Site icon Vistara News

Karnataka live news: PM Narendra Modi : ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಮೈಸೂರು ಅಂಬಾರಿ ಉಡುಗೊರೆ

karnataka live news

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದರು. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿ ಬೆಳವಣಿಗೆಗಳಿಗೆ (Karnataka live news) ಇಲ್ಲಿ ಗಮನಿಸಿ.

Prabhakar R

ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಆರಗ ಜ್ಞಾನೇಂದ್ರ ಮೇಲೆ ಕಲಬುರಗಿಯಲ್ಲಿ ಎಫ್‌ಐಆರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪಾಲಿಕೆ ಮಾಜಿ ಸದಸ್ಯ ರಾಜು ಜಾನೆ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಐಪಿಸಿ ಕಲಂ 504 ಅಡಿಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಆರಗ ಜ್ಞಾನೇಂದ್ರ ಮೇಲೆ ಕಲಬುರಗಿಯಲ್ಲಿ ಎಫ್‌ಐಆರ್
Prabhakar R

ಕವಾಡಿಗರಹಟ್ಟಿ ನೀರಿನಲ್ಲಿ ವಿಷಕಾರಿ ಅಂಶವಿಲ್ಲ: ಎಫ್ಎಸ್ಎಲ್ ವರದಿ

ಚಿತ್ರದುರ್ಗದ ಕವಾಡಿಗರಹಟ್ಟಿ ಕಲುಷಿತ ನೀರು ದುರಂತ ಪ್ರಕರಣದ ಹಿನ್ನೆಲೆಯಲ್ಲಿ ನಡೆಸಲಾಗಿದ್ದ ನೀರಿನ ಮಾದರಿ ಪರೀಕ್ಷೆಯ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ (ಎಫ್ಎಸ್ಎಲ್) ಜಿಲ್ಲಾಡಳಿತದ ಕೈ ಸೇರಿದೆ. ಗ್ರಾಮಕ್ಕೆ ಸರಬರಾಜಾದ ನೀರಿನಲ್ಲಿ (Contaminated Water) ಯಾವುದೇ ವಿಷಕಾರಿ ಅಂಶ ಇಲ್ಲಾ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Contaminated Water: ಕವಾಡಿಗರಹಟ್ಟಿ ನೀರಿನಲ್ಲಿ ವಿಷಕಾರಿ ಅಂಶವಿಲ್ಲ: ಎಫ್ಎಸ್ಎಲ್ ವರದಿ
Deepa S

ಬೆಂಗಳೂರಲ್ಲಿ ತುಂತುರು, ಕರಾವಳಿಯಲ್ಲಿ ವ್ಯಾಪಕ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕದಿಂದ ಲಘು ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.

Weather Report : ಬೆಂಗಳೂರಲ್ಲಿ ತುಂತುರು, ಕರಾವಳಿಯಲ್ಲಿ ವ್ಯಾಪಕ ಮಳೆ
Deepa S

ಮಕ್ಕಳಿಗೆ ಬಲವಂತವಾಗಿ ವಿಷ ಕುಡಿಸಿ ಕಿಡಿಗೇಡಿಗಳು ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ಕಿಡಿಗೇಡಿಗಳು ಮನೆ ಮುಂದೆ ನಿಂತಿದ್ದ ಮಕ್ಕಳಿಗೆ ಬಲವಂತದಿಂದ ವಿಷ (poisoning) ಕುಡಿಸಿ ಪರಾರಿ (Assault Case) ಆಗಿದ್ದಾರೆ.

Assault Case : ಮಕ್ಕಳಿಗೆ ಬಲವಂತವಾಗಿ ವಿಷ ಕುಡಿಸಿ ಕಿಡಿಗೇಡಿಗಳು ಪರಾರಿ
Deepa S

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ

ಬೆಂಗಳೂರಿನ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್‌ನಲ್ಲಿ ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಶರಣಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು (Self Harming) ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ (ಆ.2) ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ (29) ಹಾಗೂ 1 ಹಾಗೂ 3 ವರ್ಷದ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.

Self Harming : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
Exit mobile version