ಕರ್ನಾಟಕ
Karnataka Election : ಬಿಜೆಪಿಯವರು ಕರೆದಿಲ್ಲ, ಕರೆದಿದ್ದರೆ ಅವರ ಪ್ರಚಾರಕ್ಕೂ ಹೋಗ್ತಿದ್ದೆ ಎಂದ ಶಿವಣ್ಣ
Actor Shivaraj kumar : ನಟ ಶಿವರಾಜ್ ಕುಮಾರ್ ಅವರು ತಾವೇಕೆ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಹೋಗಿದ್ದುಎಂಬ ಬಗ್ಗೆ ವಿವರಣೆ ನೀಡಿದ್ದಾರೆ. ಮತ್ತು ತನಗೆ ಯಾರೂ ಶತ್ರುಗಳಿಲ್ಲ ಎಂದಿದ್ದಾರೆ.
ಶಿವಮೊಗ್ಗ: ʻʻನಂಗೆ ಸೋಮಣ್ಣ ತುಂಬಾ ಆಪ್ತರು. ಪ್ರತಾಪಸಿಂಹ ಸ್ನೇಹಿತರು. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ನನಗೆ ಯಾರೂ ಶತ್ರುಗಳಿಲ್ಲ. ನನ್ನನ್ನು ಕಾಂಗ್ರೆಸ್ನವರು ಪ್ರಚಾರಕ್ಕೆ ಬನ್ನಿ ಎಂದು ಕರೆದರು, ಹೋಗಿದ್ದೇನೆ. ಬಿಜೆಪಿಯವರು ಕರೆದರೂ ಹೋಗುತ್ತಿದ್ದೆʼʼ- ಇದು ಚಿತ್ರ ನಟ ಶಿವರಾಜ್ ಕುಮಾರ್ (Actor Shivaraj Kumar) ಅವರ ಮಾತು.
ಗುರುವಾರ ಅವರು ಮೈಸೂರಿನ ವರುಣಾ ಕ್ಷೇತ್ರದಲ್ಲಿ (Karnataka Election 2023) ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚನೆ ಮಾಡಿದ್ದರು. ಇದು ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ, ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಬೇಸರ ಉಂಟು ಮಾಡಿತ್ತು. ಶಿವಣ್ಣ ಅವರು ನನಗೆ ತುಂಬ ಆಪ್ತರು. ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಹೇಳುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಅದೇ ರೀತಿ ಸಂಸದ ಪ್ರತಾಪ್ ಸಿಂಹ ಅವರು ಕೂಡಾ, ಶಿವಣ್ಣ ಅವರಿಗೆ ಯಾವ ಒತ್ತಡವಿತ್ತೋ ಎಂದು ಪ್ರಶ್ನಿಸಿದ್ದರು.
ಇದಕ್ಕೆ ಶುಕ್ರವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಶಿವಣ್ಣ, ನನಗೆ ಎಲ್ಲರೂ ಆಪ್ತರೇ, ಯಾರೂ ನನಗೆ ಶತ್ರುಗಳಿಲ್ಲ. ಪ್ರಚಾರಕ್ಕೆ ಕರೆದರೆ ಬಿಜೆಪಿ ನಾಯಕರ ಪ್ರಚಾರಕ್ಕೂ ಹೋಗುತ್ತೇನೆ ಎಂದರು.
ʻʻವರುಣದಲ್ಲಿ ಪ್ರಚಾರ ಚೆನ್ನಾಗಿ ಆಯ್ತು, ಇವತ್ತು ಮುಂಡಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿʼʼ ಎಂದು ಹೇಳಿದ ಅವರು, ʻʻಸೋಮಣ್ಣ ನಮಗೆ ಒಳ್ಳೆಯ ಆಪ್ತರು. ಪ್ರತಾಪ್ ಸಿಂಹ ಸ್ನೇಹಿತರು. ಅವರ ಬಗ್ಗೆ ಒಳ್ಳೆಯ ಗೌರವ ಇದೆ. ನಾನು ಏನು ಚಿಕ್ಕ ಹುಡುಗನಾ? ನನಗೂ 61 ವರ್ಷ ಆಯ್ತು. ನನಗೆ ಯಾರೂ ಎನಿಮಿ ಇಲ್ಲ. ಎಲ್ಲರೂ ಸ್ನೇಹಿತರೇ. ಪ್ರಚಾರಕ್ಕೆ ಕರೆದರು ಅಂತ ಹೋಗಿದ್ದೇನೆ ಅಷ್ಟೆʼʼ ಎಂದು ಶಿವರಾಜ್ ಕುಮಾರ್ ಹೇಳಿದರು.
ʻʻಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆʼʼ ಎಂದು ಶಿವಣ್ಣ ಹೇಳಿದರು.
ʻʻರಾಹುಲ್ ಗಾಂಧಿ ಅವರನ್ನು ಮೀಟ್ ಮಾಡಬೇಕು ಅಂತ ಮೊದಲಿನಿಂದ ಆಸೆ ಇತ್ತುʼʼ ಎಂದು ಹೇಳಿದ ಅವರು, ರಾಹುಲ್ ಗಾಂಧಿ ಫಿಟ್ನೆಸ್ ಇಷ್ಟ ಆಯ್ತು. ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆʼʼ ಎಂದು ಹೇಳಿದರು. ʻʻಮೊದಲು ಸಿನಿಮಾದಲ್ಲಿ ಬ್ಯುಸಿ ಇದ್ದೆ. ಈಗ ಪ್ರಚಾರದಲ್ಲಿ ಬ್ಯುಸಿ ಆಗಿದ್ದೇನೆʼʼ ಎಂದರು ಶಿವಣ್ಣ.
ಹಾಗೆಲ್ಲ ಹೇಳುವ ಹಾಗಿಲ್ಲ, ಸುದೀಪ್ ಪ್ರಚಾರ ಮಾಡ್ತಿಲ್ವ?
ನಾವು ಚಿತ್ರ ನಟರು. ಯಾರಾದರೂ ಕೇಳಿದರೆ ಪ್ರಚಾರ ಮಾಡುತ್ತೇವೆ. ಈಗ ಸುದೀಪ್ ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿಲ್ಲವಾ? ಹಾಗಂತ ನಾವಿಬ್ರು ಜಗಳ ಮಾಡೋಕ್ಕಾಗುತ್ತಾ? ನಾವಿಬ್ಬರೂ ಗುಡ್ ಫ್ರೆಂಡ್ಸ್. ಯಾವತ್ತೂ ಹಾಗೇ ಇರ್ತೇವೆ. ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿದ್ದರಿಂದ ಹೋಗಿದ್ದೇನೆ ಅಷ್ಟೆ ಎಂದು ಹೇಳಿದರು ಶಿವರಾಜ್ ಕುಮಾರ್.
ಇದನ್ನೂ ಓದಿ : Karnataka Election: ಸಿದ್ದರಾಮಯ್ಯ ಪರ ಶಿವಣ್ಣ ಪ್ರಚಾರ, ಪ್ರತಾಪ್ ಸಿಂಹ, ಸೋಮಣ್ಣ ಅಸಮಾಧಾನ
ಕರ್ನಾಟಕ
ಒಂಟಿಯಾಗಿದ್ದ ವೃದ್ಧೆಯ ಭೀಕರ ಹತ್ಯೆ; ಗಂಡ ಕಟ್ಟಿದ ಮನೆಯೆಂದು ಮಗನ ಜತೆಗೂ ಹೋಗಿರಲಿಲ್ಲ
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ.
ಬೆಂಗಳೂರಿನ ಉತ್ತರ ವಿಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೊಲೆ, ಕೊಲೆಯತ್ನ, ರಾಬರಿ ಪ್ರಕರಣಗಳು ನಡೆಯುತ್ತಲೇ ಇವರ. ಈಗ ಮೇ 27ರಂದು ರಾತ್ರಿ ಹಂತಕರು ಮಹಾಲಕ್ಷ್ಮೀ ಲೇಔಟ್ನಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ಇದ್ದ 80ವರ್ಷದ ವೃದ್ಧೆಯನ್ನು (Old Lady Murder) ಭಯಾನಕವಾಗಿ ಹತ್ಯೆಗೈದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ಗಳನ್ನೆಲ್ಲ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ. ವೃದ್ಧೆಗೆ ಮೂರು ಮಕ್ಕಳಿದ್ದು ಮಗ ವೈಟ್ಫೀಲ್ಡ್ನಲ್ಲಿ ಮತ್ತು ಹೆಣ್ಣುಮಕ್ಕಳಿಬ್ಬರು ಜೆಪಿ ನಗರದಲ್ಲಿ ಇದ್ದಾರೆ. ಮಗ ಅದೆಷ್ಟೋ ಬಾರಿ ಇವರನ್ನು ತನ್ನ ಜತೆಗೆ ಬಂದಿರು ಎಂದು ಕರೆದರೂ ವೃದ್ಧೆ ಹೋಗಿರಲಿಲ್ಲ. ನನ್ನ ಗಂಡ ಕಟ್ಟಿಸಿದ ಮನೆ ಇದು, ಇಲ್ಲಿಯೇ ಇರುತ್ತೇನೆ ಎಂದು ಹೇಳಿ ಈ ಮನೆಯಲ್ಲೇ ಒಬ್ಬರೇ ಇದ್ದರಂತೆ.
ಹಂತಕರು ಸಂಜೆ ವೇಳೆ ಮನೆಗೆ ನುಗ್ಗಿದಾಗ ಕಮಲಮ್ಮ ತಮ್ಮ ಮಲಗುವ ಕೋಣೆಯಲ್ಲಿ ಇದ್ದರು. ಅಲ್ಲಿಗೇ ಹೋಗಿ ಅವರ ಕೈಕಾಲು ಕಟ್ಟಿದ್ದಾರೆ. ಬಳಿಕ ಉಸಿರುಗಟ್ಟಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಎಲ್ಲ ಚಿನ್ನಾಭರಣಗಳು, ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನು ಏಳುಗಂಟೆ ಹೊತ್ತಿಗೆ ಪಕ್ಕದ ಮನೆ ಮಕ್ಕಳು ಅಜ್ಜಿಯನ್ನು ಹುಡುಕಿ ಬಂದಾಗ, ಬಾಗಿಲು ತೆರೆದೇ ಇತ್ತು. ಒಳಗೆ ಹೋದರೆ ಅಜ್ಜಿ ಬಿದ್ದಿದ್ದರು. ಅದನ್ನು ನೋಡಿ ತಮ್ಮ ಮನೆಯವರಿಗೆ ತಿಳಿಸಿದ್ದಾರೆ. ಅಕ್ಕಪಕ್ಕದ ಮನೆಯವರೆಲ್ಲ ಸೇರಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ
ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಶ್ವಾನದಳ, ಪಿಂಗರ್ ಪ್ರಿಂಟ್ ತಜ್ಞರು ಹಾಗೂ ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ಮಾಡಿಸಿದ್ದಾರೆ. ಹಂತಕರ ಸುಳಿವಿನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮೇಲ್ನೊಟಕ್ಕೆ ಕಮಲಮ್ಮನನ್ನ ವೃತ್ತಿಪರ ಹಂತಕರೇ ಚಿನ್ನಾಭರಣ ದೋಚುವ ಸಲುವಾಗಿ ಹತ್ಯೆಗೈದಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಶವವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕರ್ನಾಟಕ
CBSE Exam Results: ಸಿಬಿಎಸ್ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ
CBSE Exam Results: ಸಿಬಿಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ.
ಬೆಂಗಳೂರು: ಸಿಬಿಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯ (CBSE Exam Results) ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಉತ್ತಮ ಸಾಮರ್ಥ್ಯ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರನ್ನು ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಶಾಲೆಯಿಂದ ಸನ್ಮಾನಿಸಲಾಯಿತು.
ನಗರದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಜಯ್ ಕಿರಣ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ. ಎನ್. ವಿಜಯ ಕುಮಾರ್ ಮಾತನಾಡಿ, ಎಲ್ಲಾ ವಿಭಾಗಗಳಲ್ಲೂ ವಿದ್ಯಾರ್ಥಿಗಳ ಸಾಧನೆ ಗಣನೀಯವಾಗಿ ಹೆಚ್ಚಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಸಿಬಿಎಸ್ಸಿ ವಿದ್ಯಾರ್ಥಿಗಳಿಗೆ ಬಹುಬೇಗ ತರಗತಿಗಳನ್ನು ಆರಂಭಿಸಿ ಡಿಸೆಂಬರ್ ವೇಳೆಗೆ ಪಠ್ಯ ಕ್ರಮ ಪೂರ್ಣಗೊಳಿಸುತ್ತೇವೆ. ಆ ನಂತರ ಪರೀಕ್ಷೆಗೆ ಸಜ್ಜುಗೊಳಿಸುತ್ತೇವೆ ಎಂದರು.
ಶಿಕ್ಷಣದ ಇತ್ತೀಚಿನ ಪರಿಕಲ್ಪನೆ, ಆಧುನಿಕ ತಂತ್ರಜ್ಞಾನ ಕುರಿತು ಶಿಕ್ಷಣಕರಿಗೆ ವ್ಯಾಪಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿಯೇ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ | Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕಿರಣ್, ಮುಖ್ಯ ಕಾರ್ಯಾಚರಣೆ ಅಧಿಕಾರಿ ಸುನಾಲಿನಿ ಬೆಂಜಮಿನ್ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ
DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ
DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಶೇ.4 ತುಟ್ಟಿಭತ್ಯೆ (DA Hike) ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿ ಆರ್ಥಿಕ ಇಲಾಖೆಗೆ ರವಾನಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ವಿವಿಧ ಪದಾಧಿಕಾರಿಗಳು, ನಗರದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ | 7th Pay Commission : ವೇತನ ಆಯೋಗದ ಮಹತ್ವದ ಸಭೆ; ನೌಕರರ ಬೇಡಿಕೆ ಮಂಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ
ಇದೇ ವೇಳೆ ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಆರ್ಥಿಕ ಇಲಾಖೆಯಿಂದ ಸೋಮವಾರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗೆಯೇ ರಾಜ್ಯದ ಶಿಕ್ಷಕರ ಜ್ವಲಂತ ಸಮಸ್ಯೆಗಳಾದ ವರ್ಗಾವಣೆ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡ ಪದಾಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.
-
ಕರ್ನಾಟಕ19 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ22 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ19 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ17 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ13 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ದೇಶ1 hour ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ10 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
ಕ್ರಿಕೆಟ್9 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ