Karnataka Elections : ಪಕ್ಷದ್ರೋಹ ಮಾಡಿಲ್ಲ, 10 ಬಾರಿ ಯೋಚಿಸಿ ಕಾಂಗ್ರೆಸ್‌ ಸೇರಿದ್ದೇನೆ; ಬಿ ಫಾರಂ ಸ್ವೀಕರಿಸಿದ ಜಗದೀಶ್‌ ಶೆಟ್ಟರ್‌ - Vistara News

ಕರ್ನಾಟಕ

Karnataka Elections : ಪಕ್ಷದ್ರೋಹ ಮಾಡಿಲ್ಲ, 10 ಬಾರಿ ಯೋಚಿಸಿ ಕಾಂಗ್ರೆಸ್‌ ಸೇರಿದ್ದೇನೆ; ಬಿ ಫಾರಂ ಸ್ವೀಕರಿಸಿದ ಜಗದೀಶ್‌ ಶೆಟ್ಟರ್‌

Jagadish Shettar: ಕಾಂಗ್ರೆಸ್‌ ಸೇರುವ ಮೂಲಕ ಶೆಟ್ಟರ್‌ ಪಕ್ಷದ್ರೋಹ ಮಾಡಿದ್ದಾರೆ ಎಂಬ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ. ಕಾಂಗ್ರೆಸ್‌ ಸೇರುವಾಗ 10 ಬಾರಿ ಯೋಚನೆ ಮಾಡಿದ್ದೇನೆ ಎಂದರು.

VISTARANEWS.COM


on

Jagadish Shettar B Form
ಜಗದೀಶ್‌ ಶೆಟ್ಟರ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಂದ ಬಿ ಫಾರಂ ಪಡೆದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನು ಪಕ್ಷವನ್ನು ಕಟ್ಟಿದ ವ್ಯಕ್ತಿ. ಯಾವತ್ತೂ ಪಕ್ಷ ದ್ರೋಹ ಮಾಡುವವನಲ್ಲ. ಹತ್ತು ಬಾರಿ ಯೋಚನೆ ಮಾಡಿಯೇ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ಸೋಮವಾರವಷ್ಟೇ ಕಾಂಗ್ರೆಸ್‌ ಸೇರಿದ (Karnataka Elections) ಮಾಜಿ ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಕಾಂಗ್ರೆಸ್‌ ಸೇರಿದ ಬಳಿಕ ಕೆಪಿಸಿಸಿ ಕಚೇರಿಯಲ್ಲೇ ಧಾರವಾಡ ಸೆಂಟ್ರಲ್‌ ಕ್ಷೇತ್ರದ ಸ್ಪರ್ಧೆಗಾಗಿ ಅವರು ಬಿ ಫಾರಂನ್ನು ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಬಿ ಫಾರಂ ನೀಡಿದರು.

ಈ ವೇಳೆ ಶೆಟ್ಟರ್‌ ಪಕ್ಷ ದ್ರೋಹ ಮಾಡಿದ್ದಾರೆ ಎಂಬ ಕೆಲವರ ಆರೋಪಗಳಿಗೆ ಅವರು ಉತ್ತರ ನೀಡಿದರು. ʻʻಇಷ್ಟು ದಿನ ಪಕ್ಷ ದ್ರೋಹ ಅನ್ನುವ ಆರೋಪ ಇರಲಿಲ್ಲ. ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ಈಗ ಮಾತಾಡ್ತಿರೋರು ಪಕ್ಷಕ್ಕೆ ಬಂದ ಹೊಸಬರು. ಪಾರ್ಟಿಗೆ ಹೊಸದಾಗಿ ಬಂದವರು ಮಾತಾಡ್ತಿದ್ದಾರೆ, ಮಾತಾಡಲಿ. ಅವರ ವಿಷಯಗಳು ನನಗೆ ಗೊತ್ತಿದೆ. ನಾನಂತೂ 10 ಬಾರಿ ಯೋಚನೆ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದೇನೆʼʼ ಎಂದು ಹೇಳಿದರು.

ಸಾವಿರಾರು ಕಾರ್ಯಕರ್ತರು ನನ್ನ ಜೊತೆ ಇದ್ದಾರೆ. ಉತ್ತಮ ನಿರ್ಧಾರ ಮಾಡಿದ್ದೀರಾ ಅಂತ ಹೇಳಿದ್ದಾರೆ ಎಂದು ಶೆಟ್ಟರ್‌ ನುಡಿದರು.

ʻʻಕೆಲವೇ ಕೆಲವು ವ್ಯಕ್ತಿಗಳು ಪಾರ್ಟಿಯನ್ನು ಕಂಟ್ರೋಲ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವೆಲ್ಲ ಹಿರಿಯ ನಾಯಕರು ಅಡ್ಡಿಯಾಗಿದ್ದೇವೆ. ಅದಕ್ಕಾಗಿ ನಮ್ಮನ್ನು ಬದಿಗೆ ಸರಿಸುವ ಪ್ರಯತ್ನ ನಡೆಯುತ್ತಿದೆʼʼ ಎಂದು ಶೆಟ್ಟರ್‌ ಆರೋಪಿಸಿದರು.

ʻʻಇಷ್ಟು ದಿನ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಿ ಈಗ ಬಿಜೆಪಿ ವಿರುದ್ಧ ಪ್ರಚಾರ ಮಾಡುವುದು ಕಷ್ಟವಾಗುವುದಿಲ್ಲವೇ?ʼ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ‌ಕೂಡಾ ರಾಷ್ಟ್ರೀಯ ಪಕ್ಷ. ವ್ಯವಸ್ಥೆಯಲ್ಲಿ ಇದೆಲ್ಲ ಇರುತ್ತದೆ. ಯಾರಿಂದ ನನಗೆ ಅನ್ಯಾಯ ಆಗಿದೆ ಅಂತ ಈಗಾಗಲೇ ಹೇಳಿದ್ದೇನೆʼʼ ಎಂದು ಸ್ಪಷ್ಟಪಡಿಸಿದರು.

ಶೆಟ್ಟರ್‌ಗೆ ಮಾತ್ರ ಟಿಕೆಟ್‌ ಎಂದ ಶಾಮನೂರು

ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ಒಬ್ಬರಾದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯಲ್ಲಿ ಮಾತನಾಡಿ, ʻʻʻಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರೋದಲ್ಲ, ಆಗಲೇ ಬಿ ಫಾರಂ ತಂದಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ನಿಂದ ಶೆಟ್ಟರ್ ಸ್ಪರ್ಧೆ ಮಾಡ್ತಾರೆ ಎಂದರು.

ʻʻಸರ್ಕಾರ ನಮ್ದೇ ಮಾಡುತ್ತೇವೆʼ ಎಂದು ಭರವಸೆಯಿಂದ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಶೆಟ್ಟರ್ ಗೆ ಮಾತ್ರ ಟಿಕೆಟ್, ಪುತ್ರನಿಗೆ ಇಲ್ಲ ಎಂದರು.

ಜಗದೀಶ್‌ ಶೆಟ್ಟರ್‌ ಪಕ್ಷ ಬಿಟ್ಟಿದ್ದೇಕೆ?

ಜಗದೀಶ್‌ ಶೆಟ್ಟರ್‌ ಅವರು ಸುಮಾರು 40 ವರ್ಷಗಳ ಕಾಲ ಬಿಜೆಪಿಯಲ್ಲಿದ್ದು, ಇದೀಗ ಈ ಬಾರಿ ವಿಧಾನಸಭಾ ಟಿಕೆಟ್‌ ನೀಡಲಾಗುವುದಿಲ್ಲ ಎಂಬ ಹೈಕಮಾಂಡ್‌ ಸೂಚನೆಯಿಂದ ಬೇಸತ್ತು ಶಾಸಕತ್ವ ಮತ್ತು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಂಮೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ, ಬಿಜೆಪಿಯ ರಾಜ್ಯ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರು ಶನಿವಾರ ರಾತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಭೇಟಿ ಮಾಡಿ ಪಕ್ಷ ಬಿಡದಂತೆ ಮನವೊಲಿಸಿದ್ದರು. ಬಿಜೆಪಿ ಟಿಕೆಟ್‌ ಒಂದು ಬಿಟ್ಟು ಬೇರೆ ಯಾವುದೇ ಸ್ಥಾನಮಾನಕ್ಕೂ ಸಿದ್ಧ ಎಂಬ ಸಂದೇಶ ರವಾನಿಸಿದ್ದರು. ಆದರೆ, ಜಗದೀಶ್‌ ಶೆಟ್ಟರ್‌ ಮಾತ್ರ, ಶಾಸಕ ಸ್ಥಾನದ ಟಿಕೆಟ್‌ ಒಂದು ಬಿಟ್ಟು ಬೇರೆ ಯಾವ ಸ್ಥಾನಮಾನವೂ ಬೇಡ ಎಂದು ಹಠ ಮಾಡಿದ್ದರು. ಇದರಿಂದಾಗಿ ಮಾತುಕತೆ ಫಲ ನೀಡದೆ ಶೆಟ್ಟರ್‌ ಅವರು ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದರು.

ಇದನ್ನೂ ಓದಿ : Karnataka Elections : ಕಾಂಗ್ರೆಸ್‌ ಕೈ ಹಿಡಿದ ಸಂಘ ಪರಿವಾರದ ಹಿರಿಯ ನಾಯಕ; ಶೆಟ್ಟರ್‌ ರಾಜಕೀಯ ಮಹಾಪಯಣದ ಹಿನ್ನೋಟ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

Murder case : ಪತಿ ಕಳೆದುಕೊಂಡ ಮಹಿಳೆಯು ತೃತೀಯ ಲಿಂಗಿಯೊಂದಿಗೆ ವಾಸವಾಗಿದ್ದಳು. ಆದರೆ ಅವರಿಬ್ಬರ ನಡುವೆ ನಡೆದ ಚಿಕ್ಕ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ತೃತೀಯ ಲಿಂಗಿಯನ್ನು ಉಸಿರುಗಟ್ಟಿ ಕೊಂದು ಪರಾರಿ ಆಗಿದ್ದ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Murder case
ಕೊಲೆಯಾದ ಮಂಜಿ ಬಾಯ್ ಹಾಗೂ ಪ್ರೇಮ ಕೊಲೆ ಆರೋಪಿ
Koo

ಬೆಂಗಳೂರು: ಸಣ್ಣದಾಗಿ ಶುರುವಾದ ಜಗಳವು ವಿಕೋಪಕ್ಕೆ ತಿರುಗಿತ್ತು. ತನ್ನ ಪ್ರಾಣ ಉಳಿಸಿಕೊಳ್ಳಲು ಆ ಮಹಿಳೆ ಮತ್ತೊಬ್ಬರ ಪ್ರಾಣವನ್ನೇ (Murder case) ತೆಗೆದು ಕಾಲ್ಕಿತ್ತಿದ್ದಳು. ಆದರೆ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ತೃತೀಯ ಲಿಂಗಿಯನ್ನು ಹತ್ಯೆ ಮಾಡಿದ್ದ ಮಹಿಳೆಯ ಬಂಧನವಾಗಿದೆ.

ತೃತೀಯ ಲಿಂಗಿ ಮಂಜಿ ಬಾಯ್ ಅಲಿಯಾಸ್‌ ಮಂಜ ನಾಯ್ಕ್ (42) ಕೊಲೆಯಾದವರು. ಕಳೆದ ಏ. 3ರಂದು ಜೆ.ಬಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜಿ ಬಾಯ್ ಶವ ಪತ್ತೆಯಾಗಿತ್ತು. ಈ ಬಗ್ಗೆ ಮೊದಲಿಗೆ ಪೊಲೀಸರು ಯುಡಿಆರ್‌ (UDR) ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ನಂತರ ಮರಣೋತ್ತರ ಪರೀಕ್ಷೆ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬಯಲಾಗಿತ್ತು. ಹೀಗಾಗಿ ಮಂಜಿ ಬಾಯ್‌ ಜತೆ ವಾಸವಿದ್ದ ಪ್ರೇಮ (51) ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ ಪ್ರೇಮಾ ತಾನೇ ಮಂಜಿಯನ್ನು ಕೊಲೆ ಮಾಡಿದ್ದಾಗಿ ಹೇಳಿ ನಂತರ ಕಾರಣವನ್ನು ಬಾಯ್ಬಿಟ್ಟಿದ್ದಳು. ಪ್ರೇಮ ತನ್ನ ಪತಿಯನ್ನು ಕಳೆದುಕೊಂಡ ಮೇಲೆ ಕಳೆದ 20 ವರ್ಷದಿಂದ ತೃತೀಯ ಲಿಂಗಿ ಮಂಜಿ ಬಾಯ್‌ ಜತೆ ವಾಸವಿದ್ದಳು. ಮಂಜಿ ಬಾಯ್ ಕಂಪನಿಯೊಂದರ ಕ್ಯಾಂಟಿನ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಪ್ರೇಮಾ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು.

ಈ ನಡುವೆ ಚೆನ್ನಾಗಿಯೇ ಇದ್ದ ಅವರಿಬ್ಬರು ಕಳೆದ ಏ.26ರಂದು ಮನೆಯಲ್ಲಿದ್ದಾಗ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಜಗಳ ಆಗಿತ್ತು. ಇವರಿಬ್ಬರ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮಂಜಿ ಬಾಯ್‌ ಪ್ರೇಮಾಳಿಗೆ ಚಾಕುವಿನಿಂದ ಚುಚ್ಚಲು ಮುಂದಾಗಿದ್ದ.ತನ್ನ ಪ್ರಾಣ ಉಳಿಸಿಕೊಳ್ಳಲು ಪ್ರೇಮಾ ಟವಲ್‌ನಿಂದ ಮಂಜಿಬಾಯ್ ಕುತ್ತಿಗೆ ಬಿಗಿದಿದ್ದಳು. ಅಷ್ಟೇ ಉಸಿರುಗಟ್ಟಿ ಮಂಜಿ ಬಾಯ್‌ ಕ್ಷಣಾರ್ಧದಲ್ಲೇ ಮೃತಪಟ್ಟಿದ್ದ. ಸದ್ಯ ಆರೋಪಿತೆ ಪ್ರೇಮಾಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಮಂಗಳೂರಲ್ಲಿ ಯುವಕ ಅನುಮಾನಾಸ್ಪದ ಸಾವು

ಮಂಗಳೂರಿನ ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಚೇತನ್ (33) ಮೃತ ದುರ್ದೈವಿ. ಮೃತ ಚೇತನ್ ತಾಯಿ ಉಮಾವತಿ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರ ಪರಿಶೀಲನೆ ವೇಳೆ ಪ್ರಕರಣ ಸಂಬಂಧ ಅನುಮಾನ ಮೂಡಿದರಿಂದ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

ನಿನ್ನೆ ಗುರುವಾರ ರಾತ್ರಿ ಚೇತನ್‌ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಈ ವೇಳೆ ತಾಯಿ ಜತೆ ಜಗಳವಾಡಿ ಹೊರನಡೆದ ಚೇತನ್‌, ಮನೆ ಪಕ್ಕದಲ್ಲಿರುವ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಹೀಗಾಗಿ ಯೂಸುಫ್, ಚೇತನ್ ಅವರ ತಾಯಿ ಉಮಾವತಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

murder case

ಕೂಡಲೇ ಅಲ್ಲಿಗೆ ಬಂದ ಚೇತನ್ ತಾಯಿ ಉಮಾವತಿ, ನಾಯಿಯನ್ನು ಕಟ್ಟುವ ಸಂಕೋಲೆಯನ್ನು ಮಗನ ಸೊಂಟಕ್ಕೆ ಹಾಕಿ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ. ಚೇತನ್‌ ಮತ್ತಷ್ಟು ಹಠಕ್ಕೆ ಬಿದ್ದಾಗ ಯೂಸುಫ್ ಹಾಗೂ ಸ್ಥಳೀಯ ನಿವಾಸಿಗಳು ಸೇರಿ ಚೇತನ್‌ನನ್ನು ಮನೆಗೆ ಎಳೆದೊಯ್ದಿದ್ದಾರೆ.

ಸಂಕೋಲೆ ಎಳೆಯುವ ಸಮಯದಲ್ಲಿ ಚೇತನ್‌ ಕುತ್ತಿಗೆಗೆ ಸುತ್ತಿಕೊಂಡಿದೆ. ಈ ವೇಳೆ ಕುತ್ತಿಗೆಗೆ ಸಂಕೋಲೆ ಬಿಗಿದು ಚೇತನ್‌ ಮೃತಪಟ್ಟಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Madara Channaiah Gurupeeta: ಚಿತ್ರದುರ್ಗ ಹೊರವಲಯದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾದಾರ ಶ್ರೀಗಳು ನೂತನ ವಟುವನ್ನು ಸ್ವೀಕಾರ ಮಾಡಿದ್ದಾರೆ.

VISTARANEWS.COM


on

Madara Channaiah Gurupeeta
Koo

ಚಿತ್ರದುರ್ಗ: ನಗರದ ಹೊರವಲಯದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ (Madara Channaiah Gurupeeta) ಶುಕ್ರವಾರ ನೂತನ ವಟು ಸ್ವೀಕಾರ ಮಾಡಲಾಗಿದೆ. ನೂತನ ವಟುವಿಗೆ ಜಯಬಸವ ದೇವರು ಎಂದು ನಾಮಕರಣ ಮಾಡಲಾಗಿದೆ.

ಮಠದ ಆವರಣದ ಬಸವಾದಿ ಶರಣರ ಧರ್ಮ ಸಂಸತ್ ಸಭಾ ಮಂಟಪದಲ್ಲಿ ಬೆಳಗ್ಗೆ ನಡೆದ ವಟು ಸ್ವೀಕಾರ ಸಮಾರಂಭದಲ್ಲಿ ಲಿಂಗಧೀಕ್ಷೆ, ವಿಭೂತಿ ಧಾರಣೆ, ಲಿಂಗಧಾರಣೆ, ಹಸ್ತಮಸ್ತಕ ಸಂಯೋಜನೆ, ಪಾದಪೂಜೆ ಸೇರಿ ಬಸವ ತತ್ತ್ವದ ಪ್ರಕಾರ ಧಾರ್ಮಿಕ ವಿಧಿ ವಿಧಾನ ನೆರವೇರಿದವು. ಈ ವೇಳೆ ಮಾದಾರ ಶ್ರೀಗಳು ವಟು ಸ್ವೀಕಾರ ಮಾಡಿದರು.

ಮಾದಾರ ಚನ್ನಯ್ಯ ಗುರುಪೀಠಕ್ಕೆ ಸ್ವೀಕಾರ ಮಾಡಿರುವ ವಟು ಜಯಬಸವ ದೇವರ ಅವರು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದವರು. ಸವಿತಾ, ಮಹಾಲಿಂಗಪ್ಪ ದಂಪತಿ ದ್ವಿತೀಯ ಪುತ್ರ 9 ವರ್ಷದ ಲಖನ್ ಮಠಕ್ಕೆ ವಟು ಆಗಿದ್ದಾರೆ. ಈ ದಂಪತಿಗೆ ಒಟ್ಟು ನಾಲ್ವರು ಮಕ್ಕಳಿದ್ದು, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು. ಇದರಲ್ಲಿ ಎರಡನೇ ಮಗ ಲಖಬ್ ಅವರನ್ನು ಮಠಕ್ಕೆ ನೀಡಲಾಗಿದೆ.

ಇದನ್ನೂ ಓದಿ | PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

ಕಾರ್ಯಕ್ರಮದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿಜಿ, ಭಗಿರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೊಸದುರ್ಗ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಹಂಪಿಯ ಮಾತಂಗಮುನಿ ಮಠದ ಶ್ರೀ ಮಾತಂಗಮುನಿ ಸ್ವಾಮೀಜಿ, ಲಂಬಾಣಿ ಗುರುಪೀಠದ ಶ್ರೀ ನಂದ ಮಸಂದ ಸ್ವಾಮಿಗಳು, ಚಿತ್ರದುರ್ಗದ ಶ್ರೀ ವೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮಿಗಳು, ರಾಣೆಬೆನ್ನೂರಿನ ಶ್ರೀ ಗಜದಂಡ ಸ್ವಾಮಿಗಳು, ಸಿದ್ದಾರೂಢ ಆಶ್ರಮದ ಶ್ರೀ ಜಯದೇವ ಸ್ವಾಮಿಗಳು, ತಿಳುವಳ್ಳಿಯ ಶ್ರೀ ನಿರಂಜನಾಂದ ಸ್ವಾಮಿಗಳು ಶ್ರೀ ತಿಪ್ಪೇರುದ್ರ ಸ್ವಾಮಿಗಳು ಸತ್ಯಕ್ಕ ಜಯದೇವಿತಾಯಿ ಶ್ರೀ ಪೂರ್ಣಾನಂದ ಸ್ವಾಮಿಗಳು ಇದ್ದರು.

ಬಸವ ಜಯಂತಿ: ಧಾರವಾಡದಲ್ಲಿ ಗಮನಸೆಳೆದ ಬಣ್ಣ ಬಣ್ಣದ ರಂಗೋಲಿ ಚಿತ್ತಾರ

ಧಾರವಾಡ: ಬಸವ ಜಯಂತಿ ಪ್ರಯುಕ್ತ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಬಣ್ಣ ಬಣ್ಣದ ರಂಗೋಲಿ ಚಿತ್ತಾರಗಳು ಗಮನಸೆಳೆದವು. ಗ್ರಾಮದ ಮೂರು ಸಾವಿರ ವಿರಕ್ತಮಠದ ಸ್ವಾಮೀಜಿಗಳ ಜನ್ಮದಿನ ಅಂಗವಾಗಿ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿರಕ್ತಮಠದ ಆವರಣದಲ್ಲಿ ಮಹಿಳೆಯೊಬ್ಬರು ಬಿಡಿಸಿದ ಬಸವೇಶ್ವರ ಚಿತ್ರ ಎಲ್ಲರ ಗಮನಸೆಳೆಯಿತು.

Continue Reading

ಕರ್ನಾಟಕ

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest Statement in hubli
Koo

ಹುಬ್ಬಳ್ಳಿ: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದರು.

ಇದನ್ನೂ ಓದಿ: Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

ಪ್ರಜಾಪ್ರಭುತ್ವಕ್ಕೆ ಧಕ್ಕೆ

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು.

ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.

ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು.

ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು

ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಇದೇ ವೇಳೆ ಪ್ರತಿಪಾದಿಸಿದರು.

Continue Reading

ಪ್ರಮುಖ ಸುದ್ದಿ

Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Terminal 2: ನಿನ್ನೆ ರಾತ್ರಿಯ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

VISTARANEWS.COM


on

KIA bengaluru terminal 2
Koo

ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport – KIA) ನೂತನ ಟರ್ಮಿನಲ್ 2 (Terminal 2, T2) ಇದರಲ್ಲಿ ಭಾರಿ ಸೋರಿಕೆ (leakage) ಕಂಡುಬಂತು. ಭಾರಿ ಮಳೆಯ ಪರಿಣಾಮ ಇಲ್ಲಿಗೆ ಬರಬೇಕಿದ್ದ ಹಲವು ವಿಮಾನಗಳನ್ನು ಬೇರೆ ಕಡೆಗೆ ಕಳಿಸಲಾಯಿತು.

ನಿನ್ನೆ ರಾತ್ರಿಯ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಈ ಬಗ್ಗೆ ಹೇಳಿಕೆ ನೀಡಿದ್ದು, ಹೀಗೆ ಹೇಳಿದೆ: “ಮೇ 9, 2024ರ ಸಂಜೆ ಅಲ್ಪಾವಧಿಯಲ್ಲಿಯೇ ಅತಿ ಹೆಚ್ಚು ಮಳೆ ಸುರಿದ ಪರಿಣಾಮ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. ನಮ್ಮ ಕಾರ್ಯಾಚರಣೆ ತಂಡಗಳು ಈ ಸೋರಿಕೆಯನ್ನು ತಗ್ಗಿಸಲು ಮತ್ತು ಚಟುವಟಿಕೆಯನ್ನು ಸಾಮಾನ್ಯ ಸ್ಥಿತಿಗೆ ತರಲು ತ್ವರಿತವಾಗಿ ಪ್ರತಿಕ್ರಿಯಿಸಿವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ.”

KIAಯ T2 ಅನ್ನು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದನ್ನು ಉದ್ಘಾಟಿಸಿದರು. ʼಉದ್ಯಾನವನ ಟರ್ಮಿನಲ್ʼ ಎಂದು ಕರೆಯಲ್ಪಡುವ T2, ಯುನೆಸ್ಕೋದಿಂದ ʼವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಜನವರಿ 15, 2023ರಂದು ದೇಶೀಯ ಕಾರ್ಯಾಚರಣೆಯನ್ನು ಆರಂಭಿಸಿದ ಟರ್ಮಿನಲ್, ಉದ್ಘಾಟನೆಯ ಕೆಲವೇ ತಿಂಗಳುಗಳಲ್ಲಿ ಸೋರಿಕೆಯನ್ನು ಕಂಡಿದೆ. T2ನಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಸೆಪ್ಟೆಂಬರ್ 12ರಂದು ಪ್ರಾರಂಭವಾದವು.

ವಿಮಾನ ಹಾರಾಟದ ದಿಕ್ಕು ಬದಲಾವಣೆ

ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿಗೆ ಬರುತ್ತಿದ್ದ 17 ವಿಮಾನಗಳನ್ನು ಚೆನ್ನೈ ಕಡೆಗೆ ತಿರುಗಿಸಲಾಯಿತು. 13 ದೇಶೀಯ ವಿಮಾನಗಳು, ಮೂರು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಮತ್ತು ಒಂದು ಅಂತಾರಾಷ್ಟ್ರೀಯ ಕಾರ್ಗೋ ವಿಮಾನವನ್ನು ತಿರುಗಿಸಲಾಗಿದೆ ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ. “ಬಲವಾದ ಗಾಳಿಯೊಂದಿಗೆ ಭಾರೀ ಮಳೆಯ ಕಾರಣ ವಿಮಾನ ನಿಲ್ದಾಣದೊಳಗೆ ರಾತ್ರಿ 9:35ರಿಂದ 10:30ರ ನಡುವೆ ಲ್ಯಾಂಡಿಂಗ್‌ ಸಾಧ್ಯವಾಗಲಿಲ್ಲ. ಇದು ವಿಮಾನಗಳ ಮಾರ್ಗವನ್ನು ತಿರುಗಿಸಲು ಕಾರಣವಾಯಿತು” ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತಿರುಗಿಸಲಾದ ದೇಶೀಯ ವಿಮಾನಗಳಲ್ಲಿ ತಲಾ ನಾಲ್ಕು ಇಂಡಿಗೋ (ಪುಣೆ, ಕೋಲ್ಕತ್ತಾ, ಲಕ್ನೋ ಮತ್ತು ಮಧುರೈ) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಹೈದರಾಬಾದ್, ಲಕ್ನೋ, ಮುಂಬೈ ಮತ್ತು ರಾಂಚಿಯಿಂದ), ದೆಹಲಿ ಮತ್ತು ಹೈದರಾಬಾದ್‌ನಿಂದ ಎರಡು ಏರ್ ಇಂಡಿಯಾ ವಿಮಾನಗಳು ಸೇರಿವೆ. ಇತರ ದೇಶೀಯ ವಿಮಾನಗಳೆಂದರೆ: ದೆಹಲಿಯಿಂದ ವಿಸ್ತಾರಾ ವಿಮಾನ, ಪುಣೆಯಿಂದ ಆಕಾಶ ಏರ್ ವಿಮಾನ ಮತ್ತು ಜಾಮ್‌ನಗರದಿಂದ ಸ್ಟಾರ್ ಏರ್ ವಿಮಾನ. ಬೆಂಗಳೂರಿನಿಂದ ಚೆನ್ನೈಗೆ ಕಳಿಸಲಾದ ಮೂರು ಅಂತಾರಾಷ್ಟ್ರೀಯ ವಿಮಾನಗಳು: ಸಿಂಗಾಪುರ್ ಏರ್‌ಲೈನ್ಸ್ (SQ 510), ಅಬುಧಾಬಿಯಿಂದ ಎತಿಹಾದ್ (EY 238) ಮತ್ತು ಆಮ್‌ಸ್ಟರ್‌ಡ್ಯಾಮ್‌ನಿಂದ KLM ವಿಮಾನ (KL-879).

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 72.4 ಮಿಮೀ ಮಳೆ ದಾಖಲಾಗಿದ್ದರೆ, ಬೆಂಗಳೂರು ನಗರದಲ್ಲಿ ಮೇ 10 ರಂದು ಬೆಳಿಗ್ಗೆ 8:30 ರವರೆಗೆ 14 ಮಿಮೀ ಮಳೆಯಾಗಿದೆ. ಮೇ 9ರ ಸಂಜೆ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಅನೇಕ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಚಾಲುಕ್ಯ ವೃತ್ತದಿಂದ ಹೆಬ್ಬಾಳ ಮೇಲ್ಸೇತುವೆ ಹಾಗೂ ಹುಣಸಮಾರನಹಳ್ಳಿವರೆಗೆ ಜಲಾವೃತವಾಗಿತ್ತು.

ಇದನ್ನೂ ಓದಿ: Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Continue Reading
Advertisement
Murder case
ಕ್ರೈಂ4 mins ago

Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

IPL 2024
ಪ್ರಮುಖ ಸುದ್ದಿ19 mins ago

IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

Madara Channaiah Gurupeeta
ಕರ್ನಾಟಕ22 mins ago

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Viral News
ವೈರಲ್ ನ್ಯೂಸ್29 mins ago

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Laila Khan
ಸಿನಿಮಾ39 mins ago

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Kantilal Bhuria
ದೇಶ39 mins ago

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Union Minister Pralhad Joshi latest Statement in hubli
ಕರ್ನಾಟಕ51 mins ago

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Rahul gandhi
ದೇಶ1 hour ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Madhavi Latha
ದೇಶ1 hour ago

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

Covishield Vaccine
ಪ್ರಮುಖ ಸುದ್ದಿ1 hour ago

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ2 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ4 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ5 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ12 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ20 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ21 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌