Karnataka Elections | ವರುಣ ಕ್ಷೇತ್ರದಲ್ಲಿ ಸಿದ್ದುಗೆ ಸಡ್ಡು ಹೊಡೆಯುತ್ತಾರಾ ಬಿ.ವೈ. ವಿಜಯೇಂದ್ರ: ಅವರು ಹೇಳಿದ್ದೇನು? - Vistara News

ಕರ್ನಾಟಕ

Karnataka Elections | ವರುಣ ಕ್ಷೇತ್ರದಲ್ಲಿ ಸಿದ್ದುಗೆ ಸಡ್ಡು ಹೊಡೆಯುತ್ತಾರಾ ಬಿ.ವೈ. ವಿಜಯೇಂದ್ರ: ಅವರು ಹೇಳಿದ್ದೇನು?

ಮೈಸೂರಿನ ವರುಣ ಕ್ಷೇತ್ರದಲ್ಲಿ (Karnataka Elections) ಈ ಬಾರಿ ಒಂದೊಮ್ಮೆ ಸಿದ್ದರಾಮಯ್ಯ ಸ್ಪರ್ಧಿಸಿದರೆ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಡ್ಡು ಹೊಡೆಯುತ್ತಾರಾ? ಹಾಗಿದ್ದರೆ ವಿಜಯೇಂದ್ರ ಹೇಳಿದ್ದೇನು?

VISTARANEWS.COM


on

siddaramaiah- vijayendra
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊರೆಲ್ಲಾ ಸುತ್ತಿ ಅಂತಿಮವಾಗಿ ಮೈಸೂರಿನ ವರುಣ ಕ್ಷೇತ್ರವನ್ನೇ ನೆಚ್ಚಿಕೊಳ್ಳುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗ ಶಾಸಕರಾಗಿರುವ ಡಾ. ಯತೀಂದ್ರ ಅವರು ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಲು ಮುಂದಾಗಿರುವುದು, ಸಿದ್ದರಾಮಯ್ಯ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಅವರು ಈ ಕ್ಷೇತ್ರವನ್ನೇ ಸುರಕ್ಷಿತವೆಂದು ಭಾವಿಸಿ ಕಣಕ್ಕಿಳಿಯುತ್ತಾರೆ ಎಂಬ ಅಭಿಪ್ರಾಯ ಮೂಡಿಸಿದ್ದಾರೆ. ಈ ನಡುವೆ, ಅವರಿಗೆ ಆತಂಕ ಮೂಡಿಸಬಲ್ಲ ವಿದ್ಯಮಾನವೊಂದು ಸದ್ದು ಮಾಡುತ್ತಿದೆ. ಅದೇನೆಂದರೆ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಈ ಕ್ಷೇತ್ರದಿಂದಲೇ ಕಣಕ್ಕಿಳಿದು (Karnataka Elections) ಸಿದ್ದರಾಮಯ್ಯರಿಗೆ ಸಡ್ಡು ಹೊಡೆಯುತ್ತಾರಾ ಎಂಬುದು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಮೈಸೂರಿನಲ್ಲಿ ನೀಡಿದ ಹೇಳಿಕೆ ಈ ನಿಟ್ಟಿನಲ್ಲಿ ಸಣ್ಣ ಸೂಚನೆಯನ್ನು ನೀಡಿದೆ. ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ʻʻಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಾನು ನಿಭಾಯಿಸುತ್ತೇನೆ.
ಪಕ್ಷದ ತೀರ್ಮಾನವೇ ಅಂತಿಮʼʼ ಎಂದು ಹೇಳಿದರು. ʻʻಎಲ್ಲಾ ಸವಾಲುಗಳನ್ನೂ ನಾನು ಎದುರಿಸುತ್ತೇನೆʼʼ ಎಂದು ಹೇಳುವ ಮೂಲ ಪರೋಕ್ಷವಾಗಿ ವರುಣ ಕ್ಷೇತ್ರದ ಸ್ಪರ್ಧೆಯ ಆಸೆ ವ್ಯಕ್ತಪಡಿಸಿದರು ಬಿ.ವೈ.ವಿಜಯೇಂದ್ರ.

ʻʻವರುಣ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆʼʼ ಎಂದು ಅವರು ಹೇಳಿದರು. ಇದುವರೆಗೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರೆ ಇಲ್ಲೂ ಗೆಲ್ಲಬೇಕಾದ ಅನಿವಾರ್ಯತೆ ಇರುವುದರಿಂದ ಬಿಜೆಪಿ ಈ ಭಾಗದ ಮೇಲೆ ಹೆಚ್ಚು ಒತ್ತು ಕೊಡುತ್ತಿದೆ.

ಗುಜರಾತ್‌ ಫಲಿತಾಂಶ ಮತ್ತು ಕಾಂಗ್ರೆಸ್‌ ಭ್ರಮೆ
ʻʻಮೋದಿ ಎಂಬುದು ಅಲೆಯಲ್ಲ, ಅದೊಂದು ಸುನಾಮಿ. ಕಾಂಗ್ರೆಸ್ ನವರಿಗೆ ಇದು ಇನ್ನು ಅರ್ಥವಾಗಿಲ್ಲ. ಕಾಂಗ್ರೆಸ್ ಭ್ರಮೆಯಲ್ಲಿದೆ. ಭ್ರಮೆಯಲ್ಲಿರುವ ಕಾರಣ ಗುಜರಾತ್ ಫಲಿತಾಂಶದ ಎಫೆಕ್ಟ್ ಕರ್ನಾಟಕದಲ್ಲಿ ಆಗಲ್ಲ ಎಂದು ಹೇಳುತ್ತಿದೆ. ಚುನಾವಣೆ ನಂತರ ಕಾಂಗ್ರೆಸ್ ಗೆ ಉತ್ತರ‌ ಸಿಗಲಿದೆʼʼ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ವರುಣ ಚುನಾವಣೆಯಲ್ಲಿ..
ಕಳೆದ ಬಾರಿ ನಡೆದ ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರು ಖುದ್ದು ಗಮನ ಕೊಟ್ಟು ಯತೀಂದ್ರ ವಿರುದ್ಧ ಸೆಡ್ಡು ಹೊಡೆದಿದ್ದರು. ಒಂದು ಹಂತದಲ್ಲಿ ಅವರೇ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿಬಂದಿತ್ತಾದರೂ ಬಳಿಕ ಅವರು ಸ್ಪರ್ಧಿಸಲಿಲ್ಲ. ಆದರೆ, ಕ್ಷೇತ್ರದ ಮೇಲೆ ಪೂರ್ಣ ಗಮನ ಹರಿಸಿದ್ದರು.

ಇದನ್ನೂ ಓದಿ | Karnataka Elections | ಸಿದ್ದರಾಮಯ್ಯ ಕೊಟ್ಟಿದ್ದು ಬರೀ ಟಿಪ್ಪು ಭಾಗ್ಯ, ಅವನೆಂದರೆ ಸಾಕು ಪ್ರಾಣ ಬಿಡ್ತಾರೆ ಎಂದ ಅಶೋಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Zameer Ahmed Khan: ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಅವನತಿ ಆಗುತ್ತದೆ ಎಂದು ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ.

VISTARANEWS.COM


on

Zameer Ahmed Khan
Koo

ಬಾಗಲಕೋಟೆ: ಇದು ದೇಶ ಬಚಾವ್ ಎಲೆಕ್ಷನ್. ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ. ಫಸ್ಟ್ ಟೈಂ ಕ್ಯಾನ್ಸರ್ ಬಂದರೆ ಉಳಿಯುತ್ತಾರೆ, ಎರಡನೇ ಬಾರಿ ಬಂದರೂ ಉಳಿಯುತ್ತಾರೆ, ಆದರೆ ಮೂರನೇ ಬಾರಿ ಬಂದರೆ ನಮ್ಮನ್ನೆಲ್ಲರನ್ನೂ ತಗೊಂಡು ಹೋಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಅವನತಿ ಆಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಅಲ್ಪ ಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಸಂಯುಕ್ತಾ, ಶಿವಾನಂದ ಪಾಟೀಲ್ ಪುತ್ರಿ ಅಲ್ಲ, ನನ್ನ‌ ಮಗಳ ಇದ್ದಂತೆ. ಈ ಎಲೆಕ್ಷನ್ ಶಿವಾನಂದ ಪಾಟೀಲ್‌ರದ್ದು ಅಲ್ಲ, ಜಮೀರ್‌ದು ಅಲ್ಲ, ಹಾಗೆಯೇ ಮೇಟಿ ಅವರದೂ ಅಲ್ಲ. ಈ ಬಾರಿ ದೇಶ ಬಚಾವ್ ಮಾಡಲು ಕಾಂಗ್ರೆಸ್‌ಗೆ ಮತ ಹಾಕಿ ಎಂದು ಕರೆ ನೀಡಿದರು.

ಇದನ್ನೂ ಓದಿ | Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

ನಮ್ಮ ಆಡಳಿತದಲ್ಲಿ ಐದು ಅಂಶಗಳಿವೆ. ಎರಡು ಸಾವಿರ ರೂ., ಉಚಿತ ವಿದ್ಯುತ್, ಬಸ್ ಫ್ರಿ, ಅನ್ನಭಾಗ್ಯ, ಇದನ್ನೆಲ್ಲಾ ನಾವು ಮಾಡಿದ್ದೇವೆ. ನಮ್ಮ ಕೋಮಿನ 7 ಲಕ್ಷ ಜನ ಈ ಯೋಜನೆಗಳ ಉಪಯೋಗ ಪಡೆಯುತ್ತಿದ್ದಾರೆ. ರಾಹುಲ್ ಗಾಂಧಿ, ಖರ್ಗೆ ನಮ್ಮ ಸರ್ಕಾರ ಬಂದರೆ ಐದು ಯೋಜನೆ ಜಾರಿ ತರುತೀವೆ ಎಂದು ಹೇಳಿದ್ದಾರೆ. ಹೀಗಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಮಹಿಳೆಗೆ 1 ಲಕ್ಷ ಕೊಡುತ್ತಾರೆ ಎಂದು ತಿಳಿಸಿದರು.

ಪಾಜಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ರೆ ಗುಂಡಿಟ್ಟು ಕೊಲ್ಲಬೇಕು

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೇವೆ. ನಮ್ಮ ಸರ್ಕಾರ ಬಂದಮೇಲೆ ಕೋರ್ಟ್‌ನಿಂದ ಡೈರೆಕ್ಷನ್ ತೆಗೆದುಕೊಳ್ಳಬೇಕು. ನಾಲ್ಕು ಜನ ಬಿಜೆಪಿ ಅವರನ್ನು ಕಳುಹಿಸಿಬಿಟ್ಟು ಪಾಕಿಸ್ತಾನ ಜಿಂದಾಬಾದ್ ಜೈಕಾರ ಹಾಕಿಸುತ್ತಾರೆ. ಅಂತಹವರನ್ನು ಪೊಲೀಸರಿಗೆ ಪರ್ಮಿಷನ್ ಕೊಟ್ಟರೆ ಅಲ್ಲೇ ಶೂಟ್ & ಸೈಟ್ ಆರ್ಡರ್ ಆಗಬೇಕು ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಇದನ್ನೂ ಓದಿ | Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

ನಾವ್ಯಾರು (ಮುಸ್ಲಿಂರು) ದೇಶ ದ್ರೋಹಿಗಳಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮುನ್ನ ಇಂಡಿಯಾ ಗೇಟ್‌ ಕಡೆ ಹೋಗಿ ನೋಡಿ ಲಿಸ್ಟ್ ಇದೆ. ಶೇ.60 ಮುಸ್ಲಿಂರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ದೇಶ ನಮ್ಮದು, ನಮ್ಮನ್ನು ಇಲ್ಲಿಗೆ ಕರೆಸಿದ ಉದ್ದೇಶ ಈ ಬಾರಿ ಶೇ.95 ವೋಟಿಂಗ್ ಆಗಲು ಎಂದ ಅವರು, ಮೊದಲು ಎಲೆಕ್ಷನ್ ಡಬ್ಬಿ ಇತ್ತು, ಹೇಗೋ ನಡೆಯುತ್ತಿತ್ತು. ಈಗ ಇವಿಎಂ ಮಷಿನ್ ಇದೆ. ಯಾವ ಸಮುದಾಯ ಎಷ್ಟು ಮತದಾನ ಮಾಡಿದೆ ಎಂಬುವುದು ಗೊತ್ತಾಗುತ್ತೆ. ಹಾಗಾಗಿ ಮುಸ್ಲಿಂ ಮತಗಳು ಹೆಚ್ವಿನ ಸಂಖ್ಯೆಯಲ್ಲಿ ಬರಬೇಕು ಎಂದು ಸಮುದಾಯಕ್ಕೆ ಸಚಿವರು ಕರೆ ನೀಡಿದರು.

Continue Reading

ಕರ್ನಾಟಕ

Prajwal Revanna Case: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್, ಕೆಲವೇ ಕ್ಷಣಗಳಲ್ಲಿ ಆದೇಶ

Prajwal Revanna Case: ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಡೆಸಿದ್ದು, ತೀರ್ಪು ಕಾಯ್ದಿರಿಸಿದೆ. ಹಾಗಾಗಿ, ಎಲ್ಲರ ಚಿತ್ತ ಈಗ ಕೋರ್ಟ್‌ನತ್ತ ಇದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ (Physical Abuse) ಮೊದಲನೇ ಆರೋಪಿಯಾಗಿರುವ (A 1) ಜೆಡಿಎಸ್‌ ನಾಯಕ ಎಚ್‌.ಡಿ ರೇವಣ್ಣ (HD Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಕೆಲ ಕಾಲ ಮುಂದೂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ತೀರ್ಪು ಹೊರಬೀಳಲಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿತು.

ಎಚ್.ಡಿ.ರೇವಣ್ಣ ಪರವಾಗಿ ವಾದ ಮಂಡಿಸಿದ ವಕೀಲ ಮೂರ್ತಿ ಡಿ. ನಾಯಕ್, “ಪ್ರಕರಣವನ್ನು ಎಸ್‌ಐಟಿ ಅನಗತ್ಯವಾಗಿ ವಿಜೃಂಭಿಸುತ್ತಿದೆ. ಸಿಆರ್‌ಪಿಸಿ 41 ಎ ಅಡಿಯಲ್ಲಿ ನೋಟಿಸ್‌ ನೀಡಿದ್ದು, ಶನಿವಾರ (ಏಪ್ರಿಲ್‌ 4) ಸಂಜೆಯೇ ಎಚ್‌.ಡಿ.ರೇವಣ್ಣ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ನೀಡಬೇಕು” ಎಂದು ಕೋರ್ಟ್‌ಗೆ ಮನವಿ ಮಾಡಿದರು. ‌

ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ವಾದ ಮಂಡಿಸಿದರು. “ಎಚ್‌.ಡಿ.ರೇವಣ್ಣ ಅವರು ಪ್ರಭಾವಿಯಾಗಿದ್ದು, ಅವರಿಗೆ ಜಾಮೀನು ಸಿಕ್ಕರೆ, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ, ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ಅವರಿಗೆ ಜಾಮೀನು ನೀಡಬಾರದು” ಎಂದರು. ಇನ್ನು. ವಿಶೇಷ ತನಿಖಾ ತಂಡ ಹಾಗೂ ಪೊಲೀಸರ ಯಾವ ನೋಟಕ್ಕೂ ಸಿಗದೇ ಗುಪ್ತ ಸ್ಥಳಕ್ಕೆ ತೆರಳಿದ್ದು, ಎರಡು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ. ‌

“ಸಂತ್ರಸ್ತೆಯ ರಕ್ಷಣೆಯು ನಮ್ಮ ಮೊದಲ ಆದ್ಯತೆಯಾಗಿದೆ. ಅವರು ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಇದೇ ಕಾರಣದಿಂದಾಗಿ ಕ್ಯಾಮೆರಾ ಎದುರಿನಲ್ಲಿಯೇ ವಿಚಾರಣೆ ನಡಸಬೇಕು ಎಂದು ಮನವಿ ಮಾಡಿದ್ದೇವೆ. ಸಂತ್ರಸ್ತೆಯ ವಿಡಿಯೊಗಳು ಹರಿದಾಡಿವೆ. ಸಂತ್ರಸ್ತೆಗೆ ಏನಾಗಿದೆ ಎಂಬುದರ ಕುರಿತು ಆತಂಕ ಎದುರಾಗಿದೆ. ಸುಮಾರು 2 ಸಾವಿರಕ್ಕೂ ಅಧಿಕ ವಿಡಿಯೊ ಇವೆ ಎನ್ನಲಾಗುತ್ತಿದೆ. ಒಬ್ಬ ಮಹಿಳೆಯ ಕಿಡ್ನ್ಯಾಪ್‌ ಆಗಿದೆ. ಆಕೆಯ ಸುರಕ್ಷತೆಯು ಪ್ರಮುಖವಾಗಿದೆ. ಸಂತ್ರಸ್ತ ಮಹಿಳೆಯು ದೂರು ನೀಡದಂತೆ ತಡೆಯಲು ಅಪಹರಣ ಮಾಡಿರುವ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ” ಎಂದು ತಿಳಿಸಿದರು.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರು ನೋಟಿಸ್ ಹಾಗೂ ಕೊನೆಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರೇವಣ್ಣ ಅವರು ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ನೀಡಿದೆ. ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Continue Reading

ಬೆಂಗಳೂರು

Rowdy Sheeter: ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Rowdy Sheeter : ಸಿಸಿಬಿ ಅಧಿಕಾರಿಗಳ ಕಂಡೊಡನೆ ಡಿಸಿಪಿ ಕಚೇರಿಯಿಂದಲೇ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌ ಆಗಿದ್ದಾನೆ. ಸದ್ಯ ಸಿಸಿಬಿ ಹಾಗೂ ಸುಬ್ರಹ್ಮಣ್ಯ ಪೊಲೀಸರು ರೌಡಿಶೀಟರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

VISTARANEWS.COM


on

By

Rowdy sheeter camel Rohit escapes from DCPs office after ccb officials spotted him
Koo

ಬೆಂಗಳೂರು: ಉತ್ತರ ವಿಭಾಗ ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ವೊಬ್ಬ (Rowdy Sheeter) ಪೊಲೀಸ್‌ರಿಂದ ತಪ್ಪಿಸಿಕೊಂಡಿದ್ದಾನೆ. ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಎಸ್ಕೇಪ್ ಆದವನು. 110 ಸೆಕ್ಷನ್ ಬಾಂಡ್ ಹಾಕಲು ಸುಬ್ರಹ್ಮಣ್ಯ ನಗರ ಠಾಣೆ ರೌಡಿಶೀಟರ್ ಆಗಿರುವ ಒಂಟೆ ರೋಹಿತ್‌ನನ್ನು ಕರೆಸಿಕೊಂಡಿದ್ದರು. ಒಂದು ವಾರದ ಹಿಂದೆ ಠಾಣೆಗೆ ಕರೆಸಿಕೊಂಡಿದ್ದ ಪೊಲೀಸರು ಇಂದು ಠಾಣೆಯಿಂದ ಡಿಸಿಪಿ ಮುಂದೆ ಕರೆದೊಯ್ದಿದ್ದರು.

ಇತ್ತ ಒಂಟೆ ರೋಹಿತ್‌ಗಾಗಿ ಹುಡುಕಾಟ ನಡೆಸುತ್ತಿದ್ದ ಸಿಸಿಬಿ ಪೊಲೀಸರು, ಮುಂಚೆಯೇ ಡಿಸಿಪಿ ಕಚೇರಿ ಬಳಿ ಕಾಯುತ್ತಿದ್ದರು. ಸಿಸಿಬಿ ಪೊಲೀಸರನ್ನು ನೋಡಿದ ಕೂಡಲೇ ಒಂಟೆ ರೋಹಿತ್‌ ಸುಬ್ರಹ್ಮಣ್ಯ ನಗರ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಈ ಒಂಟೆ ರೋಹಿತ್‌, ಸೈಲೆಂಟ್ ಸುನಿಲ್ ಅಸೋಸಿಯೇಟ್ ಆಗಿದ್ದ. ಕೊಲೆ, ಕೊಲೆ ಯತ್ನ ಸೇರಿ ಹಲವು ಕೇಸಿನಲ್ಲಿ ಫಿಟ್ ಆಗಿದ್ದ. ಸದ್ಯ‌ ಪೊಲೀಸರ ಕೈಯಿಂದ ಎಸ್ಕೇಪ್ ಆಗಿರುವ ಒಂಟೆ ರೋಹಿತ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

ಏನಿದು 110 ಸೆಕ್ಷನ್‌

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಾಗುತ್ತಲೇ ಇದೆ. ಅಪರಾಧ ಕೃತ್ಯಗಳನ್ನು ತಡೆಯಲು ಆಗದಷ್ಟು ಪೊಲೀಸರು ಕೈ ಚೆಲ್ಲಿ ಕುಳಿತಂತೆ ಇದೆ. ಸದ್ಯ ರೌಡಿಗಳ ಪಾಲಿಗೆ ದುಸ್ವಪ್ನವಾಗಿರುವ ಸೆಕ್ಷನ್‌ 110 ಪ್ರಕಾರ ಪೊಲೀಸರು ರೌಡಿಗಳಿಂದ ತಾವು ಯಾವುದೇ ಅಪರಾಧಿ ಚಟುವಟಿಕೆಗಳಲ್ಲಿ ಭಾಗವಹಿಸೋದಿಲ್ಲ ಎಂದು ಬಾಂಡ್ ಬರೆಸಿಕೊಳ್ಳುತ್ತಾರೆ.

ಈ ಮೊದಲು ಕೂಡ ಬಾಂಡ್ ಬರೆಸಿಕೊಂಡು ಸುಮ್ಮನೆ ಇರುತ್ತಿದ್ದರು. ಅದರ ಕಾರ್ಯ ರೂಪ‌ ಮಾತ್ರ ಆಗುತ್ತಿರಲಿಲ್ಲ. ಪೊಲೀಸರು ಕೂಡಾ ಇಷ್ಟು ದಿನ ಸುಮ್ಮನೆ ಇದ್ದರು. ಆದರೆ ನಗರದಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿರುವುದರಿಂದ ಈ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ.

ಈ ಬಾಂಡಿನಲ್ಲಿ ರೌಡಿಗಳಿಂದ 3-5ಲಕ್ಷದವರೆಗೆ ಕುಟುಂಬ ಸಮೇತವಾಗಿ ಬಾಂಡ್ ಬರೆಸಿಕೊಳ್ಳಲಾಗುತ್ತದೆ. ರೌಡಿಶೀಟರ್‌ ಬಾಂಡ್​ಗೆ ಸಹಿ ಹಾಕಿದ ಮೇಲೆ ಕೊಲೆ, ಕಳ್ಳತನ, ದರೋಡೆಯಂತಹ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಬಾಂಡ್ ಮೀರಿ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಅಂಥ ಆರೋಪಿಗಳನ್ನು ನ್ಯಾಯಾಧೀಶರ ‌ಮುಂದೆ ಹಾಜರು ಪಡಿಸುವ ಅಗತ್ಯ ಇಲ್ಲ. ಬದಲಿಗೆ ಯಾವುದೇ ರೀತಿಯ ಕೇಸ್ ದಾಖಲಿಸದಯೇ ಡಿಸಿಪಿ ಅಧಿಕಾರಿ ಉಪಯೋಗಿಸಿ ನೇರವಾಗಿ 3ರಿಂದ 10 ತಿಂಗಳವರೆಗೆ ಜೈಲಿಗೆ ಅಟ್ಟಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hardik Pandya
ಕ್ರಿಕೆಟ್31 seconds ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ4 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ13 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ16 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್24 mins ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್24 mins ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Virat Kohli
ಕ್ರೀಡೆ37 mins ago

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Rohit Sharma
ಕ್ರೀಡೆ38 mins ago

Rohit Sharma : ರೋಹಿತ್​​ ಶರ್ಮಾಗೆ ಗಾಯ; ವಿಶ್ವ ಕಪ್​ ಮೊದಲೇ ಭಾರತ ತಂಡಕ್ಕೆ ಸಮಸ್ಯೆ?

Prajwal Revanna Case
ಕರ್ನಾಟಕ42 mins ago

Prajwal Revanna Case: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್, ಕೆಲವೇ ಕ್ಷಣಗಳಲ್ಲಿ ಆದೇಶ

Rowdy sheeter camel Rohit escapes from DCPs office after ccb officials spotted him
ಬೆಂಗಳೂರು49 mins ago

Rowdy Sheeter: ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌