Site icon Vistara News

Karnataka Election Results : ಸೋಲಿಗೆ ನಾನೇ ಸಂಪೂರ್ಣ ಹೊಣೆ ಹೊರುತ್ತೇನೆ: ಮಾಜಿ ಶಾಸಕ ಪರಣ್ಣ ಮುನವಳ್ಳಿ

Gangavati Former MLA Parana Munavalli pressmeet

ಗಂಗಾವತಿ: ವಿಧಾನಸಭಾ ಚುನಾವಣೆಯಲ್ಲಿ ವ್ಯಕ್ತವಾದ ಫಲಿತಾಂಶದ (Karnataka Election Results) ಗಂಗಾವತಿ ಕ್ಷೇತ್ರದ ಸೋಲಿನ ಸಂಪೂರ್ಣ ಹೊಣೆ ನಾನೇ ಹೊರುತ್ತೇನೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಗಂಗಾವತಿಯಲ್ಲಿನ ಸೋಲಿನ ಸಂಪೂರ್ಣ ಹೊಣೆ ನನ್ನದೇ ಎಂದ ಮಾಜಿ ಶಾಸಕ ಪರಣ್ಣ ಮುನವಳ್ಳಿ, ನಾನು ಸೋತಿರಬಹುದು. ಆದರೆ ಇದು ಕಾರ್ಯಕರ್ತರ ಸೋಲಲ್ಲ. ನಾವು ಮತ್ತೆ ತಪ್ಪನ್ನು ತಿದ್ದಿಕೊಂಡು ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: Praveen Sood : ಸಿಬಿಐ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಪ್ರವೀಣ್‌ ಸೂದ್‌ ಹಿನ್ನೆಲೆ ಏನು?

ಮುಂದಿನ ಲೋಕಸಭಾ ಚುನಾವಣೆಯ ಹೊತ್ತಿಗೆ ಪಕ್ಷವನ್ನು ಮತ್ತಷ್ಟು ಗಟ್ಟಿಯಾಗಿ ಕಟ್ಟುತ್ತೇವೆ. ಈ ಸೋಲಿನಿಂದ ಯಾರೂ ಧೃತಿಗೆಡಬಾರದು. ಮುಖ್ಯವಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಎಂದಿನಂತೆ ಸ್ಫೂರ್ತಿಯಿಂದ ಇರಬೇಕು ಎಂದು ಮನವಿ ಮಾಡಿದರು.

Exit mobile version