Site icon Vistara News

Karnataka live news: ರಾಜ್ಯದ ಬೆಳವಣಿಗೆಗಳ ಕ್ಷಣಕ್ಷಣದ ಸುದ್ದಿಗಳು: ಸರ್ಕಾರದ ವಿರುದ್ಧ ಬಿಜೆಪಿ ಧರಣಿಗೆ ಸಜ್ಜು

Karnataka Live News Updates

ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಮಹತ್ವದ ಸುದ್ದಿ ಬೆಳವಣಿಗೆಗಳಿಗಾಗಿ (Karnataka live news) ಇಲ್ಲಿ ಗಮನಿಸಿ.

Harish Kera

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಧರಣಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾಗಿರುವ ರಾಜ್ಯ ಬಿಜೆಪಿ ಘಟಕ, ಇಂದು ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಧರಣಿಗೆ ಮುಂದಾಗಿದೆ. 5 ಗ್ಯಾರಂಟಿಗಳ ಜಾರಿಯಲ್ಲಿ ಅನಗತ್ಯ ಷರತ್ತು, ಗೋ ಹತ್ಯೆ, ಮತಾಂತರ ಕಾಯ್ದೆ ವಾಪಸ್ ನಡೆಯನ್ನು ಖಂಡಿಸಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಹಿರಿಯ ನಾಯಕರಿಂದ ಧರಣಿ ನಡೆಯಲಿದೆ.

Harish Kera

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ವೀಕ್ಷಕರ ಉಪಸ್ಥಿತಿ

ಬೆಂಗಳೂರು: ವಿಪಕ್ಷ ನಾಯಕನ್ನು ಆರಿಸುವುದಕ್ಕಾಗಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎನ್ನಲಾಗಿದೆ. ರಾಜ್ಯಕ್ಕೆ ದೆಹಲಿಯಿಂದ ಇಂದು ವೀಕ್ಷಕರ ಆಗಮನ ಸಾಧ್ಯತೆ ಇದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Exit mobile version