Site icon Vistara News

Karnataka Politics: ಕಾಂಗ್ರೆಸ್‌ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

karnataka-politics-former-cm-basavaraj-bommai-said-cong-govt demoralising police

karnataka-election: CM Bommai explains the realation between Bajarangadal and Anjaneya to DKS

ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಪೊಲೀಸ್‌ ಇಲಾಖೆಯನ್ನು ಕೇಸರೀಕರಣವಾಗಲು ಬಿಡುವುದಿಲ್ಲ ಎಂದು ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ ಮಾತಿಗೆ ಮಾಧ್ಯಮದವರೊಂದಿಗೆ ಬೊಮ್ಮಾಯಿ ಮಾತನಾಡಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ‌ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದರು.

ಕಾಂಗ್ರೆಸ್ ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ ಎಂದರು.

ಇದನ್ನೂ ಓದಿ: D.K. Shivakumar: ಕೇಸರಿ ಬಟ್ಟೆ ಹಾಕ್ಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರ; ಕೇಸರೀಕರಣಕ್ಕೆ ಅವಕಾಶವಿಲ್ಲ: ಪೊಲೀಸರಿಗೆ ಡಿಕೆಶಿ ವಾರ್ನಿಂಗ್‌

Exit mobile version