Site icon Vistara News

Karnataka Live News: ಮಂಡ್ಯದ ಮತ್ತೊಬ್ಬ ಡಾಕ್ಟರ್‌ ಆತ್ಮಹತ್ಯೆ; ಭ್ರೂಣ ಹತ್ಯೆಗೆ ಸಂಬಂಧ ಇದ್ಯಾ?

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar

ಬೆಂಗಳೂರು: ನಿನ್ನೆ ಬಾಂಬ್‌ ಬೆದರಿಕೆ ಬಂದ ಹಲವು ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ರಾಜ್ಯದ ಇನ್ನಷ್ಟು ಕ್ಷಣಕ್ಷಣದ ಸುದ್ದಿ ಅಪ್‌ಡೇಟ್‌ಗಳಿಗಾಗಿ (Karnataka Live News) ಇಲ್ಲಿ ಗಮನಿಸಿ.

Prabhakar R

ಗುರು ರಾಘವೇಂದ್ರ, ವಸಿಷ್ಠ, ಗುರು ಸಾರ್ವಭೌಮ ಬ್ಯಾಂಕ್‌ ಹಗರಣದ ಸಿಬಿಐ ತನಿಖೆಗೆ ಸಿಎಂ ಒಪ್ಪಿಗೆ

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

https://vistaranews.com/karnataka/cm-approves-cbi-probe-into-guru-raghavendra-vasishta-guru-sarvabhouma-bank-scam/522343.html

Prabhakar R

ಶರತ್ ಬಚ್ಚೇಗೌಡ ಮೇಲೆ ನೋಟುಗಳ ಸುರಿಮಳೆಗೈದ ಅಭಿಮಾನಿಗಳು!

ಶಾಸಕ ಶರತ್ ಬಚ್ಚೇಗೌಡ ಹುಟ್ಟುಹಬ್ಬದಲ್ಲಿ ಝಣ ಝಣ ಕಾಂಚಾಣ ಸದ್ದು ಮಾಡಿದೆ. ತಮ್ಮ ನೆಚ್ಚಿನ ನಾಯಕನಿಗೆ ಅಭಿಮಾನಿಗಳು ಹೂವಿನ ಜತೆ ನೋಟುಗಳ ಸುರಿಮಳೆಗೈದಿರುವುದು (Cash shower) ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ನಡೆದಿದೆ.

Cash shower: ಶರತ್ ಬಚ್ಚೇಗೌಡ ಮೇಲೆ ನೋಟುಗಳ ಸುರಿಮಳೆಗೈದ ಅಭಿಮಾನಿಗಳು!

Deepa S

ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು!

ಮದುವೆ ಮೆರವಣಿಗೆಯಲ್ಲಿ ಕುಣಿಯುವ ವಿಷಯಕ್ಕಾಗಿ ಜಗಳ ಶುರುವಾಗಿ ಯುವಕನ ಕೊಲೆಯಲ್ಲಿ ಅಂತ್ಯವಾಗಿದ್ದರೆ, ಮತ್ತೊಂದು ಕಡೆ ಅಪರಿಚಿತ ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಲಾಗಿದೆ.

Murder case : ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು!
Deepa S

ಪ್ರತ್ಯೇಕ ಕಡೆಗಳಲ್ಲಿ ಬಸ್‌ ಅಪಘಾತ; ನರಳಾಡಿದ ಪ್ರಯಾಣಿಕರು

ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಪಲ್ಟಿಯಾಗಿದ್ದರೆ, ಮತ್ತೊಂದು ಕಡೆ ಟ್ರ್ಯಾಕ್ಟರ್‌ ಹಾಗೂ ಬಸ್‌ ಮುಖಾಮುಖಿ ಡಿಕ್ಕಿಯಾಗಿದೆ.

Road Accident : ಪ್ರತ್ಯೇಕ ಕಡೆಗಳಲ್ಲಿ ಬಸ್‌ ಅಪಘಾತ; ನರಳಾಡಿದ ಪ್ರಯಾಣಿಕರು
Deepa S

2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

ಪ್ರತಿಷ್ಠಿತ ವಾಣಿವಿಲಾಸ್‌ ಆಸ್ಪತ್ರೆಯಲ್ಲಿ (Vanivilas Hospital) ಜಿರಳೆ ಕಾಟ (Cockroach bite) ಹೆಚ್ಚಾಗಿದ್ದು, ಎರಡು ದಿನದ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದೆ ಎಂದು ಪೋಷಕರು ಆರೋಪಿಸಿದ್ದಾರೆ. ನಾಗರಬಾವಿ ನಿವಾಸಿ ಆಶಾರಾಣಿ ಅವರು ಕಳೆದೆರಡು ದಿನದ ಹಿಂದೆ ವಾಣಿವಿಲಾಸ್ ಆಸ್ಪತ್ರೆಗೆ ಹೆರಿಗೆ ನೋವಿನಿಂದ ದಾಖಲಾಗಿದ್ದರು.

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!
Exit mobile version