Karnataka Election : ಕಾಂಗ್ರೆಸನ್ನು ಸಂಪರ್ಕಿಸಿಲ್ಲ, ಯಾವ ಕಾರಣಕ್ಕೂ ಜೆಡಿಎಸ್‌ ಬಿಡಲ್ಲ: ಹಾಸನದ ಎಚ್‌.ಪಿ ಸ್ವರೂಪ್‌ ಸ್ಪಷ್ಟೋಕ್ತಿ - Vistara News

ಕರ್ನಾಟಕ

Karnataka Election : ಕಾಂಗ್ರೆಸನ್ನು ಸಂಪರ್ಕಿಸಿಲ್ಲ, ಯಾವ ಕಾರಣಕ್ಕೂ ಜೆಡಿಎಸ್‌ ಬಿಡಲ್ಲ: ಹಾಸನದ ಎಚ್‌.ಪಿ ಸ್ವರೂಪ್‌ ಸ್ಪಷ್ಟೋಕ್ತಿ

ಹಾಸನದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಅವರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹರಡಿದ್ದಾರೆ. ಅದಕ್ಕೆ ಸ್ವರೂಪ್‌ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

HP swarup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಎಚ್‌.ಪಿ. ಸ್ವರೂಪ್‌ ಅವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಭಾರಿ ಸುದ್ದಿ ಮಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಬಿರುಗಾಳಿಯಂತೆ ಹರಡುತ್ತಿದೆ ಎಂದರೆ ಸ್ವತಃ ಎಚ್‌.ಪಿ. ಸ್ವರೂಪ್‌ ಅವರೇ ಇದು ಸುಳ್ಳು ಸುದ್ದಿ, ನಾನು ಕಾಂಗ್ರೆಸ್‌ನ್ನು ಸಂಪರ್ಕಿಸಿಲ್ಲ, ಜೆಡಿಎಸ್‌ನ್ನು ಬಿಡಲ್ಲ ಎಂದು ಪತ್ರಿಕಾ ಹೇಳಿಕೆಯನ್ನೇ ಬಿಡುಗಡೆ ಮಾಡಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲೇ ಭಾರಿ ಪೈಪೋಟಿ ಇದೆ. ಎಚ್‌.ಡಿ. ಕುಮಾರಸ್ವಾಮಿ ಅವರು ಯುವ ನಾಯಕ ಎಚ್‌.ಪಿ. ಸ್ವರೂಪ್‌ ಅವರಿಗೇ ಟಿಕೆಟ್‌ ನೀಡುವ ಬಗ್ಗೆ ಸ್ಪಷ್ಟ ನಿರ್ಧಾರ ಹೊಂದಿದ್ದಾರೆ. ಆದರೆ, ಎಚ್‌.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ ಮಾತ್ರವಲ್ಲ ಪ್ರಚಾರದ ಕಣಕ್ಕೂ ಇಳಿದಿದ್ದರು. ಹಾಸನ ಕ್ಷೇತ್ರದಲ್ಲಿ ನಮ್ಮ ಕುಟುಂಬದ ಯಾರನ್ನೋ ನಿಲ್ಲಿಸಿ ಗೆಲ್ಲುವ ಅನಿವಾರ್ಯತೆ ಇಲ್ಲ, ಸಾಮಾನ್ಯ ಕಾರ್ಯಕರ್ತರನ್ನೇ ಗೆಲ್ಲಿಸಬಲ್ಲ ಶಕ್ತಿ ಜೆಡಿಎಸ್‌ಗೆ ಇದೆ ಎನ್ನುವುದು ಎಚ್‌.ಡಿ. ಕುಮಾರಸ್ವಾಮಿ ವಾದ. ಇದರ ನಡುವೆಯೇ ಎಚ್.ಡಿ. ರೇವಣ್ಣ ಅವರು ತಾನೇ ನಿಂತರೆ ಹೇಗೆ ಎಂದು ಯೋಚಿಸುತ್ತಿದ್ದಾರೆ. ಈ ಟಿಕೆಟ್‌ ಜಗಳ ಈಗ ಎಚ್‌.ಡಿ. ದೇವೇಗೌಡರ ಅಂಗಳದಲ್ಲಿದೆ. ಅವರು ಆಸ್ಪತ್ರೆಯಲ್ಲಿದ್ದಾರೆ. ಇಂಥ ಅಯೋಮಯ ಸ್ಥಿತಿಯಲ್ಲಿ ಸ್ವರೂಪ್‌ ಅವರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಅವರು ಹೇಳಿದ್ದು ಕೆಲವರಿಗೆ ಇದ್ದರೂ ಇರಬಹುದು ಎಂಬ ಅಭಿಪ್ರಾಯವನ್ನು ಮೂಡಿಸಿತ್ತು. ಅದಕ್ಕಾಗಿ ಸ್ವರೂಪ್‌ ಅವರು ಪತ್ರಿಕಾ ಹೇಳಿಕೆಯನ್ನೇ ಬಿಡುಗಡೆ ಮಾಡಿದ್ದಾರೆ.

ಸ್ವರೂಪ್‌ ಹೇಳಿದ್ದೇನು?

ʻʻನಾನು ಮತ್ತು ನನ್ನ ಕುಟುಂಬದವರು ಜೆಡಿಎಸ್ ಪಕ್ಷದ ಕಟ್ಟಾ ಬೆಂಬಲಿಗರು. ನಾನು‌ ಹುಟ್ಟಿ ಬೆಳೆದಿದ್ದೆಲ್ಲಾ ಜೆಡಿಎಸ್ ಪರಿಸರದಲ್ಲಿಯೇ. ನಾನು 2023 ರ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಾಕಾಂಕ್ಷಿ. ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದು ನಾನು ಹಲವು ಭಾರಿ ಸ್ಪಷ್ಟಪಡಿಸಿದ್ದೇನೆ. ಹೀಗಿದ್ದಾಗಲೂ ನಾನು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ರವರು ಹೇಳಿಕೆ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ್ದೇನೆ. ಇದೆಲ್ಲಾ ಊಹಾಪೋಹ ನನ್ನನ್ನು ಯಾವ ಕಾಂಗ್ರೆಸ್ ಮುಖಂಡ ಕೂಡ ಸಂಪರ್ಕಿಸಿಲ್ಲ. ನಾನು ಯಾವ ಕಾಂಗ್ರೆಸ್ ಮುಖಂಡರನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿಲ್ಲ ಎಂಬುದನ್ನು ಪ್ರಮಾಣಪೂರ್ವಕವಾಗಿ ಹೇಳ ಬಯಸುತ್ತೇನೆʼʼ ಎಂದು ಎಚ್‌.ಪಿ. ಸ್ವರೂಪ್‌ ಹೇಳಿದ್ದಾರೆ.

ʻʻನನಗೆ ಎಚ್.ಡಿ.ದೇವೇಗೌಡರೇ ದೇವರು, ಜೆಡಿಎಸ್ ಪಕ್ಷವೇ ಆಶ್ರಯ. ಎಚ್.ಡಿ.ರೇವಣ್ಣ‌ನವರು, ಎಚ್.ಡಿ‌.ಕುಮಾರಸ್ವಾಮಿನವರೇ ರಾಜಕೀಯ ಆಶ್ರಯದಾತರು. ಹಾಗಾಗಿ ನಾನು ಬೇರೆ ಯಾವ ಪಕ್ಷದ ಸಂಪರ್ಕದಲ್ಲಿರುವೆ ಎಂಬುದೆಲ್ಲಾ ಆಧಾರರಹಿತ ಮತ್ತು ನನಗೆ ತೊಂದರೆ ಕೊಡುವ ಪ್ರಯತ್ನಗಳೆಂದೇ ಭಾವಿಸುವೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ʻʻಹಾಗಾಗಿ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸಂಪರ್ಕದಲ್ಲಿರುವೆ ಎಂಬ ವರದಿಗಳನ್ನು ಸಾರಸಗಟಾಗಿ ಅಲ್ಲಗಳೆಯುತ್ತೇನೆʼʼ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ ಎಚ್.ಪಿ.ಸ್ವರೂಪ್.

ಇದನ್ನೂ ಓದಿ : Hasana politics : ಹಾಸನ ಟಿಕೆಟ್‌ ಸಭೆಗೆ ದೇವೇಗೌಡರ ಬ್ರೇಕ್; ಎಚ್‌ಡಿಕೆ ಕೆಂಡಾಮಂಡಲ, ಮುಂದೂಡಿದ್ದು ಯಾರು ಅಂತ ನೋಡ್ತೇನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

Car Catches Fire: ಬಾಗಲಕೋಟೆ ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ಅವಘಡ ನಡೆದಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ವ್ಯಕ್ಯಿ ಸಜೀವ ದಹನವಾಗಿದ್ದಾರೆ.

VISTARANEWS.COM


on

car catches fire
Koo

ಬಾಗಲಕೋಟೆ: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ (Car Catches Fire) ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ನಡೆದಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ (ಗೌಡರ) (50) ಮೃತ ವ್ಯಕ್ತಿ. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ರಸ್ತೆ ಪಕ್ಕ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ಕಣಿವಿ ಹೊನ್ನಾಪುರ ಬಳಿ ನಡೆದಿದೆ. ಕೇರಳದಿಂದ ದೆಹಲಿಗೆ ಕಡೆಗೆ ಹೊರಟಿದ್ದ ಲಾರಿ ಪಲ್ಟಿಯಾಗಿದ್ದು, ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬ್ಯಾಟರಿ, ಟಿವಿ ಸಾಮಗ್ರಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Continue Reading

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading

ಕರ್ನಾಟಕ

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

VISTARANEWS.COM


on

Devarajegowda
Koo

ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡ (Devaraje Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ (Prajwal Revanna Case) ಸುದ್ದಿಯಾಗಿದ್ದ ದೇವರಾಜೇಗೌಡ ಅವರೂ ಜೈಲುಪಾಲಾದಂತಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಮೇ 10ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು.

Prajwal Revanna Case

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿದ್ದ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದ್ದವು. ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದರು.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

ದೇವರಾಜೇಗೌಡ ಬಂಧನದ ಬಳಿಕ ಮಾತನಾಡಿದ್ದ ಮಾಜಿ ಸಂಸದ ಶಿವರಾಮೇಗೌಡ, ಹಲವು ಆರೋಪ ಮಾಡಿದ್ದಾರೆ. “ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading
Advertisement
Shankara Jayanti 2024
ಧಾರ್ಮಿಕ12 mins ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ27 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ27 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ6 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ6 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು6 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು7 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್7 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ9 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ27 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು14 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌