Site icon Vistara News

Karnataka Election Results: ಪ್ರಾಬಲ್ಯದ ವಿರುದ್ಧ ಜನಶಕ್ತಿ ಗೆದ್ದಿದೆ; ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ ಹೇಳಿದ್ದಿಷ್ಟು

Karnataka Election

Karnataka Election

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Election Results) ಜನರ ಬೆಂಬಲ ಗಳಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಸ್ಪಷ್ಟ ಬಹುಮತದತ್ತ ಕಾಂಗ್ರೆಸ್‌ ದಾಪುಗಾಲು ಇಡುತ್ತಿದ್ದು, ಸರ್ಕಾರ ರಚನೆ ಖಚಿತವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂದಿ ಅವರು ಕಾಂಗ್ರೆಸ್‌ ಗೆಲುವಿನ ಕುರಿತು ಪ್ರತಿಕ್ರಿಯಿಸಿದ್ದು, “ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಹೇಳಿದರು. ಹಾಗೆಯೇ, “ಪ್ರಾಬಲ್ಯದ ಎದುರು ಜನರ ಶಕ್ತಿ ಗೆದ್ದಿದೆ” ಎಂದು ಗೆಲುವನ್ನು ವಿಶ್ಲೇಷಿಸಿದರು.

“ಕರ್ನಾಟಕದ ಜನರಿಗೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ, ಆಶೀರ್ವದಿಸಿದ್ದಾರೆ. ಗೆಲುವಿಗಾಗಿ ಶ್ರಮಿಸಿದ ಕರ್ನಾಟಕದ ನಾಯಕರಿಗೂ ನಾನು ಅಭಿನಂದಿಸುತ್ತೇನೆ. ರಾಜ್ಯದಲ್ಲಿ ದ್ವೇಷದ ವಿರುದ್ಧ ಪ್ರೀತಿ ಗೆದ್ದಿದೆ. ನಾವು ಜನರ ಪ್ರೀತಿಯನ್ನು ಗಳಿಸವಲ್ಲಿ ಯಶಸ್ವಿಯಾಗಿದ್ದೇವೆ. ಜನರ ಹೃದಯದಲ್ಲಿ ನಾವು ಸ್ಥಾನ ಗಳಿಸಿದ್ದೇವೆ. ನಾವು ಪ್ರೀತಿಯಿಂದ ಚುನಾವಣೆ ಎದುರಿಸಿದ ಕಾರಣ, ಜನರ ಪ್ರೀತಿ ಗಳಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: Gangavathi Election Results : ಗಂಗಾವತಿಯಲ್ಲಿ ಮಾಜಿ ಸಚಿವ ಜಿ. ಜನಾರ್ಧನರೆಡ್ಡಿ ಗೆಲುವು

ರಾಜ್ಯದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕುತ್ತಿದೆ. ಒಟ್ಟು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 135 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಲ್ಲೂ, ಬಿಜೆಪಿಯ ಡಾ.ಕೆ.ಸುಧಾಕರ್, ಶ್ರೀರಾಮುಲು, ಗೋವಿಂದ ಕಾರಜೋಳ ಸೇರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಇನ್ನು ಹಿನ್ನಡೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕರು, ನಾವು ಜನರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ. ಇನ್ನು ಸೋಲಿನ ಹೊಣೆ ಹೊರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Exit mobile version