Karnataka Election: ಸಿ.ಪಿ. ಯೋಗೇಶ್ವರ್‌-ಎಚ್.ಡಿ. ಕುಮಾರಸ್ವಾಮಿ ಕೊಕ್ಕರೆ, ಮೀನು ಜಟಾಪಟಿ! - Vistara News

ಕರ್ನಾಟಕ

Karnataka Election: ಸಿ.ಪಿ. ಯೋಗೇಶ್ವರ್‌-ಎಚ್.ಡಿ. ಕುಮಾರಸ್ವಾಮಿ ಕೊಕ್ಕರೆ, ಮೀನು ಜಟಾಪಟಿ!

Karnataka Election: ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಮಾತನಾಡಿದ ಸಿ.ಪಿ. ಯೋಗೇಶ್ವರ್‌, ಎಚ್‌ಡಿಕೆ ಕೊಕ್ಕರೆಯಿದ್ದಂತೆ ಮೀನು ಇದ್ದ ಕಡೆಗೆ ಹೋಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ತಾವು ಕೊಕ್ಕರೆಯಾದರೆ ಸಿಪಿವೈ ಏನು ಮೀನೇ ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Kumaraswamy is like a stork goes where there is a fish says CPY
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ವಿಧಾನಸಭಾ ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚತೊಡಗಿವೆ. ಈಗ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಮಾತನಾಡಿದ್ದು, ಅವರನ್ನು ಕೊಕ್ಕರೆಗೆ ಹೋಲಿಸಿದ್ದಾರೆ. ಈ ಹೇಳಿಕೆಗೆ ಎಚ್‌ಡಿಕೆ ಸಹ ತಿರುಗೇಟು ನೀಡಿದ್ದು, ನಾನು ಕೊಕ್ಕರೆಯಾದರೆ ಯೋಗೇಶ್ವರ್‌ ಏನು ಮೀನೇ ಎಂದು ಪ್ರಶ್ನೆ ಮಾಡಿದ್ದಾರೆ.

ಚೆನ್ನಪ್ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ. ಯೋಗೇಶ್ವರ್‌, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಮಾಧ್ಯಮದವರು ಅವರನ್ನೇ ಕೇಳಬೇಕು. ನನ್ನನ್ನು ಕೇಳಬೇಡಿ. ಕುಮಾರಸ್ವಾಮಿ ಅವರದ್ದು ಸ್ವಂತ ಪಕ್ಷವಾಗಿದ್ದರಿಂದ 224 ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ನಿಲ್ಲಬಹುದು ಎಂದು ಹೇಳಿದರು.

ಆದರೆ, ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ವರಿಷ್ಠರು ಎಲ್ಲಿ ಸ್ಪರ್ಧೆ ಮಾಡು ಎಂದು ಹೇಳುತ್ತಾರೋ ಅಲ್ಲಿ ಸ್ಪರ್ಧೆ ಮಾಡಬೇಕು. ಪಕ್ಷಕ್ಕೆ ಎಲ್ಲೆಲ್ಲಿ ತೊಂದರೆ ಆಗುತ್ತದೆಯೋ ಅಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಬಹುದು. ಬಹಳ ಸಲ ಅವರು ಈ ರೀತಿಯಾಗಿ ಹೇಳಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಕೊಕ್ಕರೆ ಇದ್ದ ಹಾಗೆ. ಎಲ್ಲೆಲ್ಲಿ ಮೀನು ಇರುತ್ತದೋ ಅಲ್ಲೆಲ್ಲ ಕಡೆ ಅವರು ಹೋಗುತ್ತಿರುತ್ತಾರೆ. ನನ್ನ ಕರ್ಮ ಭೂಮಿ ಚನ್ನಪಟ್ಟಣ, ರಾಜಕೀಯವಾಗಿ ಜನ್ಮ ನೀಡಿದ್ದು ಇದೇ ಕ್ಷೇತ್ರ. ನಾನು ಮುಂದೆ ಸಹ ಇಲ್ಲೇ ಸೇವೆ ಮಾಡುತ್ತೇನೆ ಎಂದು ಹೇಳಿದರು.

ಮಂಡ್ಯ ಸಂಸದೆ ಸುಮಲತಾ ಅವರು ಆದಷ್ಟು ಬೇಗ ಬಿಜೆಪಿಯನ್ನು ಸೇರಬಹುದು. ನಾನು ಇತ್ತೀಚೆಗೆ ಅವರನ್ನು ಸಂಪರ್ಕ ಮಾಡಿಲ್ಲ. ಮಂಡ್ಯ ಜಿಲ್ಲೆಗೆ ಆರ್. ಅಶೋಕ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಅವರು ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಅಲ್ಲಿ 3-4 ಸ್ಥಾನವನ್ನು ಗೆಲ್ಲಬೇಕಿದೆ. ಹಾಗಾಗಿ ಅವರಿಗೆ ಜವಾಬ್ದಾರಿ ನೀಡಿದ್ದಾರೆ. ನಾನು ಸಹ ಅವರ ಜತೆ ಸೇರಿ ಕೆಲಸ ಮಾಡುತ್ತೇನೆ. ಗೋಪಾಲಯ್ಯ ಅವರಿಗೆ ಎರಡು ಕಡೆ ಉಸ್ತುವಾರಿ ಇತ್ತು. ಹಾಗಾಗಿ ಅಶೋಕ್ ಅವರಿಗೆ ಉಸ್ತುವಾರಿ ನೀಡಿದ್ದಾರೆ. ಹೀಗಾಗಿ ಅಲ್ಲಿ ಸಣ್ಣಪುಟ್ಟ ವಿರೋಧ ಇರಬಹುದು ಎಂದು ಅಶೋಕ್‌ ಗೋ ಬ್ಯಾಕ್ ಅಭಿಯಾನದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Karnataka Election: ಯಡಿಯೂರಪ್ಪ ಎಲ್ಲರೂ ಒಪ್ಪಿರುವ ಧೀಮಂತ ನಾಯಕ; ಅವರಿಗೆ ಕಲ್ಲು ಹೊಡೆದರೆ ಬಿಜೆಪಿಗೆ ನಷ್ಟ: ವಿಜಯೇಂದ್ರ

ಸಿ.ಪಿ. ಯೋಗೇಶ್ವರ್‌ ಏನು ಮೀನಾ?: ಎಚ್‌ಡಿಕೆ

ನನ್ನ ಸ್ಪರ್ಧೆ ಬಗ್ಗೆ ಸಿ.ಪಿ. ಯೋಗೇಶ್ವರ್‌ ಏನು ಹೇಳುತ್ತಾರೆ? ನಾನು ಕೊಕ್ಕರೆಯಾದರೆ ಅವರೇನು ಮೀನಾ ಎಂದು ಎಚ್‌.ಡಿ. ಕುಮಾರಸ್ವಾಮಿ ರಾಯಚೂರಿನಲ್ಲಿ ಪ್ರಶ್ನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೀದರ್‌

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Dead Body Found : ಗ್ರಾಮದಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ದಿನಗಟ್ಟಲೆ ಅದೇ ನೀರನ್ನು ಕುಡಿದಿದ್ದ ಜನರು (Water Tank) ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

By

Dead Body Found in water tank
ವಾಟರ್‌ ಟ್ಯಾಂಕರ್‌ನಲ್ಲಿ ಶವ ಪತ್ತೆಯಾಗುತ್ತಿದ್ದಂತೆ ಜಮಾಯಿಸಿದ ಗ್ರಾಮಸ್ಥರು
Koo

ಬೀದರ್ : ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದೆ. ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿಯಿಯಲ್ಲಿ ವ್ಯಕ್ತಿಯೊಬ್ಬಮ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ಸತ್ಯ ವಿಷಯವನ್ನು ತಿಳಿದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Lok Sabha Election 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಬ್ರಿಜೇಶ್‌ ಚೌಟ ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಇದರಿಂದ ಇವರು ಲಕ್ಷಾಧಿಪತಿ ಎಂದು ತಿಳಿದುಬಂದಿದ್ದು, ಇವರು ಹೊಂದಿರುವ ಕಾರಿಗೆ ಸಾಲ ಮಾಡಿದ್ದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಬಿಎಸ್ಸಿ ಪದವೀಧರರಾಗಿರುವ ಇವರು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

VISTARANEWS.COM


on

Lok Sabha Election 2024 Brijesh Chowta declares assets
Koo

ಮಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ (Dakshina Kannada Lok Sabha constituency) ಬಿಜೆಪಿ ಅಭ್ಯರ್ಥಿ (BJP Candidate) ಕ್ಯಾಪ್ಟನ್​ ಬ್ರಿಜೇಶ್ ಚೌಟಾ (Brijesh Chowta) ಶುಕ್ರವಾರ (ಮಾ. 29) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಾವು 70 ಲಕ್ಷ ರೂಪಾಯಿ ಒಡೆಯ ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಬಳಿ ಇರುವ ಕಾರನ್ನು ಸಾಲ ಮಾಡಿ ತೆಗೆದುಕೊಂಡಿದ್ದಾಗಿ 42 ವರ್ಷದ ಬ್ರಿಜೇಶ್‌ ಹೇಳಿದ್ದಾರೆ. ಇವರು ಏಪ್ರಿಲ್‌ 4ರಂದು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಚೌಟ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದು, ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಎಂದು ಬ್ರಿಜೇಶ್ ಚೌಟ ಉಲ್ಲೇಖಿಸಿದ್ದಾರೆ.

70,81,365 ಲಕ್ಷ ರೂಪಾಯಿಯ ಒಟ್ಟು ಆಸ್ತಿ ಮೌಲ್ಯದಲ್ಲಿ ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂಪಾಯಿ ಆಗಿದ್ದರೆ, ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂಪಾಯಿ ಆಗಿದೆ. ಇನ್ನು ಬ್ರಿಜೇಶ್ ಚೌಟ ಅವರು ಕಾರಿಗಾಗಿ ಸಾಲ ಮಾಡಿದ್ದು, ಒಟ್ಟು 9,62,010 ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಬಿ.ಎಸ್ಸಿ ಪದವೀಧರ

ಬ್ರಿಜೇಶ್‌ ಚೌಟ ಅವರು ಬಿಎಸ್ಸಿ ಪದವೀಧರರಾಗಿದ್ದು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

ಯಾರು ಈ ಬ್ರಿಜೇಶ್‌ ಚೌಟ?

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಸೈನಿಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ಆಡಳಿತ ನಿರ್ವಹಣಾ ತಜ್ಞ. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದವರು..

ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವುದು ಅವರ ವಿಶೇಷತೆಯಾಗಿದೆ.

Lok Sabha Election 2024 Captain Brijesh Chowta with PM Narendra Modi

ಇದನ್ನೂ ಓದಿ : Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

ಎನ್‌ಸಿಸಿ ಮತ್ತು ಆರ್‌ಎಸ್‌ಎಸ್‌ ಪ್ರೇರಣೆಯಿಂದ ಸೇನೆ ಸೇರಿದ ಚೌಟ

ಬ್ರಿಜೇಶ್‌ ಚೌಟ ಅವರು ಕಾಲೇಜಿನಲ್ಲಿದ್ದಾಗ ಎನ್‌ಸಿಸಿ ಕೆಡೆಟ್‌ ಆಗಿದ್ದರು. ಅದರ ಜತೆಗೆ ಆರೆಸ್ಸೆಸ್‌ ಜತೆಗಿನ ಸಂಬಂಧ ಅವರನ್ನು ಸೇನೆಯನ್ನು ಸೇರಲು ಪ್ರೇರಣೆ ನೀಡಿತು. ಪದವಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್‌ಗಾಗಿ UPSC ಪರೀಕ್ಷೆಯನ್ನು ಬರೆದರು. ಎಸ್‌ಎಸ್‌ಬಿ ಮೂಲಕ ಪರೀಕ್ಷೆ ತೇರ್ಗಡೆಯಾದ ನಂತರ OTI ಚೆನ್ನೈನಲ್ಲಿ ತರಬೇತಿ ಪಡೆದಿದ್ದಾರೆ.

Lok Sabha Election 2024 : ಏಳು ವರ್ಷಗಳ ಸೇನಾ ಸೇವೆ ಎಲ್ಲೆಲ್ಲಿ ನಡೆದಿತ್ತು?

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಆರಂಭಿಕ ತರಬೇತಿ ಪಡೆದಿರುವುದು ಚೆನ್ನೈನಲ್ಲಿ. ಮುಂದಿನ ಮೂರು ತಿಂಗಳ ಕಾಲ ಶಿಲ್ಲಾಂಗ್‌ನಲ್ಲಿ ತರಬೇತಿ ನಡೆಯಿತು. ಪದಾತಿದಳದ ಗೂರ್ಖಾ ರೆಜಿಮೆಂಟ್‌ನಲ್ಲಿ ಕೆಲಸ ಮಾಡಿದ್ದ ಅವರು ಮೂರು ವರ್ಷಗಳ ಕಾಲ ಮಣಿಪುರದಲ್ಲಿ ಮತ್ತು ನಂತರ ಒಂದು ವರ್ಷ ಅಸ್ಸಾಂನಲ್ಲಿ ಬಂಡಾಯ ಉತ್ತುಂಗದಲ್ಲಿದ್ದಾಗ ಕೆಲಸ ಮಾಡಿದ್ದರು.

ಇವರದು ರಾಜಕೀಯ ಕುಟುಂಬವಲ್ಲ

ಬ್ರಿಜೇಶ್‌ ಚೌಟ ಅವರು ಮೂಡುಬಿದಿರೆಯ ಬಂಟ ಕುಟುಂಬಕ್ಕೆ ಸೇರಿದವರು. ಹಾಗಂತ ಇವರೇನೂ ಶ್ರೀಮಂತ ಕುಟುಂಬದವರಲ್ಲ. ಬ್ರಿಜೇಶ್‌ ಚೌಟ ಅವರು ಸೈನ್ಯಕ್ಕೆ ಸೇರಿದ ನಂತರ ಕುಟುಂಬ ಫರಂಗಿಪೇಟೆಯಲ್ಲಿ ನೆಲೆಸಿದೆ.

Captain Brijesh Chowta and cow

ಕಂಬಳದ ಸಂಯೋಜಕ ಬ್ರಿಜೇಶ್‌ ಚೌಟ

ಬ್ರಿಜೇಶ್‌ ಚೌಟ ಅವರು ಕರಾವಳಿಯ ಸಾಂಸ್ಕೃತಿಕ ಮತ್ತು ಕ್ರೀಡಾ ನೇತಾರರಾಗಿಯೂ ಹೆಸರಾಗಿದ್ದಾರೆ. ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರಿನಲ್ಲಿ ಆಯೋಜಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.

Captain Brijesh Chowta and Kambala poster

ಬ್ರಿಜೇಶ್‌ ಚೌಟ ಅವರ ರಾಜಕೀಯ ಜೀವನ

ಬ್ರಿಜೇಶ್‌ ಚೌಟ ಅವರು ಕಾಲೇಜು ಜೀವನದಿಂದಲೇ ರಾಷ್ಟ್ರೀಯವಾದಿ, ಆರೆಸ್ಸೆಸ್‌ ಸ್ವಯಂಸೇವಕ. ಹೀಗಾಗಿ ಬಿಜೆಪಿಯ ಕಡೆಗೆ ಸಹಜ ಒಲವು ಹೊಂದಿದ್ದರು. ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದು 2013ರ ವಿಧಾನಸಭಾ ಚುನಾವಣೆಯ ಬಳಿಕ. ಅವರು ಮೂರು ವರ್ಷಗಳ ಕಾಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಹೆಸರು ಅಭ್ಯರ್ಥಿಯಾಗಿ ಕೇಳಿಬಂದಿತ್ತು. ಇದೀಗ ಅವರಿಗೆ ಸಂಸತ್‌ ಪ್ರವೇಶಕ್ಕೆ ಟಿಕೆಟ್‌ ಸಿಕ್ಕಿದೆ.

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೇಶ್‌ ಚೌಟ ಆಯ್ಕೆ ಆಗಿದ್ದು ಹೇಗೆ?

ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ, 42 ವರ್ಷದ ಬ್ರಿಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್‌ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಲಿಟ್ ಫೆಸ್ಟ್ ಸಂಘಟನೆ

ಪಕ್ಷದ ಚಟುವಟಿಕೆ ಜತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

ಕಂಬಳಕ್ಕಾಗಿ ಹೋರಾಟ

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬ್ರಿಜೇಶ್ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬ್ರಿಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.

Continue Reading

ದಾವಣಗೆರೆ

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Drowned In River: ಸೆಕೆ ತಾಳಲಾರದೆ ಭದ್ರಾ ನಾಲೆಯಲ್ಲಿ ಸ್ನಾನ ಮಾಡಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ.

VISTARANEWS.COM


on

By

Drowned in canal
ಮೃತ ದುರ್ದೈವಿ
Koo

ದಾವಣಗೆರೆ: ಭದ್ರಾ ನಾಲೆಯಲ್ಲಿ ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು (Drowned In River) ಮೃತಪಟ್ಟಿದ್ದಾನೆ. ಮಣಿಕಂಠ (16) ಮೃತಪಟ್ಟ ದುರ್ದೈವಿ. ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದಲ್ಲಿ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ನೇರಲಗುಡಿ ಗ್ರಾಮದ ತಿಮ್ಮಪ್ಪ ಅವರ ಮಗ ಮಣಿಕಂಠ ಬಸವಾಪಟ್ಟಣ ಜನತಾ ಪ್ರೌಢಶಾಲೆಯಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆಯಲು ಹೋಗಿದ್ದ. ಪರೀಕ್ಷೆ ಮುಗಿಸಿ ವಾಪಸ್‌ ಬರುವಾಗ ಸೆಕೆ ಎಂದು ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಸಮೀಪದ ಹರೋಸಾಗರದ ಬಳಿ ಕಾಲುವೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

ಮೂವರ ಜೀವ ತೆಗೆದ ಬಿಸಿಲು; ಕಪಿಲಾ ನದಿಯ ಸುಳಿಗೆ ಸಿಲುಕಿ ಸಾವು

ಮೈಸೂರು: ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಬಿಸಿಲ ತಾಪದಿಂದ (Temperature rising) ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ ಮೈಸೂರಿನಲ್ಲಿ ಬಿಸಿಲ ತಾಪಮಾನವು ಮೂವರ ಜೀವ ತೆಗೆದಿದೆ. ಸೆಕೆ ತಾಳಲಾರದೆ ಮೂವರು ಕೆರೆಯಲ್ಲಿ ಈಜಲು (Drowned in River) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರಿನ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಮಿಲನ್ (25), ಮೋಹನ್ (19), ತರುಣ್ (19) ಮೃತ ಕಾರ್ಮಿಕರು. ಈ ಮೂವರು ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಹೊರ ಬಂದ ಯುವಕರು ಬೇಸಿಗೆಯ ಸೆಖೆ ತಾಳಲಾರದೆ ಕಪಿಲಾ ನದಿಗೆ ಇಳಿದಿದ್ದಾರೆ. ಆದರೆ ಕಪಿಲಾ ನದಿಗೆ ಇಳಿದವರು ಸುಳಿಗೆ ಸಿಲುಕಿ ಹೊರಬರಲು ಆಗದೆ ಮೃತಪಟ್ಟಿದ್ದಾರೆ.

Drowned in River
ಮೃತದೇಹಕ್ಕಾಗಿ ಹುಡುಕಾಟ ನಡೆಸಿರುವ ಅಗ್ನಿಶಾಮಕ ದಳ ಸಿಬ್ಬಂದಿ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಪಿಲಾ ನದಿಯಲ್ಲಿ ಕೊಚ್ಚಿ ಹೋದವರನ್ನು ಹುಡುಕುವ ಕಾರ್ಯಾಚರಣೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಮುಂದುವರಿಸಿದ್ದಾರೆ. ಮಿಲನ್‌ನ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ:Drowned in Pond : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರಿಬ್ಬರು ನೀರುಪಾಲಾದ (Drowned in River) ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ (Seeta river) ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು.

ಸೋಮವಾರ ಬೆಳಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದರು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೇ ವೇಳೆ ಅಲ್ಲಿದ್ದ ಸ್ಥಳೀಯರು ಮುಳುಗುತ್ತಿರುವವರ ರಕ್ಷಣೆಗೆ ಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ, ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Parliament Flashback: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್‌ ಸಿದ್ದು!

ಈಜಲು ಹೋಗಿ ನೀರುಪಾಲಾದ ಯುವಕ

ಕೆರೆಯಲ್ಲಿ ಈಜಾಡಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಯಾದಗಿರಿ ತಾಲೂಕಿನ ಅರಕೇರಾ ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಲಿಂಗಪ್ಪ (18) ಮೃತ ದುರ್ದೈವಿ.

ಬೆಳಗ್ಗೆ ಸ್ನೇಹಿತರ ಜತೆ ಬಣ್ಣದೋಕಳಿ ಆಡಿ ನಂತರ ತಮ್ಮನೊಟ್ಟಿಗೆ ಕೆರೆಗೆ ಈಜಾಡಲು ತೆರಳಿದ್ದಾನೆ. ಆದರೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಎಲ್ಲ ಕಡೆ ಎರಡೂ ಪಕ್ಷದ ಪ್ರಮುಖ ನಾಯಕರು ಪ್ರಚಾರ ನಡೆಸಲಿದ್ದು, ಕಾರ್ಯಕರ್ತರೂ ಜತೆಯಾಗಬೇಕು. ರಾಜ್ಯದಲ್ಲಿ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬೇಕು. 28ಕ್ಕೆ 28 ಕ್ಷೇತ್ರವನ್ನು ಗೆದ್ದುಕೊಡುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಶ್ರಮವನ್ನು ಹಾಕಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

VISTARANEWS.COM


on

Lok Sabha Election 2024 BJP JDS coordination committee meeting successful Fight to win with the workers
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಹೋರಾಟಕ್ಕೆ ಸಜ್ಜಾಗಿದೆ. ಈ ಸಂಬಂಧ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು (BJP JDS coordination committee meeting) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದು, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra), ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್‌ ಅಗರ್‌ವಾಲ್‌ (Radha Mohandas Agarwal) ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ (HD DeveGowda), ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸೇರಿದಂತೆ ಉಭಯ ಪಕ್ಷಗಳ ಹಲವು ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ಪಕ್ಷದ ಶಾಲುಗಳನ್ನು ಪರಸ್ಪರ ಹಾಕಿಕೊಂಡು ಮುಂದಿನ ರಣತಂತ್ರವನ್ನು ಹೆಣೆಯಲು ರೂಪುರೇಷೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿಜೆಪಿ, ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು ಸೇರಿದಂತೆ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಅಭ್ಯರ್ಥಿ ಗೋವಿಂದ ಕಾರಜೋಳ, ಜೆಡಿಎಸ್‌ ಸಮನ್ವಯ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಸೇರಿದಂತೆ ಇತರರು ಹಾಜರಿದ್ದರು.

Lok Sabha Election 2024 BJP JDS coordination committee meeting successful Fight to win with the workers

ನಡೆದ ಚರ್ಚೆಗಳೇನು?

ಈಗಾಗಲೇ ಬಿಜೆಪಿ – ಜೆಡಿಎಸ್‌ ಮೈತ್ರಿಯಾಗಿದೆ. ಆದರೆ, ಇದು ದೆಹಲಿ ಮಟ್ಟದಲ್ಲಿ ಆಗಿದೆ. ಕಾರ್ಯಕರ್ತರನ್ನು ಈ ಬಗ್ಗೆ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಉಭಯ ಪಕ್ಷಗಳ ರಾಜ್ಯ ನಾಯಕರು ಸಹ ಒಟ್ಟಾಗಿಲ್ಲ ಎಂಬೆಲ್ಲ ಮಾತುಗಳು ಕೇಳಿಬಂದಿದ್ದವು. ಆದರೆ, ಇದಕ್ಕೆ ಬ್ರೇಕ್‌ ಹಾಕುವ ಸಂಬಂಧ ಈಗಾಗಲೇ ಮಂಡ್ಯ ಸೇರಿದಂತೆ ಕೆಲವು ಕಡೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಜತೆಗೆ ಪ್ರಚಾರ ಕಾರ್ಯವನ್ನು ಒಟ್ಟಾಗಿ ಮಾಡಲಾಗಿದೆ. ಈ ಮೂಲಕ ಎರಡೂ ಪಕ್ಷದ ಕಾರ್ಯಕರ್ತರಿಗೆ ನಾವೆಲ್ಲರೂ ಒಂದು ಎಂಬ ಭಾವನೆ ಮೂಡುವಂತೆ ಕೆಲಸ ಮಾಡಲಾಗುತ್ತಿದೆ. ಇನ್ನು ಎಲ್ಲ ಕಡೆ ಎರಡೂ ಪಕ್ಷದ ಪ್ರಮುಖ ನಾಯಕರು ಪ್ರಚಾರ ನಡೆಸಲಿದ್ದು, ಕಾರ್ಯಕರ್ತರೂ ಜತೆಯಾಗಬೇಕು. ರಾಜ್ಯದಲ್ಲಿ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬೇಕು. 28ಕ್ಕೆ 28 ಕ್ಷೇತ್ರವನ್ನು ಗೆದ್ದುಕೊಡುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಶ್ರಮವನ್ನು ಹಾಕಬೇಕು. ಕಾರ್ಯಕರ್ತರು ಈ ನಿಟ್ಟಿನಲ್ಲಿ ಜತೆಯಾಗಬೇಕು ಎಂಬ ಬಗ್ಗೆ ಚರ್ಚೆಯನ್ನು ನಡೆಸಲಾಯಿತು.

Lok Sabha Election 2024 BJP JDS coordination committee meeting successful Fight to win with the workers

ಒಟ್ಟಾಗಿ ದುಡಿಯುವ ವಾತಾವರಣ ಸೃಷ್ಟಿ: ಬಿ.ವೈ. ವಿಜಯೇಂದ್ರ‌

ಈ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಸಭೆ ಇದಾಗಿದೆ. ಬಹಳ ಹಿಂದೆಯೇ ಇಂಥದ್ದೊಂದು ಸಭೆ ಆಗಬೇಕಿತ್ತು. ಕಾರಣಾಂತರದಿಂದ ಮುಂದೂಡಲಾಗಿತ್ತು. ಬಿಜೆಪಿ – ಜೆಡಿಎಸ್ ಸಮಾಗಮವಾಗಿದೆ. ದೇಶದ ಭವಿಷ್ಯದಿಂದ ಗಂಭೀರವಾಗಿ ಪರಿಗಣಿಸಿ ಎಲ್ಲರೂ ಕೆಲಸ ಮಾಡಬೇಕು. ಎರಡೂ ಪಕ್ಷದ ನಾಯಕರು ಒಗ್ಗೂಡಲಾಗಿದೆ. ಬಿಜೆಪಿ – ಜೆಡಿಎಸ್‌ ಸಮ್ಮಿಲನd ರಾಜಕೀಯ ಇತಿಹಾಸವನ್ನು ಸುವರ್ಣಾಕ್ಷರದಲ್ಲಿ ಬರೆಯುವಂತಾಗಲಿದೆ ಎಂದು ಹೇಳಿದರು.

Lok Sabha Election 2024 BJP JDS coordination committee meeting successful Fight to win with the workers

ಬಿಜೆಪಿ-ಜೆಡಿಎಸ್ ನಡುವೆ ಈ ಹಿಂದೆಯೂ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಪ್ಪಿಗೆ ಕೊಟ್ಟಿರಲಿಲ್ಲ. 2024ರಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಿಗೆ ಸೇರಿದೆ ಅಂದರೆ ಇದರಲ್ಲಿ ದೇವೇಗೌಡರ ಆಶೀರ್ವಾದ ಬಹಳ ಮುಖ್ಯವಾಗಿದೆ. ಮುತ್ಸದ್ದಿ ರಾಜಕಾರಣಿ ದೇವೇಗೌಡರು ದೇಶದ ಅಭಿವೃದ್ಧಿ ದೃಷ್ಟಿಯಿಂದ, ಭದ್ರತೆ ದೃಷ್ಟಿಯಿಂದ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ‌ ಪ್ರಧಾನಿ ಆಗಬೇಕು ಎಂದು ಆಶಯವನನು ವ್ಯಕ್ತಪಡಿಸಿದ್ದಾರೆ. ಇದು ನಮಗೆ ಆನೆ ಬಲ‌ವನ್ನು ತಂದಿದೆ. ಎರಡೂ ಪಕ್ಷಗಳು ಒಂದಾಗಿ ಹಲವಾರು ತಿಂಗಳಾಗಿದೆ. ನಾನು ಕೂಡ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜತೆ ಎರಡು ದಿನಗಳಲ್ಲಿ ಮೈಸೂರು, ಮಂಡ್ಯದಲ್ಲಿ ಜಂಟಿ ಪ್ರವಾಸ ಮಾಡಿದ್ದೇವೆ. ಇದರಿಂದ ಎರಡೂ ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಇಂದಿನ ಒಗ್ಗಟ್ಟಿನ ಪರಿಣಾಮ, ರಾಜ್ಯದ ಪ್ರಜ್ಞಾವಂತ ಮತದಾರರಿಗೂ ಸಂತೋಷವಾಗಿದೆ. ನಿನ್ನೆ ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ ಎಂದು ಹೇಳಿದರು.

ಎರಡೂ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹೆಚ್ಚಿದೆ. ಸಮ್ಮಿಲನ ಆಗಿದೆ. ಇದನ್ನು ರಾಜ್ಯದ ಜನ ಗಂಭೀರವಾಗಿ ಪರಿಗಣಿಸಿದ್ದಾರೆ. ಒಟ್ಟಾಗಿ ದುಡಿಯುವ ವಾತಾವರಣ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ದುಡಿಯಬೇಕು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಕಾರಣಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಆರೋಗ್ಯವನ್ನು ಕಡೆಗಣಿಸಿ, ವಿಶ್ರಾಂತಿ ಪಡೆಯದೆ ನಮ್ಮ‌ ಜತೆ ಓಡಾಡುತ್ತಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಮೂರೇ ದಿನದಲ್ಲಿ ಪ್ರವಾಸ ಆರಂಭಿಸಿದ್ದಾರೆ. ಇದು ಅವರ ಬದ್ಧತೆಯನ್ನು ತೋರಿಸುತ್ತಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಿಂದ ಕನಿಷ್ಠ 15-20 ಸಚಿವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಗೆ ಹೆದರಿ, ಒಬ್ಬ ಸಚಿವರೂ ಚುನಾವಣೆ ಸ್ಪರ್ಧೆಯನ್ನು ಎದುರಿಸಲು ಮುಂದೆ ಬರಲಿಲ್ಲ. ಕಾಂಗ್ರೆಸ್ ಕಳೆದ ಒಂಭತ್ತು ತಿಂಗಳ ಆಡಳಿತವನ್ನು ಗಮನಿಸಿದರೆ ಜನವಿರೋಧವನ್ನು ಕಟ್ಟಿಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ದೇಶಗಳಲ್ಲಿ ಭ್ರಷ್ಟ ಸರ್ಕಾರ ಇದ್ದರೆ ಅದು ರಾಜ್ಯದ ಕಾಂಗ್ರೆಸ್ ಸರ್ಕಾರವಾಗಿದೆ. ದಲಿತ ವಿರೋಧಿ, ಬಡವರ ಪರ ಕಾಳಜಿ ಇಲ್ಲದ ಸರ್ಕಾರ ಇದಾಗಿದೆ. ಒಂದೇ ಒಂದು ರೂಪಾಯಿ ಅಭಿವೃದ್ಧಿಗೆ ನೀಡದ ಸರ್ಕಾರ ಇದು. ಈ ಬಗ್ಗೆ ಜನರೂ ಆಕ್ರೋಶಗೊಂಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

Lok Sabha Election 2024 BJP JDS coordination committee meeting successful Fight to win with the workers

ರಾಜ್ಯದಲ್ಲಿ 28 ಸ್ಥಾನವನ್ನು ಗೆಲ್ಲಬೇಕು: ಎಚ್‌ಡಿಕೆ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಅಗ್ರಗಣ್ಯ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ ಹತ್ತು ವರ್ಷಗಳಲ್ಲಿ ಜನಪ್ರಿಯತೆ ಹೆಚ್ಚಿದೆಯೇ ಹೊರತು, ಕಡಿಮೆಯಾಗಿಲ್ಲ. ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಬೇಕು. ರಾಜ್ಯದಲ್ಲಿ 28 ಸ್ಥಾನವನ್ನು ಗೆಲ್ಲಬೇಕು. ಮತದಾನದ ಕೊನೆಯವರೆಗೂ ಶ್ರಮಿಸಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

ನಿನ್ನೆಯಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. 28 ಕ್ಷೇತ್ರದಲ್ಲಿ ಎರಡೂ ಪಕ್ಷದವರು ಒಟ್ಟಾಗಿ ದುಡಿಯಬೇಕು. ಅಷ್ಟೂ ಕ್ಷೇತ್ರದಲ್ಲಿ ಗೆಲುವು ನಮ್ಮದಾಗಬೇಕು. ಈ ಹಿಂದೆಯೂ ನನ್ನ ಮೇಲೆ ಬಿಜೆಪಿಯ ಶಾಸಕರು ಪ್ರೀತಿ, ಗೌರವದಿಂದ ನೋಡಿದ್ದೀರಿ. ಹಿಂದೆ ಬಿ.ಎಸ್. ಯಡಿಯೂರಪ್ಪ, ನಾವು ಒಟ್ಟಿಗೆ ಸೇರಿ ಉತ್ತಮ ಆಡಳಿವನ್ನು ನೀಡಿದ್ದೆವು. ಅಂದು ನಮ್ಮ‌ ತಂದೆಯವರ ಅನುಮತಿ ದೊರೆತಿರಲಿಲ್ಲ. ವಿಧಾನಸಭೆಯನ್ನು ವಿಸರ್ಜನೆ ಮಾಡಿ ಹೋಗುವ ಸಂದರ್ಭದಲ್ಲಿ, ಎರಡೂ ಪಕ್ಷದ ಶಾಸಕರು ಮೈತ್ರಿ ಸರ್ಕಾರ ಮಾಡುವ ಒತ್ತಡ ಹಾಕಿದರು. ಅಂದಿನ ನನ್ನ ಉದ್ದೇಶ ಇದ್ದಿದ್ದು, ತಾತ್ಕಾಲಿಕ ಸರ್ಕಾರವಾಗಿತ್ತು. ಅಲ್ಲದೆ, ಶಾಶ್ವತ ಮೈತ್ರಿ ಇರಬೇಕು ಅಂತ ಅಂದುಕೊಂಡಿದ್ದೆ. ಹಲವಾರು ರಾಜಕೀಯ ಬೆಳವಣಿಗೆಯಿಂದ ಮೈತ್ರಿ ಸರ್ಕಾರವನ್ನು ನಡೆಸಲಾಗಲಿಲ್ಲ. ಅಂದು ನಮ್ಮ ತಂದೆಯವರಿಗೆ ತಪ್ಪು ಮಾಹಿತಿ ನೀಡುವ ಕೆಲಸ‌ವನ್ನು ಕೆಲವರು ಮಾಡಿದರು ಎಂದು ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

2018ರಲ್ಲಿ ನಾವು ನೀವು ಸೇರಿ ಮೈತ್ರಿ ಸರ್ಕಾರ ಮಾಡಿದ್ದರೆ ಇಂದಿಗೂ ನಾವೇ ಅಧಿಕಾರ ಮಾಡಬಹುದಿತ್ತು. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಬರಲು ಆಗುತ್ತಿರಲಿಲ್ಲ. ನಮ್ಮಲ್ಲಿರುವ ಒಡಕು, ಅವಿಶ್ವಾಸದ ಕಾರಣ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ಈಗ ಜೆಡಿಎಸ್‌ ಮೂಲೆ ಗುಂಪಾಯ್ತು ಅಂತ ಕಾಂಗ್ರೆಸ್ ತಿಳಿದಿದೆ. ದೇಶದ ಭದ್ರ ಬುನಾದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ್ದಾರೆ. ಪ್ರಧಾನಿಯವರ ದುಡಿಮೆಯನ್ನು ನೋಡಿದ್ದೇನೆ. ಅವರ ಆಹ್ವಾನದ ಮೇರೆಗೆ ನಾನು ಅವರನ್ನು ಭೇಟಿಯಾಗಿದ್ದೆ. ಅಲ್ಲಿಂದ ಇಲ್ಲಿಯವರೆಗೂ ಬಂದಿದೆ. ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರ ಬಂದಾಗ ಹೆಚ್ಚು ಕಡಿಮೆ ಮನಸ್ತಾಪ ಬಂದಿರಬಹುದು. ಆದರೆ, ಈಗ ಎಲ್ಲವೂ ಬಗೆಹರಿದಿದೆ. ಎರಡೂ ಪಕ್ಷದ ಮುಖಂಡರ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Continue Reading
Advertisement
LIC
ದೇಶ1 hour ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌1 hour ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್1 hour ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 20242 hours ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Drowned in canal
ದಾವಣಗೆರೆ2 hours ago

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Unmukt Chand
ಕ್ರೀಡೆ2 hours ago

Unmukt Chand: ಭಾರತ ತಂಡ ತೊರೆದು ಯುಎಸ್​ಎ ಸೇರಿದ ಉನ್ಮುಕ್ತ್‌ಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಅನುಮಾನ

Bullet Train
ದೇಶ3 hours ago

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Lok Sabha Election 2024 BJP JDS coordination committee meeting successful Fight to win with the workers
Lok Sabha Election 20243 hours ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ3 hours ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ3 hours ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌