Karnataka Election: ರಾಜ್ಯದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಮತದಾರರು ಇರುವ ಕ್ಷೇತ್ರಗಳ ಮಾಹಿತಿ ಇಲ್ಲಿದೆ - Vistara News

ಕರ್ನಾಟಕ

Karnataka Election: ರಾಜ್ಯದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಮತದಾರರು ಇರುವ ಕ್ಷೇತ್ರಗಳ ಮಾಹಿತಿ ಇಲ್ಲಿದೆ

ಕಳೆದ ಬಾರಿ 60 ಇದ್ದ ಹಣಕಾಸು ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಈ ಬಾರಿ 81ಕ್ಕೆ ಏರಿದ್ದು, ಈ ಕ್ಷೇತ್ರಗಳಲ್ಲಿ ಹಣದ ಹೊಳೆಯ ಕುರಿತು ಚುನಾವಣಾ ಆಯೋಗ ತೀವ್ರ ನಿಗಾ ವಹಿಸಲಿದೆ.

VISTARANEWS.COM


on

karnataka election more voters and less voters constituency details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Karnataka Election) ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆಯಾಗಲಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 5,23,63,948 ಮತದಾರರಿದ್ದಾರೆ.
ಪುರುಷ ಮತದಾರರ ಸಂಖ್ಯೆ 2,63,32,445
ಮಹಿಳಾ ಮತದಾರರ ಸಂಖ್ಯೆ 2,60,26,752
ತೃತೀಯ ಲಿಂಗಿಗಳ ಸಂಖ್ಯೆ 4,751 ಇದೆ.
18-19 ವರ್ಷದ ಮತದಾರರ ಸಂಖ್ಯೆ 9,58,806
80 ವರ್ಷ ದಾಟಿದ ಮತದಾರರ ಸಂಖ್ಯೆ 12,15,142
ಅಂಗವಿಕಲ ಮತದಾರರ ಸಂಖ್ಯೆ 5,60,908 ಇದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಮತದಾರರನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿದ್ದು, 6,77,247 ಮತದಾರರಿದ್ದಾರೆ. ಕರ್ನಾಟಕದಲ್ಲಿ ಅತಿ ಕಡಿಮೆ ಮತದಾರರನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರ(1,68,564) ಹೊಂದಿದೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳಿದ್ದು, ಬೆಳಗಾವಿ ಜಿಲ್ಲೆಯು ಅತಿಹೆಚ್ಚು-4434- ಮತಗಟ್ಟೆಗಳನ್ನು ಹೊಂದಿದೆ. ಕೊಡಗು ಜಿಲ್ಲೆಯು ಅತಿ ಕಡಿಮೆ-542- ಮತಗಟ್ಟೆಗಳನ್ನು ಹೊಂದಿದೆ.

ಕನಿಷ್ಠ ಮೂಲಭೂತ ಸೌಕರ್ಯ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಎಲ್ಲ ಮತಗಟ್ಟೆಗಳಲ್ಲೂ ಕನಿಷ್ಠ ಮೂಲಭೂತ ಸೌಕರ್ಯ ನೀಡಲು ಚುನಾವಣಾ ಆಯೋಗ ಮುಂದಾಗಿದೆ. ಅಂಗವಿಕಲರು, ವೃದ್ಧರಿಗಾಗಿ ರ‍್ಯಾಂಪ್‌ ಸೌಲಭ್ಯವನ್ನು ಶೇ. 98.63 ಮತಗಟ್ಟೆಗಳಲ್ಲಿ ರೂಪಿಸಲಾಗಿದೆ. ಕುಡಿಯುವ ನೀರು ಶೇ.99.86, ವಿದ್ಯುತ್‌ ಸಂಪರ್ಕ ಶೇ. 99.55, ಪೀಠೋಪಕರಣಗಳು ಶೇ.99.84, ಕಾಯುವ ಕೊಠಡಿಗಳು ಶೇ.99.45, ಪುರುಷರ ಶೌಚಾಲಯ ಶೇ.98.41, ಮಹಿಳೆಯರ ಶೌಚಾಲಯ ಶೇ.98.10, ಮಾರ್ಗಸೂಚಿ ಫಲಕಗಳನ್ನು ಶೇ.98.36 ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ. ಮತಗಟ್ಟೆ ಸ್ಥಾಪನೆಗೆ ಇನ್ನೂ ಸಮಯ ಇರುವುದರಿಂದ ಶೇ. 100 ಮತಗಟ್ಟೆಗಳಲ್ಲೂ ಕನಿಷ್ಠ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangladesh Unrest: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Bangladesh Unrest: ಬಾಂಗ್ಲಾದೇಶದ ಹಿಂದೂಗಳ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಭಾರತ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹಿಸಿದ್ದಾರೆ.

VISTARANEWS.COM


on

Bangladesh Unrest
Koo

ಬೆಂಗಳೂರು: ಬಾಂಗ್ಲಾದೇಶದ ಹಿಂದೂಗಳ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಭಾರತ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು (Bangladesh Unrest) ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಅವರು, ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಈಗ ಹಿಂದೂಗಳ ವಿರುದ್ಧ ಪ್ರಾರಂಭವಾಗಿವೆ. ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಗುರಿ ಮಾಡಲಾಗುತ್ತಿದ್ದು, ಅವರನ್ನು ಬಹಿರಂಗವಾಗಿ ಹತ್ಯೆ ಮಾಡುವುದು, ಹಿಂದೂಗಳ ಮನೆಯ ಮೇಲೆ ದಾಳಿ ಮಾಡುವುದು, ಹಿಂದೂಗಳ ಅಂಗಡಿಗಳನ್ನು ಲೂಟಿ ಮಾಡುವುದು, ಹಿಂದೂಗಳ ದೇವಸ್ಥಾನಗಳು ಧ್ವಂಸಗೊಳಿಸುವುದು, ಬೆಂಕಿ ಹಚ್ಚುವುದು, ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂದೂಗಳನ್ನು ಸ್ಥಳಾಂತರಿಸುವುದು ಮುಂತಾದ ದೌರ್ಜನ್ಯಗಳು ನಡೆಯುತ್ತಿವೆ. ಇದರಿಂದಾಗಿ ಅಲ್ಲಿಯ ಅಲ್ಪಸಂಖ್ಯಾತ ಹಿಂದೂಗಳಲ್ಲಿ ಭಯದ ವಾತಾವರಣ ಉದ್ಭವಿಸಿದೆ.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಸೈನ್ಯದಿಂದ ಹಿಂದೂಗಳ ರಕ್ಷಣೆ ಮಾಡುವುದೆಂದು ಆಶ್ವಾಸನೆ ನೀಡಿದ್ದರೂ ಭಾರತ ಸರ್ಕಾರವು ಅವರ ಮೇಲೆ ಅವಲಂಬಿಸಿರದೇ ಹಿಂದೂ ಜನಾಂಗ ಮತ್ತು ದೇವಸ್ಥಾನ ರಕ್ಷಣೆಗಾಗಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದೆ.

ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಅವರಿಗೆ ತಕ್ಷಣ ರಕ್ಷಣೆ ನೀಡಬೇಕು. ಇಲ್ಲಿಯವರೆಗೆ ಅಲ್ಲಿಯ ಹಿಂದೂಗಳ ಜೀವ ಮತ್ತು ಸಂಪತ್ತಿಯ ಏನೆಲ್ಲಾ ಹಾನಿ ಉಂಟಾಗಿದೆ, ಅದಕ್ಕೆ ತಕ್ಷಣ ಪರಿಹಾರ ನೀಡಬೇಕು. ಭಾರತ ಸರ್ಕಾರವು ಈ ವಿಷಯ ತ್ವರಿತವಾಗಿ ವಿಶ್ವಸಂಸ್ಥೆಯಲ್ಲಿ ಮಂಡಿಸಿ ಬಾಂಗ್ಲಾದೇಶದಲ್ಲಿನ ವಿಶ್ವಸಂಸ್ಥೆಯ ಸಂಘಗಳ ಜತೆಗೆ ಶಿಷ್ಟ ಮಂಡಳಿಗೆ ಭೇಟಿ ನೀಡಲು ಆಗ್ರಹಿಸಬೇಕು.

ಇದನ್ನೂ ಓದಿ: ಬ್ಯಾಂಕ್‌ ಖಾತೆಗೆ ನಾಲ್ವರು ನಾಮಿನಿಗಳನ್ನು ಸೇರಿಸಲು ಅವಕಾಶ; ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆಯಲ್ಲಿ ಏನೇನು ಬದಲಾವಣೆ?

ಬಾಂಗ್ಲಾದೇಶದಲ್ಲಿನ ಹಿಂಸಾಚಾರದಿಂದ ರೋಸಿ ಹಿಂದೂಸ್ಥಾನಕ್ಕೆ ಬಂದಿರುವ ಹಿಂದೂಗಳಿಗೆ ನಾಗರಿಕ ಸುಧಾರಣಾ ಕಾನೂನಿನ ಮೂಲಕ (ಸಿಎಎ) ಭಾರತ ಸರ್ಕಾರವು ಆಶ್ರಯ ನೀಡಬೇಕು ಹಾಗೂ ಈ ಹಿಂದೆ ಕೂಡ ಸುಮಾರು 5 ಕೋಟಿ ಬಾಂಗ್ಲಾದೇಶಿ ನುಸುಳುಕೋರರು ಭಾರತದಲ್ಲಿ ನುಸುಳಿದ್ದಾರೆ. ಈ ಘಟನೆಯ ನಂತರ ಅವರ ನುಸುಳುವಿಕೆ ಹೆಚ್ಚಾಗುವ ಸಾಧ್ಯತೆಯನ್ನು ಗಮನಿಸಿದರೆ ಭಾರತೀಯ ಗಡಿಯಲ್ಲಿ ಸರಿಯಾದ ಬಂದೋಬಸ್ತ್ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Continue Reading

ಬೆಂಗಳೂರು

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

ED Raid: ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಚೇರಿ ಹಾಗೂ ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದಲೂ ದಾಖಲೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆ ನಡೆಯುತ್ತಿದೆ. ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

VISTARANEWS.COM


on

ed raid
Koo

ಬೆಂಗಳೂರು: ಬೆಂಗಳೂರು (Bangalore) ಹಾಗೂ ಧಾರವಾಡದಲ್ಲಿ (Dharwad) ಕೆಐಎಡಿಬಿ (KIADB) ಕಚೇರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ (ED Raid) ನಡೆಸಿದ್ದು, ನಿನ್ನೆ ಮುಂಜಾನೆಯಿಂದ ಆರಂಭವಾದ ದಾಖಲೆಗಳ ಪರಿಶೀಲನೆ ಇಂದೂ ಮುಂದುವರಿದಿದೆ.

ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಚೇರಿ ಹಾಗೂ ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದಲೂ ದಾಖಲೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆ ನಡೆಯುತ್ತಿದೆ. ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಭೂ ಸ್ವಾಧೀನ ಹೆಸರಲ್ಲಿ ಕೆಐಇಡಿಬಿ ಅಧಿಕಾರಿಗಳು ನೂರಾರು ಕೋಟಿ ಲೂಟಿ ಮಾಡಿದ ಆರೋಪವಿದೆ. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿದೆ. IDBI ಬ್ಯಾಂಕ್‌ನ ಒಂದೇ ಶಾಖೆಯಲ್ಲಿ 24 ನಕಲಿ ಖಾತೆಗಳನ್ನು ತೆರೆದು ಹಣ ಕಳಿಸಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನದ ಹೆಸರಲ್ಲಿ, ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿಯೂ ಲೂಟಿ ಮಾಡಲಾಗಿದೆ.

ನಿನ್ನೆ ಬೆಳಗ್ಗೆ 9 ಗಂಟೆಯಿಂದಲೂ ಇಡಿ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದು, ಕಚೇರಿಯನ್ನು ಇಂಚಿಂಚೂ ಜಾಲಾಡುತ್ತಿದ್ದಾರೆ. ಬರೋಬ್ಬರಿ 26 ಗಂಟೆಗಳಿಂದ ಶೋಧ ನಡೆಸುತ್ತಿದ್ದಾರೆ. ಧಾರವಾಡದ ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಓರ್ವ ಏಜೆಂಟ್‌ನನ್ನು ವಶಕ್ಕೆ ಪಡೆದಿದ್ದಾರೆ. ರವಿ ಕುರಬೇಟ್ ಎಂಬ ಏಜೆಂಟ್‌ನನ್ನು ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಧಾರವಾಡದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿ ಅನೇಕ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸಿಐಡಿ ತನಿಖೆಯಲ್ಲಿ 19.50 ಕೋಟಿ ರೂ. ಅಕ್ರಮ ನಡೆದಿರುವುದು ಪತ್ತೆಯಾಗಿತ್ತು. ಸಿಐಡಿ ಎಫ್‌ಐಆರ್ (CID FIR) ಆಧರಿಸಿ ಇಡಿ ತನಿಖೆಗಿಳಿದಿದೆ.

ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

ಬೆಂಗಳೂರು: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಸೀಟ್ ಹಂಚಿಕೆ ಮಾದರಿಯಂತೆ ಇನ್ನು ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ (Govt Quota Seats) ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಬಡ ವಿದ್ಯಾರ್ಥಿಗಳಿಗೆ ಬಿಎ, ಬಿಎಸ್ಸಿ, ಬಿ.ಕಾಂ ಸೇರಿ ಇನ್ನಿತರ ಪದವಿ ಕೋರ್ಸ್‌ ವ್ಯಾಸಂಗ ಮಾಡಲು ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲೂ ಅವಕಾಶ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಖಾಸಗಿ ಕಾಲೇಜುಗಳಲ್ಲಿ ಇನ್ಮುಂದೆ ಶೇ.40 ಸರ್ಕಾರಿ ಕೋಟಾದಡಿಯಲ್ಲಿ ಪದವಿ ಸೀಟ್‌ಗಳನ್ನ ಸರ್ಕಾರಕ್ಕೆ ಪಡೆಯಲು ಮುಂದಾದ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು 100ಕ್ಕೆ 100 ಮ್ಯಾನೇಜ್‌ಮೆಂಟ್ ಕೋಟಾದಡಿ ಸೀಟ್ ದಾಖಲಾತಿ ಇತ್ತು. ಖಾಸಗಿ ಕೋಟಾದಡಿಯೇ ಪದವಿ ದಾಖಲಾತಿ ಪಡೆಯುತ್ತಿದ್ದರು. ಹೀಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಕಟ್ಟಲಾಗದೆ ಪರದಾಡ್ತಾ ಇದ್ದರು.

ಸರ್ಕಾರ ಪದವಿ ಖಾಸಗಿ ಕಾಲೇಜುಗಳಲ್ಲಿ ಕಾನೂನಾತ್ಮಕವಾಗಿ ಬರಬೇಕಾದ ಶೇ.40 ಸರ್ಕಾರಿ ಕೋಟಾದ ಸೀಟ್ ಗಳನ್ನು ಈ ವರ್ಷದಿಂದ ಪಡೆಯಲು ಮುಂದಾಗಿದೆ. ಈ ಸೀಟ್‌ಗಳನ್ನ ಕೆಇಎ ಅಥವಾ ಕಾಮೆಡ್‌ ಕೆ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Continue Reading

ಕರ್ನಾಟಕ

Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

Govt Quota Seats: ಖಾಸಗಿ ಪದವಿ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ಬಿಗ್ ಶಾಕ್ ಕೊಟ್ಟಿದ್ದು, ಇನ್ಮುಂದೆ ಸರ್ಕಾರಿ ಕೋಟಾದಡಿ ಪದವಿ ಸೀಟ್ ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ.

VISTARANEWS.COM


on

Govt Quota Seats
Koo

ಬೆಂಗಳೂರು: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಸೀಟ್ ಹಂಚಿಕೆ ಮಾದರಿಯಂತೆ ಇನ್ನು ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ (Govt Quota Seats) ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಬಡ ವಿದ್ಯಾರ್ಥಿಗಳಿಗೆ ಬಿಎ, ಬಿಎಸ್ಸಿ, ಬಿ.ಕಾಂ ಸೇರಿ ಇನ್ನಿತರ ಪದವಿ ಕೋರ್ಸ್‌ ವ್ಯಾಸಂಗ ಮಾಡಲು ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲೂ ಅವಕಾಶ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಖಾಸಗಿ ಕಾಲೇಜುಗಳಲ್ಲಿ ಇನ್ಮುಂದೆ ಶೇ.40 ಸರ್ಕಾರಿ ಕೋಟಾದಡಿಯಲ್ಲಿ ಪದವಿ ಸೀಟ್‌ಗಳನ್ನ ಸರ್ಕಾರಕ್ಕೆ ಪಡೆಯಲು ಮುಂದಾದ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು 100ಕ್ಕೆ 100 ಮ್ಯಾನೇಜ್‌ಮೆಂಟ್ ಕೋಟಾದಡಿ ಸೀಟ್ ದಾಖಲಾತಿ ಇತ್ತು. ಖಾಸಗಿ ಕೋಟಾದಡಿಯೇ ಪದವಿ ದಾಖಲಾತಿ ಪಡೆಯುತ್ತಿದ್ದರು. ಹೀಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಕಟ್ಟಲಾಗದೆ ಪರದಾಡ್ತಾ ಇದ್ದರು.

ಸರ್ಕಾರ ಪದವಿ ಖಾಸಗಿ ಕಾಲೇಜುಗಳಲ್ಲಿ ಕಾನೂನಾತ್ಮಕವಾಗಿ ಬರಬೇಕಾದ ಶೇ.40 ಸರ್ಕಾರಿ ಕೋಟಾದ ಸೀಟ್ ಗಳನ್ನು ಈ ವರ್ಷದಿಂದ ಪಡೆಯಲು ಮುಂದಾಗಿದೆ. ಈ ಸೀಟ್‌ಗಳನ್ನ ಕೆಇಎ ಅಥವಾ ಕಾಮೆಡ್‌ ಕೆ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿನೀಟ್-2024ಕ್ಕೆ (NEET UG 2024) ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪರಿಶೀಲನಾ ಪತ್ರವನ್ನು (ವೆರಿಫಿಕೇಶನ್ ಸ್ಲಿಪ್) ಪ್ರಾಧಿಕಾರದ ವೆಬ್‌ಸೈಟಿನ ಸೂಕ್ತ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಸೂಚಿಸಿದೆ.

ಒಂದು ವೇಳೆ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳು ಯುಜಿ ನೀಟ್- 24ಕ್ಕೆ ಹೊಸದಾಗಿ ನೋಂದಣಿ ಮಾಡಿಸಿಕೊಂಡಿದ್ದು, ಎನ್ ಆರ್ ಐ-ವಾರ್ಡ್ ಎಂದು ಕ್ಲೇಮ್ ಮಾಡಿದ್ದಲ್ಲಿ ಅಥವಾ ಪ್ರವರ್ಗ 2ರಿಂದ ಪ್ರವರ್ಗ 8ರ ಅಡಿಯಲ್ಲಿ ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕ್ಲೇಮ್ ಮಾಡಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಜಿ ನೀಟ್-2024ಕ್ಕೆ ಹೊಸದಾಗಿ ನೋಂದಣಿ ಮಾಡಿರುವ ಕ್ಲಾಸ್ ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್ ಮತ್ತು ಒ ಅಭ್ಯರ್ಥಿಗಳು ಹಾಗೂ ಒಸಿಐ/ ಪಿಐಒ / ಎನ್ ಆರ್ ಐ / ವಿದೇಶ ಪ್ರಜೆ ಅಭ್ಯರ್ಥಿಗಳು ಕೆಇಎ ಕಚೇರಿಗೆ ದಾಖಲಾತಿ ಪರಿಶೀಲನೆಗೆ ಆಗಸ್ಟ್ 12 ಅಥವಾ 13ರಂದು ಹಾಜರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳ ಬಗ್ಗೆ ತಿಳಿಯಲು ಯುಜಿ ನೀಟ್-2024 ಮಾಹಿತಿ ಪುಸ್ತಕ ನೋಡಬಹುದು ಎಂದು ಹೇಳಲಾಗಿದೆ. ಆ.7ರಿಂದ 9ರವರೆಗೆ ನಡೆದ ದಾಖಲಾತಿ ಪರಿಶೀಲನೆಗೆ ಹಾಜರಾಗದಿದ್ದವರು ಕೂಡ ಈ ಮೇಲಿನ ದಿನಗಳಂದು ಭೇಟಿ ಕೊಡಬಹುದು ಎಂದು ತಿಳಿಸಲಾಗಿದೆ.

Continue Reading

ಕರ್ನಾಟಕ

Love Jihad: ಕೇರಳದ ಯುವಕನನ್ನು ಮದುವೆಯಾದ ಮಂಗಳೂರಿನ ಹಿಂದೂ ಯುವತಿ; ಹಿಂದೂ ಸಂಘಟನೆಗಳ ಹೋರಾಟ ನಿಷ್ಫಲ

Love Jihad: ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

VISTARANEWS.COM


on

Love Jihad
Koo

ಮಂಗಳೂರು:‌ ತಂದೆ-ತಾಯಿ, ಹಿಂದೂ ಸಂಘಟನೆಗಳ (Hindu outfits) ಪ್ರತಿಭಟನೆ- ಹೋರಾಟದ ಬಳಿಕವೂ ಮನೆ ಬಿಟ್ಟು ಹೋದ ಹಿಂದೂ ಯುವತಿ, ತಾನು ಪ್ರೇಮಿಸಿದ ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಾಳೆ. ಕ್ರಿಮಿನಲ್‌ ಆರೋಪ ಹೊಂದಿರುವ ಈತ ಲವ್‌ ಜಿಹಾದ್‌ನಲ್ಲಿ (Love Jihad) ತೊಡಗಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್‌ (Vishwa Hindu Parishat) ಆರೋಪಿಸಿದೆ. ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ (Sharan Pumpwell) ಸೋಶಿಯಲ್‌ ಮೀಡಿಯಾದಲ್ಲಿ (Social media) ಯುವತಿಯ ತಂದೆಯ ಕ್ಷಮೆ ಕೋರಿದ್ದಾರೆ.

ʼಕ್ಷಮಿಸಿ ವಿನೋದ್ ಅವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ಎಂದು ಯುವತಿ ವಿಸ್ಮಯಳ ತಂದೆಯ ಬಳಿ ಕ್ಷಮೆ ಕೋರಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮಗಳನ್ನು ಉಳಿಸಿಕೊಡಿ ಎಂದು ವಿಎಚ್‌ಪಿ ಮುಖಂಡರ ಬಳಿಗೆ ವಿಸ್ಮಯಳ ತಂದೆ ವಿನೋದ್ ಬಂದಿದ್ದರು.

ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಕಾನೂನು ಹೋರಾಟದ ಮೂಲಕ ಮಗಳನ್ನು ವಾಪಸ್ ಕರೆತರುವುದಾಗಿ ವಿಸ್ಮಯ ತಂದೆಗೆ ವಿಎಚ್‌ಪಿ ಭರವಸೆ ನೀಡಿತ್ತು. ವಿಸ್ಮಯಳನ್ನು ಮಂಗಳೂರಿನ ಕೌನ್ಸೆಲಿಂಗ್ ಸೆಂಟರ್‌ಗೆ ವಿಎಚ್‌ಪಿ ಕಳುಹಿಸಿತ್ತು. ಆದರೆ ಮೊಹಮ್ಮದ್ ಅಶ್ಫಾಕ್‌ ಕೇರಳ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದ. ಕೇರಳ ಹೈಕೋರ್ಟ್ ಆಕೆಯನ್ನು ಕರೆತರುವಂತೆ ಆದೇಶ ನೀಡಿತ್ತು. ಹೀಗಾಗಿ ಅಶ್ಫಾಕ್ ಜೊತೆ ತೆರಳಿ ವಿಸ್ಮಯ ವಿವಾಹವಾಗಿದ್ದಾಳೆ.

ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿಯಾಗಿರುವ ವಿಸ್ಮಯಿ ಅಶ್ಫಾಕ್ ಪ್ರಕರಣ‌ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿ ಇದ್ದುಕೊಂಡು ಮಂಗಳೂರಿನಲ್ಲಿ ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಳನ್ನು ವಿದ್ಯಾನಗರದಲ್ಲಿದ್ದಾಗಲೇ ಅಶ್ಫಾಕ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಎರಡು ತಿಂಗಳ ಪರಿಚಯದಲ್ಲೇ ಈತ ವಿಸ್ಮಯಳ ಬ್ರೇನ್‌ವಾಶ್ ಮಾಡಿದ್ದಾನೆ ಎಂದು ಆಕೆಯ ಹೆತ್ತವರು ಆರೋಪಿಸಿದ್ದಾರೆ. ಈತ ಕ್ರಿಮಿನಲ್ ರೆಕಾರ್ಡ್ ಹೊಂದಿದ್ದಾನೆ ಎನ್ನಲಾಗಿದೆ.

ಕಳೆದ ಜೂ.6 ರಂದು ಉಳ್ಳಾಲದಿಂದ ವಿಸ್ಮಯಳನ್ನು ಈತ ಕರೆದುಕೊಂಡು ಹೋಗಿದ್ದ. ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಈಕೆಯನ್ನು ಪತ್ತೆ ಹಚ್ಚಿ ಮನೆಯವರ ಜೊತೆ ಕಳುಹಿಸಿದ್ದರು. ಮತ್ತೆ ಜೂ‌.30ರಂದು ಉಳ್ಳಾಲದಿಂದ ವಿಸ್ಮಯಳನ್ನು ಅಪಹರಿಸಿ ಕೊಚ್ಚಿಗೆ ಕರೆದುಕೊಂಡು ಹೋಗಿದ್ದ. ಈ ಬಗ್ಗೆ ವಿಸ್ಮಯಳ ತಂದೆ ವಿನೋದ್ ಉಳ್ಳಾಲ ಠಾಣೆಗೆ ಅಪಹರಣ ದೂರು ನೀಡಿದ್ದರು. ಬಳಿಕ ವಿದ್ಯಾನಗರ ಪೊಲೀಸರು ಪತ್ತೆ ಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿ ಇರಿಸಿದ್ದರು.

ಆದರೆ ಅಶ್ಫಾಕ್ ಜೊತೆಗೆ ತೆರಳುವುದಾಗಿ ವಿಸ್ಮಯ ಹಠ ಹಿಡಿದಿದ್ದಳು. ಈಕೆಯ ಬ್ರೇನ್‌ ವಾಶ್‌ ಮಾಡಲಾಗಿದೆ ಎಂದು ಆರೋಪಿಸಿ ಅಶ್ಫಾಕ್ ವಿರುದ್ಧ ವಿಸ್ಮಯ ತಂದೆ ದೂರು ನೀಡಿದ್ದರು. ಕೇರಳದಲ್ಲಿ ವಿಸ್ಮಯ ಮತಾಂತರಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಿದ್ದರು. ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ಕಣ್ಣೀರು ಹಾಕಿದ್ದರು. ಕೊನೆಗೂ ವಿಸ್ಮಯ, ಅಶ್ಫಾಕ್ ಜೊತೆಗೆ ತೆರಳಿ ಆತನನ್ನು ವರಿಸಿದ್ದಾಳೆ.

ಇದನ್ನೂ ಓದಿ: Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Continue Reading
Advertisement
Bangladesh Unrest
ಕರ್ನಾಟಕ6 mins ago

Bangladesh Unrest: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Viral News
Latest8 mins ago

Viral News: ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ ಮೇಲೆ ನಾಗರಹಾವನ್ನು ಎಸೆದ ಮಹಿಳೆ!

Viral News
Latest14 mins ago

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Jagdeep Dhankhar
ರಾಜಕೀಯ22 mins ago

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

Bangladesh Unrest
ವಿದೇಶ40 mins ago

Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್

ed raid
ಬೆಂಗಳೂರು54 mins ago

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

Govt Quota Seats
ಕರ್ನಾಟಕ1 hour ago

Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

Team India
ಕ್ರೀಡೆ1 hour ago

Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

Narendra Modi
ದೇಶ2 hours ago

Narendra Modi: ಭೂಕುಸಿತ ಪೀಡಿತ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

Anti-Racist Protests
ವಿದೇಶ2 hours ago

Britain Violence: ಬ್ರಿಟನ್‌ನಲ್ಲಿ ವಲಸಿಗರು, ಮುಸ್ಲಿಮರ ವಿರುದ್ಧ ಪ್ರತಿಕಾರದ ದಾಳಿ ನಡೆಯುತ್ತಿರುವುದೇಕೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌