Karnataka Election : ಕಾಂಗ್ರೆಸ್‌ನಲ್ಲಿ ಜಾತಿವಾರು ಟಿಕೆಟ್‌ ಲಾಬಿ ಶುರು; ಲಿಂಗಾಯತ, ಒಬಿಸಿ, ಒಕ್ಕಲಿಗ‌ರಿಂದ ಅತ್ಯಧಿಕ ಡಿಮ್ಯಾಂಡ್ - Vistara News

ಕರ್ನಾಟಕ

Karnataka Election : ಕಾಂಗ್ರೆಸ್‌ನಲ್ಲಿ ಜಾತಿವಾರು ಟಿಕೆಟ್‌ ಲಾಬಿ ಶುರು; ಲಿಂಗಾಯತ, ಒಬಿಸಿ, ಒಕ್ಕಲಿಗ‌ರಿಂದ ಅತ್ಯಧಿಕ ಡಿಮ್ಯಾಂಡ್

ಕಾಂಗ್ರೆಸ್‌ ಟಿಕೆಟ್‌ ಹಂಚಿಕೆಯಲ್ಲಿ (Karnataka Election) ಜಾತಿ ಲೆಕ್ಕಾಚಾರ ಜೋರಾಗಿದೆ. ಸ್ಕ್ರೀನಿಂಗ್‌ ಕಮಿಟಿ ಮುಂದೆ ಸಮುದಾಯಗಳ ಟಿಕೆಟ್‌ ಬೇಡಿಕೆ ಇದೆ.

VISTARANEWS.COM


on

Screening committee
ರಾಜ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಪ್ರಕಾಶ್ ಮೋಹನ್‌ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸ್ವಾಗತಿಸಿದ ಕ್ಷಣ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ (Karnataka Election) ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷರಾಗಿ ಪ್ರಕಾಶ್‌ ಮೋಹನ್‌ ಅವರನ್ನು ನೇಮಿಸಿದ ಬೆನ್ನಿಗೇ ಪಕ್ಷದಲ್ಲಿ ಟಿಕೆಟ್‌ ಜಾತಿವಾರು ಲಾಬಿ ಜೋರಾಗಿದೆ. ಪ್ರಕಾಶ್‌ ಮೋಹನ್‌ ಅವರು ಶನಿವಾರ ಬೆಂಗಳೂರಿಗೆ ಆಗಮಿಸಿದ್ದು ಸಭೆ ಆರಂಭಿಸಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಮತ್ತು ಆಕಾಂಕ್ಷಿಗಳ ವಿಚಾರದಲ್ಲಿ ಒಂದು ವರದಿಯನ್ನು ಸಿದ್ಧಪಡಿಸಲಿದ್ದಾರೆ. ಇದರ ಆಧಾರ ಮತ್ತು ಇತರ ಮಾರ್ಗದರ್ಶಿ ಸೂತ್ರಗಳ ನೆಲೆಯಲ್ಲಿ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನುವುದು ಈಗಿನ ಲೆಕ್ಕಾಚಾರ.

ಆದರೆ, ಈಗ ಎಲ್ಲದಕ್ಕಿಂತ ಜಾತಿ ಲೆಕ್ಕಾಚಾರ ಮತ್ತು ಲಾಬಿಯೇ ಮುಂಚೂಣಿಗೆ ಬಂದು ನಿಂತಿದೆ. ಕಾಂಗ್ರೆಸ್‌ ಟಿಕೆಟ್‌ ಪಡೆಯಲು ನಾಯಕರು ತಮ್ಮ ವೈಯಕ್ತಿಕ ವರ್ಚಸ್ಸಿನ ಜತೆಗೆ ಜಾತಿಯನ್ನೂ ಮುಂದಿಟ್ಟುಕೊಂಡಿದ್ದಾರೆ. ಇನ್ನು ಅಭ್ಯರ್ಥಿಗಳ ಜತೆಗೆ ಸಮುದಾಯದ ನಾಯಕರು ತಮ್ಮ ಸಮುದಾಯಕ್ಕೆ ಹೆಚ್ಚೆಚ್ಚು ಟಿಕೆಟ್‌ ಕೊಡಬೇಕು ಎಂದು ಒತ್ತಡ ಹೇರಲು ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆಯಲ್ಲಿ ಪ್ರಧಾನ ಸೂತ್ರಧಾರಿಗಳಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ʻʻಗೆಲುವೊಂದೇ ಮಾನದಂಡʼʼ ಎಂದು ಹೇಳಿದ್ದಾರಾದರೂ ಅದನ್ನು ಮೀರಿಸುವಂತೆ ಜಾತಿವಾರು ಲಾಬಿಗಳು ಮುಂದುವರಿದಿವೆ. ಈ ಒತ್ತಡದಿಂದ ಪಾರಾಗಲೂ ಈ ಇಬ್ಬರು ನಾಯಕರು ಹೈಕಮಾಂಡ್‌ ಕಡೆಗೆ ಕೈ ತೋರಿಸುತ್ತಿದ್ದಾರೆ. ಆದರೆ, ಈ ತಂತ್ರ ಎಷ್ಟರ ಮಟ್ಟಿಗೆ ಫಲ ನೀಡುತ್ತದೆ ಎಂದು ಕಾದು ನೋಡಬೇಕಾಗಿದೆ.

ಸಮುದಾಯಗಳ ಒತ್ತಡ ಹೇಗೆ?

ಸಮುದಾಯಗಳ ನಾಯಕರು ತಮ್ಮ ತಮ್ಮ ನಾಯಕರ ಮೂಲಕ ಒತ್ತಡ ಹೇರುತ್ತಿದ್ದು ಇದರಿಂದ ತಪ್ಪಿಸಿಕೊಳ್ಳಲು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ಹೈಕಮಾಂಡ್‌ ಕಡೆಗೆ ಬೊಟ್ಟು ಮಾಡಿದ್ದಾರೆ.

ಹಲವಾರು ಟಿಕೆಟ್‌ ಆಕಾಂಕ್ಷಿಗಳು ಸಮುದಾಯದ ಮುಖಂಡರ ಸಭೆಗಳನ್ನು ನಡೆಸಿದ್ದು, ಮುಖಂಡರ ನಿಯೋಗಗಳ ಮೂಲಕ ಹೈಕಮಾಂಡ್‌ ನಾಯಕರನ್ನು ತಲುಪುವ ಪ್ರಯತ್ನ ನಡೆಸಿದ್ದಾರೆ.

ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು, ಮುಸ್ಲಿಂ ಮುಖಂಡರು, ಒಕ್ಕಲಿಗ ಮುಖಂಡರು ಈಗಾಗಲೇ ಸಭೆಯನ್ನು ಮುಗಿಸಿದ್ದಾರೆ. ಫೆಬ್ರವರಿ 13‌ರಂದು ಕಾಂಗ್ರೆಸ್ ಲಿಂಗಾಯತ ನಾಯಕರ ಸಭೆ ಆಯೋಜನೆಗೊಂಡಿದೆ. ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂಬಿ ಪಾಟೀಲ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ಯಾವ ಸಮುದಾಯದಿಂದ ಎಷ್ಟು ಟಿಕೆಟ್‌ಗೆ ಬೇಡಿಕೆ?
ಪಂಚಮಸಾಲಿ ಹಾಗೂ ಲಿಂಗಾಯತ 65
ಪರಿಶಿಷ್ಟ ಜಾತಿ ಎಡ ಪಂಗಡ- ೧೫
ಪರಿಶಿಷ್ಟ ಜಾತಿ ಬಲ ಪಂಗಡ- ೧೫
ಪರಿಶಿಷ್ಟ ಪಂಗಡ- ೨೦
ಒಕ್ಕಲಿಗ – 48
ಒಬಿಸಿ -52
ಮುಸ್ಲಿಂ – 24

2018 ರಲ್ಲಿ ಯಾವ ಸಮುದಾಯಕ್ಕೆ ಕೊಟ್ಟ ಟಿಕೆಟ್‌ನಲ್ಲಿ ಎಷ್ಟು ಗೆಲವು?

ಲಿಂಗಾಯತ:‌ ಟಿಕೆಟ್ 47, ಜಯ-೧೭
ಒಕ್ಕಲಿಗ: ಟಿಕೆಟ್‌ ೪೬, ಜಯ-೧೫
ಒಬಿಸಿ: ಟಿಕೆಟ್‌ ೫೦, ಜಯ-೧೫
ಮುಸ್ಲಿಂ: ಟಿಕೆಟ್‌ ೧೭, ಜಯ-೭
ಕ್ರಿಶ್ಚಿಯನ್‌: ಟಿಕೆಟ್‌ ೨, ಜಯ- ೧
ಜೈನ್: ಟಿಕೆಟ್‌ 2, ಜಯ-೦
ಬ್ರಾಹ್ಮಣ: ಟಿಕೆಟ್‌ ೬, ಜಯ-೪
ಎಸ್‌ಸಿ ಬಲ: ಟಿಕೆಟ್‌ ೧೪, ಜಯ-೫
ಎಸ್‌ಸಿ ಎಡ: ಟಿಕೆಟ್‌ ೯, ಜಯ-೧
ಎಸ್‌ಟಿ: ಟಿಕೆಟ್‌ ೧೭, ಜಯ-೯

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide: ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು.

VISTARANEWS.COM


on

wayanad landslide mandya family
Koo

ಚಾಮರಾಜನಗರ: ಭಯಾನಕ ವೈನಾಡ್‌ ಭೂಕುಸಿತ (Wayanad Landslide, Kerala Landslide) ದುರಂತದಲ್ಲಿ ಮಂಡ್ಯ ಮೂಲದ ಇಡೀ ಕುಟುಂಬವೇ (Mandya Family swept) ಕೊಚ್ಚಿಹೋಗಿದೆ. 9 ಜನರ ಕುಟುಂಬ ಸಂಪೂರ್ಣ ನಾಶವಾಗಿದ್ದು, ಮೂವರ ಶವ ಪತ್ತೆಯಾಗಿದೆ. ಇನ್ನೂ ಆರು ಮಂದಿಯ ದೇಹಗಳು ಪತ್ತೆಯಾಗಬೇಕಿವೆ.

ಸೋಮವಾರ ನಡೆದ ಭಾರೀ ಭೂಕುಸಿತದಲ್ಲಿ ಮಂಡ್ಯ ಮೂಲದ ಕುಟುಂಬದ 9 ಜನ ಕಾಣೆಯಾಗಿದ್ದಾರೆ. ಈ ಪೈಕಿ ಮೂವರ ಶವಗಳನ್ನು ರಕ್ಷಣಾ ತಂಡಗಳು ಹೊರ ತೆಗೆದಿವೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಈ ಕುಟುಂಬ ಇಲ್ಲಿನ ಟೀ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಸಾವಿತ್ರಿ, ಅವರ ಮೊಮ್ಮಗ ಅಚ್ಚು, ಸವಿತಾ ಎಂಬವರ ಪುತ್ರ ಶ್ರೀಕುಟ್ಟಿ ಸಾವಿಗೀಡಾಗಿರುವುದು ಖಚಿತವಾಗಿದೆ. ಇನ್ನುಳಿದ ಆರು ಜನರಿಗಾಗಿ ಹುಡುಕಾಟ ಮುಂದುವರಿದಿದೆ. ಇವರು ಕೇರಳಕ್ಕೆ ಬಂದು ನೆಲೆಸಿ 30 ವರ್ಷಗಳು ಆಗಿವೆ.

ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ಪಾರಾದ ಕನ್ನಡಿಗ ಕಾರು ಚಾಲಕ

ಬೆಂಗಳೂರು: ಒಂದು ಅಲರ್ಟ್‌ ಮೆಸೇಜ್‌ ಪರಿಣಾಮ ಕನ್ನಡಿಗ ಕಾರು ಚಾಲಕನೊಬ್ಬ ವೈನಾಡಿನ ರುದ್ರಭಯಾನಕ ಭೂಕುಸಿತದ ನಡುವೆ ಜೀವ ಉಳಿಸಿಕೊಂಡಿದ್ದಾರೆ. ಸಾವಿನೂರಿಂದ ಈತ ಬಚಾವ್ ಆಗಿ ಬಂದದ್ದೇ ರೋಚಕ. ಮಿಡ್‌ನೈಟ್ ಬಂದ ಅದೊಂದು ಮೆಸೇಜ್ ಯುವಕನ ಪ್ರಾಣ ಉಳಿಸಿದ ಕತೆ ಇಲ್ಲಿದೆ.

ಬೆಂಗಳೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿರುವ ಹಾವೇರಿ ಮೂಲದ ಮಂಜುನಾಥ್‌, ಇಬ್ಬರು ಯುವಕರು ಹಾಗೂ ಯುವತಿಯರನ್ನು ಬಾಡಿಗೆ ಕರೆದುಕೊಂಡು ವೈನಾಡ್‌ಗೆ ಹೋಗಿದ್ದರು. ದಂಪತಿಗಳು ಉತ್ತರ ಭಾರತ ಮೂಲದವರು. ಎರಡೂ ಜೋಡಿ ವಯನಾಡ್‌ನ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ. ಆದರೆ ಚಾಲಕ ಇದ್ಯಾವುದರ ಪರಿವೆಯೇ ಇಲ್ಲದೆ ನಿದ್ದೆಗೆ ಜಾರಿದ್ದರು. ಭೂಕುಸಿತದ ಬಳಿಕ ನದಿ ಪಾತ್ರ ವಿಶಾಲವಾಗಿದ್ದು, 15 ಅಡಿ ಅಗಲದ ನದಿ 150 ಅಡಿಗಳಷ್ಟು ಅಗಲವಾಗಿ ಮಣ್ಣು ಕಲ್ಲು ಮರಗಳನ್ನು ತುಂಬಿಕೊಂಡು ಅಬ್ಬರಿಸಿ ಹರಿದಿದೆ. ಮಂಜುನಾಥ್‌ ಕಾರಿಗೂ ಜಲದಿಗ್ಬಂಧನವಾಗಿದೆ.

ನೀರಿನ ಹೊಡೆತಕ್ಕೆ ಕಾರು ಉಲ್ಟಾ ಮುಖ ಮಾಡಿದೆ. ಈ ವೇಳೆ ಚಾಲಕ ತರಾತುರಿಯಲ್ಲಿ ಕಾರ್ ಚಲಾಯಿಸಲು ಮುಂದಾಗಿದ್ದ. ಕಾರು ಆನ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾರಿನ‌‌ ಮಾಲಕ ಸಚಿನ್‌ಗೆ ಅಲರ್ಟ್‌ ಮೆಸೇಜ್ ಹೋಗಿದೆ. ಸಚಿನ್‌ ಮೊಬೈಲ್‌ನಲ್ಲಿ ಕಾರಿನ ಆಕ್ಸೆಸ್ ಹೊಂದಿದ್ದರು. ಜಿಪಿಎಸ್ ಆನ್ ಆಗುತ್ತಿದ್ದಂತೆ ಆಟೋಮ್ಯಾಟಿಕ್ ಮೆಸೇಜ್ ಬಂದಿತ್ತು. ಹೊತ್ತಲ್ಲದ ಹೊತ್ತಿನಲ್ಲಿ ಗಾಡಿ ಆನ್ ಆದ ಮೆಸೇಜ್ ನೋಡಿ ಮಾಲೀಕ ಚಕಿತರಾಗಿ, ಕೂಡಲೇ ಈ ವಿಚಾರವಾಗಿ ಚಾಲಕನಿಗೆ ಕಾಲ್ ಮಾಡಿದ್ದಾರೆ.

ಈ ವೇಳೆ ಪ್ರವಾಹದ ಬಗ್ಗೆ ಚಾಲಕ ಮಂಜುನಾಥ್‌ ವಿವರಿಸಿದ್ದರು. ಮಂಜುನಾಥ್‌ಗೆ ಧೈರ್ಯ ತುಂಬಿದ್ದ ಮಾಲೀಕ ಸಚಿನ್, ಅದೇ ಜಾಗದಲ್ಲಿದ್ದ ತನ್ನ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದರು. ಇದರಿಂದ ಚಾಲಕನ ಸಹಾಯಕ್ಕೆ ಜನ ಬಂದಿದ್ದಾರೆ. ನಂತರ ಜಿಪಿಎಸ್ ಟ್ರ್ಯಾಕ್ ಮಾಡಿ ಚಾಲಕನನ್ನು ಕೆಸರು ನೀರಿನ ಮಧ್ಯದಿಂದ ರಕ್ಷಣೆ ಮಾಡಲಾಗಿದೆ. ಬದುಕುಳಿದು ಬಂದಿರುವ ಮಂಜುನಾಥ್‌, ತಮ್ಮನ್ನು ಕಾಪಾಡಿದವರಿಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Continue Reading

ವೈರಲ್ ನ್ಯೂಸ್

Wayanad Landslide: ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ವೈನಾಡಿನ ದುರಂತದ ನಡುವೆ ಪಾರಾದ ಕನ್ನಡಿಗ ಕಾರು ಚಾಲಕ

Wayanad Landslide: ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ.

VISTARANEWS.COM


on

wayanad landslide car driver
Koo

ಬೆಂಗಳೂರು: ಒಂದು ಅಲರ್ಟ್‌ ಮೆಸೇಜ್‌ ಪರಿಣಾಮ ಕನ್ನಡಿಗ ಕಾರು ಚಾಲಕನೊಬ್ಬ (Bangalore Car Driver) ವೈನಾಡಿನ ರುದ್ರಭಯಾನಕ ಭೂಕುಸಿತದ (Wayanad Landslide, Kerala Landslide) ನಡುವೆ ಜೀವ ಉಳಿಸಿಕೊಂಡಿದ್ದಾರೆ. ಸಾವಿನೂರಿಂದ ಈತ ಬಚಾವ್ ಆಗಿ ಬಂದದ್ದೇ ರೋಚಕ. ಮಿಡ್‌ನೈಟ್ ಬಂದ ಅದೊಂದು ಮೆಸೇಜ್ ಯುವಕನ ಪ್ರಾಣ ಉಳಿಸಿದ ಕತೆ (Viral news) ಇಲ್ಲಿದೆ.

ಬೆಂಗಳೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿರುವ ಹಾವೇರಿ ಮೂಲದ ಮಂಜುನಾಥ್‌, ಇಬ್ಬರು ಯುವಕರು ಹಾಗೂ ಯುವತಿಯರನ್ನು ಬಾಡಿಗೆ ಕರೆದುಕೊಂಡು ವೈನಾಡ್‌ಗೆ ಹೋಗಿದ್ದರು. ದಂಪತಿಗಳು ಉತ್ತರ ಭಾರತ ಮೂಲದವರು. ಎರಡೂ ಜೋಡಿ ವಯನಾಡ್‌ನ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಮಂಜುನಾಥ್ ರೆಸಾರ್ಟ್‌ನಿಂದ ಸ್ವಲ್ಪ ದೂರದಲ್ಲಿ ಕಾರು ನಿಲ್ಲಿಸಿ, ಅದೇ ಕಾರಿನಲ್ಲಿ ರಾತ್ರಿ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿ ಒಂದು ಗಂಟೆ 15 ನಿಮಿಷಕ್ಕೆ ಭೂ ಕುಸಿತವಾಗಿದೆ. ಇದರಿಂದ ರೆಸಾರ್ಟ್‌ನಲ್ಲಿದ್ದ ಹಲವರು ಮಣ್ಣುಪಾಲಾಗಿದ್ದಾರೆ. ಆದರೆ ಚಾಲಕ ಇದ್ಯಾವುದರ ಪರಿವೆಯೇ ಇಲ್ಲದೆ ನಿದ್ದೆಗೆ ಜಾರಿದ್ದರು. ಭೂಕುಸಿತದ ಬಳಿಕ ನದಿ ಪಾತ್ರ ವಿಶಾಲವಾಗಿದ್ದು, 15 ಅಡಿ ಅಗಲದ ನದಿ 150 ಅಡಿಗಳಷ್ಟು ಅಗಲವಾಗಿ ಮಣ್ಣು ಕಲ್ಲು ಮರಗಳನ್ನು ತುಂಬಿಕೊಂಡು ಅಬ್ಬರಿಸಿ ಹರಿದಿದೆ. ಮಂಜುನಾಥ್‌ ಕಾರಿಗೂ ಜಲದಿಗ್ಬಂಧನವಾಗಿದೆ.

ನೀರಿನ ಹೊಡೆತಕ್ಕೆ ಕಾರು ಉಲ್ಟಾ ಮುಖ ಮಾಡಿದೆ. ಈ ವೇಳೆ ಚಾಲಕ ತರಾತುರಿಯಲ್ಲಿ ಕಾರ್ ಚಲಾಯಿಸಲು ಮುಂದಾಗಿದ್ದ. ಕಾರು ಆನ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾರಿನ‌‌ ಮಾಲಕ ಸಚಿನ್‌ಗೆ ಅಲರ್ಟ್‌ ಮೆಸೇಜ್ ಹೋಗಿದೆ. ಸಚಿನ್‌ ಮೊಬೈಲ್‌ನಲ್ಲಿ ಕಾರಿನ ಆಕ್ಸೆಸ್ ಹೊಂದಿದ್ದರು. ಜಿಪಿಎಸ್ ಆನ್ ಆಗುತ್ತಿದ್ದಂತೆ ಆಟೋಮ್ಯಾಟಿಕ್ ಮೆಸೇಜ್ ಬಂದಿತ್ತು. ಹೊತ್ತಲ್ಲದ ಹೊತ್ತಿನಲ್ಲಿ ಗಾಡಿ ಆನ್ ಆದ ಮೆಸೇಜ್ ನೋಡಿ ಮಾಲೀಕ ಚಕಿತರಾಗಿ, ಕೂಡಲೇ ಈ ವಿಚಾರವಾಗಿ ಚಾಲಕನಿಗೆ ಕಾಲ್ ಮಾಡಿದ್ದಾರೆ.

ಈ ವೇಳೆ ಪ್ರವಾಹದ ಬಗ್ಗೆ ಚಾಲಕ ಮಂಜುನಾಥ್‌ ವಿವರಿಸಿದ್ದರು. ಮಂಜುನಾಥ್‌ಗೆ ಧೈರ್ಯ ತುಂಬಿದ್ದ ಮಾಲೀಕ ಸಚಿನ್, ಅದೇ ಜಾಗದಲ್ಲಿದ್ದ ತನ್ನ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದರು. ಇದರಿಂದ ಚಾಲಕನ ಸಹಾಯಕ್ಕೆ ಜನ ಬಂದಿದ್ದಾರೆ. ನಂತರ ಜಿಪಿಎಸ್ ಟ್ರ್ಯಾಕ್ ಮಾಡಿ ಚಾಲಕನನ್ನು ಕೆಸರು ನೀರಿನ ಮಧ್ಯದಿಂದ ರಕ್ಷಣೆ ಮಾಡಲಾಗಿದೆ. ಬದುಕುಳಿದು ಬಂದಿರುವ ಮಂಜುನಾಥ್‌, ತಮ್ಮನ್ನು ಕಾಪಾಡಿದವರಿಗೆ ಧನ್ಯವಾದ ಹೇಳಿದ್ದಾರೆ.

ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಸಂಭವಿಸಿದ ರುದ್ರಭಯಾನಕ ಭೂಕುಸಿತದಲ್ಲಿ (Wayanad landslide, Kerala Landslide) ಚಾಮರಾಜನಗರ ಮೂಲದ ಕುಟುಂಬವೊಂದನ್ನು ಅವರು ಸಾಕಿದ ಹಸು ವಿಚಿತ್ರ ರೀತಿಯಲ್ಲಿ ಪಾರು ಮಾಡಿದ ಘಟನೆ ನಡೆದಿದೆ.

ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೇಪ್ಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್‌ಮಲೆಯಲ್ಲಿದ್ದರು. ಚೂರಲ್‌ಮಲೆಗೂ ಮೇಪ್ಪಾಡಿಗೂ 6 ಕಿಮೀ ದೂರವಿದ್ದು, ಭೂಕುಸಿತ ಉಂಟಾಗುವ ಕೆಲವು ಸಮಯಕ್ಕೆ ಮುನ್ನ ಇವರು ಪಾರಾಗಿ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾರೆ.

ಅದು ಘಟಿಸಿದ್ದು ಹೀಗೆ. ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡಿದ್ದಾರೆ. ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ. ನೋಡನೋಡುತ್ತಿದ್ದಂತೆ ಇವರು ಇದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ. ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೇಪ್ಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದಾರೆ. ಪ್ರವಿದಾ, ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.

ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತರರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸಾಕಿದ್ದ ಹಸು ದೇವರಂತೆ ಅಪಾಯದ ಬಗ್ಗೆ ಕುಟುಂಬಕ್ಕೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರುಮಾಡಿದೆ. ಆದರೆ ಇವರನ್ನು ಕಾಪಾಡಿದ ಹಸು ಉಳಿದಿದೆಯೋ ಇಲ್ಲವೋ ತಿಳಿದುಬಂದಿಲ್ಲ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Continue Reading

ವೈರಲ್ ನ್ಯೂಸ್

Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Wayanad Landslide: ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ.

VISTARANEWS.COM


on

wayanad landslide cow rescues family
Koo

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಸಂಭವಿಸಿದ ರುದ್ರಭಯಾನಕ ಭೂಕುಸಿತದಲ್ಲಿ (Wayanad landslide, Kerala Landslide) ಚಾಮರಾಜನಗರ ಮೂಲದ ಕುಟುಂಬವೊಂದನ್ನು ಅವರು ಸಾಕಿದ ಹಸು ವಿಚಿತ್ರ ರೀತಿಯಲ್ಲಿ ಪಾರು ಮಾಡಿದ ಘಟನೆ (Viral news) ನಡೆದಿದೆ.

ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೇಪ್ಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್‌ಮಲೆಯಲ್ಲಿದ್ದರು. ಚೂರಲ್‌ಮಲೆಗೂ ಮೇಪ್ಪಾಡಿಗೂ 6 ಕಿಮೀ ದೂರವಿದ್ದು, ಭೂಕುಸಿತ ಉಂಟಾಗುವ ಕೆಲವು ಸಮಯಕ್ಕೆ ಮುನ್ನ ಇವರು ಪಾರಾಗಿ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾರೆ.

ಅದು ಘಟಿಸಿದ್ದು ಹೀಗೆ. ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡಿದ್ದಾರೆ. ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ. ನೋಡನೋಡುತ್ತಿದ್ದಂತೆ ಇವರು ಇದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ. ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೇಪ್ಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದಾರೆ. ಪ್ರವಿದಾ, ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.

ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತರರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸಾಕಿದ್ದ ಹಸು ದೇವರಂತೆ ಅಪಾಯದ ಬಗ್ಗೆ ಕುಟುಂಬಕ್ಕೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರುಮಾಡಿದೆ. ಆದರೆ ಇವರನ್ನು ಕಾಪಾಡಿದ ಹಸು ಉಳಿದಿದೆಯೋ ಇಲ್ಲವೋ ತಿಳಿದುಬಂದಿಲ್ಲ.

ನಾಲ್ವರ ಶವ ಪತ್ತೆ, ಉಳಿದವರಿಗೆ ಶೋಧ ಮುಂದುವರಿಕೆ

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5) ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

Continue Reading

ಕ್ರೈಂ

Drowned: ಆತ್ಮಹತ್ಯೆಗಾಗಿ ನದಿಗೆ ಹಾರಿದ ಮಹಿಳೆ ರಕ್ಷಣೆ, ಬದುಕಿಸಲು ಹೋದ ಗಂಡ- ಬಂಧು ಜಲಸಮಾಧಿ

Drowned: ಮಹಿಳೆ ಲಕ್ಷ್ಮೀ ಶಿವಾನಂದ್(28) ನದಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ್ದರು. ಪತ್ನಿ ನದಿಗೆ ಹಾರಿದ್ದನ್ನು ಕಂಡು ಲಕ್ಷ್ಮಿಯ ಗಂಡ ಶಿವಾನಂದ್ ಹಾಗೂ‌ ಸಂಬಂದಿ ರಾಜೂ ಅಂಕಲಗಿ ಆಕೆಯನ್ನು ರಕ್ಷಿಸಲು ನದಿಗೆ ಜಂಪ್ ಮಾಡಿದ್ದರು.

VISTARANEWS.COM


on

drowned kalaburagi
ಲಕ್ಷ್ಮಿ, ಶಿವಾನಂದ, ರಾಜು
Koo

ಕಲಬುರಗಿ: ಆತ್ಮಹತ್ಯೆ ಮಾಡಿಕೊಳ್ಳಲೆಂದು (Self harming attempt) ಭೀಮಾ ನದಿಗೆ (Bhima River) ಹಾರಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯ ರಕ್ಷಣೆಗೆ (Rescue) ಹೋದ ಇಬ್ಬರು ಸಂಬಂಧಿಕರು ನೀರುಪಾಲು (Drowned) ಆಗಿದ್ದಾರೆ. ಮಹಿಳೆಯನ್ನು ಇತರರು ರಕ್ಷಣೆ ಮಾಡಿದ್ದಾರೆ. ಘಟನೆ ಕಲಬುರಗಿ (Kalaburagi news) ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿಯ ಭೀಮಾ ಬ್ರಿಡ್ಜ್ ಸಮೀಪ ನಡೆದಿದೆ.

ಮಹಿಳೆ ಲಕ್ಷ್ಮೀ ಶಿವಾನಂದ್(28) ನದಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ್ದರು. ಪತ್ನಿ ನದಿಗೆ ಹಾರಿದ್ದನ್ನು ಕಂಡು ಲಕ್ಷ್ಮಿಯ ಗಂಡ ಶಿವಾನಂದ್ ಹಾಗೂ‌ ಸಂಬಂದಿ ರಾಜೂ ಅಂಕಲಗಿ ಆಕೆಯನ್ನು ರಕ್ಷಿಸಲು ನದಿಗೆ ಜಂಪ್ ಮಾಡಿದ್ದರು. ನದಿಯಲ್ಲಿ ಸುಮಾರು 800 ಮೀಟರ್ ದೂರದಲ್ಲಿ ಮಹಿಳೆಯನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ. ಲಕ್ಷ್ಮೀ ರಕ್ಷಣೆಗೆ ಹೋದ ಗಂಡ ಹಾಗೂ ಸಂಬಂಧಿ ನೀರು ಪಾಲಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಶಿವಾನಂದ ಪತ್ನಿ ಲಕ್ಷ್ಮಿ ಭಿಮಾ ನದಿಗೆ ಹಾರಿದ್ದಳು.

ಇವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕಡಣಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ‌ ಸಿಬ್ಬಂದಿಗಳು ಹಾಗೂ ಅಫಜಲಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಶವ ಪತ್ತೆ ಹಚ್ಚಿದ್ದಾರೆ. ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿಗೆ ಚಿಕಿತ್ಸೆ ಕೊಡಿಸಲಾಗಿದೆ. ಕಲಬುರಗಿ ಎಸ್ಪಿ ಅಡ್ಡೂರು‌ ಶ್ರೀನಿವಾಸಲು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading
Advertisement
Sruthi Hariharan female friendship nangeallava shashwati chandrashekar
ಸ್ಯಾಂಡಲ್ ವುಡ್12 mins ago

Sruthi Hariharan: ʻನೀ ನಂಗೆ ಅಲ್ಲವಾʼ? ಎಂದು ಸ್ನೇಹಿತೆಯ ಜತೆ ಪೋಸ್‌ ಕೊಟ್ಟ ಮೂಗುತಿ ಸುಂದರಿ ಶ್ರುತಿ ಹರಿಹರನ್!

wayanad landslide mandya family
ಮಂಡ್ಯ20 mins ago

Wayanad Landslide: ಮಂಡ್ಯದ 9 ಜನರ ಕುಟುಂಬ ಭೂಕುಸಿತದಲ್ಲಿ ಸಂಪೂರ್ಣ ಕಣ್ಮರೆ

Wayanad Landslide
ದೇಶ22 mins ago

Wayanad Landslide: ಎಲ್ಲೆಂದರಲ್ಲಿ ಹೆಣಗಳ ರಾಶಿ; ಕೊಚ್ಚಿ ಹೋದ ಬದುಕು: ಸ್ಮಶಾನದಂತಾದ ಭೂಲೋಕದ ಸ್ವರ್ಗ ವಯನಾಡು

Vanitha Vijaykumar Set To Tie The Knot Again
ಟಾಲಿವುಡ್34 mins ago

Vanitha Vijaykumar: 43 ವರ್ಷದ ನಟಿ ವನಿತಾ ವಿಜಯಕುಮಾರ್ 4ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು?

Viral Video
Latest42 mins ago

Viral Video: 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷ; ಹಾವಿನಂತೆ ವರ್ತನೆ ಕಂಡು ಜನ ಶಾಕ್‌-ವಿಡಿಯೋ ಇದೆ

Charminar Clock
Latest54 mins ago

Charminar Clock: 135 ವರ್ಷ ಇತಿಹಾಸ ಇರೋ ಚಾರ್‌ಮಿನಾರ್ ಗಡಿಯಾರ ಸೌಂದರ್ಯಕ್ಕೆ ಪಾರಿವಾಳಗಳಿಂದ ಧಕ್ಕೆ

Ram Pothineni Double iSmart Bachchan Director Breaks Silence On Clash
ಟಾಲಿವುಡ್57 mins ago

Ram Pothineni: ಗುರುವಿಗೆ ತಿರುಮಂತ್ರ ಹಾಕಿದ ಶಿಷ್ಯ; ನಟನ ಅನ್​ಫಾಲೋ ಮಾಡಿದ ಖ್ಯಾತ ನಟಿ!

wayanad landslide car driver
ವೈರಲ್ ನ್ಯೂಸ್1 hour ago

Wayanad Landslide: ಒಂದು ಮೆಸೇಜ್‌ನಿಂದ ಉಳಿಯಿತು ಜೀವ! ವೈನಾಡಿನ ದುರಂತದ ನಡುವೆ ಪಾರಾದ ಕನ್ನಡಿಗ ಕಾರು ಚಾಲಕ

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಶಾಕ್‌; 10 ಗ್ರಾಂಗೆ 800 ರೂ. ಹೆಚ್ಚಳ

anurag thakur
ದೇಶ1 hour ago

Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ23 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌