karnataka govt appoints District incharge ministersKarnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್‌ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ - Vistara News

ಕರ್ನಾಟಕ

Karnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್‌ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ

ಬಿಜೆಪಿ ಸರ್ಕಾರದಲ್ಲಿ (Karnataka Govt), ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು.

VISTARANEWS.COM


on

vidhana SOUDHA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವು (Karnataka Govt) ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಜೂನ್‌ 11ರಂದು ರಾಜ್ಯಾದ್ಯಂತ ಚಾಲನೆ ನೀಡಲಾಗುತ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ಇದೀಗ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆ ಹೊರಲಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ನಿಯಮ ಹಾಕಿಕೊಳ್ಳಲಾಗಿತ್ತು. ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು. ಆದರೆ ಈ ನೀತಿಯ ಕುರಿತು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಜಿಲ್ಲಾ ಅಭಿವೃದ್ಧಿ ಸರಿಯಾಗಿ ನಡೆಯುವುದಿಲ್ಲ ಎಂದಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡ ನಂತರ ಅವಲೋಕನ ಸಭೆಯಲ್ಲೂ ಅಭ್ಯರ್ಥಿಗಳು ಇದೇ ಮಾತನ್ನು ಹೇಳಿದ್ದರು. ನಾಯಕರ ಮಾತನ್ನು ಕೇಳಿ ಅನೇಕರು ಸೋತರು ಎಂದು ತಿಳಿಸಿದ್ದರು.

ಇದೀಗ ಕಾಂಗ್ರೆಸ್‌ ಸರ್ಕಾರ, ಅದೇ ಜಿಲ್ಲೆಗೆ ನೇಮಕ ಮಾಡಬಾರದು ಎಂಬ ನೀತಿಯನ್ನು ಒಟ್ಟಾರೆ ಕೈಬಿಟ್ಟಿದೆ. ಬಹಳಷ್ಟು ಸಚಿವರಿಗೆ ಅದೇ ಜಿಲ್ಲೆಯನ್ನು ನೀಡಲಾಗಿದೆ. ಆದರೆ ಒಂದೇ ಜಿಲ್ಲೆಯಲ್ಲಿ ಇಬ್ಬರು ಸಚಿವರಿರುವಾಗ ಅನೇಕ ಜಿಲ್ಲೆಗಳಿಗೆ ಹೊರಗಿನವರನ್ನೂ ನೇಮಿಸಲಾಗಿದೆ.

ಸಚಿವರು ಹಾಗೂ ಉಸ್ತುವಾರಿ ಜಿಲ್ಲೆಗಳು
ಸಿಎಂ ಸಿದ್ದರಾಮಯ್ಯ (ಹಣಕಾಸು, ಗುಪ್ತಚರ)
ಡಿಸಿಎಂ ಡಿ.ಕೆ ಶಿವಕುಮಾರ್(ಸಣ್ಣ ಮತ್ತು‌ ಬೃಹತ್ ನೀರಾವರಿ, ಬೆಂಗಳೂರು ಅಭಿವೃದ್ಧಿ)- ಬೆಂಗಳೂರು ನಗರ
ಜಿ.ಪರಮೇಶ್ವರ್ (ಗೃಹ)- ತುಮಕೂರು
ಹೆಚ್.ಕೆ‌ ಪಾಟೀಲ್ (ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ)- ಗದಗ
ಕೆ.ಹೆಚ್ ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು)-ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ (ಸಾರಿಗೆ ಹಾಗೂ ಮುಜರಾಯಿ)-ರಾಮನಗರ
ಎಂ.ಬಿ ಪಾಟೀಲ್ (ಬೃಹತ್ ಕೈಗಾರಿಕೆ)-ವಿಜಯಪುರ
ಕೆ.ಜೆ ಜಾರ್ಜ್‌ (ಇಂಧನ)-ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ (ಆರೋಗ್ಯ)-ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ (ಸಮಾಜಕಲ್ಯಾಣ)-ಮೈಸೂರು
ಸತೀಶ್ ಜಾರಕಿಹೊಳಿ (ಲೋಕೋಪಯೋಗಿ)-ಬೆಳಗಾವಿ
ಕೃಷ್ಣ ಬೈರೇಗೌಡ (ಕಂದಾಯ)- ಇಲ್ಲ
ಪ್ರಿಯಾಂಕ್ ಖರ್ಗೆ (ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ)-ಕಲಬುರಗಿ
ಶಿವಾನಂದ ಪಾಟೀಲ್ (ಜವಳಿ, ಸಕ್ಕರೆ)-ಹಾವೇರಿ
ಜಮೀರ್ (ವಸತಿ)-ವಿಜಯನಗರ
ಶರಣಬಸಪ್ಪ ದರ್ಶನಾಪುರ್ (ಸಣ್ಣ ಕೈಗಾರಿಕೆ)-ಯಾದಗಿರಿ
ಈಶ್ವರ್ ಖಂಡ್ರೆ (ಅರಣ್ಯ)-ಬೀದರ್
ಚಲುವರಾಯಸ್ವಾಮಿ (ಕೃಷಿ)-ಮಂಡ್ಯ
ಎಸ್.ಎಸ್ ಮಲ್ಲಿಕಾರ್ಜುನ (ಗಣಿ ಮತ್ತು ಭೂಗರ್ಭ ಶಾಸ್ತ್ರ, ತೋಟಗಾರಿಕೆ)-ದಾವಣಗೆರೆ
ರಹೀಂ ಖಾನ್ (ಪೌರಾಡಳಿತ, ಹಜ್)- ಇಲ್ಲ
ಸಂತೋಷ ಲಾಡ್ (ಕಾರ್ಮಿಕ)-ಧಾರವಾಡ
ಡಾ.ಶರಣುಪ್ರಕಾಶ್ ಪಾಟೀಲ್ (ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ)-ರಾಯಚೂರು
ಆರ್.ಬಿ ತಿಮ್ಮಾಪುರ (ಅಬಕಾರಿ)-ಬಾಗಲಕೋಟೆ
ಕೆ. ವೆಂಕಟೇಶ್ (ಪಶುಸಂಗೋಪನೆ)-ಚಾಮರಾಜನಗರ
ಶಿವರಾಜ್ ತಂಗಡಗಿ (ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ)-ಕೊಪ್ಪಳ
ಡಿ.ಸುಧಾಕರ್ (ಯೋಜನೆ ಮತ್ತು ಸಾಂಖ್ಯಿಕ)-ಚಿತ್ರದುರ್ಗ
ಬಿ‌.ನಾಗೇಂದ್ರ (ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ)-ಬಳ್ಳಾರಿ
ಕೆ.ಎನ್.ರಾಜಣ್ಣ (ಸಹಕಾರ)-ಹಾಸನ
ಬಿ.ಎಸ್ ಸುರೇಶ್ (ನಗರಾಭಿವೃದ್ಧಿ)-ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)-ಉಡುಪಿ
ಮಂಕಾಳ್ ವೈದ್ಯ (ಮೀನುಗಾರಿಕೆ ಮತ್ತು ಬಂದರು)-ಉತ್ತರ ಕನ್ನಡ
ಮಧು ಬಂಗಾರಪ್ಪ (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ)-ಶಿವಮೊಗ್ಗ
ಡಾ‌.ಎಂ‌.ಸಿ .ಸುಧಾಕರ್ (ಉನ್ನತ ಶಿಕ್ಷಣ)-ಚಿಕ್ಕಬಳ್ಳಾಪುರ
ಎನ್.ಎಸ್.ಬೋಸರಾಜ್ (ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ)-ಕೊಡಗು

ಇದನ್ನೂ ಓದಿ: Cow slaughter: ಗೋಹತ್ಯೆ ಹೇಳಿಕೆ ನೀಡಿದ್ದು ಖಾತೆ ಬದಲಾವಣೆಗಾಗಿ: ಸಚಿವ ಕೆ. ವೆಂಕಟೇಶ್‌ ಕುರಿತು ಮಾಜಿ ಸಿಎಂ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Dr Sushruth Gowda: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಡಾ.ಶುಶ್ರುತ್ ಗೌಡ

Dr Sushruth Gowda: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮೈಸೂರಿನ ಜನಪ್ರಿಯ ವೈದ್ಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಶ್ರುತ್ ಗೌಡ ಅವರು ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

VISTARANEWS.COM


on

Dr Sushruth Gowda
Koo

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಯುವ ನಾಯಕ ಸುಶ್ರುತ್ ಗೌಡ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಗರದ ಮಲ್ಲೇಶ್ವರದಲ್ಲಿರುವ ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಸುಶ್ರುತ್ ಗೌಡ (Dr Sushruth Gowda) ಅವರು ಬಿಜೆಪಿಗೆ ಸೇರ್ಪಡೆಯಾದರು.

ಡಾ. ಸುಶ್ರುತ್ ಗೌಡ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಅವರು ಇದೀಗ ಬಿಜೆಪಿ ಸೇರಿದ್ದಾರೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಡಾ.ಶುಶ್ರುತ್‌ ಗೌಡ ಅವರು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೋಸ್ಕರ ನಾನು ಬಿಜೆಪಿ ಸೇರಿದ್ದೇನೆ. ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌‌ ಕೈತಪ್ಪಿದ್ದಕ್ಕೂ, ನಾನು ಪಕ್ಷ ತೊರೆದಿರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್‌.ಎಸ್.ನಂದೀಶ ರೆಡ್ಡಿ, ರಾಜ್ಯ ವಕ್ತಾರರಾದ ಎಂ. ಜಿ. ಮಹೇಶ್‌, ರಾಜ್ಯ ಘಟಕದ ಪದಾಧಿಕಾರಿಗಳು ಹಾಗೂ ಸುಶ್ರುತ್‌ ಗೌಡ ಅವರ ಬೆಂಬಲಿಗರು ಉಪಸ್ಥಿತರಿದ್ದರು.

ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಅನುಭವ

ಡಾ.ಶುಶ್ರುತ್‌ಗೌಡ ಅವರು ನರರೋಗ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಮೈಸೂರಿನ ಡಾ.ಎಚ್.ಸಿ.ವಿಷ್ಣುಮೂರ್ತಿ ಹಾಗೂ ಕೆ.ಜಿ. ರೇಖಾಮೂರ್ತಿ ದಂಪತಿಯ ಪುತ್ರನಾಗಿರುವ ಡಾ.ಶುಶ್ರುತ್‌ಗೌಡ ತಂದೆಗೆ ತಕ್ಕ ಮಗನಾಗಿ ಹೆಸರು ಮಾಡಿ ಚಿಕ್ಕವಯಸ್ಸಿನಲ್ಲೇ ಅಪಾರ ಕೀರ್ತಿಯನ್ನು ಗಳಿಸಿದ್ದಾರೆ.

Dr Sushruth Gowda

ಎಂ.ಬಿ. ಪಾಟೀಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮುಗಿಸಿ ಚೆನ್ನೈನಲ್ಲಿರುವ ಸ್ಟ್ಯಾನ್ಲಿ ಮೆಡಿಕಲ್ ಕಾಲೇಜು ಮತ್ತು ಅಮೆರಿಕದ ಯೂನಿವರ್ಸಿಟಿ ಆಫ್ ಫ್ಲೋರಿಡಾದಲ್ಲಿ ನರರೋಗದ ಬಗ್ಗೆ ಅತ್ಯುನ್ನತ ವಿದ್ಯಾಭ್ಯಾಸವನ್ನು ಪಡೆದು ಪ್ರತಿಭಾವಂತರಾಗಿದ್ದಾರೆ. ಅಮೆರಿಕದ ವಿವಿಧ ಯೂನಿವರ್ಸಿಟಿಗಳಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇವರ ಸಾಧನೆಯನ್ನು ಗುರುತಿಸಿ ಯೂನಿವರ್ಸಿಟಿ ಆಫ್ ಪ್ಲೋರಿಡಾದಿಂದ ಡಾ.ಕೆನತ್ ಹೆಲ್ ಮ್ಯಾನ್ ರಿಸರ್ಚ್ ಅವಾರ್ಡ್ ಸೇರಿದಂತೆ ಪ್ರತಿಷ್ಠಿತ ಯೂನಿವರ್ಸಿಟಿಗಳಿಂದ ಅತ್ಯುನ್ನತ ಪ್ರಶಸ್ತಿಗಳನ್ನು ಪಡೆದ ಇವರು ಹೆಸರಾಂತ ನರರೋಗ ತಜ್ಞರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ | ಯಾವ ಬೂತ್‌ನಲ್ಲಿ ಮತ ಹಾಕಬೇಕು? ರೂಟ್‌ ಯಾವುದು? ಎಲ್ಲ ಮಾಹಿತಿಗೂ ಇದೊಂದು App ಸಾಕು

ತವರಲ್ಲಿ ಸಮಾಜಸೇವೆ ಮಾಡುವ ಹಂಬಲಕ್ಕೆ ಸ್ವದೇಶಕ್ಕೆ

ವಿದೇಶದಲ್ಲಿ ಹೆಸರಾಂತ ನರರೋಗ ತಜ್ಞರಾಗಿ ವರ್ಷಕ್ಕೆ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಬಹುದಾಗಿತ್ತಾದರೂ ತವರಲ್ಲಿ ಸಮಾಜ ಸೇವೆ ಮಾಡುವ ಹಂಬಲದಿಂದ ಸ್ವದೇಶಕ್ಕೆ ಮರಳಿ ತವರಲ್ಲಿ ಕೆಲಸ ಮಾಡುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ಕೆಲಸ ಮಾಡುವ ಸಲುವಾಗಿ ಪ್ರಸ್ತುತ ಪ್ರತಿಷ್ಠಿತ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನರರೋಗ ಕೇಂದ್ರವನ್ನು ತೆರೆದು ಸಾವಿರಾರು ರೋಗಿಗಳಿಗೆ ಶುಶ್ರೂಷೆ ನೀಡುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ನರರೋಗ ಸಮಸ್ಯೆಯನ್ನು ಹೊತ್ತು ಬಂದವರಿಗೆ ಚಿಕಿತ್ಸೆ ನೀಡುವ ಮೂಲಕ ಅವರ ಮುಖದಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದ್ದಾರೆ. ಇದರಿಂದಾಗಿಯೇ ನಗರದಲ್ಲಿ ಇವರ ಕೈಗುಣದ ಸೇವೆ ಪಡೆಯಲು ಅನೇಕರು ಮುಂಚಿತವಾಗಿ ನೋಂದಣಿ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿರುವುದು ವಿಶೇಷವಾಗಿದೆ.

ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆ

ಕೊರೊನಾ ಕಾಲದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಆರಂಭಿಸಿದ ಟೆಲಿ ಮೆಡಿಸನ್ ಚಿಕಿತ್ಸೆ ಸೇವೆ ಇಂದಿಗೂ ಮುಂದುವರಿಯುವ ಜತೆಗೆ ಇದುವರೆಗೂ 13,500 ಮಂದಿಗೆ ಅತ್ಯಾಧುನಿಕ ಶೈಲಿಯ ಚಿಕಿತ್ಸೆಯನ್ನು ನೀಡಿರುವುದು ವಿಶೇಷವಾಗಿದೆ. ಕೋವಿಡ್ ಕಾಣಿಸಿಕೊಂಡ ಮೇಲೆ ಗ್ರಾಮಾಂತರ ಪ್ರದೇಶಗಳಿಂದ ನಗರಕ್ಕೆ ಆಸ್ಪತ್ರೆಗೆ ಬರುವುದು ತುಂಬಾ ತೊಂದರೆಯಾಗಿದ್ದ ಕಾರಣ ಅಮೆರಿಕ ದೇಶದಲ್ಲಿರುವ ವ್ಯವಸ್ಥೆಯ ಮಾದರಿಯನ್ನೇ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಟೆಲಿಹೆಲ್ತ್ ಅಡ್ವೈಸರಿ ಫಾರ್ ರೂರಲ್ ರೆನ್ ಪ್ರಾರಂಭಿಸಿ ಸೇವೆ ನೀಡಲಾಗುತ್ತಿತ್ತು. ಕಡಕೊಳ, ಸಿಂಧುವಳ್ಳಿ, ಸಿದ್ದಲಿಂಗಪುರ, ಹುಣಸೂರು, ಪಿರಿಯಾಪಟ್ಟಣ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಗಿರಿಜನರು ಹೆಚ್ಚಾಗಿ ವಾಸಿಸುವ ಹಾಡಿಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಮಧುಮೇಹ, ಅಸ್ತಮಾ ಸಣ್ಣ ಸಣ್ಣ ಸಮಸ್ಯೆಗಳಿಗೆ ಸೀಮಿತವಾಗದೆ ನುರಿತ ತಜ್ಞ ವೈದ್ಯರ ಮೂಲಕಟೆಲಿಮೆಡಿಸನ್ ಮೂಲಕ ಸೇವೆ ನೀಡಲಾಗುತ್ತಿದೆ.

ಇದನ್ನೂ ಓದಿ | Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

ಅದೇ ರೀತಿ ಹೃದ್ರೋಗ, ನರರೋಗ, ಗ್ಯಾಸ್ಟ್ರೋಎಂಟರಾಲಜಿ, ಪ್ರಸೂತಿ ಮೊದಲಾದ ಕಾಯಿಲೆಗಳ ರೋಗಿಗಳಿಗೆ ಆಸ್ಪತ್ರೆಯಿಂದಲೇ ಸಮಾಲೋಚನೆ ನಡೆಸುವ ಮೂಲಕ ಗಮನ ಸೆಳೆಯಲಾಗಿತ್ತು. ಇದುವರೆಗೂ 60ಕ್ಕೂ ಹೆಚ್ಚು ಕ್ಯಾಂಪ್‌ಗಳನ್ನು ನಡೆಸಿ 13500 ಮಂದಿಗೆ ಅನುಕೂಲ ಕಲ್ಪಿಸಲಾಗಿದೆ. ಆಶಾ ಕಾರ್ಯಕರ್ತರು ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದರಿಂದ ಆರೋಗ್ಯ ತಪಾಸಣೆ ಮಾಡುವ ಜತೆಗೆ, ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರ ಕಾರ್ಮಿರ ಆರೋಗ್ಯದ ಹಿತದೃಷ್ಟಿಯಿಂದ 2 ಸಾವಿರ ಪೌರ ಕಾರ್ಮಿಕರಿಗೆ ಆರೋಗ್ಯ ಶಿಬಿರ ನಡೆಸಿ ಅನುಕೂಲ ಮಾಡಲಾಗಿದೆ. ಇದಲ್ಲದೆ, ಕೆ.ಆರ್.ಆಸ್ಪತ್ರೆ, ಎಸ್‌ಎಂಟಿ ಆಸ್ಪತ್ರೆ, ರಾಜೀವ್‌ನಗರ ಆಸ್ಪತ್ರೆಗೆ ಜಂಬೋ ಸಿಲಿಂಡರ್, ಆಕ್ಸಿಜನ್ ಸಿಲಿಂಡರ್ ಮೊದಲಾದ ವೈದ್ಯಕೀಯ ಸಲಕರಣೆಗಳನ್ನು ವಿತರಿಸುವ ಮೂಲಕ ಅನುಕೂಲ ಮಾಡಿದ್ದನ್ನು ಇಂದಿಗೂ ವೈದ್ಯರು ಮತ್ತು ಸಾರ್ವಜನಿಕರು ನೆನಪಿಸಿಕೊಳ್ಳುತ್ತಾರೆ.

Continue Reading

ತುಮಕೂರು

Lok Sabha Election 2024: ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮತಯಾಚನೆ

Lok Sabha Election 2024: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಮಂಗಳವಾರ ಶಿರಾ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು, ಮತ ಯಾಚನೆ ನಡೆಸಿದರು.

VISTARANEWS.COM


on

Chitradurga Lok Sabha Constituency BJP candidate Govinda M karajola election campaign in shira
Koo

ಶಿರಾ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಮಂಗಳವಾರ ಶಿರಾ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ (Lok Sabha Election 2024) ನಡೆಸಿದರು.

ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಶ್ರೀ ಬಂಡಿ ರಂಗನಾಥ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಳಿಕ ಮಾತನಾಡಿದ ಗೋವಿಂದ ಎಂ.ಕಾರಜೋಳ, ಸ್ವಾತಂತ್ರ್ಯ ನಂತರ 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರ ಯಾವುದೇ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ವಿಫಲವಾಗಿದ್ದು, ಪ್ರಧಾನಿ ಮೋದಿ ಅವರು ಕೇವಲ 10 ವರ್ಷದ ಆಡಳಿತದಲ್ಲಿ ವಿಶ್ವವೇ ಭಾರತದತ್ತ ನೋಡುವಂತೆ ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಜನರು ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡುವಂತೆ ಮತದಾರರದಲ್ಲಿ ಅವರು ಮನವಿ ಮಾಡಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಸತ್ಯಪ್ರಕಾಶ್‌ ಮಾತನಾಡಿ, ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ, ಸುಳ್ಳಿನ ಹೇಳಿಕೆಗೆ ಬೆಲೆ ಕೊಡದೆ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಶಿರಾ ವಿಧಾನಸಭಾ ಕ್ಷೇತ್ರದ ಹುಲಿಕುಂಟೆ ಹೋಬಳಿಯ ಬರಗೂರಿನಲ್ಲಿ, ಕಸಬಾ ಹೋಬಳಿಯ ಮದಲೂರಿನಲ್ಲಿ, ಕಳ್ಳಂಬೆಳ್ಳ ಹೋಬಳಿಯ ಹನುಮಂತಪುರ, ಗೌಡಗೆರೆ ಹೋಬಳಿಯ ತಾವರೆಕೆರೆ ಹಾಗೂ ಶಿರಾ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ, ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.

ಇದನ್ನೂ ಓದಿ: IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡ ಅರ್. ಉಗ್ರೇಶ್, ಮುಖಂಡರಾದ ಎಸ್.ಆರ್. ಗೌಡ್, ಬಿ.ಕೆ. ಮಂಜುನಾಥ್ ಹಾಗೂ ಬಿಜೆಪಿ- ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಪರಿಸರ

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಕಳೆದೆರಡು ವಾರದಲ್ಲಿ ಅಡಿಕೆಯ (Areca Price) ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Areca Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಒಂದು ನಿರ್ದಿಷ್ಟ ಪಕ್ಷ (Areca Price) ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ, ಷೇರು ಮಾರುಕಟ್ಟೆ ಏರುತ್ತದೆ. ಇನ್ನೊಂದು ನಿರ್ದಿಷ್ಟ ಪಕ್ಷ ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ ಷೇರು ಮಾರುಕಟ್ಟೆ ಕುಸಿಯುತ್ತದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಷೇರು ಮಾರುಕಟ್ಟೆಯ ಏರಿಳತವೂ ತಲ್ಲಣವನ್ನೇ ಸೃಷ್ಟಿ ಮಾಡುತ್ತದೆ. ಆದರೆ, ಈ ಬಾರಿ ಮುಂಬಯಿ ಸ್ಟಾಕ್ ಎಕ್ಸ್ಚೇಂಜ್ ಏರಿಳಿತವನ್ನು ಮೀರಿಸುವಂತೆ ಅಡಿಕೆ ದರ ಗೂಳಿಯ ಕುಣಿತವಾಗಿದೆ! ಕಳೆದೆರಡು ವಾರದಲ್ಲಿ ಅಡಿಕೆಯ ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ. ಅದೇ ರೀತಿ, ಮೂರು ತಿಂಗಳ ಹಿಂದೆ 53,000 ಇದ್ದ ಬೆಟ್ಟ ಅಡಿಕೆ ಧಾರಣೆ ಕಳೆದ ವಾರ 55,000 ರೂ. ದಾಟಿ, ಇವತ್ತು 56,333 ರೂ.ಗೆ ತಲುಪಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ ಏರುತ್ತಿದ್ದು, ಅಡಿಕೆ ಆವಕ ಏರಿದರೂ ಅಡಿಕೆ ಧಾರಣೆ ಏರುತ್ತಿರುವುದು ವಿಶೇಷವಾಗಿದೆ.

Areca nuts image

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ರಾಶಿ ಇಡಿ ಅಡಿಕೆ ಆವಕ ಬಾರೀ ಏರಿಕೆ ಕಂಡಿದೆ:
ದಿನಾಂಕ 17.04.2024: 3,907 ಕ್ವಿಂಟಾಲ್
ದಿನಾಂಕ 19.04.2024: 4,378 ಕ್ವಿಂಟಾಲ್
ದಿನಾಂಕ 22.04.2024: 4543 ಕ್ವಿಂಟಾಲ್
ದಿನಾಂಕ 23.04.2024: 17,474 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,800 ರೂ., ಬೆಟ್ಟೆ 56,300 ರೂ. ದಾಟಿದಾಗ ಸಹಜವಾಗಿಯೇ ಗೊರಬಲು 41 ಸಾವಿರದ ಸನಿಹ ತಲುಪಿದೆ. ಈ ಎಲ್ಲ ವೆರೈಟಿಗಳ ಧಾರಣೆಯ ಏರಿಕೆಯ ಹಿನ್ನೆಲೆಯಲ್ಲಿ ಸಿಪ್ಪೆ ಗೋಟು ದರವೂ ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ 20,000 ರೂ. ದಾಟುವ ನಿರೀಕ್ಷೆ ರೈತರದು. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ವ್ಯವಹಾರವೂ ಬಹಳ ಕಮ್ಮಿ. APMC ಒಳಗೆ ವ್ಯಾಪ್ತಿಗೆ ಬರದೆಯೇ ಸಿಪ್ಪೆ ಗೋಟು ವ್ಯವಹಾರ ನೆಡೆಯುತ್ತದೆ. ಅದನ್ನು APMC ವ್ಯಾಪ್ತಿಯ ಒಳಗೆ ಸಂಪೂರ್ಣ ತರಲು ಪ್ರಯತ್ನ ನೆಡೆಯುತ್ತಿಲ್ಲ.

Areca nut

ಚುನಾವಣೆ ಬಳಿಕ ಏನಾಗಲಿದೆ?

ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ದೊಡ್ಡ ಮಟ್ಟದ ಓಪನ್ ನಗದು ವ್ಯವಹಾರಕ್ಕೆ ಒಂದಿಷ್ಟು ಚುನಾವಣೆ ನೀತಿ ಸಂಹಿತೆ ನಿರ್ಬಂಧ ಇರುವುದರಿಂದ, ಎಲೆಕ್ಷನ್ ಮುಗಿದ ಮೇಲೆ ಅಡಿಕೆ ನಗದು ವ್ಯವಹಾರ ಇನ್ನಷ್ಟು ತೀವ್ರತೆ ಪಡೆದ ಮೇಲೆ ಧಾರಣೆ ಏರಿಕೆಯ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯ ಇದೆ.
ಏನೇ ಆದರೂ, ಅಡಿಕೆ ಮಾರುಕಟ್ಟೆಯ ಧಾರಣೆ ಸಂಪೂರ್ಣ ಲೆಕ್ಕಾಚಾರಕ್ಕೆ ಸಿಗುವಂಥದ್ದಲ್ಲ! ಅದೂ ಷೇರು ಮಾರುಕಟ್ಟೆಯ ರೀತಿ, ಯಾವಾಗ ಗೂಳಿ ಮುನ್ನುಗ್ಗುತ್ತದೆ, ಕರಡಿ ಕುಣಿಯುತ್ತದೆ ಗೊತ್ತಾಗುವುದಿಲ್ಲ.
ಅಡಿಕೆ ಧಾರಣೆಯ ಗೂಳಿ ನುಗ್ಗುವ ಸಮಯದಲ್ಲೇ ಕಾಳು ಮೆಣಸಿನ ಧಾರಣೆಯೂ ಏರು ಮುಖ ಕಾಣುತ್ತಿದೆ. ಕಾಳು ಮೆಣಸಿನ ದರ ಈಗ 57,000 ರೂ. ತಲುಪಿದೆ. ಒಟ್ಟಿನಲ್ಲಿ ಅಡಿಕೆ, ಕಾಳು ಮೆಣಸು ಧಾರಣೆ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ನಾಲ್ಕು ಜನ ಸೇರಿದಲ್ಲಿ, ರಾಜಕೀಯ ವಿಚಾರದೊಂದಿಗೆ ಅಡಿಕೆ ಧಾರಣೆಯ ಚರ್ಚೆಯೂ ಜೋರಾಗಿ ಸೌಂಡ್ ಮಾಡ್ತಾ ಇದೆ!

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Continue Reading

ಶ್ರದ್ಧಾಂಜಲಿ

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

Arjun Deva: ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಹುಟ್ಟೂರು ಕೋಲಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

VISTARANEWS.COM


on

Veteran journalist Arjun Deva passes away
Koo

ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ (Arjun Deva) ಅವರು ಬುಧವಾರ (ಏಪ್ರಿಲ್​ 24) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ (ಹಿಂದಿನ ಪತ್ರಕರ್ತರ ಅಕಾಡೆಮಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅರ್ಜುನ್​ ದೇವ ಅವರಿಗೆ 92 ವರ್ಷವಾಗಿತ್ತು. ಅನಾರೋಗ್ಯ ಹಿನ್ನೆಲಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಮಕ್ಕಳು ಇದ್ದಾರೆ.

ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಅರ್ಜುನ್​ ದೇವ ಅವರು ಕೋಲಾರ ಜಿಲ್ಲೆಯ ಚೌಡದೇವನಹಳ್ಳಿಯಲ್ಲಿಯವರಾಗಿದ್ದಾರೆ. ಬುಧವಾರ ಸಂಜೆ ಚೌಡದೇವನಹಳ್ಳಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಚ್‌ಡಿಕೆ ಸಂತಾಪ

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು. ಅನೇಕ ಗ್ರಾಮೀಣ ಪ್ರತಿಭೆಗಳನ್ನು ಮಾಧ್ಯಮ ಲೋಕಕ್ಕೆ ಪರಿಚಯಿಸಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

ಕೆಯುಡಬ್ಲ್ಯೂಜೆ ಕಂಬನಿ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನಕ್ಕೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ತಕ್ತಪಡಿಸಿದೆ. ತಾಯಿನಾಡು, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಚೇತನ ಅರ್ಜುನ್ ದೇವ್ ಅವರಾಗಿದ್ದರು ಎಂದು ಕೆಯುಡಬ್ಲ್ಯೂಜೆ ಶೋಕ ವ್ಯಕ್ತಪಡಿಸಿದೆ.

ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನ ಸುದ್ದಿಮನೆಗೆ ತುಂಬಲಾರದ ನಷ್ಟ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.

Continue Reading
Advertisement
Dr Sushruth Gowda
ಕರ್ನಾಟಕ14 mins ago

Dr Sushruth Gowda: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಡಾ.ಶುಶ್ರುತ್ ಗೌಡ

Railway Ticket
ದೇಶ18 mins ago

Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

shubman gill
ಕ್ರಿಕೆಟ್19 mins ago

Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

Chitradurga Lok Sabha Constituency BJP candidate Govinda M karajola election campaign in shira
ತುಮಕೂರು24 mins ago

Lok Sabha Election 2024: ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮತಯಾಚನೆ

Dhanya Ramkumar reels with Kishen Bilagali
ಸ್ಯಾಂಡಲ್ ವುಡ್25 mins ago

Dhanya Ramkumar: ಕಿಶನ್ ಬಿಳಗಲಿ ಜತೆ ಡಾ. ರಾಜ್​ಕುಮಾರ್ ಮೊಮ್ಮಗಳ ಡ್ಯೂಯೆಟ್‌!

Sachin Tendulkar
ಕ್ರಿಕೆಟ್27 mins ago

Sachin Birthday: ಕ್ರಿಕೆಟ್ ದೇವರ ಕುರಿತ 30 ಕುತೂಹಲಕರ ಸಂಗತಿಗಳಿವು

Viral News
ವೈರಲ್ ನ್ಯೂಸ್49 mins ago

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Rajkumar Birth Anniversary ​​Jaggesh said that Rajkumar blessed him when he was admitted due to suicide attempt
ಸ್ಯಾಂಡಲ್ ವುಡ್52 mins ago

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

World Chess Championship
ಕ್ರೀಡೆ55 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ1 hour ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌