Karnataka Election : ಪುತ್ತೂರಿನಿಂದ SDPI ಅಭ್ಯರ್ಥಿ ಘೋಷಣೆ; ಪ್ರವೀಣ್‌ ನೆಟ್ಟಾರ್‌ ಕೊಲೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಿಂದಲೇ ಸ್ಪರ್ಧೆ - Vistara News

ಕರ್ನಾಟಕ

Karnataka Election : ಪುತ್ತೂರಿನಿಂದ SDPI ಅಭ್ಯರ್ಥಿ ಘೋಷಣೆ; ಪ್ರವೀಣ್‌ ನೆಟ್ಟಾರ್‌ ಕೊಲೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಿಂದಲೇ ಸ್ಪರ್ಧೆ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಪುತ್ತೂರು ಕ್ಷೇತ್ರದಿಂದ (Karnataka Election) ಕಣಕ್ಕಿಳಿಸಲು ಎಸ್‌ಡಿಪಿಐ ನಿರ್ಧರಿಸಿದೆ.

VISTARANEWS.COM


on

Shafi bellare
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ವನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬಳಿಕ ಅದರ ರಾಜಕೀಯ ಮುಖವಾಗಿರುವ ಎಸ್‌ಡಿಪಿಐಯ ಭವಿಷ್ಯದ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಎಸ್‌ಡಿಪಿಐ ವಿಧಾನಸಭಾ ಚುನಾವಣೆಯ(Karnataka Election) ಬಗ್ಗೆ ಸಮಗ್ರ ಚರ್ಚೆ ನಡೆಸಿ ಪುತ್ತೂರಿನಿಂದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ, ಪ್ರಸಕ್ತ ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರು ಕಣಕ್ಕಿಳಿಯಲಿದ್ದಾರೆ ಎಂದು ಪುತ್ತೂರಿನಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಣೆ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಖಾನ್‌ ಅವರು ಈ ಘೋಷಣೆ ಮಾಡಿದ್ದಾರೆ.

ಜೈಲಿನಿಂದಲೇ ಸ್ಪರ್ಧಿಸಲಿದ್ದಾರೆ ಶಾಫಿ ಬೆಳ್ಳಾರೆ
ನಿಜವೆಂದರೆ ಶಾಫಿ ಬೆಳ್ಳಾರೆ ಅವರು ೨೦೨೨ರ ಜುಲೈ ೨೬ರಂದು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿದ್ದಾರೆ. ಈ ಕೊಲೆಯಲ್ಲಿರುವ ಶಾಮೀಲಾತಿಯ ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅವರನ್ನು ಬಂಧಿಸಿತ್ತು. ಈಗ ಶಾಫಿ ಜೈಲಿನಲ್ಲಿದ್ದಾರೆ.

ಅವರನ್ನು ಪುತ್ತೂರು ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಅವರೀಗ ಜೈಲಿನಿಂದಲೇ ಕಣಕ್ಕೆ ಇಳಿಯಬೇಕಾಗಿದೆ. ಪ್ರವೀಣ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಮೇಲೆ ನೇರವಾದ ಆರೋಪಗಳಿವೆ ಎಂದು ಎನ್‌ಐಎ ಹೇಳಿತ್ತು.

ಪಿಎಫ್‌ಐ ಬ್ಯಾನ್‌, ಪ್ರವೀಣ್‌ ನೆಟ್ಟಾರ್‌ ಕೊಲೆ ಮತ್ತು ಬೆಂಗಳೂರಿನ ಕೆಜಿ ಹಳ್ಳಿ, ಡಿಜಿ ಹಳ್ಳಿ ಘಟನೆಗಳಿಗೆ ಸಂಬಂಧಿಸಿ ಎಸ್‌ಡಿಪಿಐನ ಹಲವು ಕಚೇರಿಗಳ ಮೇಲೆ ಪೊಲೀಸ್‌ ಹಾಗೂ ಎನ್‌ಐಎ ದಾಳಿ ನಡೆದಿತ್ತು. ಹಲವು ಕಚೇರಿಗಳನ್ನು ಮುಚ್ಚಲಾಗಿತ್ತು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಹಲವಾರು ನಾಯಕರನ್ನ ಬಂಧಿಸಲಾಗಿತ್ತು.

ಇದನ್ನೂ ಓದಿ : SDPI office raid : ಎಸ್‌ಡಿಪಿಐ ಕಚೇರಿ ದಾಳಿಗೆ ಕೇಂದ್ರ ಸರ್ಕಾರದ ನಿರ್ದೇಶನವಿತ್ತೇ?: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತೈ ಖಂಡಿಸಿ, ಗಂಗಾವತಿಯ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

VISTARANEWS.COM


on

Condemns Neha murder case Gangavathi bandh
Koo

ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ (Neha Murder Case) ಖಂಡಿಸಿ, ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿರುವ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ ವ್ಯಾಪಾರಿಗಳು ಬಂದ್‌ಗೆ ಸಹಕಾರ ನೀಡಿದರು. ಅತ್ಯವಶ್ಯಕ ಸೇವೆಗಳಾದ ಹಾಲಿನ ಕೇಂದ್ರ, ಆರೋಗ್ಯ ಸೇವೆ, ಮೆಡಿಕಲ್ ಶಾಪ್, ತರಕಾರಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಬಂದ್ ಕರೆ ನೀಡಿದ್ದ ಸಂಘಟನೆಯವರು, ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರಕ್ಕೆ ಅಡ್ಡಿಪಡಿಸದ ಹಿನ್ನೆಲೆ ಜನರ ಓಡಾಟ ಸಹಜವಾಗಿತ್ತು.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಹುತೇಕ ಅಂಗಡಿ-ಮುಂಗಟ್ಟು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳ್ಳಾರಿ ವಲಯದ ಐಜಿಪಿ ಆರ್.ಎಸ್. ಲೋಕೇಶ್‌ ಕುಮಾರ್, ಎಸ್ಪಿ ಯಶೋಧಾ ವಂಟೆಗೋಡೆ ಸ್ಥಳದಲ್ಲಿ ಬಿಡಾರ ಹೂಡಿದ್ದರು.

ಬೃಹತ್ ಮೆರವಣಿಗೆ

ಇದಕ್ಕೂ ಮೊದಲು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಎಪಿಎಂಸಿಯ ಮೊದಲ ಗೇಟ್‌ನಿಂದ ಮಹಾತ್ಮಗಾಂಧಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕನ್ನಡಪರ ಸಂಘಟನೆ, ವಿವಿಧ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಈ ಸಂದರ್ಭದಲ್ಲಿ ಮಾಜಿ ಸಂಸದ ಎಸ್. ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ವೀರಪ್ಪ, ಕಾಡಾದ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ರಾಘವೇಂದ್ರ ಶೆಟ್ಟಿ, ಶಂಕರೇಗೌಡ ಹೊಸಳ್ಳಿ, ಅಶ್ವಿನಿ ದೇಸಾಯಿ, ಮನೋಹರಸ್ವಾಮಿ, ಕವಿತಾ ಗುರುಮೂರ್ತಿ ಸೇರಿದಂತೆ ನಾನಾ ಸಮಾಜದ ಮುಖಂಡರು ಭಾಗಿಯಾಗಿದ್ದರು.

Continue Reading

ಕರ್ನಾಟಕ

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Rapido Free Ride: ವಿಶೇಷವಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಪ್ರತ್ಯೇಕವಾಗಿ ರ‍್ಯಾಪಿಡೋದ ಉಚಿತ ಆಟೋ ಮತ್ತು ಕ್ಯಾಬ್ ಸೇವೆಗಳನ್ನು ವಿಸ್ತರಿಸಲಾಗಿದೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರೋತ್ಸಾಹಿಸಲು ಉಚಿತ ಹಾಗೂ ರಿಯಾಯಿತಿ ದರದಲ್ಲಿ ಊಟ, ತಿಂಡಿ ವಿತರಣೆಗೆ ಹಲವು ಹೋಟೆಲ್‌ಗಳಲ್ಲಿ ಮುಂದಾಗಿದೆ. ಅದೇ ರೀತಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲು ಅನುಕೂಲವಾಗಲು ಭಾರತದ ಅಗ್ರಗಣ್ಯ ಪ್ರಯಾಣ ಅಪ್ಲಿಕೇಶನ್ ರ‍್ಯಾಪಿಡೋ ಸಂಸ್ಥೆ “ಸವಾರಿ ಜಿಮ್ಮೆದಾರಿ ಕಿ” ಉಪಕ್ರಮದ ಭಾಗವಾಗಿ ಏ.26ರಂದು ಬೆಂಗಳೂರು, ಮೈಸೂರು ಹಾಗೂ ಮಂಗಳೂರು ನಗರದಲ್ಲಿ ಮತದಾರರಿಗೆ ರ‍್ಯಾಪಿಡೋ ಉಚಿತ ಬೈಕ್‌ ಸವಾರಿ (Rapido Bike Taxi) ಒದಗಿಸುವಾಗಿ ಘೋಷಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಸೌಲಭ್ಯ ಸಿಗಲಿದೆ.

ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ರ‍್ಯಾಪಿಡೋ, ಭಾರತದ ಸಾರ್ವತ್ರಿಕ ಚುನಾವಣೆ-2024 ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಒದಗಿಸಲು ನಿರ್ಧರಿಸಿದೆ. ಹೀಗಾಗಿ ಏ.26ರಂದು ಬೆಂಗಳೂರಿನ ಮತದಾರರು ರ‍್ಯಾಪಿಡೋ ಉಚಿತ ಸವಾರಿ ಅನುಕೂಲ ಪಡೆಯಬಹುದಾಗಿದೆ.

ಮತದಾನದ (ಏ.26) ದಿನದಂದು, ಮತದಾರರು ‘VOTENOW’ ಕೋಡ್ ಅನ್ನು ಬಳಸಿಕೊಂಡು ರ‍್ಯಾಪಿಡೋ ಅಪ್ಲಿಕೇಶನ್‌ನಲ್ಲಿ ಉಚಿತ ಸವಾರಿಗಳನ್ನು ಪಡೆಯಬಹುದು ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬಹುದು. ಈ ಉಪಕ್ರಮವು ನಿವಾಸಿಗಳ ಮತದಾನದ ಹಕ್ಕು ಚಲಾವಣೆ ಸುಲಭಗೊಳಿಸುವ ಗುರಿ ಹೊಂದಿದೆ. ಚುನಾವಣಾ ದಿನದಂದು ಉಚಿತ ಸವಾರಿಗಳನ್ನು ಒದಗಿಸಲು 100ಕ್ಕೂ ಹೆಚ್ಚು ನಗರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕ್ಯಾಪ್ಟನ್‌ಗಳನ್ನು ರ‍್ಯಾಪಿಡೋ ನಿಯೋಜಿಸುತ್ತದೆ. ಭಾರತದ ಚುನಾವಣಾ ಆಯೋಗ ಬೆಂಬಲದೊಂದಿಗೆ, ರ‍್ಯಾಪಿಡೋ ಕರ್ನಾಟಕದ ಮತದಾರರಿಗೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಾದ್ಯಂತ ಚುನಾವಣಾ ದಿನದಂದು ಉಚಿತ ಬೈಕ್ ಟ್ಯಾಕ್ಸಿ ಸವಾರಿಗಳನ್ನು ನೀಡಲಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗಿನ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಧನಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಬದ್ಧತೆ ಹೊಂದಿದೆ. ಈ ಕುರಿತು ರ‍್ಯಾಪಿಡೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತೀಯ ಸಾರ್ವತ್ರಿಕ ಚುನಾವಣೆ 2024 ರಲ್ಲಿ ಮತದಾನ ಮಾಡುವ ಮೂಲಕ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಪ್ರತಿಯೊಬ್ಬ ಮತದಾರರು ತಮ್ಮ ನಾಗರಿಕ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಲು ನಾವು ಈ ಉಪಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ವಿಶೇಷವಾಗಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸಮಾನ ಅವಕಾಶ ಹೊಂದಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಅವರಿಗೆ ಉಚಿತ ಆಟೋ ಮತ್ತು ಕ್ಯಾಬ್ ಸವಾರಿಗಳನ್ನು ವಿಸ್ತರಿಸುವ ಮೂಲಕ, ನಾವು ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಜವಾಬ್ದಾರಿಗೆ ನಮ್ಮ ಬದ್ಧತೆಯನ್ನು ದ್ವಿಗುಣಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಈ ಉಚಿತ ಸವಾರಿಗಳನ್ನು ನೀಡುವ ಮೂಲಕ, ನಾವು ಕರ್ನಾಟಕದಲ್ಲಿ ನಮ್ಮ ರ‍್ಯಾಪಿಡೋ ನಾಯಕರು ಕೇವಲ ಚಾಲಕರಿಗಿಂತ ಹೆಚ್ಚಿನ ಮತದಾರರು, ಹೆಚ್ಚಿನ ಮತದಾನವನ್ನು ಸಕ್ರಿಯಗೊಳಿಸುತ್ತಾರೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಹೆಚ್ಚು ಪ್ರಾತಿನಿಧಿಕ ಚುನಾವಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತಾರೆ ಎಂದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗೆ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಬದಲಾವಣೆಯನ್ನು ಪ್ರೇರೇಪಿಸುವ ಬ್ರಾಂಡ್ ಆಗಿರುವ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಈ ರೀತಿಯ ಉಪಕ್ರಮಗಳ ಮೂಲಕ, ರ‍್ಯಾಪಿಡೋ ದೇಶಾದ್ಯಂತ ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಯನ್ನು ಮಾಡುವ ತನ್ನ ಸಮರ್ಪಣೆಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಈ ಉಪಕ್ರಮವು ತಮ್ಮ ಮತ ಚಲಾಯಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಕರ್ನಾಟಕದ ಮತದಾರರ ಜನಸಂಖ್ಯೆಯನ್ನು ಸಶಕ್ತಗೊಳಿಸಲು ಮತ್ತು ಉತ್ತೇಜಿಸಲು ರ‍್ಯಾಪಿಡೋ ಅವರ ಸಮರ್ಪಣೆಯನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ | Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ನಾಗರಿಕ ಒಗ್ಗೂಡುವಿಕೆ ಪೂರ್ವಭಾವಿ ಹೆಜ್ಜೆಯಲ್ಲಿ, ರ‍್ಯಾಪಿಡೋ ತನ್ನ ಎಲ್ಲಾ ಸಂಪನ್ಮೂಲಗಳನ್ನು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಕೈಜೋಡಿಸುವ ಮೂಲಕ ಬೆಂಗಳೂರಿನ ಮತದಾರರಿಗೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ರೈಡ್‌ಗಳನ್ನು ನೀಡುತ್ತಿದೆ

Continue Reading

Lok Sabha Election 2024

Lok Sabha Election 2024: ಇಂದಿನಿಂದ 3 ದಿನ ಬೆಂಗಳೂರಲ್ಲಿ ಮದ್ಯ ಮಾರಾಟ ಇಲ್ಲ; ಮತ್ತೂ 1 ದಿನ ಸಿಗಲ್ಲ ಎಣ್ಣೆ!

Lok Sabha Election 2024: ಈ ಸಮಯದಲ್ಲಿ ಅಂಗಡಿಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಯಾವುದೇ ಸಂಸ್ಥೆಗಳು ಮದ್ಯ ಮಿಶ್ರಿತ ಪಾನೀಯಗಳನ್ನು ಮಾರಾಟ ಮಾಡುವಂತಿಲ್ಲ. ಈ ಎಲ್ಲದಕ್ಕೂ ನಿರ್ಬಂಧವನ್ನು ವಿಧಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಆಹಾರ ಮತ್ತು ಆಲ್ಕೊಹಾಲ್‌ಯುಕ್ತವಲ್ಲದ ಪಾನೀಯಗಳನ್ನು ನೀಡಲು ಅನುಮತಿ ಇದೆ ಎಂದು ಆದೇಶದಲ್ಲಿ ಹೇಳಲಾಗಿದೆ.

VISTARANEWS.COM


on

Lok Sabha Election 2024 No sale of liquor in Bengaluru for 3 days from today
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ (First phase of polling) ನಡೆಯಲಿದೆ. ಈ ವೇಳೆ 14 ಲೋಕಸಭಾ ಕ್ಷೇತ್ರಗಳಿಗೆ ಕೆಲವು ನಿಯಮಗಳು ಅನ್ವಯವಾಗಲಿದೆ. ಈ ಸಂಬಂಧ ಈಗ ಬೆಂಗಳೂರು ನಗರದಲ್ಲಿ ಬುಧವಾರ (ಏಪ್ರಿಲ್‌ 24) ಸಂಜೆ 5 ಗಂಟೆಯಿಂದ ಏಪ್ರಿಲ್‌ 26ರ ಮಧ್ಯರಾತ್ರಿ ವರೆಗೆ ಎಲ್ಲ ರೀತಿಯ ಮದ್ಯ ಮಾರಾಟವನ್ನು (Sale of liquor) ನಿಷೇಧಿಸಿ ಆದೇಶಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಇಲಾಖೆ ಈ ನಿರ್ದೇಶನವನ್ನು ನೀಡಿದೆ. ಏಪ್ರಿಲ್ 24ರ ಬುಧವಾರ ಸಂಜೆ 5 ರಿಂದ ಏಪ್ರಿಲ್ 26 ರ ಮಧ್ಯರಾತ್ರಿವರೆಗೆ ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ನಿರ್ದೇಶನದಲ್ಲಿ ಉಲ್ಲೇಖಿಸಲಾಗಿದೆ.

ಮತ ಎಣಿಕೆ ದಿನವೂ ಬೆಂಗಳೂರಲ್ಲಿ ಇಲ್ಲ ಮದ್ಯ ಮಾರಾಟ

ಬೆಂಗಳೂರಿನಲ್ಲಿ ಮತ ಎಣಿಕೆ ದಿನವೂ ಒಂದಿಡೀ ದಿನ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿದೆ. ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4 ರ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿ ಆದೇಶಿಸಲಾಗಿದೆ.

ಈ ಸಮಯದಲ್ಲಿ ಅಂಗಡಿಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಯಾವುದೇ ಸಂಸ್ಥೆಗಳು ಮದ್ಯ ಮಿಶ್ರಿತ ಪಾನೀಯಗಳನ್ನು ಮಾರಾಟ ಮಾಡುವಂತಿಲ್ಲ. ಈ ಎಲ್ಲದಕ್ಕೂ ನಿರ್ಬಂಧವನ್ನು ವಿಧಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಆಹಾರ ಮತ್ತು ಆಲ್ಕೊಹಾಲ್‌ಯುಕ್ತವಲ್ಲದ ಪಾನೀಯಗಳನ್ನು ನೀಡಲು ಅನುಮತಿ ಇದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲೇನಿದೆ?

“ನಾನು, ಡೆಪ್ಯುಟಿ ಕಮಿಷನರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು, ಸರ್ಕಾರದ ಕರ್ನಾಟಕ ಅಬಕಾರಿ ಕಾಯಿದೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು, 1967 ರ ನಿಯಮ-10 (ಬಿ) ಸೆಕ್ಷನ್ 135 (ಸಿ) ಮೂಲಕ ಪ್ರದಾನ ಮಾಡಲಾದ ಅಧಿಕಾರಗಳನ್ನು ಚಲಾಯಿಸುವಾಗ ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951 ಮತದಾನದ ದಿನಾಂಕ: 24-04-2024 ರಿಂದ ಸಂಜೆ 5.00 ರವರೆಗೆ ದಿನಾಂಕ: 26-04-2024 12.00 ಮಧ್ಯರಾತ್ರಿ ಮತ್ತು ಎಣಿಕೆ ದಿನಾಂಕ: 03-06-2024 12.00 ಮಧ್ಯರಾತ್ರಿಯಿಂದ 12.04-4 ಮಧ್ಯರಾತ್ರಿ 6 ರಂದು 24-04-2024 ರವರೆಗೆ ಬೆಂಗಳೂರು ನಗರ ಜಿಲ್ಲೆ (ಪೊಲೀಸ್ ಕಮಿಷನರೇಟ್ ಪ್ರದೇಶ ಹೊರತುಪಡಿಸಿ) ಎಲ್ಲ ರೀತಿಯ ಮದ್ಯ ಉತ್ಪಾದನೆ, ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆ ಇತ್ಯಾದಿಗಳನ್ನು ನಿಷೇಧಿಸಿ ಆದೇಶವನ್ನು ಜಾರಿಗೊಳಿಸಿ ಮತ್ತು ‘ಡ್ರೈ ಡೇಸ್’ ಎಂದು ಘೋಷಿಸಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26 ರ ಮಧ್ಯರಾತ್ರಿಯವರೆಗೆ ಸಿಆರ್‌ಪಿಸಿಯ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Muslims OBC Quota: ಕರ್ನಾಟಕದ ಎಲ್ಲ ಮುಸ್ಲಿಮರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಮೀಸಲಾತಿ ವ್ಯಾಪ್ತಿಗೆ ಸೇರಿಸಿದೆ. ಈ ಕುರಿತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ. ಆದರೆ, ಒಬಿಸಿ ಮೀಸಲಾತಿಯು ಸಮುದಾಯಗಳಿಗೆ ಸೇರಿದೆಯೇ ಹೊರತು, ಇಡೀ ಧರ್ಮಕ್ಕೆ ನೀಡುವುದು ಸರಿಯಲ್ಲ ಎಂದು ಆಯೋಗವು ಅಸಮಾಧಾನ ವ್ಯಕ್ತಪಡಿಸಿದೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Muslims OBC Quota
Koo

ಬೆಂಗಳೂರು/ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲಿಯೇ ಕರ್ನಾಟಕ ಸರ್ಕಾರವು (Karnataka Government) ಮಹತ್ವದ ತೀರ್ಮಾನವೊಂದು ತೆಗೆದುಕೊಂಡಿದೆ. ಹೌದು, ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ದಿಸೆಯಲ್ಲಿ ರಾಜ್ಯ ಸರ್ಕಾರವು ಮುಸ್ಲಿಮರನ್ನು ಇತರೆ ಹಿಂದುಳಿದ ವರ್ಗಗಳ (Muslims OBC Quota) ಕೆಟಗರಿಗೆ ಸೇರಿದೆ. ಆದರೆ, ಇದಕ್ಕೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು (NCBC) ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ನೀಡುವ ದಿಸೆಯಲ್ಲಿ ಆ ಧರ್ಮದ ಎಲ್ಲರನ್ನೂ ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯೇ ಮಾಹಿತಿ ನೀಡಿದೆ. “ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ” ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯು ದಾಖಲೆಗಳನ್ನೂ ನೀಡಿದೆ. ಮಾಹಿತಿ ಪ್ರಕಾರ, “ಕರ್ನಾಟಕಲ್ಲಿ ಮುಸ್ಲಿಮರ ಸಂಖ್ಯೆ ಶೇ.12.92ರಷ್ಟಿದೆ. ಕೆಟಗರಿ II-B ಅನ್ವಯ ಕರ್ನಾಟಕದಲ್ಲಿರುವ ಎಲ್ಲ ಮುಸ್ಲಿಮರು ಒಬಿಸಿ ಕೆಟಗರಿ ವ್ಯಾಪ್ತಿಗೆ ಸೇರುತ್ತಾರೆ. ಕೆಟಗರಿ 1ರಲ್ಲಿ 17 ಮುಸ್ಲಿಂ ಸಮುದಾಯಗಳು, 2ಎ ಕೆಟಗರಿಯಲ್ಲಿ 19 ಮುಸ್ಲಿಂ ಸಮುದಾಯಗಳು ಬರುತ್ತವೆ. ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧದ ತೀರ್ಮಾನವಾಗಿದೆ” ಎಂಬುದಾಗಿ ಎನ್‌ಸಿಬಿಸಿ ತಿಳಿಸಿದೆ.

“ಹಿಂದುಗಳು, ಮುಸ್ಲಿಮರು ಸೇರಿ ಎಲ್ಲ ಧರ್ಮಗಳಲ್ಲಿಯೇ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಲಾಗುತ್ತಿದೆ. ಆದರೆ, ಒಂದಿಡೀ ಧರ್ಮಕ್ಕೇ ಒಬಿಸಿ ಮೀಸಲಾತಿ ನೀಡುವುದು ಆ ಮೀಸಲಾತಿಯ ತತ್ವಕ್ಕೆ ವಿರುದ್ಧವಾಗಿದೆ. ಆದರೆ, ಎಲ್ಲ ಮುಸ್ಲಿಂ ಸಮುದಾಯದವರನ್ನು ಒಬಿಸಿಗೆ ಸೇರ್ಪಡೆ ಮಾಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಕೆಟಗರಿ ವ್ಯಾಪ್ತಿಯ ಹಿಂದುಳಿದ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗೆಯೇ, ಮೀಸಲಾತಿ ನೀಡಿರುವ ಕುರಿತು ಯಾವುದೇ ಮಾಹಿತಿಯನ್ನೂ ರಾಜ್ಯ ಸರ್ಕಾರ ಒದಗಿಸಿಲ್ಲ” ಎಂಬುದಾಗಿ ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೆಂಗಾಲಿ ಮುಸ್ಲಿಮರು ಬಹುಪತ್ನಿತ್ವ ತ್ಯಜಿಸಬೇಕು; ಹಿಮಂತ ಬಿಸ್ವಾ ಶರ್ಮಾ ಕಂಡಿಷನ್ಸ್‌ ಹೀಗಿವೆ

Continue Reading
Advertisement
Actress Saree Fashion
ಫ್ಯಾಷನ್5 mins ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sachin Tendulkar Birthday
ಕ್ರೀಡೆ6 mins ago

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Condemns Neha murder case Gangavathi bandh
ಕೊಪ್ಪಳ9 mins ago

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Voter Slip
Lok Sabha Election 202410 mins ago

Voter Slip: ಮತದಾನಕ್ಕೆ ಇನ್ನೊಂದೇ ದಿನ ಬಾಕಿ; ವೋಟರ್ ಸ್ಲಿಪ್ ಸಿಕ್ಕಿಲ್ಲವೇ? ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

Lok Sabha Election 2024
Lok Sabha Election 202412 mins ago

Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

ಕರ್ನಾಟಕ35 mins ago

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Kotak Mahindra Bank
ದೇಶ35 mins ago

Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Lok Sabha Election 2024 No sale of liquor in Bengaluru for 3 days from today
Lok Sabha Election 202438 mins ago

Lok Sabha Election 2024: ಇಂದಿನಿಂದ 3 ದಿನ ಬೆಂಗಳೂರಲ್ಲಿ ಮದ್ಯ ಮಾರಾಟ ಇಲ್ಲ; ಮತ್ತೂ 1 ದಿನ ಸಿಗಲ್ಲ ಎಣ್ಣೆ!

Muslims OBC Quota
ಕರ್ನಾಟಕ44 mins ago

Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Lok Sabha Election 2024 DK Shivakumar IT raids on Suresh close aides and Congress protests
Lok Sabha Election 20241 hour ago

Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌