Lokayukta Raid: ರಾಜ್ಯದ 56 ಕಡೆ ಲೋಕಾಯುಕ್ತ ದಾಳಿ; ಮನೆ ತುಂಬ ಕೋಟಿ ಕೋಟಿ ಹಣ, ಕೈ ಇಟ್ಟಲ್ಲೆಲ್ಲ ಚಿನ್ನ - Vistara News

ಕರ್ನಾಟಕ

Lokayukta Raid: ರಾಜ್ಯದ 56 ಕಡೆ ಲೋಕಾಯುಕ್ತ ದಾಳಿ; ಮನೆ ತುಂಬ ಕೋಟಿ ಕೋಟಿ ಹಣ, ಕೈ ಇಟ್ಟಲ್ಲೆಲ್ಲ ಚಿನ್ನ

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯದ 56 ಕಡೆ ಲೋಕಾಯುಕ್ತ ಮೆಗಾ ರೇಡ್9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಒಬ್ಬೊಬ್ಬ ಅಧಿಕಾರಿಯ ಬಳಿಯಿಂದಲೂ ಕೋಟ್ಯಂತರ ರೂ. ನಗದು, ಭಾರಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Lokayukta Raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ (‌Corrupt Officers) ಲೋಕಾಯುಕ್ತ ಶಾಕ್‌ ಮುಟ್ಟಿಸಿದೆ. ರಾಜ್ಯದ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ (Lokayukta Raid) ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದು, ಒಬ್ಬೊಬ್ಬ ಅಧಿಕಾರಿ ಬಳಿಯಿಂದಲೂ ಕೋಟ್ಯಂತರ ರೂ. ನಗದು, ಭಾರಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ.

ಕಲಬುರಗಿಯಲ್ಲಿ ಬಿಬಿಎಂಪಿ ರೆವೆನ್ಯೂ ಅಧಿಕಾರಿ ಬಸವರಾಜ ಮಾಗಿ, ಮಂಡ್ಯದಲ್ಲಿ ಗ್ರಾಮೀಣ ನೀರು ಸರಬರಾಜು ನಿವೃತ್ತ ಎಕ್ಷಿಕ್ಯೂಟಿವ್‌ ಇಂಜಿನಿಯರ್‌ ಶಿವರಾಜು ಎಸ್.‌, ಚಿತ್ರದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಚೀಫ್‌ ಇಂಜಿನಿಯರ್‌ ಎಂ. ರವೀಂದ್ರ, ಧಾರವಾಡದಲ್ಲಿ ಪ್ರಾಜೆಕ್ಟ್‌ ಡೈರೆಕ್ಟರ್‌ ಶೇಖರ ಗೌಡ, ಬೆಳಗಾವಿಯಲ್ಲಿ ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಮಹಾದೇವ ಬನ್ನೂರ್‌, ದಾವಣೆಗೆರೆಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಡಿ.ಎಚ್‌ ಉಮೇಶ್‌, ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಎಂ.ಎಸ್‌ ಪ್ರಭಾಕರ್‌, ಮೈಸೂರಿನಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಮಹೇಶ್‌ ಕೆ., ಹಾಸನದಲ್ಲಿ ಸೆಕ್ರೆಟರಿ ಎನ್.ಎಂ ಜಗದೀಶ್‌, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಕೆ.ಜಿ ಜಗದೀಶ್‌ ಇವರುಗಳ ಮನೆಗಳು, ಕಚೇರಿಗಳು ಹಾಗೂ ಇತರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ದಾಳಿ ವೇಳೆ ಸಿಕ್ಕ ಹಣ, ವಸ್ತುಗಳ ವಿವರ

ಡಿ. ಮಹದೇವ ಬನ್ನೂರ್: ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ-ವಿಭಾಗ, ಬೆಳಗಾವಿ-ಒಟ್ಟು 4 ಸ್ಥಳಗಳಲ್ಲಿ ಶೋಧ

    ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ– 3 ವಾಸದ ಮನೆಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ 1,00,50,000 ರೂ.

    ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 184,122 ರೂ. ನಗದು, 20,33,526 ರೂ. ಬೆಲೆ ಬಾಳುವ ಚಿನ್ನಾಭರಣಗಳು, 7,50,000/- ರೂ ಬೆಲೆ ಬಾಳುವ ವಾಹನಗಳು, ಎಲ್ಲ ಸೇರಿ ಒಟ್ಟು ಮೌಲ್ಯ 29,67,648 ರೂ., ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

    ಡಿ.ಎಚ್. ಉಮೇಶ್: ಕಾರ್ಯಪಾಲಕ ಅಭಿಯಂತರರು(ವಿ), ಕೆ.ಪಿ.ಟಿ.ಸಿ.ಎಲ್, ಚಿಕ್ಕಮಗಳೂರು, ನೌಕರನಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ

    ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ– 4 ನಿವೇಶನಗಳು, 4 ವಾಸದ ಮನೆಗಳು, 2 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 4,83,00,000 ರೂ.

    ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 40,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 15,00,000 ರೂ., ಬೆಲೆಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ 55,00,000 ರೂ.

    ಎಂ. ಎಸ್. ಪ್ರಭಾಕರ್: ಸಹಾಯಕ ಕಾರ್ಯಪಾಲಕ ಅಭಿಯಂತರರು(ವಿ), ಬೆಸ್ಕಾಂ ವಿಜಿಲೆನ್ಸ್ ಪೊಲೀಸ್ ಠಾಣೆ, ದಾವಣಗೆರೆ, ನೌಕರನಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧ

    ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ– 2 ನಿವೇಶನಗಳು, 2 ವಾಸದ ಮನೆಗಳು, 4 ಎಕರೆ 33 ಗುಂಟೆ ಕೃಷಿ ಜಮೀನು. ಒಟ್ಟು ಮೌಲ್ಯ ರೂ. 1.57.97,391 ರೂ.

    ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ– 3,00,000 ರೂ. ನಗದು, 30,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 50,000 ರೂ. ಬೆಲೆಬಾಳುವ ವಾಹನಗಳು, 10,00,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. 4,35,00,00 ರೂ., ಕರ್ನಾಟಕ ಲೋಕಾಯುಕ, ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

    ಶೇಖರ್ ಗೌಡ ಹನುಮಗೌಡ ಕುರಡಗಿ: ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬೆಳಗಾವಿ, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ

    ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ– 5 ನಿವೇಶನ, 4 ವಾಸದ ಮನೆಗಳು, 83 ಎಕರೆ. ಕೃಷಿ ಜಮೀನು ಎಲ್ಲಾ ಸೇರಿ ಒಟ್ಟು ಮೌಲ್ಯ 6,73,18,999 ರೂ.

      ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,65,000 ರೂ. ನಗದು, ವಾಹನಗಳು 88,17,645 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಕರ್ನಾಟಕ ಲೋಕಾಯುಕ, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ

      ಎಂ. ರವೀಂದ್ರ, ಮುಖ್ಯ ಅಭಿಯಂತರರು(ನಿವೃತ್ತ), ಲೋಕೋಪಯೋಗಿ ಇಲಾಖೆ, ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧ

      ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 6 ವಾಸದ ಮನೆ. 49-16 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 3,92,55,000 ರೂ.

      ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ– 37.500 ರೂ. ನಗದು, 83,00,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 1,00,00,000 ರೂ. ಮೌಲ್ಯದ ವಾಹನಗಳು, ರೂ 50,00,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳ ಮೌಲ್ಯವು 2,33,37,500 ರೂ. ಇದೆ.

      ಕೆ. ಜಿ. ಜಗದೀಶ: ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆ, ನೌಕರನಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ

      ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 5 ನಿವೇಶನಗಳು, 7 ವಾಸದ ಮನೆಗಳು, 36- 20 ಎಕರೆ ಕೃಷಿ ಜಮೀನು. ಒಟ್ಟು ಮೌಲ್ಯ 5.01,80,000 ರೂ.

      ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 2,400 ರೂ. ನಗದು. 3,11,302 ರೂ. ಬೆಲೆ ಬಾಳುವ ಚಿನ್ನಾಭರಣಗಳು, 18,00,000 ರೂ. ಬೆಲೆಬಾಳುವ ವಾಹನಗಳು, 3,50,000 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು 24,61,302 ರೂ., ಕರ್ನಾಟಕ ಲೋಕಾಯುಕ್ತ, ಮಂಡ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

      ಶಿವರಾಜು, ಎಸ್: ಕಾರ್ಯಪಾಲಕ ಅಭಿಯಂತರರು(ನಿವೃತ್ತ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಡ್ಯ ಜಿಲ್ಲೆ. ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ

        ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನ, 3 ವಾಸದ ಮನೆಗಳು, 10 ಎಕರೆ ಕೃಷಿ ಜಮೀನು, ಒಟ್ಟು ಮೌಲ್ಯ ರೂ. 2,91,04.500 ರೂ.

        ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 6,00,000 ರೂ. ನಗದು, 8,00,000 ರೂ. ಬೆಲೆ ಬಾಳುವ ಚಿನ್ನಾಭರಣ 90,00,000 ರೂ. ಮೌಲ್ಯದ ವಾಹನಗಳು, 2,06,48,500 ರೂ. ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ 3,05,48,590 ರೂ. ಕರ್ನಾಟಕ ಲೋಕಾಯುಕ್ತ, ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ

        ವಿಜಯಣ್ಣ: ತಹಶೀಲ್ದಾರ್, ಹಾರೋಹಳ್ಳಿ ತಾಲೂಕು, ರಾಮನಗರ ಜಿಲ್ಲೆ, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ

          ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 9 ವಾಸದ ಮನೆಗಳು, 13 ಎಕರೆ ಕೃಷಿ ಜಮೀನು, ಒಟ್ಟು ಮೌಲ್ಯ 2,53,98,000 ರೂ.

          ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 2,42,000 ರೂ. ನಗದು, 22,57,000 ರೂ. ಬೆಲೆ ಬಾಳುವ ಚಿನ್ನಾಭರಣ 43,15,000 ರೂ. ಮೌಲ್ಯದ ವಾಹನಗಳು, 34,00,000 ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಮತ್ತು ಇತರೆ ಸೇರಿ ಒಟ್ಟು 1,02,14,000 ರೂ., ಕರ್ನಾಟಕ ಲೋಕಾಯುಕ, ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

          ಮಹೇಶ್. ಕೆ: ಅಧೀಕ್ಷಕ ಅಭಿಯಂತರರು, ಕಬಿನಿ ಮತ್ತು ವರುಣ ನಾಲಾ ವೃತ್ತ, ಮೈಸೂರು, ಸರ್ಕಾರಿ ನೌಕರನಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ

            ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನ. 3 ವಾಸದ ಮನೆಗಳು, 11 ಎಕರೆ 20 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ 3,93,00,000 ರೂ.

            ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ-22,80,705 ರೂ. ನಗದು ಸೇರಿ ಎಲ್ಲಾ ಸೇರಿ ಒಟ್ಟು ಮೌಲ್ಯ 50,00,000 ರೂ., ಕರ್ನಾಟಕ ಲೋಕಾಯುಕ್ತ, ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

            ಇದನ್ನೂ ಓದಿ: Atal Setu: 17 ಸಾವಿರ ಕೋಟಿ ರೂ. ವೆಚ್ಚದ ಅಟಲ್‌ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು; ಭಾರಿ ಭ್ರಷ್ಟಾಚಾರ?

            ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
            Continue Reading
            Click to comment

            Leave a Reply

            Your email address will not be published. Required fields are marked *

            Latest

            ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

            VISTARANEWS.COM


            on

            ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
            ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
            ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
            2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
            2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
            ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

            Continue Reading

            Latest

            ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

            VISTARANEWS.COM


            on

            ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
            ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
            ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
            ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
            ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

            ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದ್ದು, ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
            ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
            ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರ ನಿರ್ಣಯಿಸಿತ್ತು. ಈ ಸಂಬಂಧ ಉತ್ತರ ಕರ್ನಾಟಕದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೆ, ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಹ ಮಾಡಿದ್ದರು.
            ಈ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
            ಜೋಶಿ ಮನವಿಗೆ ಅಶ್ವಿನಿ ವೈಷ್ಣವ್ ಸ್ಪಂದನೆ: ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ. ಪ್ರಯುಕ್ತ ಸಚಿವ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ ಅವರಿಗೆ ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

            Continue Reading

            Latest

            ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

            VISTARANEWS.COM


            on

            ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಜೈಲು ವಾಸ ಅನುಭವಿಸುತ್ತಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದು, ದೀರ್ಘಕಾಲದ ಕಾನೂನು ಹೋರಾಟದ ನಂತರ ಅವರಿಗೆ ತಾತ್ಕಾಲಿಕ ಜಯ ಸಿಕ್ಕಂತಾಗಿದೆ.

            ಸುಮಾರು 102 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಗಂಭೀರ ಆರೋಪದ ಮೇಲೆ 2025ರ ಮಾರ್ಚ್ 3ರಂದು ಡಿಆರ್​​ಐ (DRI) ಅಧಿಕಾರಿಗಳು ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠವು ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ, ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ (COFEPOSA) ಕಾಯ್ದೆಯ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿದ್ದರಿಂದ, ನಟಿಗೆ ಕಳೆದ ಒಂದು ವರ್ಷದಿಂದ ಜಾಮೀನು ಸಿಗದೆ ಜೈಲಿನಲ್ಲೇ ಉಳಿಯುವಂತಾಗಿತ್ತು.

            ಇದೀಗ ಒಂದು ವರ್ಷದ ಕಠಿಣ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದ್ದು, ರನ್ಯಾ ರಾವ್ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ. ಹಗರಣದ ಆಳ ಮತ್ತು ವ್ಯಾಪ್ತಿ ದೊಡ್ಡದಾಗಿರುವುದರಿಂದ ತನಿಖಾ ಸಂಸ್ಥೆಗಳು ತನಿಖೆಯನ್ನು ಮುಂದುವರಿಸಿವೆ. ಸದ್ಯಕ್ಕೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದರೂ, ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪಾಲಿಸಬೇಕಿದೆ. ಈ ಹೈಪ್ರೊಫೈಲ್ ಪ್ರಕರಣವು ಚಿತ್ರರಂಗದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು.

            Continue Reading

            Latest

            ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

            VISTARANEWS.COM


            on

            BJP State President B Y Vijayendra latest statement in bengaluru

            ಬೆಂಗಳೂರು: ರಾಜ್ಯಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.


            ಈ ಕುರಿತು ಎಕ್ಸ್‌ ಖಾತೆಯಲ್ಲಿ ತಮ್ಮ ಹೇಳಿಕೆಯನ್ನು ಪೋಸ್ಟ್‌ ಮಾಡಿರುವ ಅವರು, ಕಳೆದ ವರ್ಷ ಎರಡು ತಿಂಗಳ ಅವಧಿಗೆ ಗ್ರಹಲಕ್ಷ್ಮಿ ಹಣವನ್ನೇ ನುಂಗಿ ಹಾಕಿದ ರಾಜ್ಯ ಸರ್ಕಾರ ಈ ವರ್ಷ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.


            ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.


            ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ, ಮುಸ್ಲಿಮರ ತುಷ್ಟಿಕರಣ ಹೀಗೆ ಹಲವು ಆಂತರಿಕ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿ ಹೋಗಿದ್ದಾರೆ. ಇದರ ನೇರ ಪರಿಣಾಮ ರಾಜ್ಯದ ಜನರ ಮೇಲೆ ಉಂಟಾಗುತ್ತಿದೆ.


            ಸರ್ಕಾರಿ ನೌಕರರಿಗೆ ಸಂಬಳವನ್ನೇ ಕೊಡಲು ಸಾಧ್ಯವಾಗದ ಈ ಸರಕಾರ ಈ ವರ್ಷ ಬಿರು ಬೇಸಿಗೆ ಹಾಗೂ ಬರದ ಛಾಯೆಯಲ್ಲಿ ಈಗಾಗಲೇ ಬಸವಳಿದು ಹೋಗಿರುವ ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದಿದ್ದಾರೆ.


            ಪ್ರತಿಪಕ್ಷವಾಗಿ ಬಿಜೆಪಿ ಸರ್ಕಾರವನ್ನು ಬಡಿದೆಬ್ಬಿಸಿ ಕುಡಿಯುವ ನೀರಿಗೂ ಪರಿತಪಿಸುತ್ತಿರುವ ಜನ , ಜಾನುವಾರು ನೆರವಿಗೆ ಮುಂದಾಗುವಂತೆ ಹೋರಾಟ ನಡೆಸಲು ಬದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

            Continue Reading
            Advertisement
            Latest3 hours ago

            ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

            Latest4 hours ago

            ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

            Latest4 hours ago

            ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

            Latest5 hours ago

            ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

            Latest5 hours ago

            ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

            Latest5 hours ago

            ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

            Latest6 hours ago

            ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

            Latest6 hours ago

            ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

            Latest7 hours ago

            ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

            ಅವಿಭಾಗೀಕೃತ7 hours ago

            “ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

            galipata neetu
            ಕಿರುತೆರೆ2 years ago

            Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

            Kannada Serials
            ಕಿರುತೆರೆ3 years ago

            Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

            Sharmitha Gowda in bikini
            ಕಿರುತೆರೆ3 years ago

            Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

            Kannada Serials
            ಕಿರುತೆರೆ3 years ago

            Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

            Bigg Boss- Saregamapa 20 average TRP
            ಕಿರುತೆರೆ3 years ago

            Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

            Kannada Serials
            ಕಿರುತೆರೆ3 years ago

            Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

            Bigg Boss' dominates TRP; Sita Rama fell to the sixth position
            ಕಿರುತೆರೆ2 years ago

            Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

            geetha serial Dhanush gowda engagement
            ಕಿರುತೆರೆ2 years ago

            Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

            Kannada Serials
            ಕಿರುತೆರೆ3 years ago

            Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

            varun
            ಕಿರುತೆರೆ2 years ago

            Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

            Action Prince Dhruva Sarja much awaited film Martin to hit the screens on October 11
            ಸಿನಿಮಾ2 years ago

            Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

            Sudeep's birthday location shift
            ಸ್ಯಾಂಡಲ್ ವುಡ್2 years ago

            Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

            Actor Darshan
            ಸ್ಯಾಂಡಲ್ ವುಡ್2 years ago

            Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

            ಮಳೆ2 years ago

            Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

            karnataka Weather Forecast
            ಮಳೆ2 years ago

            Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

            Bellary news
            ಬಳ್ಳಾರಿ2 years ago

            Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

            Maravoor bridge in danger Vehicular traffic suspended
            ದಕ್ಷಿಣ ಕನ್ನಡ2 years ago

            Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

            Wild Animals Attack
            ಚಿಕ್ಕಮಗಳೂರು2 years ago

            Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

            Karnataka Weather Forecast
            ಮಳೆ2 years ago

            Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

            assault case
            ಬೆಳಗಾವಿ2 years ago

            Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

            ಟ್ರೆಂಡಿಂಗ್‌