karnataka politics tb jayachandra may miss ministerial berth because of switching off mobile phoneKarnataka Politics: ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡು ಸಚಿವ ಸ್ಥಾನ ಕಳೆದುಕೊಂಡ ಟಿ.ಬಿ. ಜಯಚಂದ್ರ ! Vistara News
Connect with us

ಕರ್ನಾಟಕ

Karnataka Politics: ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡು ಸಚಿವ ಸ್ಥಾನ ಕಳೆದುಕೊಂಡ ಟಿ.ಬಿ. ಜಯಚಂದ್ರ !

ಇದು ತಮ್ಮ ಕೊನೆಯ ಇನ್ನಿಂಗ್ಸ್‌ ಆಗಿದ್ದು, ಸಚಿವ ಸ್ಥಾನವೇ ಬೇಕು. ಯಾವುದೇ ಕಾರಣಕ್ಕೆ ಸ್ಪೀಕರ್‌ ಸ್ಥಾನ ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಬಳಿ ಟಿ.ಬಿ. ಜಯಚಂದ್ರ ಹೇಳಿದ್ದರು.

VISTARANEWS.COM


on

TB Jayachandra karnataka politics tb jayachandra may miss ministerial berth because of switching off mobile phone
Koo

ಬೆಂಗಳೂರು: ವಿವಿಧ ಸಚಿವಾಕಾಂಕ್ಷಿಗಳು ನವದೆಹಲಿಯಲ್ಲಿ ಹೈಕಮಾಂಡ್‌ ಎದುರು ಸರತಿಯಲ್ಲಿ ನಿಂತಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹ ಹಲವು ಸುತ್ತುಗಳ ಮಾತುಕತೆಯಲ್ಲಿ ತೊಡಗಿದ್ದಾರೆ. ಆದರೆ ಮೊಬೈಲ್‌ ಫೋನ್‌ ಸ್ವಿಚ್ಡ್‌ ಆಫ್‌ ಮಡಿಕೊಂಡಿದ್ದರಿಂದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಸಚಿವ ಸ್ಥಾನ ತಪ್ಪಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.ʼ

ವಿಧಾನಸಭೆಯ ಸ್ಪೀಕರ್‌ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದಾಗ ಎಚ್‌.ಕೆ. ಪಾಟೀಲ್‌, ಟಿ.ಬಿ. ಜಯಚಂದ್ರ ಅವರ ಹೆಸರುಗಳೂ ಬಂದಿದ್ದವು. ಈ ಸಮಯದಲ್ಲಿ ಒಮ್ಮೆ ಜಯಚಂದ್ರ ಅವರಿಗೆ ಕರೆ ಮಾಡಿದ್ದ ರಣದೀಪ್‌ ಸಿಂಗ್‌ ಸುರ್ಜೆವಾಲ, ವಿಷಯ ತಿಳಿಸಿದ್ದರು.

ಆದರೆ ಇದು ತಮ್ಮ ಕೊನೆಯ ಇನ್ನಿಂಗ್ಸ್‌ ಆಗಿದ್ದು, ಸಚಿವ ಸ್ಥಾನವೇ ಬೇಕು. ಯಾವುದೇ ಕಾರಣಕ್ಕೆ ಸ್ಪೀಕರ್‌ ಸ್ಥಾನ ಬೇಡ ಎಂದು ಮನವಿ ಮಾಡಿದ್ದರು. ಎಲ್ಲವನ್ನೂ ನಕೇಳಿಸಿಕೊಂಡಿದ್ದ ಸುರ್ಜೆವಾಲ, ಹೈಕಮಾಂಡ್‌ ಜತೆಗೆ ಮಾತನಾಡಿ ಮತ್ತೊಮ್ಮೆ ಕರೆ ಮಾಡುವುದಾಗಿ ತಿಳಿಸಿದರು.

ತಮ್ಮ ಮಾತನ್ನು ಕೇಳದೆಯೇ ಎಲ್ಲಿ ಹೈಕಮಾಂಡ್‌ ತಮ್ಮನ್ನೇ ಸ್ಪೀಕರ್‌ ಮಾಡಬಹುದು ಎಂದು ಆಪ್ತರು ಹೇಳಿದ್ದರೆ. ಆಪ್ತರ ಸಲಹೆ ಮೇರೆಗೆ ಟಿ.ಬಿ. ಜಯಚಂದ್ರ, ಫೋನ್‌ ಸ್ವಿಚ್ಡ್‌ ಮಾಡಿದ್ದಾರೆ. ಸ್ಪೀಕರ್‌ ಆಯ್ಕೆ ಸಂದರ್ಭದಲ್ಲಿಯೂ ಟಿ.ಬಿ. ಜಯಚಂದ್ರ ಹೆಸರನ್ನು ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ವೇಳೆ ಮತ್ತೊಮ್ಮೆ ಟಿ.ಬಿ. ಜಯಚಂದ್ರ ಅವರಿಗೆ ಸುರ್ಜೆವಾಲ ಕರೆ ಮಾಡಿದಾಗ ಸ್ವಿಚ್ಡ್‌ ಆಫ್‌ ಎಂದು ಬಂದಿದೆ. ಯು.ಟಿ. ಖಾದರ್‌ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವವರೆಗೂ ಮೊಬೈಲ್‌ ಆನ್‌ ಮಾಡಲು ಹೋಗಿಲ್ಲ. ಕೊನೆಗೆ ಈಗ ಸಚಿವ ಸ್ಥಾನಕ್ಕೆ ಲಾಬಿ ಮಾಡಲು ಜಯಚಂದ್ರ ತೆರಳಿದ್ದಾರೆ. ಈ ವೇಳೆ ಅಸಮಾಧಾನಗೊಂಡ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ, ಮೊಬೈಲ್‌ ಸ್ವಿಚ್ಡ್‌ ಆಫ್‌ ಆಗಿದ್ದರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಚಿವ ಸ್ಥಾನ ನೀಡುವುದು ಕಷ್ಟ ಎನ್ನುವ ರೀತಿ ಮಾತಾಡಿ ಕಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವರಾಗದಿದ್ದರೂ, ಅದೇ ಸ್ಥಾನಮಾನ ಹೊಂದಿರುವ ಸ್ಪೀಕರ್‌ ಸ್ಥಾನವಾದರೂ ಸಿಕ್ಕುವ ಅವಕಾಶವನ್ನೂ, ಜತೆಗೆ ಸಚಿವ ಸ್ಥಾನವನ್ನೂ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇಷ್ಟರ ನಂತರವೂ ಜಯಚಂದ್ರ ಪ್ರಯತ್ನ ಬಿಟ್ಟಿಲ್ಲ. ಹಾಗೊಂದು ವೇಳೆ ಯಾವುದೇ ಪ್ರಯತ್ನಕ್ಕೆ ಹೈಕಮಾಂಡ್‌ ಬಗ್ಗದಿದ್ದರೆ, ಸಚಿವ ಸ್ಥಾನ ತಪ್ಪಲು ಮೊಬೈಲ್‌ ಸ್ವಿಚ್ಡ್‌ ಆಫ್‌ ಆಗಿದ್ದೇ ಪ್ರಮುಖ ಕಾರಣ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿವೆ.

ಇದನ್ನೂ ಓದಿ: Karnataka Politics: ಮುಗಿಯದ ಸಂಪುಟ ತಿಕ್ಕಾಟ, ದಿಲ್ಲಿಯಿಂದ ಮರಳಿದ ಡಿಕೆಶಿ, ಪ್ರತಾಪ್‌ ಟೀಕೆಗೆ ವ್ಯಂಗ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!

state cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬೆಳಗಾವಿಯಿಂದ ಮಹಿಳಾ ಕೋಟಾದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಚಿವರಾಗಿದ್ದಾರೆ. ಇವರು ಎರಡನೇ ಬಾರಿಗೆ ಆಯ್ಕೆಯಾದರೂ ಮಂತ್ರಿಗಿರಿಯ ಅದೃಷ್ಟ ಒಲಿದಿದೆ. ಇದೇ ರೀತಿ ಈ ಹಿಂದೆ ಇನ್ನೂ ಇಬ್ಬರು ಶಾಸಕಿಯರಿಗೆ ಮೊದಲ ಇಲ್ಲವೇ ಎರಡನೇ ಬಾರಿಗೆ ಮಂತ್ರಿ ಪಟ್ಟ ಸಿಕ್ಕಿದೆ. ಅವರ ಬಗ್ಗೆ ವಿವರವನ್ನು ನೋಡೋಣ.

VISTARANEWS.COM


on

Edited by

Laxmi Hebbalkar Shashikala jolle and leelavati r prasad
Koo
VISTARA VISESHA

ಮಂಜುನಾಥ ಅಶೋಕ್‌ ಹುಡೇದ, ಬೆಳಗಾವಿ
ರಾಜ್ಯ ರಾಜಕಾರಣದ ಮಟ್ಟಿಗೆ ಕುಂದಾನಗರಿ ಬೆಳಗಾವಿ ಸಹ ಒಂದು ಶಕ್ತಿ ಕೇಂದ್ರ. ಈ ಕಾರಣಕ್ಕೆ ಇದನ್ನು ರಾಜ್ಯದ ಎರಡನೇ ರಾಜಧಾನಿ ಎಂದೂ ಕರೆಯುತ್ತಾರೆ. ಅಲ್ಲದೆ, ಉತ್ತರ ಕರ್ನಾಟಕಕ್ಕೆ ಆಡಳಿತ ಪ್ರಾತಿನಿಧ್ಯವನ್ನು ಕೊಡುವ ನಿಟ್ಟಿನಲ್ಲಿ ಇಲ್ಲಿ ಸುವರ್ಣ ವಿಧಾನಸೌಧವನ್ನೂ ಸ್ಥಾಪನೆ ಮಾಡಲಾಗಿದೆ. ಜತೆಗೆ ಇಲ್ಲಿನ ರಾಜಕಾರಣಿಗಳೂ ಸಹ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ವೇಳೆ ಇಲ್ಲಿ ಮಹಿಳಾ ರಾಜಕಾರಣಿಗಳ ಪಾರುಪತ್ಯವೂ ಇದ್ದು, ಮೊದಲ ಹಾಗೂ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನು ಪಡೆದವರೂ ಇದ್ದಾರೆ. ಈ ಬಾರಿ ಎರಡನೇ ಸಲಕ್ಕೆ ಆಯ್ಕೆಯಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದ್ದು, ರಾಜಕೀಯವಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾ ಬಂದಿದೆ. ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಜಿಲ್ಲೆಯಲ್ಲಿ ಸದ್ಯಕ್ಕೆ ಇಬ್ಬರು ಮಹಿಳಾ ಶಾಸಕಿಯರಿದ್ದಾರೆ. ನಿಪ್ಪಾಣಿ ಕ್ಷೇತ್ರದ ಶಶಿಕಲಾ ಜೊಲ್ಲೆ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್ ಹಾಲಿ ಶಾಸಕರಾಗಿದ್ದಾರೆ. ಕಳೆದ ಬಾರಿ ಶಶಿಕಲಾ ಜೊಲ್ಲೆ ಸಚಿವರಾಗಿದ್ದರೆ, ಈ ಬಾರಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಂತ್ರಿ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಿಂದ ಸಚಿವೆ ಆಗುತ್ತಿರುವ ಮೂರನೇ ಶಾಸಕಿ!

ಬೆಳಗಾವಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಕೆಲವು ಮನೆತನಗಳು ಇಂದಿಗೂ ಖ್ಯಾತಿಯನ್ನು ಪಡೆದುಕೊಂಡಿವೆ. ಸರ್ಕಾರವನ್ನೇ ಬೀಳಿಸುವಷ್ಟರ ಮಟ್ಟಿಗೆ ಪ್ರಾಬಲ್ಯ ಹೊಂದಿರುವ ಮನೆತನಗಳು ಇಲ್ಲಿವೆ. ಈ ಹಿಂದೆ ಹಿಂದೆ ವಿ.ಎಲ್. ಪಾಟೀಲ್ ಕುಟುಂಬ, ಕತ್ತಿ ಕುಟುಂಬ, ಸದ್ಯ ಜಾರಕಿಹೊಳಿ ಕುಟುಂಬವು ಈಗಲೂ ಜಿಲ್ಲಾ ರಾಜಕೀಯದ ಮೇಲಿನ ತಮ್ಮ ಹಿಡಿತವನ್ನು ಕಳೆದುಕೊಂಡಿಲ್ಲ.‌ ಈ ಫ್ಯಾಮಿಲಿ ಫೈಟ್, ಪ್ರತಿಷ್ಠೆಯ ಕಣದ ನಡುವೆಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಗೆದ್ದು ಬೀಗಿದ್ದಾರೆ. ಲಿಂಗಾಯತ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿದ್ದರಾಮಯ್ಯ ಅವರ ಸಂಪುಟ ಸೇರಿದ್ದಾರೆ.

leelavati r prasad taking oath
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಲೀಲಾವತಿ ಆರ್‌ ಪ್ರಸಾದ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕ್ಷಣ

ಬೆಳಗಾವಿಯಿಂದ ನೀರಾವರಿ ಸಚಿವರಾಗಿದ್ದ ಲೀಲಾವತಿ ಆರ್ ಪ್ರಸಾದ್

ಲೀಲಾವತಿ ಆರ್ ಪ್ರಸಾದ್ ಅವರು ಅಥಣಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1985 ಮತ್ತು 1994ರಲ್ಲಿ ಅಥಣಿಯಿಂದ ಜನತಾದಳದಿಂದ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದರು. ಅಲ್ಲದೆ, ಜೆ.ಎಚ್. ಪಟೇಲ್, ಎಸ್.ಆರ್. ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ‌ ಮಾಡಿದ್ದ ಲೀಲಾವತಿ ಆರ್. ಪ್ರಸಾದ್ ಅವರು ದೇವೆಗೌಡರ ಸರ್ಕಾರದಲ್ಲಿ ಮೊದಲ ಮಹಿಳಾ ನೀರಾವರಿ ಮಂತ್ರಿಯಾಗಿಯೂ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದು ಈಗ ಇತಿಹಾಸ. ತಮ್ಮ 23ನೇ ವಯಸ್ಸಿಗೆ (ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಷನ್) ಇಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್ ಆಗಿಯೂ ಸಹ ಲೀಲಾವತಿ ಆರ್. ಪ್ರಸಾದ್ ಅವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

ಎರಡನೇ ಬಾರಿ ಗೆದ್ದಾಗಲೇ ಶಶಿಕಲಾ ಜೊಲ್ಲೆ ಮಂತ್ರಿ

ನಿಪ್ಪಾಣಿ ಕ್ಷೇತ್ರದಿಂದ 2013ರಲ್ಲಿ ಚುನಾವಣೆ ಎದುರಿಸಿ ಗೆದ್ದು ಬೀಗಿದ್ದ ಶಶಿಕಲಾ ಜೊಲ್ಲೆ 2018ರಲ್ಲಿಯೂ ಶಾಸಕರಾಗಿ ಮರು ಆಯ್ಕೆ ಆಗುವಲ್ಲಿ ಯಶಸ್ವಿಯಾಗಿದ್ದರು. 2018 ರಲ್ಲಿ ಸಮ್ಮಿಶ್ರ ಸರ್ಕಾರ ಅಸ್ವಿತ್ವಕ್ಕೆ ಬಂತು. ಅದಾದ ನಂತರ 17 ಜನ ಶಾಸಕರು ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡೆದ್ದು ಸರ್ಕಾರ ಕಡೆವಿದ್ದರು. ಬಳಿಕ ಅಸ್ವಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದ ಶಶಿಕಲಾ ಜೊಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಆಯ್ಕೆ ಆಗಿದ್ದರು. ನಂತರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಲೂ ಮುಜರಾಯಿ ಹಾಗೂ ವಕ್ಫ್‌ ಸಚಿವೆಯಾಗಿಯೂ ಜೊಲ್ಲೆ ಕೆಲಸ ಮಾಡಿದ್ದರು.

Continue Reading

ಕರ್ನಾಟಕ

Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.

VISTARANEWS.COM


on

Edited by

TB Jayachandra granddaughter with letter to rahul gandhi
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗುವಲ್ಲಿ ಹಿರಿಯ ಕಾಂಗ್ರೆಸಿಗ ಟಿ.ಬಿ. ಜಯಚಂದ್ರ ಸಫಲರಾಗಿಲ್ಲ. ತಮ್ಮನ್ನು ಆಯ್ಕೆ ಮಾಡದೇ ಇರುವ ಕುರಿತು ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಯಚಂದ್ರ ಅವರ ಮೊಮ್ಮಗಳೂ ಬೇಸರಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದಿದ್ದಾಳೆ.

ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಆರ್ನಾ ಸಂದೀಪ್‌, ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಅಂಟಿಸಿದ್ದಾಳೆ. Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.

TB Jayachandra granddaughter with letter to rahul gandhi
TB Jayachandra granddaughter 1

ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ, ಅವರು ಸಚಿವರಾಗಬೇಕೆಂದು ನಾನು ಬಯಸುತ್ತೇನೆ. ದಯಮಾಡಿ ಎಂದು ಪತ್ರದಲ್ಲಿ ತಿಳಿಸಿ ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಹಾಕಿದ್ದಾಳೆ. ಸ್ವಯಂಸ್ಫೂರ್ತಿಯಿಂದ ಮೊಮ್ಮಗಳು ಪತ್ರ ಬರೆದಿರುವುದನ್ನು ಕಂಡು ಜಯಚಂದ್ರ ಅಚ್ಚರಿಪಟ್ಟರು.

ಇದನ್ನೂ ಓದಿ: ‌Electricity Bill: ಇವತ್ತಿಂದ ಕರೆಂಟ್‌ ಬಿಲ್‌ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆರ್ಡರ್!

Continue Reading

ಕರ್ನಾಟಕ

Karnataka Cabinet: ರಾಜ್ಯ ಕಾಂಗ್ರೆಸ್‌ ನಾಯಕರ ಜತೆಗೆ ಮಾತುಕತೆ ಕಟ್‌: ಸದನದಲ್ಲಿ ನೋಡ್ಕೊತೀನಿ ಎಂದ ಜಯಚಂದ್ರ

ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.

VISTARANEWS.COM


on

Edited by

TB Jayachandra speaking with media
Koo

ಬೆಂಗಳೂರು: ಇನ್ನುಮುಂದೆ ತಮಗೂ ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ಮಾತನಾಡುವುದಿಲ್ಲ ಎಂದಿರುವ ಹಿರಿಯ ಕಾಂಗ್ರೆಸಿಗ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಸದನ ಕರೆಯಲ್ಲಿ ಅಲ್ಲಿ ಮಾತಾಡುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಅನೇಕ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದ ಪ್ರಭಾವಿ ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಈ ಬಾರಿಯೂ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಸಚಿವರ ಪಟ್ಟಿಯಲ್ಲಿ ಕೊನೆಯವರೆಗೂ ಹೋಗಿ ತಮ್ಮ ಹೆಸರು ಕೈಬಿಡಲಾಗಿದೆ ಎಂದು ಅಸಮಾಧಾನಗೊಂಡಿರುವ ಟಿ.ಬಿ. ಜಯಚಂದ್ರ, ಮಾಧ್ಯಮಗಳ ಎದುರು ಕೋಪ ಹೊರಹಾಕಿದ್ದಾರೆ.

ನನಗೆ ಮಂತ್ರಿ ಪದವಿ ಸಿಗಬೇಕಿತ್ತು. ಕೊನೆಯ ಕ್ಷಣದವರೆಗೂ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಸಚಿವ ಸ್ಥಾನ ತಪ್ಪಲು ನಮ್ಮ ಜಿಲ್ಲೆಯ ನಾಯಕರು ಕಾರಣರಲ್ಲ. ಪರಮೇಶ್ವರ್ ಕೋಟಾ ಬೇರೆ, ರಾಜಣ್ಣ ಖೋಟಾ ಬೇರೆ. ನನ್ನದು ನನ್ನ ಸಮುದಾಯದ ಕೋಟ. ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಮುಂದಾದರು. ಆದರೆ ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಶಾಸಕನಾದಾಗ ಈಗ ವಿಧಾನ ಸಭೆಯಲ್ಲಿ ಇರೋರು ಯಾರೂ ಶಾಸಕರಾಗಿರಲಿಲ್ಲ. ನನ್ನ ಸಚಿವ ಸ್ಥಾನ ತಪ್ಪಲು ಕೆಲ ರಿಯಲ್ ಎಸ್ಟೇಟ್ ಹಾಗೂ ಎಜುಕೇಷನ್ ಮಾಫಿಯಾ ಕೆಲಸ ಮಾಡಿದೆ. ನಾನು ನೀರು ಬೇಕು ಜನರಿಗೆ ಅಂತ ಲಾಭಿ ಮಾಡಿದೆ, ಅವರು ಎಜುಕೇಷನ್ ಸಂಸ್ಥೆಗಳು ಬೇಕು ಅಂತ ಲಾಭಿ ಮಾಡಿದರು. ಇವರೇ ನನಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಕಾರಣರಾಗಿದ್ದಾರೆ.

ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ. ಸದನದಲ್ಲಿ ಎಲ್ಲವನ್ನೂ ಮಾತನಾಡ್ತೀನಿ. ನಾನು ಯಾವನಿಗೂ ಹೆದರಲ್ಲ. ಮುಂದೆ ಸದನ ಕರೆಯಲಿ ಎಲ್ಲವನ್ನೂ ಮಾತನಾಡ್ತೀನಿ. ಇನ್ನು ಏನಿದ್ದರೂ ಹೈಕಮಾಂಡ್ ಜತೆ ಮಾತ್ರ ನನ್ನ ಮಾತುಕತೆ. ರಾಜ್ಯದ ನಾಯಕರ ಜತೆ ಮಾತುಕತೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ‌Electricity Bill: ಇವತ್ತಿಂದ ಕರೆಂಟ್‌ ಬಿಲ್‌ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆರ್ಡರ್!

Continue Reading

ಕರ್ನಾಟಕ

Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.

VISTARANEWS.COM


on

Edited by

Pond near kolar
ಯುವಕ ಸಾವನ್ನಪ್ಪಿದ ಕೋಲಾರ ಬಳಿಯ ಕೆರೆ
Koo

ಕೋಲಾರ : ರಾಜ್ಯಾದ್ಯಂತ ಸೆಕೆ ವಿಪರೀತವಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ, ಇಲ್ಲೊಬ್ಬರು ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು (Drowned in Pond) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಕೋಲಾರದ (Kolar news) ಗಾಂಧಿ ನಗರದ ಮೂವರು ಯುವಕರು ಮಂಗಸಂದ್ರ-ಮಾಲೂರು ಮಾರ್ಗದ ರಸ್ತೆ ಬದಿಯ ಕೆರೆಯಲ್ಲಿ ಸ್ನಾನಕ್ಕೆಂದು ಹೋಗಿದ್ದವರು. ಮೂವರಲ್ಲಿ ಇಬ್ಬರಿಗೆ ಈಜು ಬರುತ್ತಿದ್ದರೆ ಒಬ್ಬನಿಗೆ ಬರುತ್ತಿರಲಿಲ್ಲ.

ಕೆರೆಯ ನೀರಿನಲ್ಲಿ ಸ್ನಾನ ಮಾಡುತ್ತಾ ಖುಷಿಪಡುತ್ತಿದ್ದಾಗ ಪ್ರಭಾಸ್‌ ಎಂಬ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನಿಗೆ ಈಜು ಬಾರದೆ ಮುಳುಗಿದ್ದಾನೆ. ಉಳಿದ ಇಬ್ಬರು ಆತನ ರಕ್ಷಣೆಗೆ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ.

ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಎಸ್ ಎನ್ ಆರ್ ಆಸ್ಪತ್ರಗೆ ರವಾನಿಸಲಾಗಿದೆ.

ಸಿಗಂದೂರಿಗೆ ಲಾಂಚ್‌ ಸಂಚಾರ ಸ್ಥಗಿತ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಾರ್ಗಲ್, ಜೋಗದಿಂದ ಶ್ರೀ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ.

ಹಿನ್ನೀರಿನಲ್ಲಿ ವಾಡಿಕೆಗಿಂತಲೂ ನೀರು ಕಡಿಮೆಯಾಗಿದೆ. ಹೀಗಾಗಿ, ಲಾಂಚ್​ ಸಂಚಾರಕ್ಕೆ ಕಲ್ಲು, ಮರದ ದಿಮ್ಮಿ, ಮರಳಿನ ದಿಬ್ಬ ಅಡ್ಡಿಯಾಗಿದೆ. ಒಂದೊಮ್ಮೆ ಕಡಿಮೆ ನೀರಿನಲ್ಲಿ ಲಾಂಚ್​ ಓಡಾಡಿದರೆ ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ.  ಸುರಕ್ಷತೆಯ ದೃಷ್ಟಿಯಿಂದ ಲಾಂಚ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಿಗರು ವಾಹನಿಗರಿಗೆ 60 ಕಿ.ಮೀ. ದೂರ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾಗಿದೆ.

ಇದನ್ನೂ ಓದಿ: Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

Continue Reading
Advertisement
Laxmi Hebbalkar Shashikala jolle and leelavati r prasad
ಕರ್ನಾಟಕ6 mins ago

Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!

New Parliament Building
ದೇಶ7 mins ago

ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್‌, ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ

Darbar Film
South Cinema12 mins ago

V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

TB Jayachandra granddaughter with letter to rahul gandhi
ಕರ್ನಾಟಕ17 mins ago

Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

new Simple One Scooter
ಆಟೋಮೊಬೈಲ್26 mins ago

Simple One: ಒಂದು ಚಾರ್ಜ್​​ಗೆ 212 ಕಿ.ಮೀ ಓಡುವ ಸ್ಕೂಟರ್​ ಬಿಡುಗಡೆ; ಇದರ ಬೆಲೆ ಎಷ್ಟು ಗೊತ್ತೇ?

upsc prelims 2023 IAS prelims 2023
ಉದ್ಯೋಗ28 mins ago

UPSC Prelims 2023: ನಾಳೆ ಯುಪಿಎಸ್‌ಸಿ ಪ್ರಿಲಿಮ್ಸ್‌; ಈ ಬಾರಿಯೂ ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ

soudi
ವೈರಲ್ ನ್ಯೂಸ್32 mins ago

Viral News : ನಿತ್ಯ ಶಾಪಿಂಗ್‌ಗೆಂದೇ 70 ಲಕ್ಷ ರೂ. ಖರ್ಚು ಮಾಡುತ್ತಾಳಂತೆ ಈ ಮಹಿಳೆ!

TB Jayachandra speaking with media
ಕರ್ನಾಟಕ34 mins ago

Karnataka Cabinet: ರಾಜ್ಯ ಕಾಂಗ್ರೆಸ್‌ ನಾಯಕರ ಜತೆಗೆ ಮಾತುಕತೆ ಕಟ್‌: ಸದನದಲ್ಲಿ ನೋಡ್ಕೊತೀನಿ ಎಂದ ಜಯಚಂದ್ರ

Pond near kolar
ಕರ್ನಾಟಕ39 mins ago

Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

Manoj Bajpayee starrer Sirf Ek Bandaa Kaafi
ಒಟಿಟಿ42 mins ago

Manoj Bajpayee: ಹೊಸ ದಾಖಲೆ ಬರೆದ ಮನೋಜ್​ ಬಾಜಪೇಯಿ ಸಿನಿಮಾ!

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Laxmi Hebbalkar oath taking as a minister
ಕರ್ನಾಟಕ2 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ24 hours ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ3 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!