Karnataka High Court: ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ಖಾಸಗಿ ದೂರು ರದ್ದು ಮಾಡಿದ ಹೈಕೋರ್ಟ್ - Vistara News

ಕರ್ನಾಟಕ

Karnataka High Court: ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ಖಾಸಗಿ ದೂರು ರದ್ದು ಮಾಡಿದ ಹೈಕೋರ್ಟ್

Karnatak High Court: ರಾಹುಲ್ ಗಾಂಧಿ ಅವರ ಇ.ಡಿ ವಿಚಾರಣೆ ವಿರೋಧಿಸಿ ನಡೆದ ಪ್ರತಿಭಟನೆ ಸಂಬಂಧ ಯು ಟಿ ಖಾದರ್ ವಿರುದ್ದ ಖಾಸಗಿ ದೂರು ದಾಖಲಾಗಿತ್ತು.

VISTARANEWS.COM


on

Karnataka High court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಾರಿ ನಿರ್ದೇಶಾನಲಯವು (Enforcement Directorate) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ್ದನ್ನು ಖಂಡಿಸಿ ಬೆಂಗಳೂರಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ಸ್ಪೀಕರ್ ಆಗಿರುವ ಸ್ಪೀಕರ್ ಯು.ಟಿ.ಖಾದರ್ (UT Khader) ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು (Private complaint) ಕರ್ನಾಟಕ ಹೈಕೋರ್ಟ್ (Karnataka Hihg Court) ರದ್ದು ಮಾಡಿ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಯು.ಟಿ ಖಾದರ್ ಸೇರಿ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು ಮತ್ತು ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಯು.ಟಿ ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರು ಮತ್ತು ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ ಖಾದರ್ ಅವರು ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಪ್ರಕರಣ ರದ್ದು ಮಾಡಿ‌ ಆದೇಶ ನೀಡಲಾಗಿದೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿನಗರ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿತ್ತು. 2023ರ ಜು.7ರಂದು ಕೋರ್ಟ್ ಆದೇಶ ನೀಡಿತ್ತು. ಆ ಆದೇಶದ ಆಧಾರದ ಮೇಲೆ ಯು.ಟಿ. ಖಾದರ್‌ ಅವರ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಈ ಸುದ್ದಿಯನ್ನೂ ಓದಿ: Karnataka High Court : ಸೌದಿಯಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಶೈಲೇಶ್‌: ಕೇಂದ್ರದ ಮೌನಕ್ಕೆ ಹೈಕೋರ್ಟ್‌ ಆಕ್ಷೇಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

Gangster Ravi Pujari: ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತನನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿಸಲಾಗಿತ್ತು.

VISTARANEWS.COM


on

Gangster Ravi Pujari
Koo

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Gangster Ravi Pujari) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ಆತನನ್ನು ಸೋಮವಾರ ದಾಖಲಿಸಲಾಗಿದೆ.

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಇಂಟರ್‌ಪೋಲ್‌ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ರಾಜ್ಯಕ್ಕೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಹಲವರು ಸೆರೆಯಾಗಿದ್ದು, ಇದೀಗ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಸರೆಂಡರ್ ಆಗಿದ್ದಾರೆ.

ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದಾರೆ. ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

ಪವಿತ್ರಗೌಡ ನೋಡಲು ಬಂದ ಸಂಬಂಧಿಕರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಭೇಟಿಗೆ ಆಕೆಯ ಸಹೋದರಿ ಹಾಗೂ ಸಂಬಂಧಿ ಬಂದಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಕೊಲೆ ಆರೋಪಿ ಪವಿತ್ರಗೌಡ ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ಪ್ರಯತ್ನಿಸಿದರು. ಆದರೆ ಬಂದ ದಾರಿಗೆ ಸುಂಕ ಎಲ್ಲ ಎಂಬಂತೆ ಬರಿಗೈಯ್ಯಲ್ಲಿ ಹೋದರು. ಈ ಮೊದಲು ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳಿಸಲಾಗಿತ್ತು. ಈಗ ಠಾಣೆಗೆ ಬಂದು ಮನವಿ ಮಾಡಿಕೊಂಡರು ಪವಿತ್ರಗೌಡ ಭೇಟಿಗೆ ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

BS Yediyurappa: ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗಲಾಗುವುದು ಎಂದು ತಿಳಿಸಿದರೂ ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರಂಟ್‌ ತರುವ ದರ್ದು ಏನಿತ್ತು ಎಂಬುದಾಗಿ ಸಿಐಡಿ ಪರ ವಾದ ಮಂಡಿಸಿದ ಎಜಿ ಶಶಿಕಿರಣ್‌ ಶೆಟ್ಟಿ ಅವರಿಗೆ ಕೋರ್ಟ್‌ ಚಾಟಿ ಬೀಸಿತು. ಹಾಗೆಯೇ, ಮಾಜಿ ಸಿಎಂಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು ಎಂದು ಕೂಡ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಕಳವಳ ವ್ಯಕ್ತಪಡಿಸಿತು.

VISTARANEWS.COM


on

BS Yediyurappa
Koo

ಬೆಂಗಳೂರು: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಬಿಗ್‌ ರಿಲೀಫ್‌ ನೀಡಿದೆ. ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರ ಮಧ್ಯೆಯೇ, ವಿಚಾರಣೆ ವೇಳೆ ನ್ಯಾಯಾಲಯವು ಕರ್ನಾಟಕ ಸರ್ಕಾರಕ್ಕೆ ಚಾಟಿ ಬೀಸಿದೆ. “ಒಬ್ಬ ಮಾಜಿ ಮುಖ್ಯಮಂತ್ರಿಯನ್ನೇ ಈ ರೀತಿ ನಡೆಸಿಕೊಂಡರೆ, ಸಾಮಾನ್ಯ ಜನರ ಪಾಡೇನು” ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಅಡ್ವೊಕೇಟ್‌ ಜನರಲ್‌ (AG) ಶಶಿಕಿರಣ್‌ ಶೆಟ್ಟಿ ಅವರು ಸಿಐಡಿ ಪರ ವಾದ ಮಂಡಿಸಿದರು. “ಜೂನ್‌ 11ರಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಜೂನ್‌ 12ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ ನೀಡಿದ್ದಾರೆ. ಹೀಗಿದ್ದರೂ, ಯಡಿಯೂರಪ್ಪ ಅವರು ಸಂಜೆಗೆ ವಿಮಾನದ ಟಿಕೆಟ್‌ ಬುಕ್‌ ಮಾಡಿಕೊಂಡು ದೆಹಲಿಗೆ ತೆರಳಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ ನ್ಯಾಯಾಲಯವು, “ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 12ರ ಬದಲು, ಜೂನ್‌ 17ರಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಿದ್ದರೂ, ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರೆಂಟ್‌ ತರುವ ಅವಶ್ಯಕತೆ ಏನಿತ್ತು? ಅವರು ಒಬ್ಬ ಮಾಜಿ ಮುಖ್ಯಮಂತ್ರಿ. ಅವರೇನೂ ದೇಶ ಬಿಟ್ಟು ಓಡಿ ಹೋಗುತ್ತಿದ್ದರೇ? ನಾಲ್ಕೈದು ದಿನ ತಡವಾಗಿ ವಿಚಾರಣೆಗೆ ಹಾಜರಾದರೆ ಆಕಾಶವೇ ಕಳಚಿ ಬೀಳುತ್ತಿತ್ತೇ? ಒಬ್ಬ ಮಾಜಿ ಮುಖ್ಯಮಂತ್ರಿಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು” ಎಂದು ಚಾಟಿ ಬೀಸಿತು.

ಬಳಿಕ, ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾ.ಕೃಷ್ಣ ದೀಕ್ಷಿತ್‌ ಅವರು ಆದೇಶ ಹೊರಡಿಸಿದರು. ಹಾಗೆಯೇ, ಜೂನ್‌ 17ರಂದು ತನಿಖಾಧಿಕಾರಿ ಎದುರು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಎರಡು ವಾರ ಮುಂದೂಡಿದರು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

Continue Reading

ಮಳೆ

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Karnataka Rain: ಕಲಬುರಗಿ, ಆಳಂದ, ಚಿತ್ತಾಪುರ, ಶಹಾಬಾದ್, ವಾಡಿ ಸೇರಿ ಹಲವು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ಕಟ್ಟಕಡೆಯ ಗ್ರಾಮ ತರ್ಕಸ್ ಪೇಟೆ ತತ್ತರಿಸಿ ಹೋಗಿದೆ. ಗುರುವಾರ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

VISTARANEWS.COM


on

Due to heavy rain water entered the houses of Tharkas Pet village of Chittapur taluk
Koo

ಕಲಬುರಗಿ: ಕಲಬುರಗಿ, ಆಳಂದ, ಚಿತ್ತಾಪುರ, ಶಹಾಬಾದ್, ವಾಡಿ ಸೇರಿದಂತೆ ಹಲವು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಗೆ (Karnataka Rain) ಚಿತ್ತಾಪುರ ತಾಲೂಕಿನ ಕಟ್ಟಕಡೆಯ ಗ್ರಾಮ ತರ್ಕಸ್ ಪೇಟೆ ತತ್ತರಿಸಿ ಹೋಗಿದೆ. ಗುರುವಾರ ಸುರಿದ ಧಾರಾಕಾರ ಮಳೆಯಿಂದ (Rain Effect) ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

ಸತತ ಮೂರು ತಾಸು ಸುರಿದ ಮಳೆಯಿಂದ ಗ್ರಾಮದ ಹಲವು ಮನೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮನೆಯ ಪಾತ್ರೆಗಳು ನೀರಲ್ಲಿ ತೇಲಾಡಿದರೆ, ಶೇಖರಿಸಿಟ್ಟ ಜೋಳ ಮತ್ತು ಬೇಳೆಕಾಳುಗಳು ನೀರು ಪಾಲಾಗಿ, ಬಡ ಕುಟುಂಬಗಳು ತೀವ್ರ ನಷ್ಟ ಅನುಭವಿಸುವಂತಾಗಿದೆ. ಮನೆಗೆ ನುಗ್ಗಿದ ಮಳೆ ನೀರನ್ನು ಹೊರ ಚೆಲ್ಲುವಲ್ಲಿ ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ನಾಲವಾರ ವಲಯದ ಕೊಲ್ಲೂರು, ರಾಂಪುರಹಳ್ಳಿ, ಶಾಂಪುರಹಳ್ಳಿ ಸೇರಿದಂತೆ ತರ್ಕಸ್ ಪೇಟೆ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಹತ್ತು ದಿನಗಳಿಂದ ನಾಲವಾರ ವಲಯದಲ್ಲಿ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮಹಾರಾಷ್ಟ್ರದಲ್ಲಿ ಮಳೆ ಆಗುತ್ತಿರುವುದರಿಂದ ಭೀಮಾನದಿಗೆ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆ ಇದೆ. ಆದ್ದರಿಂದ ಜನ-ಜಾನುವಾರುಗಳ ಸುರಕ್ಷತೆ ಅತ್ಯವಶ್ಯಕವಾಗಿದೆ. ನದಿ ತೀರದ ಜನರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ರೈತರು ತಮ್ಮ ಜಾನುವಾರುಗಳನ್ನು ನದಿ ತೀರಕ್ಕೆ ತರಬಾರದು. ಗುಡುಗು ಸಿಡಿಲು ಮಿಂಚು ಆರ್ಭಟಿಸುವ ಸಮಯದಲ್ಲಿ ಜಾನುವಾರುಗಳನ್ನು ಮರದ ಕೆಳಗೆ ಕಟ್ಟಬಾರದು. ಮಳೆಗಾಲದ ಸಂದರ್ಭದಲ್ಲಿ ಜಾನುವಾರುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪಶುಪಾಲನಾ ಇಲಾಖೆಯ ಚಿತ್ತಾಪುರ ತಾಲೂಕು ಸಹಾಯಕ ನಿರ್ದೇಶಕ ಶಂಕರ್ ಕಣ್ಣಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

Actor Darshan: ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಲಾಗಿತ್ತು ಎಂದು ಆರೋಪಿಯೊಬ್ಬ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ನಡುವೆ ಪ್ರಕರಣದಲ್ಲಿ (Actor Darshan) ಹೇಗೆಲ್ಲಾ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ವಿಷಯಗಳು ಒಂದೊಂದಾಗೆ ಬೆಳಕಿಗೆ ಬರುತ್ತಿವೆ. ಕಿಡ್ನ್ಯಾಪ್‌ ಆಗಿದ್ದ ದಿನ ಊಟ ಕೊಡಿಸಿದ್ದ ಡಿ ಗ್ಯಾಂಗ್, ನಾನು ಶಾಖಾಹಾರಿ ಎಂದರೂ ಬಿಡದೇ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದರು ಎನ್ನಲಾಗಿದೆ.

ಚಿತ್ರದುರ್ಗದಿಂದ ಜೂನ್‌ 8ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಆತನನ್ನು ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿಹಾಕಿ ಟಾರ್ಚರ್‌ ನೀಡಲಾಗಿದೆ. ಮಧ್ಯಾಹ್ನ ಊಟ ಕೊಡಿಸಿದಾಗ ನಾನು ಸಸ್ಯಹಾರಿ ಎಂದು ರೇಣುಕಾಸ್ವಾಮಿ ಹೇಳಿದ್ದಾನೆ. ಆದರೂ ಬಿಡದೆ ಆರೋಪಿಗಳು ಬಿರಿಯಾನಿ ತಿನ್ನಿಸಿದ್ದಾರೆ.

ಇದನ್ನೂ ಓದಿ | Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಗ್ಯಾಂಗ್, ಬಾಸ್ ಬರುತ್ತಾರೆ ಒದೆ ತಿನ್ನಲು ರೆಡಿಯಾಗು. ಬಿರಿಯಾನಿ ತಿಂದ್ರೆ ಶಕ್ತಿ ಬರುತ್ತೆ ಎಂದು ಬಿರಿಯಾನಿ ತಿನ್ನಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಪೊಲೀಸರ ಮುಂದೆ ಆರೋಪಿ ದೀಪಕ್ ಹೇಳಿಕೆ ಕೊಟ್ಟಿದ್ದಾನೆ.

ಕಿಡ್ನ್ಯಾಪ್ ಮಾಡಿಕೊಂಡು ಹೋಗುತ್ತಿದ್ದ ಸಿಸಿಟಿವಿ ಫುಟೇಜ್‌ ಲಭ್ಯ

ಡಿ ಗ್ಯಾಂಗ್‌ನಿಂದ ದುರ್ಗದ ಹುಡುಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿದ್ದ ಸಂದರ್ಭದ ಸ್ಫೋಟಕ ವಿಡಿಯೊ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. KA-11-B-7939 ಕಾರಿನಲ್ಲಿ ಜೂನ್ 8 ಬೆಳಗ್ಗೆ 11:30ಕ್ಕೆ ಗುಯಿಲಾಳ್ ಟೋಲ್ ಅನ್ನು ಗ್ಯಾಂಗ್ ಕ್ರಾಸ್ ಮಾಡಿತ್ತು. ಕಾರಿನ ಮುಂಭಾಗ ಡ್ರೈವರ್ ರವಿ ಮತ್ತು ರಾಘವೇಂದ್ರ ಕೂತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ | Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿದ್ದ ಟೀಂ, ಟೋಲ್‌ನಲ್ಲಿ ವಿಐಪಿ ಕಾರ್ಡ್ ಪ್ರದರ್ಶನ ಮಾಡಿ, ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂದು ರಾಘವೇಂದ್ರ ಬಿಲ್ಡಪ್ ಕೊಟ್ಟು ಹೋಗಿದ್ದರು. ಬೆಂಗಳೂರಿಗೆ ಬಿಟ್ಟು ವಾಪಸ್ ಹೋಗುವಾಗ ಡ್ರೈವರ್ ರವಿ ಮಾತ್ರ ವಾಹನದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್‌ 9 ಬೆಳಗಿನ ಜಾವ 4:30 ಕ್ಕೆ ಚಿತ್ರದುರ್ಗದತ್ತ ರವಿ ತೆರಳಿದ್ದ. ಈತ ಇನ್ನುಳಿದ ನಾಲ್ಕು ಮಂದಿ ಜೊತೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಬಿಟ್ಟು ಹೋಗಿದ್ದ.

Continue Reading
Advertisement
Gangster Ravi Pujari
ಕರ್ನಾಟಕ3 mins ago

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

BS Yediyurappa
ಕರ್ನಾಟಕ7 mins ago

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

Allergic Asthma
ಆರೋಗ್ಯ15 mins ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Due to heavy rain water entered the houses of Tharkas Pet village of Chittapur taluk
ಮಳೆ44 mins ago

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Pawan Kalyan
Latest51 mins ago

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Ram Mandir
ದೇಶ51 mins ago

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Celebrity Ethnic Fashion
ಫ್ಯಾಷನ್51 mins ago

Celebrity Ethnic Fashion: ನಟ ಧನುಷ್‌ ಗೌಡರ ಗ್ರ್ಯಾಂಡ್‌ ಎಥ್ನಿಕ್‌ ಜಾಕೆಟ್‌ ವಿಶೇಷತೆ ಏನು?

Actor Darshan
ಕರ್ನಾಟಕ1 hour ago

Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

Samarjit Lankesh Dhool Yebsava Video Song Out
ಸ್ಯಾಂಡಲ್ ವುಡ್1 hour ago

Samarjit Lankesh: ʻಗೌರಿʼ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ’ ಸಾಂಗ್ ರಿಲೀಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

ಟ್ರೆಂಡಿಂಗ್‌