Site icon Vistara News

Karnataka Live News : ದೆಹಲಿಗೆ ಹೋಗಿ ಬರಿಗೈಯಲ್ಲಿ ಬಂದ ಬಿಎಸ್‌ವೈ, ಪ್ರತಿಪಕ್ಷ ನಾಯಕನ ಆಯ್ಕೆ ಇಲ್ಲ

Karnataka Live News Updates
Deepa S

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಎಂಜಿನ್‌ನಲ್ಲಿ ಹೊತ್ತಿ ಉರಿದ ಬೆಂಕಿ

ಕೆ.ಕೆ ಎಕ್ಸ್‌ಪ್ರೆಸ್‌ (Karnataka Express) ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಅನಾಹುತವೊಂದು ತಪ್ಪಿದೆ. ಶನಿವಾರ (ಜು.1) ಸಂಜೆ 7.30ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಕೆಕೆ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್‌ ರೈಲು ನಿಲ್ಲಿಸಿ, ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

Fire Accident : ರೈಲು ಎಂಜಿನ್‌ನಲ್ಲಿ ಬೆಂಕಿ; ಸಮಯಪ್ರಜ್ಞೆ ಮೆರೆದ ಪೈಲಟ್‌, ಸಾವಿರಾರು ಪ್ರಯಾಣಿಕರು ಬಚಾವ್‌

Adarsha Anche

DK Shivakumar : ಇನ್ನೊಂದು ವರ್ಷಕ್ಕೆ ಸಿಎಂ ಬದಲಾವಣೆ? ಡಿ.ಕೆ. ಶಿವಕುಮಾರ್ ಸಿಎಂ?; ಕೇದಾರನಾಥ ಶ್ರೀ ಮಾತಿನ ಅರ್ಥವೇನು?

ಹೃಷಿಕೇಶದಲ್ಲಿ ಕರ್ನಾಟಕ ಭವನವನ್ನು ನಿರ್ಮಾಣ ಮಾಡಬೇಕು. ಅದು ಪೂರ್ತಿಯಾಗುವ ಹೊತ್ತಿಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂದು ಕೇದಾರನಾಥ ಶ್ರೀಗಳು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಯ ನೀಡಿದ್ದಾರೆ. ಅಲ್ಲದೆ, ಇನ್ನೊಂದು ವರ್ಷದಲ್ಲಿ ಮುಂದಿನ ಸಿಎಂ ಆಗುವ ಬಗ್ಗೆ ಪರೋಕ್ಷ ಸಂದೇಶವನ್ನೂ ನೀಡಿದ್ದಾರೆ.

DK Shivakumar : ಇನ್ನೊಂದು ವರ್ಷಕ್ಕೆ ಸಿಎಂ ಬದಲಾವಣೆ? ಡಿ.ಕೆ. ಶಿವಕುಮಾರ್ ಸಿಎಂ?; ಕೇದಾರನಾಥ ಶ್ರೀ ಮಾತಿನ ಅರ್ಥವೇನು?
Deepa S

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಕೊಳದಲ್ಲಿ ಈಜಲು ಹೋದ ಬಾಲಕರಿಬ್ಬರು (Youth drowned) ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಮ್ಮ ದೇವಾಲಯದ ಹಿಂಭಾಗದಲ್ಲಿ ನಡೆದಿದೆ. ಅಜಲಮ್ ಪಾಷಾ (16), ಮಹಮ್ಮದ್ ಅಲಿ (13) ಮೃತ ಬಾಲಕರು.

Drown in lake : ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು; ಮುಗಿಲುಮುಟ್ಟಿದ ಪಾಲಕರ ಆಕ್ರಂದನ
Adarsha Anche

HD Kumaraswamy : ದೇಶದಲ್ಲಿ GST ಇದ್ದಂತೆ, ರಾಜ್ಯದಲ್ಲೀಗ YST ಟ್ಯಾಕ್ಸ್: ಎಚ್‌.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ರಾಜ್ಯದಲ್ಲೀಗ ವೈಎಸ್‌ಟಿ ಟ್ಯಾಕ್ಸ್ ಇದೆ ಎಂದು ಆರೋಪವನ್ನೂ ಮಾಡಿದ್ದಾರೆ.

HD Kumaraswamy : ದೇಶದಲ್ಲಿ GST ಇದ್ದಂತೆ, ರಾಜ್ಯದಲ್ಲೀಗ YST ಟ್ಯಾಕ್ಸ್: ಎಚ್‌.ಡಿ. ಕುಮಾರಸ್ವಾಮಿ
Deepa S

ಸಾಲಬಾಧೆಗೆ ನೇಣಿಗೆ ಶರಣಾದ ರೈತ

ಹಾವೇರಿಯ ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Suicide Case ) ಸಾಲಬಾಧೆಗೆ ರೈತರೊಬ್ಬರು ನೇಣುಬಿಗಿದುಕೊಂಡಿದ್ದಾರೆ. ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದ ರೈತ ಶಿವನ ಗೌಡ ಹೊಸಮನಿ ಮೃತರು.

Suicide Case : ಹೈವೋಲ್ಟೇಜ್ ಟವರ್ ಏರಿ ಆತ್ಮಹತ್ಯೆಗೆ ಯತ್ನ; ಸಾಲಬಾಧೆಗೆ ನೇಣಿಗೆ ಶರಣಾದ ರೈತ
Exit mobile version