Site icon Vistara News

Karnataka Election Result 2023: ಹಿರಿಯೂರು ಕೈ ಅಭ್ಯರ್ಥಿ ಮುನ್ನಡೆ; ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ!

#image_title

ಚಿತ್ರದುರ್ಗ: ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಹಿರಿಯೂರಿನ ಆಲಮರದಹಟ್ಟಿ ಗ್ರಾಮದ ಈರಣ್ಣ ಮೃತ ದುರ್ದೈವಿ ಆಗಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ (Karnataka Election Result 2023) ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ. ಸುಧಾಕರ್ ಸ್ಪರ್ಧಿಸಿದ್ದರು. ಜೆಡಿಎಸ್‌ ಪಕ್ಷದಿಂದ ರವೀಂದ್ರ ಕಣದಲ್ಲಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್‌ 5,000 ಮತಗಳ ಅಂತರದಿಂದ ಹಿನ್ನಡೆ ಸಾಧಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದ ಈರಣ್ಣ ನಿಂತಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಈರಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಆದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು.

ಇದನ್ನೂ ಓದಿ: Chitradurga Election Results : ಚಿತ್ರದುರ್ಗದಲ್ಲಿ ಕಾಂಗ್ರೆಸ್‌ನ ಕೆ.ಸಿ ವೀರೇಂದ್ರ ಪಪ್ಪಿ ಜಯಭೇರಿ

ಅಂದಹಾಗೆ, 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಅವರು 77,733 ಮತಗಳೊಂದಿಗೆ ಗೆಲುವು ಕಂಡಿದ್ದರು. ಕಾಂಗ್ರೆಸ್‌ನ ಡಿ. ಸುಧಾಕರ್ 64,858 ಮತ ಗಳಿಸಿದ್ದರು. ಜೆಡಿಎಸ್‌ನ ಡಿ. ಯಶೋಧರ 42,044 ಮತ ಗಳಿಸಿ ಸೋಲು ಅನುಭವಿಸಿದ್ದರು. ಗೆಲುವಿನ ಅಂತರ 12,875 ಮತಗಳಾಗಿತ್ತು. ಕ್ಷೇತ್ರದಲ್ಲಿರುವ ಒಟ್ಟು ಮತಗಳು 232,662 ಪುರುಷರು: 116,483 ಮಹಿಳೆಯರು: 116,143 ಇದ್ದಾರೆ.

Exit mobile version