Site icon Vistara News

Karnataka live news: ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು?

train fire majestic

ಬೆಂಗಳೂರು: ರಾಜಧಾನಿಯ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಬಂದು ನಿಂತಿದ್ದ ಉದ್ಯಾನ್‌ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಬೆಂಕಿಗೆ ಕಾರಣವೇನು ಎಂಬ ಕುರಿತು ತನಿಖೆ ನಡೆಯುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿಗಳಿಗಾಗಿ (Karnataka live news) ಇಲ್ಲಿ ಗಮನಿಸಿ.

Deepa S

ನಿವೃತ್ತ ಇನ್ಸ್‌ಪೆಕ್ಟರ್‌ ಕೈ ಕತ್ತರಿಸಿದ ಕುಡುಕರು!

ಕೃಷಿ ಜಮೀನಿನಲ್ಲಿ ಕುಡಿದು ಮೋಜು ಮಸ್ತಿ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಿದಕ್ಕೆ‌ ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ (Assault case) ಮಾಡಿದ್ದಾರೆ. ರಾಮನಗರ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಕೃಷಯ್ಯ (61) ಹಲ್ಲೆಗೊಳಗಾದವರು.

Assault case : ನಿವೃತ್ತ ಇನ್ಸ್‌ಪೆಕ್ಟರ್‌ ಕೈ ಕತ್ತರಿಸಿದ ಕುಡುಕರು!
Prabhakar R

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, 6 ವರ್ಷದ ಮಗ ಅನುಮಾನಾಸ್ಪದ ಸಾವು

ಅಮೆರಿಕದ ಮೇರಿಲ್ಯಾಂಡ್‌ ರಾಜ್ಯದ ಬಾಲ್ಟಿಮೋರ್‌ನಲ್ಲಿ ದಾವಣಗೆರೆ (Davanagere News) ಮೂಲದ ದಂಪತಿ, 6 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ 9 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ ಅಮೆರಿಕದಲ್ಲಿ ನೆಲೆಸಿದ್ದರು. ಆದರೆ, ಈ ಮೂವರ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದೆ.

Davanagere News: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, 6 ವರ್ಷದ ಮಗ ಅನುಮಾನಾಸ್ಪದ ಸಾವು

Krishna Bhat

Sumalatha Ambarish : ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು?
Deepa S

ಕದ್ದ Rx ಬೈಕ್‌ನಲ್ಲಿ ವೀಲಿಂಗ್‌ ಮಾಡುತ್ತಿದ್ದ ಖತರ್ನಾಕ್‌ಗಳು ಅರೆಸ್ಟ್‌

ರಾಜ್ಯದಲ್ಲಿ ಬೈಕ್ ವೀಲಿಂಗ್‌ (Bike wheeling) ಹುಚ್ಚಾಟವು ಮಿತಿಮೀರಿದೆ. ಅದರಲ್ಲೂ ಇನ್‌ಸ್ಟಾದಲ್ಲಿ (instagram reels) ಹೆಚ್ಚು ಲೈಕ್‌ ಪಡೆಯಬೇಕು ಎಂದು ವೀಲಿಂಗ್‌ ಗೀಳಿಗೆ ಬಿದ್ದ ಕಳ್ಳರು ಕದ್ದ ಬೈಕ್‌ನಲ್ಲಿ (Bike theft case) ವೀಲಿಂಗ್‌ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

Bike wheeling : ಕದ್ದ Rx ಬೈಕ್‌ನಲ್ಲಿ ವೀಲಿಂಗ್‌ ಮಾಡುತ್ತಿದ್ದ ಖತರ್ನಾಕ್‌ಗಳು ಅರೆಸ್ಟ್‌
Deepa S

ಅಪಘಾತದಲ್ಲಿ ನರಳಾಡುತ್ತಿದ್ದ ಸವಾರನ ಪಾಲಿಗೆ ಆಪತ್ಭಾಂದವರಾದ 108 ಸಿಬ್ಬಂದಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ಗಳ ನಡುವೆ ಅಪಘಾತ (Bike Accident) ಸಂಭವಿಸಿದೆ. ಅಪಘಾತದ (Road Accident) ಬಳಿಕ ಬೈಕ್ ಸವಾರನೊಬ್ಬ ಪರಾರಿಯಾಗಿದ್ದು, ಮತ್ತೊಬ್ಬ ಬೈಕ್‌ ಸವಾರ ಸುಧಾಕರ್‌ ಕುಮಟೊಳ್ಳಿ (36) ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದವನನ್ನು ರಕ್ಷಣೆ ಮಾಡಲಾಗಿದೆ.

Road Accident : ಅಪಘಾತದಲ್ಲಿ ನರಳಾಡುತ್ತಿದ್ದ ಸವಾರನ ಪಾಲಿಗೆ ಆಪತ್ಭಾಂದವರಾದ 108 ಸಿಬ್ಬಂದಿ
Exit mobile version