Karnataka Politics : ಸೆ. 16ರಿಂದ ರಾಜ್ಯಾದ್ಯಂತ ಹೋರಾಟ; ಸರ್ಕಾರ ತೊಲಗುವವರೆಗೂ ಅಭಿಯಾನ ಬಿಎಸ್‌ವೈ ಗುಡುಗು - Vistara News

ಕರ್ನಾಟಕ

Karnataka Politics : ಸೆ. 16ರಿಂದ ರಾಜ್ಯಾದ್ಯಂತ ಹೋರಾಟ; ಸರ್ಕಾರ ತೊಲಗುವವರೆಗೂ ಅಭಿಯಾನ ಬಿಎಸ್‌ವೈ ಗುಡುಗು

Karnataka Politics : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ತಿರುಗಿ ಬಿದ್ದಿದೆ. ಇಂದಿನಿಂದ ಪ್ರತಿಭಟನೆ ನಡೆಸಲು ಮುಂದಾಗಿದೆ. ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಎಸ್‌ವೈ ಗುಡುಗಿದ್ದಾರೆ.

VISTARANEWS.COM


on

BJP protest against Congress Government in freedom park
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ (Karnataka Congress Government) ಎಲ್ಲದರಲ್ಲೂ ವಿಫಲವಾಗಿದೆ. ಜನಸಾಮಾನ್ಯರನ್ನು ಮರೆತಿದೆ. ಈ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಹೀಗಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಸೆಪ್ಟೆಂಬರ್‌ 16ರಂದು ಕುರುಡುಮಲೆ ವಿನಾಯಕನ ದರ್ಶನ ಪಡೆಯುತ್ತೇವೆ. ದರ್ಶನ ಪಡೆದು ರಾಜ್ಯಾದ್ಯಂತ ಅಭಿಯಾನ ನಡೆಸಲಿದ್ದೇವೆ. ಇಷ್ಟು ದಿನ ನಾನು ಶಾಂತವಾಗಿದ್ದೆ. ಇನ್ನು ಮುಂದೆ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (Former CM BS Yediyurappa) ಗುಡುಗಿದ್ದಾರೆ. ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ (Karnataka Politics) ಪ್ರತಿಭಟನೆ ಪರ್ವ ಆರಂಭವಾಗಲಿದೆ ಎಂಬ ಸಂದೇಶವನ್ನು ರವಾನೆ ಮಾಡಿದರು.

ಫ್ರೀಡಂ ಪಾರ್ಕ್‌ನಲ್ಲಿ (Freedom Park) ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ (BJP Protest) ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ, ಈ ಸರ್ಕಾರ ಜನರಿಗೆ ನೀರು ಕೊಟ್ಟಿಲ್ಲ. ಜನರನ್ನು ಸಂಪೂರ್ಣವಾಗಿ ಮರೆತಿದೆ. ಸರ್ಕಾರದ ವಿರುದ್ಧ ಈಗ ಹೋರಾಟ ಶುರುವಾಗಿದೆ. ದೊಡ್ಡ ಪ್ರಮಾಣದ ಕಾರ್ಯಕರ್ತರು ಸೇರಿದ್ದಾರೆ. ಈ ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ ಮುಂದುವರಿಯುತ್ತದೆ. ಈ ಹೋರಾಟಕ್ಕೆ ನಿಮ್ಮೆಲ್ಲರ ಬೆಂಬಲ ಇರಬೇಕು. ನೀವು ನನಗೆ ಆಶೀರ್ವಾದ ಮಾಡಿ ಕಳಿಸಿಕೊಡಿ. ಈ ಸರ್ಕಾರ ತೊಲಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಬಿ.ಎಸ್.‌ ಯಡಿಯೂರಪ್ಪ ಹೇಳಿದರು.

BJP protest against Congress Government

ಕಾವೇರಿ ಹೋರಾಟದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.‌ ನಾವು ಕಾವೇರಿ ಹೋರಾಟವನ್ನು ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ ಮಳೆ ಇಲ್ಲದೆ ಹಲವೆಡೆ ನೀರಿಲ್ಲ. ಬರಗಾಲ ಘೋಷಣೆ ಮಾಡದೇ ಮೀನಮೇಷ ಎಣಿಸುತ್ತಿರುವುದು ಖಂಡನೀಯ. ಒಂದು ಕಡೆ ಯೋಜನೆ ಅಂತ ಕೊಟ್ಟು, ಮತ್ತೊಂದು ಕಡೆಯಿಂದ ಕಿತ್ತುಕೊಂಡಿದೆ ಎಂದು ಬಿ.ಎಸ್.‌ ಯಡಿಯೂರಪ್ಪ ಗುಡುಗಿದರು.

ಕುಮಾರಕೃಪದಲ್ಲಿ ದಂಧೆ: ಬೊಮ್ಮಾಯಿ ಕಿಡಿ

ಕಾಂಗ್ರೆಸ್‌ನವರು ಅಕ್ಕಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಇವರು ಕೊಟ್ಟಿರುವ ಒಂದು ಕಾಳು ಕೂಡ ತಲುಪಿಲ್ಲ. ಜನರಿಗೆ ಹೋಗುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರುವ ಅಕ್ಕಿ. ಜನರಿಗೆ, ರೈತರಿಗೆ ಮೋಸ ಮಾಡಿರುವುದು ಕಾಂಗ್ರೆಸ್ ಸರ್ಕಾರವಾಗಿದೆ. ಗೃಹ ಜ್ಯೋತಿಗೆ ಅರ್ಜಿಗಳನ್ನು ತೆಗೆದುಕೊಂಡರು. ಆದರೆ, ಈಗ ಲೋಡ್ ಶೆಡ್ಡಿಂಗ್ ಶುರು ಮಾಡಿದ್ದಾರೆ. ರಾಜ್ಯಕ್ಕೆ ನೀರಿಗೆ ಬರ ಬಂದಿರುವ ಹಾಗೇ ಕರೆಂಟ್ ಅಭಾವವೂ ಆಗುತ್ತದೆ. ಗೃಹಲಕ್ಷ್ಮಿ ಯೋಜನೆ ಯಾರಿಗೂ ತಲುಪಿಲ್ಲ. ಗೃಹಲಕ್ಷ್ಮಿ ಯೋಜನೆಯೇ ಕಾಂಗ್ರೆಸ್‌ಗೆ ಮುಳ್ಳಾಗುತ್ತದೆ. ಕುಮಾರಕೃಪದಲ್ಲಿ ದಂಧೆ ನಡೆಯುತ್ತಿದೆ. ಯಾವ ಅಧಿಕಾರಿಗೂ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಯಾವ ಪೊಲೀಸರಿಗೂ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಶಾಸಕ‌ ಎಸ್.ಆರ್. ವಿಶ್ವನಾಥ್ ಮಾತನಾಡಿ, ಈ ಸರ್ಕಾರದ ಹನಿಮೂನ್ ಪೀರಿಯಡ್ ಮುಗೀತು. ಈ ಸರ್ಕಾರ ನುಡಿದಂತೆ ನಡೆದಿಲ್ಲ. ಗ್ಯಾರಂಟಿಗಳಿಗೆ ಷರತ್ತು ಹಾಕಿ ಜನರ ಕಿವಿಗೆ ಹೂ ಇಟ್ಟರು. ಗೃಹಲಕ್ಷ್ಮಿ ಯೋಜನೆಯಲ್ಲಿ ಮೆಸೇಜ್ ಬಂದಿದೆ. ಅಕೌಂಟ್‌ಗೆ ಹಣ ಬಂದಿಲ್ಲ. ಮನೆಯಲ್ಲಿ ಅತ್ತೆ – ಸೊಸೆ ಮಧ್ಯೆ ಜಗಳ ತಂದರು ಎಂದು ಹೇಳಿದರು.

ಇದನ್ನೂ ಓದಿ: Karnataka Politics : ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಫಿಕ್ಸ್;‌ 4 ಕ್ಷೇತ್ರ ದಳ ಪಾಲು ಎಂದ ಬಿಎಸ್‌ವೈ

ಎಸ್‌.ಟಿ. ಸೋಮಶೇಖರ್‌ ಗೈರು

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಹಾಜರಿದ್ದರು.‌ ಆದರೆ, ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಗೈರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

Raichur News: ನೀಟ್ ಮತ್ತು ಯು.ಜಿ.ಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ತನಿಖೆಗೆ ಒಳಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಮಾನ್ವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

NEET UGC NET Exam irregularities protest demanding investigation
Koo

ಮಾನ್ವಿ: ನೀಟ್ ಮತ್ತು ಯು.ಜಿ.ಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ತನಿಖೆಗೆ ಒಳಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಮಾನ್ವಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ (Raichur News) ನಡೆಸಲಾಯಿತು. ಪಟ್ಟಣದ ಬಸವವೃತ್ತದಿಂದ ತಹಸೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ನಡೆಸಿ, ತಹಸೀಲ್ದಾರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ಎನ್.ಟಿ.ಎ ನಡೆಸುವ ನೀಟ್ ಮತ್ತು ಯು.ಜಿ.ಸಿ ನೆಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ಆಗಿರುವ ಅಕ್ರಮವು ಪರೀಕ್ಷೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಮತ್ತು ವಿಶ್ವಾಸಾರ್ಹತೆಯನ್ನು ಕುಗ್ಗಿಸಿದೆ. ಕೇಂದ್ರ ಸರ್ಕಾರ ನಡೆಸುವ ಕೇಂದ್ರಿಕೃತ ಪರೀಕ್ಷೆಯಲ್ಲಿ ನಡೆದ ಲೋಪದೋಷವು ಸರ್ಕಾರ ಮತ್ತು ಕೋಚಿಂಗ್ ಸೆಂಟರ್ ಗಳ ನಡುವಿನ ಅವ್ಯವಹಾರವನ್ನು ಬಯಲಿಗೆ ಎಳೆದಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾದ ಕೇಂದ್ರಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಡೀ ಪ್ರಕರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ವೈದ್ಯಕೀಯ ಸೀಟು ಪಡೆಯಲು ನೀಟ್ ಪರೀಕ್ಷೆಯು ಕಡ್ಡಾಯವಾಗಿದ್ದು, ಇದನ್ನು ಪಡೆಯಲು ಕೋಚಿಂಗ್ ಪಡೆಯಬೇಕೆಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಹಿಂದೆ ಬಹುದೊಡ್ಡ ಕೋಚಿಂಗ್ ಮಾಫಿಯಾ ನಡೆಯುತ್ತಿದೆ. ಪ್ರತಿ ವರ್ಷ ನೀಟ್ ತಯಾರಿಗಾಗಿ ವಿದ್ಯಾರ್ಥಿಗಳು ಲಕ್ಷಗಟ್ಟಲೆ ಹಣ ನೀಡಿ ತರಬೇತಿ ಪಡೆಯುತ್ತಿದ್ದಾರೆ. ಒಂದರ್ಥದಲ್ಲಿ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ನೇರವಾಗಿ ವೈದ್ಯಕೀಯ ಶಿಕ್ಷಣದಿಂದ ವಂಚಿಸುತ್ತಿದೆ. ಉಳ್ಳವರಿಗೆ ಮಾತ್ರ ವೈದ್ಯಕೀಯ ಸೀಟು ಲಭ್ಯವೆಂಬಂತೆ ವ್ಯವಸ್ಥೆ ನಿರ್ಮಿಸಲಾಗಿದೆ, ಅತೀ ಹೆಚ್ಚು ವೈದ್ಯಕೀಯ ಸೀಟುಗಳನ್ನು ಹೊಂದಿರುವ ನಮ್ಮ ರಾಜ್ಯದಲ್ಲಿ ಬಹಳ ಕಡಿಮೆ ಸೀಟುಗಳು ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಗುತ್ತಿವೆ, ಇದು ರಾಜ್ಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ.

ಕೇಂದ್ರ ಸರ್ಕಾರವು ವೈದ್ಯಕೀಯ ಮತ್ತು ಇತರೆ ಉನ್ನತ ಶಿಕ್ಷಣ ಪ್ರವೇಶಾತಿಗೆ ನಡೆಸುವ ಕೇಂದ್ರಿಕೃತ ಪರೀಕ್ಷೆಯನ್ನು ರದ್ದುಪಡಿಸಬೇಕು ಹಾಗೂ ಆಯಾ ರಾಜ್ಯಗಳು ಪರೀಕ್ಷೆಯನ್ನು ನಡೆಸಲು ಕೇಂದ್ರ ಸರ್ಕಾರವು ಸ್ವಾಯತ್ತತೆಯನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಎಲ್ಲಾ ದುಷ್ಕರ್ಮಿಗಳಿಗೆ ಕೂಡಲೆ ಅಮಾನತ್ತು ಮಾಡಿ ತಕ್ಕ ಶಿಕ್ಷೆಗೆ ಒಳಪಡಿಸಬೇಕು. ನೀಟ್, ಯುಜಿಸಿ, ಪಿಜಿ ನೀಟ್ ಪರೀಕ್ಷೆ ರದ್ದತಿಯ ಕುರಿತು ಸೂಕ್ತ ತನಿಖೆಯನ್ನು ನಡೆಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ: Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಪ್ರತಿಭಟನೆಯಲ್ಲಿ ಎಸ್ಐಒ ರಾಜ್ಯಾಧ್ಯಕ್ಷ ಜಿಶಾನ್ ಅಖಿಲ್ ಸಿದ್ದಿಖಿ, ಎಚ್.ಕೆ.ಎಸ್‌.ಎಫ್. ರಾಜ್ಯಾಧ್ಯಕ್ಷ ಮಲ್ಲೇಶ್ ಮಾಚನೂರು, ವಂದೇ ಮಾತರಂ ಯುವ ಸಂಘ ಅಧ್ಯಕ್ಷ ಮಹೆಬೂಬ್ ಮದ್ಲಾಪುರ, ಮೊಹಮ್ಮದ್ ಬೇಗ್, ಸುರೇಶ ಬೈಲ್ ಮರ್ಚೇಡ್, ಬಂಡೆಗುರು ಕರೆಗುಡ್ಡ ಸೇರಿದಂತೆ ವಿದ್ಯಾರ್ಥಿ ಸಂಘದ ಒಕ್ಕೂಟದ ಮುಖಂಡರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Kempegowda Jayanti: ರಾಜ್ಯ ಸರ್ಕಾರದಿಂದ ಆಚರಿಸುವ ಕೆಂಪೇಗೌಡ ಜಯಂತಿಗೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ.

VISTARANEWS.COM


on

kempegowda Jayanti
Koo

ಬೆಂಗಳೂರು: ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಒಕ್ಕಲಿಗ ಸಂಘ ತಿರುಗಿಬಿದ್ದಿದೆ. ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿ ರಾಜ್ಯ ಒಕ್ಕಲಿಗರ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ವತಿಯಿಂದ ಜೂನ್‌ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ. ಆದರೆ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ | Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading

ಕರ್ನಾಟಕ

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Vijayalakshmi Darshan: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ನಮಗೆ ನ್ಯಾಯ ಸಿಗಲಿದೆ ಎಂದು ಹೇಳುವ ಮೂಲಕ ಅವರು ಅಭಿಮಾನಿಗಳ ದುಃಖ, ಬೇಸರವನ್ನು ತಣಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

Vijayalakshmi Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ (Actor Darshan) ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಭೇಟಿಯಾಗಿ ಬಂದಿರುವ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. “ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ ಪೋಸ್ಟ್‌ ಹೀಗಿದೆ…

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

“ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ಇದನ್ನೂ ಓದಿ: Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Continue Reading

ಬೆಂಗಳೂರು

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Essay on Kempegowda in Kannada: ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ (kempegowda jayanthi) ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ. ಇಂದು ನಾಡಪ್ರಭು ಕೆಂಪೇಗೌಡ ಜಯಂತಿ. ಈ ಹಿನ್ನೆಲೆಯಲ್ಲಿ ಅವರ ಜೀವನ ಮತ್ತು ಸಾಧನೆಯ ಚಿತ್ರಣ ಇಲ್ಲಿದೆ.

VISTARANEWS.COM


on

By

Nadaprabhu Kempegowda
Koo

ಬೆಂಗಳೂರು (bengaluru) ಹೆಸರೆತ್ತಿದ್ದ ತಕ್ಷಣ ನೆನಪಾಗುವುದು (Essay on Kempegowda in Kannada) ನಾಡಪ್ರಭು ಕೆಂಪೇಗೌಡರು ಆಧುನಿಕ (kempegowda jayanthi) ಬೆಂಗಳೂರಿನ ಮೂಲ ಶಿಲ್ಪಿ! ನಾಡಪ್ರಭು ಕೆಂಪೇಗೌಡ (Nadaprabhu Kempegowda). ಬೆಂಗಳೂರಿನ ನಿರ್ಮಾತೃ ಆಗಿರುವ ಇವರು ವಿಜಯನಗರ ಸಾಮ್ರಾಜ್ಯದಲ್ಲಿ (vijayanagara empire) ಮುಖ್ಯಸ್ಥರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಗೌಡ ವಂಶಸ್ಥರಾದ ಇವರು ಆ ಕಾಲದಲ್ಲಿ ಅತ್ಯಂತ ವಿದ್ಯಾವಂತ ಯಶಸ್ವಿ ಆಡಳಿತಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದರು.

ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ.

ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡ ಅವರು 1537ರಲ್ಲೇ ಬೆಂಗಳೂರು ನಗರವನ್ನು ಕಟ್ಟಿದರು. ಬಳಿಕ ಕೆಂಪೇಗೌಡರ ರಾಜಧಾನಿಯನ್ನು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು. ಎಲ್ಲ ಕುಲ ಕಸುಬುದಾರರಿಗೂ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟ ಅವರು, ಬೆಂಗಳೂರು ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಯಲು ಕಾರಣರಾದರು.

ಕೆಂಪೇಗೌಡ ಅವರ ಹಿನ್ನೆಲೆ ಏನು?

ಶಾಸನಗಳ ಪ್ರಕಾರ ನಾಡಪ್ರಭು ಕೆಂಪೇಗೌಡರ ಪೂರ್ವಜರು ತಮಿಳುನಾಡಿನಿಂದ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ವಲಸೆ ಬಂದಿದ್ದರು ಎನ್ನಲಾಗುತ್ತದೆ. ರಣಭೈರೇಗೌಡ ಅವರು ಏಳು ತಮ್ಮಂದಿರಾದ ಮಲ್ಲಭೈರೇಗೌಡ, ಸಣ್ಣ ಭೈರೇಗೌಡ, ವೀರೇಗೌಡ, ಮರೀಗೌಡ, ಗಿಡ್ಡೇಗೌಡ, ತಮ್ಮೇಗೌಡ ಮತ್ತು ಗಿಟ್ಟಪ್ಪಗೌಡ ಅವರೊಂದಿಗೆ ಮಕ್ಕಳು ಜಯಗೌಡ, ಸಣ್ಣ ಭೈರೇಗೌಡ, ಹಾವಳಿ ಬೈರೇಗೌಡ ಅವರೊಂದಿಗೆ ಬಂದು ಇಲ್ಲಿ ನೆಲೆಯಾದರು. ತಮ್ಮ ಒಬ್ಬಳೇ ಮಗಳು ದೊಡ್ಡಮ್ಮಳನ್ನು ಆ ಪ್ರಾಂತ್ಯದ ಯಾಕಿಲ ದೊರೆ ಸೆಲ್ವ ನಾಯಕ ಸೊಸೆ ಮಾಡಿಕೊಂಡಿದ್ದರಿಂದ ಅವರೆಲ್ಲ ಇಲ್ಲಿಗೆ ಬಂದರು ಎನ್ನಲಾಗುತ್ತದೆ.

ಮಾಗಡಿ ಕೆಂಪೇಗೌಡ, ಯಲಹಂಕ ಕೆಂಪೇಗೌಡ, ನಾಡಪ್ರಭು ಕೆಂಪೇಗೌಡರು ಬೇರೆ ಬೇರೆಯೇ ಅಥವಾ ಎಲ್ಲರೂ ಒಬ್ಬರೇ ಎನ್ನುವ ಪ್ರಶ್ನೆಗಳು ಈಗಲೂ ಇವೆ. ಕ್ರಿ.ಶ.1420ರಲ್ಲಿ ಅಧಿಕಾರಕ್ಕೆ ಏರಿದ ಯಲಹಂಕ ಕೆಂಪೇಗೌಡ ರಣಭೈರೇಗೌಡ ಅವರ ಹಿರಿಯ ಮಗ ಜಯಗೌಡ ಎನ್ನಲಾಗುತ್ತದೆ. 13 ವರ್ಷಗಳ ಕಾಲ ಆಡಳಿತ ನಡೆಸಿ 1433ರಲ್ಲಿ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಮಕ್ಕಳು. ಗಿಡ್ಡೇಗೌಡ ಮತ್ತು ಮಾಚಯ್ಯಗೌಡ. ಹಿರಿಯನಾದ ಗಿಡ್ಡೇಗೌಡ, ತಂದೆಯ ಅನಂತರ ಅಧಿಕಾರಕ್ಕೆ ಏರಿದರು.

ಮನೆದೇವರು ಕರಗದಮ್ಮನಿಗೆ ಕೆಂಪಮ್ಮಹರಕೆ ಹೊತ್ತಿದ್ದರಿಂದ ಹಲವು ವರ್ಷಗಳ ಅನಂತರ ಅವರಿಗೆ ಗಂಡು ಮಗು ಹುಟ್ಟಿದ್ದು, ಆ ಮಗುವಿಗೆ ಕೆಂಪನಂಜೇಗೌಡ ಎಂದು ನಾಮಕರಣ ಮಾಡಲಾಯಿತು. 10 ವರ್ಷಗಳ ಕಾಲ ಆಡಳಿತ ನಡೆಸಿದ ಗಿಡ್ಡೇಗೌಡ ಅವರ ಬಳಿಕ ಅಧಿಕಾರಕ್ಕೆ ಬಂದವರು ಕೆಂಪನಂಜೇಗೌಡ. ಇವರು 70 ವರ್ಷಗಳ ಕಾಲ ಯಲಹಂಕವನ್ನು ಆಳಿದ್ದರು. ಇವರ ಹಿರಿಯ ಪುತ್ರ ನಾಡಪ್ರಭು ಕೆಂಪೇಗೌಡ. ಕೆಂಪೇಗೌಡ ಅವರು ಹೆಸರಘಟ್ಟ ಸಮೀಪದ ಐವರುಕಂದಪುರದ (ಐಗೊಂಡಾಪುರ) ಗುರುಕುಲದಲ್ಲಿದ್ದಾಗ ತಮ್ಮ ನಾಯಕತ್ವದ ಕೌಶಲ್ಯವನ್ನು ಪ್ರದರ್ಶಿಸಿದರು.

ವಿಜಯನಗರದೊಂದಿಗೆ ಸಂಬಂಧ

ಕೆಂಪೇಗೌಡರಿಗೆ 1513ರಲ್ಲಿ ಪಟ್ಟಾಭಿಷೇಕ ನಡೆದಿತ್ತು. ಇವರ ಅಧಿಕಾರ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಶ್ರೀಕೃಷ್ಣದೇವರಾಯ ಮತ್ತು ಅಚ್ಯುತರಾಯ ಆಳಿದರು. ಸಣ್ಣ ಗ್ರಾಮವಾಗಿದ್ದ ಬೆಂಗಳೂರನ್ನು ಕೆಂಪೇಗೌಡರು ವಿಸ್ತರಿಸುತ್ತಾ ಬೆಳೆಸಿದರು. ಕ್ರಿ.ಶ.1537ರ ವೇಳೆಗೆ ಬೆಂಗಳೂರಿಗೆ ಕೋಟೆ ಕಟ್ಟಿಸಿ ಅದನ್ನು ರಾಜಧಾನಿಯನ್ನಾಗಿ ಮಾಡಿದರು.

ಬೆಂಗಳೂರಿನ ಕಲ್ಪನೆ

ಕೆಂಪೇಗೌಡ ಅವರು ತಮ್ಮ ಮಂತ್ರಿ ವೀರಣ್ಣ ಮತ್ತು ಸಲಹೆಗಾರ ಗಿಡ್ಡೆ ಗೌಡ ಅವರೊಂದಿಗೆ ಶಿವನಸಮುದ್ರದ ಕಡೆಗೆ ಬೇಟೆಯಾಡಲು ಹೋಗಿದ್ದಾಗ ಬೆಂಗಳೂರನ್ನು ಸುಂದರ ನಗರವನ್ನಾಗಿ ನಿರ್ಮಿಸುವ ಯೋಜನೆ ಮಾಡಿಕೊಂಡರು ಎನ್ನಲಾಗುತ್ತದೆ.

ಹೇಗಿತ್ತು ಪ್ರಾರಂಭ?

ಪ್ರಾರಂಭದಲ್ಲಿ ಕೆಂಪೇಗೌಡ ಅವರು ಬೆಂಗಳೂರು ನಗರದಲ್ಲಿ ಕೋಟೆ, ಕಂಟೋನ್ಮೆಂಟ್, ನೀರಿನ ಜಲಾಶಯಗಳು, ದೇವಾಲಯಗಳು ಮತ್ತು ಎಲ್ಲಾ ವ್ಯಾಪಾರ ಮತ್ತು ವೃತ್ತಿಯ ಜನರು ವಾಸಿಸಲು ಇರಬೇಕು ಎಂದು ಬಯಸಿ ಬೆಂಗಳೂರು- ಪುಣೆ ಹೆದ್ದಾರಿಯಲ್ಲಿ ಬೆಂಗಳೂರಿನಿಂದ 48 ಕಿಲೋಮೀಟರ್ ದೂರದಲ್ಲಿರುವ ಶಿವಗಂಗಾ ಸಂಸ್ಥಾನವನ್ನು ವಶಪಡಿಸಿಕೊಂಡರು. ವಿಜಯನಗರ ಚಕ್ರವರ್ತಿ ಅಚ್ಯುತರಾಯರ ಅನುಮತಿ ಪಡೆದು ಕ್ರಿ.ಶ. 1537ರಲ್ಲಿ ಬೆಂಗಳೂರು ಕೋಟೆ ಮತ್ತು ಪಟ್ಟಣವನ್ನು ನಿರ್ಮಿಸಿದ ಅವರು ಬಳಿಕ ತಮ್ಮ ರಾಜಧಾನಿಯನ್ನು ಯಲಹಂಕದಿಂದ ಹೊಸ ಬೆಂಗಳೂರು ಪೇಟೆಗೆ ಸ್ಥಳಾಂತರಿಸಿದರು.

ಜೈಲು ಸೇರಿದ್ದರು

ಅವಿವಾಹಿತ ಮಹಿಳೆಯರ ಎಡಗೈಯ ಕೊನೆಯ ಎರಡು ಬೆರಳುಗಳನ್ನು ಕತ್ತರಿಸುವ ಪದ್ಧತಿಯನ್ನು ನಿಷೇಧಿಸಿದ ಕೀರ್ತಿ ಇವರದ್ದು. ಬಹುಭಾಷಾ ಮತ್ತು ತೆಲುಗು ಭಾಷೆಯಲ್ಲಿ ಯಕ್ಷಗಾನ ನಾಟಕವಾದ ಗಂಗಾಗೌರಿ ವಿಲಾಸದ ರಚನೆ ಮಾಡಿರುವ ಕೆಂಪೇಗೌಡ ಅವರನ್ನು ನೆರೆಯ ಪಾಳೇಗಾರರ ದೂರಿನ ಬಳಿಕ ಜೈಲಿಗೆ ಹಾಕಲಾಯಿತು ಎನ್ನಲಾಗುತ್ತದೆ. ಐದು ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಬಳಿಕ ಸುಮಾರು 56 ವರ್ಷಗಳ ಕಾಲ ಆಳ್ವಿಕೆ ನಡೆಸಿ 1569ರಲ್ಲಿ ನಿಧನರಾದರು.


54 ಪೇಟೆಗಳ ನಗರ ಬೆಂಗಳೂರು

ಇವತ್ತು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಐಟಿ ಬಿಟಿ ಕಂಪನಿಗಳ ತವರಾಗಿರುವ ಬೆಂಗಳೂರಿನಲ್ಲಿ ಕೆಂಪೇಗೌಡರು 54 ಪೇಟೆಗಳು ನಿರ್ಮಿಸಿದ್ದರೆಂದು ಹೇಳಲಾಗುತ್ತದೆ. ಎಲ್ಲ ಜಾತಿ, ಸಮುದಾಯದವರಿಗೆ ವಾಸಿಸಲು ಯೋಗ್ಯವಾದ ನಗರವನ್ನು ನಿರ್ಮಿಸಿದ ಅವರ ಸರ್ವಧರ್ಮ ಸಹಿಷ್ಣುತೆಯು ಪ್ರಜೆಗಳ ಮನಗೆದ್ದಿತ್ತು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆರೆಗಳ ನಿರ್ಮಾಣ

ನದಿ ಮೂಲಗಳೇ ಇರದ ಬೆಂಗಳೂರಿನ ಜನರ ಕೃಷಿ ಮತ್ತು ಕುಡಿಯುವ ನೀರಿಗಾಗಿ ಧರ್ಮಾಂಬುಧಿ ಕೆರೆ, ಕೆಂಪಾಂಬುಧಿ ಕೆರೆ, ಹಲಸೂರು, ಸಂಪಂಗಿ ಕೆರೆ, ಕಾರಂಜಿ ಕೆರೆ, ಸಿದ್ಧಿಕಟ್ಟೆ, ಕೆಂಪಾಪುರ ಅಗ್ರಹಾರ ಕೆರೆ, ಜಕ್ಕರಾಯನಕೆರೆ ಸೇರಿದಂತೆ ನೂರಾರು ಕೆರೆ-ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಇವರ ಕಾಲದಲ್ಲಿ 347 ದೊಡ್ಡ ಕೆರೆಗಳು, 1200ಕ್ಕೂ ಅಧಿಕ ಸಣ್ಣ ಕೆರೆ-ಕಟ್ಟೆಗಳಿದ್ದವು ಎನ್ನಲಾಗಿದೆ.

ದೇವಾಲಯ ನಿರ್ಮಾಣ

ಕೆಂಪೇಗೌಡರು ಬೆಂಗಳೂರಿನಲ್ಲಿ ಹಲಸೂರಿನ ಸೋಮೇಶ್ವರ, ಗವಿಪುರದ ಗವಿಗಂಗಾಧರೇಶ್ವರ, ಕಾಡು ಮಲ್ಲೇಶ್ವರ, ದೊಡ್ಡ ಗಣಪತಿ, ಧರ್ಮರಾಯಸ್ವಾಮಿ ದೇವಾಲಯಗಳನ್ನು ನಿರ್ಮಿಸಿದ್ದರು ಎನ್ನಲಾಗುತ್ತದೆ. ಕೇಂಪೇಗೌಡರು ಬೆಂಗಳೂರಿನ ಶಿಲ್ಪಿ ಎಂದು ಇಂದಿಗೂ ಜನಜನಿತರಾಗಿದ್ದಾರೆ.

Continue Reading
Advertisement
NEET UGC NET Exam irregularities protest demanding investigation
ರಾಯಚೂರು3 mins ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ9 mins ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ13 mins ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ24 mins ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ48 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್1 hour ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ2 hours ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ2 hours ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು2 hours ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ2 hours ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌