Site icon Vistara News

Karnataka live news: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನದಲ್ಲಿ ಚಾರ್ಜ್‌ಶೀಟ್‌ ಹಾಕ್ಲೇಬೇಕು; ಸಿದ್ದರಾಮಯ್ಯ ಆರ್ಡರ್‌

bharat jodo

ಬೆಂಗಳೂರು: ಇಂದು ಭಾರತ್ ಜೋಡೋ ವಾರ್ಷಿಕೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಇದರೊಂದಿಗೆ ರಾಜ್ಯದ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಇಲ್ಲಿ ಓದಿ.

Deepa S

ಸಿ.ಟಿ ಸ್ಕ್ಯಾನಿಂಗ್‌ ನೆಪದಲ್ಲಿ ವೃದ್ಧೆಯ ಬೆತ್ತಲೆ ಮಾಡಿ ಖಾಸಗಿ ಅಂಗಾಂಗ ಮುಟ್ಟಿದ ಕಾಮುಕ

ಸಿ.ಟಿ ಸ್ಕ್ಯಾನಿಂಗ್‌ (CT scan) ಮಾಡುವ ನೆಪದಲ್ಲಿ ವೃದ್ಧೆಯನ್ನು ಬೆತ್ತಲೆಗೊಳಿಸಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ (Physical abuse) ನಡೆಸಿದ್ದಾನೆ. ಕಾಮುಕ ಸಿಬ್ಬಂದಿ ಅಶೋಕ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Physical abuse : ಸಿ.ಟಿ ಸ್ಕ್ಯಾನಿಂಗ್‌ ನೆಪದಲ್ಲಿ ವೃದ್ಧೆಯ ಬೆತ್ತಲೆ ಮಾಡಿ ಖಾಸಗಿ ಅಂಗಾಂಗ ಮುಟ್ಟಿದ ಕಾಮುಕ!
Deepa S

ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ

ದಾವಣಗೆರೆ (Davanagere News) ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ (NH 54) ತಡೆಗೋಡೆಗೆ ಬೈಕ್‌ ಡಿಕ್ಕಿ (Bike Accident)ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಿ ರೆಡ್‌ಗೆಂದು ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ (Road Accident) ಪ್ರಾಣ ಕಳೆದುಕೊಂಡಿದ್ದಾರೆ.

Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ
Deepa S

ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಗಾಳಿ-ಮಳೆ!

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿಯಲ್ಲಿ (Weather report) ಸಾಮಾನ್ಯವಾಗಿದೆ. ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.7ರಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ (Rain news) ಮಳೆಯಾಗಲಿದೆ.

Weather report : ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಗಾಳಿ-ಮಳೆ!
Harish Kera

ಭಾರತ್‌ ಜೋಡೋ ವಾರ್ಷಿಕೋತ್ಸವ, ಇಂದು ಪಾದಯಾತ್ರೆ

ಬೆಂಗಳೂರು: ಇಂದು ಭಾರತ್ ಜೋಡೋ ವಾರ್ಷಿಕೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಎಐಸಿಸಿ ಕರೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಆಯೋಜನೆಯಾಗಿದ್ದು, ರಾಮನಗರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಜತೆಯಾಗಿ ಹೆಜ್ಜೆ ಹಾಕಲಿದ್ದಾರೆ.

Exit mobile version