Karnataka Elections : ಕಾಂಗ್ರೆಸ್‌ನವರು ಶೆಟ್ಟರ್‌ರನ್ನು ಬಳಸಿಕೊಂಡು ಹೊರಗೆ ಎಸೀತಾರೆ; ಸಿಎಂ ಬೊಮ್ಮಾಯಿ ಲೇವಡಿ - Vistara News

ಕರ್ನಾಟಕ

Karnataka Elections : ಕಾಂಗ್ರೆಸ್‌ನವರು ಶೆಟ್ಟರ್‌ರನ್ನು ಬಳಸಿಕೊಂಡು ಹೊರಗೆ ಎಸೀತಾರೆ; ಸಿಎಂ ಬೊಮ್ಮಾಯಿ ಲೇವಡಿ

Basavaraja Bommai : ಕಾಂಗ್ರೆಸ್‌ ಪಕ್ಷ ಜಗದೀಶ್‌ ಶೆಟ್ಟರ್‌ ಅವರನ್ನು ಯೂ ಎಂಡ್‌ ತ್ರೋ ಮಾದರಿಯಲ್ಲಿ ಬಳಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

VISTARANEWS.COM


on

Bommai
ಸಿಎಂ ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ನವರು ಜಗದೀಶ್‌ ಶೆಟ್ಟರ್‌ ಅವರನ್ನು ಬಳಸಿಕೊಂಡು ಎಸೀತಾರೆ.. ನೋಡ್ತಾ ಇರಿ: ಇದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ ವಿದ್ಯಮಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಪ್ರತಿಕ್ರಿಯೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಶೆಟ್ಟರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಪ್ರಮುಖ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ನವರು ಅವರನ್ನು ಬಳಸಿಕೊಂಡು ಹೊರಗೆ ಹಾಕುತ್ತಾರೆ ಎಂದು ಭವಿಷ್ಯ ನುಡಿದರು.

ʻʻಕಾಂಗ್ರೆಸ್‌ ಅನೇಕ ಹಿರಿಯ ನಾಯಕರನ್ನು ಬಳಸಿಕೊಂಡು ಹೊರಗೆ ಹಾಕಿದೆ. ವಿರೇಂದ್ರ ಪಾಟೀಲ್, ಬಂಗಾರಪ್ಪ, ದೇವರಾಜ ಅರಸು ಅವರನ್ನೇ ಹೊರಹಾಕಿದ ಇತಿಹಾಸ ಪಕ್ಷಕ್ಕಿದೆ. ಅಂತಹ ಪಕ್ಷಕ್ಕೆ ಈಗ ಜಗದೀಶ್‌ ಶೆಟ್ಟರ್‌ ಹೋಗಿದ್ದಾರೆ. ಜಗದೀಶ ಶೆಟ್ಟರ್ ಅವರನ್ನೂ ಹೀಗೇ ಬಳಸಿಕೊಂಡು ಹೊರಗೆ ಹಾಕ್ತಾರೆʼʼ ಎಂದು ಹೇಳಿದರು ಸಿಎಂ ಬೊಮ್ಮಾಯಿ.

ಶೆಟ್ಟರ್‌ ವೋಟ್‌ ಬ್ಯಾಂಕ್‌ ಪೂರ್ಣ ಕುಸಿತ

ʻʻನಾನು ನಿನ್ನೆ ಹುಬ್ಬಳ್ಳಿ, ಧಾರವಾಡ, ಹಾವೇರಿಯಲ್ಲಿದ್ದೆ. ಗ್ರೌಂಡ್‌ನಲ್ಲಿ ಬಿಜೆಪಿ ಕಡೆ ಹೆಚ್ಚಿನ ಒಲವು ಇದೆ. ಕಾಂಗ್ರೆಸ್‌ ನವರು ಬಿಜೆಪಿ ನಾಯಕರನ್ನು ಸೇರ್ಪಡೆ ಮಾಡಿಕೊಂಡಿರಬಹುದು. ಆದರೆ ಅವರ ಓಟ್ ಬ್ಯಾಂಕ್ ಸಂಪೂರ್ಣ ಕುಸಿದಿದೆʼʼ ಎಂದು ಬೊಮ್ಮಾಯಿ ಹೇಳಿದರು.

ʻʻಬಿಜೆಪಿ ಜಗದೀಶ್‌ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ಕೊಟ್ಟಿತ್ತು. ಈಗ ಪಕ್ಷ ಬಿಡುವಾಗ ಏನಾದರೂ ಕಾರಣ ಹೇಳಬೇಕಲ್ಲ ಹೀಗಾಗಿ ಆ ರೀತಿ ಹೇಳಿದ್ದಾರೆʼʼ ಎಂದು ಹೇಳಿದ ಅವರು, ಜಗದೀಶ್ ಶೆಟ್ಟರ್ ಕೋರ್ ಕಮಿಟಿಯಲ್ಲಿದ್ದವರು ತೀರ್ಮಾನ ತೆಗೆದುಕೊಳ್ಳುವ ಮಟ್ಟದಲ್ಲಿದ್ದವರು. ಅವರು ಹೀಗೆ ಮಾಡಿದ್ದು ಸರಿಯಲ್ಲ ಎಂದರು.

ಒಂದು ವೇಳೆ ಶೆಟ್ಟರ್‌ ಅವರು ಮರಳಿ ಬಂದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅವರ ಬರ್ತಾರೆ ಅನ್ನೋ ನಿರೀಕ್ಷೆ ಮಾಡಲ್ಲ ಎಂದರು.

ಕಾಂಗ್ರೆಸ್‌ನವರಿಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಬಂದಿದೆ!

ʻʻಕಾಂಗ್ರೆಸ್‌ನವರಿಗೆ ಈಗ ಲಿಂಗಾಯತರಿಗೆ ಏಕೆ ಇಷ್ಟು ಪ್ರೀತಿ ಬಂದಿದೆಯೋ ಗೊತ್ತಿಲ್ಲ. ಕಳೆದ 50 ವರ್ಷ ಲಿಂಗಾಯತ ನಾಯಕರನ್ನ ತುಳಿದವರೇ ಕಾಂಗ್ರೆಸ್‌ ನಾಯಕರು. ಲಿಂಗಾಯತ ನಾಯಕರನ್ನು ಅವರು ಬೆಂಗಳೂರಿಗೂ ಕರೆದುಕೊಂಡು ಬಂದಿಲ್ಲ. 50 ವರ್ಷ ಲಿಂಗಾಯತರನ್ನ ದೂರ ಇಟ್ಟವರು ಇವರು. ಇವರಿಂದ ಪಾಠ ಕಲಿಯಬೇಕಾ..?ʼʼ ಎಂದು ಬೊಮ್ಮಾಯಿ ಪ್ರಶ್ನಿಸಿದರು.

ʻʻಲಿಂಗಾಯತ ಸಮುದಾಯ ಜಾಗೃತ ಸಮುದಾಯ. ಯಾರು ಅವರನ್ನ ಬೆಂಬಲಿಸಿದ್ದಾರೆ, ಅವರ ಹಿತರಕ್ಷಣೆ ಮಾಡಿದ್ದಾರೆ ಎಂದು ಗೊತ್ತಿದೆ. ಯಡಿಯೂರಪ್ಪ ನವರಂತ ಮೇರು ನಾಯಕತ್ವ, ಬಹಳ ದೊಡ್ಡ ನಾಯಕತ್ವ ಇರುವಾಗ ಲಿಂಗಾಯತ ನಾಯಕರು ನಮ್ಮ ಜೊತೆ ಇರ್ತಾರೆ. ಇತರೆ ಸಮುದಾಯಗಳು ನಮ್ಮ ಜೊತೆ ಇರ್ತಾರೆʼʼ ಎಂದರು ಬೊಮ್ಮಾಯಿ.

ಜಗದೀಶ್‌ ಶೆಟ್ಟರ್‌ ಪಕ್ಷ ಬಿಟ್ಟಿದ್ದೇಕೆ?

ಜಗದೀಶ್‌ ಶೆಟ್ಟರ್‌ ಅವರು ಸುಮಾರು 40 ವರ್ಷಗಳ ಕಾಲ ಬಿಜೆಪಿಯಲ್ಲಿದ್ದು, ಇದೀಗ ಈ ಬಾರಿ ವಿಧಾನಸಭಾ ಟಿಕೆಟ್‌ ನೀಡಲಾಗುವುದಿಲ್ಲ ಎಂಬ ಹೈಕಮಾಂಡ್‌ ಸೂಚನೆಯಿಂದ ಬೇಸತ್ತು ಶಾಸಕತ್ವ ಮತ್ತು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಂಮೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ, ಬಿಜೆಪಿಯ ರಾಜ್ಯ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರು ಶನಿವಾರ ರಾತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಭೇಟಿ ಮಾಡಿ ಪಕ್ಷ ಬಿಡದಂತೆ ಮನವೊಲಿಸಿದ್ದರು. ಬಿಜೆಪಿ ಟಿಕೆಟ್‌ ಒಂದು ಬಿಟ್ಟು ಬೇರೆ ಯಾವುದೇ ಸ್ಥಾನಮಾನಕ್ಕೂ ಸಿದ್ಧ ಎಂಬ ಸಂದೇಶ ರವಾನಿಸಿದ್ದರು. ಆದರೆ, ಜಗದೀಶ್‌ ಶೆಟ್ಟರ್‌ ಮಾತ್ರ, ಶಾಸಕ ಸ್ಥಾನದ ಟಿಕೆಟ್‌ ಒಂದು ಬಿಟ್ಟು ಬೇರೆ ಯಾವ ಸ್ಥಾನಮಾನವೂ ಬೇಡ ಎಂದು ಹಠ ಮಾಡಿದ್ದರು. ಇದರಿಂದಾಗಿ ಮಾತುಕತೆ ಫಲ ನೀಡದೆ ಶೆಟ್ಟರ್‌ ಅವರು ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದರು.

ಇದನ್ನೂ ಓದಿ : Karnataka Election: ನಾನು ಅಂಬೇಡ್ಕರ್ ವಾದಿ, ಮೀಸಲಾತಿ ಹೆಚ್ಚಳಕ್ಕೆ ದಿಟ್ಟ ನಿರ್ಧಾರ: ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Cauvery Dispute: ತಮಿಳುನಾಡಿಗೆ ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Brand Bangalore: ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ರೂಪುಗೊಂಡ ಆರು ತಿಂಗಳ ಒಳಗೆ ಹಳ್ಳ ಹಿಡಿದಿದೆ. ಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ಬ್ರ್ಯಾಂಡ್ ಬೆಂಗಳೂರು ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ. ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಎಂದು ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

VISTARANEWS.COM


on

Brand Bangalore and BJP Slams DK Shivakumar and Congress Government
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಕನಸಿನ “ಬ್ರ್ಯಾಂಡ್‌ ಬೆಂಗಳೂರು” (Brand Bangalore) ಯೋಜನೆ ಬಗ್ಗೆ ಬಿಜೆಪಿ ಕಿಡಿಕಾರಿದೆ. ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದಿಂದ (Congress Government) ಈ ಯೋಜನೆ ಹಳ್ಳ ಹಿಡಿದಿದೆ ಎಂದು ಅಸಮಾಧಾನ ಹೊರಹಾಕಿದೆ. ಅಲ್ಲದೆ, “ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ” ಎಂದು ಕಾಲೆಳೆದಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಎಂದು ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಬಿಜೆಪಿ ಪೋಸ್ಟ್‌ನಲ್ಲೇನಿದೆ?

“ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್‌ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆ ರೂಪುಗೊಂಡ ಆರು ತಿಂಗಳ ಒಳಗೆ ಹಳ್ಳ ಹಿಡಿದಿದೆ. ಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ಬ್ರ್ಯಾಂಡ್ ಬೆಂಗಳೂರು ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೂ ಸಲ್ಲಬೇಕು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದು, ಬಳಿಕ ಮೈಮರೆಯುವುದು ಕಾಂಗ್ರೆಸ್‌ ಸರ್ಕಾರಕ್ಕೆ ಹೊಸದಲ್ಲ. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ರೂಪಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರೇ, ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಕೃತಾರ್ಥರಾಗಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Continue Reading

ಪ್ರವಾಸ

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

ಮಂಗಳೂರು ಎಂದಾಗ ನೆನಪಾಗುವುದೇ ಸಮುದ್ರ ಮತ್ತು ಸಮುದ್ರಾಹಾರ. ಇಲ್ಲಿ ಕೇವಲ ಇದಿಷ್ಟೇ ಅಲ್ಲ ಇನ್ನೂ ಹಲವು ಪ್ರವಾಸಿಗರ (Mangalore Tour) ನೆಚ್ಚಿನ ತಾಣಗಳಿವೆ. ಹೀಗಾಗಿ ಇಲ್ಲಿ ಭೇಟಿ ನೀಡಿದಾಗ ಮಿಸ್ ಮಾಡಲೇಬಾರದ ಕೆಲವು ತಾಣಗಳ ಕುರಿತು ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

By

Mangalore Tour
Koo

ನೇತ್ರಾವತಿ (netravati) ಮತ್ತು ಗುರುಪುರ (Gurupur) ನದಿಗಳ ಮುಖಜ ಭೂಮಿಯಲ್ಲಿ ಕುಳಿತಿರುವ ಮಂಗಳೂರು ಬೀಚ್ (mangaluru beach) ಪ್ರಿಯರಿಗೆ ಸೂಕ್ತ ತಾಣ. ಚಿನ್ನದ ಬಣ್ಣದ ಮರಳು ಮತ್ತು ಆಕಾಶ ನೀಲಿ ಸಮುದ್ರದ ನೋಟವನ್ನು ಕಣ್ತುಂಬಿಕೊಳ್ಳುವ ಜೊತೆಗೆ ಸಮುದ್ರಾಹಾರವನ್ನು (see food) ಸವಿಯಲು ಇಷ್ಟಪಡುವವರಿಗೆ ಮಂಗಳೂರಿನಲ್ಲಿ (Mangalore Tour) ಸಾಕಷ್ಟು ವೆರೈಟಿಗಳಿವೆ.

ನಗರದ ಸಮೀಪದಲ್ಲಿ ಹಲವಾರು ಗಿರಿಧಾಮಗಳಿವೆ. ದಕ್ಷಿಣ ಭಾರತದ (south india) ಇತರ ನಗರಗಳಂತೆ ಮಂಗಳೂರು ಆಧ್ಯಾತ್ಮಿಕ ಭಾವನೆಯನ್ನು ಹೊಂದಿದೆ. ಇಲ್ಲಿ ಎಲ್ಲರೂ ಇಷ್ಟಪಡುವ ಹಲವಾರು ತಾಣಗಳಿದ್ದು, ಅವುಗಳಲ್ಲಿ ಕೆಲವು ಅತ್ಯುತ್ತಮ ಸ್ಥಳಗಳು ಇಂತಿವೆ.


ಮಂಗಳಾದೇವಿ ದೇವಸ್ಥಾನ

ಮಂಗಳೂರು ಜನತೆಯ ಆರಾಧ್ಯ ದೈವ ಮಂಗಳಾದೇವಿ ದೇವಾಲಯದಿಂದಾಗಿಯೇ ಮಂಗಳೂರನ್ನು ಹಿಂದೆ ಮಂಗಳಾಪುರ ಎಂದು ಕರೆಯಲಾಗುತ್ತಿತ್ತು. ಬೋಳಾರ್‌ನಲ್ಲಿರುವ 19ನೇ ಶತಮಾನದ ದೇವಾಲಯವನ್ನು ಅಹೇಪಾ ರಾಜವಂಶದ ರಾಜ ಸ್ಥಾಪಿಸಿದ ಎನ್ನಲಾಗುತ್ತದೆ. ಮಂಗಳೂರಿನಲ್ಲಿ ನೋಡಬಹುದಾದ ಅತ್ಯಂತ ಜನಪ್ರಿಯ ಸ್ಥಳಗಳಲ್ಲಿ ಇದು ಒಂದಾಗಿದೆ. ದಸರಾದ ಮೊದಲು, ನವರಾತ್ರಿಯ ಸಮಯದಲ್ಲಿ ದೇವಾಲಯಕ್ಕೆ ಭೇಟಿ ನೀಡಲು ಉತ್ತಮ ಸಮಯ. ರಾತ್ರಿ 9 ಗಂಟೆಗೆ ದೇವಾಲಯವನ್ನು ಮುಚ್ಚಲಾಗುತ್ತದೆ.


ಗೋಕರ್ಣನಾಥೇಶ್ವರ ದೇವಸ್ಥಾನ

ಶಿವನಿಗೆ ಅರ್ಪಿತವಾಗಿರುವ ಗೋಕರ್ಣನಾಥೇಶ್ವರ ದೇವಾಲಯವು ಮಂಗಳೂರಿನಲ್ಲಿ ನೋಡಲೇಬೇಕಾದ ಮತ್ತೊಂದು ತಾಣ. ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಈ ದೇವಾಲಯವು ಕೊಡಿಯಾಲ್ ಬೈಲ್‌ನ ಕುದ್ರೋಳಿಯಲ್ಲಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಎಂದೂ ಕರೆಯಲ್ಪಡುವ ಈ ದೇವಾಲಯವು 60 ಅಡಿ ಎತ್ತರದ ಚಿನ್ನದ ಬಣ್ಣದ ಗೋಪುರವನ್ನು ಹೊಂದಿದೆ ಮತ್ತು ಗಾರೆ ಆಕೃತಿಗಳಿಂದ ಅಲಂಕರಿಸಲ್ಪಟ್ಟಿದೆ. ಈ ದೇವಾಲಯದ ಸೌಂದರ್ಯವನ್ನು ಹೆಚ್ಚಿಸುವ ಕೆಲವು ಸೊಗಸಾದ ರಾಕ್ ಕೆತ್ತನೆ ಮತ್ತು ಶಿಲ್ಪಗಳನ್ನು ಪ್ರದರ್ಶಿಸುತ್ತದೆ. ದೇವಾಲಯದ ಗೋಪುರವನ್ನು ಹಿಂದೂ ದಂತಕಥೆಗಳ ದೃಶ್ಯಗಳನ್ನು ಚಿತ್ರಿಸುವ ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ.

ನವರಾತ್ರಿಯ ಸಮಯದಲ್ಲಿ ಈ ದೇವಾಲಯಕ್ಕೆ ಭೇಟಿ ನೀಡಲು ಉತ್ತಮ ಸಮಯವಾಗಿದೆ. ಯಾಕೆಂದರೆ ಇಲ್ಲಿ ದಸರಾ ಹಬ್ಬವನ್ನು ಹೆಚ್ಚು ಉತ್ಸಾಹದಿಂದ ಆಚರಿಸಲಾಗುತ್ತದೆ. ದೇವಾಲಯವು ಬೆಳಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಮತ್ತು ಸಂಜೆ 4.30ರಿಂದ ರಾತ್ರಿ 9ರವರೆಗೆ ತೆರೆದಿರುತ್ತದೆ.


ಪಣಂಬೂರು ಬೀಚ್

ಮಂಗಳೂರಿನಿಂದ 13 ಕಿಲೋಮೀಟರ್ ದೂರದಲ್ಲಿರುವ ಪಣಂಬೂರು ಬೀಚ್ ಅತ್ಯಂತ ಜನಪ್ರಿಯ ತಾಣವಾಗಿದೆ. ಸೂರ್ಯೋದಯ, ಸೂರ್ಯಾಸ್ತಗಳನ್ನು ವೀಕ್ಷಿಸಲು ಪರಿಪೂರ್ಣ ಸ್ಥಳಗಳಲ್ಲಿ ಇದು ಒಂದಾಗಿದೆ. ಇಲ್ಲಿ ಜಲಕ್ರೀಡೆಯನ್ನು ಮಾಡಬಹುದು. ಬೀಚ್‌ಗೆ ಭೇಟಿ ನೀಡಲು ಪ್ಯಾರಾಸೈಲಿಂಗ್, ಜೆಟ್ ಸ್ಕೀಯಿಂಗ್, ದೋಣಿ ಸವಾರಿ ನಡೆಸಬಹುದು.
ಸೆಪ್ಟೆಂಬರ್ ಮತ್ತು ಮಾರ್ಚ್ ತಿಂಗಳ ನಡುವಿನ ಮುಂಜಾನೆ ಅಥವಾ ತಡ ಮಧ್ಯಾಹ್ನ ಪಣಂಬೂರು ಬೀಚ್‌ಗೆ ಭೇಟಿ ನೀಡಲು ಉತ್ತಮ ಸಮಯ.


ಸುರತ್ಕಲ್ ಬೀಚ್

ಕಡಲತೀರದ ಪ್ರವಾಸಿಗರಿಗೆ ಅನ್ವೇಷಿಸಲು ಮತ್ತೊಂದು ಸ್ಥಳವೆಂದರೆ ಸುರತ್ಕಲ್ ಬೀಚ್. ತನ್ನ ಪ್ರಾಚೀನ ಪರಿಸರಕ್ಕೆ ಹೆಸರುವಾಸಿಯಾದ ಸುರತ್ಕಲ್ ಮುಖ್ಯ ನಗರದಿಂದ 18 ಕಿಲೋ ಮೀಟರ್ ದೂರದಲ್ಲಿದೆ. ಇಲ್ಲಿನ ಮತ್ತೊಂದು ಆಕರ್ಷಣೆ ಕಡಲತೀರದ ದೀಪಸ್ತಂಭ. ಇದು ಬೆಟ್ಟದ ಮೇಲೆ ಇದೆ ಮತ್ತು ಸಮುದ್ರ ಮತ್ತು ಗ್ರಾಮಾಂತರದ ಕೆಲವು ಉತ್ತಮ ನೋಟವನ್ನು ಒದಗಿಸುತ್ತದೆ. ಈ ಬೀಚ್‌ಗೆ ಭೇಟಿ ನೀಡಲು ಉತ್ತಮ ಸಮಯವೆಂದರೆ ನವೆಂಬರ್ ಮತ್ತು ಫೆಬ್ರವರಿ ನಡುವೆ. ಲೈಟ್‌ಹೌಸ್ ಸಂಜೆ 4ರಿಂದ 5 ಗಂಟೆಯವರೆಗೆ ಮಾತ್ರ ತೆರೆಯುತ್ತದೆ.


ಪಿಲಿಕುಳ ನಿಸರ್ಗಧಾಮ

ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಪಿಕ್ನಿಕ್‌ಗಳಿಗೆ ಸಾಕಷ್ಟು ಸೂಕ್ತವಾಗಿದೆ. ಅಂತಹ ಒಂದು ಪರಿಪೂರ್ಣ ಸ್ಥಳವೆಂದರೆ ಪಿಲಿಕುಳ ನಿಸರ್ಗಧಾಮ. ಇದು ಸುಮಾರು 15 ಕಿಲೋಮೀಟರ್ ದೂರದಲ್ಲಿದೆ. 370 ಎಕರೆ ವಿಸ್ತೀರ್ಣದಲ್ಲಿ ಹರಡಿರುವ ಪಿಲಿಕುಳ ನಿಸರ್ಗಧಾಮ ಅಥವಾ ಪಿಲಿಕುಳವು ನಗರದ ಸಮೀಪವಿರುವ ಅತ್ಯಂತ ಆದ್ಯತೆಯ ಪಿಕ್ನಿಕ್ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ವನ್ಯಜೀವಿ ಪ್ರಭೇದಗಳು, ಬೊಟಾನಿಕಲ್ ಗಾರ್ಡನ್, ಮೃಗಾಲಯದಲ್ಲಿ ಹುಲಿ, ಚಿರತೆ, ಕರಡಿ ಮತ್ತು ವಿವಿಧ ಸರೀಸೃಪಗಳು ಮತ್ತು ಹಾವುಗಳನ್ನು ಕಾಣಬಹುದು. ಆವರಣದಲ್ಲಿ ಗಾಲ್ಫ್ ಕೋರ್ಸ್ ಅನ್ನು ಸಹ ಕಾಣಬಹುದು.

ಅಕ್ಟೋಬರ್ ಮತ್ತು ಫೆಬ್ರುವರಿ ನಡುವೆ ಈ ಸ್ಥಳಕ್ಕೆ ಭೇಟಿ ನೀಡಲು ಉತ್ತಮ ಸಮಯ. ಪಿಲಿಕುಳ ನಿಸರ್ಗಧಾಮ ಸೋಮವಾರ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ತೆರೆದಿರುತ್ತದೆ.


ಸೇಂಟ್ ಅಲೋಶಿಯಸ್ ಚರ್ಚ್

ಮಂಗಳೂರಿನ ಸೇಂಟ್ ಅಲೋಶಿಯಸ್ ಚರ್ಚ್ ತನ್ನ ಅದ್ಭುತ ವಾಸ್ತುಶಿಲ್ಪ ಮತ್ತು ಒಳಾಂಗಣಕ್ಕೆ ಹೆಸರುವಾಸಿಯಾಗಿದೆ. ಈ ಚರ್ಚ್ 1880 ರಲ್ಲಿ ನಿರ್ಮಿಸಲಾಯಿತು. ಇಟಾಲಿಯನ್ ಕಲಾವಿದ ಆಂಟೋನಿಯೊ ಮೊಸ್ಚೆನಿ ಅವರ ವಿಶಿಷ್ಟ ವರ್ಣಚಿತ್ರಗಳು ಇಲ್ಲಿನ ಹೆಚ್ಚಿನ ಗೋಡೆಗಳನ್ನು ಅಲಂಕರಿಸಿದೆ. ಪೇಂಟಿಂಗ್‌ಗಳು ಅಲೋಶಿಯಸ್ ಅವರ ಜೀವನವನ್ನು ಚಿತ್ರಿಸುತ್ತವೆ. ಸ್ವಲ್ಪ ಕಾಲ ಶಾಂತವಾಗಿ ಕಾಲ ಕಳೆಯಲು ಬಯಸುವವರಿಗೆ ಇದು ಸೂಕ್ತ ತಾಣ.

ಚಳಿಗಾಲವು ಸೇಂಟ್ ಅಲೋಶಿಯಸ್ ಚರ್ಚ್‌ಗೆ ಭೇಟಿ ನೀಡಲು ಉತ್ತಮ ಸಮಯ. ಈ ಸಂದರ್ಭದಲ್ಲಿ ಚರ್ಚ್ ಬೆಳಗ್ಗೆ 9ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ.


ಸುಲ್ತಾನ್ ಬತ್ತೇರಿ

ಮಂಗಳೂರಿನಿಂದ ಸುಮಾರು 4 ಕಿಲೋ ಮೀಟರ್ ದೂರದಲ್ಲಿರುವ ಬೋಳೂರಿನಲ್ಲಿರುವ ಸುಲ್ತಾನ್ ಬತ್ತೇರಿ ಕ್ರಿ.ಶ. 1784 ರಲ್ಲಿ ಚಕ್ರವರ್ತಿ ಟಿಪ್ಪು ಸುಲ್ತಾನನ ಕಾಲದಲ್ಲಿ ನಿರ್ಮಿಸಲಾಗಿದೆ. ಟಿಪ್ಪು ಸುಲ್ತಾನ್ ನಾಶಪಡಿಸಿದ 23 ಚರ್ಚ್‌ಗಳ ಅದೇ ಕಲ್ಲುಗಳಿಂದ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ಇದು ಗಡಿಯಾರ ಗೋಪುರವಾಗಿದ್ದರೂ ಫಿರಂಗಿಗಳನ್ನು ಸ್ಥಾಪಿಸುವ ಸ್ಥಳಗಳನ್ನು ಹೊಂದಿರುವ ಕೋಟೆಯಂತೆ ಕಾಣುತ್ತದೆ. ಗೋಪುರದ ಅಡಿಯಲ್ಲಿ ಭೂಗತ ಶೇಖರಣಾ ಪ್ರದೇಶವಿದೆ. ಇದನ್ನು ಒಮ್ಮೆ ಗನ್‌ಪೌಡರ್ ಸಂಗ್ರಹಿಸಲು ಬಳಸಲಾಗುತ್ತಿತ್ತು. ಇದರ ಮೇಲೇರಿದರೆ ಅರಬ್ಬಿ ಸಮುದ್ರದ ವಿಹಂಗಮ ನೋಟವನ್ನು ಕಾಣಬಹುದು.

ಅದ್ಭುತವಾದ ಸೂರ್ಯಾಸ್ತವನ್ನು ಇಲ್ಲಿ ವೀಕ್ಷಿಸಬಹುದು. ಈ ಸ್ಥಳವು ಬೆಳಗ್ಗೆ 9 ರಿಂದ ಸಂಜೆ 7.30 ರವರೆಗೆ ತೆರೆದಿರುತ್ತದೆ.


ಮೂಲ್ಕಿಯಲ್ಲಿ ಸರ್ಫಿಂಗ್

ಮೂಲ್ಕಿಯಲ್ಲಿರುವ ಸರ್ಫಿಂಗ್ (ಜಲ ಕ್ರೀಡೆ) ಕೇಂದ್ರವು ಸರ್ಫರ್‌ಗಳ ಸ್ವರ್ಗವಾಗಿದೆ. ಮಂಗಳೂರಿನ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ ದೂರದಲ್ಲಿದೆ. ವರ್ಷಪೂರ್ತಿ ಸರ್ಫ್ ಮಾಡಬಹುದಾದರೂ ಮೇನಿಂದ ಜೂನ್ ಮತ್ತು ಸೆಪ್ಟೆಂಬರ್ ನಿಂದ ಅಕ್ಟೋಬರ್‌ವರೆಗೆ ಉತ್ತಮ ಸಮಯ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಸ್ವಾದಿಷ್ಟ ಆಹಾರ ಸವಿಯಲು, ಶಾಪಿಂಗ್‌ಗೆ ಸೂಕ್ತ ತಾಣ

ಮಂಗಳೂರಿಗೆ ಭೇಟಿ ನೀಡಿದರೆ ಸ್ವಾದಿಷ್ಟ ಆಹಾರ ಗ್ಯಾರಂಟಿ. ಕೆಲವು ರುಚಿಕರವಾದ ಸಮುದ್ರಾಹಾರವನ್ನು ಸವಿಯಬಹುದು. ಫಿಶ್ ಪುಲಿಮುಂಚಿ ಮತ್ತು ಏಡಿ ಘೀ ರೋಸ್ಟ್ ಇಲ್ಲಿನ ಜನಪ್ರಿಯ ಖಾದ್ಯ. ಮಂಗಳೂರಿನಲ್ಲಿ ಜನಪ್ರಿಯವಾಗಿರುವ ಇತರ ಭಕ್ಷ್ಯಗಳೆಂದರೆ ನೀರ್ ದೋಸೆ ಮತ್ತು ಚಿಕನ್ ಕರಿ. ಸಸ್ಯಾಹಾರಿಗಳು ಅಧಿಕೃತ ಮಂಗಳೂರಿನ ಸಸ್ಯಾಹಾರಿ ಆಹಾರಕ್ಕಾಗಿ ಅಯೋಧ್ಯೆಗೆ ಭೇಟಿ ನೀಡಬಹುದು.

ಶಾಪಿಂಗ್ ಪ್ರಿಯರಿಗೆ ಮಂಗಳೂರು ನಗರದಲ್ಲಿ ಹಲವು ತಾಣಗಳಿವೆ. ಸೆಂಟ್ರಲ್ ಮಾರುಕಟ್ಟೆ ಹಂಪನಕಟ್ಟಾ ಮಾರುಕಟ್ಟೆ ಬಡಂಗ್‌ಪೇಟ್ ಮಾರುಕಟ್ಟೆ ಸಮುದ್ರಾಹಾರ ಮಾರುಕಟ್ಟೆ ದುಬೈ ಮಾರ್ಕೆಟ್ ಎಂಪೈರ್ ಮಾಲ್‌ಗೆ ಭೇಟಿ ನೀಡಬಹುದು.

Continue Reading

ಬೆಂಗಳೂರು

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

2nd Puc Exam : ದ್ವಿತೀಯ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ, ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ದಿನಾಂಕಗಳನ್ನು ಪ್ರಕಟಿಸಲಾಗಿದೆ.

VISTARANEWS.COM


on

By

2nd Pux Exam
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಏಪ್ರಿಲ್ 29 ರಿಂದ ಮೇ 16ರವರೆಗೆ ನಡೆದಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ (2nd Puc Exam) ಫಲಿತಾಂಶ ಪ್ರಕಟಗೊಂಡಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅಂತಹವರು ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಯನ್ನು Kseab.karnataka.gov.in ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಡೌನ್‌ಲೋಡ್‌ ಮಾಡಿಕೊಳ್ಳಲು ಮೇ 22ರಿಂದ 24ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮರು ಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ 2ರ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತದೆ. ಇನ್ನೂ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ಫಲಿತಾಂಶವನ್ನು , ಮಂಡಲಿಯ ವೆಬ್‌ಸೈಟ್‌ Kseab.karnataka.gov.in ಪ್ರಕಟಿಸಲಾಗುತ್ತದೆ. ಅಂಕಗಳ ಮರುಎಣಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್‌ 24ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ


ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಪರೀಕ್ಷೆ -3ಕ್ಕೆ ನೋಂದಾಯಿಸಿಕೊಳ್ಳಲು ಹೀಗೆ ಮಾಡಿ

2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಮೇ 23ರಿಂದ ಮ28ರ ಒಳಗಾಗಿ ಇಂದೀಕರಿಸಬೇಕು. ಕೊನೆ ದಿನವನ್ನು ಮೀರಿದರೆ ದಂಡ ಸಹಿತ ಮೇ 29ರಿಂದ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ 3ಕ್ಕೆ ಮೇ 24ರಿಂದ 28ರವರೆಗೆ ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cauvery Dispute
ಕರ್ನಾಟಕ14 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ16 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ20 mins ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ32 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ43 mins ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್50 mins ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Lok Sabha Elections 2024 7 celebs who didn’t vote in Lok Sabha Elections
ಬಾಲಿವುಡ್52 mins ago

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

RR vs RCB
ಕ್ರೀಡೆ1 hour ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ1 hour ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು1 hour ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Love Case Father throws hot water on man who loved his daughter for coming home
ಕೊಡಗು5 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ಟ್ರೆಂಡಿಂಗ್‌