ ಆಧಾರ್ ಕಾರ್ಡ್‌ ತೋರಿಸಿ ಸಾರಿಗೆ ಬಸ್‌ನಲ್ಲಿ ಓಡಾಟ ನಡೆಸುತ್ತಿದ್ದಾಗ ನಿರ್ವಾಹಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಹುಬ್ಬಳ್ಳಿಯ ನೇಕಾರ ನಗರದಿಂದ ಕಿಮ್ಸ್‌ಗೆ ಹೋಗುತ್ತಿದ್ದ ಬಸ್‌ನಲ್ಲಿ ಒಂದೇ ಆಧಾರ್ ಕಾರ್ಡ್‌ ತೋರಿಸಿ ಇಬ್ಬರು ಮಹಿಳೆಯರು ಓಡಾಟ ಮಾಡುತ್ತಿದ್ದರು. ಮೊದಲಿಗೆ ನಿರ್ವಾಹಕನಿಗೆ ಒಂದೇ ಆಧಾರ್‌ ಎಂದು ಗೊತ್ತಾಗಿಲ್ಲ. ನಂತರ ಪರಿಶೀಲಿಸಿದಾಗ ಒಂದೇ ಕಾರ್ಡ್‌ನ ಎರಡು ಪ್ರತಿಗಳು ಎಂಬುವುದಾಗಿ ತಿಳಿದುಬಂದಿದೆ. ಈ ವೇಳೆ ಪ್ರಯಾಣಿಕರು ದೇವರು ಏನು ಮಾಡಿದರೂ ನಡೆಯತ್ತೆ ಎಂದು ನಿರ್ವಾಹಕ ಅಳಲು ತೋಡಿಕೊಂಡಿರುವುದು ಕಂಡುಬಂದಿದೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಹಿಳಾ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿ ಮಾಡಿರುವ ಶಕ್ತಿಯೋಜನೆಯಿಂದ ಕೋಟ್ಯಂತರ ಮಹಿಳೆಯರಿಗೆ ಉಪಯೋಗವಾಗುತ್ತಿದೆ. ಆದರೆ, ಪ್ರಯಾಣ ಉಚಿತವಿದ್ದರೂ ಗುರುತಿನ ಚೀಟಿ ಇಲ್ಲದ ಕಾರಣ ಕೆಲವರು ಮೋಸ ಮಾಡುತ್ತಿರುವುದು ಕಂಡುಬಂದಿದೆ. ಹುಬ್ಬಳ್ಳಿ ಪ್ರಕರಣದ ಬಗ್ಗೆ ನಿರ್ವಾಹಕ, ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ಅನಿಮಲ್‌ ಸಿನಿಮಾ ನೋಡಿ ಪರ್ಸ್‌ ಬಿಟ್ಟು ಬಂದಳು; ವಾಪಸ್‌ ತರಲು ಹೋದಾಗ ಸೆಕ್ಯುರಿಟಿ ಗಾರ್ಡ್‌ಗೆ ಒದ್ದಳು!

ಬೆಂಗಳೂರು: ಅನಿಮಲ್‌ ಸಿನಿಮಾ ವೀಕ್ಷಣೆಗೆ ಮಾಲ್‌ಗೆ ಬಂದಿದ್ದ ಮಹಿಳೆಯೊಬ್ಬರು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ (assault case) ನಡೆಸಿದ್ದಾರೆ. ಮರೆತು ಹೋಗಿದ್ದ ವ್ಯಾಲೆಟ್ ಹಿಂಪಡೆಯುವ ವಿಚಾರಕ್ಕೆ ಶುರುವಾದ ಕಿರಿಕ್ ಠಾಣೆ ಮೆಟ್ಟಿಲೇರಿದೆ. ಗರುಡಾ ಮಾಲ್​ನ (garuda mall) ಪಿವಿಆರ್ ಐನಾಕ್ಸ್ ಚಿತ್ರಮಂದಿರದ ಬಳಿ ನಡೆದಿದೆ.

ಅನಿಮಲ್ ಸಿನಿಮಾ ವೀಕ್ಷಿಸಲು ತಡರಾತ್ರಿ 10:30ರ ಸುಮಾರಿಗೆ ಪಿವಿಆರ್​ ಐನಾಕ್ಸ್ ಚಿತ್ರಮಂದಿರಕ್ಕೆ ಮಹಿಳೆ ಬಂದಿದ್ದರು. ಸಿನಿಮಾ ಮುಗಿಸಿ ಹೊರ ಬಂದಾಗ ಸಿನಿಮಾ ಹಾಲ್‌ನಲ್ಲೇ ವ್ಯಾಲೆಟ್‌ ಮರೆತು ಹೋಗಿದ್ದರು. ಹೌಸ್ ಕೀಪಿಂಗ್ ಸಿಬ್ಬಂದಿ ಸ್ವಚ್ಚತಾ ಕಾರ್ಯದ ಸಂದರ್ಭದಲ್ಲಿ ವ್ಯಾಲೆಟ್‌ ಗಮನಿಸಿದ್ದರು. ಬಳಿಕ ವ್ಯಾಲೆಟ್‌ ಅನ್ನು ಸೆಕ್ಯೂರಿಟಿಗೆ ಒಪ್ಪಿಸಿದ್ದರು.

ಮರೆತು ಹೋಗಿದ್ದ ವ್ಯಾಲೆಟ್‌ಗಾಗಿ ಮಹಿಳೆ ಪುನಃ ತಡರಾತ್ರಿ 3 ಗಂಟೆಯ ಸುಮಾರಿಗೆ ಮಾಲ್ ಬಳಿ ಬಂದಿದ್ದಾಳೆ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ನಿಯಮಾನುಸಾರ ಐಡೆಂಟಿಟಿ ಮಾಹಿತಿ ಕೇಳಿದ್ದಾರೆ. ಅಷ್ಟಕ್ಕೆ ಕೋಪಗೊಂಡ ಮಹಿಳೆ ಅವಾಚ್ಯವಾಗಿ ನಿಂದಿಸಿ ವ್ಯಾಲೆಟ್ ಕಿತ್ತುಕೊಂಡು, ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾಳೆ. ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹೊಡೆದಿದ್ದು, ಕಾಲಿನಲ್ಲಿ ಒದ್ದು, ಕಪಾಳಕ್ಕೆ ಬಾರಿಸಿದ್ದಾಳೆ.

ಇದನ್ನೂ ಓದಿ | Road Accident : ಸಾವಿನಲ್ಲೂ ಒಂದಾದ ಪ್ರೇಮಿಗಳು; ರಸ್ತೆ ಅಪಘಾತದಲ್ಲಿ ಮೃತ್ಯು

Woman assaults staff of Garuda Mall in Bengaluru

ಇತ್ತ ಮಾಲ್ ಸಿಬ್ಬಂದಿ ಸಮಾಧಾನಪಡಿಸಲು ಮುಂದಾದರೂ ಮಾತು ಕೇಳದೇ ಮಹಿಳೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ತಪ್ಪಾಯ್ತು ಕ್ಷಮಿಸಿ ಎಂದು ಸಿಬ್ಬಂದಿ ಮಹಿಳೆಯ ಕಾಲಿಗೂ ಬಿದ್ದಿದ್ದಾಳೆ. ಆದರೂ ಬಿಡದೇ ಮಹಿಳೆ ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹಲ್ಲೆ ಮಾಡಿದ್ದಾಳೆ. ಜತೆಗೆ ಇವರಿಬ್ಬರ ಗಲಾಟೆ ಬಿಡಿಸಲು ಬಂದಿದ್ದ ಸಿಬ್ಬಂದಿಗೂ ಅವಾಚ್ಯವಾಗಿ ನಿಂದಿಸಿದ್ದಾಳೆ.

ಇಷ್ಟಲ್ಲ ಘಟನೆ ಬಳಿಕ ಮಾಲ್‌ ಸಿಬ್ಬಂದಿ ಪೊಲೀಸರನ್ನು ಕರೆಸಿದ್ದಾರೆ. ಈ ವೇಳೆ ತನ್ನ ವ್ಯಾಲೆಟ್‌ನಲ್ಲಿ ಎಂಟು ಸಾವಿರ ರೂ. ಕಳ್ಳತನವಾಗಿದೆ ಎಂದು ದೂರು ನೀಡಿದ್ದಾಳೆ. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ವ್ಯಾಲೆಟ್‌ನಲ್ಲಿ ಹಣ ಹಾಗೂ ಯಾವುದೇ ವಸ್ತು ಕಳ್ಳತನವಾಗಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಹಾಗೂ ಸಿಬ್ಬಂದಿ ಇಬ್ಬರ ಮೇಲೂ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

ಈಗಿನ ಸಾಮಾಜಿಕ ಜಾಲತಾಣಗಳು‌ ಮಹತ್ವದ ತೀರಾ ಸ್ಥಳೀಯ ಅಥವಾ ಬೇರುಮಟ್ಟದ ಸುದ್ದಿ, ಬೆಳವಣಿಗೆಗಳನ್ನು ಜಗತ್ತಿಗೆ ತಲುಪಿಸುತ್ತಿವೆ. ಇಂತಹ ಕಾಲಘಟ್ಟದಲ್ಲಿ ಸ್ಥಳೀಯ ಹೈಪರ್ ಲೋಕಲ್ ಸುದ್ದಿಗಾರರಿಗೆ ವಿಪುಲ ಅವಕಾಶಗಳಿವೆ ಎಂದು ಮಾಮ್ ಸಂಘಟನೆ ಅಧ್ಯಕ್ಷ ನವೀನ್ ಅಮ್ಮೆಂಬಳ ತಿಳಿಸಿದ್ದಾರೆ.

VISTARANEWS.COM


on

Naveen Ammembala
Koo

ಬೆಳ್ತಂಗಡಿ: ಹೈಪರ್ ಲೋಕಲ್ ಸುದ್ದಿಗಳಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮಂಗಳೂರಿನ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಷನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ ಅಭಿಪ್ರಾಯಪಟ್ಟರು.

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮತ್ತು ಪದವಿ ಅಧ್ಯಯನ ವಿಭಾಗ ಮಾಮ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಹೈಪರ್ ಲೋಕಲ್ ಮಾಧ್ಯಮ: ಕಾರ್ಯನಿರ್ವಹಣೆ ಮತ್ತು ಸುಸ್ಥಿರತೆ’ ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬೆಳ್ತಂಗಡಿಯ ದಿಡುಪೆ ಎಂಬ ಕುಗ್ರಾಮವನ್ನು ಅದರ ಸುದ್ದಿಗಳನ್ನು ದಶಕಗಳ‌ ಹಿಂದೆ ರಾಜ್ಯ ಮಟ್ಟಕ್ಕೆ ಉದಯವಾಣಿ ಪತ್ರಿಕೆಯ ಮೂಲಕ ಪರಿಚಯಿಸಿದವರು ಅಭ್ಯುದಯ ಪತ್ರಕರ್ತ ಈಶ್ವರ ದೈತೋಟ ಅವರು. ಆ ಮೂಲಕ ಅಭಿವೃದ್ಧಿ ಕಂಡ ದಿಡುಪೆ ಜಗತ್ತಿನ ಗಮನ ಸೆಳೆಯಿತು. ತೀರಾ ಸ್ಥಳೀಯ ಮಹತ್ವವನ್ನು ಪಸರಿಸಿದ ಕರ್ನಾಟಕದ‌‌‌ ಮೊದಲ ಪ್ರಯೋಗ ಅಭ್ಯುದಯ ಪತ್ರಿಕೋದ್ಯಮದ ಮಾದರಿ. ಹಾಗಾಗಿ ಅಭ್ಯುದಯ ಪತ್ರಿಕೋದ್ಯಮಕ್ಕೂ ಹೈಪರ್ ಲೋಕಲ್ ಸುದ್ದಿಗಳಿಗೂ ಅವಿನಾಭಾವತೆ ಇದೆ ಎಂದು ಅವರು ಹೇಳಿದರು.

ಹೈಪರ್ ಅಂದರೆ ಗತಿಶೀಲ, ಚಲನಶೀಲ, ಕ್ರಿಯಾತ್ಮಕ ಎಂದೆಲ್ಲಾ ಅರ್ಥೈಸಬಹುದು. ತೀರಾ‌ ಸ್ಥಳೀಯ ಸುದ್ದಿಗೆ ಹೆಚ್ಚಿನ ಮಹತ್ವ‌ ನೀಡಿ ಜಾಗತಿಕ ಅಥವಾ ಗ್ಲೋಬಲ್ ಮಟ್ಟಕ್ಕೆ ಒಯ್ಯುವ ಸಾಧ್ಯತೆ ಹೇರಳವಾಗಿದೆ. ‘ ಹೈಪರ್ ಲೋಕಲ್ ‘ ಸುದ್ದಿಗಳೇ ಹೈಪರ್ ಗ್ಲೋಬಲ್ ಸುದ್ದಿಗಳಾಗಿ ಪರಿವರ್ತನೆಯಾಗುವುದಕ್ಕೆ ನಿದರ್ಶನಗಳಿವೆ. ರಾಷ್ಟ್ರಮಟ್ಟದ ಮಾಧ್ಯಮಗಳೂ ಪುತ್ತೂರು ಅಥವಾ ರಾಯಚೂರಿನ ಹಳ್ಳಿಯ ಸುದ್ದಿಗೂ ಪ್ರಾಮುಖ್ಯತೆ ಕೊಡುತ್ತಿರುವುದನ್ನು ಗಮನಿಸಬಹುದು ಎಂದು ಅಮ್ಮೆಂಬಳ ಅಭಿಪ್ರಾಯಿಸಿದರು‌.

ಈಗಿನ ಸಾಮಾಜಿಕ ಜಾಲತಾಣಗಳು‌ ಮಹತ್ವದ ತೀರಾ ಸ್ಥಳೀಯ ಅಥವಾ ಬೇರುಮಟ್ಟದ ಸುದ್ದಿ, ಬೆಳವಣಿಗೆಗಳನ್ನು ಜಗತ್ತಿಗೆ ತಲುಪಿಸುತ್ತಿವೆ. ಇಂತಹ ಕಾಲಘಟ್ಟದಲ್ಲಿ ಸ್ಥಳೀಯ ಹೈಪರ್ ಲೋಕಲ್ ಸುದ್ದಿಗಾರರಿಗೆ ವಿಪುಲ ಅವಕಾಶಗಳಿವೆ ಎಂದರು.

ಜಾಗತಿಕ ಮಟ್ಟದ ಪತ್ರಿಕೆಗಳಿಗಿಂತ ಸ್ಥಳೀಯ ಪತ್ರಿಕೆಗಳಿಗೆ ಪ್ರಾಮುಖ್ಯತೆ ಹೆಚ್ಚು. ಏಕೆಂದರೆ ಇವು ಸ್ಥಳೀಯ ಆಸಕ್ತಿಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಜಾಗತಿಕ ನೆಲೆಗಟ್ಟಿನಲ್ಲಿ ತಿಳಿಸುವ ಪ್ರಯತ್ನವನ್ನು ಮಾಡುತ್ತವೆ. ಪ್ರಸ್ತುತ ಕ್ರಿಯಾಶೀಲ ಸ್ಥಳೀಯ ಪತ್ರಿಕೆಗಳಿಗೆ ಹೊಸ ಮಾಧ್ಯಮ ಲೋಕದಲ್ಲಿ ವ್ಯಾಪಕ ಅವಕಾಶಗಳು ಲಭ್ಯವಾಗುತ್ತಿವೆ ಎಂದರು.

ಇದನ್ನೂ ಓದಿ | ವಿಸ್ತಾರ ಅಂಕಣ: ಮನಮೋಹನ್‌ ಸಿಂಗ್‌ ಮಾದರಿ ಅಥವಾ ನರೇಂದ್ರ ಮೋದಿ ಮಾದರಿ: ಮುಸ್ಲಿಂ ಕಲ್ಯಾಣಕ್ಕೆ ಯಾವುದು ಸರಿ?

ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಡಾ. ಯು ಪಿ ಶಿವಾನಂದ, ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ, ಮಾಮ್ ಸಂಘಟನೆ ಗೌರವಾಧ್ಯಕ್ಷ ವೇಣು ಶರ್ಮ, ಕಾರ್ಯಾಗಾರದ ಸಂಚಾಲಕಿ, ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ಎ.ಜೆ. ಉಪಸ್ಥಿತರಿದ್ದರು.

Continue Reading

ಕರ್ನಾಟಕ

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

Rambhapuri Seer: ಈ ಬಾರಿ ಸರ್ಕಾರದಲ್ಲಿ ಎಂ.ಬಿ ಪಾಟೀಲ್‌ಗೆ ಜಲಸಂಪನ್ಮೂಲ ಖಾತೆ ಕೊಟ್ಟಿದ್ದರೆ ಆ ಕಥೆಯೇ ಬೇರೆಯಾಗಿರುತ್ತಿತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ರಂಭಾಪುರಿ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

Rambhapuri seer and MB Patil
Koo

ವಿಜಯಪುರ: ಎಂ.ಬಿ. ಪಾಟೀಲ್‌ಗೆ ಜಲಸಂಪನ್ಮೂಲ ಖಾತೆ ಸಿಗದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಂಭಾಪುರಿ ಶ್ರೀಗಳು (Rambhapuri seer) ಅಸಮಾಧಾನ ವ್ಯಕ್ತಪಡಿಸಿರುವುದು ಕಂಡುಬಂದಿದೆ. ಈ ಬಾರಿ ಸರ್ಕಾರದಲ್ಲಿ ಎಂ.ಬಿ ಪಾಟೀಲ್‌ಗೆ ನೀರಾವರಿ ಖಾತೆ ಕೊಟ್ಟಿದ್ದರೆ ಆ ಕಥೆಯೇ ಬೇರೆಯಾಗಿರುತ್ತಿತ್ತು ಎಂದು ಹೇಳುವ ಮೂಲಕ ಡಿಕೆಶಿಗೆ ಜಲಸಂಪನ್ಮೂಲ ಖಾತೆ ಸಿಕ್ಕಿದ್ದಕ್ಕೆ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾತನಾಡಿರುವ ಬಾಳೆ ಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅವರು, ಕರ್ನಾಟಕ ಸರ್ಕಾರದಲ್ಲಿ ಬೃಹತ್ ಕೈಗಾರಿಕಾ ಸಚಿವರಾಗಿ ಎರಡನೇ ಸ್ಥಾನದಲ್ಲಿ ಎಂ.ಬಿ. ಪಾಟೀಲ್ ಮುನ್ನಡೆಯುತ್ತಿದ್ದಾರೆ. ಅವರಿಗೆ ನೀರಾವರಿ ಖಾತೆ ಕೊಟ್ಟಿದ್ದರೆ ಆ ಕಥೆಯೇ ಬೇರೆಯಾಗಿರುತ್ತಿತ್ತು. ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಲು ಸಾಧ್ಯವಿತ್ತು. ಆದರೆ ಸಿದ್ದರಾಮಯ್ಯರ ಅವರು ಅವಕಾಶ ಕೊಡಲಿಲ್ಲ. ಸಿಎಂಗೆ ಖಂಡಿತವಾಗಿಯೂ ಎಂ.ಬಿ. ಪಾಟೀಲ್ ಬೇಕಾದವರು. ಅವರು ಖಾತೆ ಸಿಗುತ್ತದೆ ಎಂದು ಬಹಳ ಆಸೆ ಇಟ್ಟುಕೊಂಡಿದ್ದೆವು. ಆದರೆ ಜಲಸಂಪನ್ಮೂಲ ಖಾತೆ ಬೇರೆಯವರ ಪಾಲಾಯಿತು ಎಂದು ತಿಳಿಸಿದ್ದಾರೆ.

ಕೈಗಾರಿಕೆಗಳಿಂದ ರಾಜ್ಯದಲ್ಲಿ ಏನೇನು ಮಾಡಬೇಕು ಎಂಬುವುದರ ಬಗ್ಗೆ ಎಂ.ಬಿ. ಪಾಟೀಲ್ ಭದ್ರ ಬುನಾದಿ ಹಾಕುತ್ತಿದ್ದು, ಹೆಚ್ಚಿನ ವಿದೇಶಿ ಹೂಡಿಕೆಯನ್ನು ತರುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಸಚಿವರಿದ್ದಾಗ ಎಂ.ಬಿ.ಪಾಟೀಲ್ ಬಹಳ ದೊಡ್ಡ ಕೆಲಸ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಎಲ್ಲಾ ಭಾಗದಲ್ಲಿ ಕೆರೆ ತುಂಬಿಸುವ ಕೆಲಸ ಮಾಡಿದರು. ಇವತ್ತು ಬಹಳ ಮಳೆ ಆಗದೇ ಇದ್ದರೂ ಇಲ್ಲಿನ ಹಸಿರು ನೋಡಿದರೆ ತಿಳಿಯುತ್ತದೆ. ಎಲ್ಲಾ ಕೆರೆ ತುಂಬಿದ ಪರಿಣಾಮದಿಂದಲೇ ಅಂತರ್ಜಲ ಹೆಚ್ಚಾಗಿ ಬೋರ್ವೆಲ್‌ನಲ್ಲಿ ನೀರಿದೆ. ಫಸಲು ಬೆಳೆಯಲು ಸಾಧ್ಯ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

ಉಚಿತ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆ

ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಸರ್ಕಾರದ ಯೋಜನೆಗಳಿಗೆ ಮುಕ್ಕಾಲು ಭಾಗ ಹಣ ಖರ್ಚಾಗುವುದರಿಂದ ಅಭಿವೃದ್ಧಿ ಸ್ಥಗಿತಗೊಂಡಿದೆ. ಯೋಜನೆಗಳ ಮೊರೆ ಹೋಗಿ ದುಡಿಯುವ ಜನರು ಕೂಡ ಸೋಮಾರಿಗಳಾಗಿದ್ದಾರೆ. ಧಾರ್ಮಿಕ ಕ್ಷೇತ್ರ ಅಲ್ಲದೇ ರಾಜ್ಯದ ಯಾವ ಅಭಿವೃದ್ಧಿ ಕೆಲಸಗಳಿಗೂ ಹಣ ಬಿಡುಗಡೆ ಆಗುತ್ತಿಲ್ಲ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಜಾತಿಯ ತುಷ್ಟೀಕರಣ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಅನುದಾನ ನೀಡದ್ದಕ್ಕೆ ಅಸಮಾಧಾನ

ರೇಣುಕಾಚಾರ್ಯ ಶಿಲಾ ಮಂಟಪಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಕೊಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಂಭಾಪುರಿ ಶ್ರೀಗಳು, ಬಾಳೆ ಹೊನ್ನೂರು ಧರ್ಮ ಪೀಠದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಶಿಲಾ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮೂರು ಬೃಹತ್ ಶಿಲೆಗಳು ಬಂದಿದ್ದು, ಶಿಲ್ಪಿಗಳು ಕೆಲಸ ಮಾಡುತ್ತಿದ್ದಾರೆ. 36 ಅಡಿ ಎತ್ತರ, 22 ಅಗಲದ ಕಲ್ಲು ಆಂಧ್ರದಿಂದ ವರ್ಷಾಂತ್ಯಕ್ಕೆ ಬರಲಿದೆ. ಅದು 12 ಕೋಟಿ ರೂಪಾಯಿ ಯೋಜನೆಯಾಗಿದ್ದು, ಯಡಿಯೂರಪ್ಪ ಸಿಎಂ ಆಗಿದ್ದಾಗ 5 ಕೋಟಿ ಬಿಡುಗಡೆ ಮಾಡಿದ್ದರು. ನಂತರ ಬಂದ ಸಿಎಂಗಳು ಯಾವುದೇ ರೀತಿ ಸ್ಪಂದಿಸದೇ ತಟಸ್ಥವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Saika Ishaque ran through the England middle order
ಕ್ರಿಕೆಟ್8 mins ago

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

CLAT Result 2024 announced
ದೇಶ10 mins ago

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

girl students fall ill
ಕರ್ನಾಟಕ44 mins ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್55 mins ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್1 hour ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ1 hour ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ2 hours ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್2 hours ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ3 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Chhattisgarh to be CM Vishnu has two deputies and Raman Singh Speaker
ದೇಶ3 hours ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ7 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ10 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌