Site icon Vistara News

Karnataka Live News : ಗಟ್ಟಿಯಾಯ್ತು ಬಿಜೆಪಿ ಮೈತ್ರಿ; ಪಕ್ಷದ ನಿರ್ಧಾರಕ್ಕೆ ಬದ್ಧವೆಂದ ಜೆಡಿಎಸ್‌ ಶಾಸಕರು, ನಾಯಕರು!

karnataka live news
Adarsha Anche

Lok Sabha Election 2024 : ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

Lok Sabha Election 2024 : ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ?
Deepa S

ಬರ್ತ್‌ಡೇ ಪಾರ್ಟಿಯಲ್ಲಿ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ

ಕಾಡುಗೋಡಿ ಬಳಿಯ ಬೆಲತ್ತೂರಿನಲ್ಲಿ ಶನಿವಾರ ಹೀಲಿಯಂ ಗ್ಯಾಸ್‌ ತುಂಬಿದ್ದ ಬಲೂನ್‌ ಬ್ಲಾಸ್ಟ್‌ (Balloon blast) ಆಗಿದೆ. ಈ ಅವಘಡದಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ. ವಿಜಯ್ ಕುಮಾರ್ (44), ಧ್ಯಾನ್(7) , ಸಂಜಯ್(8), ಸೋಹಿಲಾ (3) ಗಾಯಾಳುಗಳು.

Balloon blast : ಬರ್ತ್‌ಡೇ ಪಾರ್ಟಿಯಲ್ಲಿ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ
Prabhakar R

ಬೆಂಗಳೂರಿನಲ್ಲಿ ಕಾರ್‌ಪೂಲಿಂಗ್ ನಿಷೇಧ? ಉಲ್ಲಂಘಿಸಿದರೆ 10 ಸಾವಿರ ರೂ.ದಂಡ

ರಾಜಧಾನಿಯಲ್ಲಿ ಕಾರ್‌ಪೂಲಿಂಗ್ ನಿಷೇಧ ಮಾಡಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಇದರಿಂದ ಆ್ಯಪ್‌ಗಳನ್ನು ಬಳಸಿ ವೈಟ್ ಬೋರ್ಡ್ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ನಿಯಮ ಉಲ್ಲಂಘಿಸಿದರೆ ವಾಹನ ಚಾಲಕರಿಗೆ 5ರಿಂದ 10 ಸಾವಿರ ರೂ.ವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

Carpooling Ban: ಬೆಂಗಳೂರಿನಲ್ಲಿ ಕಾರ್‌ಪೂಲಿಂಗ್ ನಿಷೇಧ? ಉಲ್ಲಂಘಿಸಿದರೆ 10 ಸಾವಿರ ರೂ.ದಂಡ
Adarsha Anche

Cauvery Water Dispute : ಕಾವೇರಿ ಒಳಹರಿವು ಹೆಚ್ಚಳ, ರಾಜ್ಯ ನಿರಾಳ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾವೇರಿ ವಿವಾದದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದಾರೆ. ಈಗ ಮಳೆಯಾಗಿ ಒಳಹರಿವು ಹೆಚ್ಚಾಗಿದ್ದರಿಂದ ರಾಜ್ಯದ ಜನ ನಿರಾಳರಾದಂತೆ ಆಗಿದೆ ಎಂದು ಹೇಳಿದ್ದಾರೆ.

Cauvery Water Dispute : ಕಾವೇರಿ ಒಳಹರಿವು ಹೆಚ್ಚಳ, ರಾಜ್ಯ ನಿರಾಳ: ಡಿಸಿಎಂ ಡಿ.ಕೆ. ಶಿವಕುಮಾರ್
Prabhakar R

ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ವಿದ್ಯುತ್ ತಂತಿ ತಗುಲಿ ರೈತ ದಂಪತಿ ಮೃತಪಟ್ಟಿರುವ ಘಟನೆ ಬೀದರ್‌ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (61), ಶರಣಮ್ಮ (50) ಮೃತರು. ಹೊಲದಲ್ಲಿ ಜೋತುಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದರಿಂದ ಅವಘಡ ಸಂಭವಿಸಿದೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Electric Shock: ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

Exit mobile version