ಕರ್ನಾಟಕ
Karnataka Election : ಬಜರಂಗ ದಳ ಬ್ಯಾನ್ ಮಾಡ್ಬೇಕಾಗಿಲ್ಲ, ತಪ್ಪು ಮಾಡಿದಾಗ ಕ್ರಮ ಕೈಗೊಂಡ್ರೆ ಸಾಕು ಎಂದ ರಮ್ಯಾ
Actress Ramya : ಚಿತ್ರ ನಟಿ ರಮ್ಯಾ ಅವರು ಶನಿವಾರ ವಿಜಯಪುರದ ಬಬಲೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ್ ಪರ ಪ್ರಚಾರ ನಡೆಸಿದರು. ಜತೆಗೆ ಹಲವು ವಿಚಾರಗಳ ಬಗ್ಗೆ ತಮ್ಮ ಮುಕ್ತ ಮಾತು ಹಂಚಿಕೊಂಡರು.
ವಿಜಯಪುರ: ʻʻಬಜರಂಗ ದಳ ಇರಲಿ, ಯಾವುದೇ ಸಂಘಟನೆ ಇರಲಿ, ನಿಷೇಧ (Bajarangdal Ban) ಮಾಡುವ ಅಗತ್ಯ ಇರಲ್ಲ. ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತಂದರೆ ಕಾನೂನು ಪ್ರಕಾರ ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಬ್ಯಾನ್ ಎನ್ನುವುದು ಸರಿಯಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯʼ- ಹೀಗೆಂದು ಹೇಳಿದರು ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ (Actress Ramya)
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ನಾಯಕ ಎಂ.ಬಿ. ಪಾಟೀಲ್ (MB Patil) ಅವರ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಅವರು ಎಂ.ಬಿ. ಪಾಟೀಲ್ ಅವರ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಂಡರು.
ʻʻಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ. ಧಾರ್ಮಿಕ ವಿಷಯವಾಗಿ ಮಾತನಾಡಿದರೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸುವ ಅಧಿಕಾರ ಇದೆ. ನ್ಯಾಯಾಲಯ ಈಗಾಗಲೇ ನಿರ್ದೇಶನ ನೀಡಿದೆ. ಹೀಗಾಗಿ ಸಂಪೂರ್ಣವಾಗಿ ಬ್ಯಾನ್ ಮಾಡುವುದು ಸರಿಯಲ್ಲ. ಬ್ಯಾನ್ ಎನ್ನುವ ಶಬ್ದ ಸರಿಯಲ್ಲ ಎಂಬುದು ನನ್ನ ವೈಯುಕ್ತಿಕ ಅಭಿಪ್ರಾಯʼʼ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿಯಾಗಿರುವ ಚಿತ್ರ ನಟಿ ರಮ್ಯಾ ಅವರು, ʻʻಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿಯದ್ದು ಡಬಲ್ ಎಂಜಿನ್ ಸರ್ಕಾರವಲ್ಲ. ಟ್ರಬಲ್ ಎಂಜಿನ್ ಸರ್ಕಾರʼʼ ಎಂದು ಲೇವಡಿ ಮಾಡಿದರು.
ಎಂ.ಬಿ ಪಾಟೀಲ್ ಹೊಗಳಿದ ರಮ್ಯಾ
ʻʻನಾನು ಎಂ.ಬಿ ಪಾಟೀಲ್ ಹಾಗೂ ಇತರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಬಂದಿದ್ದೇನೆ. ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಎಂ ಬಿ ಪಾಟೀಲ್ ಅವರು ನನ್ನ ಪರವಾಗಿ ಪ್ರಚಾರ ಮಾಡಿದ್ದರು. ನನ್ನ ಗೆಲುವಿಗೆ ಸಾಥ್ ನೀಡಿದ್ದರು. ಎಂ.ಬಿ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ, ಅವರೊಬ್ಬ ಉತ್ತಮ ರಾಜಕಾರಣ. ಜಿಲ್ಲೆಯಲ್ಲಿ ನೀರು ಹರಿಸಿದ್ದಾರೆ. ನೀರು ಸಿಕ್ಕ ಕಾರಣ ರೈತರು ತೋಟಗಕಾರಿಕಾ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ವಿವಿಧ ಕೃಷಿ ಕಾಯಕಗಳನ್ನು ಮಾಡುತ್ತಿದ್ದಾರೆʼʼ ಎಂದು ಎಂ.ಬಿ. ಪಾಟೀಲ್ ಅವರ ಸಾಧನೆಗಳನ್ನು ವಿವರಿಸಿದರು. ಬಬಲೇಶ್ವರದಲ್ಲಿ ಎಂ.ಬಿ ಪಾಟೀಲ್ ಪರ ಅಲೆಯಿದೆ ಎಂದ ಅವರು, ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದು ಭಯಾನಕವಾಗಿದೆ. ಇಲ್ಲಿನ ಮಕ್ಕಳಿಗೆ ಬಂದೂಕು ಬೇಕಾ ಪುಸ್ತಕ ಪೆನ್ನು ಬೇಕಾ ಎಂಬುದರ ನಿರ್ಣಯವಾಗಬೇಕಾಗಿದೆ ಎಂದರು.
ಹತ್ಯೆ ಮಾಡುವ ಕೀಳುಮಟ್ಟಕ್ಕೆ ಇಳಿಯಬಾರದು ಎಂದು ರಮ್ಯಾ
ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರನ್ನು ಫಿನಿಷ್ ಮಾಡುವುದಾಗಿ ಹೇಳಿದ ಆಡಿಯೋದ ಬಗ್ಗೆ ಆಘಾತ ವ್ಯಕ್ತಪಡಿಸಿದ ಚಿತ್ರನಟಿ ರಮ್ಯಾ, ಇದು ಕೀಳುಮಟ್ಟಕ್ಕೆ ಹೋಗಿರುವ ರಾಜಕಾರಣ ಅನ್ಸುತ್ತೆ.. ಮೊದಲು ಈ ರೀತಿ ಇರುತ್ತಿರಲಿಲ್ಲ. ಎಲ್ಲರೂ ಒಟ್ಟಾಗಿ, ಇಶ್ಯೂ ಬಗ್ಗೆ ಫೈಟ್ ಮಾಡುತ್ತಿದ್ದರು. ರಾಜಕಾರಣ ಇಷ್ಟೊಂದು ಕೀಳುಮಟ್ಟಕ್ಕೆ ಹೋಗಿದೆಯಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು.
ರಮ್ಯಾ ರಾಜಕೀಯದಿಂದ ದೂರ ಉಳಿದಿದ್ದೇಕೆ?
ʻʻನಾನು ಸಂಸತ್ ಚುನಾವಣೆಯಲ್ಲಿ ಸೋತ ಬಳಿಕ 2017ರಲ್ಲಿ ಎಐಸಿಸಿ ಸೋಷಿಯಲ್ ಮೀಡಿಯಾದ ನೇತೃತ್ವ ವಹಿಸಿದ್ದೆ. ನಂತರ ಅನಾರೋಗ್ಯದ ಕಾರಣ ರಾಜೀನಾಮೆ ನೀಡಿದ್ದೆ. ಆರೋಗ್ಯ ಸುಧಾರಣೆಯಾದ ಬಳಿಕ ಸಿನಿಮಾ ಹಾಗೂ ರಾಜಕಾರಣದಲ್ಲಿ ಸಕ್ರಿಯವಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆʼʼ ಎಂದು ಹೇಳಿದ ರಮ್ಯಾ, ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆ ಕಮೆಂಟ್ ಮಾಡಲ್ಲ ಎಂದರು.
ಎಂ ಬಿ ಪಾಟೀಲ್ ಪತ್ನಿ ಆಶಾ ಪಾಟೀಲ್, ಪುತ್ರ ಬಸನಗೌಡ ಹಾಗೂ ಕಾಂಗ್ರೆಸ್ ಮುಖಂಡರಾದ ಮುಖಂಡರಾದ ವಿದ್ಯಾರಾಣಿ ತುಂಗಳ ಪತ್ರಿಕಾಗೋಷ್ಠಿಯಲ್ಲಿ ರಮ್ಯಾ ಜತೆಗಿದ್ದರು.
ಗೌಡ್ರ ಹುಡುಗನೇ ಬೇಕಾ? ಬೇರೆ ಹುಡುಗನೂ ಓಕೇನಾ?
ರಮ್ಯಾ ಅವರನ್ನು ಕಂಡ ಕೂಡಲೇ ಎದುರಾಗುವ ಮದುವೆ ಯಾವಾಗ ಎನ್ನುವ ಪ್ರಶ್ನೆ ಇಲ್ಲೂ ಎದುರಾಯಿತು. ಈ ಬಾರಿ ಎದುರಾದ ಪೂರಕ ಪ್ರಶ್ನೆ ಎಂದರೆ ಗೌಡರ ಹುಡುಗನೇ ಆಗಬೇಕಾ ಎನ್ನುವುದು!
ಇತ್ತೀಚೆಗೆ ಮಂಡ್ಯದಲ್ಲಿ ಮಾತನಾಡಿದ್ದ ರಮ್ಯ, ಗೌಡ್ರ ಹುಡುಗನನ್ನು ಹುಡುಕಿ ಕೊಡಿ ಎಂದಿದ್ದರು. ವಿಜಯಪುರದ ಪತ್ರಕರ್ತರು, ಗೌಡ್ರೇ ಆಗಬೇಕಾ ಎಂದು ಕೇಳಿದಾಗ, ಹಾಗೇನಿಲ್ಲ ಒಳ್ಳೆ ಹುಡುಗ ಇದ್ರೆ ಸಾಕು. ನೀವೇ (ಮಾಧ್ಯಮದವರು) ಒಳ್ಳೆ ಹುಡುಗ ಹುಡುಕಿಕೊಡಿ ಎಂದು ನಗು ಬೀರಿದರು.
ಇದನ್ನೂ ಓದಿ : Mallikarjun Kharge: ಖರ್ಗೆ ಕುಟುಂಬದ ಸರ್ವನಾಶ; ಮಣಿಕಂಠನ ಆಡಿಯೊ ಅಸಲಿಯೇ ಅಲ್ಲ, ಕಟ್ ಆ್ಯಂಡ್ ಪೇಸ್ಟ್ ಎಂದ ಅಣ್ಣಾಮಲೈ
karnataka-election: Need not to Ban Bajarang dal, opines Actress Ramya
ಕರ್ನಾಟಕ
Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ
Lok Sabha Election 2024: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎಂದು ಹಾಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿರುವ ಆಡಿಯೊ ವೈರಲ್ ಆಗಿದೆ.
ತುಮಕೂರು: ಲೋಕಸಭೆ ಚುನಾವಣೆಗೆ (Lok Sabha Election 2024) ವಿವಿಧ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಆದರೆ, ಚುನಾವಣಾ ಕಣದಿಂದ ದೂರವಿರುವುದಾಗಿ ಈ ಹಿಂದೆಯೇ ಬಿಜೆಪಿ ಹಾಲಿ ಸಂಸದ ಜಿ.ಎಸ್. ಬಸವರಾಜು ಅವರು ಘೋಷಿಸಿದ್ದರು. ಹೀಗಾಗಿ ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಸಂಸದ ಜಿ.ಎಸ್. ಬಸವರಾಜು ಅವರು ಮಾತನಾಡಿರುವ ಆಡಿಯೊ ವೈರಲ್ ಆಗಿದೆ.
ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಇದರಲ್ಲಿ ವಿ.ಸೋಮಣ್ಣ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ನೀವು ನಿಲ್ಲಬೇಕು ಎಂದು ವೀರಶೈವ ಸಮಾಜಕ್ಕೆ ಸಂಸದ ಜಿ.ಎಸ್.ಬಸವರಾಜು ಮನವಿ ಮಾಡಿದ್ದಾರೆ.
ಇದನ್ನೂ ಓದಿ | MLC Election: ಕಾಂಗ್ರೆಸ್ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!
ಸಮಾಜ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮಲ್ಲೇ ಕಿತ್ತಾಡಿದರೆ ಒದ್ದು ಓಡಿಸುತ್ತಾರೆ. ಆ ಸಮಯ ಕೂಡ ಸನ್ನಿಹಿತವಾಗಿದೆ. ಯಾವಾಗ ಒಗ್ಗಟ್ಟು ಮುರಿಯುತ್ತದೆಯೋ ಆಗ ಏನೇನು ಮಾಡಬೇಕು ಎಂಬುವುದು ಅವರಿಗೆ (ವಿರೋಧ ಪಕ್ಷಗಳಿಗೆ) ಗೊತ್ತಿದೆ. ಕೆಲವೇ ಜನ ಇದ್ದೀರಿ ಒಗ್ಗಟ್ಟಾಗಿರಬೇಕು ಎಂದು ಸಂದೇಶ ನೀಡಿದ್ದಾರೆ.
ನನ್ನ ಅವಧಿ ಮುಗಿಯಿತು, ಈಗ ನನ್ನ ಸೀಟ್ ಸೋಮಣ್ಣಗೆ ಕೊಡುತ್ತಾರೆ. ನಾನು ಚುನಾವಣೆಯಲ್ಲಿ ನಿಲ್ಲಲ್ಲ, ಈ ಬಗ್ಗೆ ದೆಹಲಿಗೆ ಹೋಗಿದ್ದಾಗ ಹಿರಿಯ ನಾಯಕರಿಗೆ ಹೇಳಿದ್ದೇನೆ ಎಂದಿರುವ ಸಂಸದರು, ಮುಂದೆ ಬರುವವರನ್ನು ಉಪಯೋಗಿಸಿಕೊಳ್ಳಿ. 8 ಸಲ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಸಲ ಸೋತಿದ್ದೇನೆ. ಈ ಹಿಂದೆ ನಮ್ಮವರೇ ನನ್ನ ಸೋಲಿಸಿದ್ದರು. ನಾನು ಸೋತರೂ ಒಂದೇ, ಗೆದ್ದರೂ ಒಂದೇ, ಕೆಲಸ ಮಾಡಿಸಿಕೊಂಡು ಬರುತ್ತಿದ್ದೆ ಎಂದು ಹೇಳಿದ್ಧಾರೆ.
ಇದನ್ನೂ ಓದಿ | BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ
ಸಂಸದ ಜಿ.ಎಸ್.ಬಸವರಾಜು ರಾಜಕೀಯ ನಿವೃತ್ತಿ
ತುಮಕೂರು ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಗೆದ್ದಿದ್ದರು. ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಜನವರಿಯಲ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಕ್ಷೇತ್ರದಿಂದ ಹೊಸ ಈ ಬಾರಿ ಹೊಸ ಅಭ್ಯರ್ಥಿ ಕಣಕ್ಕಿಳಿವುದು ಖಚಿತವಾಗಿದೆ.
ಇದನ್ನೂ ಓದಿ | Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್ ಅಬ್ದುಲ್ಲಾ ʼಲೋಕಾʼಭಿರಾಮ!
ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಚಾಮರಾಜನಗರ ಹಾಗೂ ವರುಣ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ನಾಯಕರ ಮಾತು ಕೇಳಿ ಚಿನ್ನದಂತಹ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಹೋದೆ ಎಂದು ಕಿಡಿಕಾರಿದ್ದರು. ಹೀಗಾಗಿ ಸಮಾಧಾನಪಡಿಸಲು ತುಮಕೂರು ಲೋಕಸಭಾ ಕ್ಷೇತ್ರ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಕರ್ನಾಟಕ
Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ
Ballari News: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದ ನಾಗೇಶ್ ಮತ್ತು ಪಾರ್ವತಿ ದಂಪತಿಯ 5 ವರ್ಷದ ಬಾಲಕನಿಗೆ ಮೆದುಳಿನ ಅರ್ಧ ಭಾಗದ ತಲೆಯ ಬುರುಡೆ ತೆರೆದು ಮೈಕ್ರೋಸ್ಕೋಪ್ ಮೂಲಕ ಅತೀ ಕ್ಲಿಷ್ಟಕರ ಹಾಗೂ ಅತೀ ಸೂಕ್ಷ್ಮ ರೀತಿಯ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ವಿಮ್ಸ್ ನ್ಯೂರೋ ಸರ್ಜರಿ ವಿಭಾಗದ ಡಾ. ವಿಶ್ವನಾಥ್ ಯಶಸ್ವಿಯಾಗಿದ್ದಾರೆ.
ಬಳ್ಳಾರಿ: ಐದು ವರ್ಷದ ಬಾಲಕನಿಗೆ ಮೆದುಳಿನ (Brain) ಅರ್ಧ ಭಾಗದ ತಲೆಯ ಬುರುಡೆ ತೆರೆದು ಮೈಕ್ರೋಸ್ಕೋಪ್ (Microscope) ಮೂಲಕ ಅತೀ ಕ್ಲಿಷ್ಟಕರ ಹಾಗೂ ಅತೀ ಸೂಕ್ಷ್ಮ ರೀತಿಯ ಶಸ್ತ್ರ ಚಿಕಿತ್ಸೆ (Surgery) ಮಾಡುವಲ್ಲಿ ಯಶಸ್ವಿಯಾಗಿರುವ ವಿಮ್ಸ್ ನ್ಯೂರೋ ಸರ್ಜರಿ ವಿಭಾಗದ ಡಾ. ವಿಶ್ವನಾಥ ಅವರ ಸಾಧನೆ ವೈದ್ಯಕೀಯ ಕ್ಷೇತ್ರವೇ ಹೆಮ್ಮೆ ಪಡುವ ಸಂಗತಿಯಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದ ನಾಗೇಶ್ ಮತ್ತು ಪಾರ್ವತಿ ದಂಪತಿಯ ಐದು ವರ್ಷದ ಬಾಲಕ ಹುಟ್ಟಿನಿಂದಲೇ ಈ ಕಾಯಿಲೆಯಿಂದ ಬಳಲುತ್ತಿದ್ದನು. ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ನಿಯಂತ್ರಣ ತಪ್ಪಿ ಬೀಳುತ್ತಿದ್ದ, ಇದನ್ನು ಗಮನಿಸಿದ ಪೋಷಕರು ಸ್ಥಳೀಯ ವೈದ್ಯರ ಬಳಿ ತಪಾಸಣೆಗೊಳಪಡಿಸಿದಾಗ ಮಗುವಿಗೆ ಅತೀ ವಿರಳ ಕಾಯಿಲೆ ಇದ್ದು, ನರ ರೋಗತಜ್ಞ ವೈದ್ಯರ ಬಳಿ ಮಾಡಿಸುವಂತೆ ಸಲಹೆ ನೀಡಲಾಗಿತ್ತು.
ಇದನ್ನೂ ಓದಿ: WTC Final 2023: ಭಾರತ, ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ
ಏನಿದು ಕಾಯಿಲೆ?
ಉಸಿರಾಟ ಮತ್ತು ಹೃದಯ ಬಡಿತ ಕ್ರಿಯೆ ನಿಯಂತ್ರಿಸುವ ಬ್ರೈನ್ ಸ್ಟೆಮ್ ಬಳಿ ಮೆದುಳಿನ ದ್ರವದಿಂದ ಉಂಟಾದ ನೀರಿನ ಗುಳ್ಳೆ ರೂಪದ ಚೀಲ (cyst) ದಂತಹ ಅತೀವಿರಳ ಖಾಯಿಲೆಯಿಂದ ಬಳಲುತ್ತಿದ್ದನು. ಬೆಂಗಳೂರಿನ ನಿಮಾನ್ಸ್, ಇಂದಿರಾಗಾಂಧಿ ಆಸ್ಪತ್ರೆಗೆ ಬಂದು ತಪಾಸಣೆಗೊಳಪಟ್ಟು, ಶೀಘ್ರವಾಗಿ ಚಿಕಿತ್ಸೆಗೆ ದಿನಾಂಕ ನಿಗದಿಯಾಗದ ಹಿನ್ನಲೆಯಲ್ಲಿ ವಿಮ್ಸ್ನಲ್ಲಿ ತಪಾಸಣೆಗೊಳಗಾಗಿದ್ದನು. ಎಂಆರ್ಐ ಪರೀಕ್ಷೆಯಿಂದ ಅತೀ ವಿರಳ ಖಾಯಿಲೆ ಇರುವುದನ್ನು ಖಚಿತಪಡಿಸಿಕೊಂಡ ಡಾ.ವಿಶ್ವನಾಥ್, ಬಾಲಕನನ್ನು ಮೇ 08 ರಂದು ದಾಖಲು ಮಾಡಿಕೊಂಡು ಪಾಲಕರೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದರು.
ಇದನ್ನೂ ಓದಿ: BSNL Revival: ಬಿಎಸ್ಸೆನ್ನೆಲ್ ಹಳಿಗೆ ತರಲು ಕೇಂದ್ರದಿಂದ 89 ಸಾವಿರ ಕೋಟಿ ರೂ. ಪ್ಯಾಕೇಜ್, ಸಿಗಲಿದೆಯೇ 5ಜಿ?
ವಿರಳ ಶಸ್ತ್ರ ಚಿಕಿತ್ಸೆಯಲ್ಲಿ ಎರಡನೇಯದು
ವೈದ್ಯಕೀಯ ದಾಖಲಾತಿಗಳ ಸಂಗ್ರಹವಾದ ಪಬ್ ಮೆಡ್ (Pub Med) ಪ್ರಕಾರ ಜಗತ್ತಿನಲ್ಲೇ ಅತ್ಯಂತ ವಿರಳ ಚಿಕಿತ್ಸೆಯಲ್ಲಿ ಇದು ಎರಡನೇ ಶಸ್ತ್ರ ಚಿಕಿತ್ಸೆಯಾಗಿದೆ ಎಂದು ತಿಳಿದು ಬಂದಿದೆ. ಈ ಬಾಲಕನಿಗೆ ಟ್ರಾಮಾಕೇರ್ ಸೆಂಟರ್ನಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿ, ನಂತರ ನಿರಂತರ ತಪಾಸಣೆ ಔಷದೋಪಚಾರ ನೀಡಲಾಗಿದೆ. ಬಾಲಕನಲ್ಲಿ ಸಹಜ ಚಟುವಟಿಕೆಗಳು ಕಂಡುಬಂದಿದ್ದು, ಯಾವುದೇ ನ್ಯೂನತೆಗಳನ್ನು ಇರುವುದಿಲ್ಲ. ಸ್ವತಂತ್ರವಾಗಿ ಆಹಾರ ಸೇವನೆ, ಚಲನೆ ಮಾಡುತ್ತಿದ್ದಾನೆ. ಇಂತಹ ಅತೀ ವಿರಳ ಶಸ್ತ್ರ ಚಿಕಿತ್ಸೆ ಉಚಿತವಾಗಿ ಕೈಗೊಂಡು, ಬಾಲಕ ಸಹಜತೆಯತ್ತ ಮಾಡುವಂತೆ ಪರಿಶ್ರಮ ಪಟ್ಟ ಡಾ.ವಿಶ್ವನಾಥ ಮತ್ತು ಅವರ ತಂಡ ಹಾಗೂ ವಿಮ್ಸ್ ಗೆ ಬಾಲಕನ ಪೋಷಕರಾದ ನಾಗೇಶ್ ಮತ್ತು ಪಾರ್ವತಿ ಕೃತಜ್ಞತೆ ತಿಳಿಸಿದ್ದಾರೆ.
ತಂಡಕ್ಕೆ ಮೆಚ್ಚುಗೆ
ಶಸ್ತ್ರಚಿಕಿತ್ಸೆಯಲ್ಲಿ ಡಾ. ವಿಶ್ವನಾಥ್ ಅವರೊಂದಿಗೆ ಡಾ. ಬಸವರಾಜ್ ಪಾಟೀಲ್, ಡಾ. ಚಂದ್ರಕುಮಾರ್, ಅರವಳಿಕೆ ತಜ್ಞ ಡಾ. ಶ್ರೀನಿವಾಸುಲು, ಶುಶ್ರೂಷಕಿರಾದ ಸಿಜ್ಜು, ನ್ಯಾನ್ಸಿ ಅವರು ಪಾಲ್ಗೊಂಡಿದ್ದರು.
ವಿಮ್ಸ್ನ ಮೆದುಳು ಮತ್ತು ನರರೋಗ ಶಸ್ತ್ರ ಚಿಕಿತ್ಸೆ ತಜ್ಞ (ನ್ಯೂರೋ ಸರ್ಜನ್) ಡಾ. ಎಸ್. ವಿಶ್ವನಾಥ ಅವರು ಮೆದುಳು ಹಾಗೂ ನರರೋಗಗಳಿಗೆ ಸಂಬಂಧಿಸಿದ ಅನೇಕ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಂಡು ವಿಮ್ಸ್ ಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: Chaitra Hallikeri: ಕಿರುತೆರೆಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಹಳ್ಳಿಕೇರಿ
ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಕೈಗೊಂಡು ಸಾಧನೆಗೈದ ಡಾ. ವಿಶ್ವನಾಥ್ ಮತ್ತು ತಂಡಕ್ಕೆ ವಿಮ್ಸ್ ನ ನಿರ್ದೇಶಕ ಡಾ. ಗಂಗಾಧರ ಗೌಡ, ಟ್ರಾಮಾಕೇರ್ ಸೆಂಟರ್ನ ಅಧೀಕ್ಷಕ ಡಾ. ಶಿವ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ
Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್ ವಿಡಿಯೊ ಇಲ್ಲಿದೆ
Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.
ಕರ್ನಾಟಕ
ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್ ಐಡಿಯನ್ನು ಆರ್ಆರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್ ಗಿಮಿಕ್ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್ ಗಿಮಿಕ್ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Weather Report: ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಸಿಂಗ್ ಶರಣ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. WTC Final 2023: ಆಡುವ ಬಳಗದಿಂದ ಅಶ್ವಿನ್ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್ ಜತೆ ಪರಾರಿ!
ಭೋಪಾಲ್ನ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್ಫ್ರೆಂಡ್ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ12 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ14 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ22 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ18 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ24 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಕರ್ನಾಟಕ8 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
-
ಪ್ರಮುಖ ಸುದ್ದಿ24 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?