Karnataka Elections : ನೀವು ಮತ ನೀಡುತ್ತಿರುವುದು ಹಾಲಪ್ಪ ಅವರಿಗಲ್ಲ, ಸಾಗರದ ಸಮಗ್ರ ಅಭಿವೃದ್ಧಿಗೆ ಎಂದ ಸಂಸದ ಬಿ.ವೈ ರಾಘವೇಂದ್ರ - Vistara News

ಕರ್ನಾಟಕ

Karnataka Elections : ನೀವು ಮತ ನೀಡುತ್ತಿರುವುದು ಹಾಲಪ್ಪ ಅವರಿಗಲ್ಲ, ಸಾಗರದ ಸಮಗ್ರ ಅಭಿವೃದ್ಧಿಗೆ ಎಂದ ಸಂಸದ ಬಿ.ವೈ ರಾಘವೇಂದ್ರ

Harathalu Halappa : ಸಾಗರ ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಹರತಾಳು ಹಾಲಪ್ಪ ಅವರ ಆಯ್ಕೆಯನ್ನು ಸಾಗರದ ಅಭಿವೃದ್ಧಿಗೆ ಹೋಲಿಸಿದ್ದಾರೆ ಸಂಸದ ಬಿ.ವೈ. ರಾಘವೇಂದ್ರ.

VISTARANEWS.COM


on

Haratalu Halappa Nomination
ಸಾಗರದ ಶಾಸಕ ಹರತಾಳು ಹಾಲಪ್ಪ ಬಿಜೆಪಿ ಅಭ್ಯರ್ಥಿಯಾಗಿ ಶನಿವಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಯಶೋಧ ಹಾಲಪ್ಪ, ಡಾ. ರಾಜನಂದಿನಿ ಕಾಗೋಡು, ರಾಜೇಶ್ ಕೀಳಂಬಿ ಹಾಜರಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ (ಶಿವಮೊಗ್ಗ): ಸಾಗರ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ತಮ್ಮದೇ ಆಲೋಚನೆಯಡಿ ಕೆಲಸ ಮಾಡುತ್ತಿರುವ ಶಾಸಕ ಹಾಲಪ್ಪ ಹರತಾಳು ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಜನರು ಅಭಿವೃದ್ಧಿ ವೇಗ ಇನ್ನಷ್ಟು ಹೆಚ್ಚಿಸುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಶನಿವಾರ ಶಾಸಕ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ ನಂತರ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕಷ್ಟಪಟ್ಟು ಕಟ್ಟಿದ ಹುತ್ತದಲ್ಲಿ ಹಾವು ಸೇರಲು ಬಿಡಬೇಡಿ

ʻʻನಾವು ಕಷ್ಟಪಟ್ಟು ಸುಂದರವಾದ ಹುತ್ತವನ್ನು ಕಟ್ಟಿದ್ದೇವೆ. ಆ ಹುತ್ತದಲ್ಲಿ ಮತ್ತೊಂದು ಹಾವು ಸೇರಿಕೊಂಡು ಹುತ್ತವನ್ನು ಹಾಳು ಮಾಡಲು ಬಿಡಬಾರದು. ಹಾಲಪ್ಪ ಐದು ವರ್ಷ ಕಷ್ಟಪಟ್ಟು ಅಭಿವೃದ್ದಿ ಮಾಡಿದ್ದಾರೆ. ಇನ್ಯಾರೋ ಗೆದ್ದು ಅಭಿವೃದ್ಧಿಯನ್ನು ಹಾಳು ಮಾಡಬಾರದು. ನೀವು ಮತ ನೀಡುತ್ತಿರುವುದು ಹಾಲಪ್ಪ ಅವರಿಗೆ ಅಲ್ಲ. ಬದಲಾಗಿ ಸಾಗರ ಕ್ಷೇತ್ರದ ಅಭಿವೃದ್ದಿಯ ಭವಿಷ್ಯಕ್ಕಾಗಿ ಎನ್ನುವುದು ಮರೆಯಬೇಡಿ. ನೀವು ಹಾಲಪ್ಪ ಅವರನ್ನು ಗೆಲ್ಲಿಸಿದರೆ ಮುಂದೆ ಸಾಗರ ಕ್ಷೇತ್ರಕ್ಕೆ ಮಂತ್ರಿ ಸ್ಥಾನ ಸಿಗುತ್ತದೆʼʼ ಎಂದು ಹೇಳಿದರು ರಾಘವೇಂದ್ರ.

ನಾಮಪತ್ರ ಸಲ್ಲಿಕೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಹರತಾಳು ಹಾಲಪ್ಪ ಮಾತನಾಡಿದರು.

ಇನ್ನಷ್ಟು ಅಭಿವೃದ್ಧಿಯ ಯೋಚನೆ ಹಂಚಿಕೊಂಡ ಹಾಲಪ್ಪ

ಶಾಸಕ ಎಚ್.ಹಾಲಪ್ಪ ಹರತಾಳು ಮಾತನಾಡಿ, ಕಳೆದ ಐದು ವರ್ಷದಲ್ಲಿ ಸಾಗರ ಕ್ಷೇತ್ರದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಜನರು ನೆಮ್ಮದಿಯಿಂದ ಬದುಕಲು ಬೇಕಾದ ವಾತಾವರಣ ನಿರ್ಮಿಸಲಾಗಿದೆ. ಡಬ್ಬಲ್ ಎಂಜಿನ್ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮುಂದಿನ ದಿನಗಳಲ್ಲಿ ಇತಿಹಾಸ ಪ್ರಸಿದ್ದವಾದ ಮಹಾಗಣಪತಿ ದೇವಸ್ಥಾನದ ಪರಿಸರವನ್ನು ಸನಾತನ ಧರ್ಮದ ರೀತಿಯಲ್ಲಿ ಸಜ್ಜುಗೊಳಿಸಲು ಸುಮಾರು 25 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗುತ್ತದೆ. ಮೊದಲ ಹಂತದಲ್ಲಿ 10 ಕೋಟಿ ರೂ. ಎರಡು ವರ್ಷದಲ್ಲಿ ಬಿಡುಗಡೆ ಮಾಡಿಸಲಾಗುತ್ತದೆ. ಒಂದು ಕಿ.ಮೀ. ವ್ಯಾಪ್ತಿಯಲ್ಲಿ ವರದಾ ನದಿಯನ್ನು ಸ್ವಚ್ಚಗೊಳಿಸಿ ಅಭಿವೃದ್ದಿಪಡಿಸಲಾಗುತ್ತದೆ. ಎರಡು ಬಾರಿ ಶಾಸಕರಾಗಿದ್ದಾಗ ಸದನದಲ್ಲಿ ಒಂದು ಬಾರಿಯೂ ಕ್ಷೇತ್ರದ ಸಮಸ್ಯೆ ಕುರಿತು ಮಾತನಾಡಿರುವವರಿಗೆ ಮತ ಕೊಟ್ಟರೆ ಅಭಿವೃದ್ದಿ ನಿಂತ ನೀರಾಗುತ್ತದೆ. ತಮ್ಮನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಅಭಿವೃದ್ದಿ ಪರ್ವಕ್ಕೆ ಕೈಜೋಡಿಸಲು ಮನವಿ ಮಾಡಿದರು.

ಬಿಜೆಪಿ ಸೇರಲು ಕಾರಣವಾದ ಅಂಶ ವಿವರಿಸಿದ ರಾಜನಂದಿನಿ

ಡಾ. ರಾಜನಂದಿನಿ ಕಾಗೋಡು ಮಾತನಾಡಿ, ನಾನು ತಂದೆಯವರ ಮಾರ್ಗದರ್ಶನದಲ್ಲಿ ರಾಜಕೀಯಕ್ಕೆ ಬಂದವಳು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಬಂದಿದ್ದೇನೆ. ಆದರೆ ನಮ್ಮ ತಂದೆಯವರಿಗೆ ಕೆಟ್ಟ ಮಾತಿನಲ್ಲಿ ಬೈದವರ ವಿರುದ್ಧ ಪ್ರಚಾರ ಮಾಡಲು ನನ್ನ ಆತ್ಮಸಾಕ್ಷಿ ಒಪ್ಪದೆ ಇರುವುದರಿಂದ ನಾನು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಹಾಲಪ್ಪ ಅವರ ಸುಂದರ ಸಾಗರ, ವಿದ್ಯಾಸಾಗರ, ಆರೋಗ್ಯ ಸಾಗರ ಕನಸು ನನಸು ಮಾಡುವ ಉದ್ದೇಶ ನನ್ನದೂ ಆಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿದರು. ವೇದಿಕೆಯಲ್ಲಿ ಟಿ.ಡಿ.ಮೇಘರಾಜ್, ಬಿ.ಸ್ವಾಮಿರಾವ್, ಎಂ.ಹರನಾಥ ರಾವ್, ಪ್ರಸನ್ನ ಕೆರೆಕೈ, ಪ್ರಶಾಂತ ಕೆ.ಎಸ್., ಗಣಪತಿ ಬಿಳಗೋಡು, ಲೋಕನಾಥ ಬಿಳಿಸಿರಿ, ಶರಾವತಿ ಸಿ. ರಾವ್, ಮಧುರ ಶಿವಾನಂದ್, ವಾಸಂತಿ ರಮೇಶ್, ವಿ.ಮಹೇಶ್, ಭರ್ಮಪ್ಪ ಅಂದಾಸುರ, ವೀರೇಶ್ ಅಲವಳ್ಳಿ, ದೇವಾನಂದ್ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ : Science Day: ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಮೂಲ ವಿಜ್ಞಾನ ಕುರಿತು ಅರಿವು ಮೂಡಿಸುವ ಅಗತ್ಯವಿದೆ: ಡಾ. ರಾಜನಂದಿನಿ ಕಾಗೋಡು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

V Somanna profile: ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು. ಮೊದಲು ಕಾರ್ಪೊರೇಟರ್‌, ಬಳಿಕ ಶಾಸಕ, ಈಗ ಸಂಸದ-ಸಚಿವ…ಹೀಗೆ ವಿ ಸೋಮಣ್ಣ ಅವರ ರಾಜಕೀಯ ಹಾದಿ ರೋಚಕವಾಗಿದೆ.

VISTARANEWS.COM


on

V Somanna profile
Koo

ವಿ ಸೋಮಣ್ಣ ಅವರು (V Somanna profile) ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಕಾರ್ಪೋರೇಟರ್‌ ಆಗಿ ರಾಜಕೀಯ ಹಾದಿ ತುಳಿದವರು. ಈಗ ಕೇಂದ್ರ ಸಚಿವರಾಗುವ ತನಕ ಅವರು ಸಾಗಿ ಬಂದ ರಾಜಕೀಯ ಹಾದಿ ರೋಚಕವಾಗಿದೆ. ವಿ ಸೋಮಣ್ಣ ಅವರು ಜನ ಸಮೂಹದ ನಡುವಿನಿಂದ ನಾಯಕರಾಗಿ ಬೆಳೆದು ಬಂದವರು. ಹಾಗಾಗಿ 40 ವರ್ಷಗಳ ಬಳಿಕವೂ ಅವರ ಪ್ರಭಾವ ಮತ್ತು ವರ್ಚಸ್ಸು ರಾಜ್ಯ ರಾಜಕಾರಣದಲ್ಲಿ ಪ್ರಖರವಾಗಿ ಉಳಿದಿದೆ.
ನಾಡಿನ ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು.

ಅವರು ರಾಮನಗರ ಜಿಲ್ಲೆಯ ಮರಳವಾಡಿ ಎಂಬ ಸಣ್ಣ ಊರಿನ ತೇರಬೀದಿಯಿಂದ ಬೆಂಗಳೂರೆಂಬ ರಾಜಬೀದಿಯಲ್ಲಿ ಅಂಬೆಗಾಲಿಟ್ಟು, ಜನತಾ ಬಜಾರ್‌ನಿಂದ ಜನತಾಪಕ್ಷಕ್ಕೆ ಪ್ರವೇಶ ಪಡೆದು, ಕಾರ್ಪೊರೇಟರ್ ಆಗಿ ಲೋಕಲ್ ಲೀಡರ್ ಎಂದು ಗುರುತಿಸಿಕೊಂಡು, ಶಾಸಕರಾಗಿ ವಿಧಾನಸಭೆಗೆ ಪ್ರವೇಶ ಪಡೆದು, ಸಚಿವರಾಗಿ ಇಡೀ ರಾಜ್ಯ ಗುರುತಿಸುವಂಥ ಕೆಲಸ ಮಾಡುವ ಮೂಲಕ ನಾಡಿನ ಮುಂಚೂಣಿ ರಾಜಕೀಯ ಧುರೀಣರಾಗಿ ಬೆಳೆದವರು.
ಶಿಸ್ತು, ಶ್ರದ್ಧೆ, ನೇರ ನಡೆ-ನುಡಿ, ಸರಳ ಸಜ್ಜನಿಕೆ, ಎನಗಿಂತ ಕಿರಿಯರಿಲ್ಲ ಎಂಬ ನಿನಮ್ರತೆ, ಹಿಡಿದ ಕೆಲಸವನ್ನು ಬಿಡದೆ ಮಾಡಿ ಮುಗಿಸುವ ಛಲ, ಜನ ಸಾಮಾನ್ಯರ ತೀರಾ ಸಾಮಾನ್ಯ ಸಮಸ್ಯೆಗಳಿಗೂ ಸ್ಪಂದಿಸುವ ಗುಣ, ಅಭಿವೃದ್ಧಿ ಕುರಿತ ದೂರದೃಷ್ಟಿ, ಅಧ್ಯಯನ ಪ್ರವೃತ್ತಿ, ಜಾತಿ ಧರ್ಮ ಜನಾಂಗದ ಸೀಮಾ ರೇಖೆಯನ್ನು ದಾಟಿ ಜನರೊಂದಿಗೆ ಬೆರೆಯುವಿಕೆ, ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವಕ್ಕೆ ನಿಷ್ಠೆ, ಆದರೆ ನಾಲ್ಕು ಜನರಿಗೆ ಒಳಿತಾಗುತ್ತದೆ ಎಂದೆನಿಸಿದರೆ ಸಾಮ ದಾನ ಭೇದ ದಂಡ ಅಸ್ತ್ರ ಪ್ರಯೋಗಿಸಲೂ ಹಿಂಜರಿದ ದಿಟ್ಟತನ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಗೀತೋಪದೇಶದ ಪಾಲನೆ, ಸರ್ವ ಜಾತಿ-ಧರ್ಮಗಳ ಸ್ವಾಮೀಜಿಗಳ ಪ್ರೀತಿ ವಿಶ್ವಾಸಕ್ಕೆ ಪಾತ್ರ…ಹೀಗೆ ಹತ್ತು ಹಲವಾರು ಹೆಚ್ಚುಗಾರಿಕೆಗಳು ಸೋಮಣ್ಣ ಅವರನ್ನು ಇಂದು ರಾಜಕೀಯವಾಗಿ ಇಷ್ಟು ಎತ್ತರಕ್ಕೆ ತಂದು ನಿಲ್ಲಿಸಿವೆ.

ಊರು ಬಿಡುವಾಗ ಅಮ್ಮ ಕೊಟ್ಟ 15 ರೂ. ಇತ್ತು…

ಮರಳವಾಡಿ ಎಂಬ ಕುಗ್ರಾಮದಿಂದ ಬದುಕಿನ ದಾರಿ ಹುಡುಕುತ್ತ ತಾವು ಬೆಂಗಳೂರಿಗೆ ಬಂದ ಕತೆಯನ್ನು ಸೋಮಣ್ಣ ಹೇಳುವುದು ಹೀಗೆ:
ಊರಲ್ಲಿ ಪಿಯುಸಿ ಮುಗಿಯುತ್ತಿದ್ದಂತೆ, ಅದ್ಯಾವುದೋ ಹೊಸ ದಿಕ್ಕಿನತ್ತ ನನ್ನ ಮನಸ್ಸು ತುಡಿಯುತ್ತಿತ್ತು. ಊರು ಬಿಟ್ಟು ಬೆಂಗಳೂರಿಗೆ ಹೋಗಲು ಮನಸ್ಸು ತವಕಿಸುತ್ತಿತ್ತು. ಆದರೆ ಮನೆಯಲ್ಲಿ ವ್ಯವಸಾಯ ಮಾಡುವಂತೆ ಒತ್ತಾಯಿಸುತ್ತಿದ್ದರು. ಅದೊಂದು ದಿನ ಗಟ್ಟಿ ಮನಸ್ಸು ಮಾಡಿ ಊರು ಬಿಟ್ಟೆ. ಜೇಬಿನಲ್ಲಿ ಅಮ್ಮ ಕೊಟ್ಟ 15 ರೂ. ಇತ್ತು. ಜತೆಗೆ ಇನ್ನೊಂದು ಜತೆ ಬಟ್ಟೆಯ ಸಣ್ಣ ಬ್ಯಾಗು.

ಬೆಂಗಳೂರಿನಲ್ಲಿ ಬಸಪ್ಪ ಸರ್ಕಲ್ ನಲ್ಲಿ ಬಂದು ಇಳಿದೆ. ನನಗಾಗ 18 ವರ್ಷ. ಅಲ್ಲೇ ಪಕ್ಕದಲ್ಲಿ ಸಣ್ಣ ಧೋಬಿ ಅಂಗಡಿ ಇಟ್ಟುಕೊಂಡಿದ್ದ ನಾಗಣ್ಣ ಎಂಬುವರು ನನ್ನನ್ನು ಗುರುತಿಸಿ, ಏನ್ ಸೋಮಣ್ಣ ಇಲ್ಲಿ ಎಂದರು. ಅಣ್ಣಾ ಏನಾದರು ಒಂದು ದಾರಿ ತೋರಿಸು ಅಣ್ಣಾ ಎಂದು ಅವರಿಗೆ ದುಂಬಾಲು ಬಿದ್ದೆ. ಅವರು ಸೀದಾ ನನ್ನನ್ನು ಚಂಗಲ್ ರಾಯ ಶೆಟ್ಟಿ ಎಂಬುವರ ಬಳಿ ಕರೆದೊಯ್ದರು. ಅವರದು ಮೋಟಾರ್ ರಿಪೇರಿ ಅಂಗಡಿ. ಹುಡುಗಾ ನನ್ನ ಜತೆಗೇ ಇದ್ದುಬಿಡು ಎಂದರವರು. ತಮ್ಮ ಅಂಗಡಿಯಲ್ಲೇ ಉಳಿದುಕೊಳ್ಳಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಟ್ಟರು. ಮೋಟಾರು ಬಿಡಿ ಭಾಗಗಳನ್ನು ಎತ್ತಿ ಕೊಡುವುದು, ಅವರು ಕರೆದಲ್ಲಿಗೆ ಹೋಗುವುದು…ಇಷ್ಟೇ ನನ್ನ ಕೆಲಸ.
ಕೆಲ ದಿನಗಳ ಬಳಿಕ ಸಿಂಗಲ್ ರೂಮಿನ ಮನೆಯೊಂದಕ್ಕೆ ಶಿಫ್ಟ್ ಆದೆ. ಕೇವಲ ಆರಡಿ ಎಂಟಡಿ ಅಳತೆಯ ಶೀಟಿನ ಮನೆ ಅದು. ಬಾಡಿಗೆ ತಿಂಗಳಿಗೆ ಕೇವಲ 7 ರೂಪಾಯಿ!

ಪಿಯುಸಿಯಲ್ಲಿ ಫೇಲ್‌ ಆಗಿದ್ದೆ

ನಾನು ಪಿಯುಸಿಯ ಒಂದು ವಿಷಯದಲ್ಲಿ ಫೇಲ್ ಆಗಿದ್ದೆ. ಅದನ್ನು ಪಾಸ್ ಮಾಡಿಕೊಂಡೆ. ಆಗೆಲ್ಲ ಪಿಯುಸಿ ಅಂದರೆ ಒಂದೇ ವರ್ಷ. ಹಗಲು ಮೋಟಾರು ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಲೇ ವಿವಿ ಪುರಂ ಸಂಜೆ ಕಾಲೇಜು ಸೇರಿದೆ. ರಾತ್ರಿಯಿಡೀ ಕಷ್ಟಪಟ್ಟು ಓದಿ ಪದವಿಯಲ್ಲಿ ಒಳ್ಳೆಯ ಅಂಕ ಗಳಿಸಿದೆ.

ಮುಂದೆ ಧೋಬಿ ಅಂಗಡಿಯ ನಾಗಣ್ಣ ನನ್ನನ್ನು ಜಯಸಿಂಹ ಎಂಬುವವರನ್ನು ಪರಿಚಯಿಸಿ ಅವರ ಕಂಪನಿಯಲ್ಲಿ ಕೆಲಸ ಕೊಡಿಸಿದರು. ನಾಗಣ್ಣ ಬಲು ಬುದ್ಧಿವಂತ ಮತ್ತು ಶ್ರಮಜೀವಿ. ನನ್ನ ಬದುಕಿನ ಆರಂಭದ ದಿನಗಳಲ್ಲಿ ನನಗೆ ಆಸರೆಯಾಗಿ ನಿಂತರು. ನಂತರ 1971ರಲ್ಲಿ ನಾನು ಕನ್ಷುಮರ್ ಫೆಡರೇಷನ್ ಗೆ ಅರ್ಜಿ ಸಲ್ಲಿಸಿದೆ. ಗುಮಾಸ್ತನ ಕೆಲಸ ಗಿಟ್ಟಿಸುವುದು ಆ ದಿನಗಳಲ್ಲಿ ನನ್ನ ಮಹತ್ವಾಕಾಂಕ್ಷೆಯಾಗಿತ್ತು! ಎ ಶಾಂತಮಲ್ಲಪ್ಪ ಅವರು ಫೆಡರೇಷನ್ ನ ಅಧ್ಯಕ್ಷರಾಗಿದ್ದರು. ಅವರು ಸಂದರ್ಶನ ತಗೊಂಡು, ”ಗುಮಾಸ್ತನ ಕೆಲಸ ಬೇಡ ನಿನಗೆ. ಸೇಲ್ಸ್ ಅಸಿಸ್ಟೆಂಟ್ ಕೆಲಸಕ್ಕೆ ಬಾ” ಎಂದರು.

ಸೇಲ್ಸ್‌ ಅಸಿಸ್ಟಂಟ್‌ ಕೆಲಸ

ಕೆಲಸಕ್ಕೆ ಸೇರಲು 500 ರೂ. ಡಿಪಾಸಿಟ್ ಕಟ್ಟಬೇಕಿತ್ತು. ಅಷ್ಟು ದುಡ್ಡು ಹೊಂದಿಸಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಊರಲ್ಲಿ ಹೋಗಿ ಕೇಳಿದರೆ, ಏಯ್ ಇಲ್ಲಿ ಬೇಸಾಯ ಮಾಡಿಕೊಂಡಿರು. ಬೆಂಗಳೂರಿಗೆ ಯಾಕೆ ಹೋಗಬೇಕು ನೀನು ಎಂದರು. ಕೊನೆಗೆ ಅಮ್ಮ 200 ರೂ. ಕೊಟ್ಟು ಕಳಿಸಿದರು. ಬೆಂಗಳೂರಿನ ಶಿವಾಜಿ ಟಾಕೀಸ್ ಬಳಿ ಆಗ ಉರುವಲು ಕಟ್ಟಿಗೆ ಮಾರುವ ವೇ ಬ್ರಿಡ್ಜ್ ಇತ್ತು. ಅಲ್ಲಿ ತಿಮ್ಮಯ್ಯ ಎಂಬೊಬ್ಬರ ಪರಿಚಯವಾಗಿತ್ತು. ಅವರ ಬಳಿ ಹೋಗಿ ಸಮಸ್ಯೆ ಹೇಳಿಕೊಂಡಾಗ 500 ರೂ. ಕೊಟ್ಟರು. ಅಂತೂ ಬೆಂಗಳೂರಿನ ಕೆ ಜಿ ರೋಡ್ ನ ಜನತಾ ಬಜಾರ್ ನಲ್ಲಿ ಕೆಲಸ ಶುರು ಮಾಡಿದೆ. ಅಲ್ಲಿಂದ ನನ್ನ ಬದುಕಿಗೆ ಹೊಸ ತಿರುವು ಸಿಕ್ಕಿತು.

ಜನತಾ ಬಜಾರ್ ನಲ್ಲಿ ಕೆಲಸ ಮಾಡುತ್ತಿರುವಾಗಲೇ, ಇನ್ನಷ್ಟು ದುಡಿಯಬೇಕು ಎಂದೆನಿಸುತ್ತಿತ್ತು. ಅದೇ ಹೊತ್ತಿಗೆ ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರಭಾಕರ್ ಎಂಬುವರ ಪರಿಚಯವಾಯಿತು. ಇನ್ನು ಏನಾದರು ಮಾಡಬೇಕಲ್ಲ ಸರ್ ನಾನು ಅಂದೆ. ಪಿಗ್ಮಿ ಕಲೆಕ್ಟ್ ಮಾಡು ನೀನು ಎಂದು ಸಲಹೆ ನೀಡಿದರು. ಮಧ್ಯಾಹ್ನ 1.30ರಿಂದ 4 ಗಂಟೆಯವರೆಗಿನ ಬಿಡುವಿನ ಅವಧಿಯಲ್ಲಿ ಅಂಗಡಿ ಅಂಗಡಿ ತಿರುಗಿ ಪಿಗ್ಮಿ ಕಲೆಕ್ಟ್ ಮಾಡತೊಡಗಿದೆ. ಸಂಜೆ ಡ್ಯೂಟಿ ಮುಗಿದ ಮೇಲೆ ರಾತ್ರಿ 9 ಗಂಟೆವರೆಗೆ ಮತ್ತೆ ಇದೇ ಕೆಲಸ. ಇದರಿಂದ ತಿಂಗಳಿಗೆ ಸುಮಾರು 2 ಸಾವಿರ ರೂ. ಎಕ್ಟ್ರಾ ಇನ್ ಕಮ್ ಬರತೊಡಗಿತು. ಜನತಾ ಬಜಾರ್ ಸಂಬಳ ಹೆಚ್ಚು ಕಡಿಮೆ ಇಷ್ಟೇ ಬರುತ್ತಿತ್ತು.

ಜನತಾ ಬಜಾರ್‌ನಿಂದ ಜನತಾ ಪಕ್ಷಕ್ಕೆ…

ಜನತಾ ಬಜಾರ್ ಯೂನಿಯನ್‌ನಲ್ಲಿ ನಾನು ಮುಂಚೂಣಿ ನಾಯಕನಾಗಿ ಬೆಳೆದೆ. ಸಹಜವಾಗಿಯೇ ದೇವೇಗೌಡರು, ಬಿ ಎಲ್ ಶಂಕರ್, ಪಿ ಜಿ ಆರ್ ಸಿಂಧಿಯಾ ಮತ್ತಿರರ ಸಂಪರ್ಕಕ್ಕೆ ಬಂದೆ. ಅವರ ಮೂಲಕ ನಾನು ಅನಧಿಕೃತವಾಗಿ ಜನತಾ ಪಕ್ಷಕ್ಕೆ ಎಂಟ್ರಿ ಪಡೆದೆ. ಈ ನಡುವೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರು ಕೈಗೊಂಡಿದ್ದ ಆಂದೋಲನದಲ್ಲೂ ಕೈ ಜೋಡಿಸಿದೆ. ಚಂದ್ರಶೇಖರ ಅವರು ನಡೆಸಿದ ರಾಷ್ಟ್ರವ್ಯಾಪಿ ಪಾದಯಾತ್ರೆಯಲ್ಲೂ ಹೆಜ್ಜೆ ಹಾಕಿದೆ.

1986ರ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಪಿ ಜಿ ಆರ್ ಸಿಂಧಿಯಾ ಪರ ಸಕ್ರಿಯವಾಗಿ ಕೆಲಸ ಮಾಡಿದೆ. ಅದೇ ವರ್ಷ ಬೆಂಗಳೂರು ಕಾರ್ಪೊರೇಷನ್ ಎಲೆಕ್ಷನ್ ಘೋಷಣೆ ಆಯಿತು. ಮುನಿಯಪ್ಪ ಅಂತ ಒಬ್ಬರು ರೆವಿನ್ಯು ಇನ್ಸ್ ಪೆಕ್ಟರ್ ನನಗೆ ಆತ್ಮೀಯರಾಗಿದ್ದರು. ಅವರು, ಸೋಮಣ್ಣ ನೀನೂ ಎಲೆಕ್ಷನ್ ಗೆ ನಿಂತು ಬಿಡು ಎಂದು ಹವಾ ಹಾಕಿದರು. ನನಗೂ ಉಮೇದು ಬಂತು. ವಿಜಯ ನಗರ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಟಿಕೆಟ್‌ ಕೊಡುವ ಭರವಸೆಯೂ ಸಿಕ್ಕಿತು. ಆದರೆ ನಾಮಪತ್ರ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಜೀವರಾಜ್ ಆಳ್ವ, ರಘುಪತಿ ಇನ್ನೂ ಕೆಲವರು ಬೇರೆಯವರಿಗೆ ಟಿಕೆಟ್ ಕೊಡಲು ಶತಪ್ರಯತ್ನ ನಡೆಸಿದರು.

ಡಿ ಮಂಜುನಾಥ್ ಆಗ ಜನತಾ ಪಕ್ಷದ ರಾಜ್ಯಾಧ್ಯಕ್ಷರು. ಮಂಜುನಾಥ್, ವಿ ಆರ್ ಕೃಷ್ಣಯ್ಯರ್, ಟಿ ಆರ್ ಶಾಮಣ್ಣ, ಎಚ್ ಡಿ ದೇವೇಗೌಡ, ಬಿ ಎಲ್ ಶಂಕರ್ ಮತ್ತಿತರರನ್ನು ಸಂಪರ್ಕಿಸಿ ನಾನು ಟಿಕೆಟ್ ಗೆ ಪಟ್ಟು ಹಿಡಿದೆ. ಇದಕ್ಕಾಗಿ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಚಂದ್ರಶೇಖರ ಅವರನ್ನೂ ಸಂಪರ್ಕಿಸಿ ವಿನಂತಿಸಿದೆ. ಆದರೆ ಕೊನೆಗೆ ಬಿ ಎಲ್ ಶಂಕರ್ ಒಬ್ಬರು ಮಾತ್ರ ನನ್ನ ಪರವಾಗಿ ನಿಂತರು. ಅಂತಿಮವಾಗಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊರೆ ಹೋದೆ. ಕನಕಪುರ ಬೈ ಎಲೆಕ್ಷನ್ ನಲ್ಲಿ ಹೆಗಡೆ ಅವರಿಗಾಗಿ ಸಿಂಧಿಯಾ ರಾಜೀನಾಮೆ ನೀಡಿದ್ದರು. ಹೆಗಡೆ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೆಲ್ಲ ಶಕ್ತಿ ಪ್ರಯೋಗದಲ್ಲಿ ತೊಡಗಿದ್ದರು. ನಾನು ಯುವಕರ ತಂಡ ಕಟ್ಟಿಕೊಂಡು ಕಾಂಗ್ರೆಸ್ ಮುಖಂಡರನ್ನು ದಿಗ್ಬಂಧನ ಹಾಕಿ ನೀರಿಳಿಸಿದ್ದು ಹೆಗಡೆ ಅವರಿಗೆ ತಿಳಿದಿತ್ತು. ಹಾಗಾಗಿ ಹೆಗಡೆ ಅವರು ಕೃಪೆಯಿಂದಾಗಿ ಕೊನೆಗೂ ಬಿ ಫಾರಂ ಸಿಕ್ಕಿತು. ನಾನು ನಾಮಪತ್ರ ಸಲ್ಲಿಸಿದೆ. ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಬೆಂಬಲವೂ ನನಗೆ ಸಿಕ್ಕಿತು.

ಈ ನಡುವೆ, ನಮ್ಮ ಕಾರ್ಯಕರ್ತರನ್ನು ಸ್ಟೇಷನ್ ಗೆ ಒಯ್ದು ಹಲ್ಲೆ ನಡೆಸಿದ ದುರಹಂಕಾರಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾನು ಸಖತ್ತಾಗಿ ಬೆಂಡೆತ್ತಿದ ಘಟನೆಯಿಂದಾಗಿ ಇಡೀ ವಾರ್ಡ್ ನಲ್ಲಿ ನನ್ನ ಹವಾ ಜೋರಾಯಿತು. ನಾನು ಭಾರಿ ಬಹುಮತದಿಂದ ಗೆಲುವು ಸಾಧಿಸಿದೆ. ಆಗ ಆ ವಾರ್ಡ್ ನಲ್ಲಿ ಏನೇನೂ ಮೂಲಸೌಕರ್ಯ ಇರಲಿಲ್ಲ. ಶಾಂತಿ ಸುವ್ಯವಸ್ಥೆ ಕೂಡ ಕಳವಳಕಾರಿಯಾಗಿತ್ತು. ನಾನು ಹಂತಹಂತವಾಗಿ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುತ್ತ, ಮೂಲ ಸೌಕರ್ಯ ಕಲ್ಪಿಸುತ್ತ ಬಂದೆ. ಹಾಗಾಗಿ ಮುಂದಿನ 1987ರ ಕಾರ್ಪೊರೇಷನ್ ಚುನಾವಣೆಯಲ್ಲೂ ಭರ್ಜರಿ ಗೆಲುವು ನನ್ನದಾಯಿತು.

ಬಿನ್ನಿಪೇಟೆಯಿಂದ ವಿಧಾನಸಭೆ ಪ್ರವೇಶ

ಎರಡು ಅವಧಿಗೆ ಕಾರ್ಪೋರೇಟರ್ ಆಗಿ ಜನಪ್ರಿಯತೆ ಗಳಿಸಿದ್ದ ನನಗೆ 1994ರಲ್ಲಿ ಬಿನ್ನಿಪೇಟೆ ಕ್ಷೇತ್ರದಲ್ಲಿ ನಿರಾಯಾಸವಾಗಿ ಜನತಾ ಪಕ್ಷದ ಟಿಕೆಟ್ ಸಿಕ್ಕಿತು. ದಾಖಲೆ ಮತಗಳ ಅಂತರದಿಂದ ಗೆದ್ದೆ.
ಆದರೆ ಮುಖ್ಯಮಂತ್ರಿಯಾಗಲು ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ನಡುವೆ ಪೈಪೋಟಿ ನಡೆದು ರಣರಂಪವಾಯಿತು. ನಾನು ದೇವೇಗೌಡರ ಪರ ನಿಂತೆ. ನ್ಯಾಯಯುತವಾಗಿ ದೇವೇಗೌಡರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ವಿಂಡ್ಸರ್ ಮ್ಯಾನರ್ ನನ್ನನ್ನು ಕರೆಸಿದರು. ಅಲ್ಲಿ ಹೆಗಡೆ, ಜೆ ಎಚ್ ಪಟೇಲ್ ಮತ್ತು ಬೊಮ್ಮಾಯಿ ಚಿಂತಾಕ್ರಾಂತರಾಗಿ ಕೂತಿದ್ದರು. ಹೆಗಡೆ ಮನೆ ಬಳಿ ಮತ್ತು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಭಾರಿ ಗದ್ದಲದ ಕುರಿತಾಗಿ ನನ್ನಿಂದ ಮಾಹಿತಿ ಪಡೆದರು. ನಾನು ಇದ್ದ ವಿಷಯ ವಿವರಿಸಿದೆ. ಹೆಗಡೆಯವರು ಗರಂ ಆಗಿದ್ದರು. ಬೊಮ್ಮಾಯಿಯವರು ಸೂಕ್ಷ್ಮವಾಗಿ ನನಗೊಂದು ಬುದ್ಧಿಮಾತು ಹೇಳಿ ಕಳುಹಿಸಿದರು!

ದೇವೇಗೌಡರು ಮುಖ್ಯಮಂತ್ರಿಯಾದರು. ಆದರೆ ನನ್ನನ್ನು ಮಂತ್ರಿ ಮಾಡಲೇ ಇಲ್ಲ! ನಿನ್ನನ್ನು ಮಂತ್ರಿ ಮಾಡಿದರೆ ಹೆಗಡೆಯವರು ತಕರಾರು ಮಾಡ್ತಾರೆ, ಸದ್ಯ ಸುಮ್ಮನಿರು ಎಂದರು!

ಮುಂದೆ ಅನಿರೀಕ್ಷಿತವಾಗಿ ದೇವೇಗೌಡರು ಪ್ರಧಾನಿಯಾದರು. ಮುಖ್ಯಮಂತ್ರಿ ಹುದ್ದೆಗೆ ಮತ್ತೆ ಪೈಪೋಟಿ ಶುರುವಾಯಿತು. ನಾವು 86 ಮಂದಿ ಸಿದ್ದರಾಮಯ್ಯ ಪರ ಸಹಿ ಮಾಡಿ ಪತ್ರ ರೆಡಿ ಮಾಡಿದೆವು. ಆದರೆ ಆ ಪತ್ರ ವರಿಷ್ಠರಿಗೆ ತಲುಪಿಸುವ ಧೈರ್ಯ ಯಾರೂ ಮಾಡಲಿಲ್ಲ. ನಾನೊಬ್ಬನೆ ಆ ಪತ್ರ ಹಿಡಿದು, ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ಜನತಾದಳ ರಾಷ್ಟ್ರ ಮಟ್ಟದ ನಾಯಕರಾದ ಬಿಜು ಪಟ್ನಾಯಕ್, ಮಧು ದಂಡವತೆ ಬಳಿ ಹೋಗಿದ್ದೆ. ಅಲ್ಲೇ ಇದ್ದ ಪಟೇಲರು, ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ನನ್ನನ್ನು ಪ್ರಶ್ನಿಸಿದರು! ನಾನು ಏನೋ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದೆ.

ಜೆ ಎಚ್‌ ಪಟೇಲರು ಮಂತ್ರಿ ಮಾಡಿದರು

ನಾಟಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಮಾಡದೆ ಜೆ ಎಚ್ ಪಟೇಲರನ್ನು ಸಿಎಂ ಮಾಡಲಾಯಿತು. ವಿಶೇಷ ಅಂದರೆ ಪಟೇಲರು ನನ್ನನ್ನು ಮಂತ್ರಿಯನ್ನಾಗಿ ಮಾಡಿದರು! ನಿನಗೆ ಕೆಲಸ ಬಾರದ ಖಾತೆ ಕೊಡ್ತೇನೆ ನೋಡು ಎಂದು ಗದರಿಸುತ್ತ ಬಂದೀಖಾನೆ ಇತ್ಯಾದಿ ಪ್ರಮುಖವಲ್ಲದ ಖಾತೆ ಕೊಟ್ಟರು. ಯಾವ ಖಾತೆ ಆದರೇನು ಎಂದು ನಾನು ನಿಷ್ಠೆಯಿಂದ ಕೆಲಸ ಮಾಡಿದೆ.

ಸನ್ನಡತೆಯ ಕೈದಿಗಳ ಬಿಡುಗಡೆ ಸಮಾರಂಭಕ್ಕೆ ಅಂದಿನ ರಾಜ್ಯಪಾಲ ಖರ್ಷಿದ್ ಅಲಂ ಖಾನ್ ಅವರನ್ನು ಕರೆದಿದ್ದೆ. ಪಟೇಲರೂ ಜತೆಗಿದ್ದರು. ಆಗ ರಾಜ್ಯಪಾಲರು ನನ್ನ ಕಾರ್ಯಶೈಲಿ ಬಗ್ಗೆ ಪಟೇಲರಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದರ ಪರಿಣಾಮವೋ ಏನೋ‌. ಪಟೇಲರು ನನಗೆ ಬೆಂಗಳೂರು ನಗರಾಭಿವೃದ್ಧಿಯಂಥ ಮಹತ್ವದ ಖಾತೆಯ ಹೊಣೆಗಾರಿಕೆ ನೀಡಿದರು. ಬೆಂಗಳೂರಿನ ಹಲವಾರು ಫ್ಲೈ ಓವರ್, ಅಂಡರ್ ಪಾಸ್, ಕಾವೇರಿ ನಾಲ್ಕನೇ ಹಂತದ ಯೋಜನೆ ಸೇರಿದಂತೆ ದೂರದೃಷ್ಟಿಯ ಹಲವಾರು ಯೋಜನೆಗಳು ಆಗ ಜಾರಿಗೆ ಬಂದವು.

1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು

ಆದರೆ 1999ರಲ್ಲಿ ಪರಿಸ್ಥಿತಿ ಭಿನ್ನವಾಗಿತ್ತು. ಜನತಾದಳ ಒಡೆದು ಚೂರಾಗಿತ್ತು. ಯಾವ ಬಣದಲ್ಲಿ ಯಾರಿದ್ದಾರೆ ಎಂದು ತಿಳಿಯಲಾರದಷ್ಟು ಪರಿಸ್ಥಿತಿ ಡೋಲಾಯಮಾನವಾಗಿತ್ತು. ”ನೀನು ಕಾಂಗ್ರೆಸ್ ಸೇರು. ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಆಗೋದು ಖಚಿತ. ನಿನ್ನನ್ನು ಅವರು ಮಂತ್ರಿ ಮಾಡ್ತಾರೆ,” ಎಂದು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಸಲಹೆ ನೀಡಿದರು. ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿ ಕೃಷ್ಣ ಅವರ ಮೇಲೆ ನಂಬಿಕೆ ಇಟ್ಟೆ. ದಿಲ್ಲಿವರೆಗೂ ಹೋಗಿ ಬಂದೆ. ಕಾಂಗ್ರೆಸ್ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿದವರು ಕೊನೇ ಕ್ಷಣದಲ್ಲಿ ಕೈ ಎತ್ತಿದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ನನಗೆ ಕರೆ ಮಾಡಿ, ನಾಳೆ ಬೆಳಗ್ಗೆಯೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸೂಚಿಸಿದರು. ನಿನಗೆ ಟಿಕೆಟ್ ಕೊಡದೇ ಇದ್ದುದು ಗೊತ್ತಾಗಿ ಬೇಸರವಾಯಿತು. ನಿನ್ನಂಥ ಕೆಲಸಗಾರ ಈ ಕ್ಷೇತ್ರಕ್ಕೆ ಬೇಕು. ನಿನ್ನ ಬೆಂಬಲಕ್ಕೆ ನಾವಿದ್ದೇವೆ. ಈಗಷ್ಟೇ ಕಾಲಭೈರವನ ಪೂಜೆ ಮುಗಿಸಿ ಬಂದಿದ್ದೇನೆ. ನಿನಗೆ ಒಳ್ಳೆಯದಾಗುತ್ತದೆ ಎಂದು ಹರಸಿದರು.

ಮರುದಿನ ನಾಮಪತ್ರ ಸಲ್ಲಿಸುವಾಗ ಸಾವಿರಾರು ಜನ ಸೇರಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ನಾನು ಭಾರೀ ಮತಗಳ ಅಂತರದಿಂದ ಜಯಶಾಲಿಯಾದೆ. ನನ್ನ ಗೆಲುವಿನ ಆರ್ಭಟ ಕಂಡು ಎಲ್ಲ ಪಕ್ಷಗಳ ಹಿರಿಯ ಮುಖಂಡರೂ ಅಚ್ಚರಿಪಟ್ಟರು.

ಬದಲಾದ ಸನ್ನಿವೇಶದಲ್ಲಿ 2004ರಲ್ಲಿ ಬಿನ್ನಿಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತು ಮೂರನೇ ಬಾರಿ ಆಯ್ಕೆ ಆದೆ. 2008ರಲ್ಲಿ ಮತ್ತೆ ಕಾಂಗ್ರೆಸ್ ನಿಂದ ಗೋವಿಂದರಾಜ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದೆ.
2010ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿ ಆಹಾರ-ನಾಗರಿಕ ಪೂರೈಕೆ, ಮುಜರಾಯಿ ಮತ್ತು ವಸತಿ ಸಚಿವನಾಗಿ ಕಾರ್ಯ ನಿರ್ವಹಿಸಿದೆ. 2016ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಎರಡನೇ ಬಾರಿ ಆಯ್ಕೆಯಾದೆ. 2019ರಲ್ಲಿ ಗೋವಿಂದರಾಜ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಭಾರಿ ಮತಗಳ ಅಂತರದಿಂದ ಜಯ ಸಾಧಿಸಿದೆ. ಮೊದಲು ತೋಟಗಾರಿಕೆ ಮತ್ತು ರೇಷ್ಮೆ ಖಾತೆ ನೀಡಿದ್ದರು. ಬಳಿಕ 2021ರಲ್ಲಿ ಮಹತ್ವದ ವಸತಿ ಮತ್ತು ಮೂಲ ಸೌಕರ್ಯ ಖಾತೆಗಳ ಹೊಣೆಗಾರಿಕೆ ನೀಡಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಮಣ್ಣಗೆ ಡಬಲ್‌ ಸೋಲು

ಗೋವಿಂದರಾಜ ನಗರ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ನಿಲ್ಲಲು ವಿ ಸೋಮಣ್ಣ ತಯಾರಿ ನಡೆಸಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಇವರಿಗೆ ಗೋವಿಂದರಾಜ ನಗರದಲ್ಲಿ ಟಿಕೆಟ್‌ ನೀಡದೆ ಚಾಮರಾಜ ನಗರ ಮತ್ತು ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದ ವರುಣ ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿತು. ಸೋಮಣ್ಣ ಅವರು ಚುನಾವಣೆ ಎದುರಿಸಿದರು. ಆದರೆ ಎರಡೂ ಕ್ಷೇತ್ರಗಳಲ್ಲಿ ಸೋತು ಹೋದರು. ಆದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಹೈಕಮಾಂಡ್‌ ತುಮಕೂರು ಕ್ಷೇತ್ರದ ಟಿಕೆಟ್‌ ನೀಡಿತು. ಸೋಮಣ್ಣ ಅವರು ಇಲ್ಲಿ ನಿರಾಯಾಸವಾಗಿ ಗೆದ್ದರು. ಜತೆಗೆ ಕೇಂದ್ರದಲ್ಲಿ ಮಂತ್ರಿಯೂ ಆದರು!

Continue Reading

ಕರ್ನಾಟಕ

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

HD Kumaraswamy Profile: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರೀಗ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜಕೀಯ ಜೀವನದಲ್ಲಿ ಮತ್ತೊಂದು ಮುನ್ನಡೆ ಸಾಧಿಸಿರುವ ಕುಮಾರಸ್ವಾಮಿ ಅವರ ರಾಜಕೀಯ ಏಳು-ಬೀಳುಗಳ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

HD Kumaraswamy
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Deve Gowda) ಅವರಂತೆ ಮಣ್ಣಿನ ಮಗ ಎನಿಸಿಕೊಂಡಿರುವ, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸಿರುವ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅರ್ಥಾತ್‌ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರೀಗ ನರೇಂದ್ರ ಮೋದಿ (Narendra Modi) ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಹರದನಹಳ್ಳಿಯಲ್ಲಿ ಜನಿಸಿ, ಸಿನಿಮಾ ನಿರ್ಮಾಪಕರಾಗಿ, ಶಾಸಕರಾಗಿ, ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಅವರೀಗ ಕೇಂದ್ರ ಸಚಿವರಾಗುವ ಮೂಲಕ ರಾಜಕೀಯ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಇದೇ ಹೊತ್ತಿನಲ್ಲಿ ಕುಮಾರಸ್ವಾಮಿ ಅವರ ರಾಜಕೀಯ ಜೀವನದ (HD Kumaraswamy Profile) ಮೇಲೊಂದು ಇಣುಕು ನೋಟ ಇಲ್ಲಿದೆ.

ಕುಮಾರಸ್ವಾಮಿ ರಾಜಕೀಯ ಏಳಿಗೆ

1996

ಎಚ್‌.ಡಿ.ಕುಮಾರಸ್ವಾಮಿ ಅವರು ಗೆಲುವಿನೊಂದಿಗೆ ರಾಜಕೀಯ ಪ್ರವೇಶಿಸಿದರು. 1996ರಲ್ಲಿ ಕುಮಾರಸ್ವಾಮಿ ಅವರು ಕನಕಪುರ ಲೋಕಸಭೆ ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

1998

1998ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಎಂ.ವಿ.ಚಂದ್ರಶೇಖರ ಮೂರ್ತಿ ಅವರ ವಿರುದ್ಧ ಪರಾಜಯಗೊಂಡರು. ಇಲ್ಲಿ ಠೇವಣಿ ಕೂಡ ಸಿಕ್ಕಿರಲಿಲ್ಲ.

1999

1999ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿದ ಕುಮಾರಸ್ವಾಮಿ, ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಸೋಲುಂಡರು.

2004

2004ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಚುನಾವಣೆ ಫಲಿತಾಂಶ ಪ್ರಕಟವಾದಾಗ ಯಾವುದೇ ಪಕ್ಷಕ್ಕೆ ಬಹುಮತ ಸಿಗಲಿಲ್ಲ. ಈ ವೇಳೆ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಜತೆ ಕೈಜೋಡಿಸಿ ಸರ್ಕಾರ ರಚಿಸಲು ಕಾರಣರಾದರು. ಇದು ಅವರ ರಾಜಕೀಯ ಜೀವನಕ್ಕೆ ಮಹತ್ವದ ತಿರುವು ನೀಡಿತು.

2006

ರಾಜ್ಯದಲ್ಲಿ ರಾಜಕೀಯ ಸನ್ನಿವೇಶಗಳು ಬದಲಾದವು. 2006ರಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸೇರಿ ತಲಾ 20 ತಿಂಗಳು ಅಧಿಕಾರ ನಡೆಸುವ ಒಪ್ಪಂದಕ್ಕೆ ಬಂದವು. ಅದರಂತೆ, 2006ರ ಫೆಬ್ರವರಿ 4ರಂದು ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಲು ನಿರಾಕರಿಸಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

2009

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು.

2013

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ 40 ಕ್ಷೇತ್ರಗಳಲ್ಲಿ ಗೆಲುವು, ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಕುಮಾರಸ್ವಾಮಿ.

2014

ಇದೇ ವರ್ಷದ ನವೆಂಬರ್‌ನಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮರುನೇಮಕಗೊಂಡ ಎಚ್‌ಡಿಕೆ.

2018

ವಿಧಾನಸಭೆ ಚುನಾವಣೆಯಲ್ಲಿ ಯಾವೊಂದು ಪಕ್ಷಕ್ಕೂ ಸಿಗದ ಬಹುಮತ. ಮೂರನೇ ಬೃಹತ್‌ ಪಕ್ಷವಾದರೂ ಕಾಂಗ್ರೆಸ್‌ ಜತೆಗೂ ಸರ್ಕಾರ ರಚಿಸಿದ ಕುಮಾರಸ್ವಾಮಿ, 2018ರ ಮೇ 23ರಂದು ಎರಡನೇ ಬಾರಿ ಸಿಎಂ ಆಗಿ ಪದಗ್ರಹಣ.

2019

2019ರ ಜುಲೈ 23ರಂದು ಸಮ್ಮಿಶ್ರ ಸರ್ಕಾರ ಪತನ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ.

2023

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ವಿರುದ್ಧ 20 ಸಾವಿರ ಮತಗಳ ಅಂತರದಲ್ಲಿ ಗೆದ್ದ ಎಚ್‌ಡಿಕೆ.

2024

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್-ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕುಮಾರಸ್ವಾಮಿ ಅವರಿಗೆ ಭರ್ಜರಿ ಗೆಲುವು. ಮೋದಿ ಸಚಿವ ಸಂಪುಟಕ್ಕೆ ಸೇರ್ಪಡೆ.

ಇದನ್ನೂ ಓದಿ: VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Continue Reading

ಪ್ರಮುಖ ಸುದ್ದಿ

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Narendra Modi 3.0: ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

VISTARANEWS.COM


on

Narendra Modi 3.0
Koo

ಬೆಂಗಳೂರು: ಎನ್​ಡಿಎ ಮೈತ್ರಿಕೂಟದ ನೂತನ ಸರ್ಕಾರದಲ್ಲಿ ಪ್ರಧಾನಮಂತ್ರಿಯಾಗಿ (Narendra Modi 3.0) ನರೇಂದ್ರ ಮೋದಿ ಭಾನುವಾರ ಸಂಜೆಯ ವೇಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಅವರ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆದಿದೆ. ಸಾವಿರಾರು ಬೈಕ್​ಗಳ ಮೂಲಕ ಹೊಸಪೇಟೆಯ ಪ್ರಮುಖ ರಸ್ತೆಗಳಲ್ಲಿ ಸಾಗಿದ ಅಭಿಮಾನಿಗಳು ಮೋದಿ ಹಾಗೂ ಕೇಂದ್ರ ಸರ್ಕಾರದ ಪರ ಜೈಕಾರ ಕೂಗಿದ್ದಾರೆ. ನಗರದ ಭಟ್ರಳ್ಳಿ ಆಂಜನೇಯ ದೇಗುಲದಿಂದ ಆರಂಭಗೊಂಡ ಬೈಕ್​ ರ್ಯಾಲಿ ಹೊಸಪೇಟೆ ತಾಲೂಕಿನ ವಿವಿಧ ಹಳ್ಳಿಗಳಿಗೆ ಸಾಗಿದೆ. ಹಂಪಿಗೆ ಹೋಗುವ ಬೈಪಾಸ್ ರಸ್ತೆ, ರಾಮಾ ಥಿಯೇಟರ್, ಪುನೀತ್ ಸರ್ಕಲ್, ಉದ್ಯೋಗ ಪೆಟ್ರೋಲ್ ಬಂಕ್, ಪಟೇಲ್ ನಗರ ಸೇರಿ ಹತ್ತಾರು ಸರ್ಕಲ್ ಗಳಲ್ಲಿ ಬೈಕ್ ರ್ಯಾಲಿ ಸಾಗಿತು. ಮಳೆಯನ್ನೂ ಲೆಕ್ಕಿಸದೇ ಅವರು ಬೈಕ್​ ರ್ಯಾಲಿ ನಡೆಸಲಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಜೆಡಿಎಸ್ ಕಾರ್ಯಕರ್ತರು, ಯುವ ಬ್ರಿಗೇಡ್ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸಾಥ್ ನೀಡಿದರು. ಇದೇ ವೇಳೆ ಪ್ರಮಾಣ ವಚನ ಸಮಾರಂಭ ನೋಡಲು ಬೃಹತ್​ ಎಲ್​ಇಡಿ ಪರದೆಯ ವ್ಯವಸ್ಥೆಯೂ ಮಾಡಲಾಗಿದೆ. ಹೊಸಪೇಟೆಯ ಬಿಜೆಪಿ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

ರಾಮನಗರದಲ್ಲಿ ಕೇಕ್​ ಕತ್ತರಿಸಿದ ಕಾರ್ಯಕರ್ತರು

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಪರಸ್ಪರ ಶುಭ ಕೋರಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್​​ ಮೈತ್ರಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಿಸಿದ್ದರು. ಮೋದಿ 3.0 ಎಂಬ ಕೇಕ್ ಕತ್ತರಿಸಿ ಪರಸ್ಪರ ಸಂಭ್ರಮಿಸಿದ್ದಾರೆ

ಚಿತ್ರದುರ್ಗದಲ್ಲಿ ವಿಶೇಷ ಪೂಜೆ

ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಲು ಚಿತ್ರದುರ್ಗ ಬಿಜೆಪಿ ಘಟಕದಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಮಾಜಿ ಶಾಸಕ ತಿಪ್ಪಾರೆಡ್ಡಿ ಹಾಗೂ ಕಾರ್ಯಕರ್ತರಿಂದ ಪೂಜೆ ಆಯೋಜನೆ ಮಾಡಲಾಗಿತ್ತು. ನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸುಭದ್ರ ಸರ್ಕಾರಕ್ಕಾಗಿ ಪ್ರಾರ್ಥನೆ ಮಾಡಿದರು. ಈ ವೇಳೆ ಮೋದಿ ಭಾವಚಿತ್ರ ಹಿಡಿದು ಜೈಕಾರ ಕೂಗಿದರು.

ಉಜ್ಜಯಿನಿ ಮಠದ ಶ್ರೀಗಳಿಂದ ಶುಭಾಶಯ

ಕೊಟ್ಟೂರು ತಾಲೂಕಿನಲ್ಲಿ ಉಜ್ಜಯಿನಿ ಮಠದ ಶ್ರೀಗಳು ಮೋದಿಗೆ ಶುಭಾಶಯ ಕೋರಿದರು. ಭಾರತ ದೇಶದ ನೇತೃತ್ವವನ್ನು ಮೋದಿ ಅವರು ಮೂರನೇ ಬಾರಿಗೆ ಹಿಡಿಯುತ್ತಿದ್ದಾರೆ. ಭಾರತ ದೇಶಕ್ಕೆ ಸಾವಿರಾರು ವರ್ಷಗಳ ಸನಾತನ ಧರ್ಮದ ಹಿನ್ನೆಲೆ ಇದೆ. ವಿವಿಧತೆಯಲ್ಲಿ ಏಕತೆ ಕಾಣುವ ದೇಶ ಭಾರತ. ಭಾರತ ದೇಶಕ್ಕಾಗಿ ಪ್ರಧಾನಿ ಮೋದಿ ಅವರು ತಮ್ಮದೇ ಆದ ಕನಸು ಕಂಡಿದ್ದಾರೆ ಮೂರನೇ ಅವಧಿಯಲ್ಲಿ ಆ ಎಲ್ಲಾ ಕನಸುಗಳು ಈಡೇರಲಿ ಎಂದು ಅವರು ಆಶಯ ಕೋರಿದರು.

ಹಾವೇರಿಯಲ್ಲಿ ಹೋಳಿಗೆ ಊಟ

ನರೇಂದ್ರ ಮೋದಿ ಮೂರನೆ ಬಾರಿ ಪ್ರಧಾನಿಯಾಗುತ್ತಿರುವುದರ ಖುಷಿಗೆ ಅಭಿಮಾನಿಗಳು ಹೊಳಿಗೆ ಊಟ ವಿತರಿಸಿದರು. ಹಾವೇರಿ ಜಿಲ್ಲೆಯ ರಾಣಿಬೇನ್ನೂರು ತಾಲೂಕಿನ ಹಲಗೇರಿಯಲ್ಲಿ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೋದಿ ಟಿ ಸ್ಟಾಲ್ ಮಾಲೀಕರು ಮತ್ತು ಅಭಿಮಾನಿಗಳಿಂದ ಹೋಳಿಗೆ ಊಟ ವಿತರಣೆ ಮಾಡಲಾಯಿತು. ಬರೊಬ್ಬರಿ ನಾಲ್ಕು ಸಾವಿರ ಮಂದಿಗೆ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬಿರಿಯಾನಿ ವಿತರಣೆ

ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಜತೆಗೆ ಸಿಹಿಯೂ ಹಂಚಲಾಯಿತು. ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಿಹಿ ಹಂಚಿ‌ ಸಂಭ್ರಮಿಸಲಾಯಿತು. ಚಿಂತಾಮಣಿ ನಗರದ ಹೃದಯಭಾಗಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಗೆ ಇಂಧನ ಹಾಕಿಸಲು ಬಂದವರಿಗೆ ಪೆಟ್ರೋಲ್ ಬಂಕ್ ಮಾಲೀಕರಿಂದ ಸಿಹಿ ಹಂಚಿಕೆ ಮಾಡಿದರು. ಅನುಪಮಾರೆಡ್ಡಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮಾಲೀಕ ಬಿರಿಯಾನಿ ಹಂಚಿದ್ದರು.

Continue Reading

ದಾವಣಗೆರೆ

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Farmer Death : ಸಾಲದ ಹೊರೆಗೆ ಮನನೊಂದ ರೈತನೊಬ್ಬ ತನ್ನ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Farmer Death
Koo

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಇದನ್ನೂ ಓದಿ: Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IND vs PAK
ಪ್ರಮುಖ ಸುದ್ದಿ4 mins ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Modi 3.0 Cabinet
ದೇಶ30 mins ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ40 mins ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ1 hour ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ1 hour ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ2 hours ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ2 hours ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ2 hours ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ3 hours ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ3 hours ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌