Site icon Vistara News

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು; ಸುಪ್ರೀಂ ಕೋರ್ಟ್‌ನಲ್ಲೂ ರಾಜ್ಯಕ್ಕೆ ಸಿಗದ ನ್ಯಾಯ

Cauvery water dispute KRS DAM

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕಾವೇರಿ ಪ್ರಾಧಿಕಾರ ನೀಡಿದ ತೀರ್ಪನ್ನು ಪಾಲಿಸುವಂತೆ ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಕೆಆರ್‌ಎಸ್‌ನಲ್ಲಿ ತಳ ಹಿಡಿದಿರುವ ಕಾವೇರಿ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇದು ರಾಜ್ಯಕ್ಕೆ ಮರಣ ಶಾಸನದಂತಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಸುದ್ದಿಗಳನ್ನು (Karnataka live news) ಇಲ್ಲಿ ನೋಡಿ.

Deepa S

ಈ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇಲ್ಲ!

ಸೆ.22ರಂದು ರಾಜ್ಯಾದ್ಯಂತ ಹಗುರ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

Weather Report : 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇಲ್ಲ!
Prabhakar R

ಕರ್ನಾಟಕ ಮುಕ್ತ ವಿವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ಮಾರಾಟ!

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷೆ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ಮಾರಾಟವಾಗಿರುವುದು ಕಂಡುಬಂದಿದೆ. ವಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು (KSOU Exam Paper Leak), ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSOU Exam Paper Leak: ಕರ್ನಾಟಕ ಮುಕ್ತ ವಿವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ಮಾರಾಟ!

Deepa S

ಶಿವಮೊಗ್ಗದಲ್ಲಿ ನಟೋರಿಯಸ್ ರೌಡಿಯನ್ನು ಬೆತ್ತಲೆಗೊಳಿಸಿ ಟಾರ್ಚರ್‌

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ (Assault Case) ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.

Assault Case : ಶಿವಮೊಗ್ಗದಲ್ಲಿ ನಟೋರಿಯಸ್ ರೌಡಿಯನ್ನು ಬೆತ್ತಲೆಗೊಳಿಸಿ ಟಾರ್ಚರ್‌!
Prabhakar R

ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ; ಕೆಆರ್‌ಎಸ್‌ಗೆ ನುಗ್ಗಲು ಯತ್ನಿಸಿದ ರೈತರು ವಶಕ್ಕೆ

ತಮಿಳುನಾಡಿಗೆ ನೀರು (Cauvery Water Dispute) ಬಿಡಬೇಕು ಎಂಬ ಸಿಡಬ್ಲ್ಯುಎಂಎ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಮಂಡ್ಯ ಹಾಗೂ ಮೈಸೂರಿನಲ್ಲಿ ರೈರ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದವು. ಕೆಲ ರೈತರು ಕೆಆರ್‌ಎಸ್‌ ಡ್ಯಾಂ ಬಳಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಜಲಾಶಯಕ್ಕೆ ನುಗ್ಗಲು ಯತ್ನಿಸಿದರು. ಆದರೆ, ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

Cauvery Water Dispute: ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ; ಕೆಆರ್‌ಎಸ್‌ಗೆ ನುಗ್ಗಲು ಯತ್ನಿಸಿದ ರೈತರು ವಶಕ್ಕೆ, ಸೆ.23ಕ್ಕೆ ಮಂಡ್ಯ ಬಂದ್

Deepa S

ಬ್ರೇಕ್‌ ಫೇಲ್‌; ಟೋಲ್‌ ಬಳಿ ನಿಂತಿದ್ದ ಪೊಲೀಸ್‌ ಜೀಪ್‌ಗೆ ಲಾರಿ ಡಿಕ್ಕಿ!

ಅತಿ ವೇಗವಾಗಿ ಬಂದ ಲಾರಿಯೊಂದು ಟೋಲ್ ಬಳಿ ನಿಂತಿದ್ದ ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್ ಬಳಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

Road Accident : ಬ್ರೇಕ್‌ ಫೇಲ್‌; ಟೋಲ್‌ ಬಳಿ ನಿಂತಿದ್ದ ಪೊಲೀಸ್‌ ಜೀಪ್‌ಗೆ ಲಾರಿ ಡಿಕ್ಕಿ!
Exit mobile version