Site icon Vistara News

Karnataka live news: ವಿಶ್ವೇಶ್ವರ ಭಟ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು

Siddaramaiah V Bhat

ವಿಶ್ವವಾಣಿ ಪ್ರಕಾಶನದ ವತಿಯಿಂದ ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ಆಯೋಜನೆಯಾಗಿರುವ ಆರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಆರಂಭಗೊಂಡಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಭಾಗಿಯಾಗಿದ್ದಾರೆ. ಆದರೆ, ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಆಗಮಿಸಿಲ್ಲ. ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂಬ ಬಗ್ಗೆ ಪ್ರಗತಿಪರರಿಂದ ಒತ್ತಡವಿತ್ತು. ಅವರ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಕಾರ್ಯಕ್ರಮದಿಂದ ದೂರ ಉಳಿದರೇ ಎಂಬ ಪ್ರಶ್ನೆ ಎದುರಾಗಿದೆ. ಅವರು ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಬಹುದು ಎಂಬ ಮಾತೂ ಕೇಳಿಬರುತ್ತಿದೆ.

Harish Kera

ಸಿಎಂ ಸಿದ್ದರಾಮಯ್ಯ ಮೇಲೆ ಬಿಕೆ ಹರಿಪ್ರಸಾದ್‌ ಆಕ್ರೋಶ

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಸಿಎಂ ಸಿದ್ದರಾಮಯ್ಯ ಮೇಲೆ ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್‌ ಈಡಿಗ- ಬಿಲ್ಲವ- ದೀವರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

Exit mobile version