ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಮಹತ್ವದ ಸುದ್ದಿ ಬೆಳವಣಿಗೆಗಳಿಗಾಗಿ (Karnataka live news) ಇಲ್ಲಿ ಗಮನಿಸಿ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಧರಣಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾಗಿರುವ ರಾಜ್ಯ ಬಿಜೆಪಿ ಘಟಕ, ಇಂದು ರಾಜಧಾನಿಯ ಫ್ರೀಡಂ ಪಾರ್ಕ್ನಲ್ಲಿ ಧರಣಿಗೆ ಮುಂದಾಗಿದೆ. 5 ಗ್ಯಾರಂಟಿಗಳ ಜಾರಿಯಲ್ಲಿ ಅನಗತ್ಯ ಷರತ್ತು, ಗೋ ಹತ್ಯೆ, ಮತಾಂತರ ಕಾಯ್ದೆ ವಾಪಸ್ ನಡೆಯನ್ನು ಖಂಡಿಸಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಹಿರಿಯ ನಾಯಕರಿಂದ ಧರಣಿ ನಡೆಯಲಿದೆ.
ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ವೀಕ್ಷಕರ ಉಪಸ್ಥಿತಿ
ಬೆಂಗಳೂರು: ವಿಪಕ್ಷ ನಾಯಕನ್ನು ಆರಿಸುವುದಕ್ಕಾಗಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎನ್ನಲಾಗಿದೆ. ರಾಜ್ಯಕ್ಕೆ ದೆಹಲಿಯಿಂದ ಇಂದು ವೀಕ್ಷಕರ ಆಗಮನ ಸಾಧ್ಯತೆ ಇದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.