Site icon Vistara News

Karnataka live news: ಟಾಯ್ಲೆಟ್‌ ಚಿತ್ರೀಕರಣ ಕೇಸ್‌ ತನಿಖಾಧಿಕಾರಿ ಬದಲು; ಮಲ್ಪೆ PI ಎತ್ತಂಗಡಿ, ಕುಂದಾಪುರ DSYPಗೆ ಹೊಣೆ

karnataka live news

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜು ವಿಡಿಯೊ ಪ್ರಕರಣದ ತನಿಖಾಧಿಕಾರಿ ಬದಲಾವಣೆ. ಮಲ್ಪೆ ಇನ್ಸ್‌ ಪೆಕ್ಟರ್‌ ಮಂಜುನಾಥ ಗೌಡ ಬದಲಿಗೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ. ಇದೂ ಸೇರಿದಂತೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿ ಬೆಳವಣಿಗೆಗಳನ್ನು (Karnataka live news) ತಿಳಿಯಲು ಇಲ್ಲಿ ಗಮನಿಸಿ.

Deepa S

ಪಟಾಕಿ ಬ್ಲಾಸ್ಟ್‌ 9 ಮಂದಿ ಸಾವು, ನೂರಕ್ಕೂ ಹೆಚ್ಚು ಮಂದಿ ಗಂಭೀರ

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಪಟಾಕಿ ಅಂಗಡಿ ಸ್ಫೋಟಗೊಂಡು 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನೂರಾಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪಟಾಕಿ ಗೋದಾಮು ಬೆಂಕಿಗಾಹುತಿ; 9 ಸಾವು, ನೂರಕ್ಕೂ ಹೆಚ್ಚು ಮಂದಿ ಗಂಭೀರ
Deepa S

ಖಾಸಗಿ ಬಸ್ ಪಲ್ಟಿ

ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ (Bus Accident) ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಈ ಅಪಘಾತ (Road Accident) ನಡೆದಿದೆ.

Road Accident : ಖಾಸಗಿ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Deepa S

ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಪವಾಡ

ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು (Muharram 2023) ಕೊಪ್ಪಳ ಜಿಲ್ಲೆಯಲ್ಲಿ (Koppal News) ಅದ್ಧೂರಿಯಾಗಿ ಆಚರಿಸಲಾಗಿದೆ. ಆಸ್ತಿಕರ ನಂಬಿಕೆಯಂತೆ ಹಲವು ಪವಾಡಗಳಿಗೆ ಸಾಕ್ಷಿಯಾಗಿದೆ.  ಶುಕ್ರವಾರ ಖತಲ್ ರಾತ್ರಿ ಹಿನ್ನೆಲೆಯಲ್ಲಿ ನಡೆದ ಆಚರಣೆಗಳಲ್ಲಿ ವಿವಿಧ ಗ್ರಾಮಗಳಲ್ಲಿ ವಿಶೇಷತೆಗೆ ಸಾಕ್ಷಿಯಾಯಿತು.

Muharram 2023 : ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಪವಾಡ; ಮುಸ್ಲಿಮ್ ಹಬ್ಬದಲ್ಲಿ ಹಿಂದೂಗಳ ಸಂಭ್ರಮ
Deepa S

ಉತ್ತರ ಕನ್ನಡದಲ್ಲಿಂದು ಮಳೆಯ ಅಬ್ಬರ! ಯೆಲ್ಲೋ ಅಲರ್ಟ್

ವಾರಾಂತ್ಯದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Weather report) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತುಂತುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Weather Report : ಉತ್ತರ ಕನ್ನಡದಲ್ಲಿಂದು ಮಳೆಯ ಅಬ್ಬರ! ಯೆಲ್ಲೋ ಅಲರ್ಟ್
Deepa S

ಮೊಹರಂ ಹಬ್ಬ; ಶನಿವಾರ ಬೆಂಗಳೂರಿನ ಈ ಮಾರ್ಗಗಳಲ್ಲಿ ವಾಹನ ಸಂಚಾರ ಬದಲು

ಮೊಹರಂ ಹಬ್ಬದ (Muharram 2023) ಭಾಗವಾಗಿ ಮುಸ್ಲಿಮರು ಮೆರವಣಿಗೆ (Moharram procession) ನಡೆಸುವ ಹಿನ್ನೆಲೆಯಲ್ಲಿ ಜುಲೈ 29ರಂದು ಮಧ್ಯಾಹ್ನ 1 ರಿಂದ 4.30 ರವರೆಗೆ ಬೆಂಗಳೂರು ನಗರದ ಕೆಲವು ರಸ್ತೆಗಳ ಸಂಚಾರ (Traffic Advisory) ಸ್ಥಗಿತಗೊಳಿಸಲಾಗಿದೆ.

Muharram 2023 : ಮೊಹರಂ ಹಬ್ಬ; ಶನಿವಾರ ಬೆಂಗಳೂರಿನ ಈ ಮಾರ್ಗಗಳಲ್ಲಿ ವಾಹನ ಸಂಚಾರ ಬದಲು
Exit mobile version