Site icon Vistara News

Karnataka Weather : ಮಲೆನಾಡು, ದಕ್ಷಿಣ ಒಳನಾಡಲ್ಲಿ ಚಳಿಯ ಗುದ್ದಾಟ; ಕರಾವಳಿ, ಉತ್ತರ ಒಳನಾಡಲ್ಲಿ ಬಿಸಿಲ ಆಟ

Dry weather likely to prevail over the State

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚಳಿ ಜತೆಗೆ ಬಿಸಿಲು ವಾತಾವರಣ ಇರಲಿದೆ. ಜತೆಗೆ ರಾಜ್ಯಾದ್ಯಂತ ಕೆಲವು ಕಡೆ ಒಣಹವೆ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಮ್ಮೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕಿದ ರೀತಿ ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚಳಿ ಏಟು ಕೊಟ್ಟರೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉರಿ ಬಿಸಿಲಿಗೆ ಜನ ತತ್ತರಿಸಿ ಹೋಗಲಿದ್ದಾರೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಕೆಲವೆಡೆ ಬೆಳಗಿನ ಸಮಯ ಮಂಜು ಮುಸುಕುವ ಸಾಧ್ಯತೆ ಇದೆ.

ಇದನ್ನೂ ಓದಿ: Ram Mandir: ಗಿರಿನಗರದಲ್ಲಿ ಅವತರಿಸಿದ ಅಯೋಧ್ಯೆಯ ರಾಮ ಮಂದಿರ

ಇಲ್ಲೆಲ್ಲ ತಾಪಮಾನ ಏರಿಕೆ

ರಾಯಚೂರು, ದಾವಣಗೆರೆ, ಕಲಬುರಗಿ, ಕೊಪ್ಪಳ, ಶಿವಮೊಗ್ಗ, ತುಮಕೂರು, ಬೆಳಗಾವಿ, ವಿಜಯಪುರ, ಗದಗ, ಬಳ್ಳಾರಿ, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ನಿಂದ 37.5 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಬಹುದು.

ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಧಾರವಾಡ, ಹಾಸನ, ಉತ್ತರ ಕನ್ನಡ, ಬೆಳಗಾವಿ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಬಹುದು.

ಇದನ್ನೂ ಓದಿ: Fog in Delhi: ದಿಲ್ಲಿಯಲ್ಲಿ ದಟ್ಟ ಮಂಜು, ವಿಮಾನಗಳ ಹಾರಾಟ ರದ್ದು, ವಿಳಂಬ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 19 ಡಿ.ಸೆ
ಹೊನ್ನಾವರ: 33 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 14 ಡಿ.ಸೆ
ಕಾರವಾರ: 33 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version