Karnataka Elections : ಈಶ್ವರಪ್ಪನವ್ರೇ ಬಿಜೆಪಿ ತಾಳಿ ಬಿಚ್ಚಿಟ್ಟು ಬರ್ತೀನಿ, ತಾಕತ್ತಿದ್ದರೆ ಎದುರಿಸಿ: ಆಯನೂರು ಸವಾಲು Vistara News

ಕರ್ನಾಟಕ

Karnataka Elections : ಈಶ್ವರಪ್ಪನವ್ರೇ ಬಿಜೆಪಿ ತಾಳಿ ಬಿಚ್ಚಿಟ್ಟು ಬರ್ತೀನಿ, ತಾಕತ್ತಿದ್ದರೆ ಎದುರಿಸಿ: ಆಯನೂರು ಸವಾಲು

Ayanuru Manjunath : ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಸೆಯಲ್ಲಿದ್ದ ಆಯನೂರು ಮಂಜುನಾಥ್‌ ಬಿಜೆಪಿ ಬಿಡುವ ದಾರಿಯಲ್ಲಿದ್ದಾರೆ. ಈ ಹಂತದಲ್ಲಿ ಈಶ್ವರಪ್ಪರ ಮೇಲೆ ಹಿಗ್ಗಾಮುಗ್ಗಾ ವಾಕ್‌ ಪ್ರಹಾರ ನಡೆಸಿದ್ದಾರೆ.

VISTARANEWS.COM


on

Ayanuru-Manjunath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶಿವಮೊಗ್ಗ ಬಿಜೆಪಿಯೊಳಗಿನ ಭಿನ್ನಮತ ಈಗ ಬಟಾಬಯಲಾಗಿದೆ. ಒಂದು ಕಾಲದಲ್ಲಿ ಆಪ್ತರಾಗಿದ್ದು, ಈಗ ಶುದ್ಧ ಹಾವು-ಮುಂಗುಸಿಗಳಂತೆ ಆಡುತ್ತಿರುವ ಆಯನೂರು ಮಂಜುನಾಥ್‌ ಮತ್ತು ಕೆ.ಎಸ್‌.ಈಶ್ವರಪ್ಪ ನಡುವಿನ ರಾಜಕೀಯ ವೈಷಮ್ಯ ತಾರಕಕ್ಕೇರಿ ಇದೀಗ ಅದು ಚುನಾವಣಾ ಕಣ ಪ್ರವೇಶಕ್ಕೆ ಹಾದಿ ಮಾಡಿಕೊಟ್ಟಿದೆ.

ಬಿಜೆಪಿ ಹಿರಿಯ ನಾಯಕ ಆಯನೂರು ಮಂಜುನಾಥ್‌ ಅವರು ಇದೀಗ ಶಿವಮೊಗ್ಗ ನಗರ ಶಾಸಕ ಹಾಗೂ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ತೊಡೆ ತಟ್ಟಿದ್ದು, ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಣಕ್ಕಿಳಿಯುವುದಾಗಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ತಂದೇನಾದ್ರೂ ಬರಲಿ, ಮಗನಾದ್ರೂ ಬರಲಿ, ಮೂರನೇ ಸ್ಥಾನಕ್ಕೆ ತಳ್ಳಿಯೇ ಸಿದ್ಧ ಎಂದು ಪಂಥಾಹ್ವಾನ ನೀಡಿದ್ದಾರೆ. ತಮ್ಮ ಆಕ್ರೋಶವನ್ನು ಶಾಂತ ಶಬ್ದಗಳಿಂದಲೇ ಹೊರಹಾಕುತ್ತಾ ಈಶ್ವರಪ್ಪ ಅವರನ್ನು ಬಗೆ ಬಗೆಯಲ್ಲಿ ಬಗೆದು ಹಾಕಿದ್ದಾರೆ.

ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್‌ ಅವರು ಈ ಬಾರಿ ಈಶ್ವರಪ್ಪ ಬದಲು ತಮಗೆ ಬಿಜೆಪಿ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಒಂದು ವೇಳೆ ಈಶ್ವರಪ್ಪನವರಿಗೆ ನೀಡದೇ ಹೋದರೂ ಮಗ ಕಾಂತೇಶ್‌ ಅವರಿಗೆ ಟಿಕೆಟ್‌ ಸಿಗಬಹುದು ಎಂಬ ಸುದ್ದಿ ಇದೆ. ಇದು ಆಯನೂರು ಮಂಜುನಾಥ್‌ ಅವರಿಗೆ ಬಿಜೆಪಿಯಲ್ಲಿ ಸ್ಪರ್ಧೆಯ ಅವಕಾಶದ ಬಾಗಿಲು ಮುಚ್ಚಿದಂತಾಗಿದೆ. ಹೀಗಾಗಿ ಕೆರಳಿ ಕೆಂಡವಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರು ಕಾಂಗ್ರೆಸ್‌ ಬಾಗಿಲು ತಟ್ಟಿದ್ದಾರಾದರೂ ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ. ಜೆಡಿಎಸ್‌ಗೆ ಹೋಗುತ್ತಾರಾ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಅಂತೂ ಈಗ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಣಕ್ಕಿಳಿಯುವುದು ಖಚಿತ. ಆಗ ಬಿಜೆಪಿಯಿಂದ ಅವರನ್ನು ಹೊರಹಾಕುವ ಸಾಧ್ಯತೆಗಳು ದಟ್ಟವಾಗಿದೆ.

ಈಶ್ವರಪ್ಪ ಸವಾಲು ಸ್ವೀಕರಿಸಿದ್ದೇನೆ

ʻʻಚುನಾವಣೆಯಲ್ಲಿ ಕಣಕ್ಕೆ ಇಳಿಬೇಕೆಂಬ ಸದಿಚ್ಛೆಯಿಂದ ನನ್ನ ನಿಲುವು, ಭಾವನೆ ಈಗಾಗಲೇ ಪ್ರಕಟ ಮಾಡಿದ್ದೇನೆ. ಪಕ್ಷದ ಮುಖಂಡರ ಗಮನಕ್ಕೆ ತಂದಿದ್ದೇನೆ. ನನಗೆ ಟಿಕೆಟ್ ಸಿಗುವ ಲಕ್ಷಣ ಕಂಡುಬರುತ್ತಿಲ್ಲ. ಮೊನ್ನೆ ಈಶ್ವರಪ್ಪ ನೀಡಿರುವ ಹೇಳಿಕೆ ಗಂಭೀರವಾಗಿ ಪರಿಗಣಿಸಿದ್ದೇನೆ. ಅವರ ನಾಲಿಗೆ ಹಿಡಿತದಲ್ಲಿಲ್ಲ. ನನ್ನ ಬಗ್ಗೆ ಏಕವಚನ ಪ್ರಯೋಗ ಮಾಡಿದ್ದಾರೆ. ಅವನು ಯಾವ ಲೆಕ್ಕ ಎನ್ನುವ ಅವರ ಸವಾಲು ಸ್ವೀಕರಿಸಿದ್ದೇನೆ. ನನ್ನ ಹಿತೈಷಿಗಳ ಜೊತೆ ಚರ್ಚಿಸಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದೇನೆʼʼ ಎಂದು ಮಂಜುನಾಥ್‌ ಹೇಳಿದರು.

ʻʻಈಶ್ವರಪ್ಪ ಅವರೊಬ್ಬ ಪ್ರಭಾವಿ ರಾಜಕಾರಣಿ. ಆದರೆ, ಅವರ ಪ್ರಭಾವ ಎಷ್ಟರಮಟ್ಟಿಗೆ ಅಂದ್ರೆ ಶಿವಮೊಗ್ಗ ಬಿಟ್ಟು ಬೇರೆ ಕಡೆ ನಿಂತು ಗೆಲ್ಲುವುದಿಲ್ಲʼʼ ಎಂದು ಲೇವಡಿ ಮಾಡಿದ ಮಂಜುನಾಥ್‌, ʻʻರಾಜಕೀಯ ಲೆಕ್ಕ ಕೊಡ್ತೇನೆ. ನಿಮ್ಮ ಗೋಡೌನ್ ನಲ್ಲಿರುವ ಕೌಂಟಿಂಗ್ ಮಷಿನ್ ಹೊರತನ್ನಿ ಎಂದರು.

ನೀವು ಶಾಸಕ ಸ್ಥಾನದ ಆಕಾಂಕ್ಷಿಯಲ್ಲ, ಮಂತ್ರಿ ಮಾತ್ರ!

ʻʻಈಶ್ವರಪ್ಪನವರೇ ನೀವು ಈ ಬಾರಿ ನಿಮ್ಮ ಮಗನಿಗೆ ಟಿಕೆಟ್‌ ಕೇಳಿದ್ದೀರಿ. ನಿಮ್ಮ ಮಗನಿಗೇ ಟಿಕೆಟ್ ಕೊಟ್ಟು ನಿಲ್ಲಿಸಿ. ನಾನಂತೂ ನಿಲ್ಲುವುದು ಖಚಿತ. ಮಾತ್ರವಲ್ಲ ನಿಮ್ಮನ್ನು ಮೂರನೇ ಸ್ಥಾನಕ್ಕೆ ತಳ್ಳುತ್ತೇನೆʼʼ ಎಂದರು.

ಕಳೆದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಮಂತ್ರಿ ಖಾತೆ ನೀಡದಿದ್ದರೆ ಅಧಿವೇಶನಕ್ಕೆ ಬರುವುದಿಲ್ಲ ಎಂದು ಹಠ ಹಿಡಿದಿದ್ದ ಈಶ್ವರಪ್ಪನವರನ್ನು ಚೆನ್ನಾಗಿ ಕೆಣಕಿದ ಆಯನೂರು ಮಂಜುನಾಥ್‌, ʻʻನೀವು ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎನ್ನುವುದು ನನಗೆ ಗೊತ್ತು. ನೀವು ಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಮಾಡುವವರು. ಆದರೆ, ನಮ್ಮಲ್ಲಿ ನೇರವಾಗಿ ಮಂತ್ರಿಯಾಗುವ ಅವಕಾಶ ಇಲ್ಲದೆ ಹೋಯ್ತು! ಈಶ್ವರಪ್ಪನವರೇ ನಿಮಗೆ ಅಧಿಕಾರದ ಹಪಾಹಪಿಯಿದೆ. ಮಂತ್ರಿ ಸ್ಥಾನ ಕೊಡದಿದ್ದರೆ ವಿಧಾನಸೌಧಕ್ಕೆ ಬರೋದಿಲ್ಲ ಅಂದೋರು ನೀವು. ಪ್ರಜಾಪ್ರಭುತ್ವ ಕ್ಕೆ ಅಪಚಾರ ಮಾಡಿದವರುʼʼ ಎಂದು ಹೇಳಿದರು

ನೀವು ನೇಣು ಹಾಕಿಕೊಂಡಿರಾ ಈಶ್ವರಪ್ಪನವರೇ..

ʻʻಬಿ.ಎಸ್‌. ಯಡಿಯೂರಪ್ಪ ರಿಗೆ ಎಷ್ಟು ಬೇಕೋ ಅಷ್ಟು ಅಪಮಾನ ಮಾಡಿದ್ದೀರಿ. ಅವರು ಸಿಎಂ ಆಗಿ ಶಿವಮೊಗ್ಗಕ್ಕೆ ಬಂದಾಗ ಸಚಿವರಾಗಿ ನೀವು ಸ್ವಾಗತಿಸಿದ್ದೀರಾ? ಹೋಗುವಾಗ ಗೌರವದಿಂದ ಬೀಳ್ಕೊಟ್ಟಿದ್ದೀರಾ?ʼʼ ಎಂದು ಹಳೆ ವಿಷಯಗಳನ್ನೆಲ್ಲ ಕೆಣಕಿದ್ದಾರೆ.

ʻʻಯಡಿಯೂರಪ್ಪ ಕಷ್ಟದಲ್ಲಿದ್ದಾಗ ಸ್ಪಂದಿಸಲಿಲ್ಲ. ಯಡಿಯೂರಪ್ಪ ಬಂಧನ ಆದಾಗ ನೀವು ಏನು ಹೇಳಿದಿರಿ? ನಾನಾಗಿದ್ದರೆ ನೇಣು ಹಾಕಿಕೊಳ್ತಿದ್ದೆ ಅಂದ್ರಿ. ಕೊನೆಗೆ ನಿಮ್ಮ ಮೇಲೆಯೇ ಆರೋಪ ಬಂದಾಗ ನೇಣು ಬೇಡ, ಹಗ್ಗನಾದ್ರೂ ತಂದಿಟ್ರಾ? ನಿಮ್ಮ ಬದಲಿಗೆ ಅಮಾಯಕ ಬಿಜೆಪಿ ಕಾರ್ಯಕರ್ತನೊಬ್ಬ ನೇಣು ಹಾಕಿಕೊಳ್ಳುವ ಪರಿಸ್ಥಿತಿ ನಿರ್ಮಾಣ ಮಾಡಿದ್ರಿʼ ಎಂದು ಗುತ್ತಿಗೆದಾರರಿಗೆ ಹಣ ಪಾವತಿಸಲು ಲಂಚ ನೀಡಬೇಕು ಎಂಬ ಆರೋಪವನ್ನು ನೆನಪಿಸಿದರು.

ʻʻʻನಾನು 24 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ನನ್ನ 24 ವರ್ಷಗಳ ಅವಧಿಯಲ್ಲಿ ಯಾವುದೇ ಆಪಾದನೆ ಬಂದಿಲ್ಲ. ಯಾರಿಗೂ ದ್ರೋಹ ಮಾಡಿಲ್ಲ. ಆದರೆ, ನೀವು ಸಿಎಂ ಬಿಎಸ್‌ವೈ ವಿರುದ್ಧವೇ ರಾಜ್ಯಪಾಲರಿಗೆ ಮನವಿ ಕೊಟ್ರಿʼʼ ಎಂದು ನೆನಪಿಸಿದರು ಮಂಜುನಾಥ್‌.

ಯಾರಿಗೂ ಅಧಿಕಾರ ಕೊಟ್ಟಿಲ್ಲ ನೀವು

ʻʻನೀವು ಯಾರಿಗೂ ಅಧಿಕಾರ ಬಿಟ್ಟುಕೊಡಲಿಲ್ಲ. ನಿಮ್ಮ ಕುಟುಂಬದ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಬೇಕಾದವರಿಗೆ ಅಧಿಕಾರ ಕೊಟ್ರಿ. ಕಾರ್ಪೊರೇಟರ್‌ ಗೆದ್ರೂ ಅಧಿಕಾರ ಇಲ್ಲ. ಶತ್ರುವಿನ ಕೋಟೆಯೊಳಗೆ ನನ್ನ ಕುದುರೆ, ಸೈನಿಕರಿರಬೇಕು ಎನ್ನುವುದು ನಿಮ್ಮ ನಿಲುವುʼʼ ಎಂದರು.

ಶಿವಮೊಗ್ಗಕ್ಕೆ ಅಷ್ಟೊಂದು ಸೀರೆ ಎಲ್ಲಿಂದ ಬಂತು?

ಶಿವಮೊಗ್ಗದಲ್ಲಿ ಇತ್ತೀಚೆಗೆ 4.5 ಕೋಟಿ ರೂ. ಮೌಲ್ಯದ ಸೀರೆ ಜಪ್ತಿ ಆಯ್ತು. ಯಾರದ್ದು ಆ ಸೀರೆ? ಶಿವಮೊಗ್ಗದಲ್ಲಿ ಒಬ್ಬರನ್ನು ಬಿಟ್ಟು ಬೇರೆ ಯಾವ ಆಕಾಂಕ್ಷಿಗಳಲ್ಲೂ ಅಷ್ಟು ಹಣವಿರಲಿಕ್ಕಿಲ್ಲ ಎಂದು ಹೇಳಿದ ಅವರು, ʻʻನಿಮ್ಮ ಎಂದಿನ ಶೈಲಿ ಈ ಬಾರಿ ನಡೆಯೋಕೆ ಬಿಡಲ್ಲʼʼ ಎಂದು ಸವಾಲು ಹಾಕಿದರು.

ʻʻಶಿವಮೊಗ್ಗದಲ್ಲಿ ಅಭಿವೃದ್ಧಿ ಮಾಡಿದ್ದು ಸಂಸದರಾಗಿರುವ ಬಿ ವೈ ರಾಘವೇಂದ್ರ. ನೀವು ಏನು ಮಾಡಿದ್ದೀರಿ? ಕ್ಷೇತ್ರದ ಜನತೆ ಬಗ್ಗೆ ನೀವು ಅಸೆಂಬ್ಲಿ ಯಲ್ಲಿ ಮಾತಾಡಿಲ್ಲʼʼ ಎಂದು ಹೇಳಿದ ಮಂಜುನಾಥ್‌, ʻʻನೀವು ನನ್ನನ್ನು ಕೆಣಕಬಾರದಿತ್ತು. ನಿಮ್ಮ ಸವಾಲು ನಾನು ಸ್ವೀಕರಿಸಿದ್ದೇನೆ. ನೀವು ಸ್ವೀಕರಿಸುತ್ತಿರೋ, ಪುಕ್ಕಲುತನದಿಂದ ಹಿಂದಕ್ಕೆ ಸರಿತೀರೋ, ನಾನಂತೂ ನಾನು ಎಮ್ಮೆಲ್ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಸ್ಪರ್ಧಿಸ್ತೇನೆ. ತೊಡೆ ತಟ್ಟಿದ್ದೇನೆ, ಕಾಚಾ ಕಟ್ಟಿದ್ದೇನೆʼʼ ಎಂದು ನುಡಿದರು.

ಸದ್ಯವೇ ಯಾವುದಾದರೂ ದೇವಸ್ಥಾನ ಮಲಿನ ಆಗಬಹುದು!

ಕೆ.ಎಸ್‌. ಈಶ್ವರಪ್ಪ ಅವರನ್ನು ಹೇಗೆಲ್ಲ ತರಾಟೆಗೆ ತೆಗೆದುಕೊಂಡರೆಂದರೆ ರಾಜಕಾರಣಿಗಳು ಮಾಡುವ ಚುನಾವಣಾ ಕಾರ್ಯತಂತ್ರಗಳನ್ನೆಲ್ಲ ಬಯಲಿಗಿಟ್ಟರು.

ʻʻನೀವು ಯಾವುದೇ ಪ್ರಚೋದನೆ ಮಾಡದೆ, ಶಿವಮೊಗ್ಗಲ್ಲಿ ಯಾವುದೇ ಗಲಭೆಯಿಲ್ಲದೆ ಸ್ಪರ್ಧೆಗೆ ಬನ್ನಿʼʼ ಎಂದ ಅವರು, ʻʻಜನರು ಕೂಡಾ ತಾಳ್ಮೆಯಿಂದ ಇರಿ. ಯಾಕೆಂದರೆ ನನಗೆ ಅವರ ಸ್ವಭಾವ ಗೊತ್ತಿದೆ. ನೋಡ್ತಾ ಇರಿ. ಸದ್ಯದಲ್ಲೇ ಯಾವುದಾದರೂ ದೇವಸ್ಥಾನ ಮಲಿನ ಆಗಬಹುದು. ಅದಕ್ಕೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ಪೊಲೀಸರೂ ಮೈಮರೆಯಬೇಡಿ. ಚುನಾವಣೆ ಮೊದಲು ಒಂದೆರಡು ಘಟನೆ ನಡೆಯುವ ಸಾಧ್ಯತೆ ಇದೆʼʼ ಎಂದರು ಆಯನೂರು.

ಕ್ಷಮೆ ಕೇಳಿದರೆ ಬಿಟ್ಟು ಬಿಡ್ತೇನೆ

ʻʻಈವರೆಗಿನ ನನ್ನ ಗೆಲುವುಗಳಿಗೆ ನಾನು ಚಿರ ಋಣಿ ಆಗಿರ್ತೇನೆ. ಪಕ್ಕಕ್ಕೆ, ಕಾರ್ಯಕರ್ತರಿಗೆ ಆಭಾರಿಯಾಗಿದ್ದೇನೆ. ನನ್ನ ನಡೆಯನ್ನು ಸ್ವಾಭಿಮಾನಿ ಕಾರ್ಯಕರ್ತರು ಅರ್ಥ ಮಾಡಿಕೊಳ್ತಾರೆ ಎಂದು ಭಾವಿಸುತ್ತೇನೆ. ಈ ಒಂದು ಚೈನ್ ಕಟ್ ಮಾಡದಿದ್ದರೆ ಪಕ್ಷ ವಿನಾಶಕ್ಕೆ ತಲುಪುತ್ತದೆʼʼ ಎಂದು ಹೇಳಿದ ಅವರು, ʻʻಈಶ್ವರಪ್ಪನವರೇ ಅವನ್ಯಾವ ಲೆಕ್ಕ ಅಂತ ನನಗೆ ಹೇಳಿದ್ರಿ. ನೀವು ಕ್ಷಮೆ ಕೇಳಿದ್ರೆ ನಿಮ್ಮನ್ನು ಬಿಟ್ಟುಬಿಡುತ್ತೇನೆ. ನನಗೆ ಪಕ್ಷ ಟಿಕೆಟ್‌ ಕೊಡುತ್ತದೆ ಎಂಬ ನಂಬಿಕೆ ಇತ್ತು. ಆದರೆ ಆ ನಂಬಿಕೆ ಈಗಿಲ್ಲʼʼ ಎಂದರು.

ಯಾವ ಲಂಗೋಟಿಯೋ ಗೊತ್ತಿಲ್ಲ, ಸ್ವಂತದ್ದೊಂದು ಇದ್ದೇ ಇದೆ!

ಆಯನೂರು ಯಾವ ಪಕ್ಷದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಪ್ರಶ್ನೆಗೆ ಜಟ್ಟಿ ಕಾಳಗ ಮತ್ತು ಲಂಗೋಟಿಯ ಕಥೆ ಮೂಲಕ ಉತ್ತರ ಕೊಟ್ಟರು!

ʻʻನಾನು ಪೈಲ್ವಾನ್ ಬಂದಿದ್ದೇನೆ, ಲಂಗೋಟಿ ಬೇಡ ನನಗೆ. ಶಿವಮೊಗ್ಗ ಗರಡಿಯಿಂದ‌ ಬರ್ತಿದ್ದೇನೆ. ಕಾಂಗ್ರೆಸ್ ಲಂಗೋಟಿ ಕೊಡ್ತಾರೊ, ಜೆಡಿಎಸ್ ಕೊಡ್ತಾರೊ ಗೊತ್ತಿಲ್ಲ. ಸ್ವಂತ ಲಂಗೋಟಿ ಅಂತ ಇರುತ್ತೆ ತಾನೆ?ʼʼ ಎಂದು ಕೊನೆಗೆ ಪಕ್ಷೇತರನಾಗಿಯಾದರೂ ಸ್ಪರ್ಧಿಸುವುದು ಖಚಿತ ಎಂದರು. ʻʻನನ್ನ ಕುತ್ತಿಗೆಯಲ್ಲಿ ಬಿಜೆಪಿ ತಾಳಿ ಇದೆ. ಅದನ್ನು ಬಿಚ್ಚಿ ಹೊಸ ತಾಳಿ ಬಗ್ಗೆ ಯೋಚಿಸ್ತೇನೆʼʼ ಎಂದರು.

ʻʻಬಿಜೆಪಿ ಮನವೊಲಿಸುತ್ತದೆ ಎಂದು ನಾನು ಕಾಯುವುದಿಲ್ಲ. ಕಾಯುವ ಕಾಲ ಮುಗಿದಿದೆ. ಮನವೊಲಿಸುವುದೇ ಹೌದಾಗಿದ್ದರೆ ನಾನು ಹೋಟೆಲ್ ವರೆಗೆ ಬರುವ ಅಗತ್ಯ ಇರಲಿಲ್ಲ. ಮೂರ್ನಾಲ್ಕು ದಿನಗಳಲ್ಲಿ ರಾಜೀನಾಮೆ ಕೊಡುತ್ತೇನೆʼʼ ಎಂದು ಹೇಳಿದರು ಆಯನೂರು.

ʻʻಶಿವಮೊಗ್ಗದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಕೆಡವಿದಾಗ ಶಾಂತಿಗಾಗಿ ಸದ್ದಿಲ್ಲದೆ ಪ್ರಯತ್ನ ಮಾಡಿದ್ದೇನೆ/ ಕಾರ್ಮಿಕ ಮುಖಂಡನಾಗಿ ಕಾಳಜಿಯಿದೆ. ಅಶಾಂತಿಯಾದರೆ ದೊಡ್ಡ ಪೆಟ್ಟು ಕಾರ್ಮಿಕರಿಗೇ ಬೀಳುವುದು. ಆಟೊ ಚಾಲಕರು ನನಗೆ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆ ಕುರಿತು ಅವರೇ ಕರಪತ್ರ ಹಂಚುತ್ತಿದ್ದಾರೆʼʼ ಎಂದು ತನಗೂ ಜನಬೆಂಬಲ ಇರುವುದನ್ನು ವಿವರಿಸಿದರು.

ಇದನ್ನೂ ಓದಿ : Karnataka Elections : ಎಂಎಲ್ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್‌ ರಾಜೀನಾಮೆ, ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧೆ ಖಚಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Belagavi Winter Session: ಸಾವಿರಕ್ಕೂ ಹೆಚ್ಚು ಭ್ರೂಣಗಳನ್ನು ಹತ್ಯೆ ಮಾಡಿರುವ ಘೋರ ಕೃತ್ಯದ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಸದನದಲ್ಲಿ ಕೇಳಿಬಂದಿವೆ. ಅಲ್ಲದೆ, ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಎಂಬ ಸಲಹೆಗಳೂ ಕೇಳಿಬಂದಿವೆ.

VISTARANEWS.COM


on

Foeticide case and pair of pink bunny figurines
Koo

ಬೆಳಗಾವಿ: ರಾಜ್ಯದಲ್ಲಿ ಈಗಲೂ ಭ್ರೂಣ ಲಿಂಗ ಪತ್ತೆ (Gender Detection) ಮತ್ತು ಭ್ರೂಣ ಹತ್ಯೆಯ (Foeticide Case) ಬೃಹತ್ ಜಾಲ ಇರುವುದರ ಬಗ್ಗೆ ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಕಳವಳವನ್ನು ವ್ಯಕ್ತಪಡಿಸಲಾಗಿದೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಭ್ರೂಣಗಳನ್ನು ಹತ್ಯೆ ಮಾಡಿರುವ ಘೋರ ಕೃತ್ಯದ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಅಲ್ಲದೆ, ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಎಂಬ ಸಲಹೆಗಳೂ ಕೇಳಿಬಂದಿವೆ.

ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ರಾಜ್ಯದ ಹಲವು ಕಡೆ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳಿಗೆ ಸಂಬಂಧಪಟ್ಟ ಪ್ರಕರಣದ ಬಗ್ಗೆ ಯು.ಬಿ. ವೆಂಕಟೇಶ್ ಪ್ರಸ್ತಾಪಿಸಿದ್ದು, ಈ ಬಗ್ಗೆ ಗಂಭೀರ ಕಾಯಿದೆಗಳಿವೆ. ಆದರೂ 900ಕ್ಕೂ ಹೆಚ್ಚು ಹೆಣ್ಣು ಭ್ರೂಣವನ್ನು ಹತ್ಯೆಗೈಯಲಾಗಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇದರ ಬಗ್ಗೆ ರಾಜ್ಯದಲ್ಲಿ ದೊಡ್ಡ ಸಂಚಲನ ಆಗಿದೆ. ಇದರ ಜಾಲ ವಿಶಾಲವಾಗಿ ವ್ಯಾಪಿಸಿದೆ. ಅಲ್ಲದೆ, ಆರೋಗ್ಯ ಇಲಾಖೆಯಿಂದ ಸೂಕ್ತ ಮಾಹಿತಿಯನ್ನು ತರಿಸಿಕೊಂಡಿದ್ದೇವೆ. ಗೃಹ ಇಲಾಖೆ ಜತೆ ಸಭೆ ಮಾಡಿದ್ದೇವೆ. ಇದನ್ನು ತಡೆಗಟ್ಟಲು ದಿಟ್ಟ ಹೆಜ್ಜೆ ಇಡುತ್ತೇವೆ. ಯಾರೇ ಈ ಕೃತ್ಯದಲ್ಲಿ ತೊಡಗಿದ್ದರೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಉತ್ತರಿಸಿದರು.

ಈಗಾಗಲೇ 10 ಜನ ಅರೆಸ್ಟ್‌

ಭ್ರೂಣ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ಪ್ರಮುಖ ಆರೋಪಿಯಲ್ಲೊಬ್ಬನಾಗಿರುವ ಡಾ. ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಆ ಮೂಲಕ ಈವರೆಗೆ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಎಂಬ ನರ್ಸ್‌ಳನ್ನು ಕೊನೆಗೂ ಬಂಧಿಸಲಾಗಿತ್ತು. ಈಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಆರೋಪಿ ಮಂಜುಳಾ ಮೂಲತಃ ಚಾಮರಾಜನಗರದವಳು ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದಿಂದ ಡಾ. ಬಲ್ಲಾಳ್ ಜತೆ ಮೈಸೂರಿನ ರಾಜ್ ಕುಮಾರ್ ರಸ್ತೆಯ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ‌ ಮಾಡುತ್ತಿದ್ದಳು. ಆಸ್ಪತ್ರೆಯಲ್ಲೇ ಉಳಿದುಕೊಂಡು ಭ್ರೂಣ ಹತ್ಯೆ ದಂಧೆ ನಡೆಸುತ್ತಿದ್ದಳು.

ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಫ್ಲಶ್‌!

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ. ಒಂದೆರಡು ಪ್ರಕರಣಗಳಲ್ಲಿ 6 ತಿಂಗಳ ಮಕ್ಕಳನ್ನೂ ಗರ್ಭದಿಂದ ಹೊರತೆಗೆದಿದ್ದೇನೆ. ಆರು ತಿಂಗಳ ಮಗುವಿಗೂ ಜೀವ ಇರುತ್ತಿತ್ತು, ಆದರೆ ಅವುಗಳಿಗೆ ಧ್ವನಿ ಇನ್ನೂ ಬಂದಿರುವುದಿಲ್ಲ. ಆದರೆ ಹೊರ ತೆಗೆದಾಗ ಕೆಲ ಸಮಯದ ನಂತರ ಸಾಯುತ್ತಿದ್ದವು ಎಂದು ಮಂಜುಳಾ ಹೇಳಿದ್ದಾಳೆ.

ಆಪ್ತ ಸಮಾಲೋಚಕಿಯೂ ಆಗಿದ್ದ ನರ್ಸ್‌ ಮಂಜುಳಾ

ಭ್ರೂಣ ಹತ್ಯೆಗೆ ನರ್ಸ್‌ ಮಂಜುಳಾನೇ ಆಪ್ತ ಸಮಾಲೋಚಕಿ ಆಗಿರುತ್ತಿದ್ದಳು. ಪೋಷಕರ ಮನವೊಲಿಸಿ ಪ್ರಚೋದನೆ ನೀಡುತ್ತಿದ್ದಳು. ಮೂರ್ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದ ಮಂಜುಳಾ, ಅದೇ ಸಂಪರ್ಕದ ಆಧಾರದ ಮೇಲೆ ಬೇರೆ ಆಸ್ಪತ್ರೆಗೆ ಬಂದ ಗರ್ಭಿಣಿಯರ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಳು. ಭ್ರೂಣ ಲಿಂಗ ಪತ್ತೆಯ ಆಫರ್ ನೀಡಿ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುತ್ತಿದ್ದಳು. ಸದ್ಯ ಮಂಜುಳಾನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡವರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

ಗಂಭೀರ ಕ್ರಮಕ್ಕೆ ಸದನದಲ್ಲಿ ಒತ್ತಾಯ

ಭ್ರೂಣ ಹತ್ಯೆ ಜಾಲದ ಕರಾಳ ಮುಖಗಳು ಒಂದೊಂದೇ ಬಯಲಾಗುತ್ತಿದೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೆ ಇಂಥ ಪ್ರಕರಣಗಳು ಆಗದಂತೆ ಕಾನೂನನ್ನು ಮತ್ತಷ್ಟು ಕಠಿಣ ಮಾಡಬೇಕು ಎಂದು ಸದನದಲ್ಲಿ ಒತ್ತಾಯ ಮಾಡಲಾಗಿದೆ.

Continue Reading

ಕರ್ನಾಟಕ

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Foeticide Case : ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ನಡೆಯುತ್ತಿರುವ ಮಾಹಿತಿ ಪಡೆದಿರುವ ಪೊಲೀಸರು ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿಯನ್ನು ಬಂಧಿಸಿದ್ದಾರೆ.

VISTARANEWS.COM


on

Foeticide arrest
Koo

ಮೈಸೂರು: ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ದಂಧೆಯನ್ನು ಪೊಲೀಸರು ಬಯಲಿಗೆಳೆದ ಬೆನ್ನಿಗೇ ಇನ್ನೊಂದು ಆಸ್ಪತ್ರೆಯಲ್ಲೂ ಮಕ್ಕಳನ್ನು ಹುಟ್ಟುವ ಮೊದಲೇ ಸಾಯಿಸುವ ಕರಾಳ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ (Chamundeshwari Hospital) ಭ್ರೂಣ ಹತ್ಯೆ (Foeticide Case) ನಡೆಯುತ್ತಿದ್ದು, ಇದಕ್ಕೆ ಸಂಬಂದಿಸಿ ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿ (Nurse Usharani arrested) ಎಂಬಾಕೆಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಬೈಯಪ್ಪನ ಹಳ್ಳಿ ಪೊಲೀಸರು ಮಂಡ್ಯದಲ್ಲಿ ನಡೆಯುತ್ತಿರುವ ಬೃಹತ್‌ ಜಾಲವನ್ನು ಪತ್ತೆ ಹಚ್ಚಿ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಬೆನ್ನಿಗೇ ಬೇರೆ ಬೇರೆ ಜಿಲ್ಲೆಗಳಲ್ಲಿ ‌ ನಡೆಯುತ್ತಿರುವ ದಂಧೆಗಳು ಬಯಲಾಗುತ್ತಿವೆ.

ಮೈಸೂರಿನ ಮಾತಾ‌ ಆಸ್ಪತ್ರೆಯಲ್ಲಿ ಅಬಾರ್ಷನ್‌ ನಡೆಯುತ್ತಿರುವ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಲ್ಲಿನ ವೈದ್ಯ ಚಂದನ ಬಳ್ಳಾಲ್‌ ಮತ್ತು ನರ್ಸ್‌ ಮಂಜುಳಾಳನ್ನು ಬಂಧಿಸಲಾಗಿತ್ತು. ಇದೀಗ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಕೂಡ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಹೆಡ್ ನರ್ಸ್ ಉಷಾರಾಣಿ ಸೆರೆ ಸಿಕ್ಕಿದ್ದಾಳೆ

ಬ್ರೋಕರ್ ಪುಟ್ಟರಾಜು ಅಣತಿಯಂತೆ ಇಲ್ಲಿ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಪುಟ್ಟರಾಜು ಮಾತಾ ಮತ್ತು ಚಾಮುಂಡೇಶ್ವರಿ ಆಸ್ಪತ್ರೆಗೆ ಗ‌ರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಚಾಮುಂಡೇಶ್ವರಿ ಆಸ್ಪತ್ರೆ ನರ್ಸ್ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಚಾಮುಂಡೇಶ್ವರಿ ಆಸ್ಪತ್ರೆಯ ಮಾಲೀಕ ಜಗದೀಶ್‌ಗೆ ನೋಟಿಸ್‌ ನೀಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟೀಸ್‌ ನಲ್ಲಿ ತಿಳಿಸಲಾಗಿದೆ.

ಭ್ರೂಣ ಹತ್ಯೆ ಮಾಡಿ ಟಾಯ್ಲೆಟ್‌ ನಲ್ಲಿ ಫ್ಲಸ್‌ ಮಾಡುತ್ತಿದ್ದ ಮಂಜುಳಾ

ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುವಲ್ಲಿ ಚಂದನ್ ಬಲ್ಲಾಳ್‌ ಗೆ ಸಹಕಾರ ನೀಡುತ್ತಿದ್ದ ನರ್ಸ್‌ ಮಂಜುಳಾ, ಚಂದನ್‌ ಬಳ್ಳಾಲ್‌ ಬಂಧನದ ಬೆನ್ನಿಗೇ ತಲೆಮರೆಸಿಕೊಂಡಿದ್ದಳು. ಆಕೆ ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ.

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ.

Continue Reading

ಕರ್ನಾಟಕ

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Belagavi Winter Session : ಒಂದು ಕಡೆ ವಿಧಾನಸೌಧದದಲ್ಲಿ ಹಲವು ವಿಷಯಗಳ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಕಂದಾಯ ಸಚಿವರಿಗೆ ಬಿಸಿ ಬಿಸಿ ಕಾಫಿ ಕುಡಿಯುವ ಆಸೆಯಾಗಿದೆ. ಹೀಗಾಗಿ ಅವರೇ ಅಡುಗೆ ಕೋಣೆಗೆ ಹೋಗಿ ಕಾಫಿಯನ್ನು ರೆಡಿ ಮಾಡಿ ಆಸ್ವಾದಿಸಿದ್ದಾರೆ.

VISTARANEWS.COM


on

Revenue Minister Krishna Byre Gowda making coffee
Koo

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ (Belagavi Winter Session) ಆರಂಭವಾಗಿದೆ. ಬರ, ರೈತರ ಸಮಸ್ಯೆ, ಶಿಕ್ಷಣ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಬಿಸಿ ಬಿಸಿ ಚರ್ಚೆಗಳ ನಡುವೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Byre Gowda) ಅವರಿಗೆ ಬಿಸಿ ಬಿಸಿ ಕಾಫಿ ಕುಡಿಯಬೇಕು ಎಂದೆನಿಸಿದೆ. ಹೀಗಾಗಿ ಅವರು ಸೀದಾ ವಿಧಾನಸೌಧದ ಪ್ಯಾಂಟ್ರಿಗೆ (ಅಡುಗೆ ಮನೆ) ಹೋದ ಅವರು ತಾವೇ ಕಾಫಿಯನ್ನು ಸಿದ್ಧಪಡಿಸಿದ್ದಾರೆ.

Revenue Minister Krishna Byre Gowda making coffee

ಹೌದು, ಪ್ಯಾಂಟ್ರಿಗೆ ಹೋದ ಸಚಿವ ಕೃಷ್ಣ ಬೈರೇಗೌಡ ಬಿಸಿ ಬಿಸಿ ತಾಜಾ ಕಾಫಿ ಇದೆಯಾ ಎಂದು ಕೇಳಿದ್ದಾರೆ. ಅದಕ್ಕೆ ಅಡುಗೆ ಮನೆ ಸಿಬ್ಬಂದಿ, ಇಲ್ಲ ಸರ್‌.., ಈಗಲೇ ಮಾಡಿಕೊಡುವೆ ಎಂದು ಹೇಳಿದ್ದಾರೆ. ಆದರೆ, ಕೃಷ್ಣ ಬೈರೇಗೌಡ ಅವರು, ಅದೆಲ್ಲ ಬೇಡ, ನಾನೇ ಮಾಡಿಕೊಳ್ಳುತ್ತೇನೆ ಎಂದು ಖುಷಿಯಿಂದಲೇ ಹಾಲನ್ನು ಖಾಯಿಸಿ ಅದಕ್ಕೆ ತಮಗೆ ಬೇಕಾದಷ್ಟು ಡಿಕಾಕ್ಷನ್‌ ಬೆರೆಸಿ ಘಮ ಘಮಿಸುವ ಕಾಫಿಯನ್ನು ಮಾಡಿಕೊಂಡಿದ್ದಾರೆ.

Revenue Minister Krishna Byre Gowda making coffee

ಬಳಿಕ ಆ ಕಾಫಿಯನ್ನು ಹಿಡಿದುಕೊಂಡು ಬೆಳಗಾವಿಯ ಸುವರ್ಣಸೌಧದ ಆಡಳಿತ ಪಕ್ಷದ ಮೊಗಸಾಲೆಗೆ ಬಂದಿದ್ದು, ಅಲ್ಲಿ ಆನಂದದಿಂದ ಸವಿದಿದ್ದಾರೆ. ಹೀಗಾಗಿ ಸ್ವತಃ ತಮ್ಮ ಕಾಫಿಯನ್ನು ತಾವೇ ರೆಡಿ ಮಾಡಿಕೊಂಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನವು ಹಲವಾರು ವಿಚಾರಗಳಿಂದ ಪ್ರಮುಖವಾಗಿದೆ. ಈ ಬಾರಿ ಅಧಿವೇಶನದಲ್ಲಿ 18 ಬಿಲ್‌ಗಳು ಮಂಡನೆಯಾಗುವ ಸಾಧ್ಯತೆ (18 bills likely to be introduced) ಇದೆ. ಈಗಾಗಲೇ ಕೆಲವು ವಿಧೇಯಕ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ.

ಕಳೆದ ಕೆಲವು ಸಚಿವ ಸಂಪುಟದಲ್ಲಿ ಹಲವು ವಿಧೇಯಕ ಸಂಬಂಧ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದ್ದು, ಈಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿ ಗ್ರಾಮೀಣ ಭಾಗಕ್ಕೆ ಸೇವೆಗೆ ಹಲವು ಯುವ ವೈದ್ಯರು ತೆರಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯು ಗಣನೀಯ ಪ್ರಮಾಣದಲ್ಲಿದೆ. ಹೀಗಾಗಿ ಈ ಬಾರಿ ಪ್ರಮುಖವಾಗಿ ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇದೂ ಅಲ್ಲದೆ, ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ ಸೇರಿದಂತೆ ಹಲವು ಬಿಲ್‌ಗಳನ್ನು ಮಂಡಿಸಿ ಪಾಸ್‌ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಈ 18 ಬಿಲ್‌ ಮಂಡನೆ ಸಾಧ್ಯತೆ

1) ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021
2) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023
3) ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ
4) ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ
5) ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ
6) ಗದಗ – ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ವಿಧೇಯಕ
7) ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ
8) ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
9) ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ
10) ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ
11) ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ
12) ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ
13) ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ
14) ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ
15) ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ
16) ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ
17) ಕರ್ನಾಟಕ ವೃತ್ತಿ ಪರ ಸಿವಿಲ್ ಎಂಜಿನಿಯರ್‌ಗಳ ಪರಿಷತ್ ಮಸೂದೆ
18) ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆ

Continue Reading

ಕರ್ನಾಟಕ

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Video viral : ಬಸ್ಸಿಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದೆ. ಬಸ್‌ ಚಾಲಕ ಪ್ರಯಾಣಿಕರನ್ನು ರಕ್ಷಿಸಿದ್ದು ಮಾತ್ರವಲ್ಲ ಕಾರಿಗೆ ಅಂಟಿಕೊಂಡ ಬಸ್ಸನ್ನು ಬೇರ್ಪಡಿಸಲು ಮಾಡಿದ ಪ್ರಯತ್ನ ಮತ್ತು ಅದರಲ್ಲಿ ಯಶಸ್ವಿಯಾದ ಕಥೆ ಇಲ್ಲಿದೆ.

VISTARANEWS.COM


on

Car catches fire after hitting bus
Koo

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡು ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಆದರೆ, ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಅತ್ಯಂತ ಚಾಲಾಕಿತನ ಮತ್ತು ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಬಸ್‌ ಕೂಡಾ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ನಗರದ ಚಂದ್ರಾ ಲೇಔಟ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆಯಿತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿದೆ. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡರು. (video Viral)

ಅದರ ಜತೆಗೆ ಬಸ್‌ ಚಾಲಕ ಕೂಡಾ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ ಭಾರಿ ಡೇಂಜರಸ್‌ ಪ್ರಯೋಗಕ್ಕೆ ಮುಂದಾದರು.

ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು ಚಾಲಕ. ಬಸ್ಸು ಮುಂದಕ್ಕೆ ಚಲಿಸಿದಾಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

Car catches fire after hitting bus
ತಡೆಗೋಎಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಾಜಕ ಇತ್ತು. ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದ. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿ ಆರಿಸಿದರು.

Car catches fire after hitting bus
ರಸ್ತೆ ವಿಭಜಕವನ್ನು ಹಾಯಿಸಿ ಕಾರು ಬೇರ್ಪಡಿಸಿದ ಬಗೆ

ಬಸ್ಸಿನ ಹಿಂದಿನ ಎರಡು ಸೀಟುಗಳಿಗೆ ಸೀಮಿತವಾಗಿ ಬೆಂಕಿ ಹತ್ತಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಇದು ಸಾಧ್ಯವಾಗಿದೆ. ಅಲ್ಲಿ ಸೇರಿದವರೆಲ್ಲ ಬೆಂಕಿ ಆರಿಸುವಲ್ಲಿ ಚಾಲಕನಿಗೆ ನೆರವಾಗಿದ್ದಲ್ಲದೆ, ಅವರನ್ನು ಹಾಡಿ ಹೊಗಳಿ ಬೆನ್ನು ತಟ್ಟಿದರು.

ಒಟ್ಟಾರೆ ಘಟನೆಯ ಫುಲ್‌ ವಿಡಿಯೊ ಇಲ್ಲಿದೆ.

Continue Reading
Advertisement
Foeticide case and pair of pink bunny figurines
ಕರ್ನಾಟಕ11 mins ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER12 mins ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ30 mins ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್36 mins ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ52 mins ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ1 hour ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ1 hour ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema2 hours ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ2 hours ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ2 hours ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌