ಬೆಂಗಳೂರು: ರೈತರಿಗೆ ಹಗಲು ಹೊತ್ತಿನಲ್ಲಿಯೇ ತ್ರಿ ಫೇಸ್ ವಿದ್ಯುತ್ ಕೊಡುವ ಚಿಂತನೆ ಇದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದೂ ಸೇರಿದಂತೆ ಇನ್ನಿತರ ಮಹತ್ವದ ರಾಜ್ಯದ ಸುದ್ದಿ ಬೆಳವಣಿಗೆಗಳನ್ನು (Karnataka live news) ಇಲ್ಲಿ ಗಮನಿಸಿ.
ಇನ್ನೊಂದು ವಾರ ಭಾರಿ ಮಳೆ ಎಚ್ಚರಿಕೆ
ರಾಜಧಾನಿ ಬೆಂಗಳೂರಲ್ಲಿ ಸೂರ್ಯ ಮರೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಮುಂದಿನ 24 ಗಂಟೆಯೊಳಗೆ ಬೀದರ್, ಕಲಬುರಗಿ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Weather Update) ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.
Weather report : ಇನ್ನೊಂದು ವಾರ ಕಾಣೆಯಾಗುವ ಸೂರ್ಯ; ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ