Karnataka Elections : ಬಿಜೆಪಿಯ ಮತ್ತೊಂದು ವಿಕೆಟ್‌ ಪತನ, ಕೂಡ್ಲಿಗಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ - Vistara News

ಕರ್ನಾಟಕ

Karnataka Elections : ಬಿಜೆಪಿಯ ಮತ್ತೊಂದು ವಿಕೆಟ್‌ ಪತನ, ಕೂಡ್ಲಿಗಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ

ಕೂಡ್ಲಿಗಿ ಬಿಜೆಪಿ ಶಾಸಕ ಎನ್‌. ವೈ ಗೋಪಾಲಕೃಷ್ಣ ಅವರು ಕಾಂಗ್ರೆಸ್‌ (Karnataka Elections) ಸೇರ್ಪಡ ಖಚಿತವಾಗಿದೆ. ಅವರು ಚಿತ್ರದುರ್ಗದ ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಲಿದ್ದಾರೆ.

VISTARANEWS.COM


on

NY Gopalakrishna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಳಕಾಲ್ಮುರು (ಚಿತ್ರದುರ್ಗ): ಬಿಜೆಪಿಯ ಮತ್ತೊಬ್ಬರು ಶಾಸಕರು ಕಾಂಗ್ರೆಸ್‌ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಪ್ರತಿಷ್ಠಿತ ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗುವುದು ಖಚಿತವಾಗಿದ್ದು, ಮಾರ್ಚ್‌ 28ರಂದೇ ಅವರು ಕೈ ಪಾಳಯ ಸೇರಿಕೊಳ್ಳುವುದು (Karnataka Elections) ಬಹುತೇಕ ನಿಶ್ಚಿತವಾಗಿದೆ.

ಮೂಲ ಕಾಂಗ್ರೆಸಿಗರಾಗಿರುವ ಇವರು 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾಗಿದ್ದರು. ಇದೀಗ ಅವರು ಮರಳಿ ಕಾಂಗ್ರೆಸ್‌ ಸೇರಿದ ಬಳಿಕ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಕ್ಷೇತ್ರದ ಅಭ್ಯರ್ಥಿಯಾಗುವ ಸಾಧ್ಯತೆ ಕಂಡುಬಂದಿದೆ. ಅವರು ಸೋಮವಾರ ರಾತ್ರಿ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ರಾಜಾನುಕುಂಟೆಯ ರೆಸಾರ್ಟ್‌ನಲ್ಲಿ ಭೇಟಿಯಾಗಿದ್ದು, ಪಕ್ಷ ಸೇರ್ಪಡೆಯನ್ನು ಖಚಿತಪಡಿಸಿದ್ದರು.

ಎನ್‌.ವೈ. ಗೋಪಾಲಕೃಷ್ಣ ಅವರು ಮೂಲತಃ ಮೊಳಕಾಲ್ಮುರು ಕ್ಷೇತ್ರದವರು. ಅಲ್ಲಿ ನಾಲ್ಕು ಬಾರಿ ಗೆದ್ದಿದ್ದರು. ಈ ಬಾರಿ ಬಿಜೆಪಿ ನಾಯಕ ಶ್ರೀರಾಮುಲು ಅವರು ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸದೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಬರಲಿದ್ದಾರೆ. ಇದು ಗೋಪಾಲಕೃಷ್ಣ ಅವರಿಗೆ ಅನುಕೂಲವಾಗುವ ನಿರೀಕ್ಷೆ ಇದೆ. ಆದರೆ, ಕಳೆದ ಬಾರಿ ಮೊಳಕಾಲ್ಮುರುವಿನಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಾ. ಬಿ. ಯೋಗೇಶ್ ಬಾಬುಗೆ ಟಿಕೆಟ್‌ ಮಿಸ್‌ ಆಗುವ ಸಾಧ್ಯತೆಗಳಿವೆ. ನಿಜವೆಂದರೆ ಅವರಿಗೆ ಟಿಕೆಟ್‌ ಸಿಗಲಿ ಎಂದು ಅವರ ಅಭಿಮಾನಿಗಳು ಮೊಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಕೈ ಟಿಕೆಟ್ ಅಭ್ಯರ್ಥಿಗಳ ಹೆಸರಲ್ಲಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಡಾ. ಯೋಗೇಶ್ ಬಾಬು ಅವರ ಅಭಿಮಾನಿಗಳು ಗೊಂದಲದಲ್ಲಿದ್ದಾರೆ. ಹಾಲಿ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ರಂಗಪ್ರವೇಶದಿಂದ ಡಾ. ಯೋಗೇಶ್ ಬಾಬುಗೆ ಕೈ ಟಿಕೆಟ್ ತಪ್ಪುವ ಆತಂಕ ಎದುರಾಗಿದೆ.

ಆರು ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು

ಎನ್‌. ಯಲ್ಲಪ್ಪ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಮೊಳಕಾಲ್ಮುರುವಿನಿಂದ (1993ರಿಂದ 2013) ಶಾಸಕರಾಗಿದ್ದು, 2014ರಲ್ಲಿ ಕಾಂಗ್ರೆಸ್‌ನಿಂದ ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಅವರು 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ 2018ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಕೂಡ್ಲಿಗಿಯಿಂದ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಬಾರಿ ಮತ್ತೊಮ್ಮೆ ಮಾತೃ ಪಕ್ಷ ಕಾಂಗ್ರೆಸ್‌ಗೆ ವಾಪಾಸ್ ಆಗಲಿದ್ದು ತನ್ನ ಸ್ವಂತ ತವರೂರದ ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಮಾರ್ಚ್ 28ರಂದು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಶಾಸಕರ ಆಪ್ತ ವಲಯದಲ್ಲಿ ಕೇಳಿ ಬರುತ್ತಿದೆ.

ಎನ್.‌ವೈ ಗೋಪಾಲಕೃಷ್ಣ ಅವರ ನಿರ್ಗಮನದಿಂದ ಬಿಜೆಪಿಗೆ ಒಂದು ದೊಡ್ಡ ಹೊಡೆತ ಬಿದ್ದಂತಾಗಲಿದೆ. ಇದು ಆಡಳಿತಾರೂಢ ಪಕ್ಷಕ್ಕೆ ದೊಡ್ಡ ಹಿನ್ನಡೆ ಎಂದು ಹೇಳಲಾಗಿದೆ.

ಇದನ್ನೂ ಓದಿ : Karnataka Election 2023: ಹಾವೇರಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಪಕ್ಷ ತೊರೆದ ಹಿರೇಮಠ; ಜೆಡಿಎಸ್‌ನತ್ತ ಮನೋಹರ ತಹಶೀಲ್ದಾರ್?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Lok Sabha Election 2024: ಕೆ.ಆರ್.ನಗರದಲ್ಲಿ ನಡೆದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಕಾಂಗ್ರೆಸ್‌ಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

VISTARANEWS.COM


on

Prajadhwani 2 Lok Sabha election campaign meeting at KR Nagar
Koo

ಕೆ.ಆರ್.ನಗರ: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಮತ ನೀಡಿ, ನನ್ನನ್ನು ಗೆಲ್ಲಿಸಿ ಕಾಂಗ್ರೆಸ್‌ಗೆ ಶಕ್ತಿ ತುಂಬಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮನವಿ (Lok Sabha Election 2024) ಮಾಡಿದರು.

ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಸಹಕಾರದಿಂದ, ಕೆ.ಆರ್.ನಗರದ ಅಭಿವೃದ್ಧಿಗೆ ಶಾಸಕ ರವಿಶಂಕರ್ ಜತೆಗೆ ನಾನು ಕೂಡ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Sirsi News: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆಯನ್ನು ಖಂಡಿಸುತ್ತೇನೆ. ಅಮಾನವೀಯ, ಹೇಯ ಕೃತ್ಯವನ್ನು ಹಿಂದೂ ಸಮಾಜ ಒಗ್ಗಟ್ಟಾಗಿ ವಿರೋಧಿಸಬೇಕಿದೆ. ಅವರ ಕುಟುಂಬದ ಜತೆ ಬಿಜೆಪಿ ಸದಾ ನಿಲ್ಲಲಿದೆ. ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಬಿಜೆಪಿ ಬದ್ಧವಾಗಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

Uttara Kannada Lok Sabha Constituency BJP Candidate Vishweshwara Hegde Kageri latest Statement
Koo

ಶಿರಸಿ: ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಮಹಿಳೆಯರಿಗೆ ಗ್ಯಾರಂಟಿ (Guarantee) ನೀಡಿದ್ದೇವೆ ಎಂದು ಹೇಳುತ್ತಾ ಇಂದು ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲದ ದುಸ್ಥಿತಿ ರಾಜ್ಯಕ್ಕೆ ಬಂದಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ (Sirsi News) ನಡೆಸಿದರು.

ಶಿರಸಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಪ್ರತಿ ಸಂದರ್ಭದಲ್ಲಿಯೂ ಜನರಲ್ಲಿ ಮತೀಯ ಭಾವನೆ ಕೆರಳಿಸಿ, ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಮತ ಗಳಿಕೆ ಮತ್ತು ಅಧಿಕಾರದ ಆಸೆಯ ಮೂಲ ಉದ್ದೇಶದಿಂದ ಹಿಂದೂ ಸಮಾಜವನ್ನು ಬಲಿ ಕೊಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.‌

ಇದನ್ನೂ ಓದಿ: Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನೂ ಸಮನಾಗಿ ನೋಡುವುದನ್ನು ಬಿಟ್ಟು ಓಲೈಕೆಯ ರಾಜಕಾರಣಕ್ಕೆ ಬಹುಸಂಖ್ಯಾತರ ಭಾವನೆಯನ್ನು ಕಾಂಗ್ರೆಸ್ ಧಿಕ್ಕರಿಸುತ್ತಿದೆ ಎಂದ ಕಾಗೇರಿ, ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮತದಾರರು ಜಾಗೃತರಾಗಿ ಯೋಚಿಸಬೇಕಾಗಿದೆ ಎಂದು ಎಚ್ಚರಿಕೆ ನೀಡಿದರು.

ಹನುಮಾನ್ ಚಾಲೀಸ ಪಠಿಸಿದರೆ, ಜೈಶ್ರೀರಾಮ ಘೋಷಣೆ ಕೂಗಿದರೆ ಹಿಂದೂಗಳ ಮೇಲೆ ಕಾಂಗ್ರೆಸ್ ಸರ್ಕಾರ ಪ್ರಕರಣ ದಾಖಲಿಸುತ್ತದೆ. ನಮ್ಮ ಸನಾತನ ಧರ್ಮದ ಪವಿತ್ರ ಭಗವಾಧ್ವಜ ಹಾರಿಸಲು ಬಿಡುತ್ತಿಲ್ಲ. ನಮ್ಮ ರಾಜ್ಯದ ಪವಿತ್ರ ದೇಗುಲ ಎಂದು ಕರೆಯುವ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕ್ರಮ ಕೈಗೊಳ್ಳದೇ ರಾಜ್ಯ ಸರ್ಕಾರ ಸುಮ್ಮನೆ ಕುಳಿತುಕೊಂಡಿದೆ. ಓಲೈಕೆಯ ರಾಜಕಾರಣ ನಡೆಯುವುದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಪರಮೇಶ್ವರ್‌ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

ಹಣ, ಗ್ಯಾರಂಟಿ, ಜಾತಿ, ಧರ್ಮವನ್ನು ಒಡೆದು ಆಳುವ ಸ್ವಾರ್ಥದ ರಾಜಕಾರಣ ಕಾಂಗ್ರೆಸ್ ಮಾಡುತ್ತಿದ್ದು, ಅಲ್ಪಸಂಖ್ಯಾತರನ್ನು ದಾರಿತಪ್ಪಿಸುವ ಕೆಲಸಕ್ಕೆ ಕೈ ಹಾಕಿದೆ, ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹತ್ಯೆ ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ, ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಬೇಕು ಎಂದು ವಿನಂತಿಸಿದರು.

Continue Reading

ಶಿವಮೊಗ್ಗ

Karnataka Weather: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಚಾವಣಿ; ಅಪಾರ ಹಾನಿ

Karnataka Weather: ರಿಪ್ಪನ್‌ಪೇಟೆ ಪಟ್ಟಣದ ಶಬರೀಶ ನಗರದಲ್ಲಿ ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಪುಟ್ಟಮ್ಮ ಎಂಬುವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

VISTARANEWS.COM


on

House roof collapsed due to heavy rain at ripponpet
Koo

ರಿಪ್ಪನ್‌ಪೇಟೆ: ಶನಿವಾರ ಬೆಳ್ಳಂಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ (Rain News) ಪಟ್ಟಣದ ಶಬರೀಶ ನಗರದ ಪುಟ್ಟಮ್ಮ ಎಂಬುವರ ಮನೆಯ ಚಾವಣಿ ಕುಸಿದು ಬಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿರುವ ಘಟನೆ ಜರುಗಿದೆ.

ಇದನ್ನೂ ಓದಿ: Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಪುಟ್ಟಮ್ಮ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ತುರ್ತು ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಇನ್ನು ಕಳೆದ ಎರಡು ಮೂರು ದಿನಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದೆ, ಆಲ್ಲಲ್ಲಿ ಮರಗಳ ರಂಬೆ-ಕೊಂಬೆಗಳು ಉರುಳಿ ಬೀಳುತ್ತಿದ್ದು ಇಲ್ಲಿನ ಸಾಗರ ರಸ್ತೆಯ ಅಂದಾಸುರ ಬಳಿ ಅಕೇಶಿಯ ಮರವೊಂದು 11 ಕೆ.ವಿ. ಲೈನ್ ಮೇಲೆ ಬಿದ್ದಿದ್ದು, ಜನರು ಭಯದಲ್ಲೇ ಓಡಾಡುವಂತಾಗಿದೆ.

ಇದನ್ನೂ ಓದಿ: Tiger Attack : ಮರಿಯಾನೆ ಕೊಂದ ಹುಲಿ; ಶವ ಬಿಟ್ಟು ಕದಲದ ತಾಯಿ ಆನೆ ರೋಧನೆ

ಈ ಕುರಿತು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಗಮನಕ್ಕೆ ತರಲಾದರೂ ಕೂಡಾ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading

ಯಾದಗಿರಿ

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಯಾದಗಿರಿ ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೇಡ ಜಂಗಮ ಸಮಾಜದಿಂದ ಹಾಗೂ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವಿಎಚ್‌ಪಿ, ಭಜರಂಗದಳ, ವೀರಶೈವ ಸಮಾಜ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Protest against Neha murder case in Yadgiri
Koo

ಯಾದಗಿರಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಆರೋಪಿತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೇಡ ಜಂಗಮ ಸಮಾಜವು ಜಂಟಿಯಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ (Yadgiri News) ಪ್ರತಿಭಟನೆ ನಡೆಸಲಾಯಿತು.

ನಗರದ ಡಿಸಿ ಕಚೇರಿ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರು ಸೇರಿ ಪ್ರತಿಯೊಬ್ಬರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದಾಸವಾಳ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿಎಂ ಹಾಗೂ ಗೃಹ ಸಚಿವರು ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಜವಾಬ್ದಾರಿ ಮರೆತು ಹೇಳಿಕೆ ಕೊಟ್ಟಿದ್ದಾರೆ. ಅವರ ಬೇಜವಾಬ್ದಾರಿತನದ ಹೇಳಿಕೆ ಶೋಭೆ ತರುವಂತದ್ದಲ್ಲ. ಪೋಷಕರು ತನ್ನ ಹೆಣ್ಣು ಮಕ್ಕಳ ಜತೆ ಹೊರ ಹೋಗಲು ಆಗುವುದಿಲ್ಲ. ಸರಕಾರವೇ ಹೆಣ್ಣುಮಕ್ಕಳಿಗೆ ಎಕೆ-47 ಗನ್ ಕೊಡಬೇಕು. ಇದರಿಂದ ಹೆಣ್ಣುಮಕ್ಕಳು ಆತ್ಮರಕ್ಷಣೆ ಮಾಡಲು ಸಾಧ್ಯವಾಗಲಿದೆ ಎಂದರು. ಹೆಣ್ಣುಮಕ್ಕಳಿಗೆ ಸರ್ಕಾರವೇ ದೈಹಿಕ ಸಾಮರ್ಥ್ಯದ ಬಗ್ಗೆ ವಿಶೇಷ ತರಬೇತಿ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಸಿಎಂ ಹಾಗೂ ಗೃಹ ಸಚಿವರು ಉಡಾಫೆ ಹೇಳಿಕೆ ನೀಡಿ ತಮ್ಮ ಬೇಜವಾಬ್ದಾರಿತನ ತೋರಿದ್ದು ಇಂತಹ ಹೇಳಿಕೆ ನೀಡುವದು ನಿಲ್ಲಿಸಲಿ ಎಂದರು. ಆರೋಪಿತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತೆ ಇಂತಹ ಘಟನೆ ನಡೆಯದಂತೆ ಕಠಿಣ ಕಾಯ್ದೆ ಸರ್ಕಾರ ಜಾರಿಗೆ ತರಬೇಕೆಂದು ಆಗ್ರಹಿಸಿದರು.

ಈ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ್ ಮಣ್ಣೂರು, ಬೇಡ ಜಂಗಮ ಸಮಾಜದ ಮುಖಂಡ ಚನ್ನವೀರಯ್ಯ ಸ್ವಾಮಿ ಕೌಳೂರು, ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ವೀರಶೈವ ಸಮಾಜದ ಯವ ಮುಖಂಡ ಅವಿನಾಶ್ ಜಗನ್ನಾಥ, ಶರಣಗೌಡ ಬಾಡಿಹಾಳ, ಸಿದ್ದಪ್ಪ ಹೊಟ್ಟೆ, ಮಲ್ಲಣ್ಣಗೌಡ ಹಳಿಮನಿ ಕೌಳೂರು, ಚನ್ನುಗೌಡ ಬಿಳ್ಹಾರ, ಮಹೇಶ್ ಆನೆಗುಂದಿ, ಬಸವರಾಜ ಸೊನ್ನದ, ಅನ್ನಪೂರ್ಣ ಜವಳಿ, ಅಯ್ಯಣ್ಣ ಹುಂಡೇಕಾರ, ವೀರಭದ್ರಯ್ಯ ಚೌಕಿಮಠ, ಮಹೇಶಕುಮಾರ ಹಿರೇಮಠ, ಪ್ರಭುಲಿಂಗಯ್ಯ ಹಿರೇಮಠ, ರಮೇಶ ದೊಡ್ಡಮನಿ, ಮಲ್ಲಿಕಾರ್ಜುನ ಗುರುಸಣಗಿ, ಮಲ್ಲು ಗುಡಿಮಠ, ಸಿದ್ದರಾಮಯ್ಯ ಸ್ವಾಮಿ ಹೊಸಳ್ಳಿ, ಗೌರಿಶಂಕರ ಹಿರೇಮಠ, ಶ್ರೀಕಾಂತ್ ಸ್ವಾಮಿ ಸೇರಿದಂತೆ ಅನೇಕರು ಇದ್ದರು.

ವಡಗೇರಾ ಪಟ್ಟಣದಲ್ಲಿ ಪ್ರತಿಭಟನೆ

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆ ಖಂಡಿಸಿ, ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ತಹಸೀಲ್ದಾರ್‌ ಕಚೇರಿ ಮುಂದೆ ವಿಶ್ವ ಹಿಂದೂ ಪರಿಷತ್, ಭಜರಂಗದಳ, ವೀರಶೈವ ಸಮಾಜ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Tiger Attack : ಮರಿಯಾನೆ ಕೊಂದ ಹುಲಿ; ಶವ ಬಿಟ್ಟು ಕದಲದ ತಾಯಿ ಆನೆ ರೋಧನೆ

ಪ್ರತಿಭಟನೆಯಲ್ಲಿ ವಡಗೇರಾದ ಮುಖಂಡ ಸಿದ್ದಣ್ಣಗೌಡ ಕಾಡಂನೋರ್, ಡಾ. ಜಗದೀಶ್ ಹಿರೇಮಠ, ಡಾ. ಸುಭಾಷ್ ಕರಣಗಿ, ಅಶೋಕ್ ಸಾಹುಕಾರ ಕರಣಗಿ, ಮಲ್ಲಿಕಾರ್ಜುನ ಕಾಡಂನೋರ್, ದೇವು ಜಡಿ,ಸಂಗುಗೌಡ ಮಾಲಿಪಾಟೀಲ, ಶಂಕ್ರಮ್ಮ ಸೇರಿದಂತೆ ಅನೇಕರು ಇದ್ದರು.

Continue Reading
Advertisement
Prajadhwani 2 Lok Sabha election campaign meeting at KR Nagar
ಮಂಡ್ಯ5 mins ago

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Uttara Kannada Lok Sabha Constituency BJP Candidate Vishweshwara Hegde Kageri latest Statement
ಉತ್ತರ ಕನ್ನಡ7 mins ago

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Narendra Modi
ಪ್ರಮುಖ ಸುದ್ದಿ8 mins ago

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

House roof collapsed due to heavy rain at ripponpet
ಶಿವಮೊಗ್ಗ8 mins ago

Karnataka Weather: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಚಾವಣಿ; ಅಪಾರ ಹಾನಿ

Protest against Neha murder case in Yadgiri
ಯಾದಗಿರಿ9 mins ago

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ

Ballari Lok Sabha Congress candidate e Tukaram election campaign in Hagaribommanahalli
ರಾಜಕೀಯ9 mins ago

Lok Sabha Election 2024: ದೇಶದಲ್ಲಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ: ಈ. ತುಕಾರಾಂ

Loka sabha election-2024
Lok Sabha Election 202411 mins ago

Loka sabha election-2024: ಮೋದಿ ಗೆದ್ದಿದ್ದ ವಡೋದರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ!

Job News
ಉದ್ಯೋಗ14 mins ago

Job News: ಕೆಪಿಎಸ್‌ಸಿಯ 1 ಹುದ್ದೆಗೆ ಸರಾಸರಿ 508 ಅರ್ಜಿ ಸಲ್ಲಿಕೆ; ಒಟ್ಟು 1.95 ಲಕ್ಷ ಅಭ್ಯರ್ಥಿಗಳಿಂದ ಅಪ್ಲಿಕೇಷನ್‌

Road accident Car overturns near Holalkere Shivamogga man killed and two others injured
ಕರ್ನಾಟಕ15 mins ago

Road Accident: ಹೊಳಲ್ಕೆರೆ ಬಳಿ ಕಾರು ಪಲ್ಟಿ; ಶಿವಮೊಗ್ಗ ಮೂಲದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ

ಕರ್ನಾಟಕ25 mins ago

Neha Murder Case: ನೇಹಾ ಕೇಸ್ ತನಿಖೆಗೂ ಮೊದಲೇ ಪ್ರೀ ಜಡ್ಜ್ ಮೆಂಟ್: ಗೃಹಸಚಿವರ ವಿರುದ್ಧ ಜೋಶಿ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20246 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ8 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ9 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌