Karnataka weather : ರಾತ್ರಿ ಹೊತ್ತು ಬೀಸುತ್ತೆ ಥಂಡಿ ಗಾಳಿ; ಇಲ್ಲೆಲ್ಲ ಶುಷ್ಕ ವಾತಾವರಣ - Vistara News

ಕರ್ನಾಟಕ

Karnataka weather : ರಾತ್ರಿ ಹೊತ್ತು ಬೀಸುತ್ತೆ ಥಂಡಿ ಗಾಳಿ; ಇಲ್ಲೆಲ್ಲ ಶುಷ್ಕ ವಾತಾವರಣ

Karnataka Weather : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಥಂಡಿ ಗಾಳಿ ಬೀಸಲಿದೆ. ಸೂರ್ಯನ ತಾಪಮಾನ ಹೆಚ್ಚಾಗಿದ್ದರೂ ವಾತಾವರಣ ಮಾತ್ರ ಕೂಲ್‌
(Winter) ಆಗಿರಲಿದೆ.

VISTARANEWS.COM


on

karnataka weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ಒಣಹವೆ (Dry weather) ಇತ್ತು. ಜತೆಗೆ ಕನಿಷ್ಠ ಉಷ್ಣಾಂಶ ವಿಜಯಪುರದಲ್ಲಿ 10.5 ಡಿ.ಸೆ ದಾಖಲಾಗಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಶುಷ್ಕ ವಾತಾವರಣವೇ (Karnataka weather Forecast) ಮೇಲುಗೈ ಸಾಧಿಸಲಿದೆ.

ಬಿಸಿಲ ನಾಡು ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಕಡಿಮೆ ಆಗಲಿದೆ. ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ.

ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕನಿಷ್ಠ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಶೀತದ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಬೆಳಗ್ಗೆ-ಸಂಜೆ ಬೀಸಲಿದೆ ಥಂಡಿ ಗಾಳಿ

ರಾಜಧಾನಿ ಬೆಂಗಳೂರಲ್ಲಿ ಬೆಳಗಿನ ಸಮಯ ಹಾಗೂ ರಾತ್ರಿಯಂದು ಥಂಡಿ ಗಾಳಿ ಬೀಸಲಿದೆ. ಮಧ್ಯಾಹ್ನದ ಹೊತ್ತು ಸೂರ್ಯ ತನ್ನ ಪ್ರಭಾವ ಬೀರಲಿದ್ದಾನೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Student Death : ಅಮ್ಮನ ಎದುರೇ ಅವಮಾನ; ಕಾಲೇಜು ಡೀನ್‌ ಕಿರುಕುಳಕ್ಕೆ ಸ್ಟೂಡೆಂಟ್‌ ಸೂಸೈಡ್‌ ‌

ವಿಂಟರ್‌ ಫ್ಯಾಷನ್‌ಗೆ ಮರಳಿದ ಆಕರ್ಷಕ ವುಲ್ಲನ್‌ ಪೊಂಚೊ

ಆಕರ್ಷಕ ವಿನ್ಯಾಸದ ವುಲ್ಲನ್‌ ಪೊಂಚೊಗಳು ಈ ವಿಂಟರ್‌ ಸೀಸನ್‌ಗೆ (Winter Fashion) ಮರು ಎಂಟ್ರಿ ನೀಡಿವೆ. ಧರಿಸಿದಾಗ ಆಕರ್ಷಕವಾಗಿ ಕಾಣುವುದು ಮಾತ್ರವಲ್ಲ, ಎಲ್ಲಾ ಬಗೆಯ ಉಡುಪಿಗಳಿಗೆ ಮ್ಯಾಚ್‌ ಆಗುವ ಡಿಸೈನ್‌ನಲ್ಲಿ ಬಿಡುಗಡೆಗೊಂಡಿವೆ.

Poncho design

ಪೊಂಚೊ ವಿನ್ಯಾಸ

ವಿಭಿನ್ನ ಸ್ಟಿಚ್ಚಿಂಗ್‌ ಸ್ಟೈಲ್‌ ಹೊಂದಿರುತ್ತದೆ. ಜತೆಗೆ ತೀರಾ ಕಡಿಮೆ ಸ್ಟಿಚ್ಚಿಂಗ್‌ ಲೈನ್‌ ಇದರಲ್ಲಿರುತ್ತದೆ. ಫ್ರೀ ಸ್ಲೀವ್‌ ಎನ್ನಲಾಗುವ ಈ ಪೊಂಚೊ ಪ್ಯಾಟರ್ನ್‌ನಲ್ಲಿ ಸೈಡ್‌ ಸ್ಟಿಚ್ಚಿಂಗ್‌ ಇರುವುದಿಲ್ಲ. ಕೇವಲ ತಲೆಯ ಭಾಗದಿಂದ ಇದನ್ನು ಹಾಕಿಕೊಂಡರಾಯಿತು ಎನ್ನುತ್ತಾರೆ ಪೊಂಚೊ ವಿನ್ಯಾಸಕರು. ಕೆಲವು ತ್ರಿಕೋನ ಆಕಾರದಲ್ಲಿದ್ದರೇ ಮತ್ತೆ ಕೆಲವು ಆಯತಾಕಾರದಲ್ಲಿರುತ್ತವೆ. ಇನ್ನು ಕೆಲವು ಶೇಪ್‌ಲೆಸ್‌ ಎನ್ನಬಹುದು. ಪೊಂಚೊ ಪ್ರಿಯರು ಆದಷ್ಟೂ ತಮ್ಮ ಪರ್ಸನಾಲಿಟಿ ಹಾಗೂ ಆಕಾರಕ್ಕೆ ತಕ್ಕಂತಹದ್ದನ್ನೇ ಖರೀದಿಸುವುದು ಉತ್ತಮ ಎನ್ನುತ್ತಾರೆ. ಇತ್ತೀಚೆಗೆ ಕೆಲವು ರೆಗ್ಯುಲರ್‌ ವುಲ್ಲನ್‌ ಟಾಪ್‌ನಂತೆಯೇ ಕಾಣುತ್ತವೆ. ಕೆಲವು ಪುಲ್‌ಓವರ್‌ನಂತೆ ಕಾಣುತ್ತವೆ. ವಿನ್ಯಾಸದಲ್ಲೂ ಬದಲಾವಣೆಯಾಗಿದೆ. ನಾನಾ ವರ್ಣಗಳಲ್ಲಿ ಮಿಕ್ಸ್‌ ಮ್ಯಾಚ್‌ ಆಪ್ಷನ್‌ನಲ್ಲಿ ಲಭ್ಯವಿರುವ ಪೊಂಚೊಗಳ ಫಿನಿಶಿಂಗ್‌ ಕೂಡ ಅಷ್ಟೇ ಆಕರ್ಷಕವಾಗಿರುತ್ತದೆ. ಬಹುತೇಕ ನೆಕ್‌ಲೈನ್‌ಗಳು ಅಗಲವಾಗಿರುತ್ತವೆ. ಯಾವುದೇ ಬಟನ್ಸ್‌ ಇರುವುದಿಲ್ಲ ಎನ್ನುತ್ತಾರೆ ಫ್ಯಾಷನ್‌ ಡಿಸೈನರ್‌ ನೈನಾ ಅರೋರಾ ಧವನ್‌.

Hand Made Knitted Poncho

ಹ್ಯಾಂಡ್‌ ಮೇಡ್‌ ನಿಟ್ಟೆಡ್‌ ಪೊಂಚೊ

ವುಲ್ಲನ್‌ನ ಪೊಂಚೊಗಳನ್ನು ಹೆಣೆಯುವವರು ಇದ್ದಾರೆ. ಸ್ಟೆಟ್ಟರ್‌ನಂತೆಯೇ ಇವನ್ನು ಹೆಣೆಯಲಾಗುತ್ತದೆ. ವಿನ್ಯಾಸ ಮಾಡುವ ಉಸಾಬರಿಯಿಲ್ಲ. 80ರ ದಶಕದಲ್ಲಿದ್ದ ಈ ಪೊಂಚೊ ಫ್ಯಾಷನ್‌ ಇದೀಗ ಮತ್ತೊಮ್ಮೆ ಮರುಕಳಿಸಿರುವುದು ನಾನಾ ಪ್ರಯೋಗಗಳಿಗೆ ದಾರಿ ಮಾಡಿ ಕೊಟ್ಟಿದೆ. ಈ ಹಿಂದೆಯೂ ಒಮ್ಮೆ ಈ ಫ್ಯಾಷನ್‌ ಕೆಲಕಾಲ ಬಂದಿತ್ತು. ಆದರೆ ಸೀಸನ್‌ ಬದಲಾದಂತೆ ಮರೆಯಾಗಿತ್ತು. ಇದೀಗ ಮುಂಬರುವ ವಿಂಟರ್‌ಗೆ ಸೂಟ್‌ ಆಗುವಂತೆ ನಾನಾ ವಿನ್ಯಾಸದವನ್ನು ಹೆಣೆಯುವವರು ಇದ್ದಾರೆ. ಮನೆಯಲ್ಲಿಯೇ ಸ್ವೆಟ್ಟರ್‌ ಹೆಣೆಯುವವರು ಇದನ್ನು ಹೆಣೆದು ಮಾರಾಟ ಮಾಡಲಾರಂಭಿಸಿದ್ದಾರೆ ಎನ್ನುತ್ತಾರೆ ಡಿಸೈನರ್‌ ಜಯಾ.

ಟಾಪ್‌ ಶೈಲಿಯ ಪೊಂಚೊ

ಟಾಪ್‌ ಶೈಲಿಯವು ಇದೀಗ ಕಾಲಿಟ್ಟಿವೆ. ಒಂದಕ್ಕಿಂತ ಮತ್ತೊಂದು ನೋಡಲು ಆಕರ್ಷಕವಾಗಿವೆ. ಪೊಂಚೊ ಟಾಪ್‌ಗಳು ನೋಡಲು ದೊಗಳೆಯಾಗಿ ಕಂಡರೂ ಫ್ಯಾಷನ್‌ನಲ್ಲಿವೆ.

For fashion lovers who wear poncho..

ಪೊಂಚೊ ಧರಿಸುವ ಫ್ಯಾಷನ್‌ ಪ್ರಿಯರಿಗಾಗಿ..

  • ತೀರಾ ಪ್ಲಂಪಿಯಾಗಿರುವವರಿಗೆ ಸೂಟ್‌ ಆಗದು.
  • ಬಣ್ಣ ಬಣ್ಣದ ಪೊಂಚೊ ಟ್ರೆಂಡ್‌ನಲ್ಲಿವೆ.
  • ಸಾಫ್ಟ್‌ ವುಲ್ಲನ್‌ನಲ್ಲೂಇವು ಲಭ್ಯ.
  • ಸ್ಲಿಮ್‌ ಆಗಿರುವವರಿಗೆ ಆಕರ್ಷಕವಾಗಿ ಕಾಣುತ್ತವೆ.
  • ಒಂದಕ್ಕಿಂತ ಹೆಚ್ಚು ವರ್ಣ ಇರುವಂತದ್ದನ್ನು ಧರಿಸಿ.
  • ಹೆಚ್ಚು ವಾಶ್‌ ಮಾಡಿದರೆ ಮಾಸುವುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಭಾರತ ಹಿಂದು ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತ ಹಿಂದು ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ. ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಮರ್ತ್ಯ ಸೇನ್ ಏನು ಹೇಳಿದ್ದರು?

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು, ಈ ಚುನಾವಣೆಯು ಭಾರತವು ಹಿಂದು ರಾಷ್ಟ್ರವಲ್ಲ, ಅದು ಜಾತ್ಯತೀತ ಹಾಗೂ ಸರ್ವಧರ್ಮಗಳ ರಾಷ್ಟ್ರವೆಂಬುದನ್ನು ಸಾಬೀತುಪಡಿಸಿದೆ. ಮುಂದೆಯೂ ಭಾರತವನ್ನು ಸಂಪೂರ್ಣವಾಗಿ ಹಿಂದುರಾಷ್ಟ್ರವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಇಲ್ಲಿ ಹಿಂದು ಧರ್ಮ ಪ್ರಧಾನವಾಗಿ ಇರುತ್ತದೆ. ಆದರೆ, ಉಳಿದ ಧರ್ಮಗಳೂ ಜತೆಯಲ್ಲಿ ಅಸ್ತಿತ್ವದಲ್ಲಿರುತ್ತವೆ ಎಂದು ಹೇಳಿದ್ದರು.

ಇದನ್ನೂ ಓದಿ | CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Valmiki Corporation Scam Zameer Ahmed appointed as Ballari district in-charge minister

ಬಳ್ಳಾರಿ: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ (Ex Minister Nagendra) ರಾಜೀನಾಮೆ (Resignation) ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ (Zameer Ahmed Khan) ಅವರನ್ನು ನೇಮಕ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿ ಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ನಾಗೇಂದ್ರ ಸ್ಥಾನಕ್ಕೆ ಈಗ ಜಮೀರ್ ಅಹ್ಮದ್‌ ನೇಮಕಗೊಂಡಿದ್ದಾರೆ. ಕಳೆದ ವಾರ ವಿಜಯನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಶುಕ್ರವಾರ ಅಧಿಕೃತವಾಗಿ ಸರ್ಕಾರವು ಜಮೀರ್ ಅಹ್ಮದ್‌ಗೆ ಬಳ್ಳಾರಿ ಉಸ್ತುವಾರಿಯನ್ನು ಕೊಟ್ಟಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು.

Continue Reading

ಕರ್ನಾಟಕ

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

POCSO Case: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

VISTARANEWS.COM


on

POCSO Case
Koo

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ. ಈ ನಡುವೆ, ಯಡಿಯೂರಪ್ಪ ಅವರು ಈ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಹೈಕೋರ್ಟ್‌ ಏನು ತೀರ್ಪು ನೀಡಲಿದೆ ಎಂಬುದರ ಕುರಿತು ಭಾರಿ ಕುತೂಹಲ ಮೂಡಿದೆ.

ಸಿಐಡಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್‌ ಶೀಟ್ ಸಲ್ಲಿಕೆ‌ ವೇಳೆ ನ್ಯಾಯಾಲಯವು ಆರೋಪ ಪಟ್ಟಿ ಸ್ವೀಕರಿಸಲು ವ್ಯಾಪ್ತಿ ಹೊಂದಿರುವ ಕುರಿತು ತಿಳಿಸುವಂತೆ ಸೂಚಿಸಿತ್ತು. ಆಗ ಎಸ್‌ಪಿಪಿ ನಾಯಕ್‌ ಅವರು ʼಪೋಕ್ಸೊ ನ್ಯಾಯಾಲಯವು ಅಪರಾಧ ಕೇಂದ್ರಿತ ನ್ಯಾಯಾಲಯ ಎಂದು ಪರಿಗಣಿಸಲ್ಪಡುತ್ತದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆರೋಪಿ ಕೇಂದ್ರಿತ ನ್ಯಾಯಾಲಯವಾಗುತ್ತದೆ. ಹೀಗಾಗಿ, ಆರೋಪಪಟ್ಟಿಯನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡುವ ಅಗತ್ಯವಿಲ್ಲ ಎಂದು ವಾದಿಸಿದ್ದರು. ಇದನ್ನು ಆಲಿಸಿದ ಪೀಠವು ಆರೋಪ ಪಟ್ಟಿ ಸ್ವೀಕರಿಸಿದ್ದು, ಅದನ್ನು ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮಂಡಿಸುವಂತೆ ಆದೇಶಿಸಿದೆ.

ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ.

ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಇದನ್ನೂ ಓದಿ | Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Continue Reading

ಬಳ್ಳಾರಿ

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ.

VISTARANEWS.COM


on

By

Valmiki Corporation Scam Zameer Ahmed appointed as Ballari district in-charge minister
Koo

ಬಳ್ಳಾರಿ: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ (Ex Minister Nagendra) ರಾಜೀನಾಮೆ (Resignation) ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ (Zameer Ahmed Khan) ಅವರನ್ನು ನೇಮಕ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿ ಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ನಾಗೇಂದ್ರ ಸ್ಥಾನಕ್ಕೆ ಈಗ ಜಮೀರ್ ಅಹ್ಮದ್‌ ನೇಮಕಗೊಂಡಿದ್ದಾರೆ. ಕಳೆದ ವಾರ ವಿಜಯನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಶುಕ್ರವಾರ ಅಧಿಕೃತವಾಗಿ ಸರ್ಕಾರವು ಜಮೀರ್ ಅಹ್ಮದ್‌ಗೆ ಬಳ್ಳಾರಿ ಉಸ್ತುವಾರಿಯನ್ನು ಕೊಟ್ಟಿದೆ.

Valmiki Corporation Scam Zameer Ahmed appointed as Ballari district in-charge minister

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

CM Siddaramaiah: ಮುಂದಿನ ದಿನಗಳಲ್ಲಿ ಸಂಸತ್ತಿನ ಒಳಗೆ ಹಾಗೂ ಹೊರಗೆ ರಾಜ್ಯದ ಸಂಸದರು ಇನ್ನಷ್ಟು ಪರಿಣಾಮಕಾರಿಯಾಗಿ ದನಿ ಎತ್ತಿ ರಾಜ್ಯದ ಹಿತ ಕಾಪಾಡಬೇಕು ಎಂದು ನವ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

VISTARANEWS.COM


on

Koo

ನವ ದೆಹಲಿ: ನಗರದ ಕರ್ನಾಟಕ‌ ಭವನದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಸಭೆ ನಡೆಸಿದರು. ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸದನದ ಒಳಗೆ ಹಾಗೂ ಹೊರಗೆ ಒಕ್ಕೊರಲಿನಿಂದ ಸೌಹಾರ್ದಯುತವಾಗಿ ದನಿ ಎತ್ತಲು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ನಾವು ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುತ್ತಿರಬಹುದು. ಆದರೆ ಕರ್ನಾಟಕದ ಹಿತಾಸಕ್ತಿಯ ವಿಷಯ ಬಂದಾಗ ನಾವೆಲ್ಲರೂ ಒಂದೇ ವೇದಿಕೆಯವರು. ಈ ವಿಷಯದಲ್ಲಿ ನಮ್ಮ ಹಿಂದಿನವರೂ ಸಹ ಮಾದರಿಗಳಾಗಿದ್ದಾರೆ.
ನೆಲ, ಜಲ, ಸಂಪನ್ಮೂಲ, ಭಾಷೆ, ಸಂಸ್ಕೃತಿ, ಐಡೆಂಟಿಟಿ ಇತ್ಯಾದಿ ವಿಚಾರಗಳಿಗೆ ಬಂದಾಗ ನಮಗೆ ಪಕ್ಷಗಳಿಲ್ಲ. ಕರ್ನಾಟಕ ಹಿತಾಸಕ್ತಿಯ ರಕ್ಷಣೆ ನಮ್ಮ ಆದ್ಯತೆ ಎಂದು ಸಂಸದರು, ಸಚಿವರಿಗೆ ಸಿಎಂ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹದಾಯಿ ಕುಡಿಯುವ ನೀರಿನ ಯೋಜನೆ ಸಂಬಂಧ ಕೋರ್ಟ್‌ನಲ್ಲಿ ಕೇಸ್ ಇದೆ ಅಂತ ಬಿಜೆಪಿ ಹೇಳಿದೆ. ಆದರೆ, ನಾವು ಡಿಪಿಆರ್ ಕಳುಹಿಸಿದ್ದೇವೆ. ಟೆಂಡರ್ ಕೂಡ ಕರೆದಿದ್ದೇವೆ, ಗೆಜೆಟ್ ನೋಟಿಫಿಕೇಟಿನ್ ಕೂಡ ಆಗಿದೆ. ಅಲ್ಲಿ ಅಡ್ಡಿ ಇರುವುದು ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ಅಷ್ಟೇ ಬೇಕು. ಇದು ಕೇಂದ್ರ ಸರ್ಕಾರದ ಕೆಲಸ. ಕೋರ್ಟ್‌ನಲ್ಲಿ ಇದೆ ಅಂತ ಹೇಳೋದು ಸರಿ ಅಲ್ಲ. ಆ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.

ಅಪ್ಪರ್ ಭದ್ರಾ ಯೋಜನೆ 5300 ಕೋಟಿ ಘೋಷಣೆ ಮಾಡಿದ್ದಾರೆ. 23-24ನೇ ಆರ್ಥಿಕ ವರ್ಷ ಮುಗಿದಿದೆ. ಆದರೆ ಇವತ್ತಿನವರೆಗೆ ದುಡ್ಡು ಬಿಡುಗಡೆ ಮಾಡಿಲ್ಲ. ನಿರ್ಮಲಾ ಸೀತಾರಾಮನ್ ಅವರು ನಿಮ್ಮಲ್ಲೇ ಟೆಕ್ನಿಕಲ್ ಪ್ರಾಬ್ಲಮ್ ಇದೆ ಅಂತ ಹೇಳುತ್ತಾರೆ. ಇನ್ನು ಮೇಕೆದಾಟು ಯೋಜನೆ 2018ರಿಂದ ಪೆಂಡಿಂಗ್ ಇದೆ. ನಾವು ಅಂದಾಜು ಮೊತ್ತ 9000 ಕೋಟಿ ಮಾಡಿ ಡಿಪಿಆರ್ ಮಾಡಿದ್ದೇವೆ. ಕೇಂದ್ರ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೂ ನೀಡಿದ್ದೇವೆ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರು ಇಲ್ಲ ಅಂತ ನಾವು ಭಾವಿಸುತ್ತೇವೆ. ತಮಿಳುನಾಡಿಗೆ ಕೊಡುವ ನೀರು ಕೊಟ್ಟು, ನಾವು ಸಹ ನೀರು ಇಟ್ಟುಕೊಳ್ಳಬಹುದು. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತೆ. ಈ ವಿಚಾರವನ್ನು ಕೇಂದ್ರ ತೀರ್ಮಾನ ಮಾಡಬೇಕು ಅಂತ ಗಮನಕೆ ತಂದಿದ್ದೇವೆ. ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ತಯಾರಿಕೆ ಮಾಡೋಕೆ ಅನುಕೂಲ ಆಗುತ್ತದೆ. 2022ರಲ್ಲಿ 177 ಟಿಎಂಸಿ ನೀರು ಜೊತೆಗೆ ಹೆಚ್ಚುವರಿ ನೀರು ಅವರಿಗೆ ಹೋಗಿದೆ. 2010ರಲ್ಲಿ ಅಪ್ಪರ್ ಕೃಷ್ಣಾ ಪ್ರಾಜೆಕ್ಟ್ ಟ್ರಿಬ್ಯುನಲ್‌ನಲ್ಲಿ ತೀರ್ಮಾನ ಆಗಿದೆ. ಆದರೆ, ಗೆಜೆಟ್ ನೋಟಿಫಿಕೇಟಿನ್ ಆಗಿಲ್ಲ, ಅದಕ್ಕೆ ಗೆಜೆಟ್ ನೋಟಿಫಿಕೇಷನ್ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದರು.

ಇದನ್ನೂ ಓದಿ | ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

ಚರ್ಚಿಸಿದ ಪ್ರಮುಖ ವಿಷಯಗಳು

  1. ಬೆಂಗಳೂರು ಮತ್ತು ಸುತ್ತಮುತ್ತಲ ಜನ ವಸತಿ ಪ್ರದೇಶಗಳಿಗೆ ನಿರಾತಂಕವಾಗಿ ಕುಡಿಯುವ ನೀರನ್ನು ಪೂರೈಸಲು ಹಾಗೂ ಆಣೆಕಟ್ಟೆಯಿಂದ ಹರಿಯುವ ನೀರಿನಿಂದ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರವು 67 ಟಿಎಂಸಿ ಸಾಮರ್ಥ್ಯದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಈ ಪ್ರಸ್ತಾವನೆಯು 2018 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಈ ಯೋಜನೆಗೆ ಹಲವು ಹಂತಗಳ ಅನುಮತಿ ಅಗತ್ಯವಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಮಂತ್ರಾಲಯವು environmental clearance ಅನ್ನು ಶೀಘ್ರವಾಗಿ ಮಾಡಿಕೊಡುವಂತೆ ಒತ್ತಾಯಿಸುವುದು.
  2. ಭದ್ರಾ ಯೋಜನೆ ಮೂಲಕ 2.25 ಲಕ್ಷ ಹೆಕ್ಟೇರ್ ಎತ್ತುವರಿ ನೀರಾವರಿ ಮೂಲಕ ವ್ಯವಸಾಯಕ್ಕಾಗಿ / ಕುಡಿಯುವ ನೀರಿಗಾಗಿ ನೀರನ್ನು ಒದಗಿಸುವ ಪ್ರಸ್ತಾವನೆಯು 2020 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಇದಕ್ಕಾಗಿ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ 5,300 ರೂ. ಕೋಟಿ ಅನುದಾನವನ್ನು ಘೋಷಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಅನುದಾನವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವುದಿಲ್ಲ. ಈ ಅನುದಾನವನ್ನು ಬಿಡುಗಡೆ ಮಾಡಿಸಲು ನೆರವಾಗಬೇಕು. ಜೊತೆಗೆ, ಈ ಯೋಜನೆಯನ್ನು ಕೂಡಲೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂದು ಕೇಂದ್ರದ ಮೇಲೆ ಒತ್ತಡ ಹೇರುವುದು.
  3. ಕಳಸಾ ಬಂಡೂರಿ ನಾಲಾ ಯೋಜನೆಗೆ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ ಅವಾರ್ಡ್ 2018 ರಲ್ಲಿ ಘೋಷಿಸಲಾಗಿತ್ತು. ರಾಜ್ಯ ಸರ್ಕಾರದ ವತಿಯಿಂದ ವಿಸ್ತೃತ ಯೋಜನಾ ವರದಿಯನ್ನು (DPR) ಈಗಾಗಲೆ ಒದಗಿಸಲಾಗಿದೆ. ಅದನ್ನು ಅನುಮೋದಿಸಲು ದಿನಾಂಕ: 30.01.2024 ರಂದು ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ ಸಮಿತಿ ಸಭೆ ಸೇರಿ ದಿನಾಂಕ: 08.01.2024 ರಂದು ವರದಿಯನ್ನು ಸಲ್ಲಿಸಿದೆ. ಈ ವಿಷಯವನ್ನು 77 ನೆ ಸಭೆಯ ಮುಂದೆ ಮಂಡಿಸಲಾಗಿತ್ತು. ಆದರೆ ಸಮಿತಿಯು ಈ ಕುರಿತು ತೀರ್ಮಾನ ಮಾಡಲು ಸಹ ಈ ವಿಷಯವನ್ನು ವಿನಾ ಕಾರಣ ಮುಂದೂಡಲಾಗಿದೆ [ಡೆಫರ್]. ಕಿತ್ತೂರು ಕರ್ನಾಟಕದ ಒಣ ಪ್ರದೇಶಗಳ ಜನರಿಗೆ ನೀರನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಆದ್ದರಿಂದ ಅತಿ ಶೀಘ್ರವಾಗಿ ತೊಡಕುಗಳು ನಿವಾರಣೆಯಾಗುವಂತೆ ನೋಡಿಕೊಳ್ಳುವುದು.
  4. ನಮ್ಮ ಮೆಟ್ರೋ ರೈಲು ಯೋಜನೆಯಡಿಯಲ್ಲಿ ಹಂತ-3 ರ ಕಾಮಗಾರಿಗೆ ರೂ.15611 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರದ ವಸತಿ ಮತ್ತು ನಗರಾಭಿವೃಧ್ಧಿ ಮಂತ್ರಾಲಯಕ್ಕೆ ದಿನಾಂಕ:03.08.2023 ರಂದು ಸಲ್ಲಿಸಲಾಗಿದೆ. ಹಾಗೂ ಡಿಪಿಆರ್ ಅನ್ನೂ ಸಹ ಸಲ್ಲಿಸಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕ ಹೂಡಿಕೆಗಳ ಮಂಡಳಿಯು ದಿನಾಂಕ 6-5.2024 ರಂದು ಸಭೆ ನಡೆಸಿದೆ. 17-5-2024 ರಂದು ಶಿಫಾರಸನ್ನೂ ಮಾಡಲಾಗಿದೆ. ಪಿಐಬಿಯು ಕೇಳಿದ್ದ ಎಲ್ಲ ಮಾಹಿತಿಯನ್ನು ಒದಗಿಸಲಾಗಿದೆ. ಈ ಪ್ರಸ್ತಾವನೆಯು ಸದ್ಯ ಕೇಂದ್ರ ಸರ್ಕಾರದ ಮುಂದೆ ಇದೆ. ಈ ಪ್ರಸ್ತಾವನೆಯನ್ನು ಶೀಘ್ರವಾಗಿ ಅನುಮೋದನೆ ಮಾಡಿಸುವುದು.
  5. 15ನೆ ಹಣಕಾಸು ಆಯೋಗವು ಎರಡು ವರದಿಗಳನ್ನು ನೀಡಿದೆ. ಎರಡೂ ವರದಿಗಳೂ ಅಂತಿಮ ವರದಿಗಳೆ ಮೊದಲನೆಯದು 2020-21 ವರ್ಷಕ್ಕೆ ಸಂಬಂಧಿಸಿದ್ದು, ಎರಡನೆಯದು 2021 ರಿಂದ 2026 ವರ್ಷಗಳಿಗೆ ಸಂಬಂಧಿಸಿದ್ದು. ಮೊದಲ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಕರ್ನಾಟಕಕ್ಕೆ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ಎರಡನೆಯ ವರದಿಯಲ್ಲಿ ಫೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ ರೂ ಮತ್ತು ಕೆರೆ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3,000 ಕೋಟಿ ಸೇರಿ ಒಟ್ಟಿಗೆ 11,495 ಕೋಟಿ ರೂಪಾಯಿಗಳನ್ನು ನೀಡಲು ಶಿಫಾರಸು ಮಾಡಲಾಗಿದೆ. ಈ ಅನುದಾನ / ವಿಶೇಷ ಅನುದಾನ ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ.
  6. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶಗಳಲ್ಲೊಂದಾದ ಮಹಾತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರಿನಲ್ಲಿ All India Institute of Medical Sciences (AIIMS) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ವಿವಿಧ ದಿನಾಂಕಗಳಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದಿಂದ ತ್ವರಿತ ಅನುಮೋದನೆ ನೀಡಲು ಕೋರಲಾಗಿದೆ.
  7. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.
  8. ಉಡಾನ್ ಯೋಜನೆಯಡಿ ‘SEA PLANE’ ಕಾರ್ಯಕ್ರಮವನ್ನು ಮಲ್ಪೆ, ಬೈಂದೂರು, ಮಂಗಳೂರು, ಕಾಳಿ ನದಿ ಮುಂತಾದ ಕಡೆ ಪ್ರಾರಂಭಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಇಲಾಖೆಗೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳು ಸದರಿ ಇಲಾಖೆಯಲ್ಲಿ ಬಾಕಿ ಇದ್ದು ಅವುಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಿ ಅನುಮೋದನೆ ಕೊಡಿಸುವುದು.
  9. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air Cargo ಕಾಂಪ್ಲೆಕ್ಸ್ ಆಗಿ ಪರಿಗಣಿಸಲು ಸಿವಿಲ್ ಏವಿಯೇಷನ್ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ದಿನಾಂಕ:05.06.2024 ರಂದು ಕಳುಹಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ರಫ್ತು ಮತ್ತು ಆರ್ಥಿಕ ಬೆಳವಣಿಗೆ ಸುಧಾರಿಸುವುದು. ಆದ್ದರಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆಯುವಂತೆ ನೋಡಿಕೊಳ್ಳುವುದು.
  10. ಪಶ್ಚಿಮ ಘಟ್ಟಗಳ ಜನರ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ನಿರ್ಧರಿಸಿ ಪ್ರಸ್ತಾವನೆಯನ್ನು ಕಳಿಸಲಾಗಿದೆ. ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಿ ಸೂಕ್ತ ತೀರ್ಮಾನಗಳನ್ನು ಹೊರಡಿಸಬೇಕಾಗಿರುತ್ತದೆ.
  11. ರಾಜ್ಯವು ರೈಲ್ವೆ ನೆಟ್‌ವರ್ಕಿನಲ್ಲಿ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಬಹಳ ಹಿಂದುಳಿದಿದೆ. ಹಾಗಾಗಿ ರೈಲ್ವೆ ಯೋಜನೆಗಳಿಗೆ ಆದ್ಯತೆ ನೀಡಬೇಕಾಗಿದೆ.
  12. ಗ್ರಾಮ ಸಡಕ್ ಯೋಜನೆಯಲ್ಲಿ ದೇಶದ ಅನೇಕ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಕ್ಕೆ ಕಡಿಮೆ ಪ್ರಮಾಣದ ರಸ್ತೆಗಳನ್ನು ಮಂಜೂರು ಮಾಡಲಾಗಿದೆ. ಹಾಗಾಗಿ ತಾವುಗಳು ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚು ಅನುದಾನಗಳನ್ನು ಒದಗಿಸಿಕೊಡಬೇಕು.
  13. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಬೆಳಗಾವಿಯಲ್ಲಿ 70 ಕಾಮಗಾರಿಗಳು, ಯಾದಗಿರಿಯಲ್ಲಿ 70 ಕಾಮಗಾರಿಗಳು, ಕಲಬುರ್ಗಿಯಲ್ಲಿ 106 ಕಾಮಗಾರಿಗಳು, ಧಾರವಾಡದಲ್ಲಿ 50 ಕಾಮಗಾರಿಗಳು, ಒಟ್ಟು 296 ಕಾಮಗಾರಿಗಳ ಅಂದಾಜು ಮೊತ್ತ ರೂ.770 ಕೋಟಿಗಳು ಬಿಡುಗಡೆಯಾಗಬೇಕಾಗಿರುತ್ತದೆ. ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದಿಂದ ತ್ವರಿತ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುವುದು.
  14. ದೇಶದಲ್ಲಿ 12 ಅತಿ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಇದ್ದು, ಬರವನ್ನು ತಡೆಗಟ್ಟುವ ಸಲುವಾಗಿ National Disaster Risk Management Fund (NDRMF) ಅಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಒದಗಿಸುವಂತೆ ಕೋರಿ ದಿನಾಂಕ: 30.10.2023 ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೆ, ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ನೆರೆ ಸಂಭವಿಸಿದ್ದು, ಅವುಗಳನ್ನು ತಡೆಗಟ್ಟಲು 15ನೇ ಹಣಕಾಸು ಆಯೋಗವು ರೂ.250 ಕೋಟಿಗಳ ಅನುದಾನವನ್ನು ಮೀಸಲಿಟ್ಟಿದ್ದು, ಈ ಅನುದಾನವು ಇನ್ನೂ ಬಿಡಗಡೆಯಾಗಿರುವುದಿಲ್ಲ. ಆದ್ದರಿಂದ ತುರ್ತಾಗಿ ಈ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳುವುದು.
  15. ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮನವಿಯಂತೆ ದಿನಾಂಕ:20.07.2023 ರಂದು ರಾಜ್ಯ ಸರ್ಕಾರದ ಶಿರಾಡಿ ಘಾಟ್‌ನಲ್ಲಿ 30 ಕಿ.ಮೀ.ನ ಎರಡು ಲೇನ್ ರಸ್ತೆಯನ್ನಾಗಿ ಪರಿವರ್ತಿಸಲು ರೂ.2,580 ಕೋಟಿ ಪ್ರಸ್ತಾವನೆಯನ್ನು NHAIಗೆ ದಿನಾಂಕ: 03.08.2023 ರಂದು ಸಲ್ಲಿಸಲಾಗಿದ್ದು, ಇದನ್ನು ತ್ವರಿತಗೊಳಿಸಲು ಅನುಮೋದನೆ ನೀಡಿದಲ್ಲಿ ರಾಜ್ಯದ ವಾಣಿಜ್ಯ ಚಟುವಟಿಕೆಗಳನ್ನು ಮಂಗಳೂರು ಬಂದರಿಗೆ ರಫ್ತು ಮಾಡಲು ಉಪಯೋಗವಾಗುತ್ತದೆ. ಇದರ ಜೊತೆಗೆ ರಾಜ್ಯದಿಂದ ದಿನಾಂಕ 28.07.2017 ಮತ್ತು 7.3.2018] ಒಟ್ಟು 38 ಹೆದ್ದಾರಿ ಕಾಮಗಾರಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳಿಸಲಾಗಿದೆ. ಈ ಪ್ರಸ್ತಾವನೆಗಳಲ್ಲಿ ಒಟ್ಟಾರೆ 4,807 ಕಿ.ಮೀ. ರಸ್ತೆ ಒಳಗೊಂಡಿದೆ. ಈ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಇವೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು.
  16. MGNREGA ಅಡಿಯಲ್ಲಿ ಕೆಲವು ಅಗತ್ಯವಿರುವ ಶಾಲಾ ಕಟ್ಟಡ, ತರಗತಿ ಕೊಠಡಿ, ಗ್ರಂಥಾಲಯ, ಇತರೆ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಲು ಸುಮಾರು ಪ್ರಸ್ತಾವನೆಗಳನ್ನು ನೀಡಲಾಗಿದೆ. ಇದರಿಂದ ಗ್ರಾಮ ಮಟ್ಟದಲ್ಲಿ ಹೆಚ್ಚು ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಮಾಡಲು ಕೇಂದ್ರದ ಭೂ ಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯವನ್ನು ಕೋರಲಾಗಿದೆ.
  17. ಇದೇ ರೀತಿ 207 ಸಬ್-ರಿಜಿಸ್ಟ್ರಾರ್ ಕಛೇರಿಗಳನ್ನು ಗಣಕೀಕರಣಗೊಳಿಸಲು, ಡಿಜಿಟಲ್ ಇಂಡಿಯಾ ಮಾಡ್ರನೈಸೇಷನ್ ಕಾರ್ಯಕ್ರಮದಡಿಯಲ್ಲಿ ರೂ.365 ಕೋಟಿಗಳ ಅನುದಾನದ ಪ್ರಸ್ತಾವನೆಯನ್ನು ದಿನಾಂಕ:07.06.2024 ರಂದು ಕಳುಹಿಸಲಾಗಿದೆ. ಇದರಿಂದ ಕಂದಾಯ ಇಲಾಖೆಯ ಮೂಲಕ ಉತ್ತಮ ಹಾಗೂ ನುರಿತ ಆಡಳಿತವನ್ನು ನೀಡಲು ಸಾಧ್ಯವಾಗುವುದು. ಈ ಪ್ರಸ್ತಾವನೆಯು ಸಹ ಭೂಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದೆ. ಇವುಗಳು ತುರ್ತಾಗಿ ಅನುಮೋದನೆಯಾಗುವಂತೆ ನೋಡಿಕೊಳ್ಳುವುದು.
  18. ಯುವಜನ ಸಬಲೀಕರಣ ಇಲಾಖೆಯಡಿಯಲ್ಲಿನ ಖೇಲೊ ಇಂಡಿಯಾ ಕಾರ್ಯಕ್ರಮಗಳಡಿಯಲ್ಲಿ ಒಟ್ಟು 16 ವಿವಿಧ ಕಾರ್ಯಕ್ರಮಗಳ ಪ್ರಸ್ತಾವನೆಗಳು ಅನುಮೋದನೆಗಾಗಿ ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇವೆ. ಖೇಲೊ ಇಂಡಿಯಾ ಯೋಜನೆ [ ಅಕ್ಟೋಬರ್-2017 ] ಪ್ರಾರಂಭವಾದಾಗಿದ ಅತ್ಯಂತ ಕಡಿಮೆ ಅನುದಾನ ಪಡೆದ ರಾಜ್ಯ ಕರ್ನಾಟಕವಾಗಿದೆ. ಕರ್ನಾಟಕವು ಅನೇಕ ಹೆಸರಾಂತ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ಕೊಟ್ಟಿದೆ. ಆದ್ದರಿಂದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಈ 16 ಕಾರ್ಯಕ್ರಮಗಳು ಅನುಮೋದನೆಯಾಗುವಂತೆ ನೋಡಿಕೊಳ್ಳಬೇಕು.
  19. ಕೇಂದ್ರದ ಆಹಾರ ಮತ್ತು ನಾಗರೀಕ ಸರಬರಾಜು ಮಂತ್ರಾಲಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಒಟ್ಟು ರೂ.584 ಕೋಟಿ ಅನುದಾನ ಬಿಡುಗಡೆಯಾಗಬೇಕಾಗಿದೆ ಹಾಗೂ ರಾಜ್ಯ ಸರ್ಕಾರಕ್ಕೆ 2.17 ಲಕ್ಷ ಮೆಟ್ರಿಕ್ ಟನ್ ಲಭ್ಯವಿದ್ದು, ಪ್ರಸ್ತುತ 30,000 ಮೆಟ್ರಿಕ್ ಟನ್‌ಗಳನ್ನು ಹೆಚ್ಚುವರಿಯಾಗಿ ನೀಡಲು ಕೋರಲಾಗಿದೆ.
  20. ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ ಕೊಡುವ ಪ್ರಸ್ತಾವನೆಯು ದಿನಾಂಕ:23.3.2023 ರಿಂದ ಬಾಕಿಯಾಗಿರುತ್ತದೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು. ಇದೇ ಸಚಿವಾಲಯದಲ್ಲಿ ಹೊಸ ಪೋಸ್ಟ್ ಮೆಟ್ರಿಕ್ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳಿಗೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆಯನ್ನು ದಿನಾಂಕ:06-06-2023 ರಂದು ಕಳುಹಿಸಲಾಗಿದೆ.
  21. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿ ವಸತಿ, ವಸತಿ ನಿಲಯ ಮುಂತಾದ 5 ಪ್ರಸ್ತಾವನೆಗಳು 2023 ರ ಜೂನ್ ತಿಂಗಳಿಂದ ಬಾಕಿಯಾಗಿವೆ.
  22. ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ 52 ಯೋಜನೆಗಳನ್ನು ಸಲ್ಲಿಸಲಾಗಿತ್ತು. ಇವುಗಳ ಒಟ್ಟು ಮೊತ್ತ 659 ಕೋಟಿ ರೂ.ಗಳಷ್ಟಾಗಿರುತ್ತದೆ. 32 ವಸತಿ ಶಾಲೆಗಳು, 11 ವಸತಿ ನಿಲಯಗಳು, 4 ಡೇ ಸ್ಕೂಲ್‌ಗಳು, 4 ಕೌಶಲ್ಯ ಕೇಂದ್ರಗಳು ಸೇರಿವೆ. ಇವುಗಳಲ್ಲಿ 12 ಯೋಜನೆಗಳು ಅನುಮೋದನೆಯಾಗಿವೆ. ಆದರೆ ಹಣ ಬಿಡುಗಡೆಯಾಗಿಲ್ಲ. ಉಳಿದ 40 ಯೋಜನೆಗಳು ಬಾಕಿ ಉಳಿದಿವೆ.
  23. MSP ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಮರುಪಾವತಿಗೆ ಕಳುಹಿಸಿರುವ ದಾಖಲೆಗಳ ಮೊತ್ತವು ರೂ.1,027.82 ಕೋಟಿಗಳಾಗಿರುತ್ತದೆ. ಅದನ್ನು ಬಿಡುಗಡೆ ಮಾಡಲು ಕೋರಲಾಗಿದೆ.
  24. ಮೀನುಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಳಿಯಲ್ಲಿ ಹೊಸದಾಗಿ ಮೀನುಗಾರಿಕಾ ಬಂದರನ್ನು ನಿರ್ಮಿಸುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಿರುವ ಮೀನುಗಾರಿಕಾ ಬಂದರನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. 2023 ರಿಂದ ಈ ವಿಷಯ ಬಾಕಿಯಾಗಿದೆ.
  25. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವುಂಟಾಗಿದೆ. ಮೊದಲಿನ ಹಣಕಾಸು ಆಯೋಗಗಳು 1971 ರ ಜನಗಣತಿ ವರದಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡುತ್ತಿದ್ದವು. ಆದರೆ 15 ನೆ ಹಣಕಾಸು ಆಯೋಗವು 2011 ರ ಜನಗಣತಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಸಾಧಿಸಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾರಣದಿಂದಾಗಿಯೆ ನಮ್ಮ ರಾಜ್ಯಕ್ಕೆ ಸಮಸ್ಯೆಯಾಗಿದೆ. ಈ ಕಾರಣದಿಂದ ನಮಗೆ 2017-18 ನೆ ಸಾಲಿನ ಬಜೆಟ್‌ಗೆ ಹೋಲಿಸಿದರೆ ಬೃಹತ್ ಪ್ರಮಾಣದಲ್ಲಿ [ಅರ್ಧಕ್ಕರ್ಧ] ತೆರಿಗೆ ಹಂಚಿಕೆ ಹಾಗೂ ಇನ್ನಿತರೆ ಸಂಪನ್ಮೂಲಗಳ ಹಂಚಿಕೆಯು ಕಡಿಮೆಯಾಗಿದೆ. ಈಗ 16 ಹಣಕಾಸು ಆಯೋಗವು ರಚನೆಯಾಗಿದೆ. 16 ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗದಂತೆ ತಾವುಗಳು ನೋಡಿಕೊಳ್ಳಬೇಕೆಂದು ಮನವಿ ಮಾಡುತ್ತೇವೆ.
  26. ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎಂದು ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Continue Reading
Advertisement
Viral Video
ವೈರಲ್ ನ್ಯೂಸ್3 mins ago

Viral Video: ಐಸ್‌ ಕ್ರೀಂನಲ್ಲಿ ಮನುಷ್ಯನ ಬೆರಳು! ತನಿಖೆಯಲ್ಲಿ ಬಯಲಾಯ್ತು ಭಯಾನಕ ಸತ್ಯ

Kalki 2898 AD 2
ಸಿನಿಮಾ7 mins ago

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್10 mins ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ17 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

petrol Price
ಪ್ರಮುಖ ಸುದ್ದಿ26 mins ago

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Rahul Gandhi
ದೇಶ33 mins ago

Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

POCSO Case
ಕರ್ನಾಟಕ52 mins ago

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

SHAFALI VERMA
ಕ್ರಿಕೆಟ್1 hour ago

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

Rich Wedding
ಪ್ರಮುಖ ಸುದ್ದಿ1 hour ago

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

Actor Darshan A young woman came to Parappa Agrahara to see Darshan
ಕ್ರೈಂ1 hour ago

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌