Karnataka live news: ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು; ಕಾವೇರಿ ಬಿಕ್ಕಟ್ಟು ಚರ್ಚೆಗೆ ದಿಲ್ಲಿಯಲ್ಲಿ ರಾಜ್ಯ ಸರ್ವಪಕ್ಷ ನಾಯಕರ ಸಭೆ Vistara News
Connect with us

ಕರ್ನಾಟಕ

Karnataka live news: ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು; ಕಾವೇರಿ ಬಿಕ್ಕಟ್ಟು ಚರ್ಚೆಗೆ ದಿಲ್ಲಿಯಲ್ಲಿ ರಾಜ್ಯ ಸರ್ವಪಕ್ಷ ನಾಯಕರ ಸಭೆ

ದಿಲ್ಲಿಯಲ್ಲಿ ರಾಜ್ಯದ ಸರ್ವಪಕ್ಷ ನಾಯಕರ ಸಭೆ, ಚೈತ್ರ ಕುಂದಾಪುರ ಪ್ರಕರಣದ ಫಾಲೋಅಪ್‌ ಸೇರಿದಂತೆ ರಾಜ್ಯದ ಇಂದಿನ ಮಹತ್ವದ ಸುದ್ದಿಗಳನ್ನು (Karnataka live news) ನೋಡಲು ಇಲ್ಲಿ ಗಮನಿಸಿ.

VISTARANEWS.COM


on

cauvery meeting in delhi
Koo

ಬೆಂಗಳೂರು: ಬಿಗಡಾಯಿಸಿರುವ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮುಂದಿನ ಹೆಜ್ಜೆಗಳ ಕುರಿತು ಚರ್ಚೆಗೆ ದಿಲ್ಲಿಯಲ್ಲಿ ರಾಜ್ಯದ ಸರ್ವಪಕ್ಷ ಸಚಿವರು, ಸಂಸದರ ಸಭೆ ಕರೆಯಲಾಗಿದ್ದು, ಮುಂಜಾನೆ ಬ್ರೇಕ್‌ಫಾಸ್ಟ್‌ನೊಂದಿಗೆ ಸಭೆ ಆರಂಭವಾಯಿತು. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ನೋಡಲು ಇಲ್ಲಿ ಗಮನಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!

Cauvery water dispute : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸರ್ಕಾರದ ಆಡಳಿತ ವೈಖರಿಯನ್ನು ಟೀಕೆ ಮಾಡಿದೆ. ಅಲ್ಲದೆ, ಹಲವು ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಉತ್ತರ ಇಲ್ಲ ಎಂದು ಹೇಳಿದೆ. ಜತೆಗೆ ರಾಜ್ಯ ಸರ್ಕಾರಕ್ಕೆ ಏಳು ಪ್ರಶ್ನೆಗಳನ್ನು ಕೇಳಿದೆ.

VISTARANEWS.COM


on

Edited by

CM Siddaramaiah and BJP Karnataka infront of KRS Dam
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಬೆಂಗಳೂರು ಬಂದ್‌ ತೀವ್ರತೆ ಪಡೆದುಕೊಂಡಿದೆ. ಇದೇ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಬಿಜೆಪಿ ಸಹ ರಾಜಧಾನಿ ಬೆಂಗಳೂರಿನ ಹಲವು ಕಡೆ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದೆ. ಈಗ ಕರ್ನಾಟಕ ಬಿಜೆಪಿಯು (BJP Karnataka) ರಾಜ್ಯ ಸರ್ಕಾರಕ್ಕೆ ಪ್ರಮುಖವಾಗಿ ಏಳು ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ, ಜನತಾ ದರ್ಶನದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಏಳು ಪ್ರಶ್ನೆಗಳನ್ನು ಕೇಳಿದೆ.

ತಮಿಳುನಾಡಿಗೆ ಕಾವೇರಿ ನೀರು (Cauvery water to Tamil Nadu) ಬಿಟ್ಟಿರುವ ಕ್ರಮವನ್ನು ಪ್ರಶ್ನಿಸಿರುವ ರಾಜ್ಯ ಬಿಜೆಪಿ, ಅನ್ನಭಾಗ್ಯ ಯೋಜನೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ಕಾರದ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನೆ ಮಾಡಿದೆ. ಇನ್ನು ಬಸ್‌ ಸೌಕರ್ಯ ಹಾಗೂ ಅಭಿವೃದ್ಧಿ ವಿಷಯವನ್ನೂ ಬಿಜೆಪಿ ಎತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ “ಎಕ್ಸ್‌”ನಲ್ಲಿ ಬಿಜೆಪಿ ಕರ್ನಾಟಕ ಪೋಸ್ಟ್‌ವೊಂದನ್ನು ಅಪ್ಲೋಡ್‌ ಮಾಡಿದ್ದು, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ.

ಇದನ್ನೂ ಓದಿ: Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

ಬಿಜೆಪಿ ಪೋಸ್ಟ್‌ನಲ್ಲೇನಿದೆ?

ಜನತಾ ದರ್ಶನವೆಂಬ (Janata Darshan) ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗೆ ಅವರ ಬಳಿ ಇಲ್ಲ ಉತ್ತರ..!

  • ಚುನಾವಣೆಗೂ ಮುನ್ನ ಘೋಷಿಸಿದ ಅನ್ನಭಾಗ್ಯದ ಹತ್ತು ಕೆಜಿ ಅಕ್ಕಿ ಕೊಡುತ್ತಿಲ್ಲ ಏಕೆ?
  • ಬರಗಾಲ ಬಂದಿದ್ದರೂ ಸುಪ್ರೀಂ ತೀರ್ಪಿಗೂ ಮುನ್ನ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇಕೆ..?
  • ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಯೋಜನೆಗಳನ್ನು ಕನ್ನಡಿಗರಿಗೆ ದೊರಕದಂತೆ ಮಾಡಿದ್ದೀರಿ ಏಕೆ?
  • ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ತಡೆಯಲು ಪ್ರಯತ್ನ ಮಾಡುತ್ತಿಲ್ಲವೇಕೆ?
  • ಹಳ್ಳಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳನ್ನು ಸರ್ಕಾರ ಬಿಡುತ್ತಿಲ್ಲ ಏಕೆ?
  • ಒಂದು ಸಮುದಾಯದ ಉದ್ದಾರಕ್ಕೆ ನೂರಾರು ಕೋಟಿ ಕೊಟ್ಟಿದ್ದೀರಿ. ಆದರೆ, ನಿಮ್ಮಿಂದ ಬೇರೆ ಅಭಿವೃದ್ಧಿ ಆಗುತ್ತಿಲ್ಲವೇಕೆ?
  • ಪ್ರತಿಯೊಂದರ ಬೆಲೆ ಏರಿಕೆ ಮಾಡಿ ಸ್ವಾಭಿಮಾನಿ ಕನ್ನಡಿಗರ ಬದುಕನ್ನು ಬೀದಿಗೆ ತಂದಿದ್ದೀರಿ ಏಕೆ?

ಇದನ್ನೂ ಓದಿ: Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

ಈ ರೀತಿಯಾಗಿ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕೆ ಮಾಡಿದೆ. ಅಲ್ಲದೆ, “ವಿಧಾನಸೌಧದಲ್ಲಿ ಕೈಗೆ ಸಿಗದ ಸಚಿವರು ಅಡಗುತಾಣದಲ್ಲಿ ಅವಿತು ಕುಳಿತಿದ್ದಾರೆ” ಎಂದು ಸಚಿವರ ನಡೆಯನ್ನು ಟೀಕಿಸಿದೆ. ರಾಜ್ಯದ ಜನರು ಬೀದಿಯಲ್ಲಿ ನಿಂತು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ಪೋಸ್ಟ್‌ ಮೂಲಕ ಕಿಡಿಕಾರಿದೆ.

Continue Reading

ಕರ್ನಾಟಕ

Veerendra Patil : ಮಾಜಿ ಸಿಎಂ ವೀರೇಂದ್ರ ಪಾಟೀಲ್‌ ಪತ್ನಿ ಶಾರದಾ ಪಾಟೀಲ್‌ ವಿಧಿವಶ

Veerendra Patil : ರಾಜ್ಯದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‌ ಅವರ ಪತ್ನಿ ಶಾರದಾ ಪಾಟೀಲ್‌ ನಿಧನರಾಗಿದ್ದಾರೆ. ವೀರೇಂದ್ರ ಪಾಟೀಲ್‌ ಅವರು 1997ರಲ್ಲಿ ನಿಧನರಾಗಿದ್ದರು.

VISTARANEWS.COM


on

Edited by

Veerendra patil wife death
Koo

ಕಲಬುರಗಿ: ರಾಜ್ಯದ ಮಾಜಿ ಮುಖ್ಯಮಂತ್ರಿ (Former Chief minister) ವೀರೇಂದ್ರ ಪಾಟೀಲ್ (Veerendra patil) ಅವರ ಪತ್ನಿ ಶಾರದಾ ಪಾಟೀಲ್‌ (Sharada Patil) ಅವರು ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ಆಗಿತ್ತು.

ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಇದ್ದ ಅವರು ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಚಿಂಚೋಳಿಯ ವೀರೇಂದ್ರ ಪಾಟೀಲ್ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸುವ ಚಿಂತನೆ ಇದೆ. ಶಾರದಾ ಪಾಟೀಲ್ ಅವರು ಮಾಜಿ ಶಾಸಕ ಕೈಲಾಸನಾಥ ಪಾಟೀಲ್ ಅವರ ತಾಯಿಯಾಗಿದ್ದಾರೆ.

ವೀರೇಂದ್ರ ಪಾಟೀಲ್-ಶಾರದಾ ಪಾಟೀಲ್ ದಂಪತಿಗೆ ಕೈಲಾಶನಾಥ್ ಮತ್ತು ಇಬ್ಬರು ಪುತ್ರಿಯರಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವೀರೇಂದ್ರ ಪಾಟೀಲ್‌ ಅವರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 1968-1971 ಅವಧಿಯಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ 33 ತಿಂಗಳು 10 ದಿನ ಅಧಿಕಾರ ನಡೆಸಿದ್ದರು. 1989-1990ರ ಎರಡನೇ ಬಾರಿಗೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅವರು ನಿಜಲಿಂಗಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕೆಲಸ ಮಾಡಿದ್ದರು.

ವೀರೇಂದ್ರ ಪಾಟೀಲ್‌ ಅವರ ಸಾಹಸಿಕ ರಾಜಕೀಯ ಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದರು ಶಾರದಾ ಪಾಟೀಲ್‌. ವೀರೇಂದ್ರ ಪಾಟೀಲ ಅವರು 1997ರ ಮಾರ್ಚ್‌ 14ರಂದು ನಿಧನರಾಗಿದ್ದರು.

ಇದನ್ನೂ ಓದಿ: BS Viswanathan : ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಎಸ್. ವಿಶ್ವನಾಥನ್ ನಿಧನ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಪಾಟೀಲ್‌ ಸಂತಾಪ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರ ನಿಧನದ ವಿಚಾರ ಬೇಸರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಆದರ್ಶ ಗೃಹಿಣಿಯಾಗಿದ್ದರು. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಮೃತರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Continue Reading

ಉಡುಪಿ

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

Edited by

Girl standing in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಲ್ಕು ಜಿಲ್ಲೆಗಳಿಗೆ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಒಳನಾಡಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Road Accident : ಬೆಳಗಾವಿಯಲ್ಲಿ ಶಾಲಾ ಮಕ್ಕಳೇ ಅಧಿಕವಾಗಿದ್ದ ಬಸ್‌ ಒಂದು ಆಕ್ಸೆಲ್‌ ಕಟ್‌ ಆಗಿ ಪಲ್ಟಿಯಾಗಿದೆ. ಶಾಲೆಗೆ ಹೊರಟಿದ್ದ 20ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

Edited by

Bus Overturns after axel cut near Belagavi
ಆಕ್ಸೆಲ್‌ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌
Koo

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸ್‌ ಒಂದು ಆ‌ಕ್ಸೆಲ್‌ ಕಟ್‌ (Bus overturns after Axel cut) ಆಗಿ ಪಲ್ಟಿಯಾದ (Road accident) ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Accident near Ramadurga

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಇದರಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗಲೇ ಬಸ್‌ನ ಆಕ್ಸೆಲ್‌ ಕಟ್ ಆಗಿದೆ. ಆಕ್ಸೆಲ್‌ ಕಟ್‌ ಆದ ಕೂಡಲೇ ನಿಯಂತ್ರಣ ಕಳೆದುಕೊಂಡ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಬಸ್‌ ಅಲ್ಲೇ ಪಲ್ಟಿಯಾಗಿದೆ.

Ramadurga accident Axel cut scene

ಬೆಳಗ್ಗಿನ ಹೊತ್ತಾಗಿರುವುದರಿಂದ ಬಸ್‌ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದರು. ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಹಲವರಿಗೆ ಗಾಯಗಳಾಗಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದು ಸಮಾಧಾನದ ವಿಷಯ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

bus auto accident

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
CM Siddaramaiah and BJP Karnataka infront of KRS Dam
ಕರ್ನಾಟಕ3 mins ago

Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!

Veerendra patil wife death
ಕರ್ನಾಟಕ11 mins ago

Veerendra Patil : ಮಾಜಿ ಸಿಎಂ ವೀರೇಂದ್ರ ಪಾಟೀಲ್‌ ಪತ್ನಿ ಶಾರದಾ ಪಾಟೀಲ್‌ ವಿಧಿವಶ

Indian domestic cricket players
ಕ್ರಿಕೆಟ್15 mins ago

BCCI AGM: ಅತಿಥಿ ಕ್ರಿಕೆಟ್ ಆಟಗಾರರಿಗೆ ಶಾಕ್​ ನೀಡಿದ ಬಿಸಿಸಿಐ

solo travel
ಅಂಕಣ19 mins ago

ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!

Girl standing in rain
ಉಡುಪಿ23 mins ago

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

manipur
ದೇಶ40 mins ago

Manipur Horror: ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?

Bus Overturns after axel cut near Belagavi
ಕರ್ನಾಟಕ48 mins ago

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Saurashtra Cricket Association Stadium Rajkot
ಕ್ರಿಕೆಟ್1 hour ago

IND vs AUS 3rd ODI: ರಾಜ್​ಕೋಟ್​ನ​ ಪಿಚ್​ ರಿಪೋರ್ಟ್​ ದಾಖಲೆಯೇ ವಿಚಿತ್ರ

HD Kumaraswamy Bandh
ಕರ್ನಾಟಕ1 hour ago

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

madhugiri accident
ತುಮಕೂರು1 hour ago

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ18 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ20 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ22 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ23 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌