Site icon Vistara News

Karnataka Live News : ಗಟ್ಟಿಯಾಯ್ತು ಬಿಜೆಪಿ ಮೈತ್ರಿ; ಪಕ್ಷದ ನಿರ್ಧಾರಕ್ಕೆ ಬದ್ಧವೆಂದ ಜೆಡಿಎಸ್‌ ಶಾಸಕರು, ನಾಯಕರು!

karnataka live news
Adarsha Anche

BJP JDS alliance : ಮೈತ್ರಿಯಾಗಿದೆಯಷ್ಟೇ, ವರಿಷ್ಠರು ಸೀಟು ಹಂಚಿಕೆ ಮಾಡ್ತಾರೆ: ಬಿ.ಎಸ್.‌ ಯಡಿಯೂರಪ್ಪ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾವು ಆ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹೇಳಿದ್ದಾರೆ.

BJP JDS alliance : ಮೈತ್ರಿಯಾಗಿದೆಯಷ್ಟೇ, ವರಿಷ್ಠರು ಸೀಟು ಹಂಚಿಕೆ ಮಾಡ್ತಾರೆ: ಬಿ.ಎಸ್.‌ ಯಡಿಯೂರಪ್ಪ
Deepa S

ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಸ್ಥರ ಆಕ್ರೋಶ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ದಂಪತಿ ಮೇಲೆ ಕಾರು ಹರಿಸಿದ (Road Accident) ನಟ ನಾಗಭೂಷಣ್‌ (Actor Nagabhushana) ವಿರುದ್ಧ ಕುಟುಂಬಸ್ಥರು ಹಿಡಿಶಾಪ ಹಾಕಿದ್ದಾರೆ. ಆತ ಜೈಲಿಗೆ ಹೋದರೂ ಪರವಾಗಿಲ್ಲ, ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಮೃತ ಪ್ರೇಮಾ ಅವರ ಪುತ್ರಿ ಯಶಸ್ವಿನಿ ಆಕ್ರೋಶ ಹೊರಹಾಕಿದ್ದಾರೆ.

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ
Deepa S

ಯಮಸ್ವರೂಪಿಯಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ; ರಸ್ತೆ ದಾಟುತ್ತಿದ್ದ ಯುವಕ ಸಾವು

ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗ ರಸ್ತೆ ದಾಟುತ್ತಿದ್ದ ಯುವಕನಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ ದುರ್ದೈವಿ.

Road Accident : ಯಮಸ್ವರೂಪಿಯಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ; ರಸ್ತೆ ದಾಟುತ್ತಿದ್ದ ಯುವಕ ಸಾವು
Adarsha Anche

Lingayat CM : ಲಿಂಗಾಯತರು ಸಿಎಂ ಆಗಬೇಕೆಂಬ ಶಾಮನೂರು ಹೇಳಿಕೆಯಲ್ಲಿ ಅರ್ಥ ಇದೆ: ಬಿ.ವೈ. ವಿಜಯೇಂದ್ರ

ಲಿಂಗಾಯತರು ಸಿಎಂ ಆಗಬೇಕು ಎಂದು ಹಿರಿಯರಾದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆಂದರೆ ಅದರಲ್ಲಿ ಅರ್ಥ ಇರುತ್ತದೆ. ಅಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತವು ಒಂದು ಜಾತಿಗೆ ಸೀಮಿತ ಆಗಿರಬಾರದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Lingayat CM : ಲಿಂಗಾಯತರು ಸಿಎಂ ಆಗಬೇಕೆಂಬ ಶಾಮನೂರು ಹೇಳಿಕೆಯಲ್ಲಿ ಅರ್ಥ ಇದೆ: ಬಿ.ವೈ. ವಿಜಯೇಂದ್ರ
Adarsha Anche

BJP Karnataka : ಒಂದು ಸಮುದಾಯವನ್ನು ಮಾತ್ರವೇ ಓಲೈಸುವ ಸಿಎಂ ಸಿದ್ದರಾಮಯ್ಯ; ಬಿಜೆಪಿ ಸರಣಿ ಟ್ವೀಟ್

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕರ್ನಾಟಕವು ನೇರವಾಗಿ ಮುಗಿಬಿದ್ದಿದೆ. ಜಾತಿ ರಾಜಕೀಯವನ್ನು ಪ್ರಸ್ತಾಪ ಮಾಡಿದ್ದಲ್ಲದೆ, ಕಾಂಗ್ರೆಸ್‌ ಒಳಗೆ ಹಲವು ನಾಯಕರನ್ನು ಹತ್ತಿಕ್ಕಿದ್ದಾರೆ ಎಂದು ಆರೋಪ ಮಾಡಿದೆ.

BJP Karnataka : ಒಂದು ಸಮುದಾಯವನ್ನು ಮಾತ್ರವೇ ಓಲೈಸುವ ಸಿಎಂ ಸಿದ್ದರಾಮಯ್ಯ; ಬಿಜೆಪಿ ಸರಣಿ ಟ್ವೀಟ್
Exit mobile version