ವಿದೇಶದಲ್ಲೂ ಮೊಳಗಿತು ಕನ್ನಡ ಕಹಳೆ Vistara News
Connect with us

ಕನ್ನಡ ರಾಜ್ಯೋತ್ಸವ

ವಿದೇಶದಲ್ಲೂ ಮೊಳಗಿತು ಕನ್ನಡ ಕಹಳೆ

ಮಂಗಳವಾರ ರಾಜ್ಯದಲ್ಲಿ ಮಾತ್ರವಲ್ಲದ ವಿದೇಶಗಳಲ್ಲೂ ಕನ್ನಡ ರಾಜ್ಯೋತ್ಸವದ ಕನ್ನಡ ಕಹಳೆ ಮೊಳಗಿದೆ. ಥಾಯ್ಲೆಂಡ್‌ ರಾಜಧಾನಿ ಬ್ಯಾಂಕಾಕ್‌ನಲ್ಲಿ ಕನ್ನಡಿಗರಾದ ಡಾ. ಲೇಖನಾ, ಕಲಾ, ಲತಾ, ಶಿಲ್ಪಾ, ಚಂದ್ರಶೇಖರ್‌, ಅಮೋಘವರ್ಷ, ಸಂಭ್ರಮ, ಮೌನಿಶಾ ಮತ್ತು ಭಾವನಾ ಅವರು “ಹಚ್ಚೇವು ಕನ್ನಡದ ದೀಪ” ವಾಚನ ಮೂಲಕ ತಾವಿದ್ದಲ್ಲೇ ಕನ್ನಡ ರಾಜೋತ್ಸವ ಆಚರಿಸುವ ಮೂಲಕ ಕನ್ನಡ ಪ್ರೇಮ ಮೆರೆದರು.

VISTARANEWS.COM


on

ವಿದೇಶದಲ್ಲೂ ಮೊಳಗಿತು ಕನ್ನಡ ಕಹಳೆ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕನ್ನಡ ರಾಜ್ಯೋತ್ಸವ

Barisu Kannada Dindimava | ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ; ನಾಳೆ ನರೇಂದ್ರ ಮೋದಿ ಚಾಲನೆ, ಏನೇನಿದೆ ವಿಶೇಷ?

ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ.

VISTARANEWS.COM


on

Edited by

Delhi kannada sangha
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಫೆ. ೨೫) ನವದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ದೆಹಲಿ ಕರ್ನಾಟಕ ಸಂಘದ ೭೫ನೇ ವಾರ್ಷಿಕೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಕಾರ್ಯಕ್ರಮ ಇದಾಗಿದೆ.

ಪ್ರಧಾನಿ ಮೋದಿಯವರ ಏಕ ಭಾರತ ಶ್ರೇಷ್ಠ ಭಾರತದ ಆಶಯಕ್ಕೆ ಅನುಗುಣವಾಗಿ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡುವ ಉದ್ದೇಶದಿಂದ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಮೈಸೂರಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಮೊದಲ ದಿನದ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ.

ಫೆಬ್ರವರಿ 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‍ಕುಮಾರ್ ಉಪಸ್ಥಿತರಿರುತ್ತಾರೆ.

1000ಕ್ಕೂ ಅಧಿಕ ಕಲಾವಿದರು ಭಾಗಿ

ಆಜಾದಿ ಕಾ ಅಮೃತ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವದ ಎರಡು ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಗಳು ತೆರೆದುಕೊಳ್ಳಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 10,000ದಿಂದ 12,000 ಕನ್ನಡಿಗರು ನೆಲೆಸಿದ್ದಾರೆ. ಅದರಲ್ಲಿ ಸುಮಾರು 3,500 ದೆಹಲಿ ಕರ್ನಾಟಕ ಸಂಘದ ಸದಸ್ಯರಾಗಿದ್ದಾರೆ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜು ಹೇಳಿದ್ದಾರೆ.

ಮಾಜಿ ಅಧ್ಯಕ್ಷರು ಉತ್ಸವದಿಂದ ದೂರ

ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರು ಸಂಘದ‌ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದಾರೆ. ʻʻಕರ್ನಾಟಕ ಸಂಘವು ಇದುವೇ ಫೆಬ್ರವರಿ 25 ಮತ್ತು 26, ರಂದು ಆಚರಿಸುತ್ತಿರುವ ಸುವರ್ಣ ಮಹೋತ್ಸವ ಆಚರಣೆಯು ಸಂಘದ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದೆ ಎಂದು ನಾವು ಭಾವಿಸುತ್ತೇವೆ. ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ‌ ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ” ಎಂದು ಮಾಜಿ ಅಧ್ಯಕ್ಷರು ಆರೋಪಿಸಿದ್ದಾರೆ.

“ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಲೇಖಕ, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ. ಕಾರ್ಯಕ್ರಮದ ಒಟ್ಟು ಆಯೋಜನೆಯಲ್ಲಿ ಸಂಘದ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುವ ವಿಚಾರವಾಗಿದೆ. ಕಾರ್ಯಕಾರೀ ಸಮಿತಿಯ ಕೆಲವು ಸದಸ್ಯರಿಗೂ ವಿಷಯ ಸ್ಪಷ್ಟತೆಯಿಲ್ಲ. ಹಣಕಾಸಿನ ವಿಷಯದಲ್ಲಿ‌ ಪಾರದರ್ಶಕತೆಯನ್ನು ಕಾಪಾಡಿಕೊಂಡಿಲ್ಲ. ಇಂಥ ಹಲವು ಕಾರಣಗಳಿಂದಾಗಿ ನಾವು ಸಂಘದ‌ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದೇವೆ” ಎಂದು ಸಂಘದ ಮಾಜಿ ಅಧ್ಯಕ್ಷರುಗಳಾದ ಡಾ. ಪುರುಷೋತ್ತಮ ಬಿಳಿಮಲೆ, ಡಾ. ವೆಂಕಟಾಚಲ ಹೆಗಡೆ ಮತ್ತು ವಸಂತ ಶೆಟ್ಟಿ ಬೆಳ್ಳಾರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : Shivamogga Airport : ಈ ವಿಮಾನ ನಿಲ್ದಾಣ ವಾಣಿಜ್ಯ, ಸಂಪರ್ಕ, ಪ್ರವಾಸೋದ್ಯಮಕ್ಕೆ ಬೂಸ್ಟ್‌ ಎಂದ ಮೋದಿ

Continue Reading

ಕ ಸಾ ಪ

ಕನ್ನಡ ಸಾಹಿತ್ಯ ಸಮ್ಮೇಳನ | ಇದು ಧರ್ಮ ಸಮ್ಮೇಳನವಲ್ಲ, ಇಲ್ಲಿ ಕನ್ನಡವೇ ಸಾರ್ವಭೌಮ: ಟೀಕಿಸಿದವರಿಗೆ ಮಹೇಶ ಜೋಶಿ ಉತ್ತರ

ಇದು ಧರ್ಮ ಆಧಾರಿತ,  ಜಾತಿ ಆಧಾರಿತ ಸಾಹಿತ್ಯ ಸಮ್ಮೇಳನವಲ್ಲ. ಇಲ್ಲಿ ಕನ್ನಡವೇ ಸಾರ್ವಭೌಮ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ನುಡಿದರು.

VISTARANEWS.COM


on

Edited by

Koo

ಹಾವೇರಿ (ಕನಕ- ಶರೀಫ- ಸರ್ವಜ್ಞ ವೇದಿಕೆ): ಹಾವೇರಿಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಡಲಾಗಿದೆ ಎಂಬ ಬಿ.ಕೆ. ಹರಿಪ್ರಸಾದ್ ಮಾತುಗಳನ್ನು ನಾನು ಒಪ್ಪುವುದಿಲ್ಲ. ಇದು ಧರ್ಮ ಆಧಾರಿತ,  ಜಾತಿ ಆಧಾರಿತ ಸಾಹಿತ್ಯ ಸಮ್ಮೇಳನವಲ್ಲ. ಇಲ್ಲಿ ಕನ್ನಡವೇ ಸಾರ್ವಭೌಮ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ನುಡಿದರು.

ನಾನು ಸಾಹಿತ್ಯ ಸಮ್ಮೇಳನದಲ್ಲಿ ರಾಜಕೀಯ ಮಾತಾಡುವುದಿಲ್ಲ. ಆದರೆ ಟೀಕಿಸಿದವರಿಗೆ ಉತ್ತರ ನೀಡದಿದ್ದರೆ ಅದನ್ನು ಒಪ್ಪಿಕೊಂಡಂತಾಗುತ್ತದೆ. ಸಮಾನತೆಯ ಹರಿಕಾರ ಸಂತ ಶಿಶುನಾಳ ಶರೀಫರ ನಾಡಿನಲ್ಲಿ, ಕುಲ ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಂದೇಶ ನೀಡಿದ ಕನಕದಾಸರ ಈ ನಾಡಿನಲ್ಲಿ ಧರ್ಮಾಧಾರಿತವಾಗಿ ಅನ್ಯಾಯ ಮಾಡಲು ಸಾಧ್ಯವಿಲ್ಲ. ಮುಖ್ಯ ವೇದಿಕೆಯಲ್ಲಿ ಇಬ್ಬರು ಮುಸ್ಲಿಮರಿಗೆ ಸನ್ಮಾನ ಮಾಡಿದ್ದೇವೆ. ಆದರೆ ಅವರ ಹೆಸರಿನಲ್ಲಿ ಅದು ತಿಳಿಯುವುದಿಲ್ಲ ಎಂದರು.  

ಇನ್ನು ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜತೆಗೆ ಮುಖ್ಯಮಂತ್ರಿಗಳ ಫೋಟೋ ಹಾಕಿದ್ದನ್ನೂ ಟೀಕಿಸಲಾಯಿತು. ಹಾವೇರಿ ಸಮ್ಮೇಳನದ ಯಶಸ್ಸಿಗೆ ಹಾವೇರಿ ಜನತೆಯಂತೆಯೇ ಮುಖ್ಯಮಂತ್ರಿಗಳೂ ಕಾರಣ. ಹೀಗಾಗಿ ಸಮ್ಮೇಳನಾಧ್ಯಕ್ಷರ ಫೋಟೋ ಜತೆಗೆ ಅವರ ಫೋಟೋವನ್ನೂ ಹಾಕಿದ್ದೇವೆ ಎಂದು ನುಡಿದರು.

ಹಿಂದೆ ಇಂಥ ಸಮ್ಮೇಳನ ಆಗಿಲ್ಲ, ಮುಂದೆ ಆಗುವುದೂ ಇಲ್ಲ ಎಂಬ ವಿಶ್ವಾಸವಿದೆ. ಹಲಕೆಲವು ಸವಾಲುಗಳು, ಪ್ರಶ್ನೆಗಳು, ಕೊರತೆಗಳು ಉಂಟಾಗಿರಬಹುದು. ಆದರೆ ಇಂತಹ ಬೃಹತ್ ಕಾರ್ಯಕ್ರಮದಲ್ಲಿ ಇವು ಸಾಮಾನ್ಯ. ಮೂರು ದಿನಗಳ ಕಾರ್ಯಕ್ರಮದ ಯಶಸ್ಸಿನಿಂದ ದಿವ್ಯಾನುಭೂತಿ ಉಂಟಾಗಿದೆ ಎಂದು ಅವರು ನುಡಿದರು.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಸ್ಥಳೀಯ ಭಾಷೆಗೆ ಒತ್ತಾಸೆ ನೀಡಿದ ಅಮಿತ್‌ ಶಾ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ

Continue Reading

ಕನ್ನಡ ರಾಜ್ಯೋತ್ಸವ

Kannada Flag | 150 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ರಾರಾಜಿಸಿದ ಕನ್ನಡ ಬಾವುಟ; ಮಗುವಿನ ಕಾಲಿಗೆ ನಮಸ್ಕರಿಸಿದ ಆನಂದ್‌ ಸಿಂಗ್‌

ನವೆಂಬರ್‌ ತಿಂಗಳು ಮುಗಿಯುತ್ತಾ ಬಂದರೂ ಕನ್ನಡ ರಾಜ್ಯೋತ್ಸವ ಸಂಭ್ರಮ ಕಡಿಮೆ ಆಗಿಲ್ಲ. ಹೊಸಪೇಟೆಯಲ್ಲಿ ಕನ್ನಡ ಬಾವುಟ (Kannada Flag) ಹಾರಿಸಿ, ಶಾಶ್ವತವಾಗಿ ಉಳಿಯುವಂತೆ ಮಾಡಲಾಗಿದೆ.

VISTARANEWS.COM


on

Edited by

ಕನ್ನಡ ಧ್ವಜ
Koo

ವಿಜಯನಗರ: ಇಲ್ಲಿನ ಹೊಸಪೇಟೆ ತಾಲೂಕಿನ ಹೃದಯ ಭಾಗದಲ್ಲಿರುವ ಡಾ.ಪುನೀತ್ ರಾಜಕುಮಾರ್ ಸರ್ಕಲ್‌ನಲ್ಲಿ ಈಗಾಗಲೇ ನಿರ್ಮಾಣವಾಗಿರುವ 150 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಶಾಶ್ವತವಾಗಿ ಕನ್ನಡ ಬಾವುಟ (Kannada Flag) ಹಾರಾಡುವಂತೆ ಮಾಡಲಾಗಿದೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಭಾನುವಾರ (ನ. ೨೭) ಈ ವಿಶೇಷ ಕೆಲಸಕ್ಕೆ ಭಾನುವಾರ ಚಾಲನೆ ನೀಡಿದರು.

Kannada Flag

ವಿರೂಪಾಕ್ಷೇಶ್ವರನ ಕೃಪೆಯಿಂದ ಈ ಉತ್ತಮ ಕಾರ್ಯ ಇಂದು ನೆರವೇರಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದು, ಧ್ವಜ ಸ್ತಂಭ 150 ಅಡಿ ಇದ್ದರೆ, ಕನ್ನಡ ಧ್ವಜ ಸರಿಸುಮಾರು 450 ಅಡಿಗೂ ಅಧಿಕ ಉದ್ದ-ಅಗಲವಿದೆ. ವಿಜಯನಗರ ಜಿಲ್ಲೆಯ ಜನ ಶಾಶ್ವತವಾಗಿ ವರ್ಷದ 365 ದಿನವೂ ಕನ್ನಡ ಹಬ್ಬ ಆಚರಣೆ ಮಾಡಬೇಕು. ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಈ ಕಾರ್ಯವನ್ನು ನೆರವೇರಿಸಿದ್ದೇವೆ ಎಂದಿದ್ದಾರೆ.

ಕನ್ನಡ ಬಾವುಟವು ಇಂದಿನಿಂದ ಶಾಶ್ವತವಾಗಿ ಬಾಣಂಗಳದಲ್ಲಿ ಹಾರಾಡಲಿದೆ. ಇದರ ಸೌಭಾಗ್ಯ ಪಡೆದ ವಿಜಯನಗರ ಜಿಲ್ಲೆಯ ಜನರೇ ಧನ್ಯರು ಎಂದು ಕಾಂಗ್ರೆಸ್ ಮುಖಂಡ ನಾಗರಾಜ್ ಗುಜ್ಜಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಬೃಹತ್‌ ಎತ್ತರದ ಧ್ವಜ ಸ್ತಂಭದಲ್ಲಿ ಕನ್ನಡದ ಅತಿ ದೊಡ್ಡ ಬಾವುಟ ಹಾರಾಡುತ್ತಿರುವುದನ್ನು ಕಣ್ತುಂಬಿಕೊಳ್ಳಲು ಕಾಲೇಜು ವಿದ್ಯಾರ್ಥಿಗಳು, ಮಕ್ಕಳು ಸೇರಿದ್ದರು. ಇತ್ತ ನಗರಸಭೆ ಅಧ್ಯಕ್ಷೆ ಸುಂಕಮ್ಮ ಖುಷಿಯಿಂದ ಕುಣಿದು ಕುಪ್ಪಳಿಸಿದ್ದು ಕಂಡುಬಂತು.

ಪುಟಾಣಿಯ ಭಾಷಣಕ್ಕೆ ತಲೆದೂಗಿ ಕಾಲಿಗೆ ನಮಸ್ಕರಿಸಿದ ಸಚಿವ
ಕನ್ನಡ ಸಂಭ್ರಮದಲ್ಲಿ 6 ವರ್ಷದ ಅಭಿನವ್‌ನ ಭಾಷಣಕ್ಕೆ ತಲೆದೂಗಿದ ಸಚಿವ ಆನಂದ್‌ ಸಿಂಗ್‌ ಪುಟಾಣಿಯ ಕಾಲಿಗೆ ನಮಸ್ಕರಿಸಿ, ಮುದ್ದಾಡಿದರು. ವಿಶೇಷ ಚೇತನವಾಗಿರುವ ಅಭಿನವ್‌ ವಿಶ್ವಚೇತನ ಶಾಲೆಯಲ್ಲಿ 1ನೇ ತರಗತಿ ಓದುತ್ತಿದ್ದು, ಕನ್ನಡ ರಾಜ್ಯೋತ್ಸವ ಉದ್ದೇಶಿಸಿ ಭಾಷಣ ಮಾಡಿದ್ದಾನೆ. ಈತನ ಭಾಷಣಕ್ಕೆ ಸೇರಿದ್ದವರು ಚಪ್ಪಾಳೆಯ ಮೂಲಕ ಉರಿದುಂಬಿಸಿದ್ದರೆ, ಸಚಿವರು ಪುಟಾಣಿಯ ಕಾಲಿಗೆ ನಮಿಸಿದರು.

ಇದನ್ನೂ ಓದಿ | Aditi Prabhudeva | ಮದರಂಗಿ ಸಂಭ್ರಮದಲ್ಲಿ ಅದಿತಿ ಪ್ರಭುದೇವ: ರಂಗು ರಂಗಾದ ಫೋಟೊಗಳಿವೆ ನೋಡಿ!

Continue Reading

ಕನ್ನಡ ರಾಜ್ಯೋತ್ಸವ

ರಾಜ್ಯೋತ್ಸವ ಪ್ರಶಸ್ತಿ | 67 ಸಾಧಕರಿಗೆ ಗೌರವ: 60 ವರ್ಷ ವಯೋಮಿತಿ ನಿಯಮ ಬದಲಾವಣೆಗೆ ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದ 67 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಂದಿನ ವರ್ಷದಿಂದ ವಯೋಮಿತಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

VISTARANEWS.COM


on

Edited by

rajyothsava prashasti pradana 2022
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 67 ಸಾಧಕರನ್ನು ಗೌರವಿಸಲಾಯಿತು.
Koo

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪಡೆಯುವವರಿಗೆ ೬೦ ವರ್ಷ ಆಗಿರಬೇಕು ಎಂಬ ಈಗಿನ ನಿಯಮವನ್ನು ಬದಲಾಯಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ನಾಡಿನ ೬೭ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಕೊಟ್ಟಿರುವುದಕ್ಕೆ ಇಡೀ ಕರ್ನಾಟಕ ಸಂಭ್ರಮಿಸುತ್ತಿದೆ. ಒಬ್ಬ ಸಣ್ಣ ವಯಸ್ಸಿನ ಸಾಧಕನಿಗೆ ಈ ಪ್ರಶಸ್ತಿ ಸಂದಿರುವುದು ಎಲ್ಲರಿಗೂ ಖುಷಿ ತಂದಿದೆ. ರಾಜ್ಯೋತ್ಸವ ಪ್ರಶಸ್ತಿ ನೀಡುವ ವಿಚಾರದಲ್ಲಿ 60 ವರ್ಷ ಮೀರಿದವರಿಗೆ ಮಾತ್ರ ಪ್ರಶಸ್ತಿ ಎಂದು ನಿಯಮ ಮಾಡಿರುವುದು ಸರ್ಕಾರದ ತಪ್ಪು ನಡೆ. ಸಣ್ಣ ವಯಸ್ಸಿನಲ್ಲಿಯೇ ಪ್ರಶಸ್ತಿ ಕೊಟ್ರೆ ಇನ್ನೂ ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗುತ್ತದೆ.ಮುಂದಿನ ವರ್ಷದ ಇದರ ಬದಲಾವಣೆ ಆಗಲೇಬೇಕು ಎಂದರು. ಮುಂದಿನ ವರ್ಷದಿಂದ ವಯಸ್ಸಿನ ಮಿತಿ ಇಲ್ಲದೆ ನಿಜವಾದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ಘೋಷಿಸಿದರು.

ಸಾಧಕರ ಕಥೆಗಳನ್ನು ಒಳಗೊಂಡ ಪುಸ್ತಕ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಾಧನೆ, ಅವರ ಅನುಭವ ಮತ್ತು ಸಂದೇಶಗಳನ್ನ ದಾಖಲಿಸಿ ಒಂದು ಪುಸ್ತಕ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಅವರು ಸಲಹೆ ನೀಡಿದರು.

ಪ್ರಶಸ್ತಿ ಪಡೆದವರ ಸಾಧನೆ, ನಾಡು ಕಟ್ಟುವಲ್ಲಿ ಅವರ ಶ್ರಮವನ್ನು ತಿಳಿದುಕೊಂಡು ದಾಖಲಿಸಬೇಕು. ಅದನ್ನು ಸೇರಿಸಿ ಒಂದು ಕೃತಿ ರಚಿಸಬೇಕು. ಆ ಕೃತಿಯನ್ನು ಎಲ್ಲ ವಿದ್ಯಾರ್ಥಿಗಳಿಗೆ ಹಂಚಬೇಕು ಎಂದು ಸಿಎಂ ಅವರು ಸಚಿವ ಸುನಿಲ್‌ ಕುಮಾರ್‌ ಅವರಿಗೆ ಸಲಹೆ ನೀಡಿದರು.…

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೬೭ ಸಾಧಕರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಪ್ರಶಸ್ತಿ ಫಲಕ ನೀಡಿ ಗೌರವರಿಸಿದರು. ಪ್ರಶಸ್ತಿಯು ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ.

ಸಾಧಕರನ್ನು ಗುರುತಿಸಿ ಗೌರವ ಎಂದ ಸಚಿವರು
ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ತಾಯಿ ಭುವನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಅವರು, ಕಲಾವಿದರ ಪಿಂಚಣಿಯನ್ನು ೧೫೦೦ರಿಂದ ೨೦೦೦ ರೂ.ಗಳಿಗೆ ಏರಿಸಲಾಗಿದೆ. ೧೨೦೦೦ ಜನರಿಗೆ ನೀಡುತ್ತಿದ್ದ ಪಿಂಚಣಿಯನ್ನು ೧೫೦೦೦ ಮಂದಿಗೆ ಹೆಚ್ಚಿಸಲಾಗಿದೆ ಎಂದರು.

ಈ ಸಾರಿ ಅರ್ಜಿಗಳನ್ನು ಹೆಚ್ಚು ಸ್ವೀಕಾರ ಮಾಡದೆ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಸೇವಾ ಸಿಂಧು ಆ್ಯಪ್‌ನಲ್ಲಿ 9000 ಅರ್ಜಿಗಳು ಬಂದಿದ್ದವು. ಅರ್ಜಿ ಹಾಕಿದವರಿಗಿಂತ, ಸಮಿತಿ ಗುರುತಿಸಿದವರಿಗೆ ಪ್ರಶಸ್ತಿ ನೀಡಲಾಗಿದೆ. ಎಲ್ಲ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಸದಸ್ಯ ಟಿ.ಎ. ಸರವಣ, ಶಾಸಕ ಉದಯ್ ಗರುಡಾಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

<strong>ಪ್ರಶಸ್ತಿ ಪುರಸ್ಕೃತ ಸಾಧಕರು ಇವರು<strong>

2022 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಇವರು
ಸಂಕೀರ್ಣ ಕ್ಷೇತ್ರ:
ಸುಬ್ಬರಾಮ ಶೆಟ್ಡಿ – ಬೆಂಗಳೂರು, ವಿದ್ವಾನ್ ಗೋಪಾಲ ಕೃಷ್ಣ ಶರ್ಮಾ – ಬೆಂಗಳೂರು, ಶ್ರೀಮತಿ ಸೋಲಿಗರ ಮಾದಮ್ಮ – ಚಾಮರಾಜನಗರ
ಸೈನಿಕ ಕ್ಷೇತ್ರ: ಸು‌ಬೇದಾರ್ ಬಿ.ಕೆ ಕುಮಾರಸ್ವಾಮಿ – ಬೆಂಗಳೂರು
ಪತ್ರಿಕೋದ್ಯಮ: ಎಚ್ ಆರ್ ಶ್ರೀಶಾ – ಬೆಂಗಳೂರು, ಜಿ.ಎಂ.ಶಿರಹಟ್ಟಿ ‌- ಗದಗ
ವಿಜ್ಞಾನ ತಂತ್ರಜ್ಞಾನ: ಕೆ.ಶಿವನ್ – ಬೆಂಗಳೂರು, ಡಾ.ಡಿ.ಆರ್.ಬಳೂರಗಿ – ರಾಯಚೂರು
ಕೃಷಿ‌ ಕ್ಷೇತ್ರ: ಗಣೇಶ್ ತಿಮ್ಮಯ್ಯ – ಕೊಡಗು, ಚಂದ್ರಶೇಖರ್ ನಾರಯಣಪುರ – ಚಿಕ್ಕಮಗಳೂರು
ಪೌರ ಕಾರ್ಮಿಕ: ಮಲ್ಲಮ್ಮ‌ ಹೂವಿನಹಡಗಲಿ – ವಿಜಯನಗರ
ಪರಿಸರ: ಸಾಲುಮರದ ನಿಂಗಣ್ಣ – ರಾಮನಗರ
ಆಡಳಿತ: ಎಲ್ ಎಚ್ ಮಂಜುನಾಥ್ -ಶಿವಮೊಗ್ಗ, ಮದನ್ ಗೋಪಾಲ – ಬೆಂಗಳೂರು
ಹೊರನಾಡು: ದೇವಿದಾಸ್ ಶೆಟ್ಟಿ – ಮುಂಬೈ, ಅರವಿಂದ್ ಪಾಟೀಲ್ – ಹೊರನಾಡು, ಕೃಷ್ಣಮೂರ್ತಿ‌ ಮಾಂಜಾ- ತೆಲಂಗಾಣ
ಹೊರದೇಶ: ರಾಜ್ ಕುಮಾರ್ – ಗಲ್ಫ್ ರಾಷ್ಟ್ರ
ವೈದ್ಯಕೀಯ ಕ್ಷೇತ್ರ: ಎಚ್ಎಸ್‌ ಮೋಹನ್ – ಶಿವಮೊಗ್ಗ
ಬಸವಂತಪ್ಪ – ದಾವಣಗೆರೆ
ಚಲನಚಿತ್ರ: ದತ್ತಣ್ಣ – ಚಿತ್ರದುರ್ಗ, ಅವಿನಾಶ್‌- ಬೆಂಗಳೂರು
ಕಿರುತೆರೆ: ಸಿಹಿಕಹಿ ಚಂದ್ರು
ಸಾಹಿತ್ಯ: ಶಂಕರ್ ಚಚಡಿ – ಬೆಳಗಾವಿ, ಪ್ರೊಫೆಸರ್ ಕೃಷ್ಣೇಗೌಡ – ಮೈಸೂರು, ಅಶೋಕ್ ಬಾಬು ನೀಲಗಾರ್ – ಬೆಳಗಾವಿ, ಅ.ರಾ.ಮಿತ್ರ – ಹಾಸನ, ರಾಮಕೃಷ್ಣ ಮರಾಠೆ – ಕಲಬುರಗಿ
ಯಕ್ಷಗಾನ: ಎಂ.ಎ ನಾಯಕ್ – ಉಡುಪಿ, ಸುಬ್ರಹ್ಮಣ್ಯ ಧಾರೇಶ್ವರ – ಉತ್ತರ ಕನ್ನಡ, ಸರಪಾಡಿ ಅಶೋಕ್ ಶೆಟ್ಡಿ – ದಕ್ಷಿಣ ಕನ್ನಡ
ಕ್ರೀಡೆ: ದತ್ತಾತ್ರೇಯ ಗೋವಿಂದ ಕುಲಕರ್ಣಿ – ಧಾರವಾಡ, ರಾಘವೇಂದ್ರ ಅಣ್ಣೇಕರ್ – ಬೆಳಗಾವಿ

10 ಸಂಸ್ಥೆಗಳಿಗೆ ಪ್ರಶಸ್ತಿ
1) ರಾಮಕೃಷ್ಣ ಆಶ್ರಮ, ಮೈಸೂರು
2) ಲಿಂಗಾಯತ ಪ್ರಗತಿಶೀಲ ಸಂಘ, ಗದಗ
3) ಹಾವೇರಿಯ ಅಗಡಿ ತೋಟ
4) ತಲಸ್ಸೆಮಿಯಾ ಹಾಗೂ ಹಿಮೆಫೆಲಿಮಾ ಸೊಸೈಟಿ
5) ಅಮೃತ ಶಿಶು ನಿವಾಸ, ಬೆಂಗಳೂರು
6) ಸುಮನಾ ಫೌಂಡೇಶನ್
7) ಯುವವಾಹಿನಿ ಸಂಸ್ಥೆ, ದಕ್ಷಿಣ ಕನ್ನಡ
8) ನೆಲೆ‌ ಫೌಂಡೇಶನ್, ಬೆಂಗಳೂರು
9) ನಮ್ಮನೆ ಸುಮ್ಮನೆ , ಬೆಂಗಳೂರು
10) ಉಮಾ ಮಹೇಶ್ವರಿ ಹಿಂದುಳಿದ ವರ್ಗಗಳ ಟ್ರಸ್ಟ್, ಮಂಡ್ಯ

ಇದನ್ನೂ ಓದಿ | ಕನ್ನಡ ರಾಜ್ಯೋತ್ಸವ| ಕನ್ನಡ ಭಾಷಾ ಬಳಕೆ ಕಡ್ಡಾಯಕ್ಕೆ ಡಿಸೆಂಬರ್‌ನಲ್ಲಿ ಶಾಸನ: ಮುಖ್ಯಮಂತ್ರಿ ಬೊಮ್ಮಾಯಿ

Continue Reading
Advertisement
Liquor Consumption of poor man
ಕರ್ನಾಟಕ6 mins ago

Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?

Anganawadi worker
ಕರ್ನಾಟಕ6 mins ago

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Apsara Murder In Hyderabad
ಕ್ರೈಂ9 mins ago

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Siddaramaiah as a conductor imaginary photo
ಕರ್ನಾಟಕ17 mins ago

Congress Guarantee: ಪಾರ್ಟ್‌ ಟೈಂ ಬಸ್ ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

Actress Nayanthara
South Cinema29 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ31 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್35 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema37 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema41 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ54 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!