Site icon Vistara News

Karnataka Election Results‌ : ಜಮೀರ್ ಅಹ್ಮದ್‌ ಖಾನ್‌ಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

demand DCM post to MLA Jamir Ahmed Khan

ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ (Congress party) ಜನರು ಬಹುಮತ ನೀಡಿದ್ದು, ಸರ್ಕಾರ (Government) ರಚನೆಗೆ ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಡಿಸಿಎಂ ಸ್ಥಾನ ನೀಡುವಂತೆ ಕೊಪ್ಪಳದಲ್ಲಿ ಜಮೀರ್ ಬೆಂಬಲಿಗರು, ಮುಸ್ಲಿಂ ಸಮುದಾಯದವರು ಆಗ್ರಹಿಸಿದರು.

ನಗರದ ಅಶೋಕ ಸರ್ಕಲ್‌ನಲ್ಲಿ ಜಮಾಯಿಸಿದ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಮತ್ತು ಮುಸ್ಲಿಂ ಸಮುದಾಯದವರು ಜಮೀರ್ ಪರ ಘೋಷಣೆಗಳನ್ನು ಕೂಗಿದರು.

ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲು ಜಮೀರ್ ಅವರ ಕೊಡುಗೆಯೂ ಇದೆ. ತಮ್ಮ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ರಾಜ್ಯದ ಬೇರೆ ಬೇರೆ ಕಡೆ ಪ್ರಚಾರ ನಡೆಸಿ ಕಾಂಗ್ರೆಸ್ ಭರ್ಜರಿ ಗೆಲುವಿಗೆ ಜಮೀರ್ ಸಹ ಕಾರಣರಾಗಿದ್ದಾರೆ.

ಇದನ್ನೂ ಓದಿ: Plans to ban diesel Cars : 2027ಕ್ಕೆ ಡೀಸೆಲ್‌ ಕಾರುಗಳಿಗೆ ನಿಷೇಧ ಸಾಧ್ಯತೆ, ಮಾರಾಟ 17%ಕ್ಕೆ ಕುಸಿತ

ಹೀಗಾಗಿ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡುವದರ ಜೊತೆಗೆ ಜಮೀರ್ ಅಹ್ಮದ್ ಅವರನ್ನು ಡಿಸಿಎಂ ಮಾಡುವಂತೆ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಖಲೀಲ್ ಪಟೇಲ್, ಶಿವಮೂರ್ತಿ ಗುತ್ತೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version