Site icon Vistara News

Karnataka live news: ಉಡುಪಿ ವಿಡಿಯೊ ಪ್ರಕರಣ ಸಿಐಡಿಗೆ ಹಸ್ತಾಂತರ; ನಡೆಯಲಿದೆ ಉನ್ನತ ಮಟ್ಟದ ತನಿಖೆ

Spandana Vijaya Raghavendra

ಬೆಂಗಳೂರು: ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು (Nethrajyothi Paramedical college) ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ (Case transferred to CID) ಮಾಡಿದೆ. ಈ ಮೂಲಕ ಉನ್ನತ ಮಟ್ಟದ ತನಿಖೆಗೆ ಮುಂದಾಗಿದೆ. ಆದರೆ, ಈ ಬಗ್ಗೆ ವಿಶೇಷ ತನಿಖಾ ತಂಡ (Special Investigation Team- SIT) ದಿಂದ ತನಿಖೆ ನಡೆಸಬೇಕು ಎಂಬ ಬೇಡಿಕೆಯನ್ನು ಒಪ್ಪಿಲ್ಲ.

ರಾಜ್ಯದ ಇಂದಿನ ಪ್ರಮುಖ ಸುದ್ದಿ ಬೆಳವಣಿಗೆಗಳನ್ನು (Karnataka live news) ತಿಳಿಯಲು ಇಲ್ಲಿ ಗಮನಿಸಿ.

Deepa S

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಚಿನ್ನಾರಿ ಮುತ್ತ ಎಂದು ಫೇಮಸ್​ ಆಗಿರುವ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನರಾಗಿದ್ದಾರೆ. 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. ಬ್ಯಾಂಕಾಕ್‌ಗೆ ವಿಜಯ ರಾಘವೇಂದ್ರ ಮತ್ತು ಪತ್ನಿ ಸ್ಪಂದನಾ ಟ್ರಿಪ್‌ಗೆ ಹೋಗಿದ್ದರು. ಅಲ್ಲಿಯೇ ಸ್ಪಂದನಾ ಅವರಿಗೆ ಹೃದಯಾಘಾತ ಸಂಭವಿಸಿದೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Vijay Raghavendra: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ
Deepa S

ಬೆಂಗಳೂರು ಸೇರಿ ಇಲ್ಲೆಲ್ಲ ಸಂಜೆ ವೇಳೆಗೆ ಮಳೆ ಕಾಟ

ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ರಾಜ್ಯಾದ್ಯಂತ ಇಂದು ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

Weather report : ಬೆಂಗಳೂರು ಸೇರಿ ಇಲ್ಲೆಲ್ಲ ಸಂಜೆ ವೇಳೆಗೆ ಮಳೆ ಕಾಟ
Exit mobile version