Site icon Vistara News

Karnataka Election Results 2023: ಮೊದಲ ಮೂರೂ ಕಾಂಗ್ರೆಸ್‌ ಪಾಲು; ಕನಕಪುರ, ಚಳ್ಳಕೆರೆ, ಚಿತ್ರದುರ್ಗದಲ್ಲಿ ಗೆಲುವು

dk shivakumar

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ (Karnataka Election results 2023) ಮೊದಲ ಮೂರು ಫಲಿತಾಂಶಗಳು ಪ್ರಕಟವಾಗಿದ್ದು, ಮೂರೂ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೀರೇಂದ್ರ ಪಪ್ಪಿ ಮತ್ತು ಚಳ್ಳಕೆರೆಯಲ್ಲಿ ಟಿ. ರಘುಮೂರ್ತಿ ಅವರು ಗೆಲುವು ಸಾಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಟಿ. ರಘು ಆಚಾರ್‌ ಅವರ ಅತಿ ದೊಡ್ಡ ಬಂಡಾಯವನ್ನು ಎದುರಿಸಿದರೂ ಅದನ್ನು ಮೀರಿ ಕಾಂಗ್ರೆಸ್‌ ಗೆದ್ದಿದೆ. ಇಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದೆ ಸಿಟ್ಟಿಗೆದ್ದಿದ್ದ ರಘು ಆಚಾರ್‌ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇತ್ತ ಚಳ್ಳಕೆರೆಯಲ್ಲಿ ಟಿ. ರಘುಮೂರ್ತಿ ಗೆಲುವಿನ ಘೋಷಣೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಎಂ.ಸಿ. ಸುಧಾಕರ್‌, ಮೊಳಕಾಲ್ಮೂರಿನಲ್ಲಿ ಎನ್‌.ವೈ. ಗೋಪಾಲಕೃಷ್ಣ ಗೆಲುವು ಸಾಧಿಸುವ ಹಾದಿಯಲ್ಲಿದ್ದಾರೆ.

ಕನಕಪುರದಲ್ಲಿ ಡಿ.ಕೆ. ಶಿವಕುಮಾರ್‌ ಆರಂಭದಿಂದಲೂ ಮುನ್ನಡೆಯಲ್ಲಿದ್ದು, ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದಾರೆ

ಇದನ್ನೂ ಓದಿ : Karnataka Election Results Live Updates: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಬೆಳವಣಿಗೆ

Exit mobile version