Republic Day Tableau : ಸತತ 14 ವರ್ಷ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶಿಸಿದ ಏಕಮಾತ್ರ ರಾಜ್ಯ ಕರ್ನಾಟಕ - Vistara News

ಕರ್ನಾಟಕ

Republic Day Tableau : ಸತತ 14 ವರ್ಷ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶಿಸಿದ ಏಕಮಾತ್ರ ರಾಜ್ಯ ಕರ್ನಾಟಕ

ಸತತ 13 ವರ್ಷ ಭಾಗವಹಿಸಿದ್ದ ಕರ್ನಾಟಕದ ಸ್ತಬ್ಧಚಿತ್ರವನ್ನು ಈ ವರ್ಷ ತಿರಸ್ಕರಿಸಲಾಗಿತ್ತು. ಇದು ರಾಜಕೀಯ ಚರ್ಚೆಗೂ ಗ್ರಾಸವಾಗಿ, ಕೊನೆಗೆ ಒಪ್ಪಿಗೆ ಪಡೆದಿದೆ.

VISTARANEWS.COM


on

Republic Day Tableau karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಸೇನಾ ಮುಖ್ಯಸ್ಥರು ಹಾಗೂ ದೇಶ ವಿದೇಶಗಳ ಅತಿಥಿಗಳ ಸಮ್ಮುಖದಲ್ಲಿ ಪ್ರದರ್ಶನವಾಗುವ ಗಣರಾಜ್ಯೋತ್ಸವ ಸ್ತಬ್ಧಚಿತ್ರಗಳಲ್ಲಿ (Republic Day Tableau) ಕರ್ನಾಟಕ ಹೊಸ ದಾಖಲೆ ಬರೆದಿದೆ. ಸತತವಾಗಿ 14 ವರ್ಷದಿಂದ ಸ್ತಬ್ಧಚಿತ್ರ ಪ್ರದರ್ಶನ ಮಾಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ನಮ್ಮದು. ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬರಿಗೂ ಆತ್ಮಾಭಿಮಾನದ ಧನ್ಯವಾದಗಳು ಎಂದಿದ್ದಾರೆ.

ಕರ್ನಾಟಕದ ಹಿರಿಮೆ ಮತ್ತು ಅಸ್ಮಿತೆಯನ್ನು ಬಿಂಬಿಸುವ “ನಾರಿ ಶಕ್ತಿ” ಸ್ತಬ್ಧಚಿತ್ರ ದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದಂದು ವಿಜೃಂಭಿಸಲಿದೆ. ಜನಸಾಮಾನ್ಯರ ಸಾಧನೆಯ ಪ್ರತೀಕವಾಗಿರುವ ಈ ಸ್ತಬ್ಧಚಿತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧಗೊಂಡಿದೆ ಎಂದು ಗುರುವಾರ ಪ್ರದರ್ಶನವಾಗುವ ಸ್ತಬ್ಧಚಿತ್ರದ ಭಾವಚಿತ್ರಗಳನ್ನು ಬೊಮ್ಮಾಯಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : Republic Day 2023: ಕರ್ನಾಟಕದ ನಾರಿಶಕ್ತಿ ಟ್ಯಾಬ್ಲೋ ಜತೆ ಉತ್ತರ ಕನ್ನಡದ ಹಾಲಕ್ಕಿ ಸುಗ್ಗಿ ಕುಣಿತ

2000ನೇ ಇಸವಿಯಿಂದ 2022ರವರೆಗಿನ 23 ವರ್ಷದಲ್ಲಿ 19 ಬಾರಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಂಡಿದೆ. 2010ನೇ ಇಸವಿಯಿಂದ ಸತತವಾಗಿ 13 ವರ್ಷ ಕರ್ನಾಟಕ ಭಾಗವಹಿಸಿದೆ. ಇದೀಗ 2023ರಲ್ಲಿಯೂ ಭಾಗವಹಿಸುತ್ತಿದ್ದು, 14 ನೇ ವರ್ಷವಾಗಲಿದೆ. ಇಲ್ಲಿವರೆಗೆ ಕರ್ನಾಟಕ ಪ್ರದರ್ಶಿಸಿದ ಸ್ತಬ್ಧಚಿತ್ರಗಳ ಪಟ್ಟಿ ಈ ಕೆಳಕಂಡಂತಿದೆ.

Republic Day Tableau Karnataka

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Assault Case : ರಸ್ತೆಯಲ್ಲಿ ಶುರುವಾದ ಒಂದು ಸಣ್ಣ ಗಲಾಟೆಯು ವಿಕೋಪಕ್ಕೆ ತಿರುಗಿ ವ್ಯಕ್ತಿಯ ಉಸಿರೇ ನಿಂತು ಹೋಗಿದೆ. ಎದುರು ಮನೆಯವನು ಕಪಾಳಕ್ಕೆ ಹೊಡೆದಿದ್ದಕ್ಕೆ ದುರಂತ ಅಂತ್ಯ ಕಂಡಿದ್ದಾರೆ.

VISTARANEWS.COM


on

By

assault case in bengaluru
Koo

ಬೆಂಗಳೂರು: ವಿಕೋಪಕ್ಕೆ ತಿರುಗಿದ ಜಗಳವು (Assault Case) ವ್ಯಕ್ತಿಯೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ಘಟನೆ ನಡೆದಿದೆ.ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಪ್ರಾಣಪಕ್ಷಿಯೇ ಹಾರಿಹೋಗಿದೆ. ಪ್ರಭುರಾಮ್ ಪ್ರಸಾದ್ (33) ಮೃತ ದುರ್ದೈವಿ.

ನಿನ್ನೆ ಭಾನುವಾರ ರಾತ್ರಿ ಪ್ರಭುರಾಮ್‌ ಹಬ್ಬಕ್ಕೆಂದು ಮಗನ ಜತೆ ಬೈಕ್‌ನಲ್ಲಿ ದೇಗುಲದ ಬಳಿ ಹೋಗಿದ್ದರು. ದಾರಿ ಮಧ್ಯೆ ಬರುವಾಗ ಸ್ಕೂಟರ್‌ನಲ್ಲಿ ಏನೋ ಸೌಂಡ್ ಬರುತ್ತಿದೆ ಎಂದು ಸೈಡ್‌ಗೆ ನಿಲ್ಲಿಸಿ, ಪರಿಶೀಲಿಸುತ್ತಿದ್ದರು. ಇದೇ ವೇಳೆ ಅದೇ ದಾರಿಯಲ್ಲಿ ಕಾರಿನಲ್ಲಿ ಬಂದ ಪರಿಚಯಸ್ಥ ಮಹಿಳೆ ಬೈಕ್‌ಗೆ ಟಚ್ ಮಾಡಿದ್ದಾಳೆ.

ಈ ಬಗ್ಗೆ ಪ್ರಭುರಾಮ್‌ ಪ್ರಶ್ನೆ ಮಾಡಿದ್ದಕ್ಕೆ ಮನೆ ಹತ್ರ ಬಾ ಎಂದು ಹೊರಟು ಹೋಗಿದ್ದಾಳೆ. ಬಳಿಕ ಮನೆ ಬಳಿ ಹೋದಾಗ ಮಹಿಳೆಯ ಪತಿ ಅನಿಲ್ ಎಂಬಾತ ಪ್ರಭುರಾಮ್‌ ಜತೆಗೆ ಜಗಳ ತೆಗೆದಿದ್ದಾನೆ. ಈ ವೇಳೆ ಪ್ರಭುರಾಮ್ ಕೆನ್ನೆಗೆ ಅನಿಲ್‌ 4-5 ಬಾರಿ ಬಲವಾಗಿ ಹೊಡೆದಿದ್ದಾನೆ. ಜಗಳದ ಬಳಿಕ ಮನೆಗೆ ಹೋದ ಪ್ರಭು ನೋವಿನಲ್ಲೇ ಮಲಗಿದ್ದಾನೆ. ಆದರೆ ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾನೆ.

ಪ್ರಭುರಾಮ್ ತಾಯಿ ಪ್ರಕರಣ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ‌ ಅನ್ವಯ IPC ಸೆಕ್ಷನ್ 304 ಅಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

Prajwal Revanna Case: ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಮಹಜರು ಮಾಡಲಾಗುತ್ತಿದೆ.

VISTARANEWS.COM


on

Prajwal Revanna Case site inspection by SIT team in HD Revanna Basavanagudi residence
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಇನ್ನು ಎಚ್.ಡಿ. ರೇವಣ್ಣ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಸವನಗುಡಿಯ ನಿವಾಸದಲ್ಲಿ ಮಹಜರು ಮಾಡಲಾಗಿದೆ.

ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿರುವ ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದೆದುರು ಮಹಜರು ಮಾಡಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಬೆಡ್‌ರೂಮ್‌ನಲ್ಲಿ ಅಧಿಕಾರಿಗಳಿಗೆ ದೂರುದಾರೆ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ? ಏನೇನು ನಡೆದಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ನೇರವಾಗಿ ಮಾಹಿತಿ ಪಡೆದು ಹೇಳಿಕೆಯಂತೆ ಮಹಜರು ಪ್ರಕ್ರಿಯೆಯನ್ನು ನಡೆಸಲಾಗಿದೆ.

ನೋಟಿಸ್ ಕೊಟ್ಟು ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ: ವಕೀಲ ಗೋಪಾಲ್

ಎಚ್‌.ಡಿ. ರೇವಣ್ಣ ಪರ ವಕೀಲ ಗೋಪಾಲ್ ಪ್ರತಿಕ್ರಿಯೆ ನೀಡಿ, ಈಗಾಗಲೇ ಹಲವಾರು ವಿಚಾರಗಳು ಎಲ್ಲರಿಗೂ ತಿಳಿದಿದೆ. ನಮ್ಮ‌ ಕಕ್ಷಿದಾರ ಎಚ್.ಡಿ. ರೇವಣ್ಣ ಅವರ ಹೊಳೆನರಸೀಪುರ ಮನೆಯಲ್ಲಿ ಮಹಜರು ನಡೆದಿದೆ. ಎರಡು ಪ್ರಕರಣಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಮಹಜರು ಮಾಡುವ ಸಂದರ್ಭದಲ್ಲಿ ನೋಟಿಸ್ ಕೊಡಬೇಕು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ‌ ಮಹಜರು ಪ್ರಕ್ರಿಯೆ ಮಾಡಲಾಗಿದೆ. ಭವಾನಿ ರೇವಣ್ಣ ಅವರು ಮಹಜರು ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ. ಹೊಳೆನರಸೀಪುರದಲ್ಲಿ ಮಹಜರು ನಡೆದಾಗ ನೋಟಿಸ್ ನೀಡಿದರು. ನನ್ನ ಕಡೆಯಿಂದ ಅವರಿಗೆ ಸಹಕಾರ ನೀಡಿದ್ದೇನೆ. ಹೊಳೆನರಸೀಪುರ ಮಹಜರು ಸಂದರ್ಭದಲ್ಲಿ 4-5-2024ರಲ್ಲಿ ಬಸವನಗುಡಿ ಮನೆಯಲ್ಲಿ ಮಹಜರು ಮಾಡಲು‌ ಸಹಕಾರ ಕೇಳಿದರು. ಈ ಬಗ್ಗೆ ಎಸ್‌ಐಟಿಯಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ಕೊಟ್ಟು, ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ. ಬಸವನಗುಡಿಯ ಮನೆಯ‌‌ ಮಹಜರು ಸಂದರ್ಭದಲ್ಲಿ ನನಗೆ‌ ಮನೆಯೊಳಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading

ಕರ್ನಾಟಕ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today:ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತ್ತು ಶನಿವಾರ ಚಿನ್ನದ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,605ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,840 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,050 ಮತ್ತು ₹6,60,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,205 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,640 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,050 ಮತ್ತು ₹7,20,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ62,00072,200
ಮುಂಬಯಿ66,05072,200
ಬೆಂಗಳೂರು66,05072,050
ಚೆನ್ನೈ66,10072,110

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.
2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ:Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Continue Reading

ಬೆಂಗಳೂರು

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Delhi Metro : ದೆಹಲಿ ಮೆಟ್ರೋ ರೈಲಲ್ಲಿ ಅಪ್ಪಿಕೊಂಡು ನಿಂತ ಜೋಡಿಯೊಂದು ತುಟಿಗೆ ತುಟಿಯಿಟ್ಟು ಚುಂಬಿಸಿದ್ದರು. ಇದು ಸಹ ಪ್ರಯಾಣಿಕರಿಗೆ ಮುಜುಗರ ಉಂಟಾಗಿತ್ತು. ಈಗ ಇದೆ ರೀತಿಯ ವರ್ತನೆ ನಿಧಾನವಾಗಿ ಬೆಂಗಳೂರು ಮೆಟ್ರೋ ರೈಲಲ್ಲೂ (Namma Metro ) ಶುರುವಾಗಿದೆ. ಯುವಕ-ಯುವತಿಯ ವರ್ತನೆಗೆ ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ಕೇಳಿ ಬಂದಿದೆ.

VISTARANEWS.COM


on

By

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
assault case in bengaluru
ಬೆಂಗಳೂರು46 mins ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ57 mins ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ1 hour ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ1 hour ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ1 hour ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ1 hour ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ1 hour ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ2 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು2 hours ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ20 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ22 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌